ಒಟ್ಟು 196 ಕಡೆಗಳಲ್ಲಿ , 49 ದಾಸರು , 171 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ರೋಗವೊ ಎನಗೆ ದೇವಧನ್ವಂತ್ರಿ ಪ. ಸಾವಧಾನದಿ ಕೈಯ ಪಿಡಿದು ನೀ ನೋಡಯ್ಯ ಅ.ಪ. ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ 1 ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವುಗುರುಹಿರಿಯರಂಘ್ರಿಗೆ ಶಿರ ಬಾಗದುಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವುಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ 2 ಅನಾಥಬಂಧು ಗೋಪಾಲವಿಠಲರೇಯಎನ್ನ ಭಾಗದ ವೈದ್ಯ ನೀನೆಯಾದೆಅನಾದಿ ಕಾಲದ ಭವರೋಗ ಕಳೆಯಯ್ಯನಾನೆಂದಿಗು ಮರೆಯೆ ನೀ ಮಾಡಿದುಪಕಾರ 3
--------------
ಗೋಪಾಲದಾಸರು
ಆವರೋಗವೆ ಯೆನಗೆ ದೇವ ಧನ್ವಂತ್ರೀ ಪ ಸಾವಧಾನದಿಯೆನ್ನ ಕೈಪಿಡಿದು ನೋಡೋ ಅ ಪ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು 1 ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ 2 ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ 3
--------------
ವಿಜಯದಾಸ
ಆಳ್ವಾರಾಚಾರ್ಯಸ್ತುತಿಗಳು 1. ಶ್ರೀ ಆಂಜನೇಯ ಸ್ತುತಿಗಳು 155 ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋ ನಮೋ ಪ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋ ನಮೋ ಅ.ಪ ನಮೋಸ್ತು ಶ್ರೀಮಾನ್ ನಮೋಸ್ತು ಧೀಮಾನ್ ನಮೋಸ್ತು ಮರುತಾತ್ಮಜ ಹನುಮಾನ್ ನಮೋಸ್ತು ಬಲವಾನ್ ನಮೋಸ್ತು ವೀರ್ಯವಾನ್ ನಮೋಸ್ತು ಪಂಚಾನನ ರೂಪಾ 1 ನಮೋ ಸಮೀರಾಂಜನಾಕುಮಾರಾ ನಮೋ ದಿವಾಕರ ಭಯಂಕರಾ ವಿಧಿ ವರಪ್ರಸಾದಿತ ನಮೋ ನಮೋ 2 ನಮೋ ನಮೋ ವಾನರೇಂದ್ರ ಸಚಿವಾ ನಮೋ ಜಿತೇಂದ್ರಿಯ ಗದಾಧರಾ ಸನ್ನುತ ನಮೋಸ್ತು ಸಕಲಕಲಾಧರ 3 ವಸುಂಧರಾಪ್ರಿಯ ತನೂಭವಾನ್ಯೇ ವಸುಗಣೋತ್ಸುಕಾ ಶುಭದಾಯಕಾ ಹಸನ್ಮುಖಾ ಶ್ರೀರಘೋತ್ತಮ ಪ್ರಿಯಾ ಯ [ಸಖ] ಖಗೇಂದ್ರಸಮ ಕಪಿನಾಯಕಾ 4 ಜನಕಸುತಾ ಸುದರ್ಶನ ಹರ್ಷಿತ ವನಭಂಗಕರಾಕರಣಧೀರಾ ಲಂಕಾನಗರ ಭಯಂಕರಾ 5 ಸೀತಾರಾಮಾನಂದ ವರ್ಧಕಾ ಲಕ್ಷ್ಮಣ ಪ್ರತಾಪವಾನ್ ದೂತಕಾರ್ಯ ವಿಜಯೋತ್ಸುಕ ವಾನರ ಪತಿಸಂಪೂಜ್ಯ ಪ್ರದೀಪ್ತವಾನ್ 6 ರಾಮಾಲಿಂಗಿತ ದಿವ್ಯಶರೀರಾ ರಾವಣದರ್ಪ ವಿನಾಶಕರಾ ಭೀಮಪರಾಕ್ರಮ ಸಂಜೀವನಧರ ದಾನವತಿಮಿರ ವಿಭಾಕರ 7 ಗಂಭೀರಶರಧಿ ವಿಲಂಘನಧೀರಾ ಮೈನಾಕಾರ್ಚಿತ ಪರಮೋದಾರಾ ವಿಭೀಷಣ ಪ್ರಿಯ ಸಖಾಭಿವಂದಿತ ರಘುಪತಿಸೇವಾ ಧುರಂಧರಾ 8 ತಾರಕ ಮಂತ್ರೋಪಾಸಕ ಹನುಮಾನ್ ಶೂರಭವಿಷ್ಯ ಚತುರ್ಮುಖಾ ಧೀರೋದಾತ್ತ ಕೃಪಾಕರ ಮಾಂಗಿರಿರಂಗ ನೀಕೇತನ ಬಹಿರ್ಮುಖ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಸಾಧುಜನ ಹೃದಯ ಸದ್ಗುರು ದಯ ನಿಶ್ಚಯ ಧ್ರುವ ಸಾರಿಚಲ್ಲೆದ ಪೂರ್ಣ ಹರಿಯ ಸುಖ ನಿಧಾನ ಸುರಮುನಿಗಳ ಪ್ರಾಣ ಶರಣಜನರಾಭರಣ 1 ಬಣ್ಣಬಣ್ಣಭಾಸುವ ಪುಣ್ಯಶ್ಲೋಕರಾಜೀವ ಸಣ್ಣ ದೊಡ್ಡದಲ್ಲೀವ್ಹ ಕಣ್ಣಿಗೆ ಕಾಣಿಸುವ 2 ಗುಹ್ಯಕೆ ಗುಹ್ಯವಾದ ಮಹಾಮಹಿಮೆಯ ಬೋಧ ಮಹಿಪತಿ ಸದ್ಗೈಸಿದ ಮಹಾಗುರು ಸುಪ್ರಸಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಊರ್ವಶಿ : ಬಂದ ಕಾಣೆ ಗೋವಿಂದ ಕ್ಷೀರ- ಸಿಂಧುಶಯನ ವನದಿಂದ ಇಂದಿರೇಶ ಮುದದಿಂದ ಮೌನಿಮುನಿ- ವೃಂದದಿಂದ ಸ್ತುತಿವಂದನೆಗೊಳ್ಳುತ1 ಏಸು ಲೋಭಿಯೊ ತಿಮ್ಮಶೆಟ್ಟಿ ಒಂದು ಕಾಸಿಗೆ ಮಾರುವ ರೊಟ್ಟಿ ದಾಸರ ಕೂಡಿ ಜಗಜಟ್ಟಿ ಬಹು ದೇಶವ ತಿರುಗುವ ಶೆಟ್ಟಿ ದೂಷಣಾರಿ ಪಾದಾಶ್ರಿತಜನರಭಿ- ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ2 ದೊಡ್ಡವನೈ ಮಹಾರಾಯ ಹಳೆ ದುಡ್ಡಿಗೆ ನೀಡುವ ಕೈಯ ಅಡ್ಡಿಗೈದರೆ ಬಿಡನಯ್ಯ ಇವ ಬಡ್ಡಿಕೇಳುವ ತಿಮ್ಮಯ್ಯ ದಡ್ಡುಕೇಸಕ್ಕಿಯ ಮಡ್ಡಿಪ್ರಸಾದವ ಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ3 ತಿರುಪತಿಗೆ ಪ್ರತಿಯಾಗಿ ಪಡು ತಿರುಪತಿಯೆಂದಿಹ ಯೋಗಿ ಮೆರಸುವನೈ ಸ್ಥಿರವಾಗಿ ಶ್ರೀ ವರ ವೆಂಕಟ ಲೇಸಾಗಿ ಶರಣರು ಏನೆಂದು ಸಂತೋಷಿಪ ಕರುಣಾಕರ ಚಪ್ಪರ ಶ್ರೀನಿವಾಸನು4 ಈ ಪರಿಯಲಿ ಒಲಿದಿಪ್ಪಾ ಬಹು ಕಾಪಟ್ಯರಿಗೆ ತಾನೊಪ್ಪನಮ್ಮ ಗೋಪಾಲಕ ಜಗದಪ್ಪ ಶ್ರೀಪರಮಾತ್ಮ ನಾನಾಪರಿ ವಿಭವದಿ ಗೋಪುರದಲಿ ತಾ ವ್ಯಾಪಿಸಿ ನಿಂದನು5 ರಂಭೆ : ನಾರೀವರ್ಯಾರಮ್ಮ ನೋಡಲು ಸಾರಹೃದಯರಮ್ಮ ತೋರಣಛತ್ರಚಾಮರ ಬಿರುದುಗಳಿಂದ ಭೂರಿ ವಿಭವದಿಂದ ಸಾರಿಬರುವರಮ್ಮ1 ಕರದಿ ಕಲಶವಿಹುದು ಶಾಲಿನ ನಿರಿ ಮುಂದಿರುತಿಹುದು ಬೆರಳಿನೊಳುಂಗುರು ವರ ದ್ವಾದಶನಾಮ ಧರಿಸಿ ಸಮಂತ್ರೋಚ್ಚರಿಸುತ ಬರುವರು2 ಮಂದಿಗಳೊಡ್ಡಿನಲಿ ಬರುವರು ಮಂದಸ್ಮಿತದಲಿ ಚಂದದಿ ಜನಗಳ ಸಂದಣಿ ಮಧ್ಯದಿ ಇಂದಿರೆಯರಸನ ಧ್ಯಾನದಿ ಬರುವರು3 ಹಿಂಗದೆ ಬರುತಿಲ್ಲಿ ಮನಸಿನ ಇಂಗಿತವರಿತಿಲ್ಲಿ ಬಂಗಾರದ ಭೂಷಣಸಮುದಾಯದಿ ಅಂಗಜಪಿತನಿಗೆ ಶೃಂಗಾರಗೈವರು4 ವಿಪ್ರೋತ್ತಮರ ಗುಣ- ಕೆಂತು ಸೈರಣೆಯಾಂತು ನಾನಿರಲಿ ಚಿಂತಿತಾರ್ಥವನೀವ ಲಕ್ಷ್ಮೀ- ಸಂತಸದಿ ಪೂಜಾದಿ ಸತತಿ- ಯಾಂತಕೊಂಡಿಹೇಕಾಂತಭಕ್ತರು1 ಕೀರ್ತಿಯನು ಧರಿಸಿ ಮ- ತಾವೆಂದು ಧರ್ಮವನು ಪಾಲಿಸಿ ಸಿಂಧುಶಯನನ ಚಾರುಚರಣ- ದ್ವಂದ್ವಕಾನತರಾಗಿ ಲೋಕದಿ ವಂದ್ಯರೆನಿಸಿಯಾನಂದ ಪರರಿವ- ರೆಂದು ಶ್ರೀಗೋವಿಂದ ನಡೆಸುವ2 ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿ ಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿ ವಾದಗೈವ ಕುವಾದಿಗಳ ಮನ- ಭೇದಿಸುತ ನಿಜವಾದ ಮಾರ್ಗವ ಸಾಧುಗಳಿಂದ ದೃಢವಾದ ಮಾತಿದು3 ಮೇಗರೆಡಂಭಮಾತಲ್ಲ ಧನಿಯ ಕು- ಗೊಂಬರೆ ಎಲ್ಲ ಸಂತಸ ಸಂಭ್ರಮದಿ ವೇದ್ಯಾಂಬುನಿಧಿಯಲಿ ತುಂಬಿರುವರೀ ಕುಂಭಿನಿಯೊಳು ಜ- ಸಂಬಡುವುದು ವಾಸಿಷ್ಠಗೋತ್ರಜ- ರೆಂಬ ವಿಪ್ರಕದಂಬಪೂಜ್ಯರು4 ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆ ಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1 ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆ ಮಹಾಲೀಲೆ2 ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇ ಲೀಲೆಯ ನಾನರಿಯೆ3 ಫಾಲೇಂದು ಕುಂದದ ವರ್ಣಕೋಲು ಚಾಮರಗಳ ನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು4 ಚಂಡವೈಶ್ವಾನರನ ತೇಜಾಖಂಡದಿಂದೋರಂತೆ ಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ5 ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿ ಆದಿನಾರಾಯಣ ಮದುಸೂದನನೆ ಮುದದಿ6 ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರು ನಾದಿನಿ ಕೇಳಿದರ ಪರಿಯನೀ ದಯದಿಂದುಸುರು7 ಊರ್ವಶಿ :ಭಾವೇ ನೀ ಕೇಳೆ ಇದನು ತ್ರೈಲೋಕ್ಯ- ದೇವನಾಗಮನವೆಲ್ಲನೂ ದೀವಟಿಗೆ ಸೇವೆಯೆಂದು ಪೇಳುವರು ಭಾವುಕರು ಮನದೊಳಂದು1 ಸಾಯನವನು ಸುರಿದು ಸಾವಿರ ಸಾಲದು ಶ್ರೀಯರಸನ ಮಹಿಮೆಯರಿವದಾರಿಗಳವಲ್ಲ3 ದೈತ್ಯವಿನಾಶನ ಜಯಜಯ ಜಾಹ್ನವಿತಾತ ಜಯಜಯ ಜಗದಾತ ಆಶ್ರಿತ ಸುರಭೂಜ ತೋರುತ ಒಲಿದು4 * * * ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ- ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ1 ಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2 ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ- ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ3 ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ- ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ4 ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥ ಮೌರಿ ಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5 ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ- ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ6 ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ- ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ7 ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ- ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ8 ನಿತ್ಯ ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ9 ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದ ಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ10 ನೋಡೆ ತಂಗಿ ನಮ್ಮ ದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ11 ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ- ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12
--------------
ತುಪಾಕಿ ವೆಂಕಟರಮಣಾಚಾರ್ಯ
ಎನ್ನ ಮನ ಕಂಡಕಡೆಗೆ ಎರಗುತಿದೆನಿನ್ನಲ್ಲಿ ನಿಲಿಸಿ ಕಾಯೊ ಪ ಚಕ್ಷುರಿಂದ್ರಿಯಗಳಿಂದ ಚದುರೆಯರಈಕ್ಷಿಸಿ ನೊಂದೆನೈಯಶಿಕ್ಷಕನು ನೀನೆ ಎನಗೆ ಸಿರಿಯರಸಭಕ್ಕುತರೊಳಿಟ್ಟು ಕಾಯೋ 1 ಶ್ರೋತ್ರೇಂದ್ರಿಯಗಳಿಂದ ಸತತ ದು-ರ್ವಾರ್ತೆಗಳ ಕೇಳಿ ಕೆಟ್ಟೆಕರ್ತೃ ಎನಗೆ ನಿನ್ನಯಾ ಕಥೆಗಳನುಅರ್ಥಿಯಿಂದೆರೆದು ಕಾಯೋ 2 ಘಾಣೇಂದ್ರಿಯಂಗಳಿಂದ ದುರ್ಗಂಧಗಳಘ್ರಾಣಿಸಿ ನೊಂದೆನೈಯಪ್ರಾಣೇಶ ನಿನಗರ್ಪಿತ ಪರಿಮಳವಮಾಣದೆ ಇತ್ತು ಕಾಯೋ 3 ರಸನೇಂದ್ರಿಯಂಗಳಿಂದ ಷಡ್ರಸಗಳನುಹಸಿದು ನಾ ಸೇವಿಸಿದೆನೋಬಿಸಜಾಕ್ಷನೇ ನಿನ್ನಯ ಪ್ರಸಾದವನುಆಸ್ವಾದಿಸೆನಗೆ ದೇವ 4 ತ್ವಚೇಂದ್ರಿಯಂಗಳಿಂದ ತಾಮಸರಸೋಕಿ ನಾ ಕೆಟ್ಟೆನೆಯ್ಯಕಾಕು ಮಾಡದೆ ಎನ್ನನು ಸಿರಿಕೃಷ್ಣಸಾಕಾರನಾಗಿ ಸಲಹೋ 5
--------------
ವ್ಯಾಸರಾಯರು
ಒಕ್ಕಲ ಮಾಡೆನ್ನ ಮುಕ್ಕುಂದ ತಂದೆ ಒಕ್ಕಲ ಮಾಡೆನ್ನ ಪ ಒಕ್ಕಲ ಮಾಡೆನ್ನ ದಕ್ಕಿಸಿ ಭವದೊಳು ಅಕ್ಕರದಲಿ ನಿಮ್ಮ ಮಿಕ್ಕ ಪ್ರಸಾದ ನೀಡಿ ಅ.ಪ ಆಸೆ ನೀಗಿಸೆನ್ನಭವದ ಪಾಶ ತರಿಯೊ ಮುನ್ನ ಪಾದ ದಾಸಾನುದಾಸರ ವಾಸದಿರಿಸಿ ಎನ್ನ ಪೋಷಿಸು ದಯದಿಂ 1 ಸೊಕ್ಕು ಮುರಿದು ಎನ್ನ ನಿಮ್ಮಯ ಪಕ್ಕದೆಳಕೊ ಎನ್ನ ತಿಕ್ಕಿ ಮುಕ್ಕುವ ಘನ ಮಕ್ಕಮಾರಿ ಸತಿಯ ರಕ್ಕರ್ಹಾರಿಸಿ ನಜರಿಕ್ಕೆ ಸಲಹುಜೀಯ 2 ಜನನ ಮರಣ ಬಿಡಿಸೊ ಎನ್ನಯ ಮನವ ನಿನ್ನೊಳಿರಿಸೊ ವನರುಹ ಬ್ರಹ್ಮಾಂಡ ಜನನಿ ಜನಕನಾದ ವನಜಾಕ್ಷ ಶ್ರೀರಾಮ ಘನಮುಕ್ತಿ ಪಾಲಿಸಿ 3
--------------
ರಾಮದಾಸರು
ಓಂಕಾರ ಪ್ರತಿಪಾದ್ಯ ಶಂಖಚಕ್ರಾಭಯಕರ ಬಿಂಕದಿಂದ ಬಾಕು ಟೊಂಕದಿ ಕಟ್ಟಿ ಮೆರೆವ ದೇವ 1 ಇಷ್ಟು ಜನರ ರೋಗ ತೊಟ್ಟಿ ತೀರ್ಥದಿಂದ ಕಳೆವ ಕಷ್ಟದ ಕಂಕಣ ಕಟ್ಟಿ ಮೆರೆವ ದೇವಾ 2 ದೇಶದೇಶದಿ ಬರುವ ದಾಸ ಜನರ ಅರ್ಥಿ ಕಾಸುವೀಸಕೆ ಕೊಟ್ಟು ಲೇಸಾಗಿರುವಿಯಿಲ್ಲಿ 3 ನಾಮ ತೀರ್ಥ ಪ್ರಸಾದ ಕಾಮಿಸೆ ವಿಕ್ರಯಿಸುವ ನೇಮಗಳನೆ ಕೊಟ್ಟು ತ್ರಿಧಾಮ ನಿಲಯನೆ 4 ಮಂಗಳ ಮಹಿಮನೆ ಗಂಗಾಜನಕನೆ ಅಂಗಜನಯ್ಯನೆ ವೆಂಕಟರಮಣನೆ 5 ತಾಳ ತಂಬೂರಿ ದಮ್ಮಡಿ ಮೇಳದೊಳು ದಾಸರು ವೇಳೆ ವೇಳೆಗೆ ಸೇವಿಸೆ ಕಾಳ ದೋಷವ ಕಳೆವ 6 ರಮಾ ಸೇವಿತÀ ವಿಜಯ ರಾಮಚಂದ್ರವಿಠಲ ನಿತ್ಯ ನಿನ್ನ ನಾಮಗಳನೆ ನುಡಿಸೊ 7
--------------
ವಿಜಯ ರಾಮಚಂದ್ರವಿಠಲ
ಕಡುಣಸಯ್ಯ ಗುರುವರೇಶ ಪರಮಪುರುಷ ಹರಿಸರ್ವೇಶ ಧ್ರುವ ನೋಡದಿರಯ್ಯ ಭಿನ್ನಭೇದ ಮಾಡೊ ದಯ ಸುಜ್ಞಾನಬೋಧ ನೀಡೊ ನಿಮ್ಮ ನಿಜಪ್ರಸಾದ ಕೊಡುವದನುಭವಾಮೃತಸ್ವಾದ 1 ಸರಿಯಗಾಣೆ ಹರಿಯೆ ನಿಮ್ಮ ಸಿರಿಯಲೋಲಾನಂದ ಬ್ರಹ್ಮ ಕರಿಯವರದ ದಯನಿಸ್ಸೀಮ ಮೊರಿಯಗೇಳಿ ಘನಮಹಿಮ 2 ಕರುಣ ದಯದಲಿ ನೀ ಪೂರ್ಣ ಶರಣಜನರ ಸುಭೂಷಣ ಮಹಿಪತಿಯ ಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕದರುಂಡಲಗಿ ಹನುಮಂತದೇವರು ಇಂಥಾ ಕೀರ್ತಿಯ ಮೂರ್ತಿನ್ನಾರೇ ನೋಡಮ್ಮಯ್ಯ ಪ ಸಂತತ ಸೀತಾಪತಿಯ ಧ್ಯಾನರೊಳು ಕಂತುವಿನಸ್ತ್ರವ ಖಂಡಿಸಿದೊಡೆಯಾ ಅ.ಪ. ಸೂರಿ ಸುಲಿಗೆ ನೋಡಮ್ಮಯ್ಯ ನೋಡಮ್ಮಯ್ಯ ಭೂಸುರರಾಯರು ಸೀಮೆಯ ಸುತ್ತಲು ಗಾಸಿಯ ಮಾಡದೆ ಗ್ರಾಮವ ಕಾಯ್ದ 1 ತಾರಣ ನಾಮ ಸಂವತ್ಸರ ಶುದ್ಧ ವೈಶಾಖದಿ ನೋಡಮ್ಮಯ್ಯ ಧರೆಯೊಳು ಕಲಹ ವಿಪರೀತವದರೊಳು ರಣಮಂಡಲ ನೋಡಮ್ಮಯ್ಯ ಊರೆಲ್ಲ ಮೊರೆಯಿಡೆ ಈಕ್ಷಿಸಿ ಮಹಿಮೆಯ ತೋರುವ ಅಭಯ ಪ್ರಸಾದವ ಕೊಡುವಾ 2 ಜಯ ನಮೋ ಎನೆ ನೋಡಮ್ಮಯ್ಯ ಅಕಲಂಕ ಶೇಷಾನೃಪ ಶ್ರೀ ರಾಮರ ಸೇವಕಮಣಿ ನೋಡಮ್ಮಯ್ಯ ಲೋಕದಧಿಕ ಗುರು ಕದರುಂಡಲೀಶಾ ಬೇಕೆಂದು ನಿಂತಾ ಶ್ರೀ ಹನುಮಂತ 3
--------------
ಕದರುಂಡಲಗೀಶರು
ಕನಸು ಕಂಡೆನು ನಾನು ಸಂತೋಷದಿ| ಕನಸು ಕಂಡೆನು ನಾನು ಅರನಿಮಿಷದೊಳು ಹರಿಯ ಮನಸಿನಲಿ ಸ್ಮರಿಸಿ ಮಹಾರೂಪವನು ಕೂಡ ಪ ವೆಂಕಟರಮಣನ ಯಾತ್ರೆಗೆ ಹೋದ್ಹಾಗೆ ಶಂಕೆ ಇಲ್ಲದೆ ಪರಶಿಜನಕ ಕಂಡ್ಹಾಗೆ ಬಿಂಕದಿಂದಲಿ ದೇವಸ್ಥಾನ ಪವಳಿಯ ಸುತ್ತ ಅಂಕುರಾರ್ಪಣ ಧ್ವಜಸ್ತಂಭದಲಿ ನಿಂತ್ಹಾಗೆ 1 ಅಡಗಿ ಶಾಲೆಯ ಅನ್ನಪೂರ್ಣೆಯನ್ನು ಕಂಡ್ಹಾಗೆ ದೃಢದಿ ಶ್ರೀನಿವಾಸ ದೇವರ ನೋಡಿದ್ಹಾಗೆ ಕಡು ಹರುಷದಲಿ ತೊಟ್ಲ ತೀರ್ಥ ಸೇವಿಸದ್ಹಾಗೆ ಸಡಗರದ ಮಧ್ಯರಂಗದಲಿ ನಿಂತ್ಹಾಗೆ 2 ಶಿರzಲ್ಲಿ ಕಿರೀಟ ಲಲಾಟ ತಿಲಕ ವಿಟ್ಟ್ಹಾಗೆ ಕೊರಳೊಳ್ ಮುತ್ತೀನಹಾರ ಪದಕ ತೋರಿದ ಹಾಗೆ ಕರದಲ್ಲಿ ಶಂಖಚಕ್ರ ಧರಿಸಿ ಕೊಂಡಿರುವ ಹಾಗೆ ಉರದಲ್ಲಿ ಶಿರಿಲಕುಮಿ ವಾಸವಿದ್ಹಾಗೆ 3 ಹೊನ್ನ ಹೊಸ್ತಿಲ ದಾಟಿ ವಳಗ್ಹೋಗಿ ನಿಂತ್ಹಾಗೆ ಚಿನ್ಮಯನ ರೂಪವನು ಚಿಂತಿಸಿದ ಹಾಗೆ ಅನ್ನ ಪ್ರಸಾದಾತಿ ರಸದÉೂೀಶಿ ಕೊಟ್ಹಾಗೆ ಪನ್ನ ಗಾದ್ರಿ ವಾಸನ ಕಣ್ಣಿಂದ ನೋಡಿದ್ಹಾಗೆ 4 ನಡುವಿನಲಿ ಒಡ್ಯಾಣ ಪೀತಾಂಬರವನುಟ್ಹಾಗೆ ಯಡಬಲದಿ ಜಯು ವಿಜಯ ನಿಂತಿರೋಹಾಗೆ ಪೊಡವಿಯೊಳ್ 'ಹೆನ್ನೆವಿಠ್ಠಲ’ ವೆಂಕಟೇಶನ್ನ ಕಡು ಹರುಷದಲಿ ಕಂಡು ಕೈಮುಗಿದು ನಿಂತ್ಹಾಗೆ 5
--------------
ಹೆನ್ನೆರಂಗದಾಸರು
ಕರುಣಿಸಮ್ಮಾ ತಾಯೆ ಕರುಣಿಸಮ್ಮಾ ಪ. ಕರುಣಿಸಮ್ಮಾ ಭರದಿ ವರಪ್ರಸಾದವ ತ್ವರದಿ ವರ ಶಂಕರನ ಜಾಯೆ ತ್ವರಿತದಿ ಕಾಯೆ ಅ.ಪ. ಇಷ್ಟ ಮೂರುತಿ ಶಿವನ ದಿಟ್ಟ ತೊಡೆಯಲಿ ಮೆರೆವ ದಿಟ್ಟ ರೂಪವ ತೋರೆ ದಿಟ್ಟ ಸುಂದರಿಯೆ ಪಾದ ಎನ್ನ ದಿಟ್ಟತನದಲಿ ಭಜಿಪ ಇಷ್ಟಕೊಡು ಮಾತೆ 1 ಭಜಿಪರ ಮನದಾತೆ ಸುಜನರಾಪ್ತೆಯೆ ನಿನ್ನ ಭಜಿಪ ಮನವನು ಇತ್ತು ಕಾಪಾಡು ತಾಯೆ ನಿನ್ನ ಸುಜನ ಸಂಗವನಿತ್ತು ದುರ್ಜನ ಸಂಗವ ಬಿಡಿಸಿ ಪಾದ ಭಜಿಪ ಭಾಗ್ಯವ ನೀಡೆ 2 ಭಾಗ್ಯದೇವತೆ ನೀನು ಸೌಭಾಗ್ಯ ಮಾಂಗಲ್ಯದಾ ಭಾಗ್ಯವನು ಕೊಟ್ಟು ಕಾಪಾಡು ತಾಯೆ ಕಾಯೆ ಯೋಗ ಮೂರುತಿ ಶ್ರೀ ಶ್ರೀನಿವಾಸ ಸಹೋದರಿಯೆ ಅನುರಾಗದಿಂ ಹರಿಪದವ ಭಜಿಪ ಭಾಗ್ಯವನಿತ್ತು 3
--------------
ಸರಸ್ವತಿ ಬಾಯಿ
ಕವಳತಾಯಿ ಕವಳ ಅಮ್ಮ ಪ ಪಾಪಿ ಪರದೇಶಿಯ ಮರೆಯ ಬೇಡಿರಮ್ಮ ಅ.ಪ ಸಂಜೆಯ ಕವಳಕ್ಕೆ ಸಾವಿರ ಆಪತ್ತು ಅಂಜಿ ಓಡುವುದೆಂದು ಕೇಳಿಲ್ಲವೇನಮ್ಮ ಭುಂಜಿಸಿ ನಿಮ್ಮಯ ಪತಿಯ ಪ್ರಸಾದದ ಎಂಜಲು ಎನಗಿಷ್ಟು ಜೋಳಿಗೆಗಿಕ್ರವ್ವ 1 ನಮದೊಂದು ಸಂಸಾರ ಬಲು ದೊಡ್ಡದವ್ವ ಶ್ರಮಿಸುವರದರೊಳಗೊಬ್ಬರಿಲ್ಲವ್ವ ಕಮಲವ್ವ ನಿಮ್ಮಯ ಅಮೃತಹಸ್ತದ ಕವಳ ಎಮಗೊಂದು ಕ್ಷಣದಲಿ ಅಮೃತವಾಗೋದವ್ವ 2 ಕ್ಷಿತಿಯೊಳು ಜ್ಞಾನಿಗಳಾಡುತಲಿಹರು ಅತುಲ ಮಹಿಮ ನಿಮ್ಮ ಪತಿಯ ಪ್ರಸಾದವ ಪ್ರತಿದಿನವಿತ್ತು ಪ್ರಸನ್ನರಾಗಿರವ್ವ 3
--------------
ವಿದ್ಯಾಪ್ರಸನ್ನತೀರ್ಥರು