ಒಟ್ಟು 27 ಕಡೆಗಳಲ್ಲಿ , 16 ದಾಸರು , 27 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಬಾರೋ ಗುರುರಾಯನೆ ಧ್ರುವ ಹೊಳೆಯನೀಸಿ ಇಳದಿ ಬಾರೊ ಇಳಿಯ ಪೊತ್ತು ಬಳಿದಿ ಬಾರೊ ಇಳಿಯಗೆಲಿದು ಸೀಳಿ ಕಂಭದೊಳು ಹೊಳದಿ ಬಾರೊ ನೀನು 1 ಅಳೆದು ಭೂಮಿ ಬಳದಿ ಬಾರೊ ಇಳಹಿ ತಳಿಯ ತಿಳದಿ ಬಾರೊ ಅಳಿದು ದೈತ್ಯಬಲವ ಮುರಿದು ಕೊಳಲನೂದಿ ಬಳಲಿ ಬಾರೊ 2 ಸುಳ್ಳ ವ್ರತನಳಿದಿ ಬಾರೊ ಸುಳುಹಿ ತೇಜ ಹೊಳಿದಿ ಬಾರೊ ಹೊರೆದು ಸಲಹುವ ಸ್ವಾಮಿ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೇಡಿದೆನು ಕೊಡುಕಂಡ್ಯ ಬೇಡಿದೆನು ಕೊಡುಕಂಡ್ಯಬೇಡಿದೆನು ನೀ ನೀಡು ಕಂಡ್ಯಾ ಪ ನಿನ್ನ ಹಾಡನು ಹಾಡಿ ನಿನ್ನ ನಿಜದೊಳಗಾಡಿನಿನ್ನನೇ ಕಾಡಿ ನಿನ್ನನೇ ಬೇಡಿನಿನ್ನ ಓಲಗವ ಮಾಡಿ ನಿನ್ನ ನಿಟ್ಟಿಸಿ ನೋಡಿನಿನ್ನ ಲೀಲೆಯೊಳು ನಾನಿರುತಿಹುದದನಾ 1 ನೋಟದೊಳಗಿನ ನೋಟ ಕೂಟದೊಳಗಿನ ಕೂಟಆಟದೊಳಗಿನ ಆಟ ಇಂಥ ಆಟನೀಟದೊಳಗಿನ ನೀಟ ನಿನ್ನಲ್ಲಿ ಬೆರೆದಾಟಪಾಟ ಮಾಡಿಯೆ ಎನಗೆ ಪಾಲಿಸುವುದನ2 ಶರೀರದಿಚ್ಚೆಯನುಳಿದು ಶರೀರ ವಾಸನೆ ಕಳೆದುಶರೀರ ವಿಷಯದ ಹೊಲಬೆಲ್ಲ ಬಳಿದುಶರೀರದ ನೆಲೆಯು ತಿಳಿದು ಶರೀರದೊಳೊಬ್ಬನನುಳಿದುಶರೀರದ ಸಂಗ ದೊರಕದಿಹದದನಾ 3 ನಾದಲಕ್ಷಿಸಿ ಹಿಡಿದು ನಾದ ಸಂಗವ ಪಡೆದುನಾದಾಮೃತವ ಕಿವಿತುಂಬ ಕುಡಿದುನಾದ ದಾರಿಯ ನಡೆದು ನಾದ ದೊಳ್ವೆಳ ಗೊಡದುನಾದವನೆ ಮರೆತು ಸುಖಿಸುತಿಹದದನ 4 ನಿನ್ನ ನೀನುಳಿದಿಲ್ಲ ನೀ ದೈವ ಜಗಕೆಲ್ಲನಿನ್ನಂತೆ ಆಪ್ತರಿಲ್ಲ ನಿನ್ನ ನಂಬಿದೆನಲ್ಲನೀ ಕಾಯಬೇಕಲ್ಲ ಚೆನ್ನ ಚಿದಾನಂದನೆನೆಹಂಬತಾತ್ವಿಕ ಹಿನ್ನೆಲೆಯ ಕೀರ್ತನೆಗಳುದದನಾ 5
--------------
ಚಿದಾನಂದ ಅವಧೂತರು
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ
ಮುನಿಯುವರೇ ಕೃಷ್ಣಾ ಮುನಿಯುವರೆ ಪ ದಣಿಸಲಾಗದೊ ನಿನ್ನ ನೆನೆವ ಭಕುತರೊಳು ಅ.ಪ ಮುನಿಗಳು ಮನದೊಳು ಕ್ಷಣಬಿಡದಲೆ ನಿನ್ನ ದಣಿಸಿ ಕುಣಿಸುವರೊ ಮೌನದಿಂದಲಿ ನಾ ಮಣಿದು ಬೇಡುವೆ ಬರಿದೆ ಹಣಿದು ಬಿಸುಡುವರೆ ಕೆಣಕಿದವರ ನೀ ಕ್ಷಣದಿ ಕಾಪಾಡಿದೆ 1 ಬಲಿಯ ಯಾಚಿಸಿ ಭಕ್ತಿಬಲೆಗೆ ನೀ ಸಿಲುಕಿದೆ ಶಿಲೆಯನೊತ್ತಿ ಸುಶೀಲೆಯ ಪೊರೆದೆ ಜಲಧಿಶಯನಾ ನೀ ರಥಕೆ ಸಾರಥಿಯಾದೆ ಛಲವೇತಕೆನ್ನೊಳು ನೀನೆ ಗತಿ ಎಂದರೆ2 ಎಂಜಲಾಸೆಗೆ ಸೋತು ಶಬರಿಯ ಪೊರೆದೆ ಸಂಜೆ ಹಗಲೆನ್ನದೆ ಎಂಜಲ ಬಳಿದೆ ಅಂಜದೆ ಅಜಾಮಿಳಗೊಲಿದೆಯೋದೇವ ಅಂಜೆನೊ ಎಂದಿಗೂ ಕುಂಜರವರದಾ 3 ಶಪಥಮಾಡಿ ನಿನ್ನ ಪಂಥವ ಕೆಡಿಸಲು ಕುಪಿತನಾಗಲಿಲ್ಲ ಕುರುಪಿತಾಮಹನೊಳು ಆಪ್ತನಿಮಿತ್ತಬಾಂಧವನೆಂದು ನಿನ್ನ ಪ್ರಾಪ್ತಿಯ ಬೇಡಲು ಬಂದುದಕೆ ಈಗ 4 ಪರಿ ಅಂಕಿತ ಪೇಳದೆ ಬಿಂಕತನದಲಿ ಕಾಲವ ಕಳೆದೆ ಶಂಕರನುತ ಶ್ರೀ ವೇಂಕಟೇಶ ನಿನ್ನ ಕಿಂಕರನೆನಿಸೆನ್ನ ಸಂಕಟ ಹರಿಸೂ5
--------------
ಉರಗಾದ್ರಿವಾಸವಿಠಲದಾಸರು
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ
ಹ್ಯಾಂಗೆ ನೀ ದಾಸನಾದೆ ಪ್ರಾಣಿ ಪ ಭವ ಭಂಗವ ಪಡುವವನು ಅ ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು 1 ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ 2 ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ3 ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ4 ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು 5 ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ6 ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ 7 ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ 8 ಭಾಗವತ ಕೇಳದೆ 9 ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು 10 ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ11 ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ 12 ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ 13 ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ14 ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ 15 ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ 16 ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ 17 ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು 18 ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ 19 ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ 20 ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ21
--------------
ಕನಕದಾಸ
ಇರಲೇ ಬಾರದು - ಇಂಥಲ್ಲಿಇರಬಾರದಿಂದ ......... ವರೆ ಭಯಂಕರದುರುಳ ಜನ ಸಹವಾಸದಲ್ಲಿ ದುಷ್ಟಮೃಗವಿದ್ದಡವಿಯಲ್ಲಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉರಗಗಳು ಸೇರಿಕೊಂಡ ಸದನಗಳಲ್ಲಿಕರುಬರಿದ್ದ ಊರಗಳಲಿ ಕಲಹ ಹೆಚ್ಚಿದ ರಾಜ್ಯದಲ್ಲಿಪರಹಿಂಸೆಯ ಮಾಡಲಂಜದ ಪಾಪಿಗಳಿದ್ದಲ್ಲಿ 1ಅವಿವೇಕದ ಪ್ರಭುಸೇವೆಯಲ್ಲಿ ಆತ್ಮಸೌಖ್ಯವಿಲ್ಲದಲ್ಲಿಲವಶೇಶವು ಸದ್ವಿದ್ಯಾ ಮಾತ್ರ ಲಾಭವಿಲ್ಲದಲ್ಲಿನವಯೌವನಭರಿತ ನಾರಿ ತಾನೊಬ್ಬಳಿದ್ದಲ್ಲಿಅವನಿಯೊಳಗರ್ಥಪ್ರಾಪ್ತಿಇಲ್ಲದಂಥಲ್ಲಿ2ಮಾನವಲ್ಲದ ಸಭೆಯಲ್ಲಿ ಮಾತ ಕದಿವ ನ್ಯಾಯದಲ್ಲಿನೂನ್ಯಪೂರ್ಣ ಎನ್ನವವನ ಉಟ್ಟಕಾಲದಲ್ಲಿಶ್ರೀನಾಥ ಶ್ರೀ ಪುರಂದರವಿಠಲ ರೂಪಗಳುಅನಂತಾನಂತವೆಂದು ಅರಿಯದ ಅದ್ವೆಷ್ಣವರಲ್ಲಿ 3
--------------
ಪುರಂದರದಾಸರು
ಕೂಗದೆ ಉಸುರಿಕ್ಕದೆ- ನೀವು |ಬೇಗನೆ ಬನ್ನಿ ರಂಗ ಮನೆಯ ಪೊಕ್ಕ ಪಹೆಜ್ಜೆಗಳಿವೆಕೋ ಮನೆಯಲಿ-ಕಾಲ |ಗೆಜ್ಜೆಯ ದನಿ ಕೇಳಬರುತಲಿದೆ ||ನಿರ್ಜರಪತಿ ತನ್ನ ಮನಸಿಗೆ ಬಂದಂತೆ |ಮಜ್ಜಿಗೆ ಓಕುಳಿ ಆಡಿಹನಕ್ಕ 1ಸೂರಿನ ಕೆಳಗೆ ಕುಳ್ಳಿರಿಸಿ-ತನ್ನ |ಓರಗೆ ಮಕ್ಕಳುಗಳ ನಿಲ್ಲಿಸಿ ||ಕೇರಿಕೇರಿಯಿಂದ ಗೋಡೆ ಧುಮುಕಿ ಪೋಗಿ |ಸೂರೆಗೊಳ್ಳುತಾನೆ ಸುಮ್ಮಗೆ ಬನ್ನಿ 2ಹಾಲು ಚೆಲ್ಲಿ ಹಳ್ಳ ಹರಿದಿಹವೆ-ಮೊಸರ |ಮೇಲಿನ ಕೆನೆಗಳು ಬಳಿದಿಹವೆ ||ಬಾಲಚೋರ ಶ್ರೀ ಪುರಂದರವಿಠಲನು |ಚಾಲುವರಿದರಿನ್ನು ಬಿಡಬಾರದಕ್ಕ 3
--------------
ಪುರಂದರದಾಸರು
ಬಿಡೆನೊ ನಿನ್ನಂಘ್ರಿ ಶ್ರೀನಿವಾಸ ನನ್ನದುಡಿಸಿಕೊಳ್ಳೆಲೊ ಶ್ರೀನಿವಾಸ ನಿನ್ನುಡಿಯ ಜೀತಲ್ಲೊ ಶ್ರೀನಿವಾಸ ನನ್ನನಡೆ ತಪ್ಪು ಕಾಯೊ ಶ್ರೀನಿವಾಸ ಪ.ಬಡಿಯೊ ಬೆನ್ನಲಿ ಶ್ರೀನಿವಾಸ ನನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾಬಡವ ಕಾಣೆಲೊ ಶ್ರೀನಿವಾಸ ನಿನ್ನೊಡಲ ಹೊಕ್ಕೆನೊ ಶ್ರೀನಿವಾಸ 1ಪಂಜುವಿಡಿವೆನೊ ಶ್ರೀನಿವಾಸ ನಿನ್ನೆಂಜಲ ಬಳಿದುಂಬೆ ಶ್ರೀನಿವಾಸ ನಾಸಂಜೆ ಉದಯಕೆ ಶ್ರೀನಿವಾಸ ಕಾಳಂಜಿಯ ಪಿಡಿವೆನೊ ಶ್ರೀನಿವಾಸ 2ಸತ್ತಿಗೆ ಚಾಮರ ಶ್ರೀನಿವಾಸ ನಾನೆತ್ತಿಕುಣಿವೆನೊ ಶ್ರೀನಿವಾಸ ನಿನ್ನರತ್ತುನ ಹಾವಿಗೆ ಶ್ರೀನಿವಾಸ ನಾಹೊತ್ತು ನಲಿವೆನೊ ಶ್ರೀನಿವಾಸ 3ಹೇಳಿದಂತಾಲಿಹೆ ಶ್ರೀನಿವಾಸ ನಿನ್ನಾಳಿಗಾಳಾಗಿಹೆ ಶ್ರೀನಿವಾಸ ಅವರೂಳಿಗವ ಮಾಳ್ಪೆ ಶ್ರೀನಿವಾಸ ನನ್ನಪಾಲಿಸೊ ಬಿಡದೆ ಶ್ರೀನಿವಾಸ 4ನಿನ್ನ ನಾಮ ಹೋಳಿಗೆ ಶ್ರೀನಿವಾಸ ಕಳ್ಳಕುನ್ನಿ ನಾನಾಗಿಹೆ ಶ್ರೀನಿವಾಸಕಟ್ಟಿನಿನ್ನವರೊದ್ದರೆ ಶ್ರೀನಿವಾಸ ನನಗಿನ್ನು ಲಜ್ಜ್ಯಾತಕೆ ಶ್ರೀನಿವಾಸ 5ಬೀಸಿ ಕೊಲ್ಲಲವರೆ ಶ್ರೀನಿವಾಸ ಮುದ್ರೆಕಾಸಿ ಚುಚ್ಚಲವರೆ ಶ್ರೀನಿವಾಸ ಮಿಕ್ಕಘಾಸಿಗಂಜೆನಯ್ಯ ಶ್ರೀನಿವಾಸ ಎಂಜಲಾಸೆಯಬಂಟನಾ ಶ್ರೀನಿವಾಸ6ಹೇಸಿ ನಾನಾದರೆ ಶ್ರೀನಿವಾಸಹರಿದಾಸರೊಳು ಪೊಕ್ಕೆ ಶ್ರೀನಿವಾಸಅವರಭಾಸೆಯ ಕೇಳಿಹೆ ಶ್ರೀನಿವಾಸ ಆವಾಶೆಯ ಸೈರಿಸೊ ಶ್ರೀನಿವಾಸ 7ತಿಂಗಳವನಲ್ಲ ಶ್ರೀನಿವಾಸವತ್ಸರಂಗಳವನಲ್ಲೊ ಶ್ರೀನಿವಾಸ ರಾಜಂಗಳ ಸವಡಿಪೆ ಶ್ರೀನಿವಾಸ ಭವಂಗಳ ದಾಟುವೆ ಶ್ರೀನಿವಾಸ 8ನಿನ್ನವ ನಿನ್ನವ ಶ್ರೀನಿವಾಸ ನಾನನ್ಯವನರಿಯೆನೊ ಶ್ರೀನಿವಾಸ ಅಯ್ಯಾಮನ್ನಿಸೊ ತಾಯ್ತಂದೆ ಶ್ರೀನಿವಾಸ ಪ್ರಸನ್ನ ವೆಂಕಟಾದ್ರಿ ಶ್ರೀನಿವಾಸ 9
--------------
ಪ್ರಸನ್ನವೆಂಕಟದಾಸರು
ಯೋಗಿಯ ನೋಡಿರೋ ಸದ್ಗುರು ಯೋಗಿಯ ನೋಡಿರೋಯೋಗಿಚಿದಾನಂದಾವಧೂತ ಗುರುದೊರೆಯ ಸದ್ಗುಣ ಚರಿತನಪಆಶಾಪಾಶಗಳೆಂಬುವನೆಲ್ಲವಜರಿದುವಾಸನೆತರಿದುದೋಷದುರ್ಗ ಜನನಾದಿಗಳನು ಬಳಿದು ಸಂಶಯ ತುಳಿದುಕ್ಲೇಶಪಂಚಕ ಕಾಮಕ್ರೋಧವ ಕಡಿದು ಮುಂದಕೆ ನಡೆದುಭಾಸುರತೇಜದಿ ತೋರುವ ಪ್ರಭೆಯನುಕೂಡುವ ತಲೆಯೊಲಿದಾಡುವ1ಬಲಿದಾಧಾರವ ಕುಂಭಕದಿಂದಲಿ ಬಲಿಸಿ ವಾಯುವ ನಿಲಿಸಿನೆಲೆಯನೆ ಹತ್ತಿ ಆ ನೆಲೆಯನೆ ನಿಲುಕುತ ಮತ್ತಾನೆಲೆಯ ಹೊಲಬಲಿ ತೋರುವಭಾಸ್ಕರಕೋಟಿಯ ಮೀರಿಕಳೆಗಳ ತೋರಿ ಥಳಥಳ ಥಳಿಸಿಯೆ ಮೆರೆವಾ ಆತ್ಮನ ನೋಡುವ ಸಂತಸಪಡುವ2ಆರು ಚಕ್ರಗಳಲಿ ತೋರುವ ದಳಗಳನರಿದು ಅದರೊಳು ಬೆರೆತುಭೋರಿಡುತಿಹ ದಶನಾದದ ಬೊಬ್ಬೆಯಕೇಳಿಹರುಷವ ತಾಳಿ ಚಾತುರದಿ ಮೆರೆಯುತಲಿಹ ಜ್ಯೋತಿಯಸಾರಸೇವಿಪ ಶೂರಧಿರ ಚಿದಾನಂದಾವಧೂತಾತ್ಮ ಗುರುವಾ ಎನ್ನನು ಪೊರೆವಾ3
--------------
ಚಿದಾನಂದ ಅವಧೂತರು
ವೃಂದಾವನ ಲಕ್ಷ್ಮಿ ಜಯಜಯತೂಸುಂದರಿ ಸುಗುಣೆ ಸುಶೀಲೆ ಜಯತು ಜಯಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕ್ಷೀರಾಬ್ಧಿ ಮಥಿಸಲುಸುಧೆಹುಟ್ಟಿ ಬರಲೂನಾರಾಯಣ ಹರುಷಾಶ್ರು ಸುರಿಸಲೂಧಾರಿಣಿಯೊಳಗದು ಗಿಡವಾಗಿ ಶೋಭಿಸೆನಾರಿ ಲಕ್ಷುಮಿಯಂಗ ತುಳಸಿಯೆಂದೂ1ಆಲಯದಿಪ್ಪತ್ತೆಂಟು ಹೆಜ್ಜೆ ಈಶಾನ್ಯದಿಏಳುದಳಿದ ತುಳಸಿಗಿಡವಮೂಲದಿ ನವರತ್ನವಿಟ್ಟು ಪ್ರತಿಷ್ಠಿಸೆಪಾಲಿಸೆ ವಿಷ್ಣು ತಾನಲ್ಲಿರುವೆನೆಂದು2ಧಾತ್ರಿನೆಲ್ಲಿಯು ವಾಣಿ ಗಿರಿಜೆಯರಂಶದಿಪೃಥಿವಿಯೊಳಿರೆ ಕಂಡು ತುಳಸಿಯಂಕದಲಿಅರ್ತಿಯಿಂದಲಿ ನಟ್ಟು ಪೂಜೆಯನೆಸಗಲುಪ್ರೀತಿಸಿ ಬ್ರಹ್ಮ ವಿಷ್ಣು ರುದ್ರರೆ ವರವೀವರು3ಬೃಂದೆ ಜಲಂಧರನರಸಿ ಪತಿವ್ರತೆ-ಯಂದಿರೆ ವಿಷ್ಣುವೊಲಿಸಿ ದುರುಳರ ಗೆಲಿಸೆಬೃಂದೆ ವರವ ಬೇಡಿ ಸಹಗಮನವಾದ ಸ್ಥಳನಿಂದಾನು ವಿಷ್ಣು ತುಳಸಿಯೊಳ್4ಕಾರ್ತೀಕ ದಾಮೋದರನೆನಿಸಿ ಪ್ರೀತಿಯಿಂದಲಿತುಳಸಿಯಲಿ ತಾ ನೆಲಸಿಘೃತದಿ ಜ್ಯೋತಿಯನಿಟ್ಟು ಪೂಜಿಸಿದವರಿಗೆಅತಿಶಯ ವರವಿತ್ತು ಸ್ವಾಮಿ ಪರಸುವನು5ಕಟ್ಟಿಗೋಮಯದಿ ಬಳಿದೂಹಿಟ್ಟಲಿ ರಂಗೋಲಿ ಬರೆದೂ ನೀರೆರೆದುಶ್ರೇಷ್ಠದಿ ತೀರ್ಥವಗೊಂಡು ನಿರ್ಮಾಲ್ಯ ಧರಿಸಲುಅಕ್ಷಯವರವಿತ್ತು ದೇವಿ ಮನ್ನಿಪಳೂ6ವಿಷ್ಣು ಪಾದದಿ ತುಳಸಿ ದಳದಿಂದರ್ಚಿಸಲುಇಷ್ಟ ಪಡುವ ವಾಸುದೇವನು ತಾನುಇಷ್ಟದಿ ತುಳಸಿ ಚರಿತೆ ನಿತ್ಯದಿ ಪಠಿಸಲುಇಷ್ಟಾರ್ಥ ವರವೀವ ಗೋವಿಂದದಾಸರಿಗೆ7
--------------
ಗೋವಿಂದದಾಸ
ಸೈಸಲಾರೆನೆಗೋಪಿನಿನ್ನ ಮಗನ ಲೂಟಿ |ಏಸೆಂದು ಪೇಳಲಮ್ಮ ||ವಾಸುದೇವನು ಬಂದು ಮೋಸದಿಂದಲಿ ಎನ್ನ |ವಾಸವಸೆಳಕೊಂಡು ಓಡಿ ಪೋದನಮ್ಮಪದೇವರ ಪೆಟ್ಟಿಗೆ ತೆಗೆದು ಸಾಲಿಗ್ರಾಮ |ಸಾವಿರ ನುಂಗುವನೆ ||ಭಾವಜನಯ್ಯಇದೇನೆಂದರೆ ನಿಮ್ಮ |ಕಾಮದೇವರು ನಾನು ಕೇಳಿಕೊ ಎಂಬನೆ 1ಅಗ್ರೋದಕತಂದು ಜಗುಲಿ ಮೇಲಿಟ್ಟರೆ |ವೆಗ್ಗಳದಲಿ ಕುಡಿವ ||ಮಂಗಳ ಮಹಿಮನ ವಿೂಸಲೆಂದರೆ ನಿಮ್ಮ |ಮಂಗಳಮಹಿಮನ ಅಪ್ಪನಾನೆಂಬುವ 2ಅಟ್ಟಡಿಗೆಯನೆಲ್ಲ ಉಚ್ಛಿಷ್ಟವ ಮಾಡಿ |ಅಷ್ಟು ತಾ ಬಳಿದುಂಬನೆ ||ವಿಷ್ಣು ದೇವರ ನೈವೇದ್ಯವೆಂದರೆ ನಿಮ್ಮ |ಇಷ್ಟದೇವರು ತೃಪ್ತನಾದನೆಂತೆಂಬುವ 3ಋತುವಾದ ಬಾಲೆಯರು ಪತಿಯೆಡೆ ಪೋಪಾಗ |ಕೃತಕದಿಂದಡಗಿಹನೆ ||ಮತಿಗೆಟ್ಟ ಪೆಣ್ಣೆ ಸುಂಕವ ಕೊಡು ಎನುತಲಿ |ಪ್ರತಿಯಾಗಿ ಮಾರನ ಸೂರೆಗೊಂಬುವನೆ 4ಅಚ್ಚಪಾಲು-ಮೊಸರುನವನೀತಮಜ್ಜಿಗೆ |ರಚ್ಚೆಮಾಡಿ ಕುಡಿವ ||ಅಚ್ಚ ಪುರಂದರವಿಠಲರಾಯನ |ಇಚ್ಛೆಯಿಂದಲಿ ನಿಮ್ಮ ಮನೆಗೆ ಕರೆದುಕೊಳ್ಳಿ 5
--------------
ಪುರಂದರದಾಸರು