ಒಟ್ಟು 37 ಕಡೆಗಳಲ್ಲಿ , 23 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದೇವರ ಪೂಜೆಯ ಮಾಡಿರೋ ಮಾಡಿ ಬಿಟ್ಟರು ಬಿಡಿ ಭೂದೇವರ ಪೂಜೆ ಮಿಗಿಲು ಬಿಡಬೇಡ ಪ ಉಂಬೋ ದೇವರ ನೋಡಿ ಕರೆತಂದೊಯ್ಯನೆ ಶಂಭು ಶ್ರೀಹರಿ ಎಂದು ಮನತಂದು ಕರು ಪಾದ ತೊಳೆದು1 ಮಾತನಾಡುವ ದೇವನಿವನೆಂದು ಸಂಪ್ರೀತಿಯಿಂದಲೆ ಈತ ಶಿವನೆಂದು ಜಾತಿ ಶ್ರೀ ಗಂಧ ಪುಷ್ಪವ ತಂದುಮನ ವೊತು ಪೂಜೆಯನು ಮಾಡಿರೋ ಎಂದು 2 ಎಡೆಮಾಡಿ ಷಡುರಸಾನ್ನವ ನಂದು ಉಣ ಬಡಿಸೆ ನಾರಿಯರಟ್ಟುದನುತಂದು ಕಡುಬು ಕಜ್ಜಾಯ ಘೃತವನಂದು ಜಗ ದೊಡೆಯ ನುಂಡನು ಸಾಕು ಬೇಕೆಂದು 3 ಹಸ್ತವ ತೊಳೆದ ಮೇಲ್ವೀಳ್ಯವ ಕೊಟ್ಟು ಮತ್ತೇನಾ ಪೋಪೆನೆಂದರೆ ಪೊಡಮಟ್ಟು ಚಿತ್ತೈಸಿ ಮರಳಿಬರಬೇಕು ದಯವಿಟ್ಟು ಎಂದು 4 ಪ್ರತಿಮೆಗಿಕ್ಕಿದರಲ್ಲೆ ಇಹುದು ಮತ್ತೆ ಕ್ಷತಿಗೆ ಹಾಕಲುಬೇಕು ಬೇಡೆನ್ನಾದಿಹುದು ಅತಿಥಿಗಿಕ್ಕಲು ಸಾಕು ಬೇಕೆನ್ನುತಿಹನು ಲಕ್ಷ್ಮೀ ಪತಿಗಿದು ಪೂಜೆ ಸಂಪೂರ್ಣವಾಗಿ 5
--------------
ಕವಿ ಪರಮದೇವದಾಸರು
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ
ನಿನ್ನದೇ ಸಕಲ ಸೌಭಾಗ್ಯ ಸಾಧನವು ಹರಿಯೆ ಪ ನಿನ್ನದೆಂಬಭಿಮಾನ ಲವಲೇಶ ಸಲ್ಲದಯ್ಯಾ ಅ.ಪ. ನಿನ್ನ ಪ್ರೇರಣೆ ಹೊರತು ತೃಣವೊಂದು ಚಲಿಸದು ನಿನ್ನಿಚ್ಛೆಗನುಸಾರ ಸಕಲ ಜಗವು ನಿನ್ನ ಚಿತ್ತಕೆ ಬಾರದಿಹುದೇನು ನಡೆಯುವುದೋ ನಿನ್ನ ನಂಬಿದವರನು ನೀನಾಗೆ ಸಲಹುವೆಯೊ 1 ಸರ್ವತಂತ್ರ ಸ್ವತಂತ್ರ ಸರ್ವಾಂತರಾತ್ಮಕನೆ ಸರ್ವಜಗದಾಧಾರ ಸರ್ವೇಶನೆ ಅಘ ದೂರ ಸರ್ವಕಾಲದಲೆನ್ನ ಗರ್ವರಹಿತನ ಮಾಡೊ 2 ಸತ್ಯಚಿತ್ತನೆ ನಿನ್ನ ಚಿತ್ತವೆನ್ನಯ ಭಾಗ್ಯ ಕರ್ತೃತ್ವದಭಿಮಾನ ಕಳೆದು ಕಾಯೊ ಮತ್ತೇನು ಬೇಡುವೆನು ಪರತಂತ್ರ ನಾನಯ್ಯ ಮುಕ್ತಿದಾಯಕ ಶ್ರೀಶ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ಬಿಡು ಬಿಡು ಮಾಯವನು ಕೆಡದಿರು ಕಪಟದಲಿ | ನಡಿ ನಡಿ ಸುಪಥವ ಜಗದೊಡಿಯೆನ ನೆನೆ ಮನವೆ ಪ ನಾನು ನನ್ನದು ಎಂಬೊ ಹೀನ ವಚನ ಸಲ್ಲ ಗೇಣುದರವಲ್ಲದೆ ಪೊರೆವದು ಮತ್ತೇನಾದರು ಉಂಟೆ 1 ಮಡದಿ ಮಕ್ಕಳ ನೋಡಿ ಕಡು ಹಿಗ್ಗಿ ಕೆಡಬೇಡ | ಕಡು ಮುನಿದೆಮನಾಳುಗಳು ಪಿಡಿದೆಳೆದೊಯ್ವಾಗ 2 ಇರುಳು-ಹಗಲು ನೀನು ಹರಿಸ್ಮರಣೆ ಚಿತ್ತದಲಿ | ಜನ್ಮಾಂತರ ಪಾಪ ಪೋಗುವುದು 3 ಜ್ಞಾನ ಮಾರ್ಗವಿಡಿದು ಆನಂದ ಮೂರುತಿಯ ಧ್ಯಾನದಿಂದಲಿ ಕಾಣ್ಯ ದೈನ್ಯವೃತ್ತಿಯ ಬಿಟ್ಟು ಹಾನಿ ವೃದ್ಧಿಯ ಜರಿದು4 ಅತಿ ಕಾಮಾತುರನಾಗಿ ರತಿಯಲ್ಲಿ ಸಿಗದಿರು | ಕರ್ಮ ವ್ಯಾಳೆವ್ಯಾಳೆಗೆ ಶ್ರೀಪತಿಗರ್ಪಿತವೆನ್ನು5 ಸಂತೋಷಗಳು ಬರಲಿ ಸಂತಾಪಗಳು ಇರಲಿ | ಇಂತು ಇವರಿಗೆಲ್ಲ ಪ್ರೇರಕ ಹರಿ ಜಗದಂತರ್ಯಾಮಿ 6 ಮಾನಿನಿ ನಂದನರು ಆರು ? | ತನುವೆ ನಿನ್ನದಲ್ಲ ತಿಳಿದುಕೊ ಗತಿ ಸಾಧನಕೆ ವಿಜಯವಿಠ್ಠಲ7
--------------
ವಿಜಯದಾಸ
ಬೇಗನೆ ಬಾರೊ ದೇವ ಜಾಗೂ ಮಾಡದೆ ಪ ಬೇಗನೆ ಬಾರೊ ನೀನು ನಾಗಶÀಯನ ಕೃಷ್ಣ ಯೋಗಿ ಜನರು ಕಂಡು ಪೋಗಲೀಸರೆ ನಿನ್ನ ಅ.ಪ. ಹತ್ತಾವತಾರವಾಯ್ತು ಮತ್ತಗಜವ ಪೊರೆದೆ ಉತ್ತಮಪದ ಧ್ರುವಗಿತ್ತೆ ಮತ್ತೇನು ಕಾರ್ಯವೈಯ್ಯ 1 ತರಳ ಪ್ರಹ್ಲಾದನ ಕರುಣಾದಿ ಸಲಹಿದೆ ದುರುಳರ ಸದೆದ ಪರಿಯೆಲ್ಲವಾಯಿತು2 ಪರಿ ರೂಪವ ಧರಿಸಿದ ಎನ್ನದೇವ ಸಿರಿರಂಗೇಶವಿಠಲನೆ ಕರವೆತ್ತಿ ಮುಗಿಯುವೆ 3
--------------
ರಂಗೇಶವಿಠಲದಾಸರು
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ
ಮಡದಿ ಭಾಗ್ಯ ಎಂಬುವಿಯಾಕೊ ರಂಗಯ್ಯನಿನ್ನ ಬಡಿವಾರವ ಹೇಳಿಕೊಂಬೆ ಸಾಕೊ ಕೃಷ್ಣಯ್ಯ ಪ. ಬಿಡು ಬಿಡು ಸಣ್ಣ ಮಾರಿಯನ್ನು ನೀ ಮಾಡಬ್ಯಾಡ ಬಡಿವಾರವ ಹೇಳಿಕೊಂಬುವುದೇನೊಕಡುಭಾಗ್ಯ ಪುರುಷನಾಗೊ ನೀನು ಎತ್ತಿಕೊಂಡ್ಹೋಗಿ ಮಡುವು ಸೇರಿಕೊಂಡಿ ಮತ್ತೇನೊ1 ದೊರೆತನ ಹೇಳಿಕೊಂಬೆ ಸಾಕೊ ರಂಗಯ್ಯನಿನ್ನ ಕರಕರ ಹಲ್ಲು ತಿಂಬೊ ಸಿಟ್ಟು ಕೃಷ್ಣಯ್ಯಬಿರುಗಣ್ಣು ಬಿಡವೋದ್ಯಾಕಿಷ್ಟು ರಂಗಯ್ಯನಿನ್ನ ಉರಿಮಾರಿಗೆ ಅಂಜೋರೆಲ್ಲೊ ಅಷ್ಟು 2 ಧರೆ ಮ್ಯಾಲೆ ರಾಜ್ಯ ಹ್ಯಾಂಗ ರಂಗಯ್ಯನಿನ್ನ ತಗಿ ತಗಿ ಬಲುಲೀಲಾ ಕೈಯ್ಯ ಕೃಷ್ಣಯ್ಯಸುಗುಣನೆಂತೆಂಬೊ ಮತಿಯಾದುದಕ್ಕೆಜನರು ನಗದೆ ಸೈ ಸೈ ಎಂದಾರು ಬರಿಯ ಕೃಷ್ಣಯ್ಯ3 ಧೀರ ಧನವಂತನಲ್ಲೊ ಸಾಕೊ ರಂಗಯ್ಯಆದರೆ ವನದಿನಾರು ವಸ್ತ್ರವನುಟ್ಟುಕೊಂಡಿ ಯಾಕೊ ಕೃಷ್ಣಯ್ಯಚೋರನಂತಾಡಿಕೊಂಬಿ ಸಾಕೊ ರಂಗಯ್ಯಇದ ಕೇಳಿದ ವೀರರೆಂಬವರು ನಗತಾರೊ ಕೃಷ್ಣಯ್ಯ 4 ವಸ್ತ್ರವಿಲ್ಲೆಂಬೊ ಎಚ್ಚರಿಕಿಲ್ಲೊ ರಂಗಯ್ಯತೇಜಿ ಹತ್ತೇನು ಎಂದು ಬರುವಿಯಲ್ಲೊ ಕೃಷ್ಣಯ್ಯಕತ್ತಿ ಕೈ ಶೂರನೆಂಬೊದೆಲ್ಲೊ ರಂಗಯ್ಯರಾಮೇಶ ನಿನ್ನ ಹತ್ತಿಲ್ಲಿದ್ದರೆಲ್ಲ ನಗುವರೊ ಕೃಷ್ಣಯ್ಯ5
--------------
ಗಲಗಲಿಅವ್ವನವರು
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಲಕ್ಷ್ಮೀನೃಸಿಂಹ ಪ್ರಾದುರ್ಭಾವ ದಂಡಕ ಶ್ರೀರಮಾ ಮಾನಿನೀ ಮಾನಸೇಂದೀವರೋತ್ಫುಲ್ಲ ಸಂಫುಲ್ಲ ಚಂದ್ರಾ ಚಿದಾನಂದ ಸಾಂದ್ರಾ ಸದಾ ಸನ್ನುತೇಂದ್ರಾ ನಮೋಪೇಂದ್ರ ನಿಸ್ತಂದ್ರ ನೀ ಕೇಳು, ಆ ರೀತಿ ಪ್ರಹ್ಲಾದನಲ್‍ಸಜ್ಜನಾಹ್ಲಾದನಲ್ ದೈತ್ಯ ಸತ್ಪುತ್ರರಾವೇಳೆ ಶ್ರೀಕಾಂತನ ಜ್ಞಾನ ಭಕ್ತಿ ಕ್ರಿಯಾಗಾಧೆಗಳ್ ಬೋಧೆಗಳ್ ಕೇಳಿ ತಾವೆಲ್ಲರಾಮಾರ್ಗದಲ್ಲೇ ಸುನಿರ್ದಿಷ್ಟ ಸನ್ಮಾರ್ಗದಲ್ಲೇ ಪರಾಭೂತ ಷಡ್ವರ್ಗದಲ್ಲೇ ಮನಸ್ಸಿತ್ತು ಧರ್ಮಾರ್ಥ ಕಾಮಸ್ಪøಹ ಗ್ರಂಥಗಳ್ 10 ಸಿದ್ಧ ಸಂಸಾರ ಸಂಬಂಧಗಳ ಹತ್ತುವೂದಾಗದೇ ದಾನವಾಚಾರ್ಯರಾಶ್ಚರ್ಯದಿಂದಾಗ ತಾವೇಸುರೀತಿಂದಲಾಯಾಸುರೀವಿದ್ಯೆಗಳ ಗದ್ಯಗಳ್ ಪದ್ಯಗಳ್ ಪಾಠ ಪೇಳ್ತಿದ್ದರಾ ಪಾಠಗಳ್ ಒಪ್ಪದೇ ತಪ್ಪದೇನಿಂತು ಮಾರಾಟಗಳ್ ಮಾಡುತಾ ವಿಷ್ಣುಭಕ್ತಿ ಕ್ರಿಯಾಪಾಠಗಳ್ ಪಾಡುತಾ ಎಲ್ಲರೊಂದಾಗೆ ತಾವ್‍ನೋಡಿ ಅಂಜ್ಯಾಡಿ ಇನ್ನೇನು ಈಸೂನುಗಳ ದೈತ್ಯರಾಟ್ ಸೂನನಲ್ ಬುದ್ಧಿ ಭೇದೈಸಿ ದುರ್ಬೋಧಗಳ್ ಕೇಳಿ ದುಸ್ಸಾಧ್ಯರಂ 20 ಕರ್ಣ ಕಾಠೋರ್ಯ ಬಾಣಾಳಿಗಳ್ ರೀತಿ ಅಪ್ರೀತಿಯಾಸೂತಿ ದುರ್ನೀತಿ ತಾ ಸೈಸದೇ ಕೋಪಸಂದೀಪನಾವೇಶದಿಂದಲ್ ಚಲದ್ಗಾತ್ರನಾಗೆದ್ದು ಪ್ರೋದ್ಯದ್ದಯಾಪಾತ್ರನಂತಿಪ್ಪ ತತ್ಪುತ್ರ ಸಂಹಾರದಲ್ ಚಿತ್ತವಂ ಪೆತ್ತವಂ ಪಾಪÀಸಂವೃತ್ತನೇತ್ರ ಪ್ರಮಾಕ್ಷೇಕ್ಷನಾಗಲ್ ಸಮ 30 ಕ್ಷೈಸಿ ದುಷ್ಟೋಕ್ತಿಗಳ್ ಬಾಗುತಾ ಕೂಗುತಾಸಾಧು ಸಧ್ಭಕ್ತಿಯಿಂದಲ್ ಮಹದ್ಭಕ್ತಿಯಿಂದಲ್ಲಿ ತನ್ನಲ್ಲಿ ಚೆನ್ನಲ್ಲಿ ಬದ್ಧಾಂಜಲಿಯಾಗಿ ಸಿದ್ಧಾಂತ ಸದ್ಭಕ್ತಿಯಿಂದಲ್ಲಿ ನಿಂದಿದ್ದ ಪ್ರಹ್ಲಾದ ಧೀಮಂತಗೇ ನಿರ್ಮಲಸ್ವಾಂತಗಾವೇಳೆ ಪಾದಾಹತವ್ಯಾಳಿಯಂತೇ ಭುಜಶ್ವಾಸಗಳ್ ಬೇಸಿಗಳ್ ಬೀಸುತಾಕಂದಗಾ ತಂದೆ ಸುಭಾಷಿಪಂ. ಹೋಯೆಲೋ ದುರ್ವಿನೀತಾಯೆಲೋ ಮಂದಬುದ್ಧೇಯೆಲೋಇಂತು ನೀ ಸ್ತಬ್ಧನಾದೇತಕೋ ವಂಶಘಾ40 ತೀಯೆಲೋ ಪಾಪಜಾತೀಯೆ ನೀ ಹೀಗೆ ಮಚ್ಛಾಸನಾತೀನಾಗಪ್ಪೊಡೇ ನಿನ್ನ ನಿನ್ನಾ ಯಮದ್ವಾರಕೇ ಕಳುಹುವೆಂ ನೋಡೆಲಾನಾನು ಕೋಪಿಷ್ಠನಾಗಿಪ್ಪೊಡೇ ಅಂಜಿ ಮೂರ್ಲೋಕಗಳ್ ಲೋಕಪಾನೀಕಗಳ್ ಕಂಪ ಕಾಣುತ್ತವಿಂಥಾ ಬಲಿಷ್ಠನ್ನ ನೀನೆನ್ನ ಸಂಪದ್ಬಲ ಶ್ರೀಯನಾಶ್ರೈಸದೇ ಬಿಟ್ಟರಿನ್ನಾವನಲ್ ನೀಂ ಬಲಶ್ರೀಯನಾಶ್ರೈಸುವೇಯೋ ಎಲಾ ಏಕೆ ಮಚ್ಛಾಸನಾತೀತನಾಗೂವಿಯೋ ಕಂದ ಪೇಳೆಂದರೇ, ತಂದೆಗಾ 50 ತಂದೆ ಕೇಳಯ್ಯ ಬ್ರಹ್ಮಾದಿ ಆಸ್ತಂಭಪರ್ಯಂತವುಂ ಜಂಗಮಸ್ಥಾವರಾತ್ಮ ಪ್ರಪಂಚೋಚ್ಚ ನೀಚ ಪ್ರಜಾನೀಕ ಯಾವತ್ತದಾವಾತನಾಧೀನದಲ್ಲಿಪ್ಪುದೋ ಆತನೇ ಎನ್ನಗೇ ನಿನ್ನಗೇಇನ್ನು ಮಿಕ್ಕಾದ ಚೈತನ್ಯಕೆಲ್ಲಾ ಬಲಶ್ರೀಯು ತಾನಾದನೇ ಕಾದನೇ ಕಾಲರೂಪೀಶ್ವರೋರುಕ್ರಮಾಕಾರನೆಂಬಾತನೇಆತನೇ ಆತನೇ ತೇಜ ಓಜಸ್ಸಹಾಸತ್ವ ಸಂಪದ್ಬಲ ಶ್ರೀಂದ್ರಿಯಾತ್ಮನ್ ಸ್ವಯಂ60 ಸ್ವಾಂತ ನೀನಿತ್ತು ಸರ್ವತ್ರ ಸಮಚಿತ್ತನಾಗಯ್ಯ ಎನ್ನಯ್ಯನೇ ನಿನ್ನಗಾಮೇಲೆ ವಿದ್ವೇಷ ಮಾಡೂವರಾರಿಲ್ಲವಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗವೆಂಬಾ ಮಹಾವೈರಿಗಳ್ ಕಳ್ಳರಂತೆಲ್ಲರುಂ 70 ದೇಹವೆಂಬೋ ಮಹಾರಾಜಧಾನೀ ವೃಥಾಹಾನಿ ಮಾಡೂವರಂಥಾವರಂ ಗೆಲ್ಲದೇಕೆಲ್ವರೀ ದಿಕ್ಕುಗಳ್ ಸರ್ವವಂ ಗೆದ್ದವೆಂತೆಂದು ಹಿಗ್ಗೂವರಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗ ಗೆದ್ದಾತಗೇ ಜ್ಞಾನಸಂಪೂತಗೇ ಸಾಧು ಸಂಭೂತ ಸರ್ವಂಸಮಂಚೇತಗಾಮೇಲೆ ತನ್ಮೋಹ ಸಂಜಾತವೆಂತಪ್ಪುದೋ ಶಾತ್ರವವ್ರಾತವೆಲ್ಲಿಪ್ಪುದಯ್ಯಾ ಸದಯ್ಯಾತ್ಮನೇ ತಿಳಿದು ನೋಡೆಂದು ತಾನಿಂದು ಮಾತಾಡಲು, ಶತ್ರುವಂತಿಪ್ಪ ಪು 80 ಇಂದು ನಾವೊಂದು ಪೇಳುತ್ತಿರುತ್ತಿದ್ದರೊಂದಕ್ಕೆ ಹತ್ತಾಗಿ ನೀನೇವನೋ ವಿಷ್ಣುವೆಂಬಾತ ಬೇರೊಬ್ಬ ತಾನಿಪ್ಪನೆಂದೂಹಿಸೂವೇಯ ಹೋ ಹೋಯೆಲಾಸಾವಿಗೀ ಬುದ್ಧಿ ನೀ ಸಿದ್ಧ ಮಾಡೀದಿ ಎಂಬೋದಿದಂ ವ್ಯಕ್ತವಂತೆಲ್ಲ ನಾಂ ಬಲ್ಲೆ ಇಂ 90 ತಲ್ಲದೇ ನಿನ್ನಗೀರೀತಿ ದುರ್ಬುದ್ಧಿ ಪುಟ್ಟೂವುದೇ ಮೃತ್ಯುಸಿದ್ಧರ್ಗೆ ವಿಷ್ಣುತ್ವ ಸಂಭಾಷೆಯಲ್ಲಿಚ್ಛೆ ಬೇಕಾಗಿ ಹೋದಲ್ಲದೇಬಲ್ಲೆನೆಲ್ಲಾ ಎಲೋ ಮಂದನೇ ಮಂದಭಾಗ್ಯೋಕ್ತಿಗಳ್ ಏಕೆ ನೀನಾಡುವೇ ಅಕ್ಕಟಾಎನ್ನಗಿನ್ನಾ ಜಗನ್ನಾಥನಿನ್ನಾವನೋಆತನೆಲ್ಲಿಪ್ಪ, ಸರ್ವತ್ರದಲ್ಲಿಪ್ಪ ನೀನೆಂದಡೇ ಡಿಂಭಕಾಡಂಭಕಾಡೋಣಗಳ್‍ಸಾಕು ಮಾಡಿನ್ನು ಮೇಲೀ ಸಭಾಸ್ತಂಭದಲ್‍ಶೀಘ್ರ ಸಂರಂಭದಲ್ ತೋರು ನೀ ತೋರದೇ 100 ಪೋದೆಯಾ ಇನ್ನು ನೀ ಮಾರುಮಾತಾಡದ್ಹಾಗೇ ಶಿರಚ್ಛೇದ ಮಾಡೂವೆನೋ ನಿನ್ನಗೀವೇಳೆಯಲ್ ವಿಷ್ಣುವೆಂತೆಂದದಾವಾತ ತಾನಡ್ಡ ಬಂದಾನೋ ನಾ ನೋಡುವೆಂ ವಿಷ್ಣುವೇಬೇಡಬೇಕಾದ ದಿಕ್ಕಾಗಿ ನಿನಗಿಪ್ಪಡೇಬೇಡಿಕೋ ಮೂರ್ಖನೇ ಎಂದು ಕ್ರೋಧಾಗ್ನಿಯಿಂದುರ್ಪಿ ದುರ್ಭಾಷೆಯಲ್ ತನ್ನ ಪುತ್ರನ್ನ ತಾದೂರುತಾ ಹಾರುತಾ ಕೈಲಿ ಖಟ್ ಪೆಟ್ಕವಂಖಡ್ಗವಂ ಕೊಂಡು ದುಷ್ಟಂ ಮಹಾದೋರ್ಬಲಿಷ್ಠಂ ಸ್ವಯಂ ಮುಷ್ಟಿಯಿಂದಲ್ಲಿ ಪೆಟ್ಟಿತ್ತನು. 110 ಆ ಭೀಕರಧ್ವಾನ ಸಂಭಿನ್ನ ದುಷ್ಟಾಸುರೀಗರ್ಭಸಂರಂಭವುಂ ಶುಂಭದಂಭೋದ ವೀಥೀ ಸಮಾರಂಭಿತೋ ಜೃಂಭವುಂ ವೈಷ್ಣವೋತ್ಕøಷ್ಟ ವಿಶ್ರಂಭವುಂ ಶಾತಕುಂಭೊಲ್ಲಸದ್ರತ್ನಚಿತ್ರಪ್ರಭಾಗುಂಭವುಂ ತತ್ಸಭಾಸ್ತಂಭವಂ ಆಗಲೇ ಬೇಗಲೇ ಘಳಾಘಳಾರಾವ ಉದ್ಭೂತವಾಗೆದ್ದು ಬ್ರಹ್ಮಾಂಡವೆಲ್ಲಾ ಪರಿಸ್ಫೋಟವಂ ಮಾಡುವಂತೊಪ್ಪೆ ಬ್ರಹ್ಮಾದಿಗಳ್ ತಮ್ಮ ಧಾಮಕ್ಕೆ ವ್ಯಾಘಾತವೇನಾದರುಂ ಬಾಹೋದೇನೋ ಇದೇನೆಂದು ವಿ 120 ಭ್ರಾಂತ ಚೇತಸ್ಕರಾಗಿಪ್ಪರಂತೇ ದುರಂತೇಕ್ಷಣಂಗಳ ಕುವರಾಗ್ರನಲ್ ತುಂಬುತಾಕತ್ತಿ ಕೈಹತ್ತಿ ಪುತ್ರನ್ನ ತಾ ಚಿತ್ರಹಿಂಸಿತ್ತು ಕೊಲ್ಲೂವೆನೆಂದಾಗ್ರಹೋಗ್ರ ಗ್ರಹಗ್ರಸ್ತನಾಗೇನು ಮೈತಿಳಿಯದೇ ಕೂಡಿಓಡ್ಯಾಡಿ ಬಾಹೋ ಹಿರಣ್ಯಾಖ್ಯಗಾ ವೇಳೆ ಕಾಲಾಡದದ್ಹಾಗೇ ಸಭಾಸ್ತಂಭದಲ್ ತನ್ಮಹಾರಾವ ತಾನಡ್ಡಕಟ್ಟಿಪ್ಪದಂತಾ ಮಹಾಧ್ವಾನ ಕೇಳುತ್ತಲೇ ನಿಂತನಾ ಹೇತುವಂ ಕಾಣದೇ ಆಗ ಆಯಾಸುರೀ ಹಿಂಡುಗಳ್ 130 ತುಂಬಿ ಕಾಳ್ಗಿಚ್ಚುಗಳ್ ಚೆಂದದಿಂಜಂತು ಸಂಘಕ್ಕೆ ಸಂತಾಪಗೈಸೇ ಛಿಟಾಛಿಟ್ ಛಿಟಾಂಗಾರಗಳ್ ಬೀಸೆ ಇದೇವುದೋಭೂತ ಉದ್ಭೂತವಾಗೊಪ್ಪಿತೆಂದಾಗ ಮೂರ್ಲೋಕವೆಲ್ಲಾ ಸಮುಲ್ಲೋಕವಾಗಿಪ್ಪುದಾವೇಳೆ ತದ್ಭøತ್ಯವಾಕ್ ಸತ್ಯವಂ ಮಾಡಬೇ 140 ಕಾಗಿ ಸರ್ವತ್ರ ತಾನ್ ತನ್ನ ವ್ಯಾಪ್ತತ್ವವಂಪಥ್ಯವಾಗಿಪ್ಪವೋಲ್ ಅದ್ಭುತಾಕಾರ ಪೊತ್ತಂ ಜಗದ್ಭರ್ತ ತಾನೊಂದೆ ಸಿಂಹಾಕೃತೀಯಾಗದೇ ಮತ್ರ್ಯಮೂತ್ರ್ಯಲ್ಲದೇ ತತ್ಸಭಾಸ್ತಂಭದಲ್ ಡಿಂಬ ಸಂಭಾವನಕ್ಕಾಗಿ ಸಂಭೂತನಾದಂ.ದಿತೀಪುತ್ರನಾ ರೂಪವಂಕಂಡಿದೇನೋ ಮಹಾ ಚಿತ್ರವಾಗಿಪ್ಪುದೇಸಿಂಹದಂತಲ್ಲದೇ ಮತ್ರ್ಯನಂತಲ್ಲದೇಯಾವುದೀ ಭೂತವೆಂತೆಂದು ಮೀಮಾಂಸಮಾನಾತ್ಮನಾದಂ.ಜಗತ್ಸ್ಯಾಮಿ ತಾನಾಗಲೇ 150 ತಪ್ತಭಾಂಗಾರ ಶೃಂಗಾರವಲ್ಯಂತೆ ಕಂಗಳ್ ಸಮುದ್ಯತ್ಸಟಾ ಕೇಸರಂಗಳ್‍ವಿಜೃಂಭತ್ಕರಾಳಾಸ್ಪದಂ ಉಗ್ರನಾಸಾಸಮುಚ್ಚಾಸ್ವ ನಿಶ್ವಾಸಗಳ್ ಸಂಚಲದ್ವಸ್ತವ್ಯಾಳ ಕ್ಷುರಾಂತೋಗ್ರ ಜಿಹ್ವಾಗ್ರ ಲೇಲೀಹನಂಗಳ್ ಭ್ರಮದ್ಭ್ರೂಲ್ಪಲಂಗಳ್ ಹನೊರೋಷಭೀಷ್ಣಂಗಳುಂ ಊಧ್ರ್ವಕರ್ಣಂಗಳುಂ ಭೂಮಿ ಭೃ ತ್ಕಂದರಾಶ್ಚರ್ಯವವ್ಯಾತ ಘೋರಾಸ್ಯನಾಸಾಪುಟಂಗಳ್ ಅದೀರ್ಘೊನ್ನತಗ್ರೀವವುಂದೀರ್ಘದಂತೊಪ್ಪುವೋ ದೇಹವಂ ವಿಸ್ತøತೋ160 ಶುಂಡಾಲ ಶುಂಡಪ್ರಕಾಂ170 ಡ ಪ್ರಚಂಡೋಲ್ಲಸದ್ದೋಹ ಸಾಹಸ್ರ ದೀಪ್ತಾಯುಧಾಭೋ ನಖಾನೀಕವುಂ ಚಕ್ರ ಶಂಖಾದಿ ನಾನಾಯುಧ ಶ್ರೇಷ್ಠ ವಿದ್ರಾವಿತಾsಭದ್ರ ರಕ್ಷಃ ಪಿಶಾಚಾಸುರೋದ್ರೇಕವುಂಪ್ರೋನ್ನಿತಂಬೋರು ಸತ್ಸಾನು ಜಂಘಪ್ರದೇಶಾವೃತ ಪ್ರೋಲ್ಲಸತ್ಪೀತ ಕೌಶೇಯವುಂಬದ್ಧಕಾಂಚೀಕಟಿಸ್ಥಾನವುಂ ಮಂಜುಮಂಜೀರ ಸಂಚಿನ್ನನಾದಾಂಘ್ರಿಕಂಜಾತ ವಿನ್ಯಾಸವುಂ ಕೋಟಿ ಮಾರ್ತಾಂಡ ಸಂಕಾಶವುಂಪೋಲ್ವುದಂಥಾ ದುರಾಲೋಕವಂತಿಪ್ಪ ಜ್ವಾ180 ಲಾ ನೃಸಿಂಹಾಕೃತಿ ಸ್ವಾಮಿನಂ ನೋಡುತಾದೃಷ್ಟಿಗಳ್ ಬಾಗೆ ತಾ ನಿಂತು ನನ್ನ ವರಜಾರಾತಿಯಾದ ಸ್ವಯಂ ಜ್ಯೋತಿ ಈ ರೀತಿ ತಾನಿಂದಿಗೇ ನಾರಸಿಂಹಾಕೃತೀಯಾಗಿ ನಾಂಪುತ್ರಂ ಸಂಹಾರಕುದ್ಯುಕ್ತನಾಗಿಪ್ಪೊಡೇಎನ್ನ ಸಂಹಾರಕಾಗಿಲ್ಲಿಗೇ ಬಂದನೋಇನ್ನು ಮೇಲೀತನಿಂದೆನ್ನಗೇ ಮೃತ್ಯು ತಾಸಿದ್ಧವಾಂತಿಪ್ಪುದೇನೋ ಪುರಾಣ ಪ್ರಸಿದ್ಧೋಕ್ತ್ಯಭಿವ್ಯಕ್ತಿಗೈತೇನಹೋ ಎಂದು ಮಾತಾಡುತಾ ನಿಂತು ಉದ್ಯದ್ಗದಾಧಾರಿ ತ 190 ಪೂರ್ವದಲ್‍ಅಸ್ಯತೇಜೋಂಶದಿಂದಲ್ ಜಗಧ್ವಾಂತ ಯಾವತ್ತುಮಿಂ ತಾ ಸ್ವಯಂ ಪಾನಮಾಡಿಪ್ಪ ಸತ್ಯಾತ್ಮಗೀ ನಾರಸಿಂಹಾತ್ಮಗೇ ಈ ಹಿರಣ್ಯಾಸುರ ಶ್ರೇಷ್ಠ ಸಂಹಾರ ಹೆಚ್ಚಲ್ಲವಂತಾದರುಂ ಲೋಕದೃಷ್ಟ್ಯಾನುಸಾರ ಕ್ರಿಯಾಕಾರಿಯಾಗಿಪ್ಪ ನೃಸಿಂಹನುದ್ಯದ್ಗದಾಧಾರಿ ತಾನಾಗಿ ಸದ್ವಿದ್ಯುದಾಭ್ಯೋದ್ಯದು 200 ದ್ವೇಗವೇಗೋರು ಸಂಪದ್ಗದಾ ದಂಡವಂಕೊಂಡು ಯುದ್ಧಕ್ಕೆ ಬಾಹೋ ಮಹಾದೈತ್ಯವರ್ಯನ್ನ ತಾ ನೋಡಿ ರೋಷೋಜ್ವಲ ಜ್ವಾಲೆಗಳ್‍ಲೇಲಿಹಾನೋಲ್ಲ್ಲಸಜ್ಜಿಹ್ವೆಯಿಂದಲ್ ಪ್ರಕಾಶೈಸುತಾ ಚೀರುತಾಗಾಟ್ಟಹಾಸಕ್ರಮನ್ಯಾಸದಿ ಹಾರುತಾ ಕೋಟಿ ಸೂರ್ಯಪ್ರಭಾಬೀರುತಾ ಆ ಗರುತ್ಮಂತ ಕಾಳಾಹಿಂಪಿಡಿವನಂತೊಪ್ಪಿ ತಾನಾ ದಿತೀಪುತ್ರನಲ್‍ನೂಕಿದಂ ಶೀಘ್ರದಲ್ ಪಿಡಿದನಾ ದೈತ್ಯರಾಜೇಂದ್ರನಾವೇಳೆ ತದ್ಧಸ್ತದೋಳ್ ಸಿಕ್ಕದೇ 210 ಸುಕ್ಕದೇ ಘಕ್ಕನೇ ಬಿಡಿಸಿಕೊಂಡಾ ಗದಾದಂಡವಂ ಕೊಂಡು ಸನ್ನದ್ಧ ಸದ್ಯುದ್ಧವಂಮಾಡುವೋನಂತೆ ಯಾವಾಗ ನೃಸಿಂಹನಲ್‍ಸಿಕ್ಕಿ ಮತ್ತೇಬಿಡೂವಾದನಾ ವೇಳೆಯಲ್‍ಶರ್ವ ಶಕ್ರಾದಿ ದಿಕ್ಪಾಲಕಾನೀಕವುಂಸೂರ್ಯಚಂದ್ರಾದಿ ಸರ್ವಗ್ರಹಕ್ರ್ಷಾವಳೀಲೋಕವುಂ ಮೇಘಸಂತಾನದೋಳ್ ಲೀನವಾಗಿದ್ದು ಇನ್ನೇನು ಈ ದೇವತಾರಾತಿ ಈನಾರಸಿಂಹಾತ್ಮನಲ್ ಸಿಕ್ಕದೇ ದಕ್ಕದಂತಿಪ್ಪನೇ ಈತನೀ ದುಷ್ಟ ದೈತ್ಯನ್ನ ಗೆ 220 ಲ್ಲಾರನೋ ಗೆಲ್ವನೋ ಎಂದು ತದ್ವೀರ್ಯವಂತಿಳಿಯದೇ ಭ್ರಾಂತಚಿಂತಾಂತರಂಗೋದ್ಯದುದ್ವೇಗದಿಂ ಕಾಂಬಂತಿಪ್ಪುದು.ಆಮೇಲೆ ಢಾಲ್ ಕತ್ತಿ ಕೈಗೊಂಡು ಆಯಾಸದಿಂದಲ್ಲಿ ಆ ದೈತ್ಯನಾನಾರಸಿಂಹಾತ್ಮನಲ್ ಸಂಗರ ಶ್ರಾಂತಿ ಮತ್ತೇನು ತಾ ಕಾಣದೇ ದೂಕಿದಂ ತಾಕಿದಂಸೋಕಿದಂ ಅಂಘ್ರಿವಿನ್ಯಾಸಗಳ್ ಕೂಡಿ ತಾಮೇಲೆಯುಂ ಕೆಳಗೆಯುಂ ಶ್ಯೇನಪಕ್ಷಂತೆ ಸುತ್ತಾಡುತಾ ಛಿದ್ರವಂ ಕಾಣದೇ ತನ್ನನೇಪಿಡಿವುದಕ್ಕಾತನಂತೋಡುತಾ ಬಾಹೊ ಬ 230 ಲ್ಲಿಷ್ಠನಾ ಅಟ್ಟಹಾಸೈಸಿಯುಕ್ಕೇಸರಂಗಳ್ ಪ್ರಸಾದೈಸಿ ಕ್ರೂರಾಹಿತಾನಂದಘಗ್ರಾಹಿಯಂತೇ ಸ್ವಭಾ ಸಾಸಿರಂ ಸೂಸಿ ಜಂಘಾಲ ಲೀಲಾ ಸಮುಲ್ಲಂಘನಾ ಗೋಪದಿಂಹಾರಿಯಾ ನಾರಹರ್ಯಕ್ಷನಾ ದೈತ್ಯದಕ್ಷನ್ಪಿಡಿರ್ದಂ ಫಟಾಫಟ್ ತಲಾಘಾತವಂಗೈಲ್ಬಡಿರ್ದಂ ಥಟಾಥಟ್ ಪದಾಘಾತದಿಂ ದಲ್ ಹೊಡೆರ್ದಂ ಗದಾಘಾತದಿಂದಲ್ ಮಹೋರಸ್ಕಿಡಿರ್ದಂ ಸಭಾದ್ವಾರದಲ್ ಹಾಕಿ ಭಾಸ್ವನ್ನಖ ಶ್ರೇಣಿಯಿಂದಲ್ ಫಟಾಫಟ್ ಗುರು240 ತ್ಮಂತಕಾಲಾಹಿನಂ ಸೀಳುವೋ ರೀತಿ ಜಂಭಾರಿದಂಭೋಳಿಯಂತಾಗಲುಂ ಸೀಳುತಿರ್ದಾಮಹಾದೇವನ್ನಾ ಹಗಲ್ ರಾತ್ರಿಯೊಂದಲ್ಲದ್ಹಾಗೇ ದಿವಾಸಂಧಿಯಲ್ ಸೀಳಿದಂ.ಘೋರ ಸಂರಂಭ ದಂಷ್ಟ್ರೇಕ್ಷವ್ಯಾವೃತ್ಕರಾಳಾಕ್ಷನಾಗಿ ಸ್ವಜಿಹ್ಪಾಗ್ರದಿಂದಲ್ ಲಸದ್ವ್ಯಾತ್ತ ವಕ್ತ್ರಾಂತ ಶೋಣಿಯ ಮಾನಾಧರಾದ್ಯಂತವಂ ಲೇಲಿಹಾನೋಗ್ರವಂ ತೋರುತಾರಾಕ್ಷಸ ಶ್ರೇಷ್ಠನಂ ಪಿಡಿದು ವಕ್ಷೋನ್ನತಸ್ಥಾನವಂ ತೋಡಿ ಕಾಸಾರವಂ ಮಾಡುತಾ 250 ತುಂಬಿ ಶುಂಡಾಲ ಸಂಹಾರದಲ್ ಮುಂಚುವೋ ಘೋರ ಪಂಚಾನನೋದಾರ ಲೀಲೆಂಗಳಂ ಬೀರುತಾ ರಾಕ್ಷಸಾಧ್ಯಕ್ಷ ವಕ್ಷಸ್ಸಿನೋಳ್ ಕಿತ್ತುತಾ ಹಾರಗಳ್‍ಮಾಡಿಕೊಂಡೊಪ್ಪಿ ತದ್ರಕ್ತ ಸಿಕ್ತಾನನೋದ್ಯಚ್ಛಟಾ ಕೇಸರಂಗಳ್ ಪ್ರಕಾಶೈಸುತಾ 260 ದೈತ್ಯರಾಜೇಂದ್ರನಾ ಪ್ರಾಣಗಳ್‍ಗೊಂಡನಾಮೇಲೆ ಸುತ್ತಿದ್ದ ತದ್ಭಂಧು ಸಂದೋಹದಲ್ಲಿದ್ದನೇಕಾಸುರೀನೀಕವಂ ಸಾಯುಧೋದ್ರೇಕವಂ ಅಲ್ಲಕಲ್ಲೋಲವಂ ಮಾಡಿ ಚಂಚನ್ನಖಶ್ರೇಣಿಯಿಂ ಸಂಹರಂ ಮಾಡಿದಂ.ಆಗ ತದ್ಭೀಕರಾಕಾರವಂ ಕಾಂಬ ಶಕ್ತ್ಯಾವುದಂ ಕಾಣದೇ ತತ್ಸಟಾ ಕೇಸರೋದ್ಭೂತ ಸಂಘಾತಗಳ್ ಘೋರ ಜೀಮೂತಗಳ್‍ಸರ್ವವಂ ನೋಡುತಾ ಮತ್ರ್ಯಸಿಂಹೋಗ್ರದೃಷ್ಟಿಜ್ವಲಜ್ವಾಲೆಗಳ್ ಸೈಸದೇ ಸೂರ್ಯಚಂ270 ಪಾದ ಸಂಘಟ್ಟದಿಂದಲ್ ಧರಾಚಕ್ರವಲ್ಲಾಡಿತಾಘೋರ ತೇಜಸ್ಸಿಗವಕಾಶಂಗಳಾಕಾಶವೂಬಾಡಿತಾ ಶಾಕಿನೀ ಡಾಕಿನೀ ಮುಖ್ಯ ದು 280 ಷ್ಟಗ್ರಹಾನೀಕವುಂ ಭೀತಿಗೊಂಡೋಡಿತಾಮೇಲೆ ಉದ್ಯತ್ಸಭಾ ಮಧ್ಯೆ ದೈತ್ಯೇಂದ್ರ ಸಿಂಹಾಸನಸ್ಥಾನದಲ್ ನಾರಸಿಂಹಂ ಸಮಾಸೀನನಾಗಿಪ್ಪನಾ ತೇಜ ಓಜ ಪ್ರಭಾಪುಂಜರಂಜನ್ನ ಭಾಸ್ವತ್ಕರಾಳೋಗ್ರ ಜಿಹ್ವ ಸ್ಫುರದ್ದಂಷ್ಟ್ರ ವಕ್ತ್ರನ್ನ ಬಿಭ್ರಲ್ಲಸದ್ಭ್ರೂತನಂ ಆ ಮಹಾಕೋಪ ಸಂರಂಭ ಗಂಭೀರ ನೇತ್ರನ್ನ ಕಣ್ಣೆತ್ತಿ ಕಾಂಬೋದರಲ್‍ಬ್ರಹ್ಮ ರುದ್ರಾದಿಗಳ ಶಕ್ತಿಯುಂ ಸಾಲದೇದೂರದಲ್ ಪಾಶ್ರ್ವ ಭಾಗಸ್ಥರಾಗಿಪ್ಪರಂತೇ.290 ಆಗ ಮೂರ್ಲೋಕ ಸಂತಾಪಿಯಾಗಿಪ್ಪ ದೈತ್ಯನ್ನ ನಾರಾಯಣಂ ನಾರಸಿಂಹಾಕೃತೀಯಾಗಿ ಸಂಹಾರವಂ ಮಾಡಿದಂ ಎಂಬುದಾವಾರ್ತೆ ಕೇಳುತ್ತಲೇ ದೇವನಾರೀಜನಂಗಳ್ ಪ್ರಹರ್ಷಾನನೋತ್ಪುಲ್ಲರುಲ್ಲಾಸದಿಂವಾಸಿತಾಮೋದ ಮಂದಾರ ಕುಂದಾರವಿಂದಾದಿ ಸತ್ಪುಷ್ಟ ಸಂತಾನ ವರ್ಷÀಂಗಳಂವರ್ಷಿಸುತ್ತಿಪ್ಪರಾಕಾಲಾವಾಕಾಶದಲ್‍ನಿಂತು ಕಾಣೂವರಾ ದೇವದೇವೀ ಸಮೂಹಂಗಳಾಯಾವಿಮಾನಂಗಳೆಲ್ಲಾ ಮಹಾ 300 ಸಂಕುಲೀ ಭೂತವಾಗಿಪ್ಪವಾ ದೇವತಾದುಂದುಭಿಧ್ವಾನ ಇಂಬಾಗಿ ತಾ ದೇವಗಂಧರ್ವ ಸಂಗೀತ ನಾಟ್ಯಂಗಳಿಂದಪ್ಸರಾಕಾಮಿನೀ ತಾನ ಗಾನಂಗಳಿಂದಾಗ ಆಕಾಶವುಂ ತುಂಬಿತಾ ಬ್ರಹ್ಮರುದ್ರೇಂದ್ರ ಮುಖ್ಯಾಮರ ಶ್ರೇಣೀಗಳ್ ಪಿತೃಗಳ ಮನ್ವುಗಳ್‍ಸಿದ್ಧ ವಿದ್ಯಾಧರಾನೀಕಗಳ್À ಅಪ್ಸರಾ ಕಾಮಿನೇರಾ ಪ್ರಜಾಪಾಲ ಗಂಧರ್ವರಾಯಕ್ಷ ಕಿಂಪುರುಷರಾ ಚಾರಣಾನೀಕವಾಕಿನ್ನರಸ್ತೋಮ ನಂದಾ ಸುನಂದಾದಿ ತ 310 ತ್ಪಾರ್ಷದಾನೀಕವೆಲ್ಲಾ ಶಿರೋಭಾಗದಲ್‍ಪಾಣಿಗಳ್ ಜೋಡಿಸೀತೆಲ್ಲ ಮುನ್ನಾತಿ ದೂರಸ್ಥರಾಗಿದ್ದು ನಿಂತಾಮೃಗೇಂದ್ರಾಸನಾಸೀನನಾಗಿಪ್ಪ ಅತ್ಯುಗ್ರ ತೇಜಸ್ವಿನಂಮೆಲ್ಲನೇ ಬೇರೆ ಬೇರಾಗಿ ಕೊಂಡಾಡುತಾನಿಂತರಾವೇಳೆಯಲ್ ಬ್ರಹ್ಮ ತಾ ಭಾಷಿಪಂನಿನಗೆ ವಂದೀಸುವೆಂ ತಂದೆ ನೀನೆ ಅನಂತಂ ದುರಂತ್ಯೋರು ಶಕ್ತ್ಯುಳ್ಳವಂ ಲೋಕಪಾವಿತ್ರ್ಯ ಕಮ್ರ್ಯಂ ಮಹಾಶ್ಚರ್ಯ ವೀರ್ಯ ಜಗತ್ಸøಷ್ಟಿ ಸಂರಕ್ಷ ಸಂಹಾರಗಳ್ ಲೀಲೆಯಿಂ320 ದಲ್ ಸದಾ ಮಾಳ್ಪೆಯೋ ಅವ್ಯಯಾತ್ಮನ್ನೆ ನೀ ನೆಂದನು.ಈಶ ತಾ ಬಂದೆಲೋ ತಾತನೇನಿನ್ನಗೀ ಕೋಪ ಬಾಹೋದಕಿಂದಾ ಯುಗಾಂತಾಖ್ಯ ವೇಳ್ಯಲ್ಲವೋ ಕ್ಷುಲ್ಲನೀ ದೈತ್ಯನೀವೇಳೆ ನಿನ್ನಿಂದ ತಾನ್ ಮೃತ್ಯುಪಾಲಾದನಂತಿನ್ನುಮೇಲ್ ಕೋಪ ಸಂಕ್ಷೇಪ ಮಾಡಯ್ಯ ಈದೈತ್ಯ ಪುತ್ರನ್ನ ಪ್ರಹ್ಲಾದನಂ ಸರ್ವದಾನಿನ್ನ ಭಕ್ತನ್ನ ಸಂರಕ್ಷಿಸೋ ಭಕ್ತವಾತ್ಸಲ್ಯದಿಂದೆಂದನು.ಇಂದ್ರ ತಾ ನಿಂತೆಲೋ ಸ್ವಾಮಿಯೇ ಅಣ್ಣತಮ್ಮಂದ್ರ ದೀಟಾಗಿ ನೀನೇ ಸದಾ ನಮ್ಮ ಸಂ330 ರಕ್ಷಿಸೂವೇಯೊ ನಿನ್ನಿಂದಲಾ ಯಜ್ಞ ಭಾಗಂಗಳುಂ ನಮ್ಮಗೇ ಮತ್ತೆ ಉಂಟಾದವಯ್ಯಾ ಹಿರಣ್ಯಾಸುರಂಗಾದುದೀಗೆಮ್ಮ ಸುಸ್ವಾಂತಗಳ್ ನಿನ್ನಗಾವಾಸಯೋಗ್ಯತ್ವ ಪೊಂದಿಪ್ಪುವಂತೆ ವಿಕಾಸ್ಯೆಸಿತೋ ನಿನ್ನ ಶುಶ್ರೂಷೆ ಬೇಕೆಂಬ ಲೋಕಾಳಿಗೇ ಕಾಲಸಂಗ್ರಸ್ತವಂತಿಪ್ಪ ಲೋಕಾಳಿಯಲ್ ಯಾವದೂಲಕ್ಷ್ಯವಿಲ್ಲಂತೆ ಮುಕ್ತ್ಯಾದರುಂ ಹೆಚ್ಚು ನಿಶ್ಬೈಸುವಂತೇ ನೃಹರ್ಯಾತ್ಮನೇ ಮಿಕ್ಕ ಸಂಭೂತಿಯಿಂದಾಗಬೇಕಾದುದೇ ನಿಪ್ಪುದೆಂದಂ.340 ಬೊಮ್ಮ ನೀನೆಮ್ಮ ಶ್ರೇಯಸ್ಸಿಗೆ ಮುನ್ನ ನಿನ್ನ ಸ್ವತೇಜಾಂಶವನ್ನೇ ತಪೋಯೋಗವಂ ನಮ್ಮಗೇಕೊಟ್ಟೆಯೊ ಆ ತಪಸ್ಸಿಂದ ನಿನ್ನಲ್ಲಿಹೋವಿಶ್ವವೆಲ್ಲಾ ಬಹೀರಂಗ ಮಾಡೀದೆಯೋನಮ್ಮದಂಥಾ ತಪಸ್ಸಂ ಹಿರಣ್ಯಾಸುರಶ್ರೇಷ್ಠತಾ ಕದ್ದನಂತಿದ್ದನೇ ಈಗ ನೀನೀ ಜಗದ್ರಕ್ಷಣಕ್ಕಾಗಿಯೇ ಭಕ್ತ ಸಂರಕ್ಷನೇ ನಾರಹರ್ಯಕ್ಷನಾಗಿನ್ನು ರಕ್ಷೋಗಣಾಧ್ಯಕ್ಷ ವಕ್ಷಸ್ಕವಂ ಸೀಳಿ ನೀ 350 ನಮ್ಮಗೆಲ್ಲಾ ತಪೋಯೋಗವಂ ಮತ್ತೆ ತಂದಿತ್ತೆಯಂತೆಂದರು.ಪಿತೃಗಳ್ ನಿಂತೆಲೋಧರ್ಮರೂಪೀಯೆ ಇಂಥಾ ಕ್ರಿಯಾಲಾಪಗಳ್‍ಪುತ್ರರಿಂದಲ್ ತಿಲೋದಂಗಳಿಂದಲ್ ಮಹಾಪುಣ್ಯ ತೀರ್ಥಂಗಳಲ್ ಕ್ಷೇತ್ರ ಪಾತ್ರಂಗಳಲ್‍ನಮ್ಮ ನಮ್ಮಲ್ಲಿ ಇಂತಿತ್ತ ಶ್ರಾದ್ಧಂಗಳಂತನ್ನ ಪ್ರೀತ್ಯರ್ಥವೆಂತಿರ್ದನೈ ನಾಥ ಸಂಪೂರ್ಣ ಸೌಭಾಗ್ಯ ಸಂಸ್ಥಾನಿಯೋ ನೀನು ಭಾಸ್ವನ್ನಖ ಶ್ರೇಣಿಯಿಂದಲ್ ಮಹಾ ದೈತ್ಯವಕ್ಷಸ್ಕವಂ ಸೀಳಿ ಇತ್ತಾವ ಪಾಂತ್ರಾತ್ಮಿಕಾ 360 ಶ್ರಾದ್ಧ ನಮ್ಮಲ್ಲಿ ತಾ ಸೇರಿತೈ ನಾರಹರ್ಯಾತ್ಮನೇ ನಿನ್ನಗೇ ನಾವು ಸಾಷ್ಟಾಂಗ ಪ್ರಣಾಮಗಳ ಮಾಡುವೇವೆಂದರು.ಸಿದ್ದರೆಲ್ಲಾಂಜಲೀಬದ್ಧರಾಗೆದ್ದೆಲೋಅಷ್ಟಸಿದ್ಧಾತ್ಮನೇ ನಮ್ಮಲಿದ್ದಾ ಮಹಾಯೋಗ ಸಿದ್ಧಿಂಗಳೆಲ್ಲಾ ತಪೋಯೋಗಸಾಮರ್ಥ್ಯದಿಂ ಕದ್ದನೇ ಗೆದ್ದೆನೆಂತಿದ್ದ ದೈತ್ಯ ಪ್ರಬುದ್ಧನ್ನ ವಕ್ಷಸ್ಕ ಸಂಭಿನ್ನವಂಮಾಡಿಯಾ ನಮ್ಮಗಾಧಾರವಾಗಿದ್ದ ಸದ್ಯೋಗ ಸಿದ್ಧಿಂಗಳಂ ಮತ್ತೆ ನೀನಿತ್ತೆಯೋ 370 ನಾರಸಿಂಹಾತ್ಮ ನಾವೆಲ್ಲರುಂ ನಿನ್ನಗೇವಂದನಂಗಳ್À ಸಮರ್ಪೀಂಸುವೇವೆಂದರು.ಆಮೇಲೆ ವಿದ್ಯಾಧರಾನೀಕಗಳ್ ನಿಂತೆಲೋಸರ್ವ ವಿದ್ಯಾತ್ಮನೇ ನಮ್ಮಲಿದ್ದಾ ಪೃಥಕ್‍ಧಾರಣಾಯೋಗ ಸಂಪಾದ್ಯಗಳ್ ವಿದ್ಯೆಗಳ್‍ನಷ್ಟಗೈಸಿದ್ದನತ್ಯಂತ ದರ್ಪಿಷ್ಠನೀಅಜ್ಞ ದೈತ್ಯೇಂದ್ರನಾ ಯಜ್ಞದೋಳ್‍ಬದ್ಧ ಪಶ್ವಂತೆ ತಾನಿಂದು ನಿನ್ನಿಂದಲಾ ಮೃತ್ಯುಪಾಲಾದನೇ ನಮ್ಮ ಸದ್ವಿದ್ಯೆಗಳ ಮತ್ತೆ ನಮ್ಮಲ್ಲೆ ಬಂದಿಪ್ಪುದಯ್ಯಾ ನೃಹರ್ಯಾತ್ಮ ತು 380 ನಾಗರಾವೇಳೆಲೋsನಂತನೇ ನಮ್ಮಲಿದ್ದಾ ಮಹಾರತ್ನಗಳ್‍ಮಾನಿನೀ ರತ್ನಗಳ್ ತಾ ಬಲಾತ್ಕಾರದಿಂಗೊಂಡನೀ ಪಾಪಿ ದೈತ್ಯನ್ನ ವಕ್ಷಸ್ಕವಂಸೇದಿ ಈ ರತ್ನಗಳ್ ಮತ್ತೆ ನೀ ನಮ್ಮಗೇಸೇರುವಂತೇ ದಯಾಮಾಡಿದೀಯೈ ನಮಸ್ತೇ ನಮೋ ಎಂದರು.ಮನ್ವುಗಳ್‍ನಿಂತೆಲೋಧರ್ಮ ಸಂರಕ್ಷನೇ ನಾವು ನಿನ್ನಾಜ್ಞೆಯಿಂದೀ ಪ್ರಜಾನೀಕಕೇರ್ಪಾಟು ಮಾಡಿದ್ದ ಮರ್ಯಾದೆಗಳ್ ಸರ್ವವೀ ದೈತ್ಯ ತಾ ಕೆಡಿಸಿ ಕ390 ಲ್ಲೋಲವಂ ಮಾಡಿ ನಿನ್ನಿಂದಲೀ ಈಗ ಸಂಹಾರಿಸಲ್ಪಟ್ಟನೇ ಇನ್ನು ಮೇಲ್ ನಾವು ನಿಮ್ಮುಟ್ಟಕ್ತಿಗಳ್ ನಡೆಸುವೇವೆಮ್ಮಗಾಜ್ಞಾಪಿಸೋನಾವು ತ್ವದ್ದಾಸ್ಯವಂ ಬಯಸಿದೇವೆಂದರು.ಆ ಪ್ರಜೇಶ್ಯಾಳಿಗಳ್À ನಿಂತು ಕೇಳೋ ``ಪ್ರಜೇಶಾ ವಯಂ ತೇ ಪರೇಶಾಭಿಸೃಷ್ಟಾ ನ ಯೇನ ಪ್ರಜಾ ವೈ ಸೃಜಾಮೋ ನಿಷಿದ್ಧಾಃ ಸ ಯೇಷ ತ್ವಯಾ ಭಿನ್ನವÀಕ್ಷಾನು ಶೇತೇ ಜಗನ್ಮಂಗಲಂ ಸತ್ವಮೂರ್ತೇವತಾರಃ’’ ಪ್ರಭೋಎಂದರು. ಆಗ ಗಂಧರ್ವರೆಲ್ಲಾ ಎಲೋ 400 ಸ್ವಾಮಿಯೇ ನಾವು ನಿಮ್ಮ ಪ್ರಸನ್ನಾವತಾರೈಕ ಲೀಲಾ ಕಥಾಸೂಕ್ತಿಗಳ್ ನಾಟ್ಯ ಶೃಂಗಾರ ಚೇಷ್ಟಾ ಕಳಾದರ್ಶನಾದ್ಯಭಿನಯಾವ್ಯಕ್ತಿಗಳ್ ತಾನ ಗಾನಾನುಸಂಧಾನ ಸಮ್ಮೋಹಿನೀ ಶಕ್ತಿಗಳ್ ಕೂಡಿ ಆಶ್ರಾಂತವುಂನಿನ್ನ ಕೊಂಡಾಡುತಾ ಗಾಯಕಶ್ರೇಷ್ಠರಂತಿಪ್ಪೆವೇ ತನ್ನ ಸದ್ವೀರ್ಯ ತೇಜೋಬಲೋಜಸ್ಕದಿಂದಲ್ ಪ್ರಭೋ ನಮ್ಮ ಸಾಮಥ್ರ್ಯಗಳ್‍ತನ್ನಗಾಧೀನ ಮಾಡಿಟ್ಟುಕೊಂಡಿದ್ದನೀದೈತ್ಯನೀ ವೇಳೆ ನಿನ್ನಿಂದ ಪಂಚತ್ವವಂ 410 ಆ ಯಕ್ಷರೆಲ್ಲಾ ಎಲೋ- 420 ಧ್ಯಕ್ಷನೇ ತ್ವನ್ಮನೋಭಿಜ್ಞ ಕರ್ಮಂಗಳಿಂದಲ್ ಸದಾ ನಿನ್ನಗೇ ಭೃತ್ಯರಾಗಿಪ್ಪ ನಾವೆಲ್ಲರುಂ ದೈತ್ಯಗೇ ಪಾಲಕೀ ಹೊರ್ವರಂತಾದೆವೇ ನಮ್ಮ ಸಂತಾಪಗಳ್ ಬಲ್ಲ ನಿನ್ನಿಂದಲೀ ದೈತ್ಯನೀ ವೇಳೆ ಪಂಚತ್ವವಂಹೊಂದಿದಂ ನಾವು ಸಂತೋಷವಂ ಕಂಡೆವಯ್ಯಾ ನೃಪಂಚಾಸ್ಯನೇ ಪಂಚವಿಂಶಾಖ್ಯ ನೀ ನೆಂದರು. ಆಮೇಲೆ ಕಿಂಪೂರುಷಾನೀಕವುಂಬಂದೆಲೋ ಪುರುಷನೇ ನಾವು ಕಿಂಪೂರುಷರ್‍ನೀಂ ಮಹಾಪೂರುಷಂ ಈಶ್ವರಂ ನಿನ್ನ ಕೈ 430 ನಿತ್ಯ ಕೊಂಡಾಡುತಾಭೂರಿಯೂಟಂಗಳಂ ಉಣ್ಣುತಾಲಿದ್ದೆವೇತಾನಿವೆಲ್ಲಾ ಪರಿಗ್ರಾಹಿಸೀ ದೈತ್ಯ ನಿನ್ನಿಂದ ಪೆಟ್ಟಾಂತು ತಾ ಪೋದನೇ ದೈವದಿಂ440 ಕಿನ್ನರ ಪ್ರಾಣಿಗಳ್‍ಪೂರ್ವದಲ್ ನಿನ್ನ ದಾಸಾನುದಾಸರ್ಗಳಾಗಿಪ್ಪೆವೀ ದೈತ್ಯ ನಮ್ಮಿಂದ ತಾ ಬಿಟ್ಟಿಕಾರ್ಯಂಗಳೆಲ್ಲಾ ಸದಾ ಮಾಡಿಸೂವಂ ವiಹಾದು:ಖಗೋಣಿಸುವಂ ಇಂಥ ಪಾಪಿಷ್ಠ ದೈತ್ಯನ್ನ ಸಂಹಾರ ವಂ ಮಾಡಿದೀ ಇನ್ನು ನೀನಮ್ಮಗೆಲ್ಲಾ ಸಮುಲ್ಲಾಸಗಳ ಶ್ರೇಯಗಳಕೊಟ್ಟು ಸಂರಕ್ಷಿಸೋ ನಾರಹರ್ಯಕ್ಷನೇ ಎಂದರು. 450 ಅಚ್ಯುತದ್ವಾರಪಾಲಾಳುಗಳ್‍ನಿಂತೆಲೋ ಭೂಮನೇ ಕಂಡೆವೋ ಇಂದಿಗೇನಾರಹರ್ಯದ್ಭುತಾಕಾರವಂ ಲೋಕಕೆಲ್ಲಾ ಸುಖಾನಂದವಂ ನಮ್ಮಗಾಧಾರ ನೀನಲ್ಲದಿನ್ನಿಲ್ಲವೋ ಈಗ ವೈಕುಂಠದಲ್‍ನಿನ್ನ ದ್ವಾರಸ್ಥನಾಗಿಪ್ಪನಾ ವಿಪ್ರರಿಂದಲ್ ಮಹಾದೈತ್ಯಜನ್ಮಕ್ಕೆ ತಾ ಬಂದನೇ ಬಂದನಂತಿಂದಿಗೇ ವೈರಮಾರ್ಗಕ್ಕೆ ನೀನಿಂದು ಗೈದಂಥ ಈ ದೈತ್ಯಸಂಹಾರ ವ್ಯಾಪಾರವೆಮ್ಮಲ್ ಮಹಾನುಗ್ರಹಕ್ಕಾಗಿ ನೀ ಬಂದೆ ನಾವ್ 460 ಸ್ವಾಂತ ಸಂತೋಷ ಮಾಡೆಂದು ಬಿನ್ನಾಹಗಳ ಮಾಳ್ಪರು.ಆಮೇಲೆ ಆ ಬಾಲೆ ಸಾಕ್ಷಾಜ್ಜಗನ್ಮೋಹಿನೀ ಲೀಲೆಗಳ್ ಮಿಂಚುತಾ 470 ಪೂಂಚುತಾ ಬಂದು ಸಿಂಹಾಸನಸ್ಥಾನದಲ್‍ಉಗ್ರನಂತಿಪ್ಪನೃಸಿಂಹ ಮೂತ್ರ್ಯುಗ್ರವಂಕಂಡತಿವ್ಯಗ್ರಳಂತಾಗಿ ಆ ತಾಯಿ ಹಿಂದಕ್ಕೆ ತಾ ಬಂದಳಮ್ಮಮ್ಮ ಏಂ ಗುಮ್ಮನಂತಪ್ಪÀನೇ ಸ್ವಾಮಿ ಮುನ್ನಿಂತು ಆಶ್ಚರ್ಯವಂಈಸು ವಿಕ್ರಮ್ಯವಂ ಎಂದಿಗಾನೆಲ್ಲಿ ಕಂಡಿಲ್ಲವಲ್ಲಾ ಕಿವಿಲ್ಯಾದರುಂ ಕೇಳಲೇ ಇಲ್ಲವಲ್ಲಾ ಇದೇನೋ ವಿಚಿತ್ರಾಕÀೃತೀಯಂತೆ ತೋರೂವನೆಂದಂಜಿಕೇಗೊಂಡ ರೀತಿಂದ ತಾ ಹೆಜ್ಜೆ ಕಾಲ್ಗೆಜ್ಜೆಗಳ್ ಸಪ್ಪುಳಂ480 ಮಾಡದೇ ಮೆಲ್ಲನೇ ಪಾಶ್ರ್ವದಲ್ ನಿಂತಳುಆಮೇಲೆ ಪ್ರಹ್ಲಾದನಂ ಕಂಡು ಸಂಭಾಷಿಪಂಬ್ರಹ್ಮ ಬಾರೈ ಎಲೋ ವತ್ಸ ನೀನೀ ನೃಸಿಂಹಾತ್ಮನಲ್ ಮೆಲ್ಲನೇ ಸೇರಿ ನಿಮ್ಮಪ್ಪಗಾ ಗಿಂದು ನಮ್ಮಪ್ಪನಲ್ಲಿಪ್ಪ ತತ್ಕೋಪ ಸಂಕ್ಷೇಪ ಗೈಸೆನ್ನೆ ತದ್ವಾಣಿಗಳ ಕೇಳುತಾಮೆಲ್ಲನೇ ಪಿಲ್ಲೆ ಪ್ರಹ್ಲಾದನಾಹ್ಲಾದದಲ್‍ವೈಷ್ಣವಶ್ರೇಷ್ಠ ತಾನಾಗ ಬಂದಂ ಮಹಾಭಕ್ತಿಯಿಂದಲ್ ಮಹೀಮಂಡಲೀ ಮೇಲೆ ಸಾಷ್ಟಾಂಗ ಬಿದ್ದಂ ನಮೋ ಎಂದು ದಂಡಪ್ರಣಾ 490 ಮಂಗಳಂ ಮಾಡುವೋ ವೇಳೆ ತನ್ನಂಘ್ರಿಕಂಜಾತದಲ್ ಬಿದ್ದ ಬಾಲನ್ನ ಬಾಳಾ ಸುಶೀಲನ್ನ ಕಂದನ್ನ ದೃಷ್ಟಿಂದ ತಾ ಕಾಣುತಾಚಕ್ರ ಶಂಖಾಂಕಿತಾ ಶ್ರೀಲಸದ್ಬಾಹುಗಳ್‍ಚಾಚಿ ಭಕ್ತನ್ನ ತಾನೆತ್ತಿ ತನ್ಮಸ್ತಕಸ್ಥಾನದಲ್ ಪೋಕಲಾಗಿನ್ನು ಸಂಸ್ರಸ್ತ ಚೇತೋಭಯಧ್ವಸ್ಥವಂ ಸ್ವಸ್ತಿದಾನ ಕ್ರಿಯಾಭ್ಯಸ್ತವಂ ಶ್ರೀ ಸತೀ ಸ್ತಂಬಕವಿನ್ಯಸ್ತವಂಹಸ್ತವನ್ನಿತ್ತನವ್ಯಾಹತ ಸ್ಪರ್ಶದಿಂದಲ್ ವಿಧೂತಾ ಶುಭವ್ರಾತನಾಗೀಯಭಿ 500 ವ್ಯಕ್ತ ಲಕ್ಷ್ಮೀವಿಲಾಸಾತ್ಮ ಸಂದರ್ಶನೈಶ್ವರ್ಯವಂ ಕೂಡಿ ತತ್ಪಾದ ಪದ್ಮಂಗಳಂಚಿತ್ತದಿಂದಿತ್ತನಾನಂದದಿಂದಲ್ ಪ್ರಹೃಷ್ಯತ್ತನು ಕ್ಲಿನ್ನ ಚಿತ್ತಾಶ್ರುನೇತ್ರಾಬ್ಜನಾಗಿದ್ದು ಪ್ರಹ್ಲಾದನುಂ ನಾರಸಿಂಹಾತ್ಮನಲ್‍ನಿಂತು ಸಂಸ್ತೋತ್ರಗಾರಂಭಿಪಂ. ಶ್ರೀರಮಾದೇವಿ ತಾನಾಗ ಸಮ್ಮೋಹಿನೀ ಸಂಪುಗಳ್‍ಕೂಡಿ ಬಂದಾ ನೃಸಿಂಹಾಂಕದಲ್ ನಿಂತಳಾಬ್ರಹ್ಮನಾವೇಳೆಯಲ್ ನಾರಸಿಂಹಾತ್ಮನಲ್‍ಸೇರಿ ಸುಕ್ಷೀರ ನೀರಾಭಿಷೇಕಂಗಳಂ 510 ಚೀನಿ ಚೀನಾಂಬರಂಗಳ್ ಮಹಾನಘ್ರ್ಯ ರತ್ನಾವಳೀ ಭೂಷಣಂಗಳ್ ಲಸನ್ಮೌಕ್ತಿಕಾಹೀರ ಹಾರಂಗಳಂ ಗಂಧ ಕಸ್ತೂರಿಕಾಲೇಪಗಳ್ ಶ್ರೀ ತುಳಸ್ಯಾಪ್ತ ಶಾಮಂತಿಕಾ
--------------
ಶ್ರೀಪಾದರಾಜರು
ಸಾಧನವು ಮತ್ತೇನಾಗಬೇಕು ನಿನಗೇ ಪ ಮಾಧವನ ನಾಮವು ಮನದೊಳಿದ್ದರೆ ಸಾಲದೇ ಅ.ಪ. ಗೋಕೋಟಿ ದಾನವು ಗೋವಿಂದನ ಸ್ಮರಣೆಯ ತಾಕಲಾರದಿದಕೆ ಸಂದೇಹವೇ ಇಲ್ಲ ಸಾಕಲ್ಯದಿ ಮಾಳ್ಪ ಸಕಲ ದೇವತಾರ್ಚನೆಯು ಪಾದ ಭಜನೆಗೆಣೆಯು ಅಲ್ಲ 1 ಸ್ನಾನ ಸಂಧ್ಯಾವಂದನ ಜಪತಪಾದಿಗಳು ದಾನವೇ ಮೊದಲಾದ ನೇಮ ನಿಷ್ಟೆಗಳು ಆನುಪೂರ್ವಕ ಮಾಳ್ಪ ಸಕಲ ಕರ್ಮಗಳೆಲ್ಲ ಶ್ರೀನಿವಾಸನ ನಾಮಸ್ಮರಣೆಗೆ ಎಣೆಯು ಅಲ್ಲ 2 ರಾಸಿ ವಿದ್ಯ ವೇದಾಧ್ಯಯನ ಪಾಠಗಳು ಬೇಸರಿಲ್ಲದೆ ಪಠಿಪ ಮಂತ್ರ ತಂತ್ರಗಳೆಲ್ಲ ಈ ಸಮಸ್ತ ಭುವನಗಳೊಡೆಯನಾದ ಶ್ರೀ ರಂ ಗೇಶವಿಠಲನ ನಾಮದಲ್ಲಡಗಿರುವುದಲ್ಲ 3
--------------
ರಂಗೇಶವಿಠಲದಾಸರು
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ನೆಚ್ಚಬೆÉೀಡ ಭಾಗ್ಯವನು ಹುಟ್ಟುಗೊಂಡ ಮನುಜಾವೆಚ್ಚವಾಗಿ ಹೋಗುವುದು ಏಸೊಂದು ಬಗೆಯಲಿ ಪ.ಮುತ್ತು - ಮಾಣಿಕ - ನವರತ್ನದ ಗದ್ದುಗೆಯುಎತ್ತ ನೋಡಲು ಸಿರಿಕೋ ಎನುತಲಿಸತ್ಯ ಹರಿಶ್ಚಂದ್ರ ಮತ್ತೆ ಸುಡುಗಾಡಿನಲ್ಲಿಎತ್ತುವ ಹಣೆಯಕ್ಕಿ ಹಾಗದ ಕಾಸ 1ದೇವತೆಗಳ ಕೈಯ ಸೇವೆಯ ಕೊಳುತಿರ್ದರಾವಣನ ಬದುಕು ಮತ್ತೇನಾಯಿತು?ಜೀವದ ಪರಿಯರಿತು ನಾವು ದೊರೆಯೆಂಬುವುದೆಸಾವಿನ ಮನೆಹೊಕ್ಕು ಸಾಹಸ ಪಡಲೇಕೆ 2ಹದಿನೆಂಟುಕೋಟಿ ಧನ ಉದಯಕೆ ಬರುತಿರಲುಒದಗಿತೆ ಆ ರಾಶಿ ದಿನ ಕರ್ಣಗೆ ?ತುದಿ ಮಧ್ಯಾಹ್ನಕ್ಕೆ ದರಿದ್ರನೆನಿಸುವಇದರಿಂದ ಕಡೆಗಂಡರಾರು ಜಗದೊಳಗೆ ? 3ಬೆಳ್ಳಿಯ ಗಿಣಿಲು ಬಂಗಾರದಹರಿವಾಣಕುಳಿತಲ್ಲಿ ಕನಕದ ರಾಶಿಗಳುಗಳಿಗೆಗೆ ಈ ಭಾಗ್ಯ ಕಾಳಬೆಳುದಿಂಗಳುಉಳಿದವು ನಾ ಕಾಣೆ ಚಿರಲಕ್ಷ್ಮಿಯೆನಲು 4ಇಂತು ಈ ಪರಿಯಲನಂತರು ಹೋದರುಎಂತು ಪೇಳಲಿಅವರ ಪೆಸರುಗಳ ?ಚಿಂತಾಯತ ಶ್ರೀ ಪುರಂದರವಿಠಲನಸಂತತ ಪಾದಕಮಲವ ಭಜಿಸೊ ಮನುಜಾ 5
--------------
ಪುರಂದರದಾಸರು
ಭೇದ ಮುಕ್ತಾವಲಿ (ಕೋಲು ಹಾಡು)ಕೋಲು ಮುಕ್ತಿಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆನ್ನ ಕೋಲೆ ಪ.ಶ್ರೀದೇವಹೂತಿಜಾಜನಂಘ್ರಿಗೆ ನಮಿಸುವೆಶ್ರೀದೇವಿ ಪದಕೆ ಎರಗುವೆ ಕೋಲೆಶ್ರೀದೇವಿ ಪದಕೆ ಎರಗುವೆ ಮುಖ್ಯಗುರುವಾದಜವಾಯುರೊಂದಿಪೆ ಕೋಲೆ 1ವಾಣಿ ಭಾರತಿದೇವಿ ಗರುಡ ಮಹೇಶಾನಂತಜ್ಞಾನದಾತರಿಗೆ ನಮೋ ಎಂಬೆ ಕೋಲೆಜ್ಞಾನದಾತರಿಗೆ ನಮೋ ಎಂಬೆ ಶ್ರೀವಿಷ್ಣುಮಾನುನೆರಾರ್ವರ ಶರಣೆಂಬೆ ಕೋಲೆ 2ಗರುಡನ ರಂಭೆವಾರುಣಿಗಿರಿಜೇರಿಗೊಮ್ಮೆಕರಗಳ ಮುಗಿದು ಸ್ಮರಿಸುವೆ ಕೋಲೆಕರಗಳ ಮುಗಿದು ಸ್ಮರಿಸುವೆ ಇಂದ್ರ ಕಾಮವರಪ್ರಾಣಾನಿರುದ್ಧರ ಬಲಗೊಂಬೆÉ ಕೋಲೆ3ಇಂದ್ರಾಣಿರತಿಮುಖ್ಯರಾದ ತಾರತಮ್ಯದವೃಂದಾರಕಋಷಿನೃಪರನು ಕೋಲೆವೃಂದಾರಕಋಷಿನೃಪರಮನುಷ್ಯೋತ್ತಮರಂ ಧ್ಯಾನಿಸುವೆ ಮನದಲಿ ಕೋಲೆ 4ಏನೂ ಇಲ್ಲೆಂಬನ ಹಾನಿಗೆ ಕಡೆಯಿಲ್ಲತಾನೀಶನೆಂದು ನುಡಿದವ ಕೋಲೆತಾನೀಶನೆಂದು ನುಡಿದವ ತಮಸನುತಾನುಂಬ ತನ್ನ ಬಳಗದಿ ಕೋಲೆ 5ಹರಿಯ ಗುಣಕೆ ಎಣಿಕೆನಿಟ್ಟವ ಕೆಟ್ಟವಹರಿನಿರ್ಗುಣೆಂಬ ಡಂಬರ ಕೋಲೆಹರಿನಿರ್ಗುಣೆಂಬ ಡಂಬರ ಸಂಗದಿಧರೆಯ ಸಜ್ಜನರು ಮತಿಗೆಡಲಿ ಕೋಲೆ 6ಕ್ಷೀರಾಂಬುಧಿಮನೆಯ ವಾಸುದೇವನ ಆಜ್ಞಾಧಾರಿಯೆನಿಪ ವಾಯುದೇವನು ಕೋಲೆ ಆಜ್ಞಾಧಾರಿಯೆನಿಪ ವಾಯುದೇವನು ಮೊದಲಿಗೆವೀರ ಹನುಮ ಭೀಮನಾದನು ಕೋಲೆ 7ಮೂರನೆ ಅವತಾರಿ ಮಧ್ವರಾಯನು ಮುಕ್ತಿದಾರಿಯ ತನ್ನವರಿಗೆಲ್ಲ ಕೋಲೆ ಮುಕ್ತಿದಾರಿಯ ತನ್ನವರಿಗೆಲ್ಲ ತೋರಿದುದಾರಿಯ ಪದವ ಹೊಂದಿದೆ ಕೋಲೆ 8ಗುರುಮಧ್ವ ಎನ್ನ ಮಾತೆ ಗುರುಮಧ್ವನೆನ್ನತಾತಗುರುಮಧ್ವನಾಥ ಸಖಭ್ರಾತ ಕೋಲೆಗುರುಮಧ್ವನಾಥ ಸಖಭ್ರಾತನೆಂದವರಿಗೊಲಿವನು ಗತಿಯ ಕೊಡುವನು ಕೋಲೆ 9ಸುಖತೀರ್ಥರಾಯನ ಹಿತವಾಕ್ಯಕೆಣೆಯಿಲ್ಲಶುಕತಾತ ಸಮನ ದೈವಿಲ್ಲ ಕೋಲೆಶುಕತಾತ ಸಮನ ದೈವಿಲ್ಲವೆಂದವರಭಕುತಿಯ ಬೇಡಿ ಬಯಸಿದೆ ಕೋಲೆ 10ಭಕುತ್ಯೆಂಬ ಮುಯ್ಯವ ಹರಿಪಾದಕರ್ಪಿಸಿದಅಕಳಂಕ ಮಧ್ವ ಮುನಿರಾಯ ಕೋಲೆಅಕಳಂಕ ಮಧ್ವಮುನಿರಾಯನಂಘ್ರಿಗೆಸಕಳ ಭಾರವ ಒಪ್ಪಿಸಿದೆನು ಕೋಲೆ 11ವಿಶಿಷ್ಠ ಸ್ವರೂಪಾನಂದರ್ಭಾವ ಮೋಕ್ಷ ಸುವಾಸಿನೇರೆಲ್ಲರೊಂದಾಗಿ ಕೋಲೆ ಸುವಾಸಿನೇರೆಲ್ಲರೊಂದಾಗಿ ಹೋಗುವಹೇಸಿ ನಾರೇರ ಗೆಲ್ಲುವ ಕೋಲೆ 12ನಮ್ಮ ಮುತ್ತಯ್ಯನಾದ ಮರುತರಾಯನ ಕೀರ್ತಿನಿರ್ಮಲ ಬುಧರಿಗಮೃತವು ಕೋಲೆನಿರ್ಮಲ ಬುಧರಿಗಮೃತವು ಧರೆಯೊಳುಹಮ್ಮಿನ ಖಳರಿಗೆದೆಗಿಚ್ಚು ಕೋಲೆ 13ಮುತ್ತಯ್ನಂಶದ ಒಳಗೊಬ್ಬ ಜನಿಸಿದಹೆತ್ತಯ್ನಮ್ಮ ಜಯರಾಯ ಕೋಲೆಹೆತ್ತಯ್ನಮ್ಮ ಜಯರಾಯ ತನ್ನ ಬಂಧುಮೊತ್ತದಿ ರಾಜ್ಯವಾಳಿದ ಕೋಲೆ 14ಜಯರಾಯ ಸಂತತಿಯ ಮಕ್ಕಳು ನಾವೀಗಜಯನವಭೇರಿ ಹೊಯಿಸುತ ಕೋಲೆಜಯನವಭೇರಿ ಹೊಯಿಸುತ ರವದ ಜಾಗಟೆಯ ಬಿರುದಲಿ ಬರುತೇವೆ ಕೋಲೆ 15ಬಯಲು ಮಾತಿನವ ಕಡೆಗಾಗಿ ತತ್ವವಿನಯ ವಾಕ್ಯ ನಿಮಗೆ ಸೊಗಸಲ್ಲ ಕೋಲೆ ವಿನಯವಾಕ್ಯ ನಿಮಗೆ ಸೊಗಸಲ್ಲ ಕೇಳಿದರೆಭಯಬಿಟ್ಟುಕೇಳಿಕವಿಯರು ಕೋಲೆ16ಲೌಕಿಕ ಮಾತಿನಂತಲ್ಲ ಮುಯ್ಯದ ಹಾಡುವೈಕುಂಠಪತಿಯ ಅರಮನೆಯ ಕೋಲೆವೈಕುಂಠಪತಿಯ ಅರಮನೆಯಾಸ್ಥಾನದಏಕಾಂತ ನಾರೇರೊಪ್ಪಿದ್ದು ಕೋಲೆ 17ಹಾದಿ ಬೀದಿಯ ಜನರ ಮೆಚ್ಚಿನ ಮುಯ್ಯಲ್ಲಮಾಧವನ ಶ್ವೇತದ್ವೀಪದ ಕೋಲೆಮಾಧವನ ಶ್ವೇತದ್ವೀಪದ ಮಂದಿರದಿಶ್ರೀದೇವಿಯಮ್ಮ ಕೇಳ್ವಳು ಕೋಲೆ 18ಭ್ರಾಂತಜನರಿಗೆ ವಿಶ್ರಾಂತಿದೋರದು ಮುಯ್ಯಾನಂತಾಸನದ ಅನಂತನ ಕೋಲೆ ಅನಂತಾಸನದ ಅನಂತನ ಮಡದಿ ಶ್ರೀಕಾಂತೆ ನಮ್ಮವ್ವ ಕೇಳ್ವಳು ಕೋಲೆ 19ಹಾಡುತ ಬರುತೇವೆ ಹರಸುತ ಬರುತೇವೆರೂಢಿಯ ಸಾಧುಜನರನು ಕೋಲೆರೂಢಿಯ ಸಾಧುಜನರ ಗುಣಂಗಳ ಕೊಂಡಾಡುತ ನಾವು ಬರುತೇವೆ ಕೋಲೆ 20ದರ್ಶನರಾಯರು ಮೂವತ್ತೇಳು ಮಂದಿಅರಸರು ನಮ್ಮ ಹಿರಿಯರು ಕೋಲೆಅರಸರು ನಮ್ಮ ಹಿರಿಯರ ಮಹಿಮೆ ಉಚ್ಚರಿಸುತ ನಾವು ಬರುತೇವೆ ಕೋಲೆ 21ನಮ್ಮ ತವರಿಗೆ ಕೀರ್ತಿತಂದ ಕನ್ಯೇರು ನಾವುನಮ್ಮ ನೆಳಲಿಗಂಜಿ ನಡೆದೇವು ಕೋಲೆನಮ್ಮ ನೆಳಲಿಗಂಜಿ ನಡೆದೇವು ದುರುಳೇರಉನ್ಮತ್ತನಮಗೆ ಎಣಿಕಿಲ್ಲ ಕೋಲೆ22ಜ್ಞಾನದೀವಟಿಗೆ ಬೆಳಗಲೆ ಬರುತೇವೆಜ್ಞಾನ ಕತ್ತಲೆಯ ಬೆದರಿಸಿ ಕೋಲೆ ಅಜ್ಞಾನ ಕತ್ತಲೆಯ ಬೆದರಿಸಿ ಬರುವಾಗಹೀನ ಬುಧ್ಯರು ಮೋರೆ ತೆಗೆದಾರು ಕೋಲೆ 23ನಮ್ಮಯ್ಯನಾಸ್ಥಾನ ಬಣ್ಣಿಸಲಳವಲ್ಲನಿರ್ಮಳಾತ್ಮಕರು ಸಚಿವರು ಕೋಲೆನಿರ್ಮಳಾತ್ಮಕರು ಸಚಿವರು ಪರಿವಾರಧರ್ಮಶೀಲರು ವಿರತರು ಕೋಲೆ 24ಎತ್ತ ನೋಡಲಿ ನವಭಕ್ತಿರತ್ನದ ಬೆಳಗುಚಿತ್ರ ಮಂಟಪಕೆ ಎಣಿಕಿಲ್ಲ ಕೋಲೆಚಿತ್ರ ಮಂಟಪಕೆ ಎಣಿಕಿಲ್ಲ ಶಂಖಚಕ್ರಒತ್ತಿಡಿದವು ಭಿತ್ತಿಲಿ ಕೋಲೆ 25ಬ್ರಹ್ಮಸೂತ್ರದ ವಜ್ರಕಂಬದಿ ಕುಳಿತಿಹಬ್ರಹ್ಮಜÕಪರಮ ಹಂಸವು ಕೋಲೆಬ್ರಹ್ಮಜÕ ಪರಮಹಂಸವು ಪುಣ್ಯಶ್ಲೋಕಧರ್ಮಜÕರಾಯ ಗಿಳಿವಿಂಡು ಕೋಲೆ 26ಮ್ಯಾಗೆ ಮ್ಯಾಗೊಪ್ಪುವ ಸದ್ಗ್ರಂಥದುಪ್ಪರಿಗೇಲಿಕೂಗುವ ಸಾಮಕೋಗಿಲೆ ಕೋಲೆಕೂಗುವ ಸಾಮಕೋಗಿಲೆ ನವಿಲ್ಗಳುನಾಗಪಾಲಕಗೆ ಅತಿಪ್ರೀತಿ ಕೋಲೆ 27ಕಡುಭಕ್ತಿಪತಾಕೆ ಹರಿನಿಷ್ಠೆ ಕಳಸವುಕೊಡುವಅಭಯಛತ್ರ ಸಾಲ್ಗಳು ಕೋಲೆಕೊಡುವಅಭಯಛತ್ರ ಸಾಲ್ಗಳು ಶ್ರೀ ತುಲಸಿನಡುವೆ ಪ್ರಣತ ತೋರಣಗಳು ಕೋಲೆ 28ತಪವೆಂಬ ತಪಿತದರ ಮೈಸಿರಿಯನೃಪಜಯರಾಯನೆಸೆದನು ಕೋಲೆನೃಪಜಯರಾಯನೆಸೆದಾ ಸಿಂಹಾಸನದಿಶಶಿತೇಜದಂತೆ ಹೊಳೆದನು ಕೋಲೆ29ಆನೆಗಳೆಣಿಕಿಲ್ಲ ಕುದುರೆಯ ಗಣನ್ಯಿಲ್ಲಕಾಲಾಳು ರಥಕೆ ಮಿತಿಯಿಲ್ಲ ಕೋಲೆಕಾಲಾಳು ರಥಕೆ ಮಿತಿಯಿಲ್ಲ ಅನ್ಯೋಕ್ತಿಜಾಣೆ ದಾಸೇರಿಗೆ ಕಡೆಯಿಲ್ಲ ಕೋಲೆ 30ಕುವಿದ್ಯಾರಣ್ಯವ ಸವರಿ ಬೇಟ್ಯಾಡಿದಕೋವಿದನಮ್ಮ ಹಡೆದಪ್ಪ ಕೋಲೆಕೋವಿದನಮ್ಮ ಹಡೆದಪ್ಪ ರಚಿಸಿದದೇವವನಗಳ ವರ್ಣಿಪೆ ಕೋಲೆ 31ತತ್ವಪ್ರಕಾಶದ್ದಾಳಿಂಬೆ ಸುಧಾರಸಬಿತ್ತಿದ ಕಬ್ಬಮೋಘ ಮಾವು ಕೋಲೆಬಿತ್ತಿದ ಕಬ್ಬಮೋಘ ಮಾವು ಪದ್ಯಮಾಲೆಉತ್ತತ್ತಿ ತೆಂಗು ಹಲಸನ್ನು ಕೋಲೆ 32ಹತ್ತು ಪ್ರಕರಣ ದಾಟಿತೆಂಬೊ ದ್ರಾಕ್ಷದಸುತ್ತಿದ ಬಳ್ಳಿಮಂಟಪ ಕೋಲೆಸುತ್ತಿದ ಬಳ್ಳಿಮಂಟಪದಿ ಶುದ್ಧಮತ್ಯೌನ ಕೂಡಪ್ಪ ನಲಿದನು ಕೋಲೆ 33ದೇಶ ದೇಶದೊಳಿದ್ದದುರ್ವಾದಿಪೋಕರಘಾಸಿಸಿ ಜಯಪತ್ರ ದ್ರವ್ಯವ ಕೋಲೆಘಾಸಿಸಿ ಜಯಪತ್ರ ದ್ರವ್ಯವ ತಂದು ಮಧ್ವೇಶಗರ್ಪಿಸಿದ ಮುದದಿಂದ ಕೋಲೆ 34ಬಂಧು ಸುದರ್ಶನರಾಯರ ಒಡಗೂಡಿಮಂದಿರದೊಳಗಾನಂದಿಪ ಕೋಲೆಮಂದಿರದೊಳಗಾನಂದಿಪ ಶ್ರುತವೇಷತಂದೆಯನೇನ ಹೊಗಳುವೆ ಕೋಲೆ 35ಇಪ್ಪತ್ತೈದು ತತ್ವ ನಾಣ್ಯದಿ ರಾಮನಾಮಸುಪ್ಪಾಣಿಮುದ್ರೆ ನಡೆಸುವ ಕೋಲೆಸುಪ್ಪಾಣಿಮುದ್ರೆ ನಡೆಸುವ ತನ್ನವರಿಗೆತಪ್ತ ಮುದ್ರೆ ಕುರುಹಿಟ್ಟನು ಕೋಲೆ 36ಭೇದಿಸಿ ನೋಡಿರೊ ಭೇದವ ತಿಳಿಯಿರೊಮಾಧವಜೀವ ಜಡರೊಳು ಕೋಲೆಮಾಧವಜೀವ ಜಡರೊಳು ಎನುತಲಿಬೋಧಿಸಿದನು ಹಿತಮಾರ್ಗ ಕೋಲೆ 37ತನ್ನ ಹೊಂದಿದರಿಗೆ ಪ್ರೌಢವೃತ್ತಿಯನು ಶ್ರೀಮನ್ನಾಮಾಮೃತವನುಣಿಸುವ ಕೋಲೆ ಶ್ರೀಮನ್ನಾಮಾಮೃತವನುಣಿಸುವ ಹೊರೆವನುಉನ್ನತ ಮಹಿಮ ಜಯರಾಯ ಕೋಲೆ 38ಆವಾಗಸೂತ್ರಾರ್ಥ ನಿಸ್ಸಾಳ ವ್ಯಾಖ್ಯಾನತೀವಿದ ಶ್ರುತಿಯ ಕಹಳೆಯು ಕೋಲೆತೀವಿದ ಶ್ರುತಿಯ ಕಹಳೆ ಧ್ವನಿಯುಂಟುಶ್ರೀವ್ಯಾಸ ರಾಮಾರ್ಚನೆಯುಂಟು ಕೋಲೆ 39ಅಚ್ಚ ಸಾತ್ವಿಕನಾದ ರಾಜಾಧಿರಾಜನಹೆಚ್ಚಿನಸತಿಶುದ್ಧಮತಿಯಮ್ಮ ಕೋಲೆಹೆಚ್ಚಿನಸತಿಶುದ್ಧ ಮತಿಯಮ್ಮ ನಮ್ಮಮ್ಮನಿಚ್ಚನಮ್ಮನು ಹೊರೆವಳು40ತಾಯಿ ತಂದೇರ ಹಾಡಿ ದಣಿಯದು ನಮ್ಮ ಮನಭಯವು ಅದರಲ್ಲಿರುವುದು ಕೋಲೆಭಯವು ಅದರಲ್ಲಿರುವುದು ಶುಭಗುಣಬಾಯಿ ಮಾತಿಗೆ ತೀರವು ಕೋಲೆ 41ಬಂದೆವು ಬೀಗರ ಮನೆಗಿಂದೆ ಮುಯ್ಯವತಂದೇವು ಬಾಲೇರೊಡಗೂಡಿ ಕೋಲೆತಂದೇವು ಬಾಲೇರೊಡಗೂಡಿ ಬೀಗರಅಂದವ ಹೇಳಲಳವಲ್ಲ ಕೋಲೆ 42ಬಹುಕಾಲದ್ಹಿರಿಯರು ಬಾಳಿದ ಮನೆಯಿದುವಿವರಿಸಿ ನೋಡಲರಿಯದೆ ಕೋಲೆವಿವರಿಸಿ ನೋಡಲರಿಯದೆ ಕೆಡಿಸಿದರುಧವಳಾರವೆಲ್ಲ ಮಲಿನವು ಕೋಲೆ 43ಬೀಗರಿದ್ದ ಮನೆಯನೆತ್ತೆತ್ತ ನೋಡಲುಬಾಗಿಲು ಬಯಲು ಬರೆಹುಯಿಲು ಕೋಲೆಬಾಗಿಲು ಬಯಲು ಬರೆಹುಯಿಲು ನಮ್ಮವರುಹ್ಯಾಗೆಂತು ಹೆಣ್ಣು ಕೇಳುವರು ಕೋಲೆ 44ಸಂಖ್ಯಾವಿದನೆಂಬಾತ ಮಾವನಾತನ ರಾಣಿಬಿಂಕದ ಬೌದ್ಧದೇವ್ಯತ್ತಿ ಕೋಲೆಬಿಂಕದ ಬೌದ್ಧದೇವ್ಯತ್ತಿ ಭಾಟ್ಟ ನಿ:ಶಂಕ ಚಾರ್ವಾಕಭಾವಮೈದುನರು ಕೋಲೆ45ಮಿಥ್ಯನಮ್ಮತ್ತಿಗೆಮಾಯೆನಮ್ಮ ನಾದಿನಿಸುತ್ತಿನ ಬಳಗಕೆಣಿಕಿಲ್ಲ ಕೋಲೆಸುತ್ತಿನ ಬಳಗಕೆಣಿಕಿಲ್ಲ ಕೆಣಕಿದರೆಮತ್ತೇನಾದರು ಹುರುಳಿಲ್ಲ ಕೋಲೆ 46ಇಪ್ಪತ್ತೊಂದು ಮಂದಿ ಹೆಸರಾದವರ ಕೂಡಬಹುಕಾಲ ಕಜ್ಜವು ನಮಗುಂಟು ಕೋಲೆಬಹುಕಾಲ ಕಜ್ಜವು ನಮಗುಂಟು ಹಾಲಿಗೆಹೆಪ್ಪನೆರೆದಂತೆ ಹಿತಮಾತು ಕೋಲೆ 47ಅಂಗಳದೊಳು ಬಂದು ತಿಳಿದೇವು ಅತ್ತಿಗೇರಶೃಂಗಾರಗರತಿ ಸಿರಿಯನು ಕೋಲೆಶೃಂಗಾರಗರತಿ ಸಿರಿಯನು ಕಾಣುತಹಿಂಗದೆ ನಿಂತು ನುಡಿಬೇಕು ಕೋಲೆ 48ತಂಗಳೆಂಜಲು ಎಂಬೊ ಅಂಜಿಕೆ ತಮಗಿಲ್ಲಮಂಗಳಧಾತು ಕಾಣೆವು ಕೋಲೆಮಂಗಳಧಾತು ಕಾಣೆವು ಅತ್ತಿಗೇರುತಿಂಗಳಸ್ನಾನ ಅರಿಯರು ಕೋಲೆ 49ದಾವಮೂಲೆಲಿ ಬೂದಿ ಮನೆಗಸ ನೋಡಿರೆಭಾವಿ ಅತ್ತೆಯಕೆಲಸವ ಕೋಲೆಭಾವಿ ಅತ್ತೆಯ ಕೆಲಸಕೆ ಮೆಚ್ಚಿದೆವುನಾವೇನುಡುಗೊರೆಯ ಕೊಡಬೇಕು ಕೋಲೆ 50ಮಿಥ್ಯಾವಾದದಲಿ ನಮ್ಮತ್ತಿಗೆ ಬಲುಜಾಣೆಹೆತ್ತವ್ರನೆಲ್ಲ ಹುಸಿಯೆಂದು ಕೋಲೆಹೆತ್ತವ್ರನೆಲ್ಲ ಹುಸಿಯೆಂದು ಶಿವನೊಬ್ಬಸತ್ಯ ತಾನೆಂದು ನುಡಿವಳು ಕೋಲೆ 51ಕಚ್ಚೆ ಹಾಕಿದವರಿಗೆ ವಿಪ್ರರೆಂದ್ಹೆಸರಿಟ್ಟುನಿಚ್ಚಗೆಳತೇರ ಒಡಗೂಡಿ ಕೋಲೆನಿಚ್ಚಗೆಳತೇರ ಒಡಗೂಡಿ ಗೆಳೆತನಹೆಚ್ಚಾಗಿ ನಡೆಸುತಿಹಳು ಕೋಲೆ 52ದೊಡ್ಡಾಕಿ ನಾನೆಂದು ಅಡ್ಡಡ್ಡ ನಡೆವಳುದೊಡ್ಡವರ ಕಂಡರೋಡೋಳು ಕೋಲೆದೊಡ್ಡವರ ಕಂಡರೋಡೋಳು ನಡುಮನೆದೊಡ್ಡಿಗೆ ತಾನು ಹಿರಿಯಳೆ ಕೋಲೆ 53ಮಾಯಿನ ದನಿನೋಡಿ ಮಾವನ ಕಿರಿಮಗಳುಬಾಯಿ ಬಡಕಿಯು ಬಹುಭಾಷಿ ಕೋಲೆಬಾಯಿ ಬಡಕಿಯು ಬಹುಭಾಷಿ ವೆಡ್ಡಗೊಂಡನಾಯಿಯ ತೆರದಿ ಬಲುಕೋಪಿ ಕೋಲೆ 54ತಾಯಿ ತಂದೆಯರಿಗೆ ಗುಣವಂತೆ ಮಗಳೀಕೆನೋಯಿಯ ನುಡಿವಳುಂಡುಟ್ಟು ಕೋಲೆನೋಯಿಯ ನುಡಿವಳುಂಡುಟ್ಟು ಆ ಕ್ಷಣಬಾಯಾರುವಲ್ಲಿ ಬಲ್ಲಿದಳು ಕೋಲೆ 55ಮಹಾತ್ತುಮರ ಮಟಾಮಾಯ ಮಾಡುವ ಶಕ್ತಿಮಹಾಢಾಳಿಕಿಯ ಬಲ್ಲಳು ಕೋಲೆಮಹಾಢಾಳಿಕಿಯ ಬಲ್ಲಳು ಆ ಬುಧರಮಾಯಿ ಅಭದ್ರೆಘನಕ್ಷುದ್ರೆ ಕೋಲೆ56ತನ್ನ ಬದಿಯ ತನ್ನೆರೆಹೊರೆಯವರನುತನ್ನಂತೆ ಮಾಡಿಕೊಂಡಳು ಕೋಲೆತನ್ನಂತೆ ಮಾಡಿಕೊಂಡಳು ಮನದಲಿಉನ್ಮತ್ತವೃತ್ತಿಕಲಿಸೋಳು ಕೋಲೆ57ಪ್ರಸ್ತವ ಮಾಡುವ ಮನೆಯೊಳು ಹೋಗುವಳುಅಸ್ತವ್ಯಸ್ತದಲಿ ಬಲುಬೇಗ ಕೋಲೆಅಸ್ತವ್ಯಸ್ತದಲಿ ಬಲುಬೇಗ ಷಡ್ರಸನ್ನಹಸ್ತಲಾಘವದಿ ಕೆಡಿಸುವಳು ಕೋಲೆ 58ಒಳ್ಳೆ ಶಾಲ್ಯೋದನ ಭಕ್ಷ್ಷ್ಯಭೋಜನದೊಳುಕೊಳ್ಳಿಯಿಕ್ಕಿ ಕೆಡಿಸುವಳು ಕೋಲೆಕೊಳ್ಳಿಯಿಕ್ಕಿ ಕೆಡಿಸುವಳು ಪದಾರ್ಥವನೆಲ್ಲ ಏಕಾಕಾರ ಮಾಡುವಳು ಕೋಲೆ 59ಅತ್ತಿಗೆನಾದಿನೇರ ಗೋಡೆಯ ಮೇಲಿನಚಿತ್ತಾರದ ಗೊಂಬಿ ನೋಡಿರೆ ಕೋಲೆಚಿತ್ತಾರದ ಗೊಂಬಿ ನೋಡಿರೆ ಅಖಂಡಮತ್ತೆ ಭೇದಗಳು ತಿಳಿಯವು ಕೋಲೆ 60ಕಂಬ ಬೋದುಗಳೊಂದೆ ಕೆಳಮೇಲು ಕಟ್ಟು ಒಂದೆಅಂಬುಜಮದ್ದುಗುಣಿಕೊಂದೆ ಕೋಲೆಅಂಬುಜಮದ್ದುಗುಣಿಕೊಂದೆ ತುಲಸಿ ಕದಂಬವು ಎಕ್ಕೆ ಗಿಡವೊಂದೆ ಕೋಲೆ 61ಕಾಗೆ ಕೋಗಿಲೆ ಒಂದೆ ಗೂಗೆ ನವಿಲು ಒಂದೆನಾಗನೀರೊಳ್ಳಿಯ ಹಾವು ಒಂದೆ ಕೋಲೆನಾಗನೀರೊಳ್ಳಿಯ ಹಾವು ಒಂದೆ ಚಿತ್ತರದಾ ಗಿಳಿಹಿಂಡು ತಿಳಿಯವು ಕೋಲೆ 62ಕುದುರೆ ಕತ್ತೆಯ ಬಣ್ಣ ಆನೆ ಹಂದಿಯ ಬಣ್ಣಮದಹುಲಿಗೆ ನಾಯಿ ಬಣ್ಣವು ಕೋಲೆಮದಹುಲಿಗೆ ನಾಯಿ ಬಣ್ಣ ಒರ್ಸಿಟ್ಟಿಹಚದುರೆಯ ಕೈಗೆ ಕಡಗವು ಕೋಲೆ 63ಅತ್ತಿಗೆನಾದಿನೇರ ಚಿತ್ತಾರ ಬಲುಘನಮತ್ತೆ ತೀರದ ಗುಣಗಳು ಕೋಲೆಮತ್ತೆ ತೀರದ ಗುಣಗಳುಭಾವಮೈದುನರೆತ್ತೋಡಿದರು ಸುಳುಹಿಲ್ಲ ಕೋಲೆ 64ಗುರುಗಳ ಭಯವಿಲ್ಲ ಹಿರಿಯರ ಸ್ಮರಣಿಲ್ಲಹರಿಯೆ ತಾವೆಂದು ಬೆರೆತರು ಕೋಲೆಹರಿಯೆ ತಾವೆಂದು ಬೆರೆತರು ದಿಂಡೇರಿಗೊರೆವರು ತಮ್ಮ ಬುದ್ಧಿಯ ಕೋಲೆ 65ಲಗಳಿಯ ಕೋಣಗೆ ಲಘ್ವಾದ ಕೆಲಸೆತ್ತಜಗದೀಶನೆತ್ತ ತಾವೆತ್ತ ಕೋಲೆಜಗದೀಶನೆತ್ತ ತಾವೆತ್ತ ಭಾವರನಗೆಗೇಡು ನೋಡಿ ನಗುತೇವೆ ಕೋಲೆ 66ಹೆಗಲ ಕಾವಡಿಯವಗೆ ಹಗಲು ದೀವಟಿಗೇಕೆಮಿಗಿಲಾದ ಬಿರುದು ತಮಗೇಕೆ ಕೋಲೆಮಿಗಿಲಾದ ಬಿರುದು ತಮಗೇಕೆ ಮೈದುನರಮೊಗ ನೋಡಿದರೆ ಹೊಗೆಗೆಂಡ ಕೋಲೆ 67ಪಂಚದೇವನ ಪೂಜೆ ಮಾಡುವರೊಂದಾಗಿಹಿಂಚು ಮುಂಚುಗಳ ಅರಿಯರು ಕೋಲೆಹಿಂಚು ಮುಂಚುಗಳ ಅರಿಯರು ಬರಿದೆ ಪ್ರಪಂಚವ ಬಿಟ್ಟೆವೆನಿಸುವರು ಕೋಲೆ 68ಹಿಂಡುಬಾಂಧವರು ತಮ್ಮೊಳು ತಾವೆ ಕೊಂಡಾಡಿಮಂಡಿಕೆಸೂತ್ರಹರಕೊಂಡು ಕೋಲೆಮಂಡಿಕೆಸೂತ್ರಹರಕೊಂಡು ಕೊಂಡಾಡಿಮಂಡೆಯ ಬಿಟ್ಟು ತಿರುಗೋರು ಕೋಲೆ 69ಇವರ ಲೆಕ್ಕದೊಳಗೆ ಹರಿಶಿವನೊಬ್ಬನೆರವಿಗಣನಾಥನೊಬ್ಬನೆ ಕೋಲೆರವಿಗಣನಾಥನೊಬ್ಬನೆ ಎಲ್ಲೆಲ್ಲಿದಿವಿ ದೇವರೊಳಗೆ ಬೇರಿಲ್ಲ ಕೋಲೆ 70ವಿಧಿನಿಷಿದ್ಧಗಳಿಲ್ಲಪೋಕಮತದೊಳುಉದರ ತುಂಬಿದರೆ ಸಮದೃಷ್ಟಿ ಕೋಲೆಉದರ ತುಂಬಿದರೆ ಸಮದೃಷ್ಟಿ ಹರಿವ್ರತಮೊದಲಿಗಿಂದಿಗೆ ಸೊಗಸವು ಕೋಲೆ 71ಬದನೆ ನುಗ್ಗೆಯ ಕಾಯಿ ಸಲೆ ತೊಂಡೆ ತುಪ್ಹೀರೆಮೃದು ಮೂಲಂಗಿ ಗಜ್ಜರಿಗಳು ಕೋಲೆಮೃದು ಮೂಲಂಗಿ ಗಜ್ಜರಿಗಳು ಇವರಿಗೆಮುದದೂಟ ಆತ್ಮಾರಾಮನ ತೃಪ್ತಿ ಕೋಲೆ 72ಬಸಳೆ ಸಬ್ಬಸೆ ಸೊಪ್ಪು ಹುಳಿ ಚುಕ್ಕದ ಗೂಡೆಹಸನಾದ ಪುಂಡಿ ಬಲುಪ್ರೀತಿ ಕೋಲೆಹಸನಾದ ಪುಂಡಿ ಬಲುಪ್ರೀತಿಹಸಿವಿಗೆ ದೊರೆಯ ಪರಲೋಕ ಕೋಲೆ 73ಮಡಿ ಮೈಲಿಗೆಯು ಒಂದೆ ಸ್ನಾನಪಾನಗಳೊಂದೆಹುಡುಗ ಹಿರಿಯರ ಬಳಿಕೊಂದೆ ಕೋಲೆಹುಡುಗ ಹಿರಿಯರ ಬಳಿಕೊಂದೆನುಡಿಬೇರೆ ಪೋಕರ ನಡೆಬೇರೆ ಕೋಲೆ 74ನಮ್ಮ ನಗೆಯೊಳಗೆ ಉನ್ನತ ಸುಖವುಂಟುರಮ್ಮೆಯ ರಮಣ ಕರುಣಿಪ ಕೋಲೆರಮ್ಮೆಯ ರಮಣ ಕರುಣಿಪ ಒಡಲ್ಹೊಕ್ಕುನಮ್ಮವರಾಗಿ ಸುಖಿಯಾಗಿ ಕೋಲೆ 75ನಿಮ್ಮ ಹಿರಿಯರೆಲ್ಲ ನಮ್ಮ ಮನೆಯ ಹೊಕ್ಕುಧರ್ಮಾರ್ಥ ಸೂರೆಗೊಂಡರು ಕೋಲೆಧರ್ಮಾರ್ಥ ಸೂರೆಗೊಂಡರು ಜಗವರಿಯೆನಿರ್ಮಳರಾಗಿ ಸುಖಿಯಾಗಿ 76ಮಾವನೊಳಗೆ ನಮ್ಮ ನಗೆಯಿಲ್ಲ ಬೌದ್ಧದೇವೀರ ಕೂಡ ಸರಸಿಲ್ಲ ಕೋಲೆದೇವೀರ ಕೂಡ ಸರಸಿಲ್ಲ ಹಿರಿಯರುತಾವವರ ಗೆದ್ದು ನಗುವರು ಕೋಲೆ 77ನಿಪುಣೆಂದೆನಿಸುವಿರಿ ಚಪಳೆರೆಂದೆನಿಸುವಿರಿಅಪರಾತ್ರೆ ಆಯಿತು ಬಂದೀಗ ಕೋಲೆಅಪರಾತ್ರೆ ಆಯಿತು ಬಂದೀಗ ನಮಗಿನ್ನುಉಪಚಾರವುಂಟೊ ಗತಿಯಿಲ್ಲೊ ಕೋಲೆ 78ಮೋರೆ ತೋರದಿದ್ದರೆ ಮನೆಯೊಳಗಿರಿ ನೀವುಜಾರುತೇವೆ ನಮ್ಮ ಮನೆಗೀಗೆ ಕೋಲೆಜಾರುತೇವೆ ನಮ್ಮ ಮನೆಗೀಗೆ ಬೀದಿಲಿತೂರುತೇವೆ ನಿಮ್ಮ ಕರುಳನು ಕೋಲೆ 79ಈಪರಿನಾರೇರ ಹಿತವಾದ ನಗೆಗಳಕೋಪವ ಬಿಟ್ಟು ಕೇಳುತ ಕೋಲೆಕೋಪವ ಬಿಟ್ಟು ಕೇಳುತ ಬಂದು ಸವಿi್ಞಪಕ ಕೈಯವಿಡಿದರು ಕೋಲೆ 80ರತ್ನಗಂಬಳಿ ಹಾಸಿ ಒಳ್ಳೇರ ಮಕ್ಕಳೆಂದುಉತ್ತಮಗುಣವ ಕೊಂಡಾಡಿ ಕೋಲೆಉತ್ತಮ ಗುಣವ ಕೊಂಡಾಡಿ ಕುಳ್ಳಿರಿಸಿಚಿತ್ತಕೆ ಸುಖವ ಕೊಟ್ಟರು ಕೋಲೆ 81ಶ್ರೀಕಾಂತನರಮನೆಯ ಹೊಂದಿದವರು ನೀವುಏಕಾಂತ ಭಕ್ತಿ ಬಲ್ಲವರು ಕೋಲೆಏಕಾಂತ ಭಕ್ತಿ ಬಲ್ಲವರು ನಮ್ಮ ನೀವೆ ಕೂಡಿಕೊಳ್ಳಿ ದೂರ್ಯಾಕೆ ಕೋಲೆ 82ಸುಖದೂಟಸವಿಯನು ಅರಿಯದೆ ಕೆಟ್ಟೆವುಸುಖತೀರ್ಥಗುರುವು ನಮಗಾಗಿ ಕೋಲೆಸುಖತೀರ್ಥಗುರುವು ನಮಗಾಗಿ ಪರಲೋಕಸುಖ ಸೂರೆಗೊಂಡು ಬದುಕೇವು ಕೋಲೆ 83ಐದು ಭೇದವನರಿತು ನಡೆದೇವು ನಾವಿಪ್ಪತ್ತೈದು ತತ್ವಗಳ ತಿಳಿದೇವು ಕೋಲೆ ಇಪ್ಪತ್ತೈದು ತತ್ವಗಳ ತಿಳಿದೇವು ಮೇಲೆ ಮತ್ತೈದು ಮುಕ್ತಿಯ ಪಡೆದೇವು ಕೋಲೆ 84ಮುದ್ರೆ ಇಲ್ಲದ ನಾಣ್ಯ ಶುದ್ಧಲ್ಲ ಜಗದೊಳುಮುದ್ರಾಂಕರಾಗಿ ಬದುಕೇವು ಕೋಲೆಮುದ್ರಾಂಕರಾಗಿ ಬದುಕೇವು ಮಲೆತವರಗೆದ್ದೇವು ವಾಕ್ಯ ಬಲದಲ್ಲಿ ಕೋಲೆ 85ಇಂತೆಂಬ ನುಡಿಗೇಳಿ ಅಪಾರಾನಂದದಲ್ಲಿಕಾಂತೆಯರೆಲ್ಲ ಒಂದಾಗಿ ಕೋಲೆಕಾಂತೆಯರೆಲ್ಲ ಒಂದಾಗಿ ಮನದಿ ವಿಶ್ರಾಂತರಾದರು ತಮತಮಗೆ ಕೋಲೆ 86ಗುರುಭಕ್ತಿ ಅರಿಷಿಣ ಹರಿಭಕ್ತಿ ಕುಂಕುಮಪರಮಾರ್ಥ ಜ್ಞಾನಾಂಜನವನು ಕೋಲೆಪರಮಾರ್ಥ ಜ್ಞಾನಾಂಜನವನು ಇಟ್ಟರುಹರಿನಿರ್ಮಾಲ್ಯದ ಪುಷ್ಪ ಮುಡಿದರು ಕೋಲೆ 87ಸಸ್ಯ ಸಾರಾವಳಿಯ ಸೀರೆಯ ತೆಗೆದರುಅತ್ತಿಗೆಯವರ ಮನಮೆಚ್ಚು ಕೋಲೆಅತ್ತಿಗೆಯವರ ಮನಮೆಚ್ಚಿನುಡುಗೊರೆಅರ್ಥಿಲಿ ಕೊಟ್ಟು ನಲಿದರು ಕೋಲೆ 88ಮಾಧವಪ್ರತಿಷ್ಠಾನ ಪೇಟೆಯೊಳುದಿಸಿದಮಾದಳದ ಹಣ್ಣು ಬಣ್ಣದ ಕೋಲೆಮಾದಳದ ಹಣ್ಣು ಬಣ್ಣದ ಸೀರೆಯನಾದಿನಿ ಜಾಣೆಗಿತ್ತರು ಕೋಲೆ 89ಅಚ್ಚ ಬಂಗಾರದ ಶಂಖಚಕ್ರಂಗಳಅಚ್ಚನೆತ್ತಿದ ನಯವಾದ ಕೋಲೆಅಚ್ಚನೆತ್ತಿದ ನಯವಾದ ಬೇರೆ ಬೇರೆಹಚ್ಚಡಗಳು ಬಾವರಿಗಿತ್ತು ಕೋಲೆ 90ಭೇದ ಭೇದದ ಬಣ್ಣ ಬಗೆ ಬಗೆ ಚಿತ್ರದನಾದ ಸಮುದ್ರದ ಪೇಟೆಯ ಕೋಲೆನಾದ ಸಮುದ್ರದ ಪೇಟೆಯ ವಲ್ಲಿಗಳುಮೈದುನ ಜಾಣರುಡುಗೊರೆ ಕೋಲೆ 91ಹಿರಿಯ ಕಿರಿಯರ ನೋಡಿ ಮಾನ್ಯಾಮಾನ್ಯನ ನೋಡಿತರತಮ ಭಾವದುಪಚಾರ ಕೋಲೆತರತಮ ಭಾವದುಪಚಾರ ಮಾಡಿದರುಹರಿಗುರು ಮೆಚ್ಚಿ ನಲಿವಂತೆ ಕೋಲೆ 92ಈ ಪರಿಯಲಿವರ ಮನಮುಟ್ಟಿ ಮನ್ನಿಸಿಸುಗಂಧ ಪರಿಮಳ ದ್ರವ್ಯವ ಕೋಲೆಸುಗಂಧ ಪರಿಮಳ ದ್ರವ್ಯವ ಚೆಲ್ಲಾಡಿಶ್ರೀಪತಿಗವರರ್ಪಿಸಿ ಮುದದಿಂದ ಕೋಲೆ 93ಪರಸ ಮುಟ್ಟಿದ ಮೇಲೆ ಲೋಹ ಚಿನ್ನಾಗದೆಸುರನದಿಮುಟ್ಟಿ ಸಗರರ ಕೋಲೆಸುರನದಿಮುಟ್ಟಿ ಸಗರರುದ್ಧಾರಾದಂತೆಕರಗಿತುಅವರಮನಮೈಲಿಗೆ94ಶುಭಭರಿತಾದ ತಾಂಬೂಲ ಕೈಕೊಂಡುಶುಭವಾಕ್ಯ ನುಡಿದು ನಡೆವಾಗ ಕೋಲೆಶುಭವಾಕ್ಯ ನುಡಿದು ನಡೆವಾಗ ಬೀಗರುಅಬಲೇರಿಗೆ ಕೈಯ ಮುಗಿದರು ಕೋಲೆ 95ನಾಳೆ ನಿಮ್ಮಾಜÕ ಬರೆ ಮುಯ್ಯ ತರುವೆಆಳವಾಡದಿರಮ್ಮ ನಮ್ಮನು ಕೋಲೆಆಳವಾಡದಿರಮ್ಮ ನಮ್ಮನು ನೀವೀಗಏಳಿಲ ಮಾಡದಿರಿ ಕಂಡ್ಯಾ ಕೋಲೆ &ಟಿ;, bsಠಿ; 96ಹೀಗೆಂದ ಮಾತಿಗೆ ನುಡಿದರು ಹರಿಹರಿಭಾಗವತರೆಲ್ಲ ಧರೆಯೊಳು ಕೋಲೆಭಾಗವತರೆಲ್ಲ ಧರೆಯೊಳು ನಮ್ಮವರುಶ್ರೀಗಂಧ ಕರ್ಪೂರಕೆ ಮೈತ್ರವು 97ಅಪ್ಪ ಜಯತೀರ್ಥಗೆ ಹೆತ್ತವ್ವ ಶುದ್ಧಮತಿಗೆಒಪ್ಪುವ ಬಂಧು ಬಳಗಕೆ ಕೋಲೆಒಪ್ಪುವ ಬಂಧು ಬಳಗಕೆ ನಿಮ್ಮಗುಣಒಪ್ಪಣೆ ಹೇಳೇವು ಕೋಲೆ ಗನೀವು ಬಂದಾಕ್ಷಣ ಶ್ರೀವ್ಯಾಸರಾಯರನೈವೇದ್ಯ ತೀರ್ಥವು ಲಭ್ಯವು ಕೋಲೆನೈವೇದ್ಯ ತೀರ್ಥವು ಲಭ್ಯವು ನಮ್ಮಪ್ಪನಾವ ಪರಿಯಲಿ ಒಲಿಸೇವು ಕೋಲೆ 9ಮೆಲ್ಲನೆ ಹೊರವಂಟು ಫುಲ್ಲಭವ ಕೀರ್ತಿಸೊಲ್ಲುಸೊಲ್ಲಿಗೆ ಉಗ್ಗಡಿಸುತ ಕೋಲೆಸೊಲ್ಲುಸೊಲ್ಲಿಗೆ ಉಗ್ಗಡಿಸುತ ಹಾರುವಾಗಕ್ಷುಲ್ಲರ ಮನಕೆ ದಣಿವಾಯ್ತು ಕೋಲೆ 100ಮನೆ ಮುಟ್ಟಿ ಬಂದರು ಗುರುಪಾದ ಕಂಡರುಜನನಿಗೆ ಕೈಯ ಮುಗಿದರು ಕೋಲೆಜನನಿಗೆ ಕೈಯ ಮುಗಿದರುಕೈವಲ್ಯಕ್ಕನುಮಾನವಿಲ್ಲದೆ ನಡೆವರು ಕೋಲೆ 101ಧರೆಯ ಸಜ್ಜನರಿಗೆ ಸಕ್ಕರೆ ಸವಿಗಿಂತಉರೆ ಕಾಯ್ದ ಹಾಲ ಕೆನೆಗಿಂತ ಕೋಲೆಉರೆ ಕಾಯ್ದ ಹಾಲ ಕೆನೆಗಿಂತ ಸವಿಯುಂಟುಗುರುಭಕ್ತಿ ಉಂಟು ಪರವುಂಟು ಕೋಲೆ 102ಅಲ್ಪ ಕನ್ನಡದ ನುಡಿಯೆನ್ನಲಾಗದುಫಣಿತಲ್ಪನ ಪ್ರಿಯಗುರುಮಹಿಮೆ ಕೋಲೆಫಣಿತಲ್ಪನ ಪ್ರಿಯಗುರುಮಹಿಮೆ ನೋಡುವುದುತಪ್ಪನಾರಿಸದೆ ಶಿಷ್ಟರು ಕೋಲೆ 103ಜನ್ಮ ಜನ್ಮ ಬ್ರಹ್ಮ ವಾಯೂರೆ ಗುರುಗಳುರಮ್ಮೆಯ ರಮಣ ಮನೆದೈವ ಕೋಲೆರಮ್ಮೆಯ ರಮಣ ಮನೆದೈವವಾಗಲಿಶ್ರೀಮಧ್ವಾಚಾರ್ಯರು ಕೋಲೆ 104ಪ್ರಸನ್ನವೆಂಕಟಪತಿ ನಾಮದುಚ್ಚಾರಣೇಲಿಅಶುಭಕೋಟಿಗಳು ಉಳುಹಿಲ್ಲ ಕೋಲೆಅಶುಭ ಕೋಟಿಗಳು ಉಳುಹಿಲ್ಲ ಶುಭಮಸ್ತುಕುಶಲಾಯುರಾರೋಗ್ಯವಾಹುದು ಕೋಲೆ 105
--------------
ಪ್ರಸನ್ನವೆಂಕಟದಾಸರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ