ಒಟ್ಟು 44 ಕಡೆಗಳಲ್ಲಿ , 15 ದಾಸರು , 39 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಗಮ ಗೋಚರ ಸಿರಿರಮಣಾ ಪ ವಾಚಾಮಗೋಚರ ಕಂಜ ಲೋಚನ ಗುಣ ಪೂರ್ಣಾ ಅ.ಪ ಪರಮ ಪವಿತ್ರ ಸಕಲಗುಣಭರಿತ ಜಗತ್ಪ್ರಭುವೇ ನರಸುರ ಗರುಡೊರಗ ಕಿನ್ನರರೊಳು ನೀನಿರುವೆ 1 ಪಾವನ ಸುಜನಾ ವನಜಗ ಜೀವನ ಮಮಸ್ವಾಮಿ ಸಾವಧಾನದೊಳೆನ್ನ ಮೊರೆ ಕೇಳ್ ಸರ್ವಾಂತರ್ಯಾಮಿ 2 ಗುರುರಾಮ ವಿಠಲ ನಿಜ ಭಕ್ತರಿಗೆ ಕಾಮಧೇನು 3
--------------
ಗುರುರಾಮವಿಠಲ
ನೀನೆ ನಿಜಗುರುವಾಗುಎನಗೆ ಮಾಧವ ಪ ಮರವೆಯೆಂಬ ಪರದೆ ಹರಿದು ಅರಿವುಯೆಂಬಾಲಯದೊಳಿರಿಸಿ ದುರಿತಪರ್ವತ ತರಿದು ಪೊರೆಯುವ ಚರಣದಾಸರ ಭಾಗ್ಯನಿಧಿಯೆ 1 ಹೀನಸಂಸಾರೆಂಬುವ ಮಹ ಕಾನನದಿ ಬಳಲಿಸದೆ ಅನುದಿನ ಧ್ಯಾನಮೃತ ಪಾನಗೈಸುವ ಧ್ಯಾನಿಪರ ಮಹಪ್ರಾಣದರಸೇ 2 ಆವಕಾಲದಿ ಬಿಡದೆ ನಿಮಿಷ ಜೀವ ಭಕುತರ ಭಾವದ್ವಾಸಿಸಿ ಜಾವ ಜಾವಕೆ ಬುದ್ಧಿ ಕಲಿಸುವ ದೇವದೇವರ ದಿವ್ಯದೇವರೆ 3 ಸಕಲಕೋಟಿಮಂತ್ರಗಳಿಗೆ ನಿಖಿಲ ನೀನೆ ಆಧಾರನಾಗಿ ಅಖಿಲರೂಪದಿ ಜಗವ ಬೆಳಗುವ ಭಕುತಿದಾಯಕ ಸುಖದ ಶರಧಿಯೆ 4 ಸಾರಿ ಭಜಕರ ಭಾರವಹಿಸಿ ಘೋರಭವಸಾಗರವ ಗೆಲಿಸಿ ಧೀರ ಶ್ರೀಗುರುರಾಮ ಪ್ರಭುವೇ 5
--------------
ರಾಮದಾಸರು
ಪರಿಪಾಲಿಪುದೈ ಗುರುವೆ ನೆರೆನಂಬಿದೆನಯ್ಯ ಪ್ರಭುವೆ ಪ ಘಾಸಿ ಗೊಂಡೆನಲ್ಲಾ ಮಾಯಾ ಪಾಶದಿ ಸಿಲುಕಿದೆನಲ್ಲಾ | ಉ- ಪಾಯ ವನರಿಯೆ ಪಾಲಿಸೈ ಪ್ರಭವೇ 1 ಕಾಯೋ ಪ್ರಭುವೇ 2 ಉಳಿಸಿಕೊ ಗುರುದೇವಾ ನಿರುತದಿ ಮಾಡುವೆ ನಿನ್ನ ಸೇವಾ ಕರುಣಿಸು ಶ್ರೀ ರಾಘವೇಂದ್ರಾ 3
--------------
ರಾಧಾಬಾಯಿ
ಪಾಲಿಸೊ ಶ್ರೀನಿವಾಸ ಜಗದೀಶ ಪ ಮೇಲುಗಿರೀಶ ಹೃತ್ಕುಮುದನಿವಾಸ ಸತೀಶ ನೀನೆ ಅವಿನಾಶನೆ ಅನಿಶ ಅ.ಪ ಅನಿಮಿತ್ತ ಬಂಧು ನೀ ನಿನ್ಹೊರತು ಅನ್ಯರುಂಟೇ ಅನಪೇಕ್ಷನು ನೀ ದೀನರಕ್ಷನೆ ನಾನೇನರ್ಪಿಸಬಲ್ಲೆ ನೀ ಬಲ್ಲೆ ಅನುದಿನ ಮನೋವಾಚಕಾಯದಿ ನಾನೆಸಗುವುದು ಬಲ್ಲೆ ಅಲ್ಲಲ್ಲೇ ಘನಮಹಿಮನೆ ಎನ್ನ ಮನದಲ್ಲಿ ಅನುದಿನ ನಿನ್ನ ನೆನೆಯುವುದನೆ ಇತ್ತು ಕೊನೆಗಾಣಿಸು ಇನ್ನು 1 ಸತ್ಯಸಂಕಲ್ಪ ನೀ ನಿತ್ಯನೂತನಪ್ರಭುವೇ ಅತ್ಯಧಿಕದಿ ಭಕ್ತೋತ್ತಮರು ನಿತ್ಯ ಸೇವಿಸುತಿಹರೋ ಅವರ ಭೃತ್ಯನೆನಿಪ ಸಂ- ಪತ್ತನಿತ್ತು ಆಪತ್ತು ಹರಿಸಿ ಭಕ್ತಿಯ ನೀಡಯ್ಯ ಕರ್ಮ ಬೆನ್ಹತ್ತಿ ಹತ್ತಿ ಆಸೆ ಪೊತ್ತು ಕೊನೆಗೆ ನಾ ಉನ್ಮತ್ತನಾದೆ 2 ಪ್ರಣವಸ್ತಗೆ ದೇವಾ ನೀ ಪ್ರಣತ ಕಾಮದ ಕಾವಾ ಪ್ರಣತ ಜನರ ಮುಖ್ಯಪ್ರಾಣಾಂತರ್ಗತ ಫಣಿರಾಜಶಯ್ಯ ಹೇ ಜೀಯ್ಯ ಗುಣಮಣಿ ಶ್ರೀ ವೇಂಕಟೇಶ ಕ- ರುಣಾಕರ ಇನ್ನು ನಿನಗೆಣೆಯ ದೊರೆಯೆ ಮಣಿದು ಬೇಡುವೆ ನಿನ್ನ ದಣಿಸಲಾಗದು ಇನ್ನೂ ಧಣಿಯು ನೀ ಉರಗಾದ್ರಿವಾಸ ವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಬಂದು ನಿಮ್ಮಡಿಗಳ ನಾಶ್ರಯಿಸಿದೆ ಪ್ರಭುವೆ ಭವ ಬಂಧನಗಳ ಬಿಡಿಸಿ ನೀ ಕಾಯೊ ಸದ್ಗುರುವೇ ಪ ಎಲ್ಲೆಲ್ಲಿಯೂ ತಿರುಗಿ ಕಾಯುವರ ಕಾಣದೆಲೆ ತಡಮಾಡದೆಮ್ಮಯ ದುಗುಡಗಳ ಪರಿಹರಿಸಿ ಕರುಣದಿಂದಲಿ ಕಾಯೊ ಗುರುರಾಘವೇಂದ್ರಾ 1 ನಿಶೆ ಹಗಲು ನಿನ್ನನು ಸ್ತುತಿಸಿ ಬೇಡುವೆ ಪ್ರಭುವೆ ಗತಿಗಾಣೆ ನಿನ್ಹರತು ಈ ಪೃಥುವಿಯೊಳಗೆ ಅತಿವ್ಯಥೆಯಲೀ ನೊಂದು ಮತಿಯಿಲ್ಲದಂತಿಹೆನು ತ್ವರಿತದಿಂದಲಿ ಕಾಯೊ ಹೇ ಗುರುರಾಜ ಪ್ರಭುವೇ 2 ಜಗವೆಲ್ಲ ನಿಮ್ಮ ಮಹಿಮೆ ಸಾರುತಿರುವುದ ಕೇಳಿ ಭರದಿಂದ ಬಂದೆನೋ ಗುರುರಾಘವೇಂದ್ರಾ ಇಂದೆಮ್ಮ ಅಪರಾಧಗಳ ಎಣಿಸದೆಲೆ ಸಲಹೈಯ್ಯಾ ಕಾರುಣ್ಯಮೂರ್ತಿ ಶ್ರೀ ಗುರುರಾಘವೇಂದ್ರಾ 3
--------------
ರಾಧಾಬಾಯಿ
ಬಾರೋ ಈ ರೇಳು ಜಗಜೀವನಾ | ಜಗಜೀವನಾ ಪ ಬಾರೋ ಈರೇಳು ಜಗಜೀವನಾ ಜಗಜೀವನಾ | ಪಾವನ ದೇವಾ ಪಾವನ ದೇವಾ | ಧೀರ ಕೇಶವಾ 1 ಕಂಗೆಡುತಿದೆ ಕಂಗೆಡುತಿದೆ | ನಿನ್ನ ಕಾಣದೆ 2 ಬೆನ್ನ ಬಿದ್ದವರವಗುಣವಾ | ಅವಗುಣವಾ | ಆರಿಸುವರೇ ಆರಿಸುವರೇ | ಚಿನ್ನ ಶ್ರೀ ಹರಿ3 ಇಂದು ಮನಿಗೆ ಬಾರದಿರಲು | ಬಾರದಿರಲು | ನಿಲ್ಲದು ಪ್ರಾಣಾ ನಿಲ್ಲದು ಪ್ರಾಣಾ | ಒಂದರೆಕ್ಷಣಾ 4 ತಂದೆ ಮಹಿಪತಿ ಸುತ ಪ್ರಭುವೇ | ಸುತ ಪ್ರಭುವೇ | ದೀನಾಭಿಮಾನಿ ದೀನಾಭಿಮಾನಿ | ಬಂದು ಕೂಡೋ ನಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಪ ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಬಿಡದಿಹ ಪಾವನ್ನಾ| ಪೊಡವಿಯೊಳಗೆ|ಮೃಡ ಅಜರಿಗೆ ವಡಿಯ ನೀನೀಗ| ಒಡಲ ಹೊಕ್ಕೆನು ಕರುಣಾ ನಿನಗ 1 ಹಲವು ಜನ್ಮಂಗಳನು|ಬಲುತೆರ ಸೂಸಿದೆನು| ನೆಲೆಗಾಆಣದೆ ನಾನು|| ಸುಲಭದಿ ದೊರೆಕಿತು ದೀನೊದ್ದರನೆ 2 ಮುನ್ನ ಮಾಡಿದ ಪರಿ|ಬನ್ನ ಬಡಿಸದೆ ಸಾರಿ| ಚನ್ನಾಗೊಲಿಹರಿ| ಯನ್ನ ಹೃದಯದಲಿ ಇನ್ನು ನಿಶಿದಿನಲಿ|ನೆನೆವ ಭಕುತಿಲಿ| ಸನ್ನುತ ಮಹಿಪತಿ ನಂದನ ಪ್ರಭುವೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರ್ತಿ ನೀ ಕರುಣಿಸೊ ಪ್ರಭುವೇ ಪ ಎಲ್ಲೆಲ್ಲಿ ನೋಡಲಲ್ಲಿಲ್ಲಿ ನಿಮ್ಮಯ ಕೀರ್ತಿಯನು ಮೊರೆಹೊಕ್ಕ ಸುಜನರ ಪೊರೆವರೆಂಬ ಬಿರುದು ಕೇಳಿ ತ್ವರಿತದಿಂದಲಿ ಬಂದೆನೋ ಭರದೀ ಹಾರೈಸು ಕರುಣಾ ಶರಧೀ 1 ಇಷ್ಟಾರ್ಥಗಳನಿತ್ತು ಸಲಹಿದೆ ತುಪ್ಪರಾಗುತಲವರ ಕಷ್ಟಗಳನೇ ಕಳೆದೆ ಉದ್ಧರಿಸಿದೆ ಅಷ್ಟ ಸೌಭಾಗ್ಯವ ಕೊಟ್ಟು ರಕ್ಷಿಸಿದೇ - ಕೈಬಿಡದೇ 2 ಅಡಿಗಳಿಗೆರಗುತಲಿ ನುಡಿ ನುಡಿಗೆ ತುತಿಸಲಿ ಬಿಡದೆ ನಿನ್ನನು ಕೊಂಡಾಡುತಲಿ ತಡಮಾಡದೆ ಯಡರುಗಳ ಪರಿಹರಿಸಿದೆ ನಿಮ್ಮ ಮಹಿಮೆಗೆ ಸರಿಗಾಣೆ ಭೂಮಂಡಲದೊಳಗೇ ಪ್ರಭವೇ 3
--------------
ರಾಧಾಬಾಯಿ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ಪ ನಿರುತಾದಿ ಸೇವಿಸುವರಾ ಕಾಮಿತ ಕಲ್ಪತರುವೇಅ.ಪ ತುಂಗಾ ತೀರದೊಳ್ ಬಂದೂ ಮಂಗಾಳ ಮಹಿಮರು ನಿಂದೂ ಮಂಗಳಾ ಮೂರುತಿ ಶ್ರೀ ರಾಮಚಂದ್ರನ್ನ ಪೂಜೀಪರಿಂದೂ 1 ಕಾವೀಶಾಠಿಯನುಟ್ಟೂ ಗಂಧಾಕ್ಷತೆಗಳಿಟ್ಟೂ | ತಿರ್ದಿ ಹಚ್ಚಿರುವಾನಾಮಾ ಫಣಿಯಲ್ಲಿ ಹೊಳೆÉಯುತಾಲೀ 2 ವೀಣಾವಾದನದಿಂದಾ ಗಾನವ ಮಾಡುತಲೀ ವೇಣುಗೋಪಾಲ ಕೃಷ್ಣನ್ನ ಕುಣಿಸಿ ಕೊಂಡಾಡುತಿಹರು3 ಭಕ್ತಿಯಿಂದಲಿಸ್ತುತಿಪ ಜನರಾ ಆಪತ್ತುಗಳೆಲ್ಲವ ಕಳೆವಾ ಸಂಪತ್ತು ಸೌಭಾಗ್ಯವೀವಾ ಶರಣೇಂದವರ ಪೊರೆವಾ 4 ಸರಿಯಾರು ನಿಮಗೆ ದೇವಾ ಈ ಧರುಣಿಯೊಳರಸೆ ಕಾವಾ ದೊರಗಳ ನಾ ಕಾಣೆನಯ್ಯ ಶ್ರೀ ರಾಘವೇಂದ್ರ ಜೀಯಾ 5
--------------
ರಾಧಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ಸತ್ಯಬೋಧರು ಕುರುಡನಿಗೆ ಕರವಿತ್ತು ಕೈಪಿಡಿದು ಕಾಯೋ ಪ ದೃಢಮತಿಯಿತ್ತು ತವ ಪಾದದಲಿ ಅ.ಪ. ಗರುಡಾರಿ ಭೂಷಣನ ಚರಣದಡಿಯೊಳಗಿದ್ದು ಘನ ತಪವ ಗೈವ ಮಹತ ಪರಿಯೊ 1 ಬೋಧತೀರ್ಥಾರ್ಯರ ಮತಕನುಸರಿಸಿಸದ್ಭಕುತ ಜನಕೆ ಭೇದಗಳ ಬೋಧಿಸುತ ಸತ್ಯಬೋಧಾಖ್ಯಯದೀ ಧರೆಯೊಳಗಮರವೇ 2 ಮ್ಲೇಚಪುರದಲಿ ಕುಳಿತು ಸಂಚಿತಾಗಾಮಿಗಳ ಕೊಂಚಮಾಡುತ ನಿಷ್ಕೆಂಚಿನರ ಪ್ರೀಯಾತಂದೆವರದಗೋಪಾಲವಿಠಲನ ಮಂಚ ಪದನಿಂದ ಪೋಷಿತನಾದ ಪ್ರಭುವೇ 3
--------------
ತಂದೆವರದಗೋಪಾಲವಿಠಲರು