ಒಟ್ಟು 27 ಕಡೆಗಳಲ್ಲಿ , 17 ದಾಸರು , 27 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ
ಯಾರಿಗುಸುರಲಿ ಸಾರತತ್ವ ವಿ ಚಾರ ಭವದೂರಾ ಪ ಚಾರು ಸೇರಿ ಮುಕ್ತಿಯ ಸೊರೆವಿಡಿವುದಿನ್ಯಾರಿಗುಸುರಲಿ ಅ.ಪ. ಶ್ರೀ ಗುರುನಾಥನ ಕಟಾಕ್ಷದಿ ತ್ಯಾಗಿಸಿ ಸಂಸಾರದ ಗೊಡವೆಯ ಯೋಗಿಯಂದದೊಳಿದ್ದು ಆಗಮ ನಿಗಮಾರ್ಥಕೆ ಸಿಲುಕದ ಯೋಗ ಘನವನೊಳಗೊಂಡಿಹ ಅಂಗದ ಯೋಗಾನಂದದುಯ್ಯಾಲೆಯ ತೂಗಿ ನೆಲೆಗೆ ನಿಂದಿಹ ನಿಜಸುಖವಿನ್ಯಾರಿಗುಸುರಲಿ 1 ಉದರದ ನಾಭಿಯ ನೀಳದ ತುದಿ ಹೃದಯ ವಾರಿಜದೊಳಗಿಪ್ಪ ಶಿವ ಸದನ ಲಿಂಗವ ಕಂಡು ಅದು ಇದು ಬೇರ್ಪಡಿಸದೆ ಹೃದಯದಿ ಚದುರ ಸಾಧು ಸತ್ಪುರುಷರ ಮತದಲಿ ಮುದದಿ ಮುಕ್ತಿ ಮಾನಿನಿಗೆ ಮಂಗಲ ಮದುವೆಯಾದ ಮನಸಿನ ಮಹಾ ಗೆಲವಿನ್ಯಾರಿಗುಸುರಲಿ 2 ನೆತ್ತಿಯೊಳ್ ಹೊಳೆ ಹೊಳೆವ ಚಿದಾ ದಿತ್ಯನ ಪ್ರಕಾಶವ ಕಂಡು ಚಿತ್ತದಿ ನಲಿದಾಡಿ ಉತ್ತಮಾನಂದಾತ್ಮರಸ ಸವಿ ಯುತ್ತ ಚಪ್ಪರಿದು ಶರಣರ ಮೊತ್ತದೊಡನೆ ಕುಣಿಕುಣಿದು ಬ್ರಹ್ಮನ ಗೊತ್ತು ತಿಳಿದ ಗುರುತಿನ ವಿಸ್ತರವಿನ್ಯಾರಿಗುಸುರಲಿ 3 ಕುಂದುವ ಕಾಯದ ಸುಖಿಕೆಳೆಸದೆ ಹೊಂದಿದ ಸರ್ವಾಂಗದ ಶೋಧಿಸಿ ಒಂದೇ ದೇವನೊಳಾಡಿ ವಂದಿಸಿ ಗುರುಹಿರಿಯರ ಚರಣಕೆ ಹೊಂದಿ ಹೊಂದಿ ಓಲಾಡುವ ಅರಿಗಳ ಬಂದಿಯೊಳಗೆ ಸಿಲುಕದೆ ಬ್ರಹ್ಮಾ ನಂದರಸಾಮೃತ ಸವಿದಿಹ ಸುಖವಿನ್ಯಾರಿಗುಸುರಲಿ 4 ಹಲವು ಯೋನಿಯೊಳಗೆ ಹೊರಳ ಕುಲ ಛಲ ಶೀಲವ ಮೂರಡಗಿಸಿ ಸುಲಭ ವಂಶದೊಳುಂಡು ಮಲಿನ ಮಾಯಾಮೋಹಕೆ ಸಿಲುಕದೆ ಬಲೆಯ ಛೇದಿಸಿ ಮುಕ್ತಾಂಜ್ಯದ ಬಗೆ ಇನ್ಯಾರಿಗುಸುರಲಿ 5
--------------
ಭಟಕಳ ಅಪ್ಪಯ್ಯ
ವೈದಿಕ ಧರ್ಮಧ್ವಜ ಫಡಫಡಿಸಲ ಗಗನದೊಳೆತ್ತರದಿವೈದಿಕ ತತ್ವಜ್ಞಾನ ಪ್ರಕಾಶವು ಪಸರಿಸಲೀ ಜಗದಿ 1ಜ್ಞಾನ ಭಕ್ತಿ ವೈರಾಗ್ಯ ಧೈರ್ಯ ಔದಾರ್ಯ ತಪಶ್ಚರ್ಯದಿನ ದಿನ ಬೆಳೆಯಲಿ ದಾನಧರ್ಮಗಳು ದಯಾ ಸತ್ಯ ಶೌರ್ಯ 2ದುಷ್ಟ ಶತ್ರುಗಳ ಸದ್ದು ಅಡಗಲಿ ಜಗನಿರ್ಭಯ'ರಲಿಭ್ರಷ್ಟಾಚಾರವು ನಿರ್ಮೂಲಾಗಲಿ ಸತ್ಯಕ್ಕೆ ಜಯ'ರಲಿ 3ವರ್ಣಾಶ್ರಮಗಳ ಧರ್ಮದ ಮರ್ಮವು ತಿಳಿಯಲಿ ಜಗಕೆಲ್ಲಾಕರ್ಮಾ ಕರ್ಮ 'ಕರ್ಮ ಮರ್ಮವನು ಅರಿಯಲಿ ಜನರೆಲ್ಲಾ 4ಜಯ ಜಗದೀಶ್ವರರೆಂಬ ನಿನಾದವು ತುಂಬಲಿ ಜಗದಲ್ಲಿಜಯ ಭೂಪತಿ'ಠ್ಠಲ ಸರ್ವೋತ್ತಮ ಜಯಹರಿ ಎಂದೆನಲಿ 5
--------------
ಭೂಪತಿ ವಿಠಲರು
ಶ್ರೀ ರಾಘವೇಂದ್ರರು ಯೋಗಿ ಕುಲವರ ಮಕುಟ ಗುರು ಶ್ರೀರಾಘವೇಂದ್ರನ ಭಜಿಸಿರೋ ಪ ಮೋದತೀರ್ಥ ಪಯೋಧಿ ಚಂದಿರಸಾಧುಜನ ಸತ್ಕುಮುದಕೇಐದು ಆನನವಾಗಿಹನು ದು ರ್ವಾದಿ ಗಜಸಮುದಾಯರೇ 1 ದೂಷಿಸುವ ಜನರುಗಳ ಗರ್ವ ಅಶೇಷ ಪರಿಹಾರಗೈಸುವಾ 2 ದಿನಪನಂದದಿ ಕಾಂತಿಬೃಂದಾ ಬನದೊಳಿದ್ದು ಪ್ರಕಾಶವಾಅಣುಗರಿಗೆ ಸಂತೃಪ್ತಿ ಸುಖವನುಅನವರತ ಪೂರೈಸುವಾ 3 ವ್ಯಾಕ್ತರಾಗಿಹ ಅಖಿಳರಿಗೆ ಫಲಪ್ರಾಪ್ತಿಗೋಸುಗ ಚರಿಸುವಾ 4 ಆಪ್ತರಿಲ್ಲದೆ ಈತನೇಯೆನಗಾಪ್ತನನುದಿನವಾಗುವಾ 5 ಕೋಲ ತನಯೆಯ ತೀರದಲಿ ಹೊ-ನ್ನಾಳಿಯಲಿ ವಿಹರಿಸುವಾಶೀಲ ಗೋಪತಿವಿಠಲನ ಕೃಪೆಗಾಲಯನು ಯೆಂದೆನಿಸುವಾ6
--------------
ಗೋಪತಿವಿಠಲರು
ಸೈ ಸೈ ಸದ್ಗುರುವಿನ ದಯದಿಂದೆಲ್ಲಾ ಮೈ ಮರೆತೆನೆ |ಐ ಅದು ಏನು ಕಾರಣ ಮೈ ಮರೆದು ಮತ್ತುಳಿದೆನೆ | ಕೈ ಕೈ ತಲೆ ಮೇಲಿಡಲು ವೈರಾಗ್ಯ ಪಡೆದೆನೆ |ಥೈ ಥೈಯಂತ ಕುಣಿಸಿ ತನ್ನಂತೆ ತಾ ಮಾಡಿದನೆ ¥ ನಾನೂ ನೀನೆಂಬುದು ಮರೆಸಿ ತಾನೇ ತಾನಾದನೆ |ಮಾನ ಅಪಮಾನ ಎರಡೂ ಪಾನ ಮಾಡಿದನೆ |ಜ್ಞಾನ ಮಾರ್ಗವ ತೋರಿ ಧ್ಯಾನ ಹೇಳಿದನೆ |ಖೂನ ತೋರಿಸಿ ವಿನೋದ ಮಾಡಿದನೆ 1 ನಾದ ಶಬ್ದದಿ ಮನಲುಬ್ಧ ಮಾಡಿದನೆ |ವಾದಿ ದುರ್ವಾದಿಗೂಡ ಕಾದಿ ಗೆಲಿಸಿದನೆ |ಭೇದಾಭೇದವ ಅರಿಯದ ಹಾದೀ ತೋರಿದನೆ |ಈದ ಹುಲಿಯಂಥ ಮನಸು ಸಾದ ಮಾಡಿದನೆ 2 ಭೃಕುಟಿ ಮಧ್ಯದಿ ವಸ್ತು ಪ್ರಕಟ ಮಾಡಿದನೆ | ಆಸನ ದ್ವಾರ ಕವಾಟವ ಬಲಿಸಿ ಶ್ವಾಶಗಳೆಲ್ಲಾ ನಿಲಿಸಿದನೆ | ನಾಸಿಕಾಗ್ರದ ಕೊನೆಯ ಮೇಲೆ ಭಾನು ಪ್ರಕಾಶವ ತೋರಿದನೆ | ಈಶನು ದತ್ತ ಮಹೇಶ ದಿಗಂಬರ ಘೋಷದೊಳಗೆ ಮನವೀಸಿದನೆ 3
--------------
ಭೀಮಾಶಂಕರ
ಹೊಯ್ಯಂದ ಡಂಗುರವ ಪರಂಜ್ಯೋತಿ ಪ್ರಭೆಯ ಭಾಸಿಸುವದು ನೋಡಿ ಹೊ ಅರವ್ಹೆ ಅಂಜನವಾಗಿ ದೋರುತಲದಕೊ ಹೊ ಪರಮ ಪ್ರಕಾಶವು ಪರಿಣಾಮಿಸಿ ನೋಡಿ ಹೊ 1 ಅನಿಮಿಷನೇತ್ರವು ಬಾಗಿಸುವದು ನೋಡಿ ಹೊ ಮನವಿಗೆ ಆರುವಾಗಿ ದೋರುತಲದಕೊಹೊ ನೆನವ ಘನವಾಗಿ ಸೂಸೂತಲಿದಕೊ ಹೊ ಕನಸು ಕಥೆ ಅಲ್ಲ ಕಣ್ಣಾರ ಕಾಂಬೋದು ಹೊ 2 ನಿದ್ರಸ್ಯಕರ್ಣದ ಸಾದ್ಯಶ್ಯ ನೋಡೆಂದು ಹೊ ದ್ವಾದಶ ನಾದವು ಸಾಧಿಸಿ ಕೇಳುದು ಹೊ ಗಾದೆಯ ಮಾತಲ್ಲ ಭೇದಿಸಿ ತಿಳಿಯುದು ಹೊ ಓದುವ ಒಂಕಾರ ನಾದವು ತಿಳಿವದು ಹೊ 3 ಪ್ರಣಮ್ಯ ಮಂತ್ರದ ಪ್ರಚೀದಿನೋಡೆಂದು ಹೊ ಹನ್ನೊಂದು ಹತ್ತುಸಾವಿರದ ನೂರೆಂದು ಹೊ ಕಣ್ಣು ಮುಚ್ಚು ಕುಳಿತು ಮಣಿಯೆಣಿಸುವದಲ್ಲ ಹೊ ಪುಣ್ಯಗತಿಗೈದಿಸುವ ಜಪವಿದು ಹೊ 4 ವಿಶ್ವಹೊಳಗಲ್ಲ ಭಾಸ್ಕರ ಗುರುತಾನೆ ಹೊ ಆಶಿಗೈವವಗಿನ್ನು ಭಾಸಿಸಲರಿಯನು ಹೊ ಮೋಸ ಮುಕುರವಲ್ಲ ಭಾಸಿವ ಪಲ್ಲಟವಲ್ಲ ಹೊ ಹೊಯ್ಯೆಂದ ಡಂಗುರವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನೆಂದರೇನು ನೀನೆನ್ನ ಕಾಯೊ-|ನೀನೆ ನನಗೆಂದೆಂದು ತಂದೆ-ತಾಯೊ....................... ಪಆಪತ್ತು ಕಾಲಕ್ಕೆ ಅನಂತ ನೀ ಕಾಯೊ |ತಾಪಜ್ವರಕೆ ತ್ರಿವಿಕ್ರಮನೆ ಕಾಯೋ ||ಭೂಪತಿಯು ಮುನಿದರೆ ಶ್ರೀಪತಿಯೆ ನೀ ಕಾಯೊ |ವ್ಯಾಪಾರ ಧರ್ಮವನು ಯದುಪತಿಯೆ ನೀ ಕಾಯೊ.............. 1ಸರುಪ ಸುತ್ತಿದರೆ ಸರ್ವೋತ್ತಮನೆ ನೀ ಕಾಯೊ |ಪರಿಪರಿಯ ದೋಷಗಳಪದ್ಮನಾಭಕಾಯೊ ||ಹರಕು ಸಂಸಾರವನುಹರಿಬಂದು ನೀ ಕಾಯೊ |ದೊರಕದೀ ವೇಳೆಯಲಿ ದೊರೆ ನೀನೆ ಕಾಯೊ....................... 2ನರರು ಮುನಿದಿರಲು ನಾರಾಯಣನೆ ನೀ ಕಾಯೊ |ಪುರಬೆನ್ನುಗೊಳಲು ಪುರುಷೋತ್ತಮನೆ ನೀ ಕಾಯೊ |ಅರಿಯು ಅಡ್ಡಾದರೆ ಅಚ್ಯುತನೆ ನೀ ಕಾಯೊ ||ಕರಕರೆಯ ಸಂಸಾರ ಕೃಷ್ಣ ನೀ ಕಾಯೊ....................... 3ಮದಮತ್ಸರವನು ಮಧುಸೂದನನೆ ನೀ ಕಾಯೊ |ಮದಬಂದ ವೇಳೆಯಲಿ ಮಾಧವನೆ ಕಾಯೊ ||ಹೃದಯದಾ ಕಪಟವ ಹೃಷಿಕೇಶ ನೀ ಕಾಯೊ |ಒದಗಿದ ಕಲ್ಮಷವ ವಾಸದೇವ ಕಾಯೊ....................... 4ಕಾರ್ಪಣ್ಯ ದೋಷವ ಸರ್ಪಶಯನನೆ ಕಾಯೊ |ಒಪ್ಪುವ ಪ್ರಕಾಶವ ಕೇಶವನೆ ಕಾಯೊ |ಅಪ್ಪ ತಿರುಮಲರಾಯ ಪುರಂದರವಿಠಲನೆ |ಒಪ್ಪಿಅನವರತನಿಶ್ಚಿಂತೆಯನು ಕಾಯೊ.......................*5
--------------
ಪುರಂದರದಾಸರು
ಕಂಡೆ ತಿರುಪತಿ ವೆಂಕಟೇಶನಕಾರಣಾತ್ಮಕಸಾರ್ವಭೌಮನಕಾಮಿತಾರ್ಥವನೀವ ದೇವನ ಕರುಣನಿಧಿಯೆಂದೆನಿಸಿ ಮೆರೆವನ ಪಕೋಟಿ ಸೂರ್ಯ ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನುನೋಟಕ್ಕಚ್ಚರಿಯೆನಿಪ ನಗೆಮೊಗನೊಸಲೊಳಗೆ ತಿರುಮಣಿಯ ಕಂಡೆನುಸಾಟಿಯಿಲ್ಲದ ಶಂಖ-ಚಕ್ರವ ಚತುರ ಹಸ್ತದಲೀಗ ಕಂಡೆನುಬೂಟಕದ ಮಾತಲ್ಲ ಕೇಳಿ-ಭೂರಿದೈವದ ಗಂಡನಂಘ್ರಿಯ 1ತಪ್ಪುಗಾಣಿಕೆ ಕಪ್ಪುಗಳನು ಸಪ್ತಲೋಕಗಳಿಂದ ತರಿಸುವಉಪ್ಪು ವೋಗರವನ್ನು ಮಾರಿಸಿಉಚಿತದಿಂದಲಿ ಹಣವ ಗಳಿಸುವ ||ಇಪ್ಪತ್ತು ದುಡ್ಡಿಗೆ ಸೇರು ತೀರ್ಥವ ಒಪ್ಪದಿಂದಕ್ರಯ ಮಾಡಿ ಕೊಡಿಸುವಸರ್ಪಶಯನನ ಸಾರ್ವಭೌಮನ ಅಪ್ಪವೆಂಕಟರಮಣನಂಘ್ರಿಯ 2ಉರದಿ ಶ್ರೀದೇವಿ ಇರಲು ಕಂಡೆನುಉನ್ನತದ ಕೌಸ್ತುಭವ ಕಂಡೆನುಗರುಡಕಿನ್ನರನಾರದಾದಿಗಳಿರಲು ಎಡಬಲದಲ್ಲಿ ಕಂಡೆನು ||ತರತರದಿ ಭಕ್ತರಿಗೆ ವರಗಳ ಕರೆದುಕೊಡುವುದ ನಾನು ಕಂಡೆನುಶರಧಿಶಯನನ ಶೇಷಗಿರಿವರಸಿರಿಪುರಂದರವಿಠಲನಂಘ್ರಿಯ3
--------------
ಪುರಂದರದಾಸರು
ಜಯಜಯ ಜಲದುರ್ಗೆ ತ್ರಿಜಗನ್ಮಯೆ ಸದ್ಗುಣವರ್ಗೆ ಪ.ದಯಾಸಾಗರೆ ದಾರಿದ್ರ್ಯದುಃಖ ಭವ-ಭಯನಾಶಿನಿ ಮಣಿಮಯಕೃತಭೂಷಿಣಿ ಅ.ಪ.ಗಜವದನನ ಮಾತೆ ಸುಜನ-ವ್ರಜಸತ್ಫಲದಾತೆಕುಜನಭಂಜನಿ ನಿರಂಜನಿ ಶೈಲಾ-ತ್ಮಜೆ ಮಹೋಜೆ ನೀರಜದಳಲೋಚನಿ 1ಇಂದ್ರಾದ್ಯಮರನುತೆ ಪೂರ್ಣಾನಂದೆ ನಂದಜಾತೆಚಂದ್ರಾಸ್ಯೇ ಯೋಗಿವೃಂದವಂದಿತೆ ಮೃ-ಗೇಂದ್ರವಾಹಿನಿ ಮದಾಂಧರಿಪು ಮಥನಿ 2ಅಂಗಜಶತರೂಪೆ ಸದಯಾ-ಪಾಂಗೆ ಸುಪ್ರತಾಪೆಗಂಗಾಧರವಾಮಾಂಗಶೋಭೆ ಸಾ-ರಂಗನೇತ್ರೆ ಶ್ರೀರಂಗಸಹೋದರಿ 3ದಾಸಜನರ ಪೋಷೆ ರವಿಸಂ-ಕಾಶೆ ತ್ರಿಜಗದೀಶೆವಾಸುದೇವನ ಸ್ಮರಣಾಸಕ್ತಿಯ ಕೊಡುಭಾಸುರಜ್ಞಾನಪ್ರಕಾಶವಿಲಾಸಿನಿ 4ಸೌಖ್ಯವು ಭಕ್ತರ್ಗೆ ಸಲಿಸಲುಸೌಖ್ಯವು ನೀ ಭರ್ಗೆಲಕ್ಕುಮಿನಾರಾಯಣನ ಭಗಿನಿ ನಿ-ರ್ದುಃಖಪ್ರದಕಟಿಲಾಖ್ಯಪುರೇಶ್ವರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀರಾಮ ಜಯರಾಮ ಜಯತುಜಯತು ಸೀತಾರಾಮ ರಾಮ ಚರ-ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ-ಣಾರಿ ನೀನಲ್ಲದೆ ಯಾರಿಲ್ಲಗತಿಜಯ ರಾಮ ರಾಮ1ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ-ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ-ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ-ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ-ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ-ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ-ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4ಮುಖ್ಯ ಸಚಿವ ಮಹಾ ಮುಖ್ಯಪ್ರಾಣನುಸೀತಾರಾಮ ರಾಮ ದುಷ್ಟ-ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ-ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ-ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮವಾಸವಮುಖ್ಯ ವಿಬುಧಾಸುರನುತಸೀತಾರಾಮ ರಾಮ ಸಾಧು-ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ-ಜ್ಞಾನ ಭಕ್ತಿಭಾಗ್ಯ ನೀನಿತ್ತುಪೊರೆಜಯ ರಾಮ ರಾಮಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ-ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮಬತ್ತಿಹೋಗಲಿ ಮೋಹದುತ್ತುಂಗಾರ್ಣವಸೀತಾರಾಮ ರಾಮ ಪರ-ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ-ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ-ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ-ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ-ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ-ಸನ್ನ ನಿನ್ನ ಸ್ಮರಣೆಯನಿತ್ತುಪೊರೆಜಯ ರಾಮ ರಾಮಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣುಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12ನಿತ್ಯನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ-ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ-ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು-ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ-ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14ಅಕುಟಿಲಗುಣಗಳ ಪ್ರಕಟಿಸೆನ್ನೊಳುಸೀತಾರಾಮ ರಾಮ ವಾಯು-ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮಲಕ್ಷುಮಿನಾರಾಯಣ ತ್ರಿಕಣಕುದ್ಧಾಮನೆಸೀತಾರಾಮ ರಾಮ ಬ್ರಹ್ಮಾ-ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ