ಒಟ್ಟು 53 ಕಡೆಗಳಲ್ಲಿ , 33 ದಾಸರು , 52 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣ ದ್ವೈ ಪಾಯನ ಕೃಪಣವತ್ಸಲ ಪರ ಮೇಷ್ಠಿ ಜನಕನ ತೋರೊ ಪ ಅನಿಮಿಷ ಕುಲಗುರು ಆನಂದತೀರ್ಥ ಸ ನ್ಮುನಿಮತ ವಿಮಲಾಂಬುಜಾ ಅ.ಪ. ದಿನಕರ ದಯದಿ ನೋಡೆನ್ನನು ಬಾದರಾ ಯಣ ನಾಮಧೇಯರ ತನಯ ಸಂಯಮಿ ವರ 1 ಭೀಮ ತರಂಗಿಣಿ ಬದಿಗನೆನಿಸಿ ಸೀತಾ ಕರ್ಮ ಗುಣಕೀರ್ತನಗೈವ ನಿರ್ಮಲಾತ್ಮಕನ ಸತ್ಪ್ರೇಮದಿ ಸಲಹುವ ಸುಜನ ಶಿರೋಮಣಿ 2 ವಿಗತದೇಹಾಭಿಮಾನಿಯೆ ನಿಮ್ಮೊಡನೆ ನಿತ್ಯ ಹಗೆಗೊಂಬ ಪಾಪಿಗಳ ವಿಗಡಕರ್ಮಗಳೆಲ್ಲ ಮರೆದು ವಿಶ್ವವ್ಯಾಪಿ ಜಗನ್ನಾಥ ವಿಠಲ ಸ್ವತಂತ್ರ ಕರ್ತಯೆಂಬಾ 3
--------------
ಜಗನ್ನಾಥದಾಸರು
ಜುೀಂದ್ರಾಜುೀಂದ್ರಾಸುಜನ ಭಜಕಮನ ಚಕೋರಚಂದ್ರಾ ಪಶೈವಾದ್ವೈತದಪ್ಪಯ್ಯ ದೀಕ್ಷಿತರ ಸದ್ದು ಅಡಗಿಸಿದ'ದ್ಯಾ - ಸಮುದ್ರು 1ಎಮ್ಮೆ ಬಸವನ ಹೆಮ್ಮೆ ಮುರಿದುಆ ಕುಂಭೇಶ್ವರನನು ಒಲಿಸಿದ ಧೀರಾ 2ವ್ಯಾಸ ಮುನಿಕುವರ 'ಷ್ಣುತೀರ್ಥ ನೀಕೃಷ್ರ್ಣಾರ್ಪಣವೆಂದರು ಶ್ರೀಮಠಕೆ 3ರಾಶಿ ರಾಶಿ ಗ್ರಂಥಗಳ 'ರಚಿಸಿದದೇಶಕಾರ್ಯ 'ದ್ವಾಂಸರ ಪ್ರೀಯಾ 4ಮೂಲ ವೇಣುಗೋಪಾಲಕೃಷ್ಣ ನಿನ್ನಮೂಲರಾಮನ ಸೇವೆಗೆ ಕಳಿಸಿದ 5ಸರ್ವಕಲೆಗಳಲಿ ಪರಿಪೂರ್ಣನು ನೀ ಸರ್ವಶಾಸ್ತ್ರ ಸಂಪನ್ನ ಪ್ರಸನ್ನ 6ಶೈವಾದ್ವೈತರ ಗೆದ್ದು ಓಡಿಸಿಕಾವೇರಿತಟ ಪಾವನ ಮಾಡಿದಿ 7ಮಧ್ವ-ಮತಾಬ್ಧಿಗೆ ಪೂರ್ಣ ಸುಚಂದ್ರಾವಾದಿತಿ'ುರಮಾರ್ತಂಡ ಪ್ರಚಂಡಾ 8ತಾಪತ್ರಯ ಪರಿಹರಿಸಿ ಕೈಪಿಡಿಯೋಭೂಪತಿ'ಠ್ಠಲನ ಭಕ್ತಿವರ್ಯಾ 9ಶ್ರೀ ರಾಘವೇಂದ್ರರ ಸ್ತುತಿಪರ ಕೀರ್ತನೆಗಳು
--------------
ಭೂಪತಿ ವಿಠಲರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು
ಧರ್ಮದ ನೀತಿಯ ಅರಿತೇನು ಮರ್ಮದ ರೀತಿಯ ತಿಳಿದೇನು ಪ ಧರ್ಮಕರ್ಮಗಳು ಹರಿಗರ್ಪಣವೆಂದು ನಿರ್ಮಲಚಿತ್ತದಿ ಧ್ಯಾನಿಸದವನು ಅ.ಪ ಗಂಗಾಸ್ನಾನವ ಮಾಡಿದರೇನು ಅಂಗುಲಿಯೂರುವ ಯೋಗದೊಳೇನು ಪಂಗನಾಮ ಬೂದಿಯ ಬಳಿದೇನು ರಂಗನ ಸ್ಮರಿಸದ ಮನವಿದ್ದೇನು 1 ದೇಶ ದೇಶಂಗಳ ತಿರುಗಿದರೇನು ಆಶೆಯ ಬಿಡದ ಕಾಷಾಯದಿಂದೇನು ಕಾಶಿರಾಮೇಶ್ವರಕೋಡಿದರೇನು ಶ್ರೀಶನನಾಮವೇ ಗತಿಯೆನದವನು 2 ಚಿತ್ತದಿ [ನೆನೆದರೆ] ಹರಿ ಕಿರಿದೇ ಸತ್ತು ಹುಟ್ಟುವುದೇ ಜಗದೊಳು ಹಿರಿದೇ ಎತ್ತೆತ್ತಲು ಹರಿಯಿಹನೆನಬಾರದೇ ಕರ್ತಶ್ರೀ ಮಾಂಗಿರಿರಂಗನ ನೆನೆಯದೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ನೆನಿ ವನಜನಾಭನ ಮನವೇ ಪ ಭವ | ದಣಿವಿರೆ ಹಿಂಗಿಸು ಮನವೇ | ಈ ತನುವಾ ಸುಖದನುವಾ | ನಿಜ ಘನವಾ ಮಾಡರ್ಪಣವಾ 1 ಭವ | ಶರಧಿಲಿ ಕೈಯ್ಯಾ ಜರಿಯಾ | ಆಕರಿಯ ಕೇಳಿ ಮೊರಿಯಾ | ಬಂದರಿಯಾ ನೀ ಮರೆಯದೇ 2 ನುತ ಮಹಿಪತಿ ಸುತ ಸಾರಥಿಯ ಪಾ ಡುತ ನಿರ್ಮಳ ಕೀರುತಿಯಾ | ಶ್ರೀಪತಿಯ ಮೂರುತಿಯಾ | ಪದ ದ್ವಿತಿಯಾದಿ ರತಿಯಾಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪುರಂದರ ದಾಸರಾಯ ಪ ದಾಸರಾಯ ಪ್ರತಿವಾಸರದಲಿ ಶ್ರೀನಿ ವಾಸನ್ನ ತೋರೋ ದಯಾಸಾಂದ್ರ ಅ.ಪ. ವರದನಾಮಕ ಭೂಸುರನ ಮಡದಿ ಬ ಸಿರಲಿ ಜನಿಸಿ ಬಂದು ಮೆರೆದೆ ಧರಣಿಯೊಳು 1 ಕುಲಿಶಧರಾಹ್ವಯ ಪೊಳಲೊಳು ಮಡದಿ ಮ ಕ್ಕಳ ಕೂಡಿ ಸುಖದಿ ಕೆಲ ಕಾಲದಲಿದ್ಯೊ 2 ವ್ಯಾಸರಾಯರಲಿ ಭಾಸುರ ಮಂತ್ರೋ ಪ ದೇಶವ ಕೊಂಡು ರಮೇಶನ ಒಲಿಸಿದ್ಯೊ 3 ವಾಹನ ವಸ್ತುಗಳನೆಲ್ಲ ತೃಣಕೆ ಬಗೆದು ಕೃಷ್ಣಾರ್ಪಣವೆಂದೆ ಬುಧರಿಗೆ 4 ಕೃತಿ ಪೇಳಿ ಆ ಪ್ರಾಕೃತ ಹರಿಯಿಂದ ಸ್ವೀಕೃತ ನೀನಾದ್ಯೊ 5 ಮೂರ್ತಿ ಮಹಿಮೆಗಳ ಕೀರ್ತಿಸಿ ಜಗದಿ ಕೃತಾರ್ಥನೆಂದೆನಿಸಿದೆ6 ವನಧಿ ಪೋತನೆನಿಪ ಜಗ ನ್ನಾಥ ವಿಠ್ಠಲನ ಸುಪ್ರೀತಿಯಿಂದೊಲಿಸಿದೆ 7
--------------
ಜಗನ್ನಾಥದಾಸರು
ಪುರಂದರದಾಸರು ಜಿಪುಣರೈ ನೀವೆಂದು ಹೇಳಿದುದು ಸುಳ್ಳಲ್ಲ ಪ ಪುರಂದರ ದಾಸಮಲ್ಲ ಅ.ಪ. ಘನತರದ ವೈರಾಗ್ಯ ತಳೆದು ದ್ವಿಜರಿಗೆಲ್ಲಧನಕನಕ ಸಂಪತ್ತು ದಾನ ಮಾಡಿದರೆಲ್ಲವನಜನಾಭನ ಸ್ತುತಿಗೆ ಶಬ್ದ ಸಂಪತ್ತೆಲ್ಲಒಸೆದು ನೀವೇ ಬಳಸಿ ನನಗೇನು ಕೊಡಲಿಲ್ಲ 1 ಖಂಜೂತನದ ಕಥೆಯನು ಹೇಳಲಾಸಲ್ಲಕಂಜನಾಭನ ಮಹಿಮೆ ಬಣ್ಣಿಸುವ ನೆವದಲ್ಲಿರಂಜನೆಯ ಶಬ್ದಗಳ ಸವಿದುಂಡೆಯಲ್ಲಿಎಂಜಲವನುಳಿದೆನಗೆ ಕಿಂಚಿತ್ತು ಬಿಡಲಿಲ್ಲ 2 ಕೃಪೆಮಾಡಿ ಕ್ಷಮಿಸುವುದು ವಿಪುಲ ಭಕ್ತಿಗಳಿಂದಜಪತಪದಿ ಕನ್ನಡದ ನಿಮ್ಮ ಭಾರತಮಲ್ಲ ಕೃಪಣವತ್ಸಲ ಗದುಗು ವೀರನಾರಾಯಣನ ಸಫಿಲ ಜ್ಞಾನವ ಗಳಿಸಿ ನಮಗೇನು ಕೊಡಲಿಲ್ಲ 3
--------------
ವೀರನಾರಾಯಣ
ಪೋಗುವೆವಮ್ಮ ಪ ಉದಯವಾಗದ ಮುನ್ನ ಬರುವ ಕಣಮ್ಮ ಕದವ ಬಾರಿಸಿ ಒಳಪೊಕ್ಕ ಕಣಮ್ಮ ಮೊದಲೆನ್ನ ಮಗಳ ತಕ್ಕೈಸಿದನಮ್ಮ ಸದರದಲಿ ಮೊಸರನೆಲ್ಲ ಕುಡಿದ ಕಣಮ್ಮ 1 ಉಟ್ಟ ಸೀರೆಯ ಬೆಲೆ ಏನೆಂದಮ್ಮ ಪಟ್ಟೆ ಕುಪ್ಪಸಕೇನು ಪಣವೆಂದನಮ್ಮ ತೊಟ್ಟು ಕೊಂಡೆನ್ನನು ಬಿಡದೆ ಕಾಣಮ್ಮ 2 ನಸುಗಪ್ಪಿನೊಳು ಸಜ್ಜೆಮನೆಯೊಳಗಮ್ಮ ಮೊಸರು ಪಾಲ್ಬೆಣ್ಣೆಯ ಮೆದ್ದ ಕಾಣಮ್ಮ ಸೊಸೆಯು ಪಿಡಿಯೆ ಬಿಗಿದಪ್ಪಿದನಮ್ಮ ನಸು ಬೆವರಿಡೆ ತನು ಬಿಡದೆ ಕಾಣಮ್ಮ 3 ಜಾರ ಜೋರರ ಶಿಖಾಮಣಿಯಿವನಮ್ಮ ಯಾರೆಂದು ಹೊರಗೊಬ್ಬ ಕರೆಯೆ ಗೋಪಮ್ಮ ಚೋರ ಗಂಡಿಯ ಪೊಕ್ಕು ಓಡಿದನಮ್ಮ 4 ಊಚು ನೀಚುಗಳೇನು ಇವಗಿಲ್ಲವಮ್ಮ ನಾಚಿಕೆನಮಗಾಗುತಿದೆ ಹೇಳಲಮ್ಮ ಕೀಚಕರಿಪು ಕೋಣೆ ಲಕ್ಷ್ಮೀಶಗಮ್ಮ ವಾಚಿಸೆ ನೀನೊಂದ ಮಾತ ನಮ್ಮಮ್ಮ 5
--------------
ಕವಿ ಪರಮದೇವದಾಸರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬರೇ ವಾಚಾಭಿಮಾನವಿದೇಕೆ | ಹರಿ ಲೀಲಾಮೃತ ಸೇವಿಸಲಿಕ್ಕೆ ಪಸಂಸ್ಕøತ ವಂದ್ಯ ಪ್ರಾಕೃತ ನಿಂದ್ಯ |ಸುಕೃತಿಗಳಾಡುದೇ ಕುಂದಾ1 ಕನ್ನಡ ನುಡಿಯೆಂದ್ಹಳಿಯಬೇಡಿ | ಕನ್ನಡಿ ದರ್ಪಣವಲ್ಲವೆ ನೋಡಿ 2 ಕರಿದು ಬಿಳಿದು ಅವಾದರೇನು |ಎರಡಾಗದು ಕ್ಷೀರೆಂದೂ ತಾನು3 ಗುರುವರ ಮಹೀಪತಿ ಪ್ರಭುಚರಿತಾ |ಭರಿತಾದುದೇ ಪಾವನ ನುಡಿತಾ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು