ಒಟ್ಟು 228 ಕಡೆಗಳಲ್ಲಿ , 45 ದಾಸರು , 97 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ವಾರ್ತೆಯ ಹೇಳ ಮನ್ನಿಸಿನಮ್ಮ ಫುಲ್ಲನಾಭನ ಗುಣ ವರ್ಣಿಸಿ ದೂತೆ ಪ. ಗೆಜ್ಜೆ ಘಿಲ ಘಿಲಕೆಂದು ಬಂದಳು ದೂತೆಗುಜ್ಜಿ ದ್ರೌಪತಿಗೆರಗಿ ನಿಂತಳುನಮ್ಮ ಅರ್ಜುನಗೆ ಅತಿ ದಯವೆಂದಳು ನಿರ್ಜರೇಶನ ಕಂಡೆನೆಂದಳು1 ಕಳಕಳಿಯ ಸೂಸುತ ತನ್ನ ಥಳ ಥಳ ಮುಖಕಮಲ ಹೊಳೆವುತದೂತೆನಳಿನ ತೋಳಿನ ವಸ್ತ ಝಳ ಝಳಿಸುತಬಂದು ಕುಳಿತಳೆ ಮಾತಿನ ಚಪಲೆ 2 ನಡೆದು ಅಚ್ಯುತನಲ್ಲೆ ಹೋದೆಯಾ ಕೃಷ್ಣನ ಅಡಿಗೆರಗಿ ಮುಖ ನೋಡಿದೆಯನಯ ನುಡಿಯ ಮಾತುಗಳನೆ ಆಡಿದೆಯ ನಿಮ್ಮ ಒಡೆಯರ ಭಕುತಿ ಕೊಂಡಾಡಿದೆಯ ದೂತೆ 3 ಶಾಂತ ಮೂರುತಿ ನಿನ್ನ ನೋಡಿದನೇನಐವರಿಗೆ ಅಂತಃಕರುಣ ಭಾಳ ಮಾಡಿದನೇನಎನ್ನ ಅಂತರಂಗದ ಮಾತು ನುಡಿದೆಯೇನಲಕ್ಷ್ಮಿಕಾಂತನ ಗುಣ ಕೊಂಡಾಡಿದೆಯ ದೂತೆ4 ಎನ್ನ ದ್ರೌಪತಿ ಕಳುಹ್ಯಾಳೆಂದೇನೆ ಸ್ವಾಮಿನಿನ್ನ ಮಾತುಗಳ ಮನಕೆ ತಂದಾನೇನ ಕೃಷ್ಣ ಎನ್ನ ಪ್ರಾಣವು ಐವರದೆಂದನೇನಇನ್ನುದಯದ ಸುಗ್ಗಿ ಸುದ್ದಿ ತಂದೇನ ದೂತೆ 5 ಭಾವೆ ರುಕ್ಮಿಣಿಪಾದ ನೋಡಿದೆಯ ನೀನುಭಾವ ಭಕುತಿಯಲಿ ವಂದನೆ ಮಾಡಿದೆಯ ನಿಮ್ಮ ಮೋಹ ದ್ರೌಪತಿಗಿರಲಂದೆಯ ಮುಯ್ಯಾ ತಾಹೊ ವಿಸ್ತಾರವ ಕೊಂಡಾಡಿದೆಯ 6 ಪಾದ ಕಂಡೆಯಘೃತ ಹಾಲು ಸಕ್ಕರೆ ಸವಿದುಂಡೆಯ ವಸ್ತ್ರ ವೀಳ್ಯ ರಾಮೇಶನಿಂದ ಕೊಂಡೆಯನಿನ್ನ ಕಣ್ಣು ಹಬ್ಬವ ಮಾಡಿಕೊಂಡೇನ ದೂತೆ 7
--------------
ಗಲಗಲಿಅವ್ವನವರು
ಎಲ್ಲ್ಯಾಡಿ ಬಂದ್ಯೋ ನೀ ಹೇಳಯ್ಯನಿಲ್ಲು ನಿಲ್ಲು ಗೋಪಾಲಕೃಷ್ಣಯ್ಯಾ ಪ ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿಹೊಸಪರಿ ಸುದ್ದಿಯು ಹುಟ್ಟಿದೆಪುಸಿಯಲ್ಲ ಈ ಮಾತು ಮುಟ್ಟಿದೆ ನಿನ್ನ ನಸುನಗೆ ಕೀರ್ತಿ ಹೆಚ್ಚಿದೆ1 ಬೆರಳ ಉಂಗುರವೆಲ್ಲಿ ಹೋಗಿದೆ ನಿನ್ನಕೊರಳ ಪದಕವೆಲ್ಲಿ ನೀಗಿದೆಸರಕೆಲ್ಲ ಅವಳಲ್ಲಿ ಸಾಗಿದೆ ಆತರುಣಿ ಮಹಿಮೆ ಹೀಂಗಾಗಿದೆ 2 ಕಳ್ಳತನವ ಹೀಗೆ ಮಾಡಿದೆ ನಿನ್ನಸುಳ್ಳು ಕಡೆಗೆ ನಾ ನೋಡಿದೆಎಲ್ಲರಿಗೂ ಠಕ್ಕು ಮಾಡಿದೆಚೆಲುವ ರಂಗವಿಠಲ ನಗೆಗೀಡಾದೆ 3
--------------
ಶ್ರೀಪಾದರಾಜರು
ಏನ ನೋಡಿದೆ ದೇವಿ ಏನ ನೋಡಿದೆ | ಹೀನ ಜನರು ಭಜಕರ ಮಾನಹಾನಿ ಮಾಡುವದನ ಪ ಸಿಂಧು ಎಂದು ನಂಬಿ ಇದ್ದೆ 1 ಖಳರ ನಾಲಿಗೆಯನ್ನು ಮತ್ತೆ | ಸೆಳೆದು ಸೀಳಿ ಬಿಸುಟುತಿರಲು |ಉಳಿವುದಿಲ್ಲ ಮತವು ಎಂದು | ತಿಳಿಯವಲ್ಲದೇನೆ ನಿನಗೆ 2 ಪಾದ ಇಂದು ತೋರು ಮಹಿಮೆಗಳನು 3
--------------
ಭಾವತರಕರು
ಏನು ಇವನದು ಗುಮಾನ ರಾಮಾ |ನೀನೆ ನೋಡಿದೆಲ್ಲ ? ಉಳಿದಿತೇ ಮಾನಾ ? ಪ ದಶಕಂಠನಿಂದ ಬಲ್ಲಿದನೇ ?ಪಶುಪತಿ ಇವಗೇನು ವರವ ಕೊಟ್ಟಿಹನೇ ? 1 ಯಾತಕ ಅಂಜುವಿ ನೀನು ಮಹಾ |ಪಾತಕ ಹತ್ತದ ಕೊಂದರೆ ಏನೋ 2 ಗುರುಭವತಾರಕನ ತಂದೆ ನೀ |ವರವ ಕೊಟ್ಟು ಮಾತು ಅರಿತುಕೋ ಇಂದೇ 3
--------------
ಭಾವತರಕರು
ಏನು ಕರುಣವೊ ಸ್ವಾಮಿ | ಧೇನುಕ್ಹನನಾ ಪ ಮಾನ ನಿಧಿ ತೈಜಸನೆ | ಕಾಣಿಸಿದೆ ಪುಷ್ಕರವಾಅ.ಪ. ಮಾಧವ | ತ್ರಿವೇಣಿಯನೆ ಮೀಯುತ್ತಅಜ ಜನಕ ಶ್ರೀವ್ಯಾಸ | ಕಾಶಿ ನೋಡಿದೆವೋ 1 ವ್ರಜ ಸಾರಿ | ದೆಹಲಿ ಪುರವನು ಸೇರಿಭಯ ರಹಿತ ಕುರುಕ್ಷೇತ್ರ | ಸೇರಿ ಚಿಂತಿಸದೇ 2 ರೊಕ್ಕ ರೂಪನು ಹರಿಯ | ಅಕ್ಕರವ ಕಾಣದಲೆಪುಷ್ಕರ್ವೊರ್ಜಿತ ಮನದಿ | ಚಕ್ರಿಧ್ಯಾನದಿ ಮಲಗಿರೇ |ಚೊಕ್ಕ ತೈಜಸನನ್ನ | ಚಿಕ್ಕ ಲಿಂಗವು ಸ್ತಂಭಪುಷ್ಕರದಿ ಪೂಜಿಸುತ | ಸ್ನಾನ ಸೂಚಿಸಿದೇ 3 ಕಾಳಗ ಗೈದು | ವೀರ ಸ್ವರ್ಗವ ಸೇರ್ದೆಸ್ಮಾರಕಗಳಂ ತೋರ್ದೆ | ಶ್ರೀರಮಾಪತಿಯೇ 4 ಸೂರ್ಯ ಕುಂಡದಿ ಪಿತರ | ಕಾರ್ಯಗಳ ನಿರ್ವಹಿಸಿಆರ್ಯರುಕ್ತಿಯಗೊಂಡು | ಕಾರ್ಯ ಮುಂಬರಿಸೇ |ಪ್ರೇರ್ಯ ಪ್ರೇರಕ ಗುರು | ಗೋವಿಂದ ವಿಠ್ಠಲನ ವೀರ್ಯಗಳ ಸ್ತುತಿಸಿ ಮನ | ಸ್ಥೈರ್ಯ ಸಾಧಿಸಿದೇ 5
--------------
ಗುರುಗೋವಿಂದವಿಠಲರು
ಏನು ಮಾಡಿದೆ ಮೂಢಮನುಜಾಮಾನವ ಜನುಮದಿ ಬಂದೀ ಜಗದೀ ಪ ದೇಶದ ಸೇವೆಗೆ ತನು ನೀಡಿದೆಯಾಭಾಷೆಯ ಏಳ್ಗೆಗೆ ಮನ ಮಾಡಿದೆಯಾಕಾಸಿಗಾಗಿ ವಂಚಿಸಿ ನಿನ್ನೊಡಲಿನಪೋಷಣೆಗಾಗಿ ದುಡಿದೆಯಲ್ಲದೆ 1 ಆರ್ತರ ದುಃಖವನೀಡಾಡಿದೆಯಾಸ್ವಾರ್ಥದ ಹಂಬಲ ಬಿಟ್ಟು ನಡೆದೆಯಾಪೂರ್ತಿಯಾಗಿ ಜನಹಿತ ನೋಡಿದೆಯಾಧೂರ್ತತನವ ಬರಿದೆ ತೋರಿದೆಯಲ್ಲದೆ 2 ಮದಮತ್ಸರಗಳ ನೆಲಕೆ ಬಡೆದೆಯಾಹೃದಯ ನಿರ್ಮಲಗೊಳಿಸಿ ನುಡಿದೆಯಾಮುದದಿ ಗದುಗಿನ ವೀರನಾರಾಯಣನಪದವನೊಮ್ಮೆಯಾದರೂ ಸ್ಮರಿಸಿದೆಯಾ 3
--------------
ವೀರನಾರಾಯಣ
ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ಕಣ್ಣಿಲಿ ನೋಡಿದೆನೆ ಕಾಮಿನಿಮಣಿ ಪ ಕಣ್ಣಿಲಿ ನೋಡಿದೆ ಘನ್ನ ಪುಸ್ತಕ ನವವರ್ಣಭಾಷಿತ ಹರಿವನ್ನಿತೆ ಸೌಭಾಗ್ಯ ಅ.ಪ. ಹೇಮ ಸರಿಗಿ ಕಠ್ಠಾಣಿಯ 1 ಅಕ್ಷರವೆಂಬುವ ನಕ್ಷತ್ರಮಾಲೆಯುವಕ್ಷದೊಳರ್ಥಿಲಿ ಅಂಬುಜಾಕ್ಷಿಯೇ ಲಕ್ಷ್ಮೀ 2 ವಿಷಯನಳಿದು ಕೃಷ್ಣನೊಶಳಾಗುತ ಲಕ್ಷ್ಮೀವಿಭಸಾರ್ಚನ ಮುಖ ಬಿಸುಜಾಕ್ಷಿ ತೋರ್ವಳು 3 ಗೋಪಿ ಶಿಶುವ ಪೂಜಿಪಳು 4 ಶ್ರೀಶನ ಗುಣಗಳ ಭಾಷಿಸಿ ವದನದಿಪೋಷಜನಕೆ ಇಂದಿರೇಶನ ತೋರ್ಪಳು 5
--------------
ಇಂದಿರೇಶರು
ಕಾಲನೇಮಿ ಕಾಡುತಿರುವನೊ | ಕೇಳೊ ಶೌರಿಕಾಲನೇಮಿ ಕಾಡುತಿರುವನೊ ಪ ಕಾಲನೇಮಿ ಕಾಡುತಿಹನು | ಶೀಲಗೆಡಿಸಿ ಮನದ ಚರ್ಯತಾಳಲಾರೆ ಅವನ ಬಾಧೆ | ಕೊಲ್ಲು ಬೇಗ ಅವನ ಹರಿಯೇ ಅ.ಪ. ಸ್ನಾನಗೈದು ನಿನ್ನ ಪೂಜೆಯ | ಧ್ಯಾನವು ಆವಾಹನಾದಿಯಏನು ನೋಡಿದೆ ತ್ವರ್ಯ ಬರುವ | ಧೀನಪಾಲ ಕಾಯೊ - ನೀನೆ 1 ದೈತ್ಯ ಪರಿವಾರದೊಡನೆಯ |ಕೃತ್ಯ ಮನದಿ ಚರಿಸಿ ಪೋಪನುದೈತ್ಯ ಹರನೆ ಹಯವದನ | ಸತ್ಯ ಮಾಡೊ ನಿನ್ನ ವಚನ 2 ಮುರುಳಿ ಧರನೆ ಮಾನಸಾಂಡದ | ಧೊರೆಯೆ ನೀನು ದೂರ ನೋಳ್ಪುದೆಗುರು ಗೋವಿಂದ ವಿಠಲ ನಿನ್ನ | ಚರಣ ದಡಿಗೆ ಸೇರಿಸೆನ್ನ 3
--------------
ಗುರುಗೋವಿಂದವಿಠಲರು
ಕೃಷ್ಣನ ನೋಡಿ ಸಾಷ್ಟಾಂಗವ ಮಾಡಿದೆಕಷ್ಟವ ಪರಿಹರಿಸೀಷ್ಟವನೀವನ ಅ.ಪ ಶಿಷ್ಯನ ನೋಡಿದೆ - ವರ ನಿರ್ದುಷ್ಟನ ನೋಡಿದೆಹೃಷ್ಟ ಪುಷ್ಟ ಸಂತುಷ್ಟನ ಶ್ರೇಷ್ಠನ ಶಿಷ್ಟರ ಕಷ್ಟ ನಿವಿಷ್ಟನ - ದೇವನ 1 ಭವ ಭಂಗನ ನೋಡಿದೆ 2 ದೇವನ ನೋಡಿದೆ ಮುಕುತಿಯೀವನ ನೋಡಿದೆಗೋವ ಕಾವ ಭೂದೇವ ವಂದಿತ ಬಲ-ದೇವಾನುಜ ಹಯಗ್ರೀವನ ನೋಡಿದೆ 3 ಧೀರನ ನೋಡಿದೆ- ಜಗದ ಉದ್ಧಾರನ ನೋಡಿದೆವೀರ ಶೂರ ಪರಾತ್ಪರ ತಾನ-ಕ್ರೂರ ವರದ ಸಿರಿಧಾರನ ನೋಡಿದೆ 4 ಶ್ಯಾಮನ ನೋಡಿದೆ - ಬಲು ನಿಸ್ಸೀಮನ ನೋಡಿದೆವಾಮನ ರಾಮನ ಕಾಮನ ಅಯ್ಯನಸಾಮನ ಸೀಮನ ಸೋಮನ ನೋಡಿದೆ 5 ಕಾಲ ವನಮಾಲನ ನೋಡಿದೆ 6 ಅಗಣಿತ ಪ್ರಾಣರ ಪ್ರಾಣನವೇಣುಗೋಪಾಲ ವಿಠ್ಠಲ ಕಲ್ಯಾಣನ 7
--------------
ವೇಣುಗೋಪಾಲದಾಸರು
ಘನ ಗುರು ನೀನೆನೋ ಎನಗೆ ಸಾಕ್ಷಾತವೋ ಮನಕಾದನಕೂಲವೋ ಧ್ರುವ ಕಣ್ಣಿಲೆ ಕಂಡೆವೋ ಚನ್ನಾಗ್ಹಿಡಿದೆವೋ ಇನ್ನೆಲ್ಲಿಗ್ಹೋದೆಲವೋ ಮುನ್ನಿನ ಪುಣ್ಯವೋ ನಿನ್ನ ನೋಡಿದೆವೋ ಧನ್ಯ ಧನ್ಯವಾದೆವೋ 1 ಸಾಧಿಸಿ ಬಿಡೆವೋ ಭೇದನ ಮಾಡೆವೋ ಸದಮಲ ಸುಖಗೂಡುವೆವೋ ಸಾಧನ ಮಾಡುವೆವೋ ಭೇದಿಸಿ ನೋಡುವೆವೋ ಸದೋದಿತ ಬೆರದಾಡುವೆವೋ 2 ಗುಹ್ಯ ಗುರುತವೋ ಧ್ಯಾನಿಸುವೆವೋ ದಂiÀiಮಾಡಬೇಕೆಲವೋ ಇಹಪರ ನೀನೆವೋಮಹಿಪತಿ ನಿಜವೋ ತಾಯಿತಂದೆ ನೀನೆವೋ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಯೇಷ್ಠಾಭಿಷೇಕ ಗೀತೆ ನೋಡಿದೆ ಜ್ಯೇಷ್ಠಾಭಿಷೇಕದುತ್ಸವವ ಸೃಷ್ಟಿಯೊಳಾಶ್ಚರ್ಯವಾ ಪ. [ಒಪ್ಪುವ] ಮಿಥುನಮಾಸದ ಶುಕ್ಲಪಕ್ಷ ಚತುರ್ದಶಿಯಲ್ಲಿ ವಿಪ್ರರು ಕೂಡಿ ಸಹ್ಯೋದ್ಭವೆಯನ್ನು ತರುವೆವೆಂದೆನುತಲೆ ವಿಪ್ರರು ಪೋದ ವಿಚಿತ್ರ[ವ] ನೋಡಿದೆ 1 ಅಂದು ಗಜೇಂದ್ರನ ತಂದು ಸಿಂಗಾರ ಮಾಡಿ ಕುಂದಣದ ಛತ್ರಿ ಚಾಮರ ಬೀಸುತ್ತ ವಿಪ್ರರು ಬರುವುದ 2 ವೇದಘೋಷಗಳಿಂದ ವಿಪ್ರರು ಕೊಡಗಳ ವಿ ನೋದದಿಂದಲೆ ಪೊತ್ತು ತಾ[ಳ] ತಮ್ಮಟೆ ಭೇರಿ ನಾನಾ ವಾದ್ಯಂಗಳ ಮುಂದೆ ರಜತದಕೊಡ ಬರುವ ವೈಭೋಗವ 3 ಕರಿ ಕೊಡವನ್ನು ಇಳಿಸಲು ಅಸಮಾನ [2ನಿ2]ರಿಗಳ ಬಿಚ್ಚಿ ಹೊಸಬಟ್ಟೆಗಳ ಹಾಸಿ ಕುಶಲದಿಂದಲೆ ಹೊಲೆದು ಪೊಸದಾಗಿ ಕಟ್ಟುವತಿಶಯ[ವ] 4 ಗರ್ಭಗೃಹವು ಗಾಯಿತ್ರಿ ಮಂಟಪವನ್ನು ಶುಭ್ರವಾಗಿಯೆ ತೊಳೆದು ಘಮಘಮಿಸುವ ದಿವ್ಯ ಪರಿಮಳ ವು ಬರುವಂಥ ಗಂಧÀವ ತಳಿದರು ಅಂದು ಆಲಯಕ್ಕೆಲ್ಲ 5 ಭಕ್ತರಿಗೆ ತೊಟ್ಟಕವಚವ ಕಳೆದು ಅಭಯ ಹಸ್ತ ಪಾದವ ನಿತ್ತು ಕಸ್ತೂರಿ ಕಮ್ಮೆಣ್ಣೆ ಒತ್ತಿ ಸಂಭ್ರಮದಿಂದ ಮಿತ್ರಸಹಿತ ನಿಂದ ಭಕ್ತವತ್ಸಲ ರಂಗ 6 ಛಂದದಿ ಇಕ್ಷುರಸವು ಚೂತ ಕದಲಿ ರಸಂಗಳು ದಧಿ ತಿಂತ್ರಿಣಿ ನಿಂಬೆರಸ ಕ್ಷೀರ ಘೃತಗಳಿಂದ ಆ ನಂದದಿ ಯೆರೆದರು ಇಂದಿರೆರಮಣಗೆ 7 ಕೇಸರಿ ಪುನಗಿನ ತೈಲವನೆ ತೆಗೆದು ವಾಸುಕಿಶಯನಗೆ ಲೇಪವನು ಮಾಡಿ ಸ ಹಸ್ರಕೊಡದ ಅಭಿಷೇಕವ ಮಾಡಿದರು 8 ಪಟ್ಟುಪೀತಾಂಬರವನುಟ್ಟು ಶ್ರೀರಂಗನು ಕಳೆದ ಕವಚ ತೊಟ್ಟು ಹತ್ತುಸಾವಿರಸೇರಿನ ಅಕ್ಕಿ ಅನ್ನವ ನಿಟ್ಟು ವಿಪ್ರರು ಸುರಿದರು ವಿಸ್ತಾರವಾಗಿಯೆ9 ದಧಿ ಕದಳಿ ಫಲದಿಂದ ನೈ [ವೃಂದಕ್ಕೆ] ಕರೆಕರೆದು ಕೊಡುವ ಪರಿಯ ನಾ 10 ರಂಗನಾಯಕಿ ಪಟ್ಟದರಸಿ [ವೆರಸಿ]ನರಹರಿ ಚಕ್ರಮೂರುತಿಗೆ ಆಗ ಕಲ್ಪೋಕ್ತದಿಂದಭಿಷೇಕವ ಮಾಡೆ ಕರ್ಪೂರ ತೈಲವ [ಲೇ ಸಾಗಿ]ಹಚ್ಚಿ ಮಲಗಿದ ವೆಂಕಟರಂಗ[ನ] 11
--------------
ಯದುಗಿರಿಯಮ್ಮ
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತಪ್ಪುವುದೇ ಬ್ರಹ್ಮಕೆ ಗುರಿಯು ನೀನುತಪ್ಪಿದರು ತಾನು ತಪ್ಪದು ಅರಿಯೋ ನೀನು ಪ ಕರವ ಭೂಮಿಗೆ ಬಡಿಯಲು ಪೆಟ್ಟಹೊರಗನೆ ಮಾಡುವುದು ಆವ ಪರಿಪರಿಪೂರ್ಣ ಬ್ರಹ್ಮ ತುಂಬಿರಲು ನೀನುಪರವೆಂದು ಕಾಣೆ ಸಂಶಯವೆ ನಿಜವಿರಲು 1 ಗುಡ್ಡಕೆ ಗುರಿಯ ನೋಡಿದೆ ಅದುಅಡ್ಡಬಿಟ್ಟು ಬೇರೆ ನಿಲ್ಲುವುದೆ ನೋಡೆಖಡ್ಡಿಕೊಳ್ಳದು ಬ್ರಹ್ಮವಾಡೆ ನಿನ್ನದೊಡ್ಡ ಬ್ರಹ್ಮವೆನಲು ಸಂಶಯ ನೋಡೆ 2 ಆಕಾಶ ನೋಡುವುದೇ ತಾನು ಆಆಕಾಶ ನೋಡಲು ನೂಕು ನುಗ್ಗೇನುಏಕ ಚಿದಾನಂದ ನೀನು ಜಗದೇಕ ಬ್ರಹ್ಮವೆಂದು ನಿನ್ನ ನೀನೇ ಕಾಣ 3
--------------
ಚಿದಾನಂದ ಅವಧೂತರು
ತಿರುಪತಿ ವೆಂಕಟೇಶ ಕಂಡೆನೋ ನಿನ್ನ ವೆಂಕಟನೇ ಸ್ವಪ್ನೆಪುಂಡರೀಕಾಕ್ಷ ಸಂಪೂರ್ಣ ಸದ್ಗುಣನೇ ಪ ಗಿರಿಯ ಮೇಲ್ಹತ್ತಿ ಬಂದಿಹೆನು ನಿನ್ನಶರಣರೊಳಗೆ ಬಂದು ನುತಿಯ ಮಾಡಿಹೆನುಪರದೇಶ ಜನರ ನೋಡಿದೆನು ಅವರ್ಹೊರಗೆ ಪೋಗಲು ನಾನ್ಹೊರಗೆ ಬಂದಿಹೆನು1 ಮತ್ತು ನಾ ಒಳಗೆ ಬಂದಿಹೆನು ತೆರದುತ್ತಮ ದ್ವಾರಗಳನ್ನೇ ನೋಡಿದೆನುಚಿತ್ರ ವಾಲಗರ ಕೇಳಿದೆನು ಪೋಗ-ಲುಕ್ತಿ ಪೇಳುತಲೆ ಸನ್ನಿಧಿಲೆ ಬಂದಿಹೆನು 2 ಕಮಲ ನೋಡುತಲಿಇಂದಿರೇಶನೆ ನಯನದಲಿ ಪೊಕ್ಕೆ-ನಿಂದು ಸಂತೋಷ ನಿರ್ಭರ ಶರಧಿಯಲಿ 3
--------------
ಇಂದಿರೇಶರು