ಒಟ್ಟು 68 ಕಡೆಗಳಲ್ಲಿ , 34 ದಾಸರು , 66 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖರೆ ತವಧ್ಯಾನ ಹರಿ ಬೇಗ ಮಾಡೆನ್ನಗೆ ನಿಜಮನನ ಪ ಬಾಗಿವಂದಿಪೆ ನಾ ನಿಮ್ಮ ಚರಣ ಭವ ರೋಗ ದಯದಿ ಮಾಡು ನಿವಾರಣ ಅ.ಪ ಜಾಗರಮಾಡಿದರಹುದೇನು ನಿತ್ಯ ಭಾಗವತನೋದಿದರಹುದೇನು ಯಾಗಮಾಡಿದರಹುದೇನು ಮಹ ಯೋಗ ಬಲಿಸಿದರಹುದೇನು ಸೋಗು ಹಾಕಿ ಬೈರಾಗಿ ಆಗಿ ಇಳೆಯ ಭೋಗವ ತ್ಯಜಿಸಿದರಹುದೇನು 1 ಸ್ನಾನಮಾಡಿದರಹುದೇನು ಬಹು ದಾನಮಾಡಿದರಹುದೇನು ಮೌನಮಾಡಿದರಹುದೇನು ಕೌ ಪೀಣ ಧರಿಸಿದರಹುದೇನು ಜ್ಞಾನ ಬೋಧಿಸುತ ನಾನಾದೇಶಗಳ ಮಾಣದೆ ತಿರಿಗಿದರಹುದೇನು 2 ಜಪವಮಾಡಿದರಹುದೇನು ಬಲು ಗುಪಿತ ತೋರಿದರಹುದೇನು ತಪವ ಗೈದರಹುದೇನು ಮಹ ವಿಪಿನ ಸೇರಿದರೆ ಅಹುದೇನು ಚಪಲತನದಿ ಸದಾ ಅಪರೋಕ್ಷನುಡಿದು ನಿಪುಣನೆನಿಸಿದರೆ ಅಹುದೇನು 3 ಸಾಧುವೆನಿಸಿದರೆ ಅಹುದೇನು ಚತು ಸ್ಸಾಧನಮಾಡಿದರಹುದೇನು ವೇದ ಪಠಿಸಿದರೆ ಅಹುದೇನು ಅಣಿ ಮಾದಿ ಅಷ್ಟಸಿದ್ಧಿ ಅಹುದೇನು ಓದಿತತ್ತ್ವಪದ ಛೇದಿಸಿ ಬಿಡದೆ ಬೋಧಕನೆನಿಸಿದರೆ ಅಹುದೇನು 4 ಕೋಶನೋಡಿದರೆ ಅಹುದೇನು ಬಹು ದೇಶ ನೋಡಿದರೆ ಅಹುದೇನು ಆಸನಹಾಕಿದರಹುದೇನು ಮಂತ್ರ ಅ ಭ್ಯಾಸ ಮಾಡಿದರೆ ಅಹುದೇನು ದಾಸಪ್ರಿಯ ಭಯನಾಶ ಶ್ರೀರಾಮ ನಿಮ್ಮ ಧ್ಯಾಸವೊಂದಿರೆ ಮುಕ್ತಿ ಸಿಗದೇನು 5
--------------
ರಾಮದಾಸರು
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಜೀವವು ತಲ್ಲಣಿಸುವುದು ಪ ದೇವರ ಪೂಜೆಯಿಂದು ಮಾಡೋದಿಲ್ಲ ನೀವೆಲೆಯ ಹಾಕಿ ಕರೆದರೆ ನಾ ಸಿದ್ಧ ಅ.ಪ ಜಣುಗಿ ಜಣುಗಿ ಕಾಲಕಳೆಯುವುದಲ್ಲ 1 ಮುಸುಕನಿಟ್ಟುಕೊಂಡು ಮಲಗಿದ್ದರಿನ್ನು 2 ಕುಟ್ಟಿ ಬೀಸೋರಿಲ್ಲ ಅಟ್ಟುಂಬೋದೆ ಭಾರ ಇಷ್ಟು ನುಡಿದುದಕೆ ಸಿಟ್ಟು ಬಹುಪೂರ 3 ಹತ್ತುಗಂಟೆಯಾಯ್ತು ಹೊತ್ತು ಬಹಳ ಹೋಯ್ತು ಬತ್ತಿ ಹಚ್ಚಿ ಒಲೆಯ ಹೊತ್ತಿಡ ಬಾರದೆ 4 ಬಿಸಜಾಕ್ಷಾಗುರುರಾಮ ವಿಠಲನಾಣೆ ಬ್ಯಾಡ 5
--------------
ಗುರುರಾಮವಿಠಲ
ದಾನಿ ಸದ್ಗುರು ಕೊಟ್ಟಾ ಸ್ವಾನಂದ ಸುಖವಾ ಪ ಕರದು ಘನದಯ ಮಳೆಗರದಾ | ಕ್ಷರವ ನುಡಿದು ಯನ್ನ ಕಿವಿಯೊಳುಸುರಿದಾ 1 ನಯನ ವೆರಡರಲಿ ಮುದ್ರಿಯನಿಲಿಸಿ | ಮಯ ಪ್ರಭೆ ಕುರುಹನು ದೋರಿದ ಸುಳಿಸಿ2 ಬೋಧ ವೆಚ್ಚರಿಸಿ | ದನು ಗುರು ಮಹಿಪತಿ ಕಂದನುದ್ಧರಿಸಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರ್ಗಣ ಪರಿಹರಿಸಿ ದುರ್ಗದೊಳಿಡು ಎನ್ನಾ ಪ ಪಾಪಕ್ಕೆ ಎರಗುತಾ ತಾಪಸರನ್ನ ಜರಿದು ಬಲು ಸಂ ತಾಪದಿ ಬಳಲಿದೆನೊ ಕುಕ್ಕಿ 1 ಹಿಂಸೆಯ ಮಾಡುವಲ್ಲಿ ಹೇಸದೆ ಧ್ವಂಸಗೈಸು ವೇಗಾ 2 ಕಠಿಣ ಉತ್ತರ ನುಡಿದು ಮತ್ಸರ ಕುಟಿಲತನವಾ ಮರಿಯೆ ಸಟೆ ಮಾತುಗಳನಾಡಿ ನಿನ್ನಾ ನಿ ಚ್ಚಟದ ಮರಿದೆನೊ ಹರಿಯೆ 3 ಕಲಹವೆಂದರೆ ಕಾಲು ಕೆದರುವೆ ಕೆಲಸಾರದಲೇವೇ ಮಲಿತು ಎದುರು ನೆಲೆಗಾಣದೇ ಪೋದೆ4 ವ್ಯಾಧೆ ವೇದನೆಯಿಂದ ಬಲು ಕಷ್ಟ ವಾದದು ಈ ದೇಹಕ್ಕೆ ಮೋದ ವಿಜಯವಿಠ್ಠಲ ನಿನ್ನಿಂ ದಾದದ್ದು ತೊಲಗಿಸಿ 5
--------------
ವಿಜಯದಾಸ
ದೇವತಾಸ್ತುತಿ ಸರ್ವೋತ್ತಮನ ಸ್ತುತಿಗೆ ಸರಿಬೆಸದಕ್ಷರದೆಣಿಕ್ಯಾಕ ಧ್ರುವ ಯತಿ ಫಲ ಗಣ ಪ್ರಾಸವ್ಯಾಕೆ ಸ್ತುತಿಸ್ತವನ ಕೊಂಡಾಡಲಿಕ್ಕೆ ಹಿತದೋರದು ಮಿತಿ ಮಾಡಲಿಕ್ಕೆ ಅತಿ ಶೋಧಿಸಲಿಕ್ಕೆ 1 ಮುತ್ತಿಗೆ ಬುದ್ಯುಶದೆಂದು ಉತ್ತಮರಪೆಕ್ಷರೆಂದೆಂದು ನೆತ್ತಿಲಿಟ್ಟು ಕೊಂಬರು ಬಂದು ಅತಿ ಪ್ರೀತಿಲೆ ನಿಂದು 2 ಸಾರಸ ಸ್ವಾನಂದದ ಸರಳು ಮತಿ ಹೀನರು ಬಲ್ಲರೇನದರೊಳು ಮಾತಿನ ಮರಳು 3 ಬಾಯಲಿ ಧೂಳಿ ಪರಿ ಸ್ತುತಿಯಲಿ 4 ಮಹಿಪತಿ ಸ್ತುತಿನುಡಿದು ಅಪ್ಪವ್ವನುತಾ ಎನ್ನ ಕಡಿಯ ತಪ್ಪನೆ ತುಸು ಹಿಡಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ತಂತ್ರಗಳೆಲ್ಲ ಬಯಲಾಯ್ತೊ ರಂಗ ನಿನ್ನ ಕಥೆಯ ಕೇಳಿ ಭಯವಾಯ್ತೋ ಪ ನಿನ್ನ ವಂಚನೆಗೇ ಜಯವಾಯ್ತೋ ಅ.ಪ ಶರನಿಧಿಯ ಮಥನದಿ ಗರಳವು ಜನಿಸಲು ಪರಶಿವನುಂಬುವ ಪರಿಗೈದೆಯೇನೋ ತರುಣಿ ಸಂಜನಿಸಲು ಶರಗಳ ನೀಡಿ ದೈ ಪರಿ ಸಟೆಯೇನೋ 1 ಧರಣಿಯನಿತ್ತನ ಶಿರವನು ತುಳಿದೆ ಪರಿಗಣಿಸದೆ ತಾಯ ಕೊರಳನು ತರಿದೆ ಪರಸತಿಯರ ಕೂಡ ನೆರೆ ನಲಿದಾಡಿದೆ ಕರದಿ ಸನ್ನೆಯ ಮಾಡಿ ಕುರುಕುಲವಿರಿದೇ 2 ಮದನ ಸುಂದರಿಯಾಗಿ ಸುಧೆಯ ಕುಂಭವ ಕೊಂಡೆ ಅದಿತಿಯ ಸುತರಿಗೆ ಅದ ನೀನುಣಿಸಿದೆ ಮಧುರುಚಿಯರಿತನ ಚಕ್ರದಿ ತರಿದೆ [ಎದುರಿಸದೆವಾಲಿಯ ಮರೆಯಲಿರಿದೆ] 3 ಪೊಡವಿಯೊಡೆಯನ ಕಡೆಗಣಿಸೀ ನಿನ್ನ ಅಡಿಯಿಡೆ ಯಿದ್ದವನೊಡವೆರೆದೆ ನುಡಿದು ಕರ್ಣನ ಕಂಗೆಡಿಸಿದೆ ಭೀಷ್ಮನ ಕೆಡಹಿದೆ ಮಾಂಗಿರಿಯೊಡೆಯ ಗೋಪಾಲಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ನೆಚ್ಚದಿರು ಸಂಸಾರ ಕಡೆಗೆ ಹಾಕುವುದಲ್ಲ ಮಚ್ಚುಗೊಳಿಸುವುದು ವಿಷಯದಲಿ ಎಚ್ಚತ್ತು ಪ್ರವರ್ತಿಸು ಇನ್ನಾದರೂ ಸಿರಿ- ಅಚ್ಯುತನ ಪಾದವನು ನಂಬೊ ಪ್ರಾಣಿ ಪ ಪುಂಪೆಣ್ಗಳಿಂದ ಪುಟ್ಟಿದ ದೇಹವನು ತಿಳಿ ಕೆಂಪು ಬಿಳಿದಿನ ವರ್ಣ ಮಿಳಿತ ಇಂಪಾಗಿದೆಯೆಂದು ಹಿಗ್ಗದಿರೆಲವೊ ಹೊಲೆ- ಗಂಪು ನಾರುವುದು ಅದ ತೊಳೆಯದೆ ಇರಲು 1 ಜನಿಸಿದಾಕ್ಷಣ ಕಾಯು ಕಡಮೆಂದು ತಿಳಿಯದಲೆ ಜನನಿ ಜನಕರು ಸುಖಿಸುತಿಹರು ತನುಭ್ರಮಣವಲ್ಲದೆ ಚಿದ್ರೂಪ ಬಲ್ಲರೆ ಕೊನೆಗೆ ಏನಾಗುವುದೊ ಪ್ರಾಣಿ 2 ಗಳಿಸಿ ಧನ ತರುವಾಗ ಸುತ್ತ ನೆರೆದಿಹರೆಲ್ಲ ಭಳಿರೆ ಇವ ಮಹಾತ್ಮನೆಂದು ಘಳಿಗೆ ತೊಲಗಲು ಧನವು ಕರಗಿ ತಿಂದು ಪೋಗಿ ಹಳಿದು ಹಲ್ತೆರೆದು ಅಣಕಿಪರೋ-ಪ್ರಾಣಿ 3 ಹುಬ್ಬಿನಿಂದಲೆ ಹೊಡೆದು ಹೃದಯದ ಕಗ್ಗಂಟು ಕಬ್ಬು ಕಾರ್ಮುಕನಿಂದ ಬಿಡಿಸಿ ಉಬ್ಬಿಸ್ಯುಕ್ಕಿನ ತಂತಿಯಂತೆ ಮಾತುಗಳಾಡಿ ಉಬ್ಬಸವ ಬಡಿಸುವಳೊ ನಾರಿ ಪ್ರಾಣಿ 4 ಯೌವನವೊದಗಿದಾಗ ಏನೆಂದರೂ ಅಪ್ಪ ಅವ್ವಣ್ಣನೆಂದು ನಸುನಗುತ ಗವ್ವಳಿಕೆ ವೃದ್ಧಾಪ್ಯ ಬಂದೊದಗಲು ಇವನ ಬವ್ವನ ತೆರೆದಲಾಡಿಪರೋ-ಪ್ರಾಣಿ 5 ನಿಷ್ಠಕ್ಕೆ ದೇಹವನು ಮಾಡಿಕೊಂಡಂತೆ ನೀ ದುಷ್ಕರ್ಮಕೊಳಗಾಗದಿರೆಲೋ ನಿಷ್ಕಂಟಕವಾದ ಮಾರ್ಗದಲಿ ನರಹರಿಯ ನಿಷ್ಕಾಮದಲಿ ಭಜಿಸೊ ಮನವೆ ಪ್ರಾಣಿ 6 ಅಂ¨ಲಿಗೆ ಗೃಹಪಾಲ ಮನೆ ಮುಂದೆ ಹಗಲಿರುಳು ಹಂಬಲಿಸಿ ಬಿದ್ದಂತೆ ನೀನು ಕವಿ ಜೋತು ಬಿದ್ದು ಈ ಡಿಂಬವನು ಪೋಷಿಸದಿರೆಲವೊ-ಪ್ರಾಣಿ 7 ದೇಹಕ್ಕೆ ಬಲವಾಗಬೇಕೆಂದು ಎಲ್ಲರೊಳು ಕಂಡಲ್ಲಿ ಸ್ನೇಹಭಾವವನ್ನು ಬಯಸಿ ಕಾಯ ಪುಷ್ಟಿಯಿಂದ ಮೋಹಕ್ಕೆ ಒಳಗಾದೆಯಲ್ಲೋ-ಪ್ರಾಣಿ8 ಸ್ವಲ್ಪ ದಿನವುಳಿಯಿತು ಒಂದು ಸಾಧನ ಕಾಣೆ ಕಲ್ಪಾಯು ನಿನಗಿಲ್ಲವಲ್ಲೊ ಬಲ್ಪಂಥಗಳ ಮಾಡಿ ಭೋಗಪಡದಿರು ನಾಗ- ತಲ್ಪನ್ನ ಮೊರೆಹೋಗಲೋ-ಪ್ರಾಣಿ9 ದೇಶ ದೇಶವ ತಿರುಗಿ ಬಳಲಿ ಬಾಯಾರಿ ನೀ ಕ್ಲೇಶಕೊಳಗಾಗಿ ಹೊನ್ನುಗಳ ಏಸೇಸು ತಂದದ್ದು ಏನಾಯಿತೋ ಒಂದು- ಕಾಸು ನಾಳೆಗೆ ಕಾಣೆಯೋ-ಪ್ರಾಣಿ10 ಎಂದಿಗಾದರೋ ಇದೇ ಸಂಸಾರ ವಿಸ್ತಾರ ಒಂದಕ್ಕೆ ಒಂದೊಂದು ಅಧಿಕ ಬಂಧನವಲ್ಲದಲೆ ಲೇಶ ನಿರ್ಮಲ ಕಾಣೆ ಪೊಂದು ಸಜ್ಜನರಲ್ಲಿ ಮಂದ-ಪ್ರಾಣಿ11 ನಿತ್ಯ ಗಂಡಾಂತರದಿ ಬಿದ್ದು ಸಕಲಕ್ಕೆ ಕರ್ತೃ ನಾನೆಂದು ಕೂಗುವಿಯಲೊ ಮೃತ್ಯು ನಗುವುದು ನಿನ್ನ ಹೆಡತಲೆಯಲಿ ನಿಂದು ಚಿತ್ತದಲ್ಲಿ ತಿಳಿದು ತಲೆ ಬಾಗೊ-ಪ್ರಾಣಿ 12 ದೊಡ್ಡವನು ನಾನು ಎನಗೆಲ್ಲ ಜನರು ಬಂದು ಅಡ್ಡಬೀಳುವರೆಂಬ ಮಾತು ಹೆಡ್ಡತನ ತಾಳದಿರು ಕೊನೆಗೆ ಅನುಭವಕ್ಕು ಕಡ್ಡಿಯಂದದಿ ಮಾಳ್ಪರೋ-ಪ್ರಾಣಿ 13 ಕೋಟಿಯಾದರು ಕೇಳು ಅವರೋಕ್ಷಿಗಾದರೂ ಕೋಟಲೆಯೊಳಿರದೆ ಗತಿಯಿಲ್ಲ ತಾಟತೂಟಕ ಮಾಡಿ ಅವರಂತೆ ನುಡಿದು ಭವ ದಾಟಬೇಕೋ ಬೇಗ ಜಾಣ-ಪ್ರಾಣಿ14 ಆದರಿಸಿ ಸತಿಸುತರು ಬಂಧು ಬಳಗಕ್ಕೆ ಸಂ ಪಾದಿಸಿ ಧನ ಧಾನ್ಯ ತಂದು ಮೋದಪಡಿಸುವೆನೆಂದು ವಾದಿಸುವ ಮನುಜನ್ನ ಪಾದಕ್ಕೆ ಶರಣು ಸಾರೆಲವೋ-ಪ್ರಾಣಿ 15 ವನಧಿಯೊಳು ಸಪ್ತದ್ವೀಪದ ಮೃತ್ತಿಕೆ ಹಾಕೆ ದಣುವಿಕ್ಯಲ್ಲದೆ ಪೂರ್ಣವಹುದೆ ಇನಿತು ತಿಳಿಯೆಲ್ಲೆಲ್ಲಿ ತಂದ ಧನದಿಂದ ಭವ- ವನಧಿ ತುಂಬದು ಕಾಣೊ ಮರುಳೆ-ಪ್ರಾಣಿ 16 ನಿತ್ಯ ಬರೆದ ಲೆಖ್ಖವು ದಿವಾ ರಾತ್ರಿ ನೋಡುತಲಿದ್ದು ನಿನ್ನ ಪತ್ರ ಕರದಲಿ ಪಿಡಿದು ಈ ಮೂರ್ಖ ನರಮಹಿಷ- ಪುತ್ರನೆಂದು ನಸುನಗುವರಲ್ಲೋ-ಪ್ರಾಣಿ 17 ಎನಗೆ ತನಗೆಂದು ಯಮಭಟರು ಕರಗಳ ಹೊಯಿದು ಕಣಿದು ಭುಜ ಚಪ್ಪರುಸುತಿಹರೊ ಅನಿತರೊಳಗೆಚ್ಚರಿಕೆ ಎಚ್ಚತ್ತು ಹರಿಚರಣ ವನಜ ಧಾನ್ಯವ ಒಲವು ಮಾಡೊ-ಪ್ರಾಣಿ 18 ಶ್ರುತಿಗೆ ಅಪ್ರಾಮಾಣ್ಯ ಬಾರದಂತೆ ಮಧ್ವ ಮತಕೆ ವಿರೋಧವಾಗದಂತೆ ಕ್ಷಿತಿಯೊಳಗೆ ಸುಜನರಿಗೆ ಹಿತವಾಗುವಂತೆ ಶ್ರೀ- ಪತಿಯ ಸೇವಿಸಿ ಸುಗತಿ ಪಡೆಯೋ-ಪ್ರಾಣಿ 19 ಅರ್ಥಬಾರದು ನಿನ್ನ ಸಂಗಾತ ಕೇಳ್ ಕೊನೆಗೆ ವ್ಯರ್ಥಧಾವತಿ ಪ್ರಾಪ್ತಕರ್ಮ ತೀರ್ಥಯಾತ್ರೆಯ ಮಾಡಿ ನಿಸ್ಸಂಗನಾಗು ಯ_ ಥಾರ್ಥಾ ಜ್ಞಾನದಿಂದ ಬಾಳೊ ಪ್ರಾಣಿ20 ಶಿಥಿಲವಾಗಿ ಪೋಪ ದೇಹಕೆ ಮಮತಿಂದ ಮಿಥುನ ಭಾವಗಳನ್ನೆ ಬಯಸಿ ವ್ಯಥೆಪಟ್ಟು ಪಥತಪ್ಪಿ ನಡೆದು ನರಹರಿ ಸುಗಣ ಕಥೆಗೆ ವಿಮುಖನಾಗದಿರೆಲೊ-ಪ್ರಾಣಿ 21 ವನಗಿರೀ ನದಿ ಮೆದೆ ಹೊದರು ಗಹ್ವರ ಹುತ್ತ ವನರಾಶಿ ದ್ವೀಪ ಪಾತಾಳ ತನು ಮತ್ರ್ಯ ಸುರಲೋಕ ಜನನಿ ಜಠರದೊಳಿರಲು ಅಣು ಮಾತ್ರ ತಪ್ಪುವುದೆ ಬರಹ ಪ್ರಾಣಿ 22 ಹಲವು ಹಂಬಲ ಸಲ್ಲ ಆದ್ಯಂತಕಾಲದಲಿ ಗಳಿಸಿಕೋ ಪೂರ್ಣಾಯು ವಾಯು ಒಲಿಯದಲೆ ನಿನ್ನೊಳಗೆ ವಿಜಯವಿಠ್ಠಲರೇಯ ಸುಳಿಯ ಜಾಗ್ರತನಾ ಗೆಲೋ ಪ್ರಾಣಿ 23
--------------
ವಿಜಯದಾಸ
ನೆನೆಮನವೇ ನಾರಾಯಣ ನಾಮವ ಅನುದಿನ ಧ್ಯಾನಿಸು ಗುರಮುಖದಂತೆ ಪ ಅನುಸಂಧಿಸುತಲಿ ಅವನಡಿ ಪಿಡಿಯುತ ಕನಿಕರದಿಂ ಕಾಯುವ ಕೈ ಹಿಡಿದು ಅ.ಪ ಅಡಿಗಡಿಗೊಂದೊಂದು ಯೋಚನೆ ಗೈವೆವೇ ಎಡಹಿ ಮುಗ್ಗುರಿಸುವೆ ಸುಡುಗಾಡೊಳಗೆ ಕಡಿದೋಡಿಸುತಲಿ ಪಾಪದ ಪಡೆಯಂ ಕಡೆಹಾಯಿಸುವನು ಕಷ್ಟದ ಕಡಲಿಂ 1 ತಮವೇ ತಾನು ಎಂಬ ಮೋಹದಿ ಕನವರಿಸುತ ಬಹು ಸಾಹಸ ತೋರ್ವೈ ಮನದೊಡೆ ಜೀವನು ಶರೀರವನು ಬಿಡೆ ಅನುಮತಿಸುತ್ತಲದ ಸುಟ್ಟು ಬಿಡುವರು 2 ತೃಷೆ ಜ್ವರ ರೋಗಗಳೊಳು ತಣಿವಂ ಕಾಣದೆ ತೊಳಲುತ್ತಿರುವೈ ಘನತರದಾಯುವು ಗತಿಸದ ಮೊದಲೆ ರಿನಕರನೊಳಗಿಹ ಶ್ರೀಶನ ನೋಡೈ 3 ಅನುಮಾನನ್ಯ ಆಶ್ರಯ ಬಿಡುಬಿಡು ತನುಮನ ತೊರೆಯನು ಆಪದ್ಭಂದು ಕೊನೆಗಳಿಗೆಯೊಳು ಕಡೆ ನುಡಿನುಡಿದು ಸನುಮತದಿಂ ಸಿರಿಯರಸನ ಪದವುಗು 4 ಸುಣ್ಣವ ತಿಂದ ತಿಮ್ಮಣನ ತೆರದಿ ನಿನ್ನ ಸ್ಥಿತಿಯ ಅನ್ಯಾಯವು ಸಹಜ ಕರ್ಮ ಬೆನ್ನನು ಬಿಡದಿದೆ ಇನ್ನು ಹೆಜ್ಜಾಜಿ ಶ್ರೀಶನ ಮರೆಹೊಗು 5
--------------
ಶಾಮಶರ್ಮರು
ನೋಡಿ ಧನ್ಯನಾದೆನಾ ಗಜಾನನಾ ಪುನೀತನಾ ಪಾಡಿ ಭಜನೆ ಮಾಡಿ ಇಡುವೆ ಅಡಿಗಳಲ್ಲಿ ಶಿರವಾ ಪ ಭಾರತಾರ್ಥ ಬರೆದ ದೇವ ಮಿತ್ರನಾ ಸುಪುತ್ರನಾ ಮಾರನಾಸ್ತ್ರ ಗೆಲಿದ ನಿಟಿಲನೇತ್ರನಾ ವಿರಕ್ತನ 1 ಸಕಲ ಶಾಸ್ತ್ರ ತಿಳಿಸೋ ಏಕದಂತನೇ ಬಲವಂತನ ಮುಕುತಿ ಮಾರ್ಗವ ತೋರೋ ವಕ್ರತುಂಡ ವಿಘ್ನದಂತನೇ 2 ಜ್ಞಾನವಿತ್ತು ನುಡಿದು ನುಡಿಸೋ ನೀನೆ ನಿಂದು ವದನದಿ ಮನವಾ ಹನುಮೇಶವಿಠಲನೊಳು ನಿಲಿಸೋ ಬೇಗದಿ 3
--------------
ಹನುಮೇಶವಿಠಲ
ಪರಮಾತ್ಮನೆ ನೀ ಸರಿ ಎಂದು ಕರಗದ ತಮದಲ್ಲಿ ಸೇರುವದೆ ಪ ಜೀವ ಪರಮಾತ್ಮಗೆ ಭೇದವ ಆವಾವ ಕಾಲಕ್ಕೆಯಿಲ್ಲವೆಂದು ದೇವನ ಬಳಿಗೆ ನೀ ದೂರಾಗಿ ಈ ವಸುಧೆಯೊಳು ಬದುಕುವರೆ 1 ಭೇದ ಜೀವಕೆ ಜೀವ ಎಂದಿ ಗಾದರು ಇಲ್ಲವೆಂದು ನುಡಿದು ಈ ದುರಾಚಾರದಲ್ಲಿ ನಡೆದು ಮಾದಿಗನಂತೀಗ ಮಾರ್ಮಲಿದು2 ಜಡ ಪರಮಾತ್ಮ ಜಡ ಜಡಕೆ ಜಡ ಜೀವಕೆ ಅಭೇದವೆಂದು ಕಡುಗರ್ವದಿಂದಲಿ ಉಚ್ಚರಿಸಿ ಮಡಿದು ನರಕಕ್ಕೆ ಉರುಳುವರೆ 3 ಅರಸಿನ ಬಳಿಗೆ ತೋಟಿಗ ಬಂದು ಅರಸೆ ನೀನೆ ನಾನೆಂದಡೆ ಉರವಣಿಸಿ ಕೊಲ್ಲಿಸಿ ಅವನ ಶೆರಿಯ ಹಾಕದೆ ಮನ್ನಿಸುವನೆ 4 ದಾಸನ ದಾಸನು ಎಂದು ಏಸು ಜನ್ಮಕೆ ಅಹುದೆಂದು ದ್ವೇಷವು ತೊರೆದು ನೆನಿಸಿದರೆ ಮೀಸಲಾಗಿಡುವ ವಿಜಯವಿಠ್ಠಲಾ 5
--------------
ವಿಜಯದಾಸ
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಂದೆ ಬಂದೆ ಸ್ವಾಮಿಯೆ ಬಂದೆ ಬಂದೆ ಪ. ಬಂದೆ ಬಂದೆ ಗೋವಿಂದ ಗೋವಳ ಬಾಂಧವ ಭಕ್ತವತ್ಸಲಇಂದಿರೇಶ ಶ್ರೀ ವೆಂಕಟ ನಿನ್ನ ಸಂದರುಶದಕೆ ಸಾಗಿ ನಾನಿಲ್ಲಿ ಅ.ಪ. ನಡೆದು ನಡೆಸುತ ನುಡಿದು ನುಡಿಸುತಅಡಿಗಡಿಗೆ ಕಾಪಾಡುತಒಡನೆ ಆಡುತ ಬಿಡದೆ ಕ್ಷಣವನುಸಡಗರದಿ ಕರೆತರಲು ನಾನಿಲ್ಲಿ 1 ಆಪ್ತ ಅನಿಮಿತ್ತ ವ್ಯಾಪ್ತ ಸರ್ವತ್ರಗುಪ್ತ ಗುಣಗಣಪೂರ್ಣನೆಪ್ರಾಪ್ತ ನೀನೆನಗಾಗಬೇಕೆಂದುವ್ಯಾಪ್ತಿ ನಿನ್ನದು ಹುಡುಕುತಲಿ ನಾ2 ಒಂದು ರೂಪದಿ ನಿಂದು ಎನ್ನಲ್ಲಿಚೆಂದದಿಂ ಕರೆತಂದೆ ಇಲ್ಲಿಒಂದರಿಯೆ ನಿನ್ನ ವಂದಿಸುವ ಬಗೆಬಂದೊದಗೊ ನೀನೆನ್ನ ವದನಕೆ 3 ಬಂದೆ ಬಂದೆ ನೀ ಬಂದಂತೆ ಕರ-ತಂದುದಕೆ ಫಲ ನೀನೆ ಬಲ್ಲೆಸಂದರುಶನ ನಿನಗೆ ನೀ ಮಾಳ್ಪಂದವನು ನೋಳ್ಪಾತುರದಿ ನಾ 4 ಏನು ಕೊಡಲಿಲ್ಲ ಏನು ಬೇಡಲಿಲ್ಲಏನು ಪಡೆಯಲೊ ಕರುಣಿಯೆನೀನು ಕೊಟ್ಟ ಸ್ವಾತಂತ್ರ್ಯದ ಫಲನಿನಗೆ ಅರ್ಪಿಸಬೇಕೆನುತ ಇಲ್ಲಿ 5 ರಕ್ಷಶಿಕ್ಷಕ ಮೋಕ್ಷದಾಯಕಸೂಕ್ಷ್ಮ ಘನ ಮಹಾವ್ಯಾಪಕಕುಕ್ಷಿಯೊಳು ಜಗದ್ಭರಿತ ಪೂರಿತಅಕ್ಷಯಫಲದಾಯಕ 6 ನಮೋ ನಮೋ ನಾಗಾರಿವಾಹನನಮೋ ನಮೋ ಸುರಸುಪ್ರಸನ್ನನೆನಮೋ ನಮೋ ಗೋಪಾಲವಿಠಲನಮಿಪ ಭಕ್ತರ ಸಲಹುವನೆಂದು 7
--------------
ಗೋಪಾಲದಾಸರು