ಒಟ್ಟು 29 ಕಡೆಗಳಲ್ಲಿ , 16 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೀಂಗ್ಯಾಕ ಪ್ರಾಣಿ | ಹೀನ ಗುಣಗಳನೆಬಿಡಲಿಲ್ಲ | ಶ್ರೀ ಗುರುವಿನಾಶೆಯ ಮಾಡಲಿಲ್ಲ ಪ ವಿವೇಕವ ತೊಡಲಿಲ್ಲ ಅ-ವಿವೇಕವ ಸುಡಲಿಲ್ಲ |ಸಾವಧಾನದಿ ಮನವಿಡಲಿಲ್ಲ 1 ಆಚಾರವ ಕೊಳಲಿಲ್ಲಮತ್ಸರವ ಮರೆಯಲಿಲ್ಲಸಚ್ಚಿದಾನಂದ ಸುಖ ಉಣಲಿಲ್ಲ 2 ಈ ನಡತೀ ತರಹವಜಾಣನಾದವನೇ ಬಲ್ಲ |ಜ್ಞಾನಬೋಧನು ಸಾರಿದ ಸೊಲ್ಲ 3
--------------
ಜ್ಞಾನಬೋದಕರು
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು
ಹ್ಯಾಂಗೆ ನೀ ದಾಸನಾದೆ ಪ್ರಾಣಿ ಪ ಭವ ಭಂಗವ ಪಡುವವನು ಅ ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು 1 ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ 2 ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ3 ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ4 ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು 5 ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ6 ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ 7 ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ 8 ಭಾಗವತ ಕೇಳದೆ 9 ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು 10 ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ11 ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ 12 ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ 13 ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ14 ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ 15 ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ 16 ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ 17 ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು 18 ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ 19 ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ 20 ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ21
--------------
ಕನಕದಾಸ
ಎಲ್ಲವನು ಬಲ್ಲೆನೆನ್ನುವಿರಲ್ಲಸಲ್ಲದಗುಣಬಿಡಲಿಲ್ಲಪ.ಸೊಲ್ಲಿಗೆ ಶರಣರ ಕಥೆಗಳ ಪೇಳುತಅಲ್ಲದನುಡಿಗಳ ನುಡಿಯುವಿರಲ್ಲಅಪಕಾವಿಯನುಟ್ಟು ತಿರುಗುವಿರಲ್ಲಕಾಮವ ಬಿಡಲಿಲ್ಲನೇಮ - ನಿಷ್ಠೆಗಳ ಮಾಡವಿರಲ್ಲತಾಮಸ ಬಿಡಲಿಲ್ಲತಾವೊಂದರಿಯದೆ ಪರರಲಿ ತಿಳಿಯದೆಕೀವದ ಕುಳಿಯಲಿ ಬೀಳುವಿರಲ್ಲ 1ಗುರುಗಳ ಸೇವೆಯ ಮಾಡಿದಿರಲ್ಲಗುರುತಾಗಲೆ ಇಲ್ಲಪರಿಪರಿ ದೇಶವ ತಿರಿಗಿದಿರಲ್ಲಪೊರೆಯುವರಿನ್ನಿಲ್ಲಅರಿವೊಂದರಿಯದೆಆಗಮ ತಿಳಿಯದೆನರಕಕೂಪದಲಿ ಬೀಳುವಿರಲ್ಲ 2ಬ್ರಹ್ಮಜ್ಞಾನಿಗಳೆನಿಸುವಿರಲ್ಲಹಮ್ಮನು ಬಿಡಲಿಲ್ಲಸುಮ್ಮನೆ ಯಾಗವ ಮಾಡುವಿರಲ್ಲಹೆಮ್ಮೆಯ ಬಿಡಲಿಲ್ಲಗಮ್ಮನೆ ಪುರಂದರವಿಠಲನ ಪಾದಕೆಒಮ್ಮೆಯಾದರು ನೀವೆರಗಲೆ ಇಲ್ಲ 3
--------------
ಪುರಂದರದಾಸರು
ಕಂಡು ಕಂಡೆಂತು ಕೈ ಬಿಡುವೆ ಹರಿಯೆ |ಪುಂಡರೀಕಾಕ್ಷನಿನ್ನ ನಂಬಿದ ಮೇಲೆಪಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ |ಬಣಗುದಾರಿದ್ರ್ಯದಲಿ ಬಲು ನೊಂದೆನಯ್ಯ ||ಫಣಿಶಾಯಿ ಪ್ರಹ್ಲಾದವರದನೇ ನೀನೆನಗೆ |ಹೊಣೆಯಾದ ಮೇಲಿನ್ನು ಮರುಳು ಗೊಳಿಸುವರೆ? 1ಒಂದು ದಿನ ಅತಿಥಿಗಳನುಪಚರಿಸಿದವನಲ್ಲ |ಬೆಂದೊಡಲ ಹೊರೆದು ಬೇಸತ್ತೆನಯ್ಯ ||ಕುಂದು-ಕೊರತೆಯು ಏಕೆ ? ನಿನ್ನ ನಂಬಿದೆ ದಯಾ-|ಸಿಂಧುಗೋವಿಂದನೇ ತಂದೆಯಾದ ಮೇಲೆ2ಬಂಧು ಬಳಗ ಮುನ್ನಿಲ್ಲ ಬದುಕಿನಲ್ಲಿ ಸಖವಿಲ್ಲ |ನಿಂದ ನೆಲ ಮುನಿಯುತಿದೆನೀರಜಾಕ್ಷ||ತಂದೆ-ತಾಯಿಯು ನೀನೆ ಬಂಧು ಬಳಗವು ನೀನೆ |ಕುಂದದೇ ರಕ್ಷಿಸೈ ನಂದನಂದನನೆ 3ಆಶೆಯನು ಬಿಡಲಿಲ್ಲ ಅತಿ ಹರುಷವೆನಗಿಲ್ಲ |ದೇಶದೇಶವ ತಿರುಗಿ ದೆಸೆಗೆಟ್ಟೆನಯ್ಯ ||ವಾಸವಾರ್ಚಿತನಾದ ವೈಕುಂಠನಿಲಯ ಲ-|ಕ್ಷ್ಮೀಶ ನೀಯೆನ್ನ ಕಣ್ಣಾರೆ ಕಂಡ ಮೇಲೆ 4ಭಕುತವತ್ಸಲನೆಂಬ ಬಿರುದು ಹೊತ್ತಿದ ಮೇಲೆ |ಭಕುತರಾಧೀನನಾಗಿರ ಬೇಡವೆ ||ಮುಕುತಿದಾಯಕನೆ ಬೇಲೂರು ಪುರಾಧೀಶ್ವರ |ಸಕಲ ದೇವರದೇವಪುರಂದರವಿಠಲ5
--------------
ಪುರಂದರದಾಸರು
ಭಾಳಭಾಳಬಿಂಕರುಕ್ಮಿಣಿನಿನ್ನಕೇಳಿಬಲ್ಲೆನೆ ಸತ್ಯಭಾಮಿನಿಪ.ದೊರೆಯರ ಮಗಳೆಂದು ಗರವಿಲೆÉ ರುಕ್ಮಿಣಿಬರಲಿಲ್ಲ ನಮ್ಮ ಕರೆಯಲುಬರಲಿಲ್ಲ ನಮ್ಮ ಕರೆಯಲು ರುಕ್ಮಿಣಿಸರಿಯವರುನೋಡಿ ನಗತಾರ1ಕೆಂಚಿನಿಮ್ಮಣ್ಣನ ಪಂಚೆಚೂಡನ ಮಾಡಿಕಂಚಿಯ ವರದ ಕಳುಹಿಲ್ಲಕಂಚಿಯ ವರದ ಕಳುಹಿಲ್ಲ ರುಕ್ಮಿಣಿಪಾಂಚಾಲಿಗೆ ನೀನು ಸರಿಯೇನ 2ನಾರಿ ನಿಮ್ಮಣ್ಣನ ಮಾರಿಯ ಬಾಡಿಸಿತೇರಿಗೆಕಟ್ಟಿಮೆರೆಸಿಲ್ಲತೇರಿಗೆ Pಟ್ಟಿ ಮೆರೆಸಿಲ್ಲ ರುಕ್ಮಿಣಿಯಾರ ಮುಂದಿಷ್ಟು ಬಡಿವಾರ 3ಹರದಿನಮ್ಮಣ್ಣಗೆ ¨ರೆದ ಓಲೆಯನೋಡಹಿರಿಯರಿಲ್ಲೇನ ಮನೆಯಾಗಹಿರಿಯರಿಲ್ಲೇನ ಮನೆಯಾಗಅತ್ತಿಗೆಸರಿಯವರುನೋಡಿ ನಗತಾರ4ಹತ್ತು ಮಾರಿಯವನ ಬೆನ್ನತ್ತಿ ಹೋದವಳೆಂದುಕೀರ್ತಿಯ ಪಡೆದೆಯೆಲೆಭಾವೆಕೀರ್ತಿಯ ಪಡೆದೆಯೆಲೆ ಭಾವೆನೀಮಹಾಮೂರ್ತಿಎಂಬೋದು ಹರಿಬಲ್ಲ5ಪಟ್ಟದರಸಿ ಎಂದು ದೃಷ್ಟಿ ತಿರುಗ್ಯಾವ ನಿನ್ನಎಷ್ಟುಬಡಿವಾರಎಲೆಭಾವೆಎಷ್ಟುಬಡಿವಾರಎಲೆಭಾವೆನೀ ನಮ್ಮಪುಟ್ಟ ಸುಭದ್ರೆಯ ಸರಿಯೇನ 6ಪತಿವ್ರತೆ ಅಂದರೆ ಅತಿ ಅತಿ ಗರುವ್ಯಾಕಪತಿಎಲ್ಲ ಬಲ್ಲ ನಿನ್ನಗುಣಪತಿಎಲ್ಲ ಬಲ್ಲ ನಿನ್ನಗುಣವನದೊಳುಸತಿಅಲ್ಲವೆಂದು ಬಿಡಲಿಲ್ಲ7ಗಂಡನಿನ್ನಯಗುಣಕಂಡನೆ ವನದೊಳುಕೆಂಡವು ಎಂದು ಹೊಗಸಿಲ್ಲಕೆಂಡವು ಎಂದು ಹೊಗಸಿಲ್ಲ ಈ ಮಾತುಪಂಡಿತರುಕೇಳಿಹುಸಿಯಲ್ಲ8ಮಂದಗಮನೆ ನಿನ್ನ ತಂದೆ ಹ್ಯಾಂಗೆ ಅಂದ್ಹಾಂಗೆಇಂದಿರಾಪತಿಯೆಗತಿಕೊಟ್ಟಇಂದಿರಾಪತಿಯೆಗತಿಕೊಟ್ಟ ಅದರಿಂದಬಂದಿತ್ಯಾಕಿಷ್ಟುಬಡಿವಾರ9ನಾರಿ ಹಿಂದಕ್ಕೆ ಒಂದು ಪಾರಿಜಾತಕ್ಕಾಗಿನೀರಜನಯ್ಯನ ದಣಿಸಿದೆಯಲ್ಲನೀರಜನಯ್ಯನ ದಣಿಸಿದೆಯಲ್ಲಅತ್ತಿಗೆಯಾರ ಮುಂದಿಷ್ಟೆಬಡಿವಾರ10ನಾರಿ ಹಿಂದಕೆ ಒಂದು ನಾರು ವಸ್ತ್ರವಕಾಣಿಊರು ಇಲ್ಲದಲೆ ವನವನಊರು ಇಲ್ಲದಲೆ ವನವನ ತಿರುಗಿದಿಯಾರ ಮುಂದಿಷ್ಟುಬಡಿವಾರ11ಧಿಟ್ಟೆ ಹಿಂದಕ್ಕೆ ಒಂದು ಉಟ್ಟೆನೆಂದರೆ ಇಲ್ಲಹೊಟ್ಟೆಗಿಲ್ಲದಲೆ ಮುನಿಪನಹೊಟ್ಟೆಗಿಲ್ಲದಲೆ ಮುನಿಪನ ಕುಟೀರದಿಎಷ್ಟು ದಿನಕಾಲಕಳೆದೆಯಲ್ಲ12ಸ್ವಾಮಿ ಶ್ರೀಕೃಷ್ಣರಾಯ ರಾಮನಂಥವನಲ್ಲಭೂಮಿ ಮ್ಯಾಲಿಂಥ ದೊರೆಯಿಲ್ಲಭೂಮಿ ಮ್ಯಾಲಿಂಥ ದೊರೆಯಿಲ್ಲ ಅದರಿಂದಭಾಮೆ ನೀ ಕಂಡೆಒಗೆತನ13ಪಟ್ಟಾಭಿರಾಮನಂತೆ ಸಿಟ್ಟು ಕೃಷ್ಣಯ್ಯಗಿಲ್ಲಎಷ್ಟು ದಯವಂತ ಯದುಪತಿಎಷ್ಟು ದಯವಂತ ಯದುಪತಿ ಅದರಿಂದಶ್ರೇಷ್ಠಳೆ ಕಂಡೆಒಗೆತನ14ಇಷ್ಟು ಜನರೊಳು ಅಷ್ಟೂಗುಣಗಳ ಸ್ಪಷ್ಟ ಮಾಡಿ ಹೊಗಳಲಿಸ್ಪಷ್ಟ ಮಾಡಿ ಹೊಗಳಲಿ ರಮಿ ಅರಸುಬಿಟ್ಟರೆÉ ನಿನ್ನ ತೆgನೆÉೀನಭಾಳಭಾಳಬಿಂಕರುಕ್ಮಿಣಿ15
--------------
ಗಲಗಲಿಅವ್ವನವರು
ಹುಚ್ಚುಕುನ್ನಿ ಮನವೇ ನೀಹುಚ್ಚುಗೊಂಬುದು ಘನವೇ ಅಕಚ್ಚುಕದನತನವ ಬಿಟ್ಟುಅಚ್ಯುತನ ಪದವ ಮುಟ್ಟು ಅಪಸ್ನಾನ ಮಾಡಿದರೇನು - ಸಂಧ್ಯಾನವ ಮಾಡಿದರೇನುಹೀನತನವ - ಬಿಡಲಿಲ್ಲಸ್ವಾನುಭಾವ ಕೂಡಲಿಲ್ಲ 1ಜಪವ ಮಾಡಿದರೇನು - ನೀತಪವ ಮಾಡಿದರೇನುಕಪಟ ಕಲ್ಮಷ ಕಳೆಯಲಿಲ್ಲಕಾಮಿತಾರ್ಥಪಡೆಯಲಿಲ್ಲ2ಮೂಗು ಹಿಡಿದರೇನು - ನೀಮುಸುಕನಿಕ್ಕಿದರೇನುಭೋಗಿಶಯನು ವರ್ತಿಸಲಿಲ್ಲದೇವಪೂಜೆ ಮಾಡಲಿಲ್ಲ 3ಗರುವನಾದರೇನು - ನೀಗೊರವನಾದರೇನುಗುರುವಿನ ಸ್ವಾಮ್ಯವ ತಿಳಿಯಲಿಲ್ಲಗುರುವುಪದೇಶ ಪಡೆಯಲಿಲ್ಲ 4ಹೋಮ ಮಾಡಿದರೇನು - ನೀನೇಮವ ಮಾಡಿದರೇನುರಾಮನಾಮ ಸ್ಮರಿಸಲಿಲ್ಲಮುಕುತಿ ಪಥವ ಪಡೆಯಲಿಲ್ಲ 5ನವದ್ವಾರವ ಕಟ್ಟು ನೀನಡುವಣ ಹಾದಿಯ ಮುಟ್ಟುಅವಗುಣಗಳ ಬಿಟ್ಟುಭಾನುಮಂಡಲ ಮನೆಯ ಮುಟ್ಟು 6ಏನು ನೋಡಿದರೇನು ನೀನೇನ ಮಾಡಿದರೇನುಧ್ಯಾನವನ್ನು ಮಾಡಲಿಲ್ಲಪುರಂದರವಿಠಲನ ಸ್ಮರಿಸಲಿಲ್ಲ7
--------------
ಪುರಂದರದಾಸರು