ಒಟ್ಟು 100 ಕಡೆಗಳಲ್ಲಿ , 30 ದಾಸರು , 93 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಂಡಾಡುವರ ಪ್ರಿಯನ ವಿಠ್ಠಲನ ಪ ಸಮಚರಣ ಭುಜನ ನಿಗಮಾ ಗಮತತಿಗೋಚರನಾ ಅಮಿತ ಪರಾಕ್ರಮನ ರುಕ್ಮಿಣಿ ರಮಣ ರವಿಕ್ಷಣನಾ ವಿಠ್ಠಲನ 1 ಕಾಮಿತಾರ್ಥ ಪ್ರದನ ಶ್ರೀ ತುಲಸೀ ಧಾಮ ವಿಭೂಷಿತನ ಪತಿ ಪಾಲನ ತ್ರಿಭುವನ ಸ್ವಾಮಿ ಚಿತ್ಸುಖಮಯನ ವಿಠ್ಠಲನ 2 ಗೋಕುಲ ಪೋಷಕನ ಮುನಿ ಪುಂಡ ರೀಕಗೋಲಿದು ಬಂದನ ಲೋಕವಿಲಕ್ಷಣನ ಪ್ರಣತರ ಶೋಕವಿನಾಶಕನ ವಿಠ್ಠಲನ 3 ವಿಧಿ ವಿಹ ಗೇಂದ್ರ ಮುಖಾರ್ಚಿತನ ಇಂದ್ರೋತ್ಪಲನಿಭನ ಗುಣಗಣ ಸಾಂದ್ರ್ರ ಸರ್ವೋತ್ತಮನ ವಿಠ್ಠಲನ 4 ಶ್ವೇತವಾಹನ ಸಖನ ಸತಿಗೆ ಪಾರಿ ಜಾತನ ತಂದವನಾ ವೀತ ಶೋಕ ಭಯನಾ ಶ್ರೀ ಜಗ ನ್ನಾಥ ವಿಠಲರೇಯನಾ 5
--------------
ಜಗನ್ನಾಥದಾಸರು
ಕ್ಷಿತಿಭಾರ ಹರಣನೇ ಶ್ರೀಜಾನಕೀ ಪತಿಯೇ |ಶಿತಿಕಂಠ ಸಖ ಹರಿಯೇ ಪ ಅತಿ ವಿಮಲನಂತಾರ್ಕ ನಿಭ ಪದಾಗತಿ ವಹನೆ ಪೊರೆ ಶ್ರೀರಾಮಚಂದ್ರಾನೇ ಅ.ಪ. ಪರಮ ಮಂಗಳ ನಾಮ | ಪರಿಹರಿಸಿ ಸಂಸೃತಿಯನಿರುತ ಮಹದಾನಂದ | ಪ್ರದವೆನಿಪುದೋ ||ಮರುತಾಂತರಾತ್ಮ ತವ | ನಾಮ ಸುಧೆ ಸುಖ ಸವಿದುಇರುವಂತೆ ಮಾಡಯ್ಯ | ಕರುಣ ನಿಧಿಯೇ 1 ಕಮಲ ಸಂಭವನಯ್ಯ | ಸುಮನಸರಿಗತಿ ಪ್ರೀಯಕಮಲದಳ ನೇತ್ರನೇ | ಕಾಮಿತ ಪ್ರದನೇ ||ಭ್ರಮ ಮೂರ ಪರಿಹರಿಸೊ | ಕಮಲಾಪ್ತ ಕುಲಜನೇಶಮದಮಾನ್ವಿತನೆನಿಸಿ | ವಿಮಲ ಮತಿ ಈಯೋ 2 ದಶಕಂಠ ಹರ ನಿನ್ನ | ಯಶವನ್ನೆ ಪೊಗಳಲುಶೇಷ ವಿಪ ರುದ್ರಾದಿ | ಗಸದಳವು ಇಹುದೂ |ಕಸರು ಕರ್ಮಾದಿಗಳ | ಕೆಸರು ಕಳೆ ಪ್ರಾರ್ಥಿಸುವೆಅಸಮ ಮಹಿಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಗುರು ಮಧ್ವೇಶ ವಿಠಲ | ಪೊರೆಯ ಬೇಕಿವಳ ಪ ಪರಮ ಭಕುತಿಲಿ ನಿನ್ನ | ದಾಸ್ಯ ಕಾಂಕ್ಷಿಪಳ ಅ.ಪ. ಹರಿಗುರೂ ಸದ್ಭಕ್ತಿ | ಹಿರಿಯರಲಿ ಅಸಕ್ತಿನಿರುತ ಕರುಣಿಸಿ ಇವಳ | ಪೊರೆಯೊ ಹರಿಯೇ |ಅರುಹ ಲೇನಿಹುದಿನ್ನು | ಸರ್ವಜ್ಞ ನೀನಿರುವೆಕರುಣದಲಿ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ 1 ಕೃದ್ಧಖಳ ಜನರನ್ನು | ಪ್ರಧ್ವಂಸ ಮಾಡುತಲಿಬುದ್ಧಿಯೊಳು ನೀ ನಿಂತು | ವಿದ್ಯೆ ಪ್ರದನಾಗೋಮಧ್ವಮತ ಪದ್ಧತಿಗಳುದ್ಧರಿಸಿ ಇವಳಲ್ಲಿಪದ್ಮನಾಭನೆ ಪೊರೆಯೊ | ಮಧ್ವಾಂತರಾತ್ಮಾ 2 ಕಂಸಾರಿ ಹರಿಯೇ 3 ನಿನ್ನ ಪ್ರೇರಣೆಯಂತೆ | ಕನ್ಯೆಗಂಕಿತವಿತ್ತೆನನ್ನೆಯಿಂ ಪೊರೆಯಿವಳ ಪನ್ನಂಗ ಶಯನಾ |ನಿನ್ನಂಥ ಕರುಣಾಳು | ಅನ್ಯರಾರಿಹರಯ್ಯಪನ್ನಗಾರಿಯ ವಾಹ | ಅನ್ನಂತ ಮಹಿಮಾ 4 ಪಾವನಾತ್ಮಕ ದೇವ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಶರ್ವವಂದ್ಯಾ ಭಾವದೊಳು ಮೈದೋರಿ | ಕಾವ್ಯದನೆ ಬಿನ್ನಪವಾನೀ ವೊಲಿದು ಸಲಿಸೊ ಗುರು | ಗೊವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರ್ವಂತರ್ಗತ ಗೋಪಾಲ ಪಾಹಿ ಸರ್ವಪಾಲಕ ಶಿರಿಲೋಲ ಪ ಶರ್ವಸುರಗಂಧರ್ವ ಮುನಿಕುಲ Àಸರ್ವಸೇವಿತ ಗರ್ವರಹಿತನೆ ಅ.ಪ ರಾಮಾಕೃಷ್ಣ ವ್ಯಾಸರೂಪದಿಂದಾ ಮಾಮನೋಹರ ಮಾಡೆಕೃಪಾ ಶ್ರೀಮಧ್ವ ಮೊದಲಾದ ಆ ಮಹಾಮುನಿಗಳ ಸ್ತೋಮಸಂತತ ಮಹಾಪ್ರೇಮಮನದಲಿದ್ದು ಭೂಮಿತಳದೊಳಗಖಿಳಜನರಿಗೆ ಕಾಮಿತಾರ್ಥವ ಸಲಿಸಿ ತಾ ನಿ ಸ್ಸೀಮ ಮಹಿಮೆಯ ತೋರಿ ಇವರಿಗೆ ಆ ಮಹತ್ತರ ಕೀರ್ತಿಕೊಡುತಿಹ 1 ಆವಾವಜನುಮಗಳಲ್ಲಿ ಜಗಕೆ ಜೀವನಪ್ರದನಾಗಿ ಇಲ್ಲೀ ಶ್ರೀವರ ಸರ್ವೇಶ ಜೀವೇಶ ಸುರವಂದ್ಯ ದೇವ ನಿನ್ನಯ ಪಾದಸೇವಾವ ಸಲಿಸೆಂದೆ ಕೋವಿದರ ಕುಲಮಣಿಗಳೊಳಗೆ ಭಾವಿಪುದು ಸನ್ಮನವನಿತ್ತು ಗೋವಿದಾಂಪತೆ ಙÁ್ಞನಗಮ್ಯನೆ ಪಾವನಾತ್ಮಕ ಪರಮ ಪಾಲಿಸೋ 2 ದಾತ ಶ್ರೀ ಗುರುಜಗನ್ನಾಥವಿಠಲ ನೀ ಧಾತನಾಂಡಕೆ ಮುಖ್ಯನಾಥಾ ಧಾತಪ್ರಮುಖಸುರವ್ರಾತಸನ್ನುತಪಾದ ಪಾಥೋಜಯುಗಳ ಸಂಭೂತ ರಜೋದಿಂದ ಧೂತಪಾಪನ ಮಾಡುವದು ಅ ದ್ಭೂತ ಙÁ್ಞನ ವಿರಕುತಿ ಸಂಪ ದ್ಪ್ರಾತ ಪಾಲಿಸೊ ಹೇ ಮಹದ್ಭುತ ದಾತ ಎಂಬೆನೊ ನಮೋ ನಮೋ 3
--------------
ಗುರುಜಗನ್ನಾಥದಾಸರು
ಗೋಪಗೋವಿಂದ ವಿಠಲ | ನೀ ಪಾಲಿಸಿವಳಾ |ಸ್ವಾಪಜಾಗ್ರತ್ಸುಪ್ತಿ ಸರ್ವ ಕಾಲದಲೀ ಪ ಪತಿಸುತರು ಭಾಂದವರು | ಹಿತದಿಂದ ಸೇವಿಸುತಕೃತಿಸರ್ವ ನಿನಸೇವೆ | ಮತಿ ನೀಡೊ ಹರಿಯೇ |ಅತುಳ ವೈಭವ ತೋರಿ | ಕೃತಕಾರ್ಯಳೆಂದೆನಿಸುಕ್ಷಿತಿರಮಣ ನಿನಗಿದುವೆ ಪ್ರಾರ್ಥಿಸುವೆ ದೊರೆಯೇ 1 ಮೋದಮುನಿ ಮತ ದೀಕ್ಷೆ | ಸಾದರದಿ ಕೊಟ್ಟೈದುಭೇದಗಳ ತಿಳಿಸುತ್ತ | ಕಾದುಕೊ ಇವಳಾನೀದಯದಲಂಕಿತವ | ಓದಿಸಿಹೆ ತೈಜಸನೆಸಾದಿಸುವೆ ಅದನೀಗ | ಹೇ ದಯಾವರನೇ 2 ಸಂಚಿತ ಕಳೆವ | ಧರ್ಮ ನಿನ್ನದೊ ಸ್ವಾಮಿಭರ್ಮ ಗರ್ಭನ ಪಿತನೆ | ಕರ್ಮನಾಮಕನೇ ನಿರ್ಮಮತೆ ಮನದಿ ನಿ | ಷ್ಕಾಮ ಕರ್ಮದಲಿವಳಪೇರ್ಮೆಯಲ್ಲಿರಿಸೆಂದು | ಸ್ವಾಮಿ ಪ್ರಾರ್ಥಿಸುವೇ 3 ಸರ್ವಜ್ಞ ಸರ್ವೇಶ | ಸರ್ವದಾ ತವನಾಮಸರ್ವತ್ರ ಸ್ಮøತಿಯಿತ್ತು | ಸರ್ವಾಂತರಾತ್ಮದುರ್ವಿಭಾವ್ಯನೆ ದೇವ | ದರ್ವಿ ಜೀವಿಯ ಕಾವಸರ್ವ ಕರ್ತೃವು ನೀನೆ | ಶರ್ವ ಸನ್ನುತನೇ 4 ಸೃಷ್ಟಿಕರ್ತನೆ ದೇವ | ಕಷ್ಟಗಳ ಪರಿಹರಿಸಿಶಿಷ್ಟಳ್ಹøತ್ಕಂಜದಲಿ | ಇಷ್ಟ ಪ್ರದನಾಗೀಇಷ್ಟ ಮೂರ್ತಿಯ ಕೋರಿ | ಹೃಷ್ಟಳನ ಮಾಡೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಗೋವಿಂದಾಷ್ಟೋತ್ತರ ನಾಮಾವಳಿ ಹೃದ್ಗತ ತಮನಾಶ ಗೋವಿಂದ | ಎನ್ನಹೃದ್ಗುಹದೊಳು ತೋರೋ ಗೋವಿಂದ ಪ ಅಲವ ಮಹಿಮ ಹರಿ ಗೋವಿಂದ | ನಮ್ಮಅಲವ ಭೋದರ ಪ್ರೀಯ ಗೋವಿಂದ ||ಆಲಯದೊಳು ನಿಲ್ಲೊ ಗೋವಿಂದ | ಹೃ-ದಾಲಯದಲಿ ತೋರೊ ಗೋವಿಂದ 1 ಇಕ್ಷುಚಾಪನ ಪಿತನೆ ಗೋವಿಂದ | ನೀನಿಕ್ಷುಧನ್ವಾರಿ ನುತ ಗೋವಿಂದ ||ಈಕ್ಷಿಸೋ ಕರುಣದಿ ಗೋವಿಂದ | ನಿ-ನ್ನೀಕ್ಷಿಸ ಲೋಶವೇನೊ ಗೋವಿಂದ 2 ಉರಗ ಶಯನನೆ ಗೋವಿಂದ | ನಮ್ಮಉರಗಾಯಿ ವೈಕುಂಠ ಗೋವಿಂದ ||ಊರೂರು ಚರಿಸಿದೆ ಗೋವಿಂದ | ನಿ-ಮ್ಮೂರಿಗೆ ಕರೆದೊಯ್ಯೊ ಗೋವಿಂದ 3 ಋಗಾದಿ ತ್ರಯಿಮಯಿ ಗೋವಿಂದ | ಹರಿಋಗ್ವಿನುತನೆ ಗುರು ಗೋವಿಂದ ||Iೂಕ್ಷ ಸದ್ವಿನುತನೆ ಗೋವಿಂದ | ಹರಿIೂಕಾರ ಪ್ರತಿಪಾದ್ಯ ಗೋವಿಂದ 4 ಏತತ್ತೆನಿಸಿಯು ಹೃದ್ಗ ಗೋವಿಂದ | ನೀ ನೇತಕೆ ಕಾಣಿಯಾಗಿಹೆ ಗೋವಿಂದ ||ಐತದಾತ್ಮ್ಯಕ ಸರ್ವ ಗೋವಿಂದ | ನೀನೈತರುವುದು ಮನಕೆ ಗೋವಿಂದ 5 ಸತಿ ಗೋವಿಂದ | ನೀನೌತು ಕೊಂಡಿಹದೇಕೊ ಗೋವಿಂದ 6 ಅಂಗಾಂಗಿ ಭಾವದಿ ಗೋವಿಂದ | ನೀನಂಗಾಂಗದಿ ಕ್ರೀಡಿಪೆ ಗೋವಿಂದ ||ಅಹರರ್ಹಮನದಲಿ ಗೋವಿಂದ | ನೀಅಹರಹರ್ವಿಹರಿಸೋ ಗೋವಿಂದ 7 ಕಪಿಲಾತ್ಮ ಶ್ರೀ ಹರಿ ಗೋವಿಂದ | ನಮ್ಮಕಪಿವರ ಪೂಜ್ಯನೆ ಗೋವಿಂದ ||ಖಪತಿಗಮನ ಗುರು ಗೋವಿಂದ | ಜಗಖರ್ಪರ ಸೀಳಿದ ಗೋವಿಂದ 8 ಗರುಡಧ್ವಜನೆ ಬಾರೋ ಗೋವಿಂದ | ಜಗಂಗರುವವ ಕಳೆಯೊ ಗೋವಿಂದ ||ಘರ್ಮಾಸ ಸಮಂತಾತು ಗೋವಿಂದ | ಸೂಕ್ತಘರ್ಮಕ್ಕೆ ವಿಷಯನೆ ಗೋವಿಂದ 9 ಓಂಕಾರ ಪ್ರತಿಪಾದ್ಯ ಗೋವಿಂದ | ಪಾ-ಙ್ತವು ಜಗವೆಲ್ಲ ಗೋವಿಂದ ||ಚರ್ಮದೊಳುದ್ಗೀಥ ಗೋವಿಂದ | ಇದ್ದುಚರ್ಮ ಲಾವಣ್ಯದ ಗೋವಿಂದ 10 ಛಂದಸ್ಸಿನಿಂಛನ್ನ ಗೋವಿಂದ | ನಾಗಿಛಂದೋಭಿಧನೆನಿಪೆ ಗೋವಿಂದ ||ಜಂಗಮ ಚರವ್ಯಾಪ್ತ ಗೋವಿಂದ | ಎಮ್ಮಜಂಗುಳಿಗಳ ಕಳೆಯೊ ಗೋವಿಂದ 11 ಝಷ ರೂಪಿ ಕಮಠನೆ ಗೋವಿಂದ | ನಮ್ಮಝಷ ಕೇತುಪಿತ ಕಾಯೊ ಗೋವಿಂದ ||ಜ್ಞಾನ ಜ್ಞೇಯ ಜ್ಞಾತೃ ಗೋವಿಂದ | ಪ್ರ-ಜ್ಞಾನ ಘನನೆನಿಪೆ ಗೋವಿಂದ 12 ಟಂಕಿ ಎಂಬುವನೆ ಗೋವಿಂದ | ನಮ್ಮಾಟಂಕವ ಕಳೆಯೋ ಗೋವಿಂದ ||ಠಕ್ಕು ಠವಳಿಗಾರ ಗೋವಿಂದ | ನಮ್ಮಠಕ್ಕಸಿ ಹಾಕದಿರು ಗೋವಿಂದ 13 ಡರಕೊ ಡರ್ಯಾಭಿಧ ಗೋವಿಂದ | ನಮ್ಮೆಡರನು ಪರಿಹರಿಸೊ ಗೋವಿಂದ ||ಢಣ ಢಣ ನಾದದಿ ಗೋವಿಂದ | ಬಲುಢಣಿರೆಂಬೊ ವಾದ್ಯದಿ ಗೋವಿಂದ 14 ಣನಾಮ ವಾಚ್ಯನೆ ಗೋವಿಂದ | ಪ್ರ-ಣಮನ ಮಾಡುವೆನೋ ಗೋವಿಂದ ||ತರುಣಾರ್ಕ ಪ್ರಭೆಯ ಗೋವಿಂದ | ನಮ್ಮತರುಣಿ ದ್ರೌಪದಿ ವರದ ಗೋವಿಂದ 15 ಥರಥರವರ್ಣನೆ ಗೋವಿಂದ | ಬಲ್ಪ್ರಮಥನ ಶೀಲನೆ ಗುರು ಗೋವಿಂದ ||ದರ ಕಂಬುಧರನೆ ಗೋವಿಂದ | ತ್ರಿ-ದಶರ ಪರಿಪಾಲ ಗೋವಿಂದ 16 ಧರ್ಮಸು ಗೋಪ್ತನೆ ಗೋವಿಂದ | ಸ-ಧ್ದರ್ಮ ನಾಮಕ ಗುರು ಗೋವಿಂದ ||ನರೆಯಣಾಭಿಧ ಗುರು ಗೋವಿಂದ | ನಮ್ಮನರಸಖನೆನಿಸಿಹೆ ಗೋವಿಂದ 17 ಪರಮ ಪುರುಷ ಗುರು ಗೋವಿಂದ | ಕಾಯೊಪರಮಾನಂದ ಪ್ರದನೆ ಗೋವಿಂದ ||ಫಲರೂಪನು ನೀನೆ ಗೋವಿಂದ | ಇದೆಫಲಿತಾರ್ಥವೊ ಗುರು ಗೋವಿಂದ 18 ಬಗೆ ಬಗೆ ಕರ್ಮಗಳ್ ಗೋವಿಂದ | ಮಾಡಿಬಗೆ ಬಗೆ ಲೀಲನೆ ಗೋವಿಂದ ||ಭರ್ಗ ರೂಪಿಯೆ ಗುರು ಗೋವಿಂದ | ನಮ್ಮಭರ್ಮ ಗರ್ಭನ ಪಿತ ಗೋವಿಂದ 19 ಮದಜನಕಮಜ್ಜದಿ ಗೋವಿಂದ | ನಮ್ಮಮದನ ಗೋಪಾಲನೆ ಗೋವಿಂದ ||ಯಜ್ಞ ಭುಗ್ಯಜ್ಞನೆ ಗೋವಿಂದ | ಮತ್ತೆಯಜ್ಞ ಸಾಧನ ನೀನೇ ಗೋವಿಂದ 20 ರಣದೊಳರ್ಜುನ ಪಾಲ ಗೋವಿಂದ | ಹಗರಣವನೆ ಕಳೆಯೊ ಗೋವಿಂದ ||ಲವಕುಶ ಪಿತನೆನಿಪೆ ಗೋವಿಂದ | ನೀನಲವಪೂರ್ಣ ಮಹಿಮ ಗೋವಿಂದ 21 ವರ್ಣಗಳ್ಧ್ವನಿಗಳು ಗೋವಿಂದ | ಸರ್ವವರ್ಣಿಪುದು ನಿನ್ನ ಗೋವಿಂದ ||ಶರೊ ಆಭಿಧ ಜೀವನ್ನ ಗೋವಿಂದ | ಮೀಟಿಶರೀರಾಖ್ಯನೆನಿಸುವೆ ಗೋವಿಂದ 22 ಷಡ್ಗುಣ ಪರಿಪೂರ್ಣ ಗೋವಿಂದ | ನೀನೆಷಡ್ವಾದಿ ಸ್ವರ ವ್ಯಾಪಿ ಗೋವಿಂದ ||ಸತ್ತಾದಿ ಪ್ರದ ರೂಪಿ ಗೋವಿಂದ | ನೀನೆಸತ್ತತ್ವ ಪ್ರತಿಪಾದ್ಯ ಗೋವಿಂದ 23 ಹರಿ ಹರಿ ಎಂದರೆ ಗೋವಿಂದ | ಪಾಪಹರಿ ಸೂವಿ ನೀನೇ ಗೋವಿಂದ ||ಳಾಳೂಕ ಆಭಿಧ ಗೋವಿಂದ | ಕಾಯೊಳಕಾರ ಪ್ರತಿಪಾದ್ಯ ಗೋವಿಂದ 24 ಕ್ಷಮಿಸೆನ್ನ ಅಪರಾಧ ಗೋವಿಂದ | ಬಲಿಕ್ಷಮೆಯನಳೆದ ಗುರು ಗೋವಿಂದ ||ಕ್ಷಮಕ್ಷಾಮಾಭಿಧ ಗುರು ಗೋವಿಂದ | ನೀಲಕ್ಷುಮಿ ಸಹ ನೆಲಸೊ ಗೋವಿಂದ 25 ಜ್ಞಾನಗಮ್ಯನೆ ಗುರು ಗೋವಿಂದ | ತತ್ವಜ್ಞಾನವ ಪಾಲಿಸೋ ಗೋವಿಂದ ||ಜ್ಞಾನಿಗೆ ಪ್ರಿಯತಮ ಗೋವಿಂದ | ನಿನಗೆಜ್ಞಾನಿ ಜನರು ಪ್ರಿಯರು ಗೋವಿಂದ 26 ಏಕ ಪಂಚಾಶತು ಗೋವಿಂದ | ವರ್ಣಏಕಾತ್ಮ ಮಾಲೇಯ ಗೋವಿಂದ ||ಲೋಕೈಕನಾಥ ಗುರು ಗೋವಿಂದ | ವಿಠಲಸ್ವೀಕರಿಸೆನ್ನ ಕಾಯೋ ಗೋವಿಂದ 27
--------------
ಗುರುಗೋವಿಂದವಿಠಲರು
ಜಾನಕೀಶ ವಿಠಲ ನೀನಿವನ ಪೊರೆಯೋ ಪ ಮೌನಿಕುಲ ಸನ್ಮಾನ್ಯ | ಆನತೇಷ್ಟಪ್ರದನೆಆನಮಿಸಿ ಪ್ರಾರ್ಥಿಸುವೆ | ಭಿನ್ನಪವ ಪಾಲಿಸೋ ಅ.ಪ. ಸತಿ ಸ್ವಪ್ನದಲಿ | ಅವನಿಜೆಯ ವಲ್ಲಭನೆ ತವನಾಮ ಸೂಚಿಸಿಹೆ | ಎನ್ನ ರೂಪದಲೀಭವವನಧಿ ದಾಟಲ್ಕೆ | ತವನಾಮ ಸಂಸ್ಮರಣೆನವಪೋತವೆನಿಸಿಹುದು | ಪವನಾಂತರಾತ್ಮಾ 1 ನಿತ್ಯ ತವ ಪದದಲ್ಲಿ | ಭಕ್ತಿ ಕರುಣಿಸೋ 2 ಮಧ್ವಮತ | ಸಾಕಷ್ಟು ತಿಳಿಸುತ್ತಾಮಾಕಳತ್ರನೆ ಇವನಾ | ವ್ಯಾಕುಲದಲ್ಹರಿಸೀಲೌಕಿಕವೆಲ್ಲ ವೈ | ದೀಕ ವೆಂದೆನಿಸುತ್ತಪ್ರಾಕ್ಕು ಕರ್ಮವ ಕಳೆಯೊ | ಲೋಕ ಲೋಕೇಶಾ 3 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತಮ ಹರಿಯು ನಿ | ಸ್ಸಾರ ಜಗವೆಂಬಾಚಾರುಮತಿಯನೆ ಇತ್ತು | ಪಾರಗಾಣಿಸು ಭವವಧೀರ ನೀನಲ್ಲದಲೆ | ಆರು ಕಾಯುವರೋ 4 ಜೀವ ಬಹು ಪರತಂತ್ರ ದೇವ ನಿಜ ಸ್ವತಂತ್ರಈ ವಿಧದ ಸುಜ್ಞಾನ | ಸಾರ್ವಕಾಲದಲೀದೇವ ನೀ ದಯದಿ ಈ | ಜೀವಂಗೆ ಕರುಣಿಸೇಭಾವದಲಿ ಬೇಡ್ವೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಜಾಂಬುವತಿ ಪ್ರಿಯ ವಿಠಲ | ಅಂಬುಜದಳಾಕ್ಷ ಪ ನಂಬಿ ಬಂದಿಹನ ಮನ | ದಂಬಲವ ಸಲಿಸೋ ಅ.ಪ. ಲೌಕಿಕಾನೇಕದಲಿ | ಸಿಲ್ಕಿ ನೊಂದವನಾಗಿಏಕಾಮೇವಾದ್ವಿತೀಯ | ನೀನೇವೆಯಂಬಾವಾಕು ನುಡಿವಾ ಇವಗೆ | ಪ್ರಾಕ್ಕು ಕರ್ಮವ ಕಳೆದುತೋಕನ್ನ ಸಲಹೆಂದು | ಪ್ರಾರ್ಥಿಸುವೆ ಹರಿಯೇ 1 ನೀಚೋಚ್ಛ ಸುಜ್ಞಾನ | ದಾಸ್ಯಕಿದುವೇ ಮೂಲವಾಚಿಸೋ ಇವನಲ್ಲಿ | ಕೀಚಕಾರಿಪ್ರಿಯಾವಾಚಾಮಗೋಚರನೆ | ಖೇಚರೋತ್ತಮಸವ್ಯಸಾಚಿ ಸಖನೇ ಇವನ | ಕಾಪಾಡೊ ಹರಿಯೇ 2 ಸಂಗೀತ ಲೋಲ ಹರಿ | ಮಂಗಳಾಂಗನೆ ಸಾಧುಸಂಗವನು ಇವಗಿತ್ತು | ಕಾಪಾಡೊ ಹರಿಯೇಇಂಗಿತಜ್ಞನೆ ವಿಷಯ | ನಿಸ್ಸಂಗನೆಂದೆನಿಸಿಸಂಗೀತದಲಿ ತವ ಪ್ರ | ಸಂಗವಿತ್ತು ಕಾಯೋ 3 ಮೂರೆರಡು ಭೇದಗಳ | ತಾರತಮ್ಯ ಜ್ಞಾನವಾರವಾರಕೆ ತಿಳಿಸಿ | ಕಾಪಾಡೊ ಇವನಾಸೂರಿಜನ ಸಂಪ್ರೀಯ | ಸೂರಿಸಂಗವನಿತ್ತುಪಾರುಗೈ ಭವದ ಕೂ | ಪಾರ ಹರಿಯೇ 4 ಗರುಡವಾಹನ ಕೃಷ್ಣ | ಗರುವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಹರಿಯೇ |ನಿರವಧಿಕ ಗುಣ ಪೂರ್ಣ | ಸರ್ವೇಷ್ಟ ಪ್ರದನಾಗಿಪೊರೆಯ ಬೇಕಿವನ | ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿರುಮಲೇಶವಿಠಲಾ | ಪೊರೆಯ ಬೇಕಿವಳಾ ಪ ನಿರುತ ನಿನ್ನಯ ನಾಮ | ಸ್ಮರಣೆ ಸುಖ ಕೊಡುತಾ ಅ.ಪ. ಸ್ವಪ್ನದಲಿ ತವರೂಪ | ಕನ್ಯೆತಾ ಕಾಣುತ್ತಾಉನ್ನಂತ ಹರ್ಷದಲಿ | ಭಿನ್ನವಿಸಿ ಇಹಳೋ |ಪನ್ನಗಾರಿಧ್ವಜನೆ | ಮನ್ನಿಸುತ ಮನ್ಮಾತಕನ್ಯೆಗಭಯದನಾಗಿ | ನನ್ನೆಯಿಂ ಸಲಹೋ 1 ಶೂನ್ಯ | ಭೋಧಾತ್ಮ ಶ್ರೀ ಹರಿಯೆಭೇದಪಂಚಕ ವರುಹಿ | ಮಧ್ವಮತ ದೀಕ್ಷಾ |ಸಾಧಿಸುವುದಿವಳಲ್ಲಿ | ಹೇದಯಾಂಬುದೆ ಪೂರ್ಣಭೋದಮುನಿಯ ಸನ್ನುತನೆ | ವೇದಾಂತ ವೇದ್ಯಾ 2 ವ್ರಾತ ಸಮತೆಲಿಯುಂಬಭೂತಿಕರುಣಿಸು ಹರಿಯೆ | ವಾತಾಂತರಾತ್ಮಾ |ಧಾತಾಂಡ ಸೃಜಿಸಿ ಹರಿ | ಓತ ಪ್ರೋತನು ಇರಲುಮಾತನೊಪ್ಪಿಸೆ ನಿನಗೆ | ಏತರವ ನಾನೂ 3 ಹರಿಗುರೂ ಸದ್ಭಕ್ತಿ | ಹಿರಿಯರಾ ಸತ್ಸೇವೆಕರುಣಿಸುತ ಸಾಧನದ | ವರಮಾರ್ಗ ತೋರೋ |ಶರಣಜನ ವಾತ್ಸಲ್ಯ | ಬಿರಿದು ಪೊತ್ತಾಮೇಲೆಕರುಣಾಬ್ಧಿಪೂರ್ಣೆಂದು | ಕರಪಿಡಿಯೊ ಇವಳಾ 4 ಸಾಮಗಾನವಿಲೋಲ | ಭಾಮೆರುಕ್ಷ್ಮಿಣಿಲೋಲಸಾಮಾಜಾವರವರದ | ಭೂಮಗುಣಪೂರ್ಣ |ಕಾಮಾರಿಸನ್ನುತನೆ | ಕಾಮಿತಪ್ರದನಾಗೊಕಾಮನಯ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದಯವಾಗೋ ದಯವಾಗೋ ಪ ಹಯಮುಖ ಭಯಕೃದ್ಭಯನಾಶನ ಹರಿ ಅ ದ್ರೌಪದಿ ಮೊರೆ ಕೇಳ್ಯಾಪದ್ಬಾಂಧವ ನೀ ಪೊರೆದಯ್ ರಮಾಪತಿ ನಿರುತ 1 ಖರಮುರ ನರಕಾದ್ಯರ ಸಂಹರಿಸಿದೆ ಪರಮ ಪುರುಷ ಸಂಹರಭವಹರನೆ 2 ಶತ್ರುತಾಪಕ ಜಗತ್ರಯ ವ್ಯಾಪ್ತ ಪ ವಿತ್ರ ಪಾಣಿ ಸರ್ವತ್ರದಿ ಎಮಗೆ 3 ಎಷ್ಟೆಂದುಸುರಲಿ ದುಷ್ಟಜನರು ಬಲು ಕಷ್ಟ ಬಡಿಪ ಬಗೆ ಜಿಷ್ಣು ಸಾರಥಿಯೆ 4 ಗೋಭೂಸುರರಿಗೆ ಭೂಭುಜರ ಭಯ ಪ ರಾಭವಗೈಪುದು ಶ್ರೀ ಭೂರಮಣನೆ 5 ಅಪ್ರಮೇಯ ನೀ ಕ್ಷಿಪ್ರದಿ ಒಲಿದು ಜ ಯಪ್ರದನಾಗು ಸುಪ್ರಹ್ಲಾದವರದನೆ 6 ಯಾತಕೆ ಎಮ್ಮನು ಭೀತಿಗೊಳಿಪೆ ಪುರು ಹೂತವಿನುತ ಜನಗನ್ನಾಥವಿಠ್ಠಲಾ 7
--------------
ಜಗನ್ನಾಥದಾಸರು
ದಾಸರು ಭಜಿಸುವೆ ನಿನ್ನನು ವಿಜಯದಾಸಾರ್ಯನೆ ಪೊರೆಯೊ ಪ ಭಜಿಸುವೆ ನಿನ್ನ ಪಾದಭಜಕಜನರ ಪಾದ ರಜದೊಳಿಟ್ಟು ನನ್ನ ರಜತಮ ಹರಿಸೊಅ.ಪ ವಿಜಯಸಾರಥಿಪ್ರಿಯ ನಿಜದಾಸ ನೀನೆಲೋ ಗುರುವೆ ಅಜಪಿತನಜಸುತ ನಿಜಲೋಕಗಳೆಲ್ಲ ಬಿಜಯ ಮಾಡಿ ನಿಜಗತಿಪ್ರದನಾರೆಂದು ನಿಜವನರಿತು ದೈವಾವೆಂದರುಹಿದ ಭೃಗುಮುನಿ1 ರಕ್ಷಿಸಬೇಕೋ ಶ್ರೀ ಲಕ್ಷ್ಮೀಶ ದಾಸನೆ ಗುರುವೆ ಪಕ್ಷಿವಾಹನನ ನೀ ವಕ್ಷತಾಡನ ಮಾಡೆ ತಕ್ಷಣ ಕ್ಷಿತಿ ಕುಕ್ಷಿಯೊಳು ಜಗದ್ರಕ್ಷಕನಾದ ಮು ಮುಕ್ಷುಗಳೊಡೆಯನೆ ನೀಕ್ಷಿಸಿದಾ ಧೀರಾ2 ದ್ವಾಪರದಲ್ಲಿ ನಿಕಂಪನೆಂದೆನಿಸಿದೆ ಮೆರೆದೆ ಶಾಪತನದಿ ವ್ಯಾಧರೂಪದಿಂದ ಶ್ರೀ ಗೋಪಾಲಗೆ ಬಾಣ ಮ್ಮಪ್ಪನೆಂದು ತ್ರಿಜಗಕೆ ತೋರ್ದೆ 3 ಉದ್ಧರಿಸಲು ನೀನುದ್ಭವಿಸಿದೆಯೋ ಮಧ್ವಪತಿಯ ಅಭಿದಾನದಿ ನೀನು ಮಧ್ವಾಗಮ ಶೋಧಿಸಿ ಸುಧೆಯ ತಂದು ಶುದ್ಧ ದುಗ್ಧರನೆಲ್ಲ ಉದ್ಧಾರಮಾಡಿ ಪ್ರ ಸಿದ್ಧಿ ಪಡೆದ ಅನಿರುದ್ಧನ ದಾಸನೆ 4 ಪುರಂದರದಾಸರ ವರ ಸುಕುಮಾರ ಧೀರಾ ಉರಗಾದ್ರಿವಾಸವಿಠಲನ ದಾಸ ಭೂಸುರನಾಗಿ ಚಿಪ್ಪಗಿರಿಯೊಳು ಪರಿಪರಿ ಸಾಧನ ತೋರಿ ಮೆರೆವ ಗುರು 5
--------------
ಉರಗಾದ್ರಿವಾಸವಿಠಲದಾಸರು
ದಾಸವರವರದ ವಿಠಲ | ಸಲಹೊ ಇವಳಾ ಪ ಈಶಾದಿ ದಿವಿಜೇಡ್ಯ | ವಾಸವಾನುಜನೇ ಅ.ಪ. ಕ್ಲೇಶನಾಶನನೆ ಮ | ಧ್ವೇಶ ನಿನ್ನಡಿ ದಾಸ್ಯಆಶಿಸೂವಳ ಬಿಡದೆ | ಶ್ರೀಶ ಕೈಪಿಡಿದೂದೋಷರಾಶಿಯ ಕಳೆದು | ಪೋಷಿಸಲು ಬಿನ್ನವಿಪೆಹೇಸದಾಶಿವ ವಂದ್ಯ | ಮೇಶ ಮಹಿದಾಸಾ 1 ಪತಿಸೇವೆ ಗುರುಸೇವೆ | ಹಿತದಿಂದ ಮಾಳ್ಪಂಥಮತಿಯನೆ ಕರುಣಿಸುತ | ಕ್ಷಿತಿರಮಣ ನಿನ್ನಾಸ್ಮøತಿಯ ಕೊಡು ಸತತ ಸಂ | ಸೃತಿಯನೇ ಕಳೆಯಲ್ಕೆಗತಿಗೋತ್ರ ನೀನಾಗಿ | ಪಥದೋರೊ ಹರಿಯೇ 2 ಏಕಮೇವನೆ ದೇವ | ಪ್ರಾಕ್ಕು ಕರ್ಮವ ಕಳೆದುನೀ ಕೊಡುತ ಸುಜ್ಞಾನ | ಭಕುತಿ ವೈರಾಗ್ಯಕಾಕು ಸಂಗವ ಕೊಡದೆ | ನೀಕೊಟ್ಟು ಸತ್ಸಂಗಮಾಕಳತ್ರನೆ ಸಲಹೊ | ಈಕೆ ಕೈ ಪಿಡಿದೂ 3 ಖೇಚರೋತ್ತಮ ವಾಹ | ಕೀಚಕಾರಿ ಪ್ರಿಯನೆಮೋಚಕೇಚ್ಛೆಲಿ ಸವ್ಯ | ಸಾಚಿಸಖಕೃಷ್ಣಾ |ವಾಚಾಮಗೋಚರನೆ | ನೀಚೋಚ್ಚ ತರತಮವವಾಚಿಸುತ ಇವಳಲ್ಲಿ | ಮೋಕ್ಷಪ್ರದನಾಗೋ 4 ದೇವವರ ಭವ್ಯಾತ್ಮ | ಭಾವಕೊಲಿಯುವ ಹರಿಯೆನೀವೊಲಿಯದಿನ್ನಿಲ್ಲ | ಆವ ಈ ಜಗದೀ |ಕಾವುದಿವಳನು ಎಂದು | ಭಾವದಲಿ ಭಿನ್ನೈಪೆಭಾವುಕರ ಪಾಲ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಾರಾಯಣ ವಿಠ್ಠಲನೆ ನೀನಿವನ ಕಾಪಾಡೊ ಹರಿಯೆ ಪ ನೀರಜಾಸನವಂದ್ಯ ಪೋರ ನಿನ್ನವನೆಂದುಕಾರುಣ್ಯದಲಿ ಕೈಪಿಡಿದು ಕಾಪಾಡೊ ಹರಿಯೇ ಅ.ಪ. ಜ್ಞಾನಾಯು ರೂಪಕ ಸು | ವಾಯುದೇವನೊಳಿದ್ದುನೀನಿವಗೆ ಜ್ಞಾನಾಯು ಸಂಪದವನೀಯೋ |ಮೌನಿಕುಲ ಸನ್ಮಾನ್ಯ ಪೂರ್ಣಪ್ರಜ್ಞರ ಮತದಿ ಜ್ಞಾನಿ ಎಂದೆನಿಸಿವನ ಕಾಪಾಡೊ ಹರಿಯೆ 1 ಗೋವುಗಳೊಳುದ್ಗೀಥ ಕಾವ ಕರುಣಿಯೆ ದೇವಭಾವದಲಿ ನೀನಿದ್ದು ಉದ್ಧರಿಸೊ ಹರಿಯೇ |ಆವ ಭವವನಧಿ ಲಕ್ಷ್ಮೀ ನರಹರಿಯೇನೋವುಗಳ ಪರಿಹರಿಸೊ ಪವನ ಪ್ರೀಯ 2 ಹೆಂಚು ಹಾಟಕದಲ್ಲಿ ಸಮಬುದ್ಧಿ ನೀನಿತ್ತುಪಂಚ ಪಂಚಿಕೆ ತತ್ವ ತರತಮವ ತಿಳಿಸುತ್ತಮಿಂಚಿನಂತಿವನ ಹೃತ್ಪಂಕಜದಿ ಪೊಳೆಯೊವಾಂಛಿತ ಪ್ರದನೆ ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು