ಒಟ್ಟು 24 ಕಡೆಗಳಲ್ಲಿ , 14 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪತಿಯೆ ಪರದೇವತೆಯು ಸತಿಯರಿಗೆ ಜಗದಿ ಮತಿಯರಿತು ಭಜಿಸಿ ಪರಗತಿಯ ಸಾರುವುದು ಪ. ಉದಯಕಾಲದೊಳೆದ್ದು ಸದಮಲ ಶುಧ್ಧಿಯಲಿ ಪಾದ ಮನದಿ ಸ್ಮರಿಸುತಲಿ ಪತಿ ಹೃದಯದಲಿರುವನು ಎಂದು ಪತಿ ಪದಕರ್ಪಿಸುವುದು 1 ಆದರದಲಿ ಪತಿಯ ಪಾದವನೆ ತೊಳೆದು ಆ ಸ್ವಾದೋದಕವ ಪಾನಗೈದು ಸುಖಿಸುವುದು ವೇದಗೋಚರ ಹರಿಯೆ ನೀ ದಯವ ಮಾಡೆಂದು ಆದರದಿ ಪತಿಯ ಮನವರಿತು ನುಡಿಯುವುದು 2 ಸ್ವಚ್ಛದಲ್ಲಿ ಮನದ ತುಚ್ಛ ವಿಷಯವ ತೊರೆದು ಇಚ್ಛೆಯಿಂದಲಿ ಹರಿಯ ನಾಮಗಳ ಭಜಿಸಿ ಅಚ್ಯುತಾನಂತ ಗೋವಿಂದನೆನ್ನುತ ಸತತ ಮಚ್ಚಾದ್ಯನೇಕ ಅವತಾರ ನೆನೆಯುವುದು 3 ಪತಿಯೆ ಹರಿಯೆಂದರಿತು ಪತಿಯೆ ಗುರುವೆಂದರಿತು ಪತಿಯ ಪೂಜೆಯನು ಅತಿ ಹಿತದಿ ಗೈಯ್ಯುವುದು ಪತಿಯಂತರ್ಗತನೆ ಎನ್ನತಿಶಯದಿ ಪೊರೆಯೆಂದು ಪತಿವ್ರತವ ನಡೆಸುತಲಿ ಹಿತದಿ ಬಾಳುವುದು 4 ಪತಿಯ ನಿಂದಕಳಿಗೆ ಗತಿಯಿಲ್ಲ ಪರದಲ್ಲಿ ಅತಿ ಬಾಧೆಪಡಿಸುವನು ಯಮನು ನಿರ್ದಯದಿ ಪತಿವ್ರತವ ಸಾಧಿಸುವ ಸತಿಯರಿಗೆ ಅನವರತ ಚ್ಯುತರಹಿತ ಪದವೀವ ಗೋಪಾಲಕೃಷ್ಣವಿಠಲ5
--------------
ಅಂಬಾಬಾಯಿ
ವ್ಯರ್ಥವಾದೆನಲ್ಲ ನರಜನ್ಮದಿ ಜನಿಸಿ ನಾವ್ಯರ್ಥವಾದೆನಲ್ಲ ಪುರುಷೋತ್ತಮಾಚ್ಯುತ ನಂಘ್ರಿಯ ನೆನೆಯದೆ ಪ ಕೂಳಿನ ಬಲದಿಂದ ಬೆಳೆದಿಹ ಕಾಯದ ಮದದಿಂದ ಸಡಗರದಲಿ ದಿನಗಳೆದು 1 ಪರಗತಿಯನು ಕೊಡುವ ಮುರಾರಿಯ ಭಜಿಸದೆ 2 ಪುಣ್ಯ ಕ್ಷೇತ್ರಗಳ ನಾಮೆಟ್ಟಿದೆ ಮೀಯದೆ ತೀರ್ಥಗಳ ಪುರುಷರಸಂಗವ ಮಾಡದೆ 3 ಹರಿಶರಣರ ನಾ ನೋಡಿ ಎರಗದೆ ತುಚ್ಛತನವನೇ ಮಾಡಿ ಪೊಂದದೆ ಶ್ರೀಹರಿಯನರ್ಚಿಸದೆ 4 ಒಂದಿನ ಸುಖವಿಲ್ಲ ಕಾಲವು ಸಂದು ಹೋಯಿತಲ್ಲ ಕೋಣೆ ಇಂದಿರರಮಣ ಮುಕುಂದಮುರಾರೇ 5
--------------
ಕವಿ ಪರಮದೇವದಾಸರು
ಶ್ರೀ ಗಿರೀಶಾ ನಮೋ ಮಹಾದೇವಾ ನಾಗ ಚರ್ಮಾಂಬರ ಸದಾಶಿವ ನಾಗ ಭೂಷಣ ದೇವನೆ ಪ ನೀಲ ಲೋಹಿತ ನಿರುಪಮಚರಿತಾ | ಬಾಲಚಂದ್ರನ ವೆತಾಳಿಲಿಟ್ಟಿ ಹಿಮಾಲಯತ್ಮಜಾ ಲಾಲನಾ ಭಾಲಲೋಚನ ಭಕ್ತರ ಪ್ರೀಯಾ | ನೀಲ ಗ್ರೀವಕ | ಪಾಲಿಮೂಲೋಕ ಪಾಲನಾ 1 ಗಮನ | ಭಂಗ ಮಾಡಿದಾ | ತುಂಗಮುನಿ ಮನೋ ಸಂಗನೇ | ಮಂಗಳಾತ್ಮಕ ಮಹಿಮ ಅಪಾರಾ | ಹಿಂಗ ದಂತರಂಗಲ್ಯಾಡುತಾ ಸಂಗರಹಿತ ಸಿತಾಂಗನೇ 2 ಕರುಣಾಸಿಂಧು ಕೈಲಾಸ ವಾಸೀ | ಧರಣೀಯೊಳಗ ಬೀರುವೇ || ಗುರು ಮಹಿಪತಿ - ಸುತ ಸಹಕಾರೀ | ಹರಹರಾಯನೇ ಹಾರಿಸಿ ಕಲುಷವ| ಪರಗತಿಯನೀ ತೋರುವೇ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀನಾಥ ಸಲಹೊ ಸತತ ನಿನ್ನ ಪದ ಧ್ಯಾನಾನಂದವಿತ್ತು ಪ ತಂದೆ ನಿನ್ನನುಗ್ರಹದಿ | ಜಗದೊಳಗೆ ಬಂದೆ ಭೂಸುರ ಜನ್ಮದಿ ಪೊಂದಿ ತ್ವತ್ವದ ಭಜಿಸದೆ ಭವದೊಳಗೆ ಬೆಂದು ಬೆಂಡಾದೆನು ನಾ1 ಪಗೆಯಾರುಖಳರು ಎನ್ನ | ಪಾಶದಲಿ ಬಿಗಿದು ಬಂಧಿನಿ ಎಳೆಯುತ || ಬಗೆ ಬಗೆಯ ಮಂಗನಂತೆ ಕುಣಿಸ್ಯಾಡಿ ಹಗರಣವ ಮಾಡುತಿಹರೋ 2 ಪರಸ್ವತಿಯರ ರೂಪನೋಡಿ | ಮರಳಾಗಿ ಬೆರೆತವಳ ಕ್ರೀಡಿಸುತಲಿ ಪರಗತಿಯ ಚಿಂತೆ ಬಿಟ್ಟು | ಪರಮಾತ್ಮ ನರಕಕ್ಕೆ ಗುರಿಯಾದೆನೋ 3 ಧನದಾಪೇಕ್ಷೆಯಿಂದ | ಧನಿಕರ ಮನೆಗ್ಹೋಗಿ ಲಜ್ಜೆ ತ್ಯಜಿಸಿ ಘನದಾತರೆಂದವರನು | ಬಲು ತುತಿಸಿ ದಿನಗಳೆದೆ ಶುನಕನಂತೆ 4 ಹರಿನಿನ್ನವಾಸರದಿ | ಉಪವಾಸ ಇರುಳು ಜಾಗರವ ಜರಿದು ಬರಿದೆ ಕಾಲವ ಕಳೆದೆನೋ ರವಿಸುತಗೆ | ಅರುಹಲು ಬಾಯಿಲ್ಲವೋ 5 ಪವಮಾನ ಕೃತಸುಶಾಸ್ತ್ರ | ಪ್ರವಚನವ ಕಿವಿಗೊಟ್ಟು ಕೇಳಲಿಲ್ಲ ಅವನಿ ದ್ವಿಜರ ಪಾದವ ಸೇವಿಸದೆ ಭಾರ ನಾನಾದೆನೊ 6 ಬಾಯೆಂದು ಕೂಗಿ ಕರೆವೆ | ಸರ್ವೇಶ ಓಯೆಂದು ಬೇಗ ಬಾರೋ || ಮಾಯಾ ಮೋಹವನೆ ಬಿಡಿಸೋ | ನಿನ್ನಂಘ್ರಿ ತೋಯಜಧ್ಯಾನವನಿತ್ತು 7 ಶಿಲೆಯಾದ ಸಲಹಿದ ತೆರದಿಲಿ ತುಳಿದು ಸಲಹಿದ ತೆರದಲಿ ಇಳಿಸುರನ ಮಹತ್ಪಾಪ ಕಳೆದವಗೆ ಸಲೆಮುಕ್ತಿ ಸಲಿಸಿದಂತೆ 8 ಇಂದಿನಾರಭ್ಯವಾಗಿ | ಎನ್ನಿಂದ ನಿಂದ್ಯಕರ್ಮವ ನಡೆಸದೆ ಮಂದರೋದ್ಮರನೆ ನಿನ್ನ |ಸದ್ಭಕ್ತ ವೃಂದದೊಳು ಕೂಡಿಸಯ್ಯ 9 ಅಪರಾಧ ಕ್ಷಮಿಸುವಲ್ಲಿ | ನಿನ್ನಂಥ ಕೃಪಣವತ್ಸಲ ಕಾಣೆ ಕೃಪೆಯಿಂದ ಕರಪಿಡಿಯೊ ಕರಿವರದ ಕೌಸ್ತುಭ ಕೃಷ್ಣ 10 ನಿನ್ನ ನಾಮದ ಭೂಸುರ ಕುಲಹೀನ ಕನ್ಯೆಯಳ ಸಂಗ ಮಾಡಿ ನಿನ್ನ ಪರ್ವತ ಮೆಟ್ಟಿಲು ಅವಗೊಲಿದು ನಿನ್ನಾಪ್ತನೆನಿಸಿದಂತೆ 11 ನಿನ್ನೊಲುಮೆ ಪಾತ್ರರಾದ ಗುರು ಜಗನ್ನಾಥಾಖ್ಯ ದಾಸಾರ್ಯರ ಸನ್ನಿಧಾನದಲಿ ಇಪ್ಪ | ಇವನೆಂದು ಮನ್ನಿಸೊ ಮಹಮಹಿನೆ 12 ದುರಿತ ರಾಶಿ | ಪೇಳಲ್ಕೆ ಭೂಮಿಧರಗಳವಲ್ಲವೋ ಪ್ರೇಮದಿಂದಲಿ ಪಾಲಿಸೋಮಮಸ್ವಾಮಿ ಶಾಮಸುಂದರ ದಯಾಳು 13
--------------
ಶಾಮಸುಂದರ ವಿಠಲ
ಸಂಸಾರದೊಳು ಸುಖವಿಲ್ಲ ಪ ದುಂಡನೆ ಬಂದಿಹೆ ದುಂಡನೆ ಹೋಗುವೆ ಹೆಂಡಿರು ಮಕ್ಕಳ ನಡುವೆಯಲಿ ತಂಡ ತಂಡದಿ ಹುಟ್ಟಿ ಕೊಂಡವರು ನಚ್ಚಿ ಕೊಂಡಿವರನು ಪರಗತಿಯ ಕೆಡಿಸದಿರು 1 ಹುಟ್ಟುತ ತರಲಿಲ್ಲ ಹೋಗುತ ವೈಯೊಲ್ಲ ನಟ್ಟ ನಡುವೆ ಬಂದ ಸಿರಿಯಿದು ಕಟ್ಟ ಕಡೆಗೆ ನೀನು ಮಡಿಯಲಿ ಕರುವೆಯ ಬಟ್ಟೆಯ ಶವ ಕಿತ್ತಲಿದು ಬಳ್ಳಿತೆಂಬರು 2 ಎನ್ನಮನೆಯು ಎನ್ನತೋಟ ತುಡಿಗೆಯಿದು ದೆನುತ ಹಿಗ್ಗದಿರು ಇದರೊಳಗೊಂದು ಚಿನ್ನ ಬಾರದು ಕಾಲನವರೆಳೆದೊಯ್ವಾಗ 3 ಘಟ್ಟದ ಕೆಳಗುಷ್ಟು ಬೆಟ್ಟದ ಮರಗಾಯಿ ಹುಟ್ಟಿದ ಬಯಲ ಸೀಮೆಯ ಮೆಣಸು ಬಟ್ಟಾದ ಲವಣ ಶಾಕದ ವೋಲು ಸಂಸಾರ 4 ಜಾಣನಾದರೆ ಪರಗತಿಯ ನೀ ನೊಲುವೊಡೆ ತ್ರಾಣ ವಿರಲಿಕೆ ತೊಡಕಬಿಟ್ಟು ಕಾಣುಸಂಸಾರವ ವಿಷವೆಂದು ತ್ಯಜಿಸಿ ಗೀರ್ವಾಣವಂದಿತ ಲಕ್ಷ್ಮೀರ ಮಣನ ಮೊರೆಹೋಗು 5
--------------
ಕವಿ ಪರಮದೇವದಾಸರು
ಸುಳ್ಳುಗಳ ಬೋಧಿಸಿ ನೀ ಪೊಳ್ಳಾಗದಿರಲೊ ಪ ನೀರ್ಗುಳ್ಳೆಯಂಥ ದೇಹ ನಂಬಿ ನಿಜಭಕ್ತ ನಾನೆಂದೂ ಅ.ಪ ಎಳ್ಳುಕಾಳಿನಷ್ಟಾದರೂ ಈಶನಲ್ಲಿ ಭಕ್ತಿಕಾಣೆ ಡೊಳ್ಳತುಂಬುವದಕೆ ನಾಲ್ಕಲ್ಲಿ ಇಲ್ಲಿ ಕಲಿತುಕೊಂಡು 1 ಪರರಿಗೆ ಹೇಳುವಂತೆ ನೀ ನಡೆಯುವೆಯೇನೊ ಪರಗತಿಯಾಗದು ನಿಜ ನಿಜ ನಿಜ ಕಾಣೊ 2 ನಿನ್ನಯೋಗ್ಯತಾನುಸಾರ ನೀನರಿಯಲೊ ಬನ್ನಬಡುವದೆ ಸಾಕ್ಷಿ ಪುಣ್ಯವೇನಿದರೊಳು 3 ಹಿಡಿ ಹಿಡಿ ಹಿಡಿ ಹಿಡಿ ಹಿರಿಯರ ಪಾದವ 4 ಶರಣ ಜನರ ನೋಡಿ ಶಾಂತನಾಗುತ ಗುರುರಾಮವಿಠಲನ ಗುರುತರಿಯದೇ ನೀ 5
--------------
ಗುರುರಾಮವಿಠಲ
ಹಾದಿಯ ಕೊಡುಹರಿ ಪರಗತಿಯಾ ಸಾಧಿಸಿ ಬಂದೇ ಕೇಳಿ ಕೀರುತಿಯಾ ಪ ಕ್ಷಿತಿಯೊಳು ಭರತ-ಖಂಡದ ದೇಶದ ಪತಿತರ ತಾಂಡೆಯದ ನಾಯಕನು ಮತಿ ಹೀನ ಕಾಮಕ್ರೋಧರಾಗಿಹ ಪುಂಡರು ಪಥ ನಡೆಗುಡಿಸರು ಅತಿಬಲರು 1 ಆದಿಲಿ ಅಜಮಿಳಾ ತಾಂಡ್ಯ ಹೋದ ಬಳಿಕಾ ಹಾದಿ ಮುಗ್ಗಿತಿ ಕಡೆ ಬಹುದಿನದೀ | ಸಾದರಲೆನಗನಿ ಅಭಯವ ಕೊಟ್ಟರ | ಭೇದಿಸಿ ಜನರನು ನೆರಹುವೆನು 2 ಏನಾರೆ ಗೋಣಿಗೆ ಭಾವದ ಲಹರೆ ಕÉೂಂಡು ಮಾನು ಭಾವರ ಪ್ಯಾಟಿ ಹೋಗಿಸುವುದು ಘನಗುರು ಮಹಿಪತಿ ನಂದನ ಸಾರಥೀ ದೀನ ವತ್ಸಲನೆಂಬ ಬಿರುದಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು