ಒಟ್ಟು 18 ಕಡೆಗಳಲ್ಲಿ , 14 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುಚ್ಚುಮನವೆ ನಿನ್ನ ಹುಚ್ಚಾಟವನೆ ಕಂಡು ರೊಚ್ಚುಬರುತಿದೆ ಎನಗೆ ಎಚ್ಚರಿರೆಲೆಲೇ ಪ ಉಚ್ಚೆಕುಣಿಯಲಿ ಬಂದು ಭವದ ಮಾಯಾ ಜಗವ ನೆಚ್ಚಿ ಸಕಲ ಮರೆದು ಮುಂದಿನ ಎಚ್ಚರವೆ ಮರೆತೆಲ್ಲೋ ಪಾಪಿ ಅ.ಪ ಒಳಗೊಂದು ಹೊರಗೊಂದು ತಿಳಿಯುತಲಳಿಯುವಿ ಅಳಿದುಹೋಗುವ ಇಳೆಯ ಸಲೆ ಸುಖಕೊಲಿದು ಮಲದ ಭಾಂಡದಿ ಸಿಲುಕಿ ಅನುದಿನ ಮಲಿನಗುಣದಿಂ ತೊಳಲಿಬಳಲುತ ಗಳಿಸಿಕೊಂಡು ಬಂದ ಸಮಯ ಕಳೆದುಕೊಳ್ಳುವಿಯಲ್ಲೋ ಪಾಪಿ 1 ಹಿಂದೊಂದು ಮುಂದೊಂದು ವಂದಿಸಿ ನುಡಿಯುತ ಮಂದ ನೀನಾಗಿ ಹಂದಿಯು ಮಲ ಮೆದ್ದತೆರದಿ ಕುಂದಿಪೋಗುವ ಬಂಧುಬಳಗಕೆ ನಂದುನಂದೆಂಬ ವಿಷಯಲಂಪಟ ರಂಧ್ರೆಯಲ್ಲಿ ಬಿದ್ದು ಕೆಡುವಿ ಪಾಪಿ 2 ನುಡಿಯೊಂದು ನಡೆಯೊಂದು ಕಡುದೃಢ ನುಡಿಯಾಡಿ ಒಡಲಕಿಚ್ಚಿಗೆ ಬಲು ಮಿಡುಕುತಲಿ ಕೆಡುವ ತನುವಿನ ಮೋಹ ಬಿಡದೆ ಪೊಡವಿಗಧಿಕ ನಮ್ಮೊಡೆಯ ಶ್ರೀರಾಮ ನಡಿಯ ನಂಬದೆ ಮಡಿದುಪೋಗುವಿ ಕಡೆಗೆ ಹೆಡತಲೆಮೃತ್ಯುಗೆದೆಯಾಗಿ 3
--------------
ರಾಮದಾಸರು
ಶೇಷಾದ್ರಿತಟವಾಸ ಸುರೇಶ ಕಾಯೊ ನಿನ್ನದಾಸಾನುದಾಸ ನಾ ತಾರಿಸೊ ಪ.ಈ ಬೆಂದ ಭವಾಂಧಕಾರಿಂದಹಂದಿಂದೆ ನಾಮಂದಕಂದನು ನೊಂದೆನೊ ತಂದೆ ಹೊಂದಿಸುಗತಿ1ಎನ್ನೊಡೆಯ ಕೈವಿಡಿಯೊ ಅಮೃತ ನುಡಿಯೊ ಮೈದಡಹೊ ಮತ್ತಡಿಗಡಿಗೆಡರಂ ಬಡಿಯೊ ಮೃಡನುತ ಅಡಿಯಲ್ಲಿಡು 2ಶ್ರೀನಲ್ಲ ನೀನಲ್ಲದಾರಲ್ಲಾಶ್ರಯಿಲ್ಲಯ್ಯಬೆಲ್ಲವಿಲ್ಲನ ಗೆಲ್ವ ಪ್ರಸನ್ವೆಂಕಟೊಲ್ಲಭ ಜಯ 3
--------------
ಪ್ರಸನ್ನವೆಂಕಟದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು