ಒಟ್ಟು 28 ಕಡೆಗಳಲ್ಲಿ , 17 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀ ದೇವಿಯ ಗಂಡ ಹರಧನುರ್ಭಂಗಾ ರುಕ್ಮಾಂಗ ಧನಪಾಲಾ ಕರುಣಾಂತರಂಗಾ ಪ ಪೂಜಿಸಿದವರಿಗಭೀಷ್ಟವ ಕೊಡುವಾ ಪೂಜಿಪ ದಾಸರ ಕಷ್ಟವ ತರಿವಾ ಸಜ್ಜನರಿರುವಲ್ಲಿ ನಿರುತನಾಗಿರುವಾ 1 ಸ್ಮಾರನನ್ನು ಪಡೆದ ಮನೋಹರ ಮೂರ್ತಿ ಶರಣು ಬಂದವರಿಗೆ ವರ ಚಕ್ರವರ್ತಿ ಧರೆಯಲ್ಲಿ ಪೊಗಳುವೆ ಶ್ರೀಹರಿ ಕೀರ್ತಿ ಅರಿಯದ ದಾಸಗೆ ಸುಖಗಳ ಭರತೀ 2 ಪನ್ನಗಶಯನ ಶ್ರೀದಾಸರ ಪೋಷಾ ಸನ್ನುತ ಕಾವ ಶ್ರೀ ದೂರ್ವಾಪೂರೇಶಾ ಮನ್ನಿಸಿ ರಕ್ಷಿಸೊ ಭಜಕರ ಪೋಷಾ ಚನ್ನಿಗ ಕೇಶವದಾಸನಧೀಶಾ3
--------------
ಕರ್ಕಿ ಕೇಶವದಾಸ
ವಿಧಿ ಭವ ಸುರಾರ್ಚಿತಪಂಕಜಾಂಘ್ರಿ ಸುಪೋಷಾ | ಲಕ್ಷ್ಮೀ ನಿವಾಸಾ ಪ ಶಂಖ ಚಕ್ರ ವರಾಭಯಕರ ಶ | ಶಾಂಕ ವದನ ಕಳಂಕ ರಹಿತನೆಕಿಂಕರನ ಅವಗುಣಗಳೆಣಿಸದೆ | ಪಂಕಜಜ ಪರಿಪಾಲಕನೆ ಶ್ರೀ ಅ.ಪ. ಶುಭ ಭಾರ ಕಾರುಣಿಕ ಪರಿ | ವಾರ ಮಾಮನೊಹಾರ ಮೂರುತಿ1 ಭವ ಕೈಟಭಾರಿ ಮಹಾಮಹಿಮ ಗುಣ ||ಕೂಟದಿಂದಲಿ ಜಗವ ನಿರ್ಮಿಸಿ | ಹಾಟಕೋದರ ಹರ ಪ್ರಮುಖ್ಯರನೀಟು ಸೂತ್ರದಿ ಈಟದಿಂದದಿ | ಚೂಟದಲಿ ಚೆಲ್ಲಾಟವಾಡಿದ 2 ಪರ ಕಲುಷ ಕಾ | ನನವ ಖಂಡಿಸೊ ವ್ಯಾಸ ವಿಠ್ಠಲಮನ ವಚನ ಕಾಯದಲಿ ನಮಿಸುವೆ | ಘನ ಮಹಿಮ ಗಜವರದ ಸುಂದರ 3
--------------
ವ್ಯಾಸವಿಠ್ಠಲರು
ಶ್ರೀವೆಂಕಟೇಶಾ ಶ್ರಿತಜನಪೋಷಾ ಪ ದೇವ ದೇವ ಮಹದೇವ ವಿನುತಸುಜ | ನಾವನ ಶ್ರೀ ಭೂದೇವಿಯರರಸನೆ ಅ.ಪ ಅಂಬರರಾಜನಳಿಯನೆ ತ್ರಿಭುವನ ಕು | ಟುಂಬಿ ನಿನ್ನ ನೆರೆ ನಂಬಿದೆನಯ್ಯ 1 ಸ್ವಾಮಿ ಪುಷ್ಕರಣಿ ತಟದಿ ನೆಲಸಿ ಸುರ | ಓಲಗ ಕೈಗೊಂಬ 2 ಉರಗಗಿರಿನಿಲಯ ಗುರುರಾಮವಿಠಲ 3
--------------
ಗುರುರಾಮವಿಠಲ
ಸಾಧು ಸಜ್ಜನ ಸಂತರ ಸಲಹುವ ಪತಿ ಹರಿ ಯಶೋದ ನಂದನಾ ಪ ಕನಕಾಂಬರಧರ ಕಮಲಸಂಭವ ಪಿತ ಇನಕುಲ ಭೂಷಣ ವೀರಾಧಿವೀರ ಘನಮಕುಟಧರ ಶಿರ ಕಾರುಣ್ಯಸಾಗರ ಅನಿಮಿತ್ತ ಬಂಧು ಜಗದಾದಿ ಪ್ರಿಯ ದಿನಕರ ಕೋಟಿ ತೇಜ ದೇವಾದಿದೇವ ದೀನರಕ್ಷಕ ರಾಮ ಜಾನಕಿ ಪ್ರೇಮಾ ಅನಿಮಿಷ ರೊಡೆಯ ಶ್ರೀ ಆದಿನಾರಾಯಣ ಕನಿಕರಿಸಿ ಎನ್ನಮೇಲೆ ಕೃಪೆ ಮಾಡೋ ಗೋವಿಂದಾ1 ವಾಸುಕಿಶಯನ ಶ್ರೀವಸುದೇವ ತನಯಾ ಸಾಸಿರನಾಮದ ಸರ್ವೇಶಾ ಈಶಾ ವಾಸುದೇವಾಕೃಷ್ಣಾ ವಾರಿಜೋದರ ಶ್ರೀನಿವಾಸ ವೇದೋದ್ಧಾರ ವೈದೇಹಿ ರಮಣ ಭೂಸುರ ವಂದಿತ ಪೂಜಿತ ಸರ್ವತ್ರ ಶ್ರೀಶವೇಣನಾದ ಶೀತ ಜನಪೋಷಾ ಭಾಸುತ ಕೀರ್ತಿ ವಿಶಾಲ ಭಕ್ತವತ್ಸಲ ದಾಸನು ನಾ ನಿನ್ನ ದಯಮಾಡಿ ರಕ್ಷಿಸೆನ್ನ 2 ಸುಂದರ ವದನ ಸುರೇಂದ್ರ ಅರ್ಚಿತ ಪರಮಾನಂದ ಮುಕುಂದ ಮಹಾದೇವನೆ ಹೊಂದಿ ನಿಮ್ಮಯ ಚರಣದ್ವಂದ್ವ ಪೂಜಿಪ ರಂದದಿ ಪುರವಂತ ಬಿರುದುಳ್ಳ ದೇವಾ ಸಿಂಧು ಶಯನನಾದ 'ಶ್ರೀಹೆನ್ನವಿಠ್ಠಲಾ’ ಕರೆದೆನ್ನ ------------------------- ------ ಎನ್ನನ್ನು ಕರುಣಿಸು ಕಾಯೋ
--------------
ಹೆನ್ನೆರಂಗದಾಸರು
ಹರತನ್ನ ಕರದಲಿ ಪ್ರಾಣಲಿಂಗವನು ಧರಿಸಿಪ್ಪನೆಂಬುದ ಕೇಳಿ ರಾವಣನು ತರುವೆನೆನುತ ಪೋಗಿ ಭಜಿಸೆ ಶಂಕರನ ಕರುಣಿಸಲಾತನ ಮನದಭೀಷ್ಟವನು ದುರುಳ ಖಳತಾ ಕೊಂಡು ಲಿಂಗವ ಪುರಕೆ ಗಮಿಸುವ ವ್ಯಾಳ್ಯದಲಿ ವಿಧಿ ಸುರಪ ಮುಖ್ಯ ಅಮರರು ನಿಮ್ಮಯ ಸ್ಮರಿಸೆ ಮೆಚ್ಚಿದ ಪಾರ ಮಹಿಮನೆ ಮೊರೆ ಹೊಕ್ಕೆ ನಿಮ್ಮ ಪಾದವನು ವಿಘ್ನೇಶ 1 ಕರುಣಿಸೋ ಎನ್ನ ವಾಂಛಿತವ ಸರ್ವೇಶ ಪರಮ ಪಾವನ ವೇಷ ಮುನಿ ಜನರ ಪೋಷಾ ನಿರುತ ಭಕ್ತ ವಿಲಾಸ ನಿರೂಪ ಮಹೇಶ ಹರಿ ಮುಂತಾದವರೆಲ್ಲ ನುತಿ ಸುತ್ತಲಿಂದು ಕರಿವಕ್ತ್ರ ನೀ ಕೇಳು ಪರಮೇಶನಂದು ಕರದ ಲಿಂಗವ ನಿತ್ತನಾ ದಶಶಿರಗೆ ವರ ದೈವ ದ್ರೋಹಿ ರಕ್ಕಸನಾತನಿಂಗೆ ವರ ಮಹಾಲಿಂಗವದು ಸೇರಲು ತಿರುಗಿಡುವಯತ್ನವನು ಪೇಳಿಯೋ ಪೊರೆಯ ಬೇಕೆನಲ ಭಯನಿತ್ತ ನಾ ಮೊರೆಹೊಕ್ಕೆ 2 ಇವಗೆ ಚಕ್ರವನಾಗಹರಿ ಪಿಡಿದಿರಲು ಧನುಜೇಶ ಸಂಧ್ಯಾವಂದನೆಗೆ ಯೋಚಿಸಲು ಘನ ಮಹಿಮನೆ ನೀನು ವಟುರೂಪಿನಿಂದ ಮಣಗುತ್ತಿರಲು ಕಂಡು ಖಳ ಕರದಿಂದ ಅಣುಗನಿಮ್ಮಯ ಮಹಿಮೆಯರಿಯದೆ ಪೇಳೆ ವಿನಯದಿಂ ಲಿಂಗವನು ಖಳಬರುವ ತನಕ ಕರದಲಿ ಪಿಡಿದಂತಹ ಪರಮ ಮಹಿಮನೆ 3
--------------
ಕವಿ ಪರಮದೇವದಾಸರು
(2) ದರಿಶಕುಪ್ಪ (ಶ್ರೀರಂಗಪಟ್ಟಣದ ಸಮೀಪ)ದರಿಶಕುಪ್ಪ ಶ್ರೀ ಅಂಜನಿತನಯದರುಶನ ಕೊಡು ಬೇಗ ದಯದಿಂದಾ ಪಸಿರಿರಘುಕುಲವರ ಸೇವಾನುಕೂಲಸ್ಮರಿಸುವೆ ನಿಮ್ಮ ಪಾದಸರಸಿಜಯುಗಳ 1ಹರಿಹರ ಬ್ರಹ್ಮಾದ್ಯಮರ ಸುಪೂಜಧರಣಿಜಾಪ್ರಾಣೋದ್ಧಾರ ಸುತೇಜ2ಘೋರದುರಿತ ಪರಿಹಾರ ಕಪೀಶಾಪಾರಿಜಾತತರುಪ್ರಾಂತ್ಯನಿವೇಶಾ3ಲವಣಜಲಧಿಪದಲಂಘನತುಂಗಪವನಾತ್ಮಜ ರಿಪುಭಂಗ ಶುಭಾಂಗ 4ರಾಮಾನುಜ ಪ್ರಾಣರಕ್ಷಣ ದೀಕ್ಷಾಕಾಮಾದ್ಯವಗುಣ ಖಂಡನಾಧ್ಯಕ್ಷ 5ಮರಕತಮಣಿಮಯ ಮಂಜುಳ ಭೂಷಾಧರೆಯೊಳ್ ತುಲಸೀದಾಸ ಸುಪೋಷಾ 6
--------------
ತುಳಸೀರಾಮದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಮಲನಾಭ ವೆಂಕಟೇಶ ಭಕ್ತ ಕಲ್ಪಭೂರುಹ ಶ್ರೀಕಮಲಪ್ರಾಣೇಶಾಪವಿಮಲ ವೈಕುಂಠಪುರೀಶಾ ಶಿವಕಮಲಸಂಭವನುತ ಕರ್ಬುರನಾಶಾ ಅ.ಪನಿರುಪಮ ಸುಂದರ ಗಾತ್ರಾನಿತ್ಯಪರಿಪೂರ್ಣ ವೈಭವಪರಮಪವಿತ್ರಾಶರನಿಧಿತನಯಕಳತ್ರಾಶೇಷಪರಿಜನಕೃತಘೋರಪಾಪಾಂಧ ಮಿತ್ರಾ1ಸನಕಸನಂದನ ವಿನುತಾಶಶಿದಿನಕರಶತಕೋಟಿ ದಿವ್ಯ ಸುಚರಿತಾಜನನ ಮರಣ ಕ್ಲೇಶರಹಿತ ಶ್ರೀವನಜಸುದರ್ಶನ ವನಮಾಲ ಧರಿತ2ಜಲಜಮಿತ್ರ ವಂಶ ಭೂಷಾ ಕ್ಷಾರಜಲಧಿಬಂಧನ ಪುಣ್ಯಜನ ಪ್ರಾಣ ಶೋಷಾತುಲಸೀ ರಾಮದಾಸ ಪೋಷಾ ಶ್ರೀತುಲಸೀ ಕಾನನಹಿತ ತುಂಬುರ ತೋಷಾ 3
--------------
ತುಳಸೀರಾಮದಾಸರು
ನೀ ಸಾಹೆಯಾಗು ಯಮಗನುಗಾಲ |ಶೇಷಾದೇವರೆ ರೋಹಿಣಿ ಬಾಲಾ ಪಮೂರುತಿಯಲ್ಲಿ ಪುಟ್ಟಿ | ನಾರಾಯಣನ್ನ ಕೂಡಿ ||ಚಾರುಬದರಿಯಲ್ಲಿ ತೋರುತಿಹನೆ 1ದಶರಥನ ಮಡದಿ | ಬಸುರೀಲಿ ಜನಿಸೀದಿ ||ಕುಸುಮನಾಭನರ್ಚನೆ ಎಸಗಿದಿಯೋ 2ಪ್ರದ್ಯುಮ್ನಪರಿಯಂಕ| ರುದ್ರಾನಲಂಕಾರ ||ಭದ್ರ ಪ್ರದಾಯಕ ಭಕ್ತ ಪೋಷಾ3ನೀಲಾಂಬರವನುಟ್ಟ | ತಾಳಾಂಕಬಿನ್ನಪ||ಲಾಲೀಸೊ ನಿನ್ನವನೆಂದ ನಿಶಾ4ಪ್ರಾಣೇಶ ವಿಠಲನ | ಧ್ಯಾನದೋಳಿರುವಂತೆ ||ನೀನೊಲಿವದು ದೂರು ನೋಡದಲೇ 5
--------------
ಪ್ರಾಣೇಶದಾಸರು
ಶರಣು ಶ್ರೀನಿವಾಸ | ಪಾಲಿಸು |ಶರಣ ಜನರ ಪೋಷಾರಿಪಕರುಣದಿ ನಿನ್ನಯ ಚರಣವ ನಂಬಿದ |ಶರಣನಭವಭಯ ದುರಿತವ ಕಳೆಯುವಅ.ಪನಂಬಿದವರ ಪೊರೆವಾ | ಭಕ್ತ ಕು | ಟುಂಬಿ ವಾಸುದೇವಾ |ಕಂಬುಕಂಧರಕಮ | ಲಾಂಭಕ ಶ್ರೀವರಶಂಭು ಸಖನೆ | ಶುಕ್ಲಾಂಬರಧರಹರಿ||ಶರಣು||1ಪದ್ಮನಾಭಎನ್ನ | ಪಾಲಿಸು | ಪದ್ಮಾವತಿರಮಣಾ |ಪದ್ಮನಯನ ಮುಖ | ಪದ್ಮವ ತೋರಿಸುಪದ್ಮೋದ್ಭವನುತ | ಪದ್ಮಮಾಲಾಧರ ||ಶರಣು||2ತಿರುಪತಿ ಗಿರಿವಾಸಾ |ಕಾಣಿಕೆ| ಬರಲತಿ ಸಂತೋಷಾ |ಪರಿಪರಿ ವಿಧದಲಿ | ಹರಕೆಯ ತರಿಸುವ |ಉರಗಶಯನ ಗೋ | ವಿಂದನೆ ಶ್ರೀಹರಿ ||ಶರಣು||3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶ್ರೀಮಾಧವ ದಾಮೋದರ ನಾಮಾರ್ಚಿತಕಾಮಾಸೋಮಾನನದಾಮಾ ರಿಪುಭೀಮಾ ಎಚ್ಚರಿಕೆ ಪಬೃಂದಾರಕಬೃಂದಾರ್ಚಿತ ವಂದಿತ ಮುಚುಕುಂದಸುಂದರ ರಥ ವಂದಿತ ನವಕುಂದಾ ಎಚ್ಚರಿಕೆ 1ಗಂಗಾಪದರಂಗೇಶ ಭುಜಂಗಾರಿತುರಂಗಶೃಂಗಾರ ಶುಭಾಂಗ ಭವಭಂಗ ಎಚ್ಚರಿಕೆ 2ಮಾರಾರಿಸಮಾಧಿತವಾರಾಸಿಗಭೀರಸೂರ ಸುಕುಮಾರಾ ರಣಧೀರಾ ಎಚ್ಚರಿಕೆ 3ಶೇಷಾಚಲ ಭೂಷಾಹತದೋಷಾ ಮೃದುಭಾಷಾಭಾಷಾಪತಿಪೋಷಾ ದಶವೇಶಾ ಎಚ್ಚರಿಕೆ 4ಶ್ರೀಮದಖಿಲಾಂಡಕೋಟಿ ಬ್ರಹ್ಮಾಂಡನಾಯಕಆದಿಮಧ್ಯಾಂತರಹಿತ ಘನಸಾರವಿಲಸನ್ಭ್ರೂಮಧ್ಯಕಸ್ತೂರಿ ತಿಲಕೋಜ್ವಲಾ ದಿವ್ಯ ಪೀತಾಂಬರಧಾರೀಶ್ರೀಯಲಮೇಲ್‍ಮಂಗಾ ಮನೋಹರಶ್ರೀಭಾರ್ಗವಾಸರ ಭಜನೋಲ್ಲಾಸಾಶ್ರೀಚಾಮರಾಟ್ಪಾಲಿತ ಸತ್ಸಂಪ್ರದಾಯ ಸುಜ್ಞಾನಬೋಧಿನೀ ಸಮಾಜೋದ್ಧಾರಕಾ ಎಚ್ಚರಿಕೆ 5
--------------
ತುಳಸೀರಾಮದಾಸರು