ಒಟ್ಟು 90 ಕಡೆಗಳಲ್ಲಿ , 38 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡು ತೊಡಿಯ ಮೇಲೆ ನೋಡು ಗಿಣಿಯು ತನ್ನಗೂಡಿನೊಳಗೆ ಹ್ಯಾಂಗೆ ಆಡುತಲಿಹುದು ಪ ಅತ್ತರೆ ನೀನು ಎನ್ಹತ್ತಿರನಿರುವನು ಗುಮ್ಮಾಪಟ್ಟಣದೊಳಗೆ ಪುತ್ರರನೊಯ್ಯುವನು 1 ಓಡಿ ಬರುತಲುಣ್ಣು ಜೋಡು ಮಾವಿನ ಹಣ್ಣುನೀಡುವೆ ರಂಗಣ್ಣಿ ನೋಡು ಬಾ ಸಖಿಯೆ 2 ಬುತ್ತಿ ಉಣ್ಣಿಸುವೆನು ವಕ್ರ ತೇಜಿಯನೇ ಎನ್ನಹಿತ್ತಲ ಗುಬ್ಬಿಯೇ ಎನ್ನ ಹತ್ತಿರ ಕೂಡೋ 3 ಪುಟ್ಟ ಮಗುವೆ ನೀರು ಗುಟುಕು ಕುಡಿದು ಉಣ್ಣುಕೊಟ್ಟು ಹೋಗೆಲೋ ಉಮ್ಮ ಅಷ್ಟು ಹುಡುಗರೊಳು 4 ಕೂಸು ಪಡೆದವಳಿಂಥಾ ಏಸು ತಪಸು ಮಾಡಿಬೇಸರಾಗದೆ ಇಂದಿರೇಶನ ಸಲಹುವಳು 5
--------------
ಇಂದಿರೇಶರು
ಗಂಗೆ ಮಂಗಲ ತರಂಗೆ ಪಾಹಿ ಪಾಪಭಂಗೆ ಹರಿಪಾದಸಂಗೆ ಪ ನಿತ್ಯ ನೆಲಸಿದೆ ಮತ್ತೆ ಸ್ಮರಿಪರ ಚಿತ್ತದೊಳ್ ವಾಸಿಸಿದೆ 1 ಸಗರಪುತ್ರರ ಪವಿತ್ರಿಸಿದೆ ಜಗವರಿಯೆ ಜಹ್ನುತನಯೆಯಾದೆ 2 ರಾಜೇಶ ಹಯಮುಖ ತನಯೆ ರಾಜಧರ್ಮನು ನಿನ್ನ ತಟದಲ್ಲಿ ಮೂಜಗವು ತಾ ಪೊಗಳುವಂದದಿ ವಾಜಿಮೇಧನ ಗೈದನಾದರದಿ 3
--------------
ವಿಶ್ವೇಂದ್ರತೀರ್ಥ
ಗುಡುಗುಡಿ ಭಾರಿ ಗುಡುಗುಡಿಗುಡುಗುಡಿ ಪಡೆಯಿರಿ ಗುರುಪುತ್ರರಾದವರು ಪ ಕಾಯ ಮಾಡಿಭಾಸುರ ಭಕ್ತಿ ಎಂದೆಂಬ ನೀರನೆ ಹೊಯ್ದುಸುಷುಮ್ನವೆಂಬ ಸೂಲಂಗಿಯನೆ ಹಾಕಿ 1 ತ್ರಿವಿಧ ಮೂಲೆಯ ಚೊಂಗೆಭೂತಲದ ಹಮ್ಮೆಂಬ ತೊಪ್ಪಲುಸಾಕಾರ ಗುರುವೆಂಬ ಬೆಂಕಿಯನೆ ಹಾಕಿಏಕಚಿತ್ತವೆಂಬ ಮುಚ್ಚಳವನೆ ಮುಚ್ಚಿ 2 ಸೋಹಂ ಎಂದೆಂಬ ಕೊಳವೆಯನೆ ಹಚ್ಚಿಬಹ ಪೂರಕ ಸೂರಿಯನೆ ಸೇದುತಆಹ ರೇಚಕವೆಂಬ ಹೊಗೆಯನೆ ಬಿಡುತಮಹಾ ಕುಂಭಕವೆಂಬ ಉಸುರನೆ ಹಿಡಿಯುತ 3 ಘುಡು ಘುಡು ಎಂದೆಂಬ ಮೇಘದ ನಾದವನು ನುಡಿಸೆಸುಡು ಮಾಯೆಯೆಂದು ಥೂ ಎಂದು ಉಗುಳುತಬಿಡಬಾರದು ಇದು ನಿತ್ಯವೆಂದೆನುತಅಡಿಗಡಿಗೆ ಊದುತ್ತ ಉರಿಯ ಎಬ್ಬಿಸುತ 4 ಹಾರಿತು ಬ್ರಹ್ಮಾನಂದವೆಂದೆಂಬ ಹರಳುಏರಿತು ಪೂರ್ಣಾನಂದದ ಲಹರಿಜಾರಿತು ತನುಮನವೆಲ್ಲ ಮರೆತು ಚಿತ್ತಸೇರಿತು ಚಿದಾನಂದನೊಳಗೆ ಲಯಿಸಿ ಕೂಡಿ5
--------------
ಚಿದಾನಂದ ಅವಧೂತರು
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಚಾಮುಂಡೇಶ್ವರಿ ಚಾಮೇಂದ್ರನೃಪನನ್ನು ಪ್ರೇಮದಿಂ ರಕ್ಷಿಸಮ್ಮ ಪ ಜೀಮೂತಶ್ಯಾಮಳೆ ಕೋಮಲಶುಭಗಾತ್ರೆ ಕಾಮಿತ ಫಲದಾಯಕಿ ಕಲ್ಯಾಣಿ ಅ.ಪ. ನಿನ್ನ ಸನ್ನಿಧಿಗೆ ನಾ ಬಂದು ಪ್ರಾರ್ಥಿಸೆ ಪ್ರ ಸನ್ನಳಾಗಿ ನೃಪನ ರನ್ನದ ಸಿಂಹಾಸನವೇರಿಸಿ ಎನ ಗುನ್ನತೋನ್ನತವಾದಾನಂದವನಿತ್ತೆ 1 ಆಯುರಾರೋಗ್ಯ ರಾಜೈಶ್ವರ್ಯ ಪುತ್ರರಿಂ ದಾನಂದವನೈದಿ ನಾಯಕಮಣಿಯಂದದಿಂ ನರನಾಥರ್ಗೆ ನಾಥನಾಗಿ ನಲಿಯುತ್ತಲಿರಲಿ ಸದಾ2 ಗಿರಿಯೊಳುತ್ತಮ ಮಹಾಬಲಗಿರಿಯೊಳು ನಿಂದು ಕರುಣಾರಸವೆರಸಿ ಪೊರೆವೆ ನಾರಾಯಣದಾಸನ ಬಿನ್ನಪವ ತಿರುಪತೀಶನ ಸೋದರಿ ಶುಭವರ್ಧಿನಿ 3
--------------
ನಾರಾಯಣದಾಸರು
ಚಾಮುಂಡೇಶ್ವರಿ ಚಾಮೇಂದ್ರನೃಪನನ್ನುಪ್ರೇಮದಿಂ ರಕ್ಷಿಸಮ್ಮ ಪಜೀಮೂತಶ್ಯಾಮಳೆ ಕೋಮಲಶುಭಗಾತ್ರೆಕಾ'ುತ ಫಲದಾಯಕಿ ಕಲ್ಯಾಣಿ ಅ.ಪ.ನಿನ್ನ ಸನ್ನಿಧಿಗೆ ನಾ ಬಂದು ಪ್ರಾರ್ಥಿಸೆ ಪ್ರಸನ್ನಳಾಗಿ ನೃಪನರನ್ನದ ಸಿಂಹಾಸನವೇರಿಸಿ ಎನಗುನ್ನತೋನ್ನತವಾದಾನಂದವನಿತ್ತೆ 1ಆಯುರಾರೋಗ್ಯ ರಾಜೈಶ್ವರ್ಯ ಪುತ್ರರಿಂದಾನಂದವನೈದಿನಾಯಕಮಣಿಯಂದದಿಂ ನರನಾಥರ್ಗೆನಾಥನಾಗಿ ನಲಿಯುತ್ತಲಿರಲಿ ಸದಾ 2ಗಿರಿಯೊಳುತ್ತಮ ಮಹಾಬಲಗಿರಿಯೊಳು ನಿಂದುಕರುಣಾರಸವೆರಸಿಪೊರೆವೆ ನಾರಾಯಣದಾಸನ ಬಿನ್ನಪವತಿರುಪತೀಶನ ಸೋದರಿ ಶುಭವರ್ಧಿನಿ 3
--------------
ನಾರಾಯಣದಾಸರು
ತಾಂಬೂಲ ಪ್ರತಿಗ್ರಹವ ಮಾಡು ಮಾರಮಣಾಜಾಂಬೂನದಾಕಾರ ಜಲಜದಳನಯನಾ ಪಜಾಂಬವತಿ ಮೊದಲಾದ ಅಷ್ಟಮಹಿಯರೆಲ್ಲಸಾಂಬಾದಿ ಪುತ್ರರೊಡಗೂಡಿ ಸೇವಿಸಲುಸಾಂಬರಾಲಂಕಾರ ಸಕಲ ಭೋಗಂಗಳನುತಾಂಬೂಲವಿದು ಶೋಭನವ ಮಾಡುತಿಹುದಾಗಿ 1ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದಖ್ಯಾತಿವಡೆದಿಹ ಕ್ರಮುಕಫಲಗಳಿವರಿಂದನೂತನದ ಮೌಕ್ತಿಕದ ಚೂರ್ಣ ಕರ್ಪುರದಿಂದಪ್ರೀತಿುಡುವಂದದಲಿ ರಮ್ಯವಾಗಿರುತಿರುವ 2ಸ್ಫುರಿಸುತಿದೆ ನಿನ್ನ ಮಂಗಳಕಾಂತಿ ಸೂರ್ಯನಲಿಸ್ಫುರಿಸುತಿದೆ ಚಂದ್ರಾಗ್ನಿಗಳಲೀ ಪರಿಯಲಿಸ್ಮರಿಸಿದರೆ ಕೈವಲ್ಯ ಮೊದಲಾದ ಪದವೀವತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ 3 ಓಂ ನವನೀತ ನಟಾಯ ನಮಃ
--------------
ತಿಮ್ಮಪ್ಪದಾಸರು
ತಾರೊ ನಿನ್ನಯ ಕರವಾರಿಜವನು ಕೃಷ್ಣ ಸಾರಿ ಬೇಡಿಕೊಂಬೆ ಮುರಾರಿ ದಯಮಾಡಿಪ ಮಾರಮಣನೆ ಸಂಸಾರ ಶರಧಿಯೊಳೀಸ ಲಾರದೆ ಬಳಲುತ ಚೀರೂತಲಿರುವೆ ಅ.ಪ ದಾರಾ ಪುತ್ರರೆನಗೆ ದಾರಿ ತೋರುವರೆಂದು ಮಾರ ಜನಕನೆ ಕೇಳೊ ಮೋರೆ ತೋರದೆ ಅವರು ಜಾರಿಕೊಂಡರಯ್ಯ ಭೂರಿ ಬಳಗದವರ್ಯಾರು ಬಾರರೊ ದೇವ 1 ಧಾರುಣಿ ಧನ ಧಾನ್ಯ ಹೇರಳವಾಗಿದೆ ಜೀವ ಹಾರಿ ಹೋಗುವಾಗ ಯಾರಿಲ್ಲವಯ್ಯ ಕೋರಿ ಭಜಿಪೆ ನಿನ್ನ ಬಾರಿ ಬಾರಿಗೆ ನಾನು ಕ್ಷೀರ ವಾರಿಧಿವಾಸ ವೀರ ಮಾರುತೀಶ 2 ಘೋರಾಂಧಕಾರದಿ ಮೇರೆಯು ಕಾಣದೆ ಮಿತಿ ಮೀರಿದ ಭಯದಿಂದ ಗಾರು ಪಡುತಿಹೆನೊ ಕಾರುಣ್ಯನಿಧಿಯೆ ನೀ ಪಾರು ಮಾಡದಿರೆ ಮತ್ತ್ಯಾರು ಕೇಳುವರೆನ್ನ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ತೆರಳಿ ಪೋದರು ದಿವ್ಯ ನರಹರಿಯ ಪುರಕೆ ಶ್ರೀ ವರತಂದೆ ಮುದ್ದುಮೋಹನರೂ ಪ. ಕರಿಗಿರಿ ಕ್ಷೇತ್ರದಲಿ ತೊರದು ಭೌತಿಕ ದೇಹ ಪರಮ ಉಲ್ಲಾಸದಿಂದಾ ನಂದಾ ಅ. ಪರಿಪರೀ ಪೂಜಿಸಿದ ಪರಮ ಭಕ್ತರಿಗೆ ತಾವ್ ತೆರಳುವೋಪರಿ ತಿಳಿಸದೇ ಪರಮ ಕರುಣಾಳು ಹೆಂಗರುಳಿನಾ ಖಣಿ ಎಂಬ ತೆರವೆಲ್ಲರಿಗೆ ಮರೆಸದೇ ಪರಮಸುಜ್ಞಾನಿಯಾದಂಥ ಶಿಷ್ಯರಾ ಕರೆಸಿ ಅಗಲಿಸಿಕೊಳ್ಳದೇ ಪರಮ ಸಾಧ್ವೀಪತ್ನಿ ವರ ಪುತ್ರರಿರುತಿರಲು ಕಿರಿಶಿಷ್ಯನೊಬ್ಬನೆದುರೊಳ್ | ಜವದೊಳ್ 1 ಎಂಭತ್ತು ಮೇಲೆರಡು ವತ್ಸರವು ಧರಣಿಯೊಳು ಸಂಭ್ರಮದಿ ಧೃಡ ಕಾಯದೀ ತುಂಬಿ ತತ್ವಾಮೃತವು ಸುಜನರಾ ಹೃದಯದಲಿ ಕುಂಭಿಣಿಯೋಳ್ ದಾಸತ್ವದೀ ನಂಬಿಕೆಗಳಿತ್ತು ಸುಜ್ಞಾನಿಗಳಿಗಂಕಿತವು ಅಂಬುಜಾಕ್ಷನ ನಾಮದೀ ಒಂಭತ್ತು ವರ್ಷದಿಂ ಬೆಂಬಿಡದೆ ಕಾಯ್ದೆನ್ನ ಕುಂಭಿನಿಯ ತೊರೆದು ಈಗಾ | ಬೇಗಾ 2 ಶಾಲಿಶಕ ಸಾಹಸ್ರ ಅಷ್ಟ ಶತ ಅರವತ್ತು ಮೇಲೆರಡು ವಿಕ್ರಮದಲೀ ಕಾಲ ಮಧ್ಯಾಹ್ನ ಚೈತ್ರದ ಶುದ್ಧ ಶ್ರೀ ರಾಮ ನವಮಿ ಭೌಮವಾಸರದಲಿ ಆಲಿಸುತ ದಿವ್ಯ ಮಂತ್ರ ಶ್ರವಣ ಕೀರ್ತನವ ಶೀಲ ಶ್ರೀ ಗೋಪಾಲಕೃಷ್ಣವಿಠಲನ ಪುರಕೆ ಆಯಾಸಗೊಳದೆ ಮುದದೀ ತ್ವರದೀ 3
--------------
ಅಂಬಾಬಾಯಿ
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಿಂತು ಲಾಲಿಸಲಿ ರಾಧಾ ಕಂತುಪಿತನ ಪದನಾದ ಪ ಬಲದ ಕಾಲೆಡದೊಳಿಟ್ಟು ಇಳೆಗೆ ಎಡದ ಪದ ಕೊಟ್ಟು ಒಲಿದು ಮುರಲಿ ಮುಖವಿಟ್ಟು ಉಲಿಯೆ ಮಧುರ ರವ ಪುಟ್ಟಿ ಬಲಬಾಲರೆಲ್ಲ ನಲಿಯುತಲಿಗೋ ಪೂರ್ವ ಮಳೆಗರೆವುತಲಿ ನಾನೆಂತು ಬಣ್ಣಿಸಲಿ ಹರಿಯ ಲೀಲೆಗಳ ಉಲಿಯುವ ಶ್ರುತಿನಾದ ಬಲದ ಸಿಂಹದ ನಾದ ಸಲೆ ವಟುವಿನ ನಾದ ಬಲವಾದ ಪರಶುವಿನತಿನಾದವು ಯಶೋಜಿತ ನಾದವು ಬಲು ವಾಜಿನಾದಗಳ್ ಕೊಳಲಲಿ ಕೇಳುತ ನಿಂದು 1 ಪಾಲು ಮೊಸರುಗಳನುಂಡು ಲೀಲೆಯಾಡುತಿರೆ ಕಂಡು ಬಾಲೆಯರತಿ ಖತಿಗೊಂಡು ಗೋಳಿಡುತಲೆ ಹಿಂಡಿಂಡು ಎಮ್ಮಾಲಯದೊಳು ಬೆಣ್ಣೆ ಮೆಲುತಲಿ ಸಣ್ಣ ಬಾಲೆರಿಟ್ಟ ಪಾಲ್ ಕುಡಿವುತಲಿ ಕೆಳಮೇಲಾಗಿ ಧದಿಯನು ಸುರಿವುತಲಿ ಜಲದೊಳು ಧುಮುಕಿದ ಕಲಕದ ಚಲವಿಡಿದ ಬಲುಬೇರ ಕೋರೆಯಿಂದಗಿದು ತಿಂದಾ ಒಲಿದು ಕಂಬವ ನೋಡಿದಾ ಬಲಿಗೆ ಬಾಯಿ ತೆರೆದಾ ಮೊಲೆ ಕೊಟ್ಟ ಜನನಿಯ ಶಿರಕಡಿದಾ ಕುಲಹೀನೆಂಜಲ ತಿಂದಾ ಖಳಪೂತನಿಯಳಿದಾ ತಿಳಿಗೆಟ್ಟು ಮೈಬಟ್ಟೆ ಕಳೆದೊಗೆದಾ ಬಲು ಮಿಂದೇರಿ ವಾಜಿ ಭಟರ ಬೆನ್ನಟ್ಟಿದಾ ನಿಂತು 2 ಸುರಿವುತಿರಲು ಮಳೆ ಭಾರಿ ಚರಿವಾವ್ಗಳು ಹೌಹಾರಿ ಮರೆಯ ಕಾಣದೆಲೆ ಹೋರಿ ಕರವುತಿರಲು ಮುರವೈರಿ ಕಿರಿಬೆರಳಲಿ ಕೊಡೆವಿಡಿವುತಲಿ ಸಣ್ಣ ಕರಗಳಾವುಗಳ್ ಸಲಹುತಲಿ ಮುದ ಗೋವುಗಳ ನೋಡುತಲಿ ನಾನೆಂತು ಬಣ್ಣಿಸಲಿ ಶಿರಿವರನಾನಂದ ಭರದಿ ವೇದವ ತಂದ ನೆರೆಶೈಲನೆಗಹಿದ ಧರಾಲಲನೀಯ ನಾಸದಿ ಪಿಡಿದ ಸುರನದಿ ದ್ವಿಜರಿಗೆ ದಾನವ ಮಾಡಿದಾ ಹರಿಗೆ ಯಜಪದ ನೀಡ್ದಾ ಗುರುಪುತ್ರರನೆ ಪಡಿದಾ ಹರಿಯೇರಿ ಮೆರೆವುದು ನಿಂತು 3
--------------
ನರಸಿಂಹವಿಠಲರು
ನಿನ್ನ ನಾನೇನೆಂದೆನೋ ರಾಮೇಶ್ವರನಿನ್ನ ನಾನೇನೆಂದೆನೋ ಸಕಲ ಲೋಕವನ್ನು ಪೊರೆವ ಪಾರ್ವತೀಶನೆಂದೆನಲ್ಲದೆ ಪ ತಾರಕಾಸುರನ ಪುತ್ರರ ಬಾಧೆಯನು ತಾಳಲಾರದೆ ಹರಿಮುಖ್ಯ ನಿರ್ಜರರುಶ್ರೀರುದ್ರ ಸಲಹೆಂದು ಪಾದಕೆ ಮಕುಟವ-ನೂರೆ ಪೊರೆದ ತ್ರಿಪುರಾರಿಯೆಂದೆನಲ್ಲದೆ ವಿಧಿ ಶಿರವ ಕೈ-ಯ್ಯಾರೆ ಕಡಿದನೆಂದೆನೆ ಭಕ್ತವತ್ಸಲವಾರಿಜಭವನುತಿಲೋಲನೆಂದೆನಲ್ಲದೆ 1 ನಾರದಸಹಿತ ಮತ್ಯಾರು ಕಾಣದಂದದಿಓರುಗಲ್ಲರಸಿನ ಮನೆಗೆ ಪೋಗಿತೋರುವ ಭಿತ್ತಿಯ ಕೊರೆದಾತನಿಷ್ಟವಪೂರಿಸಿದನುಪಮಮಹಿಮನೆಂದೆನಲ್ಲದೆಚೋರರ ಗುರುವೆಂದೆನೆ ಪಾರ್ಥಚಾಪದಿಂ-ದೇರುವಡೆದನೆಂದೆನೆ ಬತ್ತಲೆಮದವೇರಿ ಕುಣಿದನೆಂದೆನೆ ಅರ್ಜುನಗೊಲಿದಾರಾಜಿಸುವ ಮಹಾನಟನೆಂದೆನಲ್ಲದೆ2 ಸುರರು ದಾನವರೆಲ್ಲ ನೆರೆದು ವಾದಿಸಿ ಕ್ಷೀರಶರಧಿ ಮಥನವ ವಿರಚಿಸಲುಉರು ಹಾಲಾಹಲಮೊಗೆದುರುಹಲು ಸರ್ವರಪೊರೆದ ಶ್ರೀನೀಲಕಂಧರನೆಂದೆನಲ್ಲದೆಗರವ ಕುಡಿದನೆಂದೆನೆ ಪೆಣ್ಣಿತ್ತನಶಿರವನರಿದನೆಂದೆನೆ ಊರೂರೊಳುತಿರಿದುಗರುವನೆಂದೆನೆ ದುಷ್ಟ ಶಿಕ್ಷಕವರ ಕೆಳದಿಯ ರಾಮೇಶ್ವರನೆಂದೆನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆದು ನಮಿಸುವೆ ನಾನು ವಾರಂವಾರ ಪ ನೆನೆದು ನಮಿಸುವೆ ನಾನನುದಿನ ಹರಿಪದ ವನಜ ಮಧುಪರಾದ ಅನುಭವ ಶರಣರ ಅ.ಪ ಆದಿಮೂರುತಿತ್ರಯ ಮಧ್ವಮುನಿರೇಯ ಪದ್ಮನಾಭ ನರಹರಿ ಧ್ಯಾನ ಮಾಧವಾಕ್ಷೋಭ್ಯರ ಮಹಾ ಜಯತೀರ್ಥರಾ ರಾಧಕ ವಿದ್ಯಾದಿರಾಜ ಕವಿನಿಧಿ ಸಾದರ ವಾಗೀಂದ್ರ ಶಾಂತ ರಾಮಚಂದ್ರ ಸಾಧು ವಿದ್ಯಾನಿಧಿಯರ ರಘುನಾಥ ಮೇದಿನಿ ರಘುವರ್ಯರ ರಘೋತ್ತಮ ವೇದವ್ಯಾಸಾರ್ಯರ ವಾರಂವಾರ 1 ಇತ್ತ ವಿದ್ಯಾಧೀಶ ಈ ವೇದನಿಧಿ ಘೋಷ ಸತ್ಯವ್ರತರ ನಾಮ ಸತ್ಯನಿಧಿಯ ನೇಮ ಸತ್ಯನಾಥಾಖ್ಯಾತ ಸತ್ಯಾಭಿನವ ತೀರ್ಥ ಮತ್ತಿಳೆಯೊಳಗಿರ್ಪ ಮನಕೆ ಸೂಚಿಸಿ ಬಪ್ಪ ಕೃತ್ಯಮ್ ಸುಜ್ಞಾನ ಕೃಷ್ಣದ್ವೈಪಾಯನ ಇತ್ಯಧಿಕ ಸರ್ವರ ಜನದಲಿ ಅತ್ಯಧಿಕ ಮೀರ್ವರಾ ಪುರುಷಾರ್ಥ ಉತ್ತಮ ಪದಲಿರುವರಾ ವಾರಂ ವಾರ 2 ಶರಣೆಂದು ಆದ್ಯರ ಸಕಲ ಪ್ರಸಿದ್ಧರ ಶುಭ ವ್ಯಾಸರಾಯರ ವರ ಹಯಗ್ರೀವ ಜಗವರಿತ ವಾದಿರಾಜ ಪುರಂದರದಾಸ ಪುತ್ರರಾ ವರ ಮಧ್ವರಾ ನೆರೆ ತಾಳ ಪಾಕರ ನುತ ಮತಿ ಕನಕರ ಹರಿಭಕ್ತಿ ಉಲ್ಹಾಸರ ಬಂಡೆರಂಗ ನರಿತಿಹ ನಿಜದಾಸರ ಮಹಿಪತಿ ಗುರುಶರಣರ ತೋಷರ ವಾರಂ ವಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು