ಒಟ್ಟು 2274 ಕಡೆಗಳಲ್ಲಿ , 101 ದಾಸರು , 1388 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರಲಿಲ್ಲವೆನುತ ನೀ ಹೊರಗಿಕ್ಕಬೇಡ ಉರಗಾದ್ರಿವಾಸ ಶ್ರೀ ವೆಂಕಟೇಶ ಪ ಕಾಸಿಲ್ಲ ಕೈಯೊಳಗೆ ಲೇಸಿಲ್ಲ ಮನೆಯೊಳಗೆ ವಾಸಿತಪ್ಪಿಯೆ ಬಹಳ ಬೇಸತ್ತೆನು ಈಸು ಪ್ರಯಾಸ ನಿನ್ನ ದಾಸಗೊದಗಿದ ಮೇಲೆ ದೋಷವೆನ್ನಲ್ಲಿಲ್ಲ ಶೇಷಾದ್ರಿವಾಸ 1 ಗೆಲುವಿಲ್ಲ ಮನದೊಳಗೆ ಬಲವಿಲ್ಲ ಕಾಯದೊಳು ಹೊಲಬುದಪ್ಪಿಯೆ ಬಹಳ ಸುಲಿವಾದುದು ಫಲವೇನು ಇದರೊಳಗೆ ಕೆಲಸವೇನಿಹುದಿಲ್ಲ್ಲಿ ಸುಲಭದೊಳು ಬೇರೊಂದು ಪರಿಯ ನೋಡಯ್ಯ 2 ಕತ್ತಲೆಯ ರಾಜ್ಯವನು ಆದಿತ್ಯನಾಳುವ ತೆರದಿ ಸುತ್ತಗಳನೆಲ್ಲವನು ಕಿತ್ತು ಹಾರಿಸಿಯೆನ್ನ ಹತ್ತಿರದಿ ಮೈದೋರು ಭಕ್ತವತ್ಸಲನೆ 3 ಹಿರಿಯೊಳು ಆರ್ಜಿಸಿದ ಗೃಹಕೃತ್ಯವೆಂಬುದಿದು ಕೊರಳಡಿಗೆ ಸಿಲುಕಿರ್ದ ಸೆರೆಯಾಯಿತೊ ಹರುಷವಿಲ್ಲಿದರೊಳಗೆ ಬರುವ ಗತಿಯನು ಕಾಣೆ ದರುಶನಕೆ ಬಗೆದೋರು ದೊರೆ ವೆಂಕಟೇಶ 4 ಮಾತು ತಪ್ಪಿತು ಎಂದು ಭೀತಿಗಿಕ್ಕಲುಬೇಡ ಸೋತುದೈ ಕೈಯೆನಗತೀತ ಮಹಿಮ ಕಾತುರವು ಮನದೊಳಗೆ ಕಾಣಬೇಕೆಂದೆಂಬ ಪ್ರೀತಿಯಾಗಿದೆ ಜಗನ್ನಾಥ ನಿನ್ನೆಡೆಗೆ 5 ಒಂದು ಪರಿಯನು ನೀನು ತಂದು ತೋರಿದರೀಗ ಇಂದೆ ನಾನೇಳುವೆನು ಮಂದಿವಾಳದಲಿ ಚಂದದಲಿ ಮಡದಿ ಮಕ್ಕಳ ಸಹ ಕರಕೊಂಡು ಬಂದು ನೋಳ್ಪೆವು ನಿನ್ನ ಆನಂದ ಮೂರುತಿಯ 6 ಅಣಿಮಾಡಿ ನೀನೆನಗೆ ಮನದಣಿವ ತೆರನಂತೆ ಕ್ಷಣವಾದ ಕೆಲಸಗಳು ನಿನಗೆ ಘನವಲ್ಲ ತನಿರಸವನೆನಗೀಯೊ ಜನ ಮೆಚ್ಚುವಂತೆ 7
--------------
ವರಹತಿಮ್ಮಪ್ಪ
ಭಯವ್ಯಾಕೆ ಭಕ್ತ ಜನಕೆಪ. ನಯದಿಂದ ಗೆಲಿಸುವನು ನಾಲ್ದಿಕ್ಕಿನೊಳಗಿದ್ದ ಮಾಯವಾದಿಗಳನ್ನು ಅ.ಪ. ಆದಿಯಲ್ಲಿ ಬ್ರಹ್ಮನಿಗೆ ಭೀತಿಯನು ಬಿಡಿಸಿದ ನಾದಮಯನಾದ ದೇವ ಭೇದವಿಲ್ಲದೆ ಎಲ್ಲಾ ಭೇದವೆಂಬುವರನ್ನು ಕಾದ ಬಾಣಲೆಗೆ ತಟ್ಟಿ ಮೋದಿಸಿ ಕೊಲುವ 1 ಉದಯದಲ್ಲಿ ಎದ್ದು ನರ ಸದಮಲಾತ್ಮಕನಾಗಿ ಹೃದಯದೊಳಗೆ ಹರಿಯ ತಂದು ಮುಂದು ಸದಯನು ನೀನೆನುತ ಸದ್ವøತ್ತಿಲುದಯನು ನೀನೆನುತ ದಧಿಚೋರ ಕೃಷ್ಣನ್ನ ಮುದದಿ ಭಜಿಪರಿಗೆ 2 ದುಷ್ಟಮಲ್ಲರ ಎದೆ ಮೆಟ್ಟಿ ಮೆರೆವ ಜಗ- ಜಟ್ಟಿ ಮಧ್ವರಾಯರ ಮುಟ್ಟಿ ಭಜಿಸುತ ನಿತ್ಯ ಇಷ್ಟವನು ಬೇಡಿದರೆ ಕಷ್ಟಗಳನು ಕಳೆವ ಉ- ತÀ್ಕøಷ್ಟ ಹಯವದನ ದೊರೆ 3
--------------
ವಾದಿರಾಜ
ಶೃತಿನಾಥ ಸ್ಮøತಿಯಿತ್ತು ಸತತ ಪೊರೆಯೋಗತಿ ಗೋತ್ರ ನೀನೆಂದು | ಸತತ ತುತಿಸುವೆನೋ ಪ ನಿಚ್ಚ ಸೇವೆಯ ಕೊಳ್ಳೋ 1 ಪತಿ ಸಖನೇ |ನ್ಯೂನಾತಿರೇಕಗಳ | ನೀನಾಗಿ ಮನ್ನಿಸುತಮಾನನಿಧಿ ಗುಣಪೂರ್ಣ | ನೀನೆನ್ನ ಪೊರೆಯೋ 2 ಭಾವದಲಿ ನೀನಿರಲು | ಅವ ಭಯವಿಲ್ಲೆನಗೆಶ್ರೀವರನೆ ಸರ್ವೇಶ | ಸರ್ವಜ್ಞ ಮೂರ್ತೇ |ಕಾವ ಕರುಣಿಯೆ ಗುರು | ಗೋವಿಂದ ವಿಠಲ ಬಾಗೋವತ್ಸ ಧ್ವನಿ ಕೇಳಿ | ಧಾವಿಸುವ ಪರಿಯಂತೆ 3
--------------
ಗುರುಗೋವಿಂದವಿಠಲರು
ಸರ್ವತಂತ್ರ ಸ್ವತಂತ್ರ | ನಿರ್ವಿಕಾರನೆ ದೇವ ಅವ್ವ ಲಕುಮಿಗು ಪ್ರೇರಕ ಪ ದುರ್ವಿಭಾವ್ಯನೆ ಜಗಕೆ | ದರ್ವಿ ಜೀವನ ಕಾವಹವಣೆ ನಿನದಲ್ಲೇ ಸ್ವಾಮಿ ಅ.ಪ. ಕಾಯ ರಕ್ಷಿಸಿದೇ 1 ಕಾಯ ವೈರಿ ಪತಿ ನೀನೆ | ಜಾಯೆಯಿಂದೊಡಗೂಡಿಗೇಯ ಸಂಕರುಷಣನೆ | ಆಯತನ ಪೊರೆದೇ 2 ಸಾಯಮಭಿಧಾನದ | ಸವನ ಮೂರಲಿ ದಿವ್ಯಗಾಯಿತ್ರಿ ದ್ವಯ ಮಾತೃಕಾ |ಆಯತನದೊಳಗಿದ್ದು | ಆದಿತ್ಯ ದೇವಕಿಂಆಯುರ್ಹವಿಷವ ಗೊಳ್ಳುತಾ |ಜೀಯ ನೀ ಪೊರೆಯುತಿರೆ | ಧಾತು ಸಪ್ತಕ ತನುವಧಾರ್ಯವಾಗಿಹುದೊ | ದ್ಯುಮ್ನ |ಗೇಯ ಗುರು ಗೋವಿಂದ | ವಿಠಲನೆ ತವ ಪದಕೆಕಾಯ ಇದನರ್ಪಿಸುವ | ದೇಯ ಕೊಡು ಸತತ 3
--------------
ಗುರುಗೋವಿಂದವಿಠಲರು
ಸುರಾಸುರಾರ್ಚಿತ ಸರೋಜಲೋಚನ ಸರಾಗದಿಂದೆನ್ನನೀಕ್ಷಿಸೈ ಪರಾಪರೇಶನೆ ಪರಾತ್ಪರನೆ ನೀ ಪರಾಕುಮಾಡದೆ ಪಾಲಿಸೈ ಪ ವಿರಾಜಮಾನ ಸುವಿರಾಜವಾಹನ ವಿರಾಟ್ಪುರುಷ ವಿಶ್ವಂಧರ ಕರಾರವಿಂದದಿ ಕರಾದಿಗಳ ಪಿಡಿ ಧರಾತಿಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹುಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾಭರಣ ಗುಣಭೂಷಣ ಸುರಾರಿಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರಿಸುಕೋಮಲಶರೀರ ನಿನ್ನದು ಈ ಪರಿ ಸಿರಿಯುದರದೊಳೇ ಸಿರಿಯಧರಿಸಿದ ಪರಿಯದೆಂತುಟೋ ಕೇಳ್ ಹರಿ 4 ಪಯೋಧಿತನಯಾ ವಯೋಸುರೂಪನೆ ದಯಾನಿಧೇ ಧರ್ಮಾತ್ಮನೆ ದಯಾರಸದಿ ಹೃತ್ಪಯೋಜಮಧ್ಯದಿ ನಿಯಾಮಿಸುವ ನಿರ್ಮಾಯನೆ 5 ವರೇಣ್ಯ ಸಜ್ಜನ ಶರಣ್ಯ ಪುಲಿಗಿರಿಯರಣ್ಯ ಮಧ್ಯವಿರಾಜಿತ ಹಿರಣ್ಮಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ 6 ವ್ಯಾಘ್ರನೆಂಬುವತ್ಯುಗ್ರ ದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪ ಸುರಾಗ್ರಗಣ್ಯ ಪುಣ್ಯಾತ್ಮನೆ 7 ಸುರರು ನರರು ನಿನ್ನರಿಮೆಯನರಿಯದೆ ನಿರುತವು ಸನ್ನುತಿಗೈವರೆ ಪರಮಪುರುಷ ಸುಖಕರ ನೀನೆನ್ನುತ ಪರಿಪರಿ ನಿನ್ನನೆ ಪೊಗಳ್ವರೆ 8 ಮೂಜಗ ಮಾಡುವ ಪೂಜೆಯಿಂದ ನೀನೀ ಜಗದಲಿ ಒಲಿದಿರ್ಪೆಯ ಮೂಜಗ ಪೂಜಿಪ ವ್ಯಾಜದಿಂದ ನಿಜಪೂಜೆಯ ನೀ ಕೈಗೊಂಬೆಯ 9 ನಿಜಪದದೊಳು ನೀನಜಭವ ಮುಖಸುರವ್ರಜಗೋಚರನಾಗಿಲ್ಲವೈ ಸುಜನರ ಪೊರೆಯವ ನಿಜಮತಿಯಿಂದಲಿ ತ್ರಿಜಗಕ್ಕೆ ಗೋಚರನಾಗಿಹೈ10 ನಿತ್ಯತೃಪ್ತ ನೀನತ್ಯುತ್ತಮ ನಿಜಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಧರಣಿಯೊಳುರುತರ ಮೆರೆಯುವ ಫಣಿಭೂ ಧರದೊಳು ನಿರುತವು ಭಕ್ತರ ಸಿರಿವಲ್ಲಭ ವರದ ವಿಠಲ ಕರುಣಾಕರ 12
--------------
ವೆಂಕಟವರದಾರ್ಯರು
ಹರಿಯೆ | ಕರುಣ ವಾರಿಧಿಯೆ | ಧೊರೆಯೇ |ವರ ಚರಣ ಸೇವೆಯನು ಕೊಡು ಹರಿಯೇ ಪ ಗಾಂಗೇಯ | ಶರದಿ ಸೆಣೆಸಲು ಅಂದುಸರಸದಲಿ ನೀ ಅವನ | ಪೊರೆಯಲಿಲ್ಲವೆ ಎಂದು 1 ದುರುಳ ದುಶ್ಯಾಸನ | ಸೀರೆ ಸಭೆಯಲಿ ಸೆಳೆಯೇತರಳೆ ಪಾಂಚಾಲೆ | ಓಲೆ ಕಳುಹಿದಳೆ ಹರಿಯೆತರುಳೆ ಕೈಗಾಯ ಬೇಕೆಂದು | ನಿನ್ನ ಧೊರೆಯೇಎರಳಾಕ್ಷಿಗಕ್ಷಯ್ಯ | ವಸನಿತ್ತೆ ಹರಿಯೇ 2 ಅಂದು ಬಲತಾಯಿ ಬಾಲಕನ | ತೊಡೆಯಿಂದ ನೂಕೇ |ಬಂದು ಕಾನನಕೆ ತಪಗೈದ | ತರಳನನು ಕಾಯ್ದೇ |ಇಂದು ನಾ ಮಾಡಿದಪರಾಧ | ವೇನಯ್ಯ ಹರಿಯೇ |ಕಂದನಪರಾಧ ಎಣಿಸುವಳೆ | ತಾಯಿ ಧೊರೆಯೇ3 ಗೌತಮರ ಮಡದಿಯನು | ಕಾಯಲಿಲ್ಲವೆ ಹರಿಯೆಔತಣವ ಕೊಟ್ಟು ಬರ | ಹೇಳಿದಳೆ ಧೊರೆಯೇ ||ವೀತಶೋಕನೆ ಎನ್ನ | ಮೊರೆ ಕೇಳಿಸದೆ ಹರಿಯೇಔತಪ್ರೋತ ನೀನೆಲ್ಲವನು | ತಿಳಿದಿರುವೆ ಧೊರೆಯೇ 4 ಬಲಿಯ ಯಾಚಿಸುತ | ನೀ ಅವನ ವಂಚಿಸಿದಿ ಹರಿಯೆತಲೆ ಬಾಗಲಲಿ ನಿಂದು | ನೀ ಅವನ ಪೊರೆದೆ ಧೊರೆಯೆಸಲೆ ಬೀದಿ ಬೀದಿಯಲಿ | ನಾ ಕೀರ್ತಿಸುವೆ ಹರಿಯೇಬಲು ದಯಾಪರ ಗುರು | ಗೋವಿಂದ ವಿಠಲೆಂದು ಧೊರೆಯೆ 5
--------------
ಗುರುಗೋವಿಂದವಿಠಲರು
ಹರಿಯೆ ನಿನ್ನ ಭಜಿಸುವಂಥ | ಶರಣ ಸಂಗವಾನಿರುತ ಇತ್ತು ಕಾಯೊಯೆನ್ನ | ಅಘವ ಕಳೆಯುವ ಪ ಮೇರುಗಿರಿಯ ಪೋಲ್ವದುರಿತ | ರಾಶಿ ನಿಚಯವಾಸಾರಿ ತೂಲರಾಶಿಗನಳ | ಪರಿಯ ಮಾಡುವಾ |ಸೂರಿ ಜನ ಸಂಗ ಫಲವ | ಪೇಳಲಳವಾತೋರಿ ಪೊರೆ ಅಂಥವರ | ದೇವರ ದೇವಾ 1 ನಿನ್ನ ಸಂಕಲ್ಪಾನುಸಾರ | ನಡೆವ ಭಕ್ತರಮನ್ನುಜರು ಅವರೆಂದು | ತಿಳಿವ ಕುಜನರಇನ್ನ ತನಯ ಶಿಕ್ಷಿಸುವ | ಬಿಡದಲವರಬೆನ್ನು ಹುರಿಯ ಕೀಳಿಸುವ | ಮನ್ಯುಲವರ 2 ಕಾಲ ಕಳೆವಾರೋ 3 ಸತಿಸುತಿರೊಡನೆಯಿದ್ದು | ಮಮತೆ ದೂರರೋಹಿತವು ಅಹಿತವೆರಡು ಸಹಿಸಿ | ನಿನ್ನಿಂದೆಂಬೋರೋ |ಕ್ಷಿತಿಯೊಳುಳ್ಳ ತೀರ್ಥಕ್ಷೇತ್ರ | ಪಾವಿಸುವರೋಗತಿಯು ನೀನೆ ಸತತ ಎಂದು | ಅನ್ಯ ಬಗೆಯಾರೋ 4 ದರ್ವಿಯಂತೆ ಜೀವನೆಂದು | ಅರಿತು ಅನುದಿನದುರ್ವಿಭಾವ್ಯ ವ್ಯಕ್ತಾಅವ್ಯಕ್ತ | ಅನಂತಗುಣಶರ್ವ ವಂದ್ಯನಾದ ಗುರು | ಗೋವಿಂದ ವಿಠಲನಸರ್ವಕಾಲ ತುತಿಸುತ್ತ | ತಿಳಿವರಾಧೀನ 5
--------------
ಗುರುಗೋವಿಂದವಿಠಲರು
ಹರೇ ವೆಂಕಟಶೈಲವಲ್ಲಭಪೊರೆಯಬೇಕು ಎನ್ನಪ ದುರಿತದೂರ ನೀನಲ್ಲದೆ ಧರೆಯೊಳುಪೊರೆವರನ ಕಾಣೆ ನಿನ್ನಾಣೆ ಅ.ಪ. ಆರು ನಿನ್ನ ಹೊರೆತೆನ್ನ ಪೊರೆವರುನೀರಜಾಕ್ಷ ಹರಿಯೆ ಅ-ಪಾರ ಮಹಿಮ ಪುರಾಣ ಪುರುಷಘೋರ ದುರಿತಗಳ ದೂರ ಮಾಡಿಸೋ 1 ಇಂದಿರೇಶ ಅರವಿಂದನಯನ ಎನ್ನತಂದೆ ತಾಯಿ ನೀನೆಹೊಂದಿದವರ ಅಘವೃಂದ ಕಳೆವಮಂದರಾದ್ರಿಧರನೇ ಶ್ರೀಧರನೇ2 ಮಂಗಳಾಂಗ ಮಹನೀಯ ಗುಣಾರ್ಣವಗಂಗೋದಿತ ಪಾದಅಂಗಜಪಿತ ಅಜರಾಜಶಯ್ಯ ಶ್ರೀ-ರಂಗವಿಠ್ಠಲ ದೊರೆಯೇ ಶ್ರೀ ಹರಿಯೇ 3
--------------
ಶ್ರೀಪಾದರಾಜರು
ಹೇಸಿಕಿಲ್ಲವೊ | ಎನಗೆ ಹೇಸಿಕಿಲ್ಲವೋ ಪ ಮೀಸಲೆನಿಸಿ ಮನವ ನಿನ್ನ | ಆಶೆಯಲ್ಲಿ ಇರಿಸದಾಲೆ ಅ.ಪ. ವೈರಿ ಕಾಡುತಿಹನು 1 ವಿಷಯದಾಶೆ ಪೋಗಲಿಲ್ಲ | ಹಸಿವು ತೃಷೆಯು ಮೀರಲಿಲ್ಲಕುಸಿಯುತಿದೆ ದೇಹವೆಲ್ಲ | ಎಸೆವ ವ್ರತವ ಚರಿಸಲಿಲ್ಲ 2 ನಾನು ನನ್ನದೆಂಬ ಮಮತೆ | ಹೀನವೆಂದು ತಿಳಿದು ತಿಳಿದುಗೇಣು ಎಂಟು ದೇಹಕಾಗಿ | ಹೀನ ವಿಷಯದಾಶೆ ಇಹುದು 3 ಸಂದು ಪೋದ ಜನ್ಮ ತಿಳಿಯೆ | ಮುಂದೆ ಬಾಹುದೆಂತೊ ಕಾಣೊಇಂದಿರೇಶ ನೀನೆ ಗತಿಯೊ | ಮಂದಹಾಸ ಬೀರಿ ಪೊರೆಯೊ 4 ನಿನ್ನ ಕಾಣಧಾಂಗೆ ದೇಹ | ಇನ್ನೂ ಪೋಗದಂತೆ ಮಾಡಿ |ಘನ್ನ ಮಹಿಮ ರೂಪ ತೋರೊ | ಚೆನ್ನ ಗುರು ಗೋವಿಂದ ವಿಠಲ5
--------------
ಗುರುಗೋವಿಂದವಿಠಲರು
(ಅ) ಆರೈದು ಸಲಹೋ ಎನ್ನ - ಶ್ರೀ ರಾಮಚಂದ್ರ ಪ ಆರೈದು ಸಲಹೋ ಎನ್ನ ಸಾರಿದೆ ನಿನ್ನ ಚರಣ ವಾರಿಜಯುಗಳವನ್ನು - ಶ್ರೀ ರಾಮಚಂದ್ರ ಅ.ಪ ಕಕ್ಕಸಭವದೊಳು ದಿಕ್ಕೆಟ್ಟು ತುಕ್ಕೆ ಬಲು ದುಃಖಿಸುತಿಹೆನು ಕೇಳು - ಶ್ರೀರಾಮಚಂದ್ರ 1 ತಂದೆ ತಾಯಿಯು ನೀನೆ ಬಂಧು ಬಳಗ ನೀನೇ ಎಂದೆಂದು ಗತಿ ನೀನೆ - ಶ್ರೀ ರಾಮಚಂದ್ರ 2 ಭವ ಬನ್ನ ಈ ಪರಿಯರೋಷವೊ ಘನ್ನ - ಶ್ರೀ ರಾಮಚಂದ್ರ 3 ಘೋರ ತಾಪದ ನೋವ ಪಾರಗಾಣಿಸೋ ದೇವ ದೂರನೇ ನಾ ನಿನ್ನ - ಶ್ರೀ ರಾಮಚಂದ್ರ 4 ಯಾಕೆ ಬಾರದೋದಯ ಶ್ರೀಕಾಂತ ಎನ್ನಯ ವಾಕುಸೋಕದೆ ಕಿವಿಯ - ಶ್ರೀರಾಮಚಂದ್ರ 5
--------------
ಲಕ್ಷ್ಮೀನಾರಯಣರಾಯರು
(ಆ) ಯಾದವಕುಲ ದೀಪ ಶ್ರೀಪ ಯಾದವ ಕುಲದೀಪ ಪ ಮಾಧವ ಪಾಹಿ ಅ.ಪ ಶರಣ ರಕ್ಷಕ ಬಿರುದನು ಕೇಳಿ ಶರಣು ಹೊಕ್ಕೆನೋ ದೇವ 1 ಭುವನಪಾವನ ತವಪದ ಧ್ಯಾನ ತವಕದಿ ಪಾಲಿಸೋ ದೇವ 2 ಲಕುಮೀಕಾಂತನೆ ಸಕಲಕೆ ನೀನೆ ಮುಕುತಿದಾತನೆ ದೇವ 3
--------------
ಲಕ್ಷ್ಮೀನಾರಯಣರಾಯರು
(ಆ) ಶ್ರೀ ವೆಂಕಟೇಶ್ವರ ಅಭಯ ಗಿರಿಯವಾಸ ಶ್ರೀನಿವಾಸನು ನಮಗೆ | ಶುಭವೀವ ನಿರುತ ಮಂದಹಾಸನೊ ಪ ಧೇನಿಪರ ಮನಕೆ ಚಿಂತಾಮಣಿಯೋ ಸ್ವಾಮಿ | ನೀನೆ ಗತಿಯೆಂಬರಿಗೆ ಹೊಣೆಯೋ ಜ್ಞಾನಮಯ ಸಂದಣಿಯೊ ಪುಣ್ಯ ಕಾನನ ನಿವಾಸ ಸುರಖಣಿಯೊ 1 ವಜ್ರ ಪಂಜರನೋ ದುಷ್ಟ ದುರುಳ ದೈತ್ಯರಿಗೆ ಝರ್ಝರನೊ ದುರಿತ ಕದಳಿಗೆ ಕುಂಜರನೊ ಸ್ವಾಮಿ ಉರಗತಲ್ಪನಾದ ಸಿರಿವರನೊ 2 ಪರಮೇಷ್ಟಿ ಶಿವರೊಳಗಿಪ್ಪನೋ ಇಂದು ಮರುತನ ಪೆಗಲೇರಿ ಬಪ್ಪನೊ ಶರಣರಿಗೊರವೀಯೆ ತಪ್ಪನೋ ನಮ್ಮ ಸಿರಿ ವಿಜಯವಿಠ್ಠಲ ತಿಮ್ಮಪ್ಪನೊ 3
--------------
ವಿಜಯದಾಸ
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
* ಶಿಲೆಯಲ್ಲಿ ಮಮತೆಯೇ ಸಿದ್ಧ ಪುರುಷ ಇಳೆಮೂರು ವ್ಯಾಪಕಗೆ ಈ ಮುನಿಯ ಬಳಿಯಾ ಪ. ದಶರಥಾತ್ಮಜ ಸೇತು ಬಂಧನವ ಗೈಯಲೂ ಅಸಮ ಸಾಹಸದಿ ಗಿರಿಗಳನೆ ತಂದೇ ಹಸನಾದ ಶಿಲೆಯೊಂದರಲಿ ರೂಪ ಮೂಡುವಡೆ ವಸುಧಿ ಸುತೆಪತಿ ಬೇಡವೆನುತಿರ್ದನೇನೈ 1 ನಡುಗೆ ಹುಲಿ ಘರ್ಜನೆಗೆ ಪಡೆದವಳ ಕೈ ಜಾರೆ ವಡೆದು ಶತವಾಗಲಾ ಗಿರಿಯಲ್ಲಿ ಮಮತೇ ವಡಮೂಡದವಗೆ ಈ ವಡೆದ ಪ್ರತೀಕದಲಿ ಇಡುತ ಅಭಿಮಾನವನು ಕಡು ಪೂಜೆಗೊಂಬೇ 2 ಧರೆಯಲ್ಲಿ ಚರಿಸಿ ಸದ್ಭಕ್ತರ ಜ್ಞಾನವನು ಹರಿಸಿ ಸಧ್ಗ್ರಂಥ ಕನ್ನಡಿಯ ತೋರಿ ಗಿರಿ ಏರುವಾಗ ಬೇಕೆನಲು ಶಿಲೆ ಇರಲಿಲ್ಲೆ ಬಿರುಕಾದ ಕಲ್ಲಿನಲ್ಲಿ ನೆಲಸಿರುವದೇನೈ 3 ಶಿಲೆಯೆ ನೀನೆನ್ನಲು ಅಜ್ಞಾನಿ ನುಡಿಯಹುದು ಶಿಲೆಯಲ್ಲಿ ನೀನೆಲು ಮತ್ತೊಂದು ಶಿಗದೇ ಬಲು ಛಿದ್ರ ತಂತಿಯಲಿ ಬಿಗಿಸಿ ಪೂಜೆಯಗೊಂಬ ಬಲವಂತದಾ ಮಹಿಮೆ ತಿಳಿಯಲಳವಲ್ಲಾ 4 ತಾಪಸರ ಪೂಜೆ ಸತ್ವವ ತೋರ್ವ ವೈಭವವೋ ಆಪನ್ನರನೆ ಕಾಯ್ವ ಆನಂದವೋ ಶ್ರೀ ಪರಮಹಂಸ ಪ್ರದ್ಯುಮ್ನತೀರ್ಥರಿಗೊಲಿದೆ ಗೋಪಾಲಕೃಷ್ಣವಿಠ್ಠಲನ ನಿಜದಾಸ 5
--------------
ಅಂಬಾಬಾಯಿ
ಅ ಸಾಗಿ ಬಾರೋ ಗುರುರಾಘವೇಂದ್ರರಾಯ | ವರ ಸತ್ಕಲುಗೇಯ ಪ ಕೂಗುತ ಕರೆಯುವ ಭಾಗವತರ ಮೊರೆಯ ಲಾಲಿಸೋ ಮುನಿವರ್ಯ ಅ.ಪ ಪಾವನಘನ ವೃಂದಾವನ ಮಂದಿರನೆ ಸದ್ಗುಣ ಬಂಧುರನೇ ಪಾವಮಾನಿಮತಶರಧಿ ಚಂದಿರನೇ ಧರಸಮ ಕಂದರನೇ ಛಾವಣಿಪುರ ಸುಜನಾವಳಿ ಕೋರಿಕೆಯ ಗರೆಯಲು ಶುಭಕಾಯ 1 ಶರಣಜನರು ಮೈಮರೆದು ಕರೆಯಲಾಗಿ ನಿಲ್ಲದೆ ವರಯೋಗಿ | ಭರದಿ ಬಂದು ಕರಪಿಡಿಯುವ ಧೊರೆ ನೀನು ಎಂದರೀತೆವು ಸುರಧೇನು ಗತಿದಾಯಕ ನೀನೆಂದು ಭಜಿಪೆವು ದಯಾಸಿಂಧು 2 ಶಾಮಸುಂದರನ ಪ್ರೇಮವ ಪಡೆದಾತ ಜಗದೊಳು ಪ್ರಖ್ಯಾತ ನೇಮದಿ ಭಜಿಪರ ಕಾಮಿತ ಕೊಡುವಾತ ದೈಶಿಕ ಕುಲನಾಥ ಹೇಮಶಯ್ಯ ಸುಕುಮಾರ ಮಮತೆಯಿಂದ ಮಂತ್ರಾಲಯದಿಂದ 3
--------------
ಶಾಮಸುಂದರ ವಿಠಲ