ಒಟ್ಟು 37 ಕಡೆಗಳಲ್ಲಿ , 19 ದಾಸರು , 37 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದ ತೀರಥರಾಯ ಅಸ್ಮದ್ಗುರೋರ್ಗುರು ಕಾಯ ಪೊರೆಯಯ್ಯ ಜೀಯಾ ಪ ಪಾದ ಕಮಲಕೆ ನಂದ ಮಧುಕರ ನಂದದಲಿ ನಿಜ ಮಂದ ಜನರಿಗೆ ನಂದ ಕೊಡುವಾ ಮೂರ್ತಿ ಆನಂದಕಾರಿಯೆ ಅ.ಪ ಮಧ್ಯಮನಿ ದ್ವಿಜನಲ್ಲಿ ಉದ್ಭವಿಸಿ ನೀನೂ ಮಧ್ವಮುನಿ ಪೆಸರಲ್ಲಿ ದುರ್ವಾದಿಗಳ ಅ - ಶುದ್ಧ ಭಾಷ್ಯಗಳಲ್ಲಿ ಜಯಪಡೆದ ನಿನ್ನಾ ಶುದ್ಧ ಭಾಷ್ಯಗಳಲ್ಲಿ ಭಕ್ತಿಯಿಂದಲ್ಲಿ ಶುದ್ಧ ಶ್ರೀ ಹರಿಮತದ ಶುಭ ಸಿದ್ಧಾಂತ ಸ್ಥಾಪಿಸಿ ಜಗದಿ ಜೀವರ ಸಿದ್ಧಗಣಕಧಿನಾಥನೆಂದೂ ಪ್ರ - ಸಿದ್ಧಗೈಸಿದಿ ಶುದ್ಧ ಮೂರುತಿ 1 ಬದರಿಕಾಶ್ರಮವನ್ನು ಐದಿದ್ಯೊ ಮುದದಿ ಪದುಮನಾಭನನ್ನು ಬಲಗೈಸಿ ನಿನ್ನ ಬದಿಗ ಜನರಿಗಿನ್ನೂ ಸುವಾಕ್ಯ ದಿಂದಲಿ ಪೇಳಿದದು ನಿಜ ಪದುಮನಾಭನೆ ಪರಮದೈವನು ಪದುಮೆ ಮೊದಲು ಬ್ರಹ್ಮಾಂತ ಜೀವರ ಪದದಿ ಗುಣದ ತಾರತಮ್ಯವ ಹೃದಯ ಮಂದಿರದಲ್ಲಿ ಪೇಳಿದ 2 ಘನ್ನಮಹಿಮನೆ ಎನ್ನಮನ ವಚನ ಕಾಯದಿ ಇನ್ನು ಮಾಡುವುದನ್ನು ಸ್ವೀಕರಿಸಿ ಹರಿಗೆ ಮುನ್ನ ನೀಡೆಲೊ ಚೆನ್ನವಾಗಿ ನಿಜಫಲ ನಿನ್ನ ಜನರೀಗಿನ್ನ ನೀಡಯ್ಯ ಮುನ್ನ ನಿನ್ನ ಒಳಗೆ ನಿರುತ ಇರುವ ಘನ್ನ ಗುರುಜಗನ್ನಾಥವಿಠಲನ ಎನ್ನ ಮನದಲಿ ತೋರಿಸೆಂದು ನಿನ್ನ ಪದಯುಗವನ್ನು ಭಜಿಸಿದೆ 3
--------------
ಗುರುಜಗನ್ನಾಥದಾಸರು
ನಿನ್ನ ಚಿತ್ತ ನಿನ್ನ ಚಿತ್ತ ನಿನ್ನ ಚಿತ್ತವೋ ಪ. ಬನ್ನ ಬಡಿಸಬೇಡವಿನ್ನು ಭಯವ ಬಿಡಿಸಿ ಕಾಯೊ ಎನ್ನ ಅ.ಪ. ಘನ್ನ ಮನಸು ಮಾಡಿ ಈಗ ಎನ್ನ ಸಲಹಿದರೆ ಜಗದಿ ನಿನ್ನ ಕೀರ್ತಿಯು ಉನ್ನತದಲಿ ಮೆರೆವುದಿದೆಕೊ ಬನ್ನ ಬಡಿಸಬೇಡವಿನ್ನು ಘನ್ನಮಹಿಮ ಕೇಳು ಸೊಲ್ಲ ಇನ್ನು ಸುಮ್ಮನಿರಲು ಸಲ್ಲ ಘನಮಹಿಮನೆ 1 ಬುದ್ಧಿ ಭ್ರಮೆಯಿಂದ ನಾನು ಪೊದ್ದಿರುವ ಭಯವ ಬಿಡಿಸಿ ನಿದ್ದೆಯಲಿ ತಿಳಿಸಿದ್ವಾರ್ತೆ ಶುದ್ಧಗೊಳಿಸುತ ಮುದ್ದುಕೃಷ್ಣ ಅಭಯ ತೋರಿ ಉದ್ಧರಿಸಿದರೆ ಎನ್ನ ಶ್ರದ್ಧೆಯಿಂದ ನಿನ್ನ ಕೀರ್ತಿ ಮಧ್ವಮತದಿ ಸಾರುವೆನು2 ಬೆದರಿಸುವ ಪರಿಯದೇನು ಬದಿಗನಾಗಿ ಅರಿಯದೇನು ಹೃದಯದಲ್ಲಿ ನಿಂತ ಮೇಲೆ ಎನ್ನದಿನ್ನೇನು ಪದುಮನಾಭ ನಿನ್ನ ನಂಬಿ ಪದೋಪದಿಗೆ ನೆನೆಸುತಿರಲು ವಿಧ ವಿಧದಿ ಪರಿಕಿಸುವ ವಿಧವನರಿಯೆ ಪದುಮೆಯರಸ3 ಉಡಲು ಉಣಲು ಆಸೆಯಿಲ್ಲ ತೊಡಲು ಇಡಲು ಮಮತೆಯಿಲ್ಲ ಎಡದ ಬಲದ ನೆಂಟರಭಿಮಾನವಿಲ್ಲವು ಎಡರು ಬರಲು ಭಯವು ಇಲ್ಲ ಬಿಡಲು ದೇಹ ಅಂಜಿಕಿಲ್ಲ ನಡುವೆ ಕರೆವುದುಚಿತವಲ್ಲ ಮೃಡನ ಸಖನೆ ಕೇಳೊ ಸೊಲ್ಲ 4 ನಿರ್ದಯವನು ಮಾಡಲಿಕ್ಕೆ ಮಧ್ಯಮಧಮಳಲ್ಲವಿನ್ನು ಮಧ್ವಮುನಿಯ ಮತದಿ ಜನಿಸಿ ಶುದ್ಧ ಭಾವದಿ ಶುದ್ಧ ಸಾತ್ವಿಕರು ತಂದೆ ಮುದ್ದುಮೋಹನ ಗುರುಗಳಿಂದ ಪೊದ್ದಿ ದಾಸ್ಯರೀಗ ಜಗದಿ ಬದ್ಧ ಕಂಕಣಧರಿಸಿ ಮೆರೆವೆ 5 ಒಡೆಯ ನೀನು ಎನ್ನ ಧರೆಗೆ ಬಿಡದೆ ತಂದು ಜನ್ಮವಿತ್ತು ಬಿಡದೆ ಕಾಯ್ವ ಗುರುಗಳನ್ನು ಅಗಲಿಸುತ್ತಲಿ ಅಡಿಗಡಿಗಭಯವ ತೋರಿ ಪಿಡಿದು ಕೈಯ್ಯ ಸಲಹದಿರಲು ಅಡಿಗಳಾರದಿನ್ನು ನಾನು ಪಿಡಿಯೆ ಕಡಲಶಯನ 6 ನಾಥರಾರು ಎನಗೆ ಇಲ್ಲ |ಅ- ನಾಥಗಳನ್ನು ಮಾಡಿ ನಿನ್ನ ಮೂತಿ ತಿರುಹಿ ಸಲಹದಿರಲು ಪಾತಕಲ್ಲವೆ ಪಾತಕಾದಿ ದೂರನೆಂಬೊ ಖ್ಯಾತಿ ಸಟೆಯದಾಯ್ತು ಈಗ ನೀತಿಯರಿತು ಪೊರೆಯದಿರಲು ಜಾತರಹಿತ ಜಗದಿ ಸಲಹು 7 ದಾಸತನದಿ ಮೆರೆವೊದೊಂದು ಆಸೆಯಿಲ್ಲದಿನ್ನು ಬೇರೆ ಆಸೆಯೊಂದು ಇಲ್ಲ ಕೇಳು ನಾಶರಹಿತನೆ ಪಾಶಕರ್ಮ ಹರಿಸಿ ನಿನ್ನ ದಾಸಳೆಂದು ಮೆರೆಸೆ ಜಗಕೆ ಈಶನೆಂದು ನಿನ್ನ ಮೆರೆಸಿ ಆಸೆ ಪೂರೈಸಿಕೊಂಬೆ 8 ಮೃತ್ಯುವಿಗೆ ಮೃತ್ಯುವಾಗಿ ತುತ್ತುಮಾಡಿ ಜಗವ ನುಂಗಿ ಮತ್ತೆ ಬ್ರಹ್ಮಾಂಡ ಸೃಜಿಸಿ ಪೆತ್ತು ಜೀವರ ಭಕ್ತ ಜನಕೆ ಬಂದ ಎಡರು ಮೃತ್ಯುಗಳನು ಕಾಯ್ದ ದೇವ ಮೃತ್ಯು ಮೃತ್ಯು ಶರಣು ನೃಹರಿ ಮೃತ್ಯು ಹರಿಸಿ ಕಾಯೊ ಶೌರಿ9 ಬಿಡಲಿಬೇಡ ಕೈಯ್ಯ ಇನ್ನು ಬಿಡದೆ ಕಾಯೊ ಶರಣು ಶರಣು ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲಾತ್ಮಕ ಕಡೆಗೆ ನಿನ್ನ ಪಾದಸೇವೆ ಬಿಡದೆ ಕೊಡುವ ದೃಢವ ಬಲ್ಲೆ ಕರವ ಪಿಡಿಯೊ 10
--------------
ಅಂಬಾಬಾಯಿ
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪ್ರಾಣ ಗುರು ಜಯ ವಿಠಲ ಕಾಪಾಡು ಇವಳ ಪ ಪ್ರಣತಾರ್ತಿ ಹರನೆಂದು ಭಿನ್ನವಿಪೆ ಸತತಾ ಅ.ಪ. ಪತಿವ್ರತಾಮಣಿ ಎನಿಸಿ ಪತಿಸೇವೆಯೊಳುನಿರತೆಸತತ ಸದ್ಭಕ್ತಿ ಶ್ರೀ ಹರಿಗುರುಗಳಲ್ಲೀ |ಅತಿಶಯದಿ ಮಾಡುತಲಿ ವಿಹಿತವನು ತೊರೆಯದಲೆಕೃತಕಾರ್ಯಳಾಗಿಹಳ ಸತಿಯ ಸಲಹುವುದೂ 1 ತೈಜಸ ದಯಾಪಯೋನಿಧಿ ಹರಿಯೆಆ ಪರಿಮಳಾರ್ಯ ಯತಿರೂಪವನೆ ಕೊಂಡುಕೈ ಪಿಡಿದು ಕಾಯ್ವೆನೆಂಬಭಯ ಹಸ್ತವ ತೋರಿರೂಪವನು ಮರೆಮಾಡ್ಡೆ ಬೃಂದಾವನಾಂತ 2 ಮೋಚಕೇಚ್ಛೆಯೊಳ್ಸವ್ಯ ಸಾಚಿಗೇ ಅತಿಪ್ರೀಯಖೇಚರೋತ್ತಮ ಪ್ರಾಣಗೊಪ್ಪಿಸುತ ಇವಳಾನೀಚೋಚ್ಚತರತಮ ಜ್ಞಾನ ಸ್ಥಿರಪಡಿಸುತ್ತಪ್ರಾಚೀನ ದುಷ್ಕರ್ಮ ಪರಿಹರಿಸೊ ಹರಿಯೇ 3 ಪ್ರಣತಜನ ಪರಿಪಾಲಎನುತ ಭಿನ್ನೈಸುವೆನೊ ವೇಣುಗೋಪಾಲ 4 ಬದಿಗ ನೀನಾಗಿರಲು ಭಯವೇನೊ ಬುಧವಂದ್ಯವದಗಿ ಹೃದ್ಗುಹದೊಳಗೆ ತೋರಿತವ ರೂಪಮುದದಿಂದ ಕಳೆ ಇವಳನಾದಿ ರೋಗವನೆಂಬೆಇದನೇವೆ ಸಲಿಸೊ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದ ಕೃಷ್ಣ ಚಂದದಿಂದ | ಕೊಳಲನೂದುತ ಪ ಸುಜನ | ವೃಂದ ನೋಡುತ ಅ.ಪ. ಹೃದಯದಾರ್ತಿ ನೀಗಿ ಮನಕೆ | ಮುದವ ತೋರುತಸದಯ ಹೃದಯ ಬದಿಗನಾಗಿ | ಅಭಯ ನೀಡುತ 1 ತುಡಗ ತಾನು ಪಿಡಿದ ಕೊಳಲ | ಬೆಳಕ ಮಾಡುತಹುಡುಗ ತಾನು ಕಂಡು ಕಾಣ | ಧಾಂಗೆ ತೋರುತ 2 `ಸೇವ್ಯ ಮಾನ ಮಾನಸಾಂದ | ಮಾನ ಸಾಂಡಂ’ಕಾವ್ಯ ಭೋದಿ ಗುರು ಗೋವಿಂದ | ವಿಠಲ ವ್ಯಕ್ತಂ 3
--------------
ಗುರುಗೋವಿಂದವಿಠಲರು
ಭೂತ ರಾಜನುತ ವಿಠಲ | ಕಾಪಾಡೊ ಇವನಾ ಪ ದಾತ ನೀನಲ್ಲದಲೆ | ಕಾವರಾರಿಹರೋ ಅ.ಪ. ಗುರು ರೂಪಿ ತೈಜಸನು | ನೆರವಾಗಿ ಸ್ವಾಪದಲಿವರಸು ಉಪದೇಶವನು | ಇತ್ತು ಪೊರೆದಿಹನೋ |ಮರಳಿ ಇವ ಲಾತವ್ಯ | ಗುರುರಾಜ ಭಕ್ತನಿಹಪೊರೆಯ ಬೇಕಿವನೆನುತ | ಪ್ರಾರ್ಥಿಸುವೆ ಹರಿಯೇ 1 ನಿಷ್ಕಾಮ ಭಕ್ತನನ | ಮಾಡಿ ನೀ ಸಲಹಯ್ಯಸತ್ಕಾಮಗಳ ಗರೆದು | ಸಾಧನೆಯ ಗೈಸೀದುಷ್ಕಾಮಗಳಿಗೆಡೆಯ | ನೀ ಕೊಡದೆ ಪೊರೆಯಯ್ಯಸತ್ಕರ್ಮ ಸತ್ಸಂಗ | ಸರ್ವದಾ ಕೊಡುತಾ 2 ಸತಿಸುತರು ಹಿತರಲ್ಲಿ | ದುರ್ಮಮತೆ ಕಳೆಯುತ್ತಮತಿಮತಾಂ ವರರಂಘ್ರಿ | ಶತ ಪತ್ರರತನಾಹಿತದಿಂದ ನೀ ಸಲಹಿ | ಗತಿ ಪ್ರದನು ಆಗಯ್ಯಕೃತಿ ರಮಣ ಪ್ರದ್ಯುಮ್ನ | ಪ್ರತಿ ರಹಿತ ದೇವಾ 3 ಮಧ್ವಮತ ಪದ್ಧತ್ಯಭಿ | ವೃದ್ಧಿಗೈಸುತಲಿವಗೆಸಿದ್ಧಾಂತ ಜ್ಞಾನದಲಿ | ಸಿದ್ಧ ನೆನಿಸಯ್ಯಾವೃದ್ಧಿಯಾಗಲಿ ಜ್ಞಾನ | ವೈರಾಗ್ಯ ಭಕ್ತಿಗಳುಮಧ್ವರಮಣನೆ ದೇವ | ಬುದ್ಧಿ ಬೋದಕನೇ 4 ಬದಿಗ ನೀನಾಗಿದ್ದು | ಹೃದಯದವಕಾಶದಲಿಮುದದಿಂದ ತವರೂಪ | ತೋರಿ ಸಲಹಯ್ಯಾ |ಇದಕನ್ಯ ನಾ ಬೇಡೆ | ಯದು ವರೇಣ್ಯನೆ ಕೃಷ್ಣಸದಯ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಭೋಗಿವರನೇ ಪಾಲಿಸೋ ಪ ಆಗಸದೊಳು ನೀನಾಗಮಿಸುತಲಿ ಸ-ದಾಗತಿ ಭೋದವ ಭೋಗಿಸಿ ನಿಂದೇ ಅ.ಪ. ಪರಿ ಪ್ರಾ |ರಬ್ಧವ ಭೋಗವ | ನಾದರದನುಭವಸಾಧನವೀವುದು | ಹೇ ದಯವಂತ 1 ಹೃದಯಾಬ್ಜಾಮಲ | ಸದನದಿ ಸುರತರುಹದುಳ ದೊಳಾಶ್ರಿತ | ಬದಿಗನಿನಾದೆಯೊ |ಸದಮಲ ಶಯ್ಯನೆ | ಇದಿರಾವನು ತವಪದವಿಗೆ ಸುರರೊಳು | ಬುಧಜನ ವಂದ್ಯ 2 ಪತಿ ಗುರುಗೋವಿಂದ ವಿಠಲನ | ಭಾವದಿ ಕಾಣಿಸಿ 3
--------------
ಗುರುಗೋವಿಂದವಿಠಲರು
ಮನವೆ ಎಲೆ ಮನವೆ ನೀನು ಯೋಚಿಸಿ ಕೆಡುವುದು ಅನುಚಿತವಲ್ಲೆ ಪ ನೀ ಮನನಮಾಡಿದ ಸಂಸಾರಿರದು ಕಾನನದ ಬೆಳದಿಂಗಳು ಇದು ಪರಿ ತಿಳಿದು ಹೀನಯೋಚನೆ ಬಿಟ್ಟು ಧ್ಯಾನಕವಚ ತೊಟ್ಟು ಜ್ಞಾನವೆಂಬಾಯುಧಪಾಣಿಯಾಗೆಲೊ ಬೇಗ 1 ಈ ದೇಹವೆಂಬುವ ಕಾಂತಾರ್ಹೊಕ್ಕು ಉಪಾ ಯುದ್ಹುಲಿಗಳ ತರಿದ್ಹಾಕು ಮಹಮಾಯ ಕೋಣಗಳೆಂಟು ನೂಕು ದಾಯಾದ್ಯೈವರ ಕೊಂದು ಜೀವಘಾತಕರಾದ ಮೂವರಂ ಭಂಜಿಸಿ ದ್ವಯಮಾರ್ಗ ಗೆಲಿಯೆಲೊ 2 ಕಂಟಕ ಬದಿಗಿಟ್ಟು ಬಹ ಆರೊಂದು ನದಿಗಳ ದಾಂಟು ಭೋರ್ಗರೆವ ಸರ್ಪನ ಹೆಡೆ ಮೆಟ್ಟು ಮಾರಾರಿ ವಿನಮಿತ ಧೀರ ಶ್ರೀರಾಮಪಾದ ವಾರಿಜಕ್ಕೆರಗಿ ಗಂಭೀರ ಸುಖದಿ ಮೆರಿ 3
--------------
ರಾಮದಾಸರು
ಮನುಜ ಮೃಗವೇಷ | ವಿಠಲ ಪೊರೆ ಇವಳಾ ಪ ಅನಘ ಅನಿಲಾಂತಸ್ಥ | ಗುಣಪೂರ್ಣ ಹರಿಯೇ ಅ.ಪ. ಗುರುಮಹಿಮೆ ಅರಿಯದಲೆ | ಚಿರಕಾಲ ಬಾಳಿಹಳೊಮರುತಾಂತರಾತ್ಮಹರಿ | ವರಭೋಗಿ ಶಯನಾತರತಮದ ಸುಜ್ಞಾನ | ಎರಡು ಮೂರ್ಭೇದಗಳಅರುಹಿ ನೀ ಪೊರೆ ಇವಳ | ಸರ್ವ ಸುಲುಭಾಖ್ಯ 1 ಬದಿಗ ನೀನಾಗಿದ್ದು | ಮುದುಡ ಜೀವಿಯ ಮನಕೆವದಗಿ ಬಾರದಲೇವೆ | ಅಜ್ಞಾನ ಮುಸುಕೀಸದಮಲಾಂತಃ ಕರಣ | ದುದಯವನೆ ಕಳಕೊಂಡುವಿಧವಿಧದಿ ಪರಿತಪಿಸಿ | ನೊಂದಿಹಳ ಪೊರೆಯೋ 2 ಸರ್ವ ಬಗೆಯಲಿ ವಂದ್ಯ | ಸರ್ವಂತರಾತ್ಮಕನೆನಿರ್ವಿಕಾರನೆ ನಿನ್ನ | ನಾಮ ಸುಧೆಯಾಸರ್ವದಾ ಉಣಿಸಿ ಪೊರೆ | ಇವಳ ಎನೆ ಬಿನ್ನವಿಪೆಸರ್ವಸುಂದರ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಯಾವಲ್ಲಿ ಅಡಗಿರುವಿ ಯಾವಲ್ಲಿ ಹುಡುಕಲಿಭಾವದ ಮೂಲೆಯ ರಾವನು ಬಿಟ್ಟು ಅ.ಪ. ಕಣ್ಣುಮುಚ್ಚಾಲೆಯಾಟ ಬೇಡಯ್ಯ ಈಬಣ್ಣದ ನುಡಿಯ ಬೇಟಕಣ್ಣು ಮುಚ್ಚಲು ಕೊಟ್ಟಿ ಟಣ್ಣನೆ ಜಿಗಿದೋಟಅಣ್ಣಾ ಹುಡುಕಿ ಹುಡುಕಿ ಹಣ್ಣಾಗಿ ಹೋದೆನೋ 1 ಎಲ್ಲೆಲ್ಲೂ ತುಂಬಿರುವೆ ಹುಡುಕಲು ನೀನೆಲ್ಲೆಲ್ಲ್ಯೂ ಸಿಗದಿರುವೆಕ್ಷುಲ್ಲಕನೆನ್ನನ್ನು ಚಲ್ಲದೆ ನನ್ನೆದುರುಚೆಲ್ವರೂಪದೆ ಬಂದು ನಿಲ್ವುದನ್ನು ಬಿಟ್ಟು 2 ಕಡುಕಷ್ಟ ಹುಡುಕುವದು ಹಿಡಿದು ಹಿಡಿದು ತಂದುಒಡಲಲ್ಲಿಡಲು ಮತ್ತೇಒಡನೆ ನುಸುಳಿಕೊಂಡುಬಿಡವಲೋಡೋಡಿ 3 ಇದೀಗ ನಡೆದು ತಂದು ನೆನೆಯಲು ನಿನ್ನಸದಾವಕಾಲಕೆಂದು ಹೃದಯದ ಗವಿಯೊಳುಮುದದಿ ಕೂಡಿಸಿ ಮೇಲೆಬದಿಗೆ ಕಾವಲವಿಟ್ಟು ಮನವ ಟೊಣೆದು ನೀ 4 ಬದರಿ ಕಾಶಿ ಕಂಚಿಯೋ ನೀನಿರುವುದುಮಥುರೆ ಪಂಢರಪುರವೊಪದುಮಾವತಿ ಗಿರಿಯೋ ಉಡುಪಿ ದ್ವಾರಕೆಯೊಗದುಗೋ ನೀ ಹೇಳಯ್ಯ ವೀರನಾರಾಯಣ 5
--------------
ವೀರನಾರಾಯಣ
ವೆಂಕಟೇಶ ಕಲ್ಯಾಣ ಶ್ರೀವೆಂಕಟ ದೊರೆಯೆ ಪ ವಿಶ್ವಸೃಷ್ಟಿಯಗೈದಂಥ ತಾನಿನ್ನು ಅರಿಯೆನು ಎಂತೆನಲು ಅ.ಪ ಸುರವರ ನಾರೆಂದು ಅರಿಯೆಭೃಗುವು ತಾನು ಪತಿ ಹರ ವಿಧಿಗಳೆನೆಲ್ಲ ಬರುವ ಬಗೆಯ ಕಂಡು ಸುರತ ಕೇಳಿಯಸೋಗು ಧರಿಸಿ ಮಲಗಿರಲಂದು ಜರಿದುವದಿಯಲು ವಕ್ಷ ಹರಿಸಿ ದುಗುಡವ ಮುನಿಗೆ ವರಸಿ ಚರಣದ ಕಣ್ಣು ತರಿದು ಸಾಧನೆ ಅಧಿಕ ಸಿರಿಗೆ ಪ್ರೇರಿಸಿ ಕೋಪ ತೊರೆದು ಧಾಮವ ಬೇಗ ಧರೆಗೆ ಇಳಿಯುತ ಬಂದು ಗಿರಿಯ ಹುತ್ತವ ಸೇರಿ ಸುರಿಸೆ ವಿಧಿಯು ಪಾಲು ಕರುಣದಿಂದಲಿ ಕೊಂಡು ದೊರೆಯ ಸೇವಕ ಗೋವ ಹರಿಸೆ ಕೊಡಲಿಯ ನೆತ್ತೆ ಶಿರವನೊಡ್ಡುತ ರಕ್ತ ಧಾರೆ ಚಿಮ್ಮಿಸಿನಭದಿ ಬರಲು ಚೋಳನು ದೊರೆಗೆ ಕ್ರೂರ ಶಾಪವನಿತ್ತು ಕರೆಸಿಗುರುಗಳಮದ್ದು ತರಲು ಹೊರಟದೇವ ನಿರುತ ಚಿನ್ಮಯಗಾತ್ರ ಉರು ವೈದ್ಯ ಧನ್ವಂತ್ರಿ ನಿರುಪಮ ನಾಟಕದೆ 1 ಸಾಮ ವಿಶ್ವದ ಸಾರ್ವಬೌಮ ಬೇಡಿದೆ ರಚಿಸೆ ಧಾಮ ಕ್ರೋಢನ ಕಂಡು ಪ್ರೇಮದಿಂದಲಿ ಬಕುಳೆ ವಾಮ ಕಂದನು ಆಗಿ ಭಾಮೆ ಪಾಕವನುಂಡು ಕಾಮ ವರ್ಜಿತ ಪೂರ್ಣ ಕಾಮ ಕುದುರೆಯನೇರಿ ಕಾಮ ಬೇಟೆಯೋಳ್ ನಿಜ ಕಾಮಿನಿಯನು ಕಂಡು ದ್ಧಾಮ ಮೋಹವ ತೋರಿ ಭೂಮಿಜಾತೆಯ ಘಟಿಸೆ ಭಾಮೆ ಬಕುಳೆಯ ಕಳಿಸಿ ಧರ್ಮದೇವತೆಯೆನಿಸಿ ಜಾಮಾತ ಸನ್ನಾಹ ಜಾಣ್ಮಿಯಿಂದಲಿನಡೆಸಿ ಕಾಮಿತಾರ್ಥವ ಕೊಂಡು ಧಾಮ ಸೇರಲು ಬಕುಳೆ ಹೇಮಮಯ ದಾರಿದ್ರ ನೇಮದಾಟವ ತೋರಿ ಹೇಮಗರ್ಭನ ಕರಿಸೆ ಸೋಮಶೇಖರ ಕೊಡಿಸೆ ಹೇಮರಾಶಿಯ ತಂದು ಭೀಮರುಜೆಗಳ ನಟಿಸೆ ಸೋಮಸೋದರಿಕರಿಸಿ ಮಾಮನೋಹರಗೈದ ಸೀಮೆಇಲ್ಲದಂಥ 2 ಮದುವೆ ಹಬ್ಬಿಸಿ ಭಕ್ತ ಹೃದಯ ತುಂಬುವ ನಂದ ಮುದದಿ ಬೆಳೆಸೆ ಪಯಣ ವದಗೆ ಶುಕರಾತಿಥ್ಯ ಸದಯಗೊಳ್ಳುತ ತೃಪ್ತಿ ಬದಿಗರೆಲ್ಲರಿಗಿತ್ತು ಮದನಮೋಹನ ತೇಜ ಮದುವೆ ಊರನು ಸೇರಿ ಕುದಿವ ಕುತೂಹಲದಿ ಅದ್ಭುತ ಸ್ವಾಗತವ ಪದುಮಾವತಿಯ ತಂದೆ ಹೃದಯ ಪೂರ್ವಕ ನೀಡೆ ಆದರದಿ ಸ್ವೀಕರಿಸಿ ಪಾದದ್ವಂಧ್ವವ ನೀಡಿ ವೇಧಾದಿ ನಿಜವೃಂದ ಮೇದಿನೀ ಸುರವೃಂದ ಮೋದ ಮೆಲ್ಲಲು ಕೂಡಿ ವೇದ ಘೋಷವುಗೈಯೆ ವಾದ್ಯದುಂದುಭಿ ಮೊಳಗೆ ವೇದವೇದ್ಯನು ಮದುವೆ ವೇದಿಕೆಯನು ಏರಿ ಕಾದುಕೊಂಡಿಹ ಜನಕೆ ಸಾಧಿಸುತಲಭೀಷ್ಠ ಕರ ಸಾದರ ಪಿಡಿದಂಥ ಖೇದ ತರಿಯುತ ನಿಜ ಮೋದದಾನವ ಗೈವ 3 ತಿರುಪತಿ ತಿಮ್ಮಪ್ಪ ಸುರಗಣ ಜಗದಪ್ಪ ವರಸಮರಿಲ್ಲಪ್ಪ ಭರದಿ ಕಸಿವಕಪ್ಪ ಅರಿತವರಿಲ್ಲಪ್ಪ ಧರಿಸಿಹ ಸಿರಿಯಪ್ಪ ಕರುಣ ಸುರಿಸುವನಪ್ಪ ಉರುಗಗಿರಿಯಲ್ಲಿಪ್ಪ ಸುರತರು ಇವನಪ್ಪ ಗಿರಿಸಪ್ತ ದೊರೆಯಪ್ಪ ಹರಿಕೆ ಕೊಳ್ಳುವನಪ್ಪ ಅರಿಮಾರಿ ಸರಿಯಪ್ಪ ಶರಣರ ಪೊರೆಯಪ್ಪ ಕರೆಕರೆ ಬೇಡಪ್ಪ ಸ್ವರತ ಸುಖಮಯನಪ್ಪ ಅರವಿದೂರನಪ್ಪ ಮರೆವ ಶರಣರ ತಪ್ಪ ಸರ್ವಹೃದಯಗನಪ್ಪ ಪರಿಪೂರ್ಣಗುಣನಪ್ಪ ಅರಿಶಂಖುಧರನಪ್ಪ ಉರಿವ ರವಿಯಲ್ಲಿಪ್ಪ ಸರ್ವಮುಕ್ತರಿಗಪ್ಪ ಬಿರಿವ ಖಳರೆದೆಯಪ್ಪ ಮರುತ ಮಂದಿರನಪ್ಪ ಪರಿಮರ ಹೌದಪ್ಪ ಪೊರೆದೆ ಮಾಧವನಪ್ಪ ವರಲೀಲಾ ಮಯನಪ್ಪ ಪರಮ ಅದ್ಭುತನಪ್ಪ ಪರಮಾತ್ಮಹೌದಪ್ಪ ಕರಣ ಚೋದಿಪನಪ್ಪ ಕರಣಕ್ಕೆಸಿಗನಪ್ಪ ದುರಿತ ಪಾವಕನಪ್ಪ ಪರಮ ಪಾವನನಪ್ಪ ಹರನ ಅಪ್ಪನಿಗಪ್ಪ ಪರಮೋಚ್ಚಹೌದಪ್ಪ 4 ಬಾದರಾಯಣ ಪೂರ್ಣ ಭೋಧ ತೀರ್ಥರ ದೈವ ಮೋದ ಚಿನ್ಮಯಗಾತ್ರ ವೇದ ವಿಭಜಿಸಿ ನಿಂದ ಖೇದವಿದ್ಯೆಯ ಕೊಂದ ವಾದಿವಾರಿಣಿ ಸಿಂಹ ವಾದಿರಾಜರ ಹೃದಯ ಮೋದ ಹಯಮುಖ ಶುದ್ಧ ವೇದರಾಶಿಯತಂದ ವೇಧಗರುಹಿದ ಕರುಣಿ ಖೇದ ನೀಡುತಲಿದ್ದ ಆದಿದೈತ್ಯರ ಕೊಂದು ಮೇದಿನಿಯನು ಎಯ್ದೆ ಶ್ರೀಧರ ನರಸಿಂಹ ಗೋಧರಮಹಿದಾಸ ಕಾದುಕೊ ಶ್ರೀ ವಿಷ್ಣು ಭೇದ ವಿದ್ಯೆಯಮನಕೆ ಭೋಧಿಸು ವರ ಕಪಿಲ ಸಾಧು ಋಷಭದತ್ತ ಯಾದವ ಕುಲರನ್ನ ಕಾಯ್ದೆ ಗೋಪಿಯ ರನ್ನ ಸೀಳ್ದೆ ಕೌರವರನ್ನ ಪೇಳ್ದೆ ಪಾರ್ಥಗೆ ಗೀತೆ ಶುದ್ಧ ಜಯಮುನಿಹೃಸ್ಥ ಮಧ್ವ ಇಂದಿರೆನಾಥ ಮುದ್ದು ಕೃಷ್ಣವಿಠಲ ಬಿದ್ದೆ ಪಾದದಿ ಶರಣು 5
--------------
ಕೃಷ್ಣವಿಠಲದಾಸರು
ಶ್ರೀ ಧನ್ವಂತ್ರಿ ಸ್ತೋತ್ರ(ನಾರಾಯಣಾಚ್ಯುತ ವಿಠಲ ದಾಸಿಗಾಗಿ) ಕಾರುಣ್ಯ ನಿಧಿ ತವಾ | ಪಾರ ಮಹಿಮೆಯ ಕೇಳಿಸಾರಿದೆನೊ ಪಾದಾಬ್ಜ ಶರಣೆಂದು | ಶರಣೆಂದೆಶ್ರುನಾಥಪಾರು ಮಾಡಾಕೆಯ ವೃಜಿನವ 1 ಆಂತ್ರಕೆಟ್ಟಿಹುದೆಂದು | ತಾಂತ್ರಿಕರು ಪೇಳುವರುಆಂತ್ರ ಸರಿಮಾಡುವ ಕಾರ್ಯವ | ಕಾರ್ಯನಿರ್ವಹಿಸಿ ಸ್ವಾ-ತಂತ್ರ ಪುರುಷಾ ದಯತೋರೋ 2 ಪಾದ ಭಜಿಸೂವ | ಭಜಿಸೂವ ದಾಸಿಗೆಈ ರೀತಿ ಭವಣ್ಯಾಕೊ ಧನ್ವಂತ್ರಿ 3 ಆರೋಗ್ಯ ಆಯುಷ್ಯ | ಆರಾಧಕರ್ಗೀವೆಈರನುತ ಧನ್ವಂತ್ರಿ ಕರುಣಾಳು | ಕರುಣಾಳು ಸರ್ವಜ್ಞಆರೋಗ್ಯ ದಾಸಿಗೆ ಕೊಡು ಎಂಬೆ4 ಧಂ ಎಂದು ಉಚ್ಛರಿಸೆ | ಧ್ವಂಸ ಮಾಡುವೆ ರೋಗಧನಂತ್ರಿಯೆನ್ನೆ ಭವರೋಗ | ಭವರೋಗ ವಾರಿಸುವಧನ್ವಂತ್ರಿ ರೂಪಿ ನಮೊ ಎಂಬೆ 5 ಕರದಲ್ಲಿ ಸುಧೆ ಕಲಶ | ಧರಿಸಿರುವ ಬಗೆಯೇನೊಶರಣರ್ಗೆ ಸುಧೆಯಾನುಣಿಸುತ್ತ | ಉಣಿಸುತ್ತಲಮರತ್ವಕರುಣಿಸುವಿ ಎಂದೂ ಶ್ರುತಿ ಸಿದ್ಧ 6 ಇಂತಿರಲು ದಾಸಿಸ | ತ್ಪಂಥಗಳನ್ನುದ್ದರಿಸೊಅಂತು ತವ ಚರಣಾಬ್ಜ ಬೇಡುವೆ | ಬೇಡುವೆನೋಪಾದಾಕ್ರಾಂತಳಿಗೆ ಸುಧೆಯಾ ನೂಣೀಸೊ7 ಚಂದ್ರ ನಿವಹದ ಕಾಂತಿ | ಯಿಂದಮೃತ ಕಿರಣದಿಂಹೊಂದ್ಯಮಿತ ಸುಖರೂಪಿ ಉಲ್ಲಾಸವೀವುತ್ತಚಂದುಳ್ಳ ಸುಧೆ ಕಲಶ ಪಿಡಿಯುತ್ತ 8 ಆತು ಜ್ಞಾನಾಂಕವನು | ಆತ್ಮಸ್ಥಶೀತಾಂಶುಧೌತ ಮಂಡಲಗ ಲಕ್ಷ್ಮೀಶ | ಲಕ್ಷ್ಮೀಶ ಹರಿಯನ್ನುಮಾತು ಮಾತಿಗೆ ನಾನು ಸ್ಮರಿಸೂವೆ 9 ಉತ್ತಮಾಂಗದಲಿರುವ | ಹತ್ತೆರಡು ದಳ ಕಮಲಪ್ರಸ್ಥಿತನು ಧನ್ವಂತ್ರಿ ಮಕರಂದ | ಮಕರಂದ ಸ್ರವಿಸುವನಭಕ್ತಿಯಲಿ ಸ್ಮರಿಸೋದು ರೋಗಾರ್ತೆ 10 ಕಮಲ ಹೃದಯಸ್ಥ 11 ಸದನ ಷಟ್ದಳ ಕಮಲಗುದವು ಮೂಲಾಧಾರಾನಾಲ್ದಳವುನಾಲ್ದಳ ಕಮಲಸ್ಥಬದಿಗನು ಧನ್ವಂತ್ರಿ ರೂಪೀಯು 12 ರೂಪೀ ಈ ದೇಹವನು | ವ್ಯಾಪಿಸುತ ತಾನಿದ್ದುಕಾಪಾಡಲೋಸುಕದಿ ಮಕರಂದ | ಮಕರಂದ ಸುರಿಸುವವ್ಯಾಪಾರದಿಂ ಜೀವರುದ್ಧಾರ 13 ಹತ್ತಿರುವ ಅಜ್ಞಾನ | ವತ್ತಿಬಹ ಭಯದುಃಖಮತ್ತೆ ಮಹವಿಷವು ಇದರಿಂದ | ಇದರಿಂದ ಪರಿಹಾರ ಭಕ್ತಿಯಿಂ ಭಜಿಸೇ - ಸುಖ ಸೌಖ್ಯ 14 ಶರಣರ್ಗೆ ತಪ್ಪದೆಲೆ | ಗೆರೆವೆ ಸೌಖ್ಯಂಗಳನುಗುರು ಗೋವಿಂದ ವಿಠಲಾ | ವಿಠ್ಠಲ ಧನ್ವಂತ್ರಿಮರುತಾಂತರಾತ್ಮಾ ಸಲಹಯ್ಯ15
--------------
ಗುರುಗೋವಿಂದವಿಠಲರು
ಶ್ರೀ ವಿಷ್ಣ್ವಾಷ್ಟಕ (ಪಾಲಯಾಚ್ಯುತ ಎಂಬತೆ) ಕಾವುದೋ ಹರಿ | ಕಾವುದೋ ಹರಿಕಾವುದೊ ಕರುಣಾರ್ಣವ ಪ ಜೀವರಂತರ ಬಾಹ್ಯ ನೆಲಸಿಹಶ್ರೀವರಾ ಶ್ರೀ ಭೂಧರಾ ಅ.ಪ. ನಿತ್ಯ ನೂತನ | ನಿರ್ವಿಕಾರನೆ | ಸತ್ಯನೆ ನೀ ನಿತ್ಯನೇಭೃತ್ಯ ವತ್ಸಲ | ಭವವನಾನಲ | ಕೃತ್ಯನೆ ದಯ ಪೂರ್ಣನೇ ||ಮೃತ್ಯು ವರ್ಜಿತ | ಪ್ರತ್ಯಗಾತ್ಮನೆ | ಕರ್ತನೇ ನಿರ್ಲಿಪ್ತನೇಸತ್ಯ ಕಾಮ ಶರಣ ಶಾಶ್ವತ | ಸ್ತುತ್ಯನೇ ಜಗ ವ್ಯಾಪ್ತನೇ 1 ಅಮಿತ ತೇಜನೆ | ಸರ್ವರನ ಸಲಹೂವನೇ ||ಸರ್ವ ಶಬ್ದ ಪ್ರವೃತಿ ಕಾರಣ | ಸರ್ವಗುಣ ಪರಿಪೂರ್ಣನೆಸರ್ವತೊಮುಖ ಬಾಹು ಚರಣನೆ | ಶರ್ವ ವಂದ್ಯ ಸುಮಹಿಮನೆ2 ವೀತಭಯ ವಿಶ್ವೇಶ ವಿಧಿಪಿತ | ಮಾತುಳಾಂತಕ ಪಾಲಕಾಭೂತ ಭಾವನನಂತ ಭಾಸ್ಕರ | ದ್ಯೋತಕ ಮಹಕೌತುಕ ||ಗೌತಮ ಪ್ರಿಯ ಮಡದಿ ಕಾಯ್ದಾ | ನಾಥ ರಕ್ಷಕ ಶಿಕ್ಷಕಾಖ್ಯಾತ ರಾವಣ ಕುಂಭಕರ್ಣನ | ಹಂತಕ ವಿಶ್ವಾಸಕ 3 ಮಣಿ ಭವ ಮೋಚಕಅಣು ಮಹದ್ಗತ ವ್ಯಾಪ್ಯವ್ಯಾಪಕ | ಸಾಧಕ ಖಲ ಬಾಧಕ |ತೃಣ ಮೊದಲು ಬ್ರಹ್ಮಾಂತ ಜೀವರ | ಪಾಲಕ ಪರಿಪೋಷಕ 4 ಮೀನ ಕಮಠನೆ ಕೋಲ ನರಹರಿ | ವಾಮನಾ ಸುಭಾಮನಾರೇಣುಕಾತ್ಮಜ ರಾವಣಾಂತಕ | ದಾಶರಥಿ ನರ ಸಾರಥೀ ||ಧೇನುಕಾಸುರ ಮಥನ ತ್ರಿಪುರವ | ಹಾನಿಗೈದನೆ ಬುದ್ಧನೆಮಾನುಷಾಕೃತಿಲ್ಹಯವನೇರಿದ | ಕಲ್ಕಿಯೇ ಕಲಹ ಪ್ರಿಯೆ 5 ಉದಿತ ಭಾಸ್ಕರನಂತ ತೇಜನೆ | ಉದರ ನಾಮಕ ಪಾಚಕಸುದತಿಯರು ಹದಿನಾರು ಸಾವಿರ | ವಾಳ್ದನೇ ಬ್ರಹ್ಮಚರ್ಯನೇ||ಮಧು ವಿರೋಧಿಯೆ ಮಧ್ವಮಾನಸ | ಮಂದಿರ ಬಹುಸುಂದರಹೃದಯದಲಿ ನೀ ಬದಿಗನೆನಿಸುತ | ಪೂಜಿತ ಸುರ ಪೂಜಿತ 6 ಸೃಷ್ಟಿ ಸ್ಥಿತಿ ಮೊದಲಾದ ಅಷ್ಟಕ | ಕರ್ತೃಕ ಪ್ರಾವರ್ತಕಅಷ್ಟದಳ ಸತ್ಕಮಲಧಿಷ್ಠಿತ | ಪ್ರಾಜ್ಞಾನೇ ವಿಶ್ವಜ್ಞನೇಜಿಷ್ಣು ಸಖ ಶ್ರೀಕೃಷ್ಣ ಕೃಷ್ಣೆಯ | ಭೀಷ್ಟದಾ ಶಿಷ್ಟೇಷ್ಟದಾಪುಷ್ಟ ಮಹಿಮಾ ಪ್ರವಿಷ್ಟ ರೂಪನ | ವಿಷ್ಟನೇ ನಿವಿಷ್ಟನೇ 7 ಗೋವಿದಾಂಪತಿ ಗೋವಪಾಲಕ | ಮಾವ ಮಾರಕ ಕಾರಕ ||ಭೂವರಾಹ ಸುಭಾವಜಾರಿಜ | ಷಣ್ಮುಖ ಪರಿಪಾಲಕ ||ಗೋವಿಂದ ಗುರು ಗೋವಿಂದವಿಠಲ | ಗೋವ್ಗಳ್ವರ್ಧನ ಗಿರಿಧರಪಾವಮಾನಿಯ ಪ್ರೀಯ ಸಿರಿಧರ | ಕಾವ ಶರಣರ ಭವಹರಾ 8|
--------------
ಗುರುಗೋವಿಂದವಿಠಲರು
ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ಕೇಸರಿ ಗಂಧ ಹಚ್ಚಿಹಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು ದೈತ್ಯರ ಹೃದಯ ಬಹು ವಿಲಾಸದಿ ತೋರ್ಪಳು ಸಖಿಯ ಅಂಗಜದರು ಗಂಧಕೆ ಅಳಿವೃಂದ ಆಡುತಲಿಗೆ ಝೇಂಕಾರಗಳಿಂದಾ ಸಂಗಡನೆರದ ಸುರಾಸುರರಿಂದ ಸತಿ ಚಲುವಿಂದಾ ಮಂಗಳಮುಖಿ ನಮ್ಮಂಗಳ ಮೋಹಿಸಿ ಭಂಗನ ಪಡಿಸುವಳೈ ತ್ರಿಜಗವ ಜಗಂಗಳ ಪಾಲಿಸುವಳು | ಮನ ಸಂಗಡ ಅಪಹರಿಸುವಳು | ಜಡ ಜಂಗಮಲಿಗೆ ಬಹು ಪ್ರೀತ್ಯಾಸ್ಪದಳು ಸಾರಂಗಿ | ಸಾರಂಗಿ | ಸಾರಂಗೀ ಸಾಂಬಮದ ಭಂಗಿ | ಬಹಳ ಸುಖಸಂಗಿ ಸುಂದರಿ ಲಲಿತಾಂಗಿ | ಮೋಹನಾಪಾಂಗೀ ಬಡು ಹೆಂಗಲ್ಲ ಈಕೆ ಬಹುಭಂಗ ಬಡುವಿರಿ ಜ್ವಾಕೆ || ಶ್ರೀನಾಥ || 1 ಕನ್ನಡಿಯಂದದಿ ಪೋಲುವ ಕಪೋಲ ಕರ್ಪೂರ ರಂಜಿತ ವರ ತಾಂಬೂಲ ಕಣ್ಣಿಗ್ಹಚ್ಚಿಹಳು ಕನಕದ ಕೋಲಾ ಕಾಮಿನಿಯಂದಡಿ ತೋರ್ಪಳು ಜಾಲಾ ಬಿನ್ನುಡಿ ಹಾಕಿದ ಚಂದ್ರದ ಕುಪ್ಪುಸ ಚಪಲಾಕ್ಷಿಯ ನೋಟದ ಬಲು ರಭಸಾ ಕರ್ಣಾಯತ ನೇತ್ರಗಳ ವುಲ್ಲಸಾ ವುನ್ನಂಕಾ ನಾಶಿಕದ ಬುಲಾಕು ವಜ್ರಮಯದ ವರಮಖರೆದ ಬೆಳಕು ಕರ್ಣದಿ ರತ್ನಖಚಿತ ತಟಾಂಕಾ ಕುಸುರು ಹಚ್ಚಿದ ಬಾಹುಲಿಗಳ ಬಿಂಕ ಸಣ್ಣ ನಡುವಿನೊಯ್ಯಾರದ ನಲ್ಲೆ ಸರಸಿಜನಾಭನ ಸೃಷ್ಟಿ ಇದಲ್ಲೆ ಬಣ್ಣಿಸಲಳವಲ್ಲವು ಸೌಂದರ್ಯ ಬಿಡಿಸುವುದು ಕೇಳ ಮುನಿಗಳ ಧೈರ್ಯ ಬೆಣ್ಣೆಯಂತೆ ಮೃದುವಾದ ಶರೀರ ಭಾಗ್ಯಹೀನರಿಗೆ ಇದು ಬಲುದೂರಾ ಕನ್ನೆ ಶಿರೋಮಣಿ | ಕಾಮನ ಅರಗಿಣಿ ಕೌಸ್ತುಭಮಣಿಗಳ ಹಾರೇ ಸುವರ್ಣವರ್ಣ ಸುಕುಮಾರೇ ಮೋಹನ್ನರಸನೆ ಗಂಭೀರೇ ಮೋಹನ್ನೆ ಮಧುರ ಮಧುರಾಧರ ಮಂಜುಳ ವಕುಜಲರೆ ಬಹೋಚ್ಚಧರೆ ಛÅಪ್ಪನ್ನ ಛಪ್ಪನ್ನ ದೇಶಗಳು ಚಲುವರಿದ್ದರೂ ಚಪಲಾಕ್ಷಿಗೆ ಸಮರಾರೇ ಗತ ಪುಣ್ಯದಿಂದ ಕೈಸೇರುವಳಲ್ಲದೇ ಕಾಮಾಂಧsÀರಿಗತಿ ದೂರೇ ಈ ಹೆಣ್ಣು | ಈ ಹೆಣ್ಣು | ಈ ಹೆಣ್ಣು ಸುರಾಸುರರನ್ನೆ ಮೋಹಿಸಳು ಚನ್ನ ಮನಕೆ ತರಳಿನ್ನ ಬಿಡು ವಿಷದ್ಹಣ್ಣು ಅಪೇಕ್ಷಿಸೆ ಮಣ್ಣು ಕೂಡಿಸುವಳು ತನ್ನ ಜನರಿಗಮೃತಾನ್ನ ಕೊಡುವಳು ಮಾನ್ಯಳು ಪರಮಸೋನ್ಯಳು | ಸುಗುಣ ಅರಣ್ಯ ವಿನಾಶೇ ಬ್ರಹ್ಮಾಂಡಜಾದ್ಯಂಗೀತೇ || ಶ್ರೀನಾಥ || 2 ಹುಡುಗಿ ನೋಡು ಹೊಸ ಪರಿಯಾಗಿಹಳು ಹದ ಮೀರಿದ ಯವ್ವನದಿ ಮೆರೆವಳು ಅರಳು ತುಂಬಿಹಳು ಮಂದಸ್ಮಿತದಲಿ ಮೋಹಿಸುತಿಹಳು ಬೆಡಗಿನಿಂ ನುಡಿಯ ಸವಿಯ ತೋರುವಳೂ || ಬಹು ವಿಧದಾಭರಣಗಳನ್ನಿಟ್ಟಹಳು ನಡಿಗಿಗಳಿಂದ ನಾಚುತ ಹಂಸ ನವಮಣಿ ಚಂದ್ರರ ಕೆಡಿಸಿತು | ನಂಬೆ ಜಡಿತ ಮುತ್ತಿನ ತಾಯಿತ ಕಠಾಣೀ ಜಗವನು ಮೋಹಿಸುವಳು ಸುಶ್ರೋಣೀ ಬಿಂಕದ ನುಡಿ ಸೊಬಗಿನ ಚಂದಾ ಅಡಗಿದವೆ ಪಿತಭೃಂಗಗಳಿಂದಾ ಹಿಡಗಿ ಮರಗಿ ಮಧ್ಯಶಮನ ಮರಗೀ ಕೇಸರಿ ಬಹು ಸೊರಗೀ ಉಡುಪತಿ ಕೋಟಿ ಪ್ರಭ ಧಿಕ್ಕಾರಾ ಉಲ್ಲಾಸದಿ ಮನ ಮುಖ ಚಂದಿರಾ ನಡಿಗಗಳಿಂದೆನೆ ರಾಜಿಸುತಿ ಹೋದೆ ನವರತ್ನದಯದೆ ಮಯದ ಫಣಿಕಟ್ಟು ಮೇಲ್ಪೊಡವಿವೊಳಗೆ ಪಡಿಗುಣಕ ಕಡಿಯಿಲ್ಲಾ ಸುಳ್ಳುನುಡಿಯಿಲ್ಲಾ ಯೆನ್ನೊಡೆಯಾ ಶ್ರೀ ವಿಜಯ ವಿಠ್ಠಲನಲ್ಲದೆ ಎಲ್ಲಿಂದ ಬಂದಳೋ ಕೆಳದೀ || ಶ್ರೀನಾಥ || 3
--------------
ವಿಜಯದಾಸ