ಒಟ್ಟು 38 ಕಡೆಗಳಲ್ಲಿ , 22 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಸುಖಕರಾ ಗುರುಬೋಧಸಾರಾ ಮರಣಾ ಜರಾ ದುರಿತಾದಿ ದೂರಾ ಪ ಜೀವಭಾವವಾ ಸಟೆಯಾಗಿ ಗೈವ ದೇವಭಾವನಾ ಬಗೆಸಿನಿಲಿಸುವಾ ಸಾವಿನಂಜಿಕೆ ದೂರಾಗಿ ಮಾಳ್ಪ ಜೀವಂತಮುಕುತಿ ಕರದೀಯುವಾ 1 ದೃಶ್ಯವೆಂದು ತೋರ್ಪ ವಿಶ್ವತ್ಯಾಗ ಮಾಡಿ ದೃಶ್ಯವಸ್ತುವಿಂದ ಬೇರೆನಿಸುವಾ ಶಾಶ್ವತಾದ ಆ ಪದ ತೋರಿ ಮನದ ಕಶ್ಮಲವನು ಕಳೆವ ಭವತಾರಕಾ 2 ಭೇದಭಾವವಾ ಛೇದಿಸುತ ಮನದಿ ಬೋಧನಾರಾಯಣನ ಕೃಪೆ ಪೊಂದಿದಾ ಬೋಧರೂಪ ಗುರುವು ಪೇಳಿರ್ದ ಬೋಧ ಸಾಧು ಶಂಕರಾರ್ಯ ತಾನೆನ್ನುವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಬಿಡೋ ಭ್ರಾಂತಿ ಜೀವಾ ಬಿಡೋ ಕಾಮ್ಯಸೇವಾ ಅಹಂತಾ ಮಮತ್ವ ಮಹಾಮೂಢಭಾವಾ ಪ ಜಗವನೆಲ್ಲ ಈಶ್ವರನೆ ಸೃಷ್ಟಿಸಿದ ಕೇಳೋ ಇದೋ ನಿನ್ನದೆಂಬುವದು ಏನಿಲ್ಲ ತಾಳೋ ಜಗವ ಸೃಷ್ಟಿಸಿದನಾತ ಪಾಲಿಸುವನಾತ ಇಗೋ ನಾನೆ ಪಾಲಿಸುವೆನೆನ್ನುವದು ವ್ಯರ್ಥ ಭಾರ 1 ನೀ ಧರಿಸಿರ್ದ ದೇಹವಿದ ನೀ ಸೃಷ್ಟಿಸಿದೆಯಾ ಇದೇ ರೀತಿ ಹೆರವರದು ಬಿಡು ನಿನ್ನ ಮಾಯಾ ಇದನು ಪಾಲಿಸುವನಾತನೀಶ್ವರನು ನೋಡಾ ಇದೇ ರೀತಿ ಪಾಲಿಸುವನೆಲ್ಲವನು ನೋಡಾ ಮಹಾ ವಿಶ್ವವೆಲ್ಲ ತಿಳೀ ಈಶಲೀಲಾ 2 ಜಗವ ನಾಶಗೊಳಿಸುವನು ಪ್ರಳಯದಲಿ ಈಶಾ ಮಗುಳೆ ಜಗ ಜೀವರನು ಸೃಷ್ಟಿಸುವ ತಾನೆ ಜಗದಿ ವರ್ಣವಾಶ್ರಮದ ಬಲುಕಾರ್ಯ ಪಾಶಾ ಬಗೆಯಲೀಗ ಪಶುವಿನೊಳು ತಿರುಗಿಸುವನೀಶ ಮಹಾಯೋಗಿ ಶಂಕರನ ಶರಣಾಗೋ ಜೀವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಭುವನದೊಳಿವನೆ ಶೂರ ಪ ಭವಬಂಧಗಳ ನಿನ್ನ | ಕುವರನೆ ಬಿಡಿಸುವ ಅ.ಪ ಮಕ್ಕಳ ಕೂಡಿಕೊಂಡು | ನಮ್ಮನೆಗಿವ-| ನೊಕ್ಕಲಿಕ್ಕುವನು ಬಂದು || ಪಕ್ಕನೆ ಓಡುವ | ಸಿಕ್ಕನು ಯೆಮಗಿವ 1 ಒರಗಿದ ಮಕ್ಕಳ | ಕರೆದು ಡಬ್ಬಿಸುವನು 2 ಹಿಂಡಿದ ಪಾಲ್ಮೊಸರು || ಚೆಂಡಾಟದೊಳು ನೆಲ-| ನುಂಡುಂಡು ಕೆಸರಾಯ್ತು 3 ನಿಲುತ ಪಾತ್ರವ ಕೊಂಡು | ಮೆಲುವ ನಾಟಕಧಾರಿ 4 ಬೆಳಗನ್ನು ಮೇಳವಿಸೆ || ಕಳೆದು ತರಿಸುವ ನಾವಿ | ನ್ನುಳಿ (ವು)ಪಾಯವ ಕಾಣೆ 5 ದೊರೆಯದಿದ್ದರೆ ಬೈವನು | ಮನೆಗೆ ಕಿಚ್ಚ-| ನ್ನಿರಿಸುವೆನೆನ್ನುವನು || ವೊರಳೊಳು ವಿಷ್ಠಿಸಿ | ಮರೆಯೊಳಡಗುವ6 ನಿಲದೀಗ ತರಿಸಲ್ಲ(ದೆ) || ಸುಲಿಗೆÉಗಾರಗೆ ತಕ್ಕ | ಬಲುಮೆಯೊಳ್ ಬುದ್ಧ್ದಿಯ-| ನೊಲಿದು ಪೇಳುತಲೆಮ್ಮ | ಕುಲವನುದ್ಧರಿಸವ್ವ 7 ಎಂದು ನಾನಾ ತೆರದಿ | ನಾರಿಯರು ಗೋ-| ವಿಂದನನತಿ ಮುದದಿ || ಗೋಪಿ ಪರಿ ಚಾಡಿ8 ತಕ್ಕ ಪದ್ಧತಿ ಧಾತ್ರಿಗೆ || ಬೆಕ್ಕಸಗೊಳದಿರಿ ಅಕ್ಕು ಸದಾನಂದ 9
--------------
ಸದಾನಂದರು
ರಾಮನಾಮದಿ ಪಾಮರರಿಗೆ ಪ್ರೇಮ ಪುಟ್ಟುವುದೆ ಪ. ಭೃತ್ಯ ನ್ಯಾಯವರಿಯದ ಕಾಮಿಗಿದರೊಳು ನೇಮ ಬಪ್ಪುದೆ ಅ.ಪ. ದಾಶರಥಿ ಎನಿಸಿ ಜಗದೊಳು ಶ್ರೀಶನವತರಿಸೆ ಕೌಶಿಕನ ಮಖ ಘಾಸಿಗೈಯ್ಯುವ ದೋಷಿಗಳ ತಾ ನಾಶಗೈಸಿದ 1 ಶಿಲೆಯ ಪೆಣ್ಗೈದು ಲಲನೆ ಸೀತೆಯ ಒಲುಮೆಯಿಂ ವರಿಸಿ ಕುಲವನಳಿದನ ಛಲವ ಭಂಗಿಸಿ ಲಲನೆ ಸಹಿತದಿ ನೆಲಸೆ ಪುರದಲಿ 2 ಅನುಜ ಸ ಹಿತ ವನಕೆ ಬರೆ ಖ್ಯಾತಿ ರಾವಣನಾ ತಳೋದರಿ ಪ್ರೀತಿಸಲು ವಿಘಾತಿಗೈಸಿದ 3 ಮಾಯಾಮೃಗ ಕಂಡು ಪ್ರಿಯ ನೀಡೆನೆ ಸಾಯಕವನೆಸೆಯೆ ಕಾಯ ಬಿಡುತಿರೆ ಹೇಯ ರಾವಣ ಪ್ರಿಯಳನುಯ್ಯೆ ನೋಯ್ದ ಮನದಲಿ 4 ಬೆಟ್ಟವನೆ ಕಂಡು ಕುಟ್ಟಿ ವಾಲಿಯ ಪಟ್ಟ ಕಪಿಗಿತ್ತು ಶ್ರೇಷ್ಠ ಹನುಮಗೆ ಕೊಟ್ಟು ಉಂಗುರ ಪಟ್ಟದರಸಿಗೆ ಮುಟ್ಟಿಸೆಂದ 5 ಕೇಳಿ ಶ್ರೀ ವಾರ್ತೆ ತಾಳೀ ಹರುಷವ ಬೀಳು ಕೊಂಡಲ್ಲಿಂ ತಾಳೆ ಕೋಪವ ಕೇಳಿ ವನಧಿ ಸೀಳು ಆಗಲು ಶಿಲೆಯ ಬಿಗಿದ 6 ದುಷ್ಟ ರಾವಣನ ಕುಟ್ಟಿ ಶಿರವನು ಪಟ್ಟದರಸಿ ಕೂಡಿ ಶ್ರೇಷ್ಠ ಭರತಗೆ ಕೊಟ್ಟು ದಶರ್Àನ ಪಟ್ಟವಾಳಿದ ದಿಟ್ಟಯೋಧ್ಯೆದಿ 7 ರಾಮ ರಾಮನೆಂಬಾ ಹನುಮಗೆ ಪ್ರೇಮದಿಂದೊಲಿದು ಧಾಮ ಅಜಪದ ನೇಮಿಸಿ ಮುಂದೆ ಸೋಮನೆನಿಸಿದ ಭಾನು ವಂಶಕೆ8 ಬೆಟ್ಟದೊಡೆಯನ ಇಷ್ಟು ಮಹಿಮೆಯ ಮುಟ್ಟಿಮನ ಭಜಿಸಿ ದಿಟ್ಟ ಗೋಪಾಲಕೃಷ್ಣವಿಠ್ಠಲ ಶ್ರೇಷ್ಠನೆನ್ನುವ ಶ್ರೇಷ್ಠಗಲ್ಲದೆ 9
--------------
ಅಂಬಾಬಾಯಿ
ರಾಮನಾಮವೆನ್ನು ಮನವೆ ನಿನ್ನ ಪಾಮರಪಾತಕನಾಶನವೆ ಬರಿನೇಮವ್ರತಗಳು ನಿಷ್ಫಲವೆ ಪರಂಧಾಮ ಭಜನೆ ಮೋಕ್ಷಪ್ರದವೆ ¥ಶೀಲತನವುನೀಬಿಡಬೇಡಾ ನಾನ್ ಶೀಲನೆಂದುನೀಹೇಳಬೇಡಾ ಶ್ರೀ ಲೋಲನಸ್ಮರಣವ ಮರಿಬೇಡಾ ಇಹ ಜಾಲಿಮನಸಿನಲಿ ತರಬೇಡಾ 1ಕಾಲದೇಶವನನುಸರಿಸಿ ನೀನು ಲೀಲೆಯಾಗಿ ಕ್ರಮದಲಿ ನಡಸಿ ಶ್ರೀಫಾಲಯನಸ್ತುತ ಘನತೆನಿಸೀ ಏವೇಳೆಯು ಶ್ರೀರಾಮನ ಜಪಿಸಿ 2ಕುಲಧನಯೌವನ ಬಲದಿಂದಾ ನಿಜ ತಿಳಿಯದೆಸುಮ್ಮನೆ ಮದಬಂದದಲಿಸಿಲುಕದೆ ಸುಜ್ಞಾನದಿಂದಾ ಗುರಿ ತಿಳಿದುಭಯಭೇದಸ್ಥಿತಿ ಚಂದಾ 3'ಮಲತುಲಸಿರಾಮನೆನ್ನುವದು ರಂಗಸ್ವಾ'ುದಾಸನಿಗೆ ಪ್ರಾಪ್ತವದುಸಮರಸ ಸದ್ಗುಣ ಲಭಿಸುವದು ಸರ್ವ ಶೇಷೈಕ್ಯವು ಒಂದಾಗುವದು 4
--------------
ಮಳಿಗೆ ರಂಗಸ್ವಾಮಿದಾಸರು
ಶ್ರೀ ಕೃಷ್ಣ ಸ್ತುತಿಗಳು ಅದೋ ಬರುವ ರಂಗ ಅದೋ ಬರುವ ಇದೋ ನಲಿವರಂಗ | ಇದೋ ನಗುವ ಪ ಇನಬಿಂಬವದನಾ | ಭ್ರಮರಕುಂತಲ ಘನ ಜನಮನರಂಜನ ಅದೋ ಬರುವ ಅ.ಪ ಶರನಿಧಿಮಂದಿರ ಭುವನಮನೋಹರ ಶರಣರಮಂದಾರ | ಅದೋ ಬರುವ ಮಾಧವ | ಅದೋ ಬರುವ 1 ಪರಿಮಳ ಹೂಹಾರ ಮೆರೆವ ಮಾಣಿಕಸರ ಪರಿಪರಿ ಮಣಿಹಾರ ಧರಿಸಿರುವ ಶರಣರಭೀಷ್ಟವ ಸಲಿಸುವೆನೆನ್ನುವ ಮುರಳಿಯನೂದುವ | ಅದೊ ಬರುವ 2 ಕುಣಿ ಕುಣಿದಾರೈವ ತರುಣಿ ರಾಧೆಯತವ ಮಣಿಯೆನಿಸುವ ದೇವ ಅದೋ ಬರುವ ವೇಣುವನೂದುವ ಜಾಣನ ಪಾದವ ಕಾಣುವ ಭಾಗ್ಯವ ನೆರೆ ಪಡೆವ 3 ಕಂಸಾರಿ ಇವನೆ ಭಕ್ತರ ಸಿರಿ ಇವನೆಲೆ ದುರುಳಾರಿ ವರನೃಹರಿ ಇವನೆಲೆ ಮಾಂಗಿರಿಶೃಂಗವಿಹಾರಿ ಇವನಹುದೆಮ್ಮಯ ಅಮಿತಸಿರಿ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಹರಿ ಸಂಕೀರ್ತನೆ ಪತಿತ ಪಾವನ ಗೋವಿಂದ ನಮ್ಮ ಪದುಮದಳಾಕ್ಷ ಸದಾನಂದ ಪ ಸತಿಪತಿ ನುತ ಸಾರ್ವಭೌಮ ಸು ವೃತಾ ಚರಣ ಘನ ರಾಜಿತ ಸುಂದರ ಅ.ಪ ಧೀರನಮೋ ಸುವಿಚಾರ ನಮೋ ಯದುವೀರ ನಮೋ ರಜದೂರ ನಮೊ ಮಾರನಮೋ ಗಂಭೀರ ನಮೊ ಭವಹಾರ ನಮೋ ದಧಿ ಚೋರ ನಮೊ 1 ಜನನ ಮರಣ ಜರ ರಹಿತ ನಮೋ ಪಾವನ ಪದ ಪಂಕೇರುಹ ನಯನ ನಮೋ ಮನ ವಚನಕೆ ಸಿಗದ ನಿಮಿಷ ಪತಿ ನಿನ್ನನೆ ಬೇಡುವೆ ಪೊರೆಯೆನುತ ಕರಮುಗಿದು 2 ಶೌರಿ ಶುಭ ನಾಮ ಭಕ್ತ ಜನ ಹಿತಕಾರಿ ಸುತ್ರಾಮ ಅನುಜ ನಿ ಸ್ಸೀಮ ಮಹಿಮ ಶಿರಿಧಾಮ ಅನಘ ನಮೊ 3 ಅನ್ಯನೆ ನಾ ನಿನ್ನಗೆ ದೇವ ಸಾಮಾನ್ಯನೆ ಅಭಿಮನ್ಯುನ ಮಾವಾ ಇನ್ನೆನೆನ್ನದೆ ನಿನ್ನಿಂ ಲಭಿಸಿದ ನುಣ್ಣುವ ಯನ್ನನು ಮನ್ನಿಸದಿರುವರೆ 4 ಹಿರಿಯರ ದಯವಿರುವುದು ಸರೆ ನೀ ಪೊರೆವಿ ಬಿಡದೆ ಯಂಬೋದು ಖರೆ ಸ್ವರಸ್ವರ ಘಸಿದಾಲ್ಪರಿದ ಮೇಲೆ ಸುಧೆ ಗರಿವರ ತೆರ ಚರಿಪುದು ಧರವೆ 5 ದಾಸರ ಪೊರೆಯಲು ದಾಶರಥೇ ಅಮಿತ ಮತೆ ಶ್ರೀಶಾನಿಮಿತ್ಯ ಬಂಧುಯೆನಿಸಿ ಉದಾಸಿಸೆ ಆಗಮ ರಾಶಿಗೆ ಶೋಭವೆ 6 ಘಾಸಿಗೊಳಿಸುವರೆ ಸೈಸೈಸೈ ನೀ ನೀಶನಾದದಕೆ ಫಲವೇನೈ ಪೋಷಕ ನೀನೆಂದಾಸಿಸಿದವರನು ನೀ ಸಲಹದೆ ಬರೆ ಸೋಸಿಲಿ ಮೆರೆವರೆ 7 ಧೃವನ ಪೊರೆದ ಬಲುವೇನಾಯ್ತೈ ಉದ್ಧವಗೆ ವಲಿದ ದಯ ಏಲ್ಹೊಯತೈ ಬವರದೊಳಗೆ ಪಾಂಡವರ ಕಾಯ್ದ ಮತಿ ಸವಿಯುತೆ ಪವನಪಸವಿದ ಸತತ ಸುಖ 8 ಘನ್ನ ಕರುಣಿ ನೀ ನಹುದೇನೊ ಆಪನ್ನ ರಾಪ್ತ ನೀ ನಿಜವೇನೋ ಸೊನ್ನೊಡಲಾಂಡಗ ನೀನಾದರೆ ಗತ ಮನ್ಯುನಾಗಿ ಜವ ನಿನ್ನನೆ ತೋರಿಸು 9 ತಂದಿನ ಪಾಲಿಸಿ ಮಗನನ್ನು ಬೇಕೆಂದು ಕೊಂದ ಕೃಷ್ಣನೆ ನೀನು ತಂದು ತೋರೊತವ ಸುಂದರ ಪದಯುಗ10 ಕಂದುಗೊರಳನುತ ಪೊರೆಯೆಂದು ಬಲು ವಂದಿಸಿದರು ತ್ವರ ನೀ ಬಂದು ಕಂದನ ಕರದ್ಯಾಕೆಂದು ಕೇಳ್ದದಕೆ ನೊಂದು ಬಿಡಿ ನುಡಿ ಗಳೆಂದೆನು ಕ್ಷಮಿಸೈ 11 ಬಲು ಮಂದಿನ ಸಲಹಿದಿ ನೀನು ಅವರೊಳಗೆ ಓರ್ವನಾನಲ್ಲೇನೊ ನೆಲೆಗಾಣದೆ ತವ ಜಲಜ ಪಾದ ಹಂಬಲಿಸುವರರ್ಥವ ಸಲಿಸದೆ ಬಿಡುವರೆ 12 ಬೇಡಿಕೊಂಬುವದೊಂದೆ ಬಲ್ಲೆ ಅದುಕೂಡಾ ತಿಳಿದು ನೋಡಲು ಸುಳ್ಳೆ ಬೇಡಿ ಬೇಡಿಸುವಿ ಮಾಡಿ ಮಾಡಿಸುವಿ ರೂಢಿಪತಿ ನೀನಾಡಿದ ನಾಡುವೆ 13 ನಾಗಶಯನ ನೀ ಬದುಕಿರಲು ಎನಗಾಗ ಬೇಕೆ ಕಲಬಾಧೆಗಳು ಸಾಗರಾಂಬರಪ ಸುತನಿಗೆ ಪುರ ಜನ ಬಾಗದೆ ಅಣಕಿಸಿಧಾಂಗಲ್ಲವೆ ಇದು 14 ಕರೆದರೆ ಬರುವೆನು ನಿನ್ನಡಿಗೆ ಧಿ ಕ್ಕರಿಸಲು ಮರುಗುವೆ ಮನದಾಗೆ ನಿರ್ವಿಣ್ಯನು ಪರತಂತ್ರನು ನಾನಿ ನ್ನೆರಳಲ್ಲವೆ ಮದ್ಗುರುವರ ವರದಾ 15 ಕಲ್ಲಿನ ರೂಪದಿ ಪೂಜಿಯನು ಗೊಳ್ಳುವ ಬಗೆ ನಾನೊಲ್ಲೆ ನಿನ್ನ ಶಿರಿ ನಲ್ಲೆ ಸಹಿತ ಬಂದು ನಿಲ್ಲೊ ಅರ್ಚಿಸುವೆ 16 ಕಣ್ಣಲಿ ತವದರ್ಶನ ಅಮೃತ ಭವ ತ್ರಾತಾ ಘನ ಕರುಣಿ ಬಾರೆನೆ ಬರುವೆನು ಎಂದೆನ್ನುವ ಬುಧ ನುಡಿ ನನ್ನಿಯೆನ್ನುವೆನು 17 ಭಿಡೆಯ ಬಾರದೆ ಬಲು ಘನ್ನಾ ನಾನುಡಿಯು ವಡ್ಡಿ ಬೇಡಿದರನ್ನ ಕೊಡಗೈಯವನಿಗೆ ಲೋಭವು ಎಲ್ಲಂದಡರಿತು ನುಡಿ ನುಡಿ ಕಡಲಜಳೊಡೆಯನೆ18 ನ್ಯಾಯಕೆ ಅಧಿಪ ನೀನೆ ಜೀಯಾ ಅನ್ಯಾಯಕೆ ಪೇಳುವರಾರೈಯ್ಯ ಮಾಯವೆಂಬೊ ಘನ ಘಾಯವುಎನ್ನನು ನೋಯಿಸುತಿದೆ ಜವಮಾಯಿ ಸುಭೀಷಿಜನೆ 19 ವರುಣಗೆ ವಾರಿಯು ನೀನಯ್ಯ ದಿನ ಕರನಿಗೆ ಮಿತ್ರನು ನೀನಯ್ಯ ಸುರಪಗೆ ಇಂದ್ರನು ಉರಗಕೆ ಶೇಷನು ಸರ್ವವು ನೀನೆಂದರಿತೆನು ಕರುಣಿಸು 20 ಹನುಮಗೆ ಪ್ರಾಣ ಮೂರೊಂದು ಆನನನಿಗೆ ವೇಧನು ನೀನಂದು ಮನಸಿಗೆ ನೀ ಮನ ಜೀವಕೆ ಜೀವನ ಎನುತ ಅರಿದು ನಮೊ ಎನ್ನುವೆ ಕರಮುಗಿದು 21 ಮೂಗಣ್ಣಗೆ ರುದ್ರನು ನೀನೆಧರೆ ಆಗಸ ಸಾಗರ ಧಾರಕನೆ ಶ್ರೀ ಗುರು ರಘುಪತಿ ರಾಗ ಪಾತ್ರ ಭವ ನೀಗದೆ ಬಿಡುವರೆ 22 ಪದುಮನಾಭ ನಿನ್ನನು ಕುರಿತು ನಾ ನೊದರುವ ನುಡಿಗಳು ಚಿತ್ರವತು ವಿಧಿಪತ್ರವನಾಂತು ನಿನ್ನ ಪಾದ ವದಗಿಸದಲೆ ಬರೆ ಪದವೆನಿಸಿದವೆ 23 ಸ್ತವನಕೆ ವಲಿಯದೆ ಇರೆ ನಮನ ಗೈಯುವೆ ಇಕೊ ನೋಡೆ ದಾಸ್ಯತನಾ ಅವನಿಪ ಸರ್ವಕೆ ವಲಿಯದೆ ಇರೆ ಬೈಯುವೆ ಬಡಿಯುವೆ ಸಿಕ್ಕರೆ ಸೆರೆ ಪಿಡಿಯುವೆ 24 ಚೋರನೆ ನೀ ನಡಗಿದೆಯಾಕೆ ಸ್ಮøತಿ ದೂರನೆ ಎನ್ನನು ಮರಿವದೇಕೆ ಆರು ನಿನಗೆ ವೈಯಾರವು ಈ ಪರಿ ಕಾರುಣ್ಯದಿ ಕಲಿಸಿದರೋ ಕರಿವರದಾ 25 ಮರೆದಿಯ ನೀ ಕನಿಕರ ಬಡುವ ಸ್ಥಿತಿ ನೀ ಜರದರೆ ನಮಗಿನ್ನೇನು ಗತಿ ಪರಿಪರಿ ವರಲು ವರಲಿ ದಯಮಾಡದೆ ಇರವದು ನಿನ್ನಗೆ ಮರಿಯಾದಿಯೆ ಹರಿ 26 ರೂಪ ತೋರಲೆನ್ನುವಿಯಾ ಆಹದೆ ಪೇಳಲೊ ಹೇ ವಿಗತಾಗಭಯ ಪಾಪಬಾರದೆ ಈ ಪರಿಯನ್ನನು ನೀ ಪಿಡಿಸೆ ಗತತಾಪ ಶ್ರೀಪ ಹರಿ 27 ಸುರತನು ಸಾಕದೆ ಬಿಟ್ಟವಗೆ ತನ್ನ ಸತಿಯಳ ಖತಿಯೊಳಗಿಟ್ಟವಗೆ ಕ್ಷಿತಿಯರು ಏನೆನ್ನುವರು ಮನದೊಳಗೆ ಪತಿ ಯೋಚಿಸಿ ಹಿತಗೈಯನ್ನೊಳು 28 ಶಿರಿಗೋವಿಂದ ವಿಠಲ ಪಾಹಿ ಗುರುವರ ರಘುಪತಿನುತ ಪದ ಪಾಹಿ ಬರೆ ಮಾತಲ್ಲವೊ ತ್ವರ ತವ ಪಾದ ಸಿರಿ ಸುರರಾಣೆ 29
--------------
ಅಸ್ಕಿಹಾಳ ಗೋವಿಂದ
ಸತ್ಯಧರ್ಮ ಸದ್ಗುರುವರ ರಕ್ಷಿಸು ಪ ಭೃತ್ಯ ನೀನಾಗೆಂದು ಕೃತ್ಯ ವಿಪರ್ಯಯ ವೆತ್ತಣಿಸದೆ ಕೃತಕೃತ್ಯನ ಮಾಡಿಂದು ಅ.ಪ ಸತ್ಯವರರ ವರ ಕುವರನೆ ನೀನತ್ಯುತ್ತಮ ಸುಖ ಚಿನ್ನ ಯತ್ಯಾಶ್ರಮ ಸದ್ಧರ್ಮಾಚರಣದಿ ನಿತ್ಯಾರ್ಜಿತ ರಾಮ ಭೃತ್ಯಜನಕೆ ಸದ್ಬುದ್ಧಿ ಬೋಧಿಸಿ ಕೃತಕೃತ್ಯರ ಮಾಡುತಲಿ ಸುನಾಮ ಯಥಾರ್ಥಪಡಿಸಿ ಕ್ಷಿತಿಗುತ್ತಮನೆಸಿದ 1 ಭದ್ರಾತೀರನೆ ಇತ್ತು ಸುಭದ್ರಗಳ್ ನಿದ್ರಾರಹಿತರಿಗೆ ಆದ್ರಾಂತಃಕರುಣನೆ ಸೌಹಾರ್ದದಿ ಭದ್ರಾರಮಣನಲಿ ಛಿದ್ರರಹಿತ ಶಿಲೆ ಮಧ್ಯದಿ ಪಡೆದು ಸುಭದ್ರಾಪತಿ ಸಖ ಮುದ್ರಾಧರನೆ 2 ಶ್ರೀ ನರಹರಿ ಪದ ನೀನನುದಿನದಲಿ ಧ್ಯಾನಮಾಡುತ ಬಾಹ್ಯ ಜ್ಞಾನವಿಲ್ಲದೆ ಅನುಮಾನ ವಿಪರ್ಯಯ ಹೀನಗೈಸಿ ಸಾಕ್ಷಿ ಮಾನದಿಂದ ಕೊಟ್ಯಾರ್ಭುದ ರವಿಪ್ರಭೆ ಕಾಣುತ ಪ್ರತಿಮುಖವೋಲ್ ಏನು ಇದಕೆ ಅನುಮಾನವಿಲ್ಲ ಹಂ ಮನಿಯವನೆನ್ನುವೆ ನೀ ಸರಿಲಿಂಗರೂಪಧರ3
--------------
ಪ್ರದ್ಯುಮ್ನತೀರ್ಥರು
ಸರಳಕವಿ ರಾಮಾರ್ಯ ಹರುಷದಿ ವಿರಚಿಸಿದ ವರವೆಂಕಟೇಶನ ಪರಮಲೀಲೆಯ ಚರಿತೆಯುನ್ನತ ಕೀರ್ತಿಯಾಂತಿಹುದು ನರರ ಭಕ್ತಿಯ ಪೆರ್ಚಿಸಲ್ಕಿದು ಕರದ ದಿವ್ಯಜ್ಯೋತಿಯಪ್ಪುದು ಬರೆದಕವಿಯಾಸೂರಿವಂಶದ ಶರಧಿಚಂದಿರನು 1 ಭರತಭಕ್ತಿ ಯೆನಿಪ್ಪ ಚರಿತೆಯ ಬರೆದು ತಾನೇ ಭರತನಾಗಿಹ ಪರಿಯ ತೋರುವ ಭಕ್ತಿಬೋಧಕ ಭಾವಭಂಗಿಯಲಿ ಸರಸ ಸರಳತೆ ಲಲಿತಪದಗಳ ಶರಧಿಯಪ್ಪುದು ಕಾವ್ಯಮಿದನಾ ದರದಿ ಮುದ್ರಣಗೊಳಿಸಿ ಹಂಚಿದ ಕವಿಯು ಧನ್ಯನಲೇ 2 ಕವಿ ವಿಶಿಷ್ಠಾದ್ವೈತತತ್ವೋ ದ್ಭವನು ಹರಿಹರ ಭೇದರಹಿತನು ನವರಸಾಲಂಕೃತಯುತ ಗೋಕರ್ಣ ಮಹಿಮೆಯನು ಶಿವನ ಸನ್ನುತಿಗೈದು ರಚಿಸುತೆ ಭುವಿಯ ರಕ್ಷಣೆಗೈವ ಶಿವಕೇ ಶವರ ನಾಮವನೇಕ ವೊಬ್ಬನೆ ದೈವತಾನೆಂಬ 3 ಭಕ್ತಿಕಾವ್ಯಂಗಳನು ರಚಿಸಿಹ ಭಕ್ತನೀತನ ವಹ್ನಿಪುರಕಾ ಸಕ್ತಿಯಾಂತೈತರ್ಪುದೆಂದೆವು ವೇಂಕಟೇಶ್ವರನ ಭಕ್ತಿಬೋಧಕ ಕೃತಿಗೆ ಮಂಗಳ ದುಕ್ತಿಯುತ್ಸವಕಾಗಿ ನಾವತಿ ಭಕ್ತಿ ಸುಸ್ವಾಗತವನೀವೆವು ಕೈಗಳಂ ಮುಗಿದು 4 ಕೃತಿಯ ರಚನೆಗೆ ಮೋಹಗೊಂಡೆವು ಕೃತಿಯನೋದಿಸಿ ಕೇಳಿ ನಲಿದೆವು ಕೃತಿಯ ಬರೆದಾ ಕವಿಯ ಭಕ್ತಿಗೆ ಮನವ ತೆತ್ತಿಹೆವು ಕೃತಿಯ ಕರ್ತಗೆ ಮಣಿದು ಮಹದುಪ ಕೃತಿಯ ಗೈದಿಹಿರೆಂಬುದಲ್ಲದೆ ಕೃತಿಯ ಬರೆದವಗಾವಭಾಗ್ಯವನಿತ್ತು ತಣಿಸುವೆವು5 ಪರಮಭಕ್ತನಿಗಿಂದು ವಂದಿಸಿ ನೆರೆದ ಪಂಡಿತ ಪೌರಸಭಿಕರ ನೇಮಗಳಪೊತ್ತು ಹರಿಯ ಪಾದಂಗಳಿಗೆ ವಂದಿಸಿ ವರಕವಿಗೆ 'ಕವಿರತ್ನ’ ನೆನ್ನುವ ಬಿರುದನೀವೆವು ಸರಳಕವಿವರನಿದನು ಕೈಗೊಳಲಿ 6 ಗಮಕಕೋಕಿಲನೆನಿಪ ಕೌಶಿಕ ನಮಲಕೃತಿವಾಚನವಗೈಯಲು ಅಮಿತಸಂತಸದಿಂದ ವಿವರಿಸುತಂತರಾರ್ಥಗಳ ಕ್ರಮದಿ ಪೇಳಲು ಸೂರ್ಯನಾರಣ ನಮಿತ ಹರ್ಷಾಂಬುಧಿಯೊಳಿಳಿಯುತೆ ರಮೆಯ ರಮಣನ ಪಾದಕೆರಗಿದ ಸರಳಕವಿರತ್ನ7 ಆ ಮಹಾಮುನಿ ಸೂತನಂದದಿ ರಾಮಚರಿತಾಮೃತವ ರಚಿಸುತೆ ಆ ಮಹೇಶ್ವರನಾತ್ಮಲಿಂಗವು ಭೂಮಿಗಿಳಿದಾಕಥೆಯ ಕಾವ್ಯವ ನೀ ಮಹಾಮತಿ ರಚಿಸಿ ಮುಕ್ತಿಯ ಮಾರ್ಗವಿಡಿದಿಹನು8 ಸರಳಕವಿರತ್ನನಾಸೂರಿ ರಾಮಾರ್ಯತಾಂ ವಿರಚಿಸಲಿ ಸದ್ಭಕ್ತಿ ಕಾವ್ಯಗಳನೋರಂತೆ ಸಿರಿಕಾಂತನೀತಂಗೆ ದೀರ್ಘಾಯುರಾರೋಗ್ಯಗಳ ಕುಡಲಿ ಕಡುಕೈಪೆಯೊಳು ನೆರೆ ಗಮಕ ಕಲೆಯ ಸತ್ಕೀರ್ತಿ ವಿಸ್ತರಗೊಳಲಿ ಸಿರಿಗನ್ನಡಂ ಚಿರಂ ಬಾಳ್ಗೆ ಸುಕ್ಷೇಮದಿಂ ವರವಹ್ನಿಪುರದರಸನೆಲ್ಲರಂ ರಕ್ಷಿಸಲಿ ಭದ್ರಂ ಶುಭಂ ಮಂಗಳಂ9
--------------
ಪರಿಶಿಷ್ಟಂ
ಹಸಿದು ನಾ ಬಳಲಲೇಕೋ ಈಸಮಯದಲ್ಲಿ ಬಿಸಿಯೂಟ ಮಾಡುವೆನು ಪ ಹಸನಾದ ಶೇಷಶಯನ ನಾಮದಡುಗೆಯು ವಸುಮತೀಧವ ನಾಮರಸಾಯನವಿರೆ ಅ.ಪ ಹರಿ ಹರಿ ಪರಮಾನ್ನವು ದುರಿತಾರಿ ಶೌರಿ ಕರಿಗಡುಬು ಗರುಗೊಬ್ಬಟ್ಟು ನರಸಿಂಹ ವಾಮನ ಅಂಬೊಡೆ ಹೂರಿಗೆಗಳು ಕರಿವರದ ರವೆಯುಂಡೆ ಸಜ್ಜಿಗೆಯಿರಲು 1 ದುಷ್ಟಮರ್ದನನೆನ್ನುವ ಇಷ್ಟವಾದ ಹುಳಿಸಾರು ಮೊಸರುಗಳು ವಾಸುದೇವ ಸಣ್ಣಕ್ಕಿಯನ್ನವು ಮಾಧವ ಬೆಣ್ಣೆಕಾಯ್ಸಿದ ತುಪ್ಪವಿದೆ 2 ನಾರಾಯಣನೆನ್ನುವ ಸಾರವಾದ ಹುಳಿಯನ್ನ ಮೊಸರನ್ನವು ಸಾರಸಾಕ್ಷ ಶ್ರೀಶ ಕ್ಷೀರ ಸಕ್ಕರೆಯಿದ್ದು ಮಾರಜನಕನೆಂಬ ಹಪ್ಳಳುಪ್ಪಿನಕಾಯಿರೆ3 ಪರಿಪರಿಯನ್ನಗಳು ಸರಿಯಾಗಿ ಭಕ್ಷ್ಯ ಕರಿದೆಡೆ ಮಾಡಿರಲು ಅರಿತು ಸವಿಯನೋಡಿ ಮರೆಯದೆ ಭುಂಜಿಸಿ ನಿರುತ ನಿಜಾನಂದ ಪಡೆಯದೆ ಬರಿದೆ 4 ಗೋಪಾಲನೆಂದೆಂಬೊ ಸೀಪಿನ ಎಳನೀರು ಸೀ ಪಾನಕವಿಹುವು ತಾಪತ್ರಯಹರ ಹೆಜ್ಜಾಜಿಕೇಶವ ಆಪದುದ್ಧಾರಕನೆಂಬಮೃತವುಣದೆ 5
--------------
ಶಾಮಶರ್ಮರು
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಇ. ಶ್ರೀಹರಿ ಲಕ್ಷ್ಮಿಯರುಅಂಗಳದೊಳಗಾಡೋ ರಂಗಪರಹೆಂಗಳ ಮನೆಗ್ಹೋಗ ಬ್ಯಾಡೋ ನೀಲಾಂಗ ಪದಧಿಘೃತಚೋರನೆನ್ನುವರು ನಿನ್ನಬೆದರಿಸಿ ಜರೆವರು ಪದುಮನೇತ್ರೆಯರುವಿಧವಿಧದಲಿ ಬಾಧಿಸುವರು ಕೊರಳಪದಕದ ಸರವನ್ನು ಸೆಳೆದುಕೊಳ್ಳುವರು 1ಕಿರುಕುಳ ....ನಿನ್ನ ಮನಕರಕರಿಸುವದೆನಗಿನಿತು ಕೇಳಣ್ಣಕರುಗಳ ಬಿಡ ಹೇಳಿ ಮುನ್ನಾ ಬಲುಹಗರಣಗೈಯ್ಯುವರೆನ್ನಾ ಸಂಪನ್ನಾ 2ನುಡಿಯಲಾಲಿಸುಮುದ್ದು ಕಂದಾ ನಿನ-ಗಿಡುವೆನಕ್ಷತೆ ವಸ್ತ್ರಾಭರಣ ಸುಗಂಧಾಕೊಡುವೆನುದಧಿಘೃತದಿಂದಾ ಕಾೈದಕಡಬು ಕಜ್ಜಾಯ ಅತಿರಸವಾ ಗೋವಿಂದಾ 3
--------------
ಗೋವಿಂದದಾಸ
ಎಲ್ಲವನು ಬಲ್ಲೆನೆನ್ನುವಿರಲ್ಲಸಲ್ಲದಗುಣಬಿಡಲಿಲ್ಲಪ.ಸೊಲ್ಲಿಗೆ ಶರಣರ ಕಥೆಗಳ ಪೇಳುತಅಲ್ಲದನುಡಿಗಳ ನುಡಿಯುವಿರಲ್ಲಅಪಕಾವಿಯನುಟ್ಟು ತಿರುಗುವಿರಲ್ಲಕಾಮವ ಬಿಡಲಿಲ್ಲನೇಮ - ನಿಷ್ಠೆಗಳ ಮಾಡವಿರಲ್ಲತಾಮಸ ಬಿಡಲಿಲ್ಲತಾವೊಂದರಿಯದೆ ಪರರಲಿ ತಿಳಿಯದೆಕೀವದ ಕುಳಿಯಲಿ ಬೀಳುವಿರಲ್ಲ 1ಗುರುಗಳ ಸೇವೆಯ ಮಾಡಿದಿರಲ್ಲಗುರುತಾಗಲೆ ಇಲ್ಲಪರಿಪರಿ ದೇಶವ ತಿರಿಗಿದಿರಲ್ಲಪೊರೆಯುವರಿನ್ನಿಲ್ಲಅರಿವೊಂದರಿಯದೆಆಗಮ ತಿಳಿಯದೆನರಕಕೂಪದಲಿ ಬೀಳುವಿರಲ್ಲ 2ಬ್ರಹ್ಮಜ್ಞಾನಿಗಳೆನಿಸುವಿರಲ್ಲಹಮ್ಮನು ಬಿಡಲಿಲ್ಲಸುಮ್ಮನೆ ಯಾಗವ ಮಾಡುವಿರಲ್ಲಹೆಮ್ಮೆಯ ಬಿಡಲಿಲ್ಲಗಮ್ಮನೆ ಪುರಂದರವಿಠಲನ ಪಾದಕೆಒಮ್ಮೆಯಾದರು ನೀವೆರಗಲೆ ಇಲ್ಲ 3
--------------
ಪುರಂದರದಾಸರು
ಬ್ಯಾಡಿರವ್ವ ಎನ್ನ ಕಂದನ್ನ ದೂರಬ್ಯಾಡಿರೆಗಾರುಮಾಡಿ ಚೋರನೆಂದು ಸಾರಿಪಿಡಿದು ತಂದು ದುರುಳನೆನ್ನ ಬ್ಯಾಡಿರೆ ಪ.ಹಸಿದೆ ಮಗುವೆ ಹಸಿದೆ ಚಿನ್ನಶಿಶುವೆ ಪಾಲ್ಗುಡಿಯ ಬಾರೆನ್ನೆಮಿಸುನಿಬಟ್ಟಲೊಳಿಟ್ಟ ಪಾಲಿನಬಿಸಿಗೆ ಬೊವ್ವೆಂದು ಬೆದರುವಮೊಸರ ಹರವಿಯೊಡೆದು ನಿಮ್ಮನೆಪೊಸಬೆಣ್ಣೆಗಳ ಮೆಲುವನೆಂದುಅಸಿಯರೊಂದುಗೂಡೆನ್ನ ಕೂಸಿಗೆಪುಸಿಯ ವಾಕನುಸುರಿ ದೂರ ಬ್ಯಾಡಿರೆ 1ಮುದ್ದು ತಾರೊ ರಂಗ ಎನಲುಎದ್ದು ತಪ್ಪಡಿಗಳನಿಡುತಬಿದ್ದು ಅಂಬೆಗಾಲನಿಕ್ಕಿಮುದ್ದು ನೀಡಲರಿಯನೆಕದ್ದು ನಿಮ್ಮನೆ ಕೆನೆವಾಲನುಗೆದ್ದು ನಿಮ್ಮ ಬಾಲರ ಬೆನ್ನಗುದ್ದಿ ಓಡಿ ಬರುವನೆಂತೆಬುದ್ಧಿ ಇಲ್ಲವೆ ನಿಮಗೆ ದೂರ ಬ್ಯಾಡಿರೆ 2ಎತ್ತಿಕೊಂಡು ರಂಬಿಸಿ ಬಾಯೊಳುತುತ್ತನಿಡಲು ಉಣ್ಣಲರಿಯಕತ್ತಲೆಯೊಳು ಹೆಂಗಳ ಪಿಡಿದುಚಿತ್ತ ಮೋಹಿಸಬಲ್ಲನೆಹೆತ್ತ ಮಕ್ಕಳಿಲ್ಲವೆ ನಿಮಗೆವ್ಯರ್ಥ ಜಾರನೆನ್ನುವಿರಮ್ಮಕರ್ತಪ್ರಸನ್ವೆಂಕಟರಾಯಗೆಭಕ್ತವತ್ಸಲನಲ್ಲೆಂದು ದೂರ ಬ್ಯಾಡಿರೆ 3
--------------
ಪ್ರಸನ್ನವೆಂಕಟದಾಸರು