ಒಟ್ಟು 36 ಕಡೆಗಳಲ್ಲಿ , 24 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣೇಶಗೆ ಮಂಗಳಂ ಮಂಗಳ ವಾಯುಕುಮಾರನಿಗೆ ಜಯಮಂಗಳ ಅಂಗನೆ ಸುತಗೆ ಮಂಗಳ ಭುಜಗಭೂಷಣ ದೇವಗುರುವಿಗೆ ಮಂಗಳ ಭಾರತಿ ರಮಣನಿಗೆ ಪ ತ್ರೇತಾಯುಗzಲ್ಲಿ ಖ್ಯಾತರಾದ ಸುರರ ಘಾತಿಸಿ ಬಡಿದಂಥಾ ವಾತಾತ್ಮಜ ಭೂತಳದೊಳತಿ ಖ್ಯಾತಿಯ ಪಡೆದಂಥ 1 ದ್ವಾಪರದಲಿ ತಾ ಭೂಪ ಭೀಮನಾಗಿ ಗೋಪಾಲಕನ ನಿಜ ದಾಸನಾಗಿ ಪಾಪಿ ಖೂಳರ ಸಂತಾಪವ ಬಡಿಸುತ ಗೋಪಾಲಸಖನ ಪ್ರತಾಪವ ಪೊಗಳಿದಂಥ 2 ದುರುಳ ಮತಗಳೆಲ್ಲ ಮುರಿಯಲೋಸುಗ ಅವಸರದಿಂದಲಿ ಬಂದು ಕಲಿಯುಗದೀ ಶಿರಿವತ್ಸಾಂಕಿತನಿಗೆ ಪರಮಪ್ರಿಯವಾದ ವರಮಧ್ವಮತವನ್ನು ಧರೆಯೊಳು ತಂದಂಥ 3
--------------
ಸಿರಿವತ್ಸಾಂಕಿತರು
ಮಧ್ವಮತವ ಪೊಂದದವನ ಭಕುತಿಯಾತಕೆ ಪ ಊಧ್ರ್ವಪುಂಡ್ರ ತಿದ್ದದವನ ಕರ್ಮವ್ಯಾತಕೆಅ.ಪ ದಾನವನ್ನು ಮಾಡದವನ ದ್ರವ್ಯವ್ಯಾತಕೆ | ಸ್ನಾನವನ್ನು ಮಾಡದವನ ಮೌನವ್ಯಾತಕೆ | ಮಾನಿನಿಯು ಇಲ್ಲದವನ ಬದುಕು ಯಾತಕೆ | ಧ್ಯಾನವನ್ನು ಅರಿಯದವನ ಪೂಜೆ ಯಾತಕೆ 1 ವಂಶವನ್ನುದ್ಧರಿಸದಂಥ ಮಗನು ಯಾತಕೆ | ಹಿಂಸೆಯನ್ನು ಪಡಿಸುವಂಥ ಅರಸು ಯಾತಕೆ || ಸಂಸಾರವನು ಒಲ್ಲದಂಥ ಸತಿಯು ಯಾತಕೆ | ಕಂಸಾರಿಯನು ತಿಳಿಯದಂಥ ಜ್ಞಾನವ್ಯಾತಕೆ 2 ಬಂಧು ಬಳಗ ಬಿಟ್ಟು ಉಂಬ ನೆಂಟರ್ಯಾತಕೆ | ಕಂದರನ್ನು ಮಾರುತಿಪ್ಪ ತಂದೆಯಾತಕೆ || ಬಂದ ಅತಿಥಿಗನ್ನವಿಕ್ಕದ ಸದನವ್ಯಾತಕೆ | ನಿಂದೆಗಳು ಮಾಡುತಿಹನಾಚಾರವ್ಯಾತಕೆ 3 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆ | ಹಿರಿಯರನ್ನು ಸಾಕದವನ ಪುಣ್ಯವ್ಯಾತಕೆ || ಚರಿಸಿ ತೀರ್ಥಯಾತ್ರೆ ಮಾಡದ ದೇಹವ್ಯಾತಕೆ | ವರ-ಪ್ರಸಾದವೀಯದಂಥ ದೇವರ್ಯಾತಕೆ4 ಏಕಾದಶಿಯ ಮಾಡದವನ ವ್ರತವು ಯಾತಕೆ | ಏಕಮನಸು ಇಲ್ಲದವನ ನಡತೆ ಯಾತಕೆ || ಸಾಕಿದವನ ಕೊಲ್ಲುವಂಥ ಭಂಟನ್ಯಾತಕೆ | ಲೋಕವಾರ್ತೆ ಬಿಡದವನ ಜಪವು ಯಾತಕೆ 5 ಭಾಷೆ ಬದ್ಧವಿಲ್ಲದವನ ಮಾತು ಯಾತಕೆ | ಕಾಸುವೀಸÀಕೆ ಬಡಿದಾಡುವ ಅನುಜರ್ಯಾತಕೆ || ಲೇಸು ಹೊಲ್ಲೆಹ ನೋಡದಂಥ ಗೆಳೆಯನ್ಯಾತಕೆ | ಆಸೆಯನ್ನು ಬಿಡದ ಸನ್ಯಾಸವ್ಯಾತಕೆ 6 ತಪ್ತ ಮುದ್ರೆಯಿಲ್ಲದವನ ಜನ್ಮವ್ಯಾತಕೆ | ಗುಪ್ತದಲ್ಲಿ ನಡೆಯದಿಪ್ಪ ದಾಸನ್ಯಾತಕೆ || ಆಪ್ತಬಂಧು ವಿಜಯವಿಠ್ಠಲನ ಶ್ರೀ ಚರಣದಿ | ಕ್ಲುಪ್ತ ಮೀರದೆ ನಡೆದ ಮೇಲೆ ನರಕವ್ಯಾತಕೆ 7
--------------
ವಿಜಯದಾಸ
ಮಧ್ವಮತವ ಪೊಂದಿ ಭಜಿಸಿರೊ | ಉದ್ಧಾರವಾಗಲು ಮಧ್ವಮತವ ಪೊಂದಿ ಭಜಿಸಿರೊ ಪ ಮಧ್ವಮತವ ಪೊಂದಿ ಭಜಿಸಿ ಶುದ್ಧ ಜ್ಞಾನ ಭಕುತಿಗಳಿಸಿ ಗೆದ್ದು ಈ ಭವಾಬ್ಧಿಯನ್ನು ಪದ್ಮನಾಭನ ಪಾದವ ತೋರೆ ಅ.ಪ. ನಾನೆ ವಾಸುದೇವನೆಂದು ಹೀನ ಪೌಂಡ್ರಕನು ತಾನು ಏನು ಗತಿಯ ಕಂಡನೆಂದು ಜ್ಞಾನದಿಂದ ತಿಳಿದು ಮುನ್ನ 1 ಹರಿಯೆ ಸರ್ವೋತ್ತಮನು | ವಿಶ್ವ ವಿರುವುದಯ್ಯ ಸತ್ಯವಾಗಿ ತಾರತಮ್ಯ ಪಂಚಭೇದ ಸ್ಥಿರವೆಂದು ಸಾರಿಪೇಳ್ವ 2 ಭಕುತಿಯಿಂದ ಸೇವಿಪ ಜನಕೆ ಮುಕುತಿಯಲ್ಲಿ ನೈಜ ಸುಖವ ಲಕುಮಿಕಾಂತನು ಪಾಲಿಪನೆಂದು ಯುಕುತವಾಗಿ ಪ್ರಕಟಿಸಿದಂತ 3
--------------
ಲಕ್ಷ್ಮೀನಾರಯಣರಾಯರು
ಮಧ್ವರಾಯರ ಕರುಣ ಪಡೆಯದವ | ಧರೆಯೊಳಗೆ ಇದ್ದರೇನು ಇಲ್ಲದಿದ್ದರೇನು ಪ ಮಧ್ವಮತವೇ ಮತವು ಸಕಲ ಶ್ರುತಿ ಸಮ್ಮತವು | ಮಧ್ವರಾಯರ ಧ್ಯಾನ ಅಮೃತಪಾನ || ಮಧ್ವರಾಯರ ಲೀಲೆ ನವರತುನದಾ ಮಾಲೆ | ಮಧ್ವೇಶನಾ ಸ್ಮರಣೆ ಕುಲಕೋಟಿ ಉದ್ಧರಣೆ 1 ದುರಿತ ಹತ | ಮಧ್ವರಾಯರ ಭಕುತಿ ಮಾಡೆ ಮುಕುತಿ || ಸತ್ಪಾತ್ರ | ಮಧ್ವರಾಯರ ಭಜನೆ ದುಷ್ಕರ್ಮ ತ್ಯಜನೆ 2 ಮಧ್ವರಾಯರ ದಾಸನಾದವನೆ ನಿರ್ದೋಷ | ಬಂಟ ಜಗಕೆ ನೆಂಟ || ಮಧ್ವರಮಣಾ ನಮ್ಮ ವಿಜಯವಿಠ್ಠಲನಾದ |ಮಧ್ವೇಶನಾ ಕರುಣೆ ಪಡೆದವನೆ ಶರಣ 3
--------------
ವಿಜಯದಾಸ
ಮುದ್ದು ಮೋಹನ ರಾಯಾ | ಸುಜನರಉದ್ಧರಿಸಿದ್ಯೊ ಜೀಯಾ | ಪ ಶ್ರದ್ಧಾಳುತನದಲಿ | ಬದ್ಧ ದೀಕ್ಷಿತನೆಮಧ್ವಮತವು ಎನೆ | ದುಗ್ಧಾಬ್ದಿ ಚಂದಿರ ಅ.ಪ. ಚಿಪ್ಪಗಿರಿ ಸುಕ್ಷೇತ್ರಾ | ದೊಳಗೆಅಪ್ಪ ಶ್ರೀ ವರರಿಂದಾ |ಗೊಪ್ಪ ಸದುಪ ದೇಶ | ಅಪ್ಪುತದಾಸನೆನೆಪ್ಪು ಕೊಡುತ ತಿ | ಮ್ಮಪ್ಪನೊಳಗೆಮನ 1 ತೀರ್ಥಕ್ಷೇತ್ರ ಚರಿಸೆ | ದೇಹವುಸಾರ್ಥಕಾಯಿತು ಎನಿಸೀ |ಯಾತ್ರೆ ಮಾಡಿದೆ ಸ | ತ್ಪಾತ್ರರ ಸೇರುತಗಾತ್ರ ಗೈಸಿದೆ ಪಾವಿ | ತ್ರ್ಯ ಬಾಹ್ಯಾಂತರ 2 ಗುರುಗೋವಿಂದ ವಿಠಲನೇ | ಪರತತ್ವಸರ್ವೋತ್ತಮನವನೇ |ಒರೆಯುತ ಸುಜನರ | ಪರಿಪಾಲಿಸಿದಿಯೊವರಬಳ್ಳಾಪುರದಲಿ | ವಿಠಲನ ಸನಿಯ 3
--------------
ಗುರುಗೋವಿಂದವಿಠಲರು
ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಲಾಲಿ ಗುರು ಮಧ್ವನಾಮ ಪ ತ್ರೇತೆಯಲಿ ಸಾಗರವ ದಾಟಿ ನಿಮಿಷದಲಿ ಸೀತೆಗುಂಗರ ಕೊಟ್ಟು ಕುಶಲ ತಿಳಿಸುತಲಿ ದೂತರಾವಣಗೆ ಶೌರ್ಯಗಳ ತೋರುತಲಿ ಸೀತೆಯ ಕ್ಷೇಮ ರಘುನಾಥಗರುಹುತಲಿ 1 ದ್ವಾಪರದಿ ಕೃಷ್ಣನಿಗೆ ಪರಮಾಪ್ತನಾಗಿ ದ್ರೌಪದಿಯ ವಚನವನು ಸಲಿಸಬೇಕಾಗಿ ಕೋಪದಲಿ ಖಳನ ಸೀಳುತ ತೃಪ್ತನಾಗಿ ಈ ಪರಿಯಲಿ ಹರಿಗೆ ಅರ್ಪಿಸುತ ಚನ್ನಾಗಿ2 ಮಧ್ವಮತವನುದ್ಧರಿಸಬೇಕೆನುತ ಶ್ರದ್ಧೆಯಲಿ ಕೃಷ್ಣನ್ನ ಸೇವಿಸುತ ಸತತ ಮುದ್ದು ಕಮಲನಾಭ ವಿಠ್ಠಲನ ಸ್ಮರಿಸುತ್ತಸದ್ಗ್ರಂಥ ರಚಿಸಿ ಬದರಿಯಲಿ ವಾಸಿಸುತ 3
--------------
ನಿಡಗುರುಕಿ ಜೀವೂಬಾಯಿ
ವರ ಮಂತ್ರಾಲಯದೊಳು ಘನವಾಗಿ ನೆಲಸಿರ್ಪ ಪರಮ ಸದ್ಗುರುವರ್ಯ ಶ್ರೀ ರಾಘವೇಂದ್ರ ಪ ತವಕದಿಂ ದಿನದಿನವು ತೇಜವನು ಬೆಳಗುವೆ 1 ನರನಂತೆ ಮೆರೆಯುವ ಜಯಮುನಿಕೃತಶಾಸ್ತ್ರ ಪರಿಮಳವನು ನೀನು ಪಸರಿಸಿದೆಯಲ್ಲವೆ 2 ಮಧ್ವಮತವೆಂಬ ದುಗ್ಧಸಾಗರದೊಳು | ಉದ್ಭವಿಸಿದ ಪೂರ್ಣ ಹಿಮಕರ ತೇಜ 3 ಅಸುರನಂದನನಾಗಿ ನರಹರಿಯನೆ ಕಂಡ ಸಿರಿ ಗುರುರಾಘವೇಂದ್ರ 4 ರಾಜೇಶ ಹಯಮುಖ ಭಜಕರೊಳಗೆ ನೀನು ರಾಜಿಪ ಸುರತರುವಂತಿರ್ಪೆ ಗುರುವೆ 5
--------------
ವಿಶ್ವೇಂದ್ರತೀರ್ಥ
ವಾದಿರಾಜರು ಸಾಗಿಬಾರಯ್ಯ ಗುರುವೆ ವಾದಿರಾಜೇಂದ್ರಾರ್ಯ ಬಾಗುವೆ ನಾ ನಿನಗೆ ಶಿರವಾ ಪ. ಭಾಗವತರ ದುರಿತಾಘಂಗಳನೆ ಕಳೆದು ಬಂದಾ ದುರ್ವಾದಿಗಳನೆ ಮರೆದು ಸುರರೆಲ್ಲ ಇವರೆ ಮೇಲ್ ಪೂ ಮಳೆಯಗರೆದು ತುಂಬುರರು ನರದರು ಗಾನಗಳಿಂದ ಮೆರೆದು ಘಲುಘಲು ಘಲುರೆಂದು, ಅಪ್ಸರರು ನಾಟ್ಯಗಳ ಕುಣಿದು ಅ.ಪ. ಹೊದ್ದ ಕಾವೆ ಶಾಟಯಲೊಪ್ಪುವಾ ಶ್ರೀ ಮುದ್ರಿ ಗಂಧಾಕ್ಷತೆಯಿಂದಾ ಗಳದಲ್ಲಿ ಶ್ರೀ ತುಳಸಿ ಪುಷ್ಪಮಾಲೆಗಳಿಂದಾ ಝಗಝಗನೆ ಮುಖಕಮಲಳ್ಹೋಳವೋದು ಯೆಂದಾ ಋಜುಗಣದವರಹುದೆಂದು ಪೇಳುವಾನರನಿಂದಾ ಮಾಡುವವರಿಗೆ ಕ್ರಿಮಿಕೀಟಗಳು ದುರುವುವುದೇಹದಿಂದಾ ಬಂದ ಜನರಿಗ್ಹರುಷ ಬಡಿಸುವದರಿಂದಾ ಮುದದಿಂದಾ 1 ಏನುಪೇಳಲಿ ಗುರುವೆ ನಿನ್ನ ಮಹಿಮೆಯು ನೋಡಲಾಶ್ಚರ್ಯವೋ ಭೂತರಾಜರಿಂದ ಪೂಜೆಗೊಂಬುವ ಛಂದವೋ ಧಿಂ ಧಿಮಿ ಧಿಮಿಕೆಂದು ಕುಣಿದಾಡುವಾನಂದವೊ ಯಡಬಲದಿ ದ್ವಾರ ಪಾಲಕರಿರುವಾನಂದವೋ ಮುಕ್ತಿಯನೆ ಕೊಡುವಾ 2 ನಿನ್ನಂಥಾ ಕರುಣಿ ಗುರು ಇನ್ನಿಲ್ಲ ಧರೆಯೊಳು ಮನ್ನೀಸಿ ಸಲಹಯ್ಯ ಮಹರಾಯ ಘನ್ನ ಸಂಸಾರದೊಳು ಬನ್ನಪಟ್ಟು ಬಹಳ ನೊಂದೇನೀ ಕೈಪಿಡಿದು ಎಂದು ನಿಂದೀನೀ ಉದ್ಧಾರ ಮಾಡಬೇಕೆಂದು ಬಂದೀನಿ ಮಂದ ಭಾಗ್ಯ ಜೀವನ ಕುಂದುಗಳೆಣಿಸಿದಾಗೊದೊ ಇಂದು ಅಡಿಗಡಿಗೆ ನಮೋ ಬೇಡುವೆನೋ ಬಂಧೊ 3 ರುಕ್ಮಿಣಿ ಕಳುಹಿದಾ ವಾಲೆಯು ತಾನು ಶ್ರಿ ಕೃಷ್ಣಗರ್ಪಿಸಿದನು ದ್ವಿಜನು ಸಾಮಾನ್ಯವಲ್ಲವೋ ಈತ ಗುರುರಾಜನೆಂದೆನಿಸೀದಾ ದುರ್ವಾದಿಗಳು ಜಯಸೀದಾ ಪವಮಾನರಾಯನೆಂದೆನಿಸಿದಾ ಸುರರಿಗಮೃತವನುಣಿಸೀದಾ ವೃಂದಾವನ ಚಾರ್ಯರಿಂದ ಸೇವೆ ಸ್ವೀಕರಿಸೀದಾ ಸುಖವಸುರಿಸೀದಾ 4 ಸ್ವಾದೀಯಪುರದಲ್ಲಿ ಇರುವರೋ ಗುರುರಾಜರು ಅಮೃತ ಪಾನ ಬಂದ ಸೇವಕರಿಗಭೀಷ್ಟವ ಕರೆದು ತಾ ಕೊಡುವ ದ್ರಷ್ಟ ಜನರಾ ಫಲ್ಗಳ ಮುರಿವಾ ಸರ್ವೇಶನಲ್ಲದೆಂಬೋರ ಅಳಿವಾ ಮಧ್ವಮತವನ್ನುದ್ದಾರ ಮಾಡುವ ಕಾಳೀಮರ್ಧನಕೃಷ್ಣನೊಲಿವಾ 5
--------------
ಕಳಸದ ಸುಂದರಮ್ಮ
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ಸಂಗಸುಖವ ಬಯಸಿ ಬದುಕಿರೋ ರಂಗವಲಿದ ಭಾಗವತರ ಪ ಸಂಗಸುಖವ ಬಯಸಿ ಬದುಕಿ ಭಂಗಪಡಿಪ ಭವವ ನೂಕಿ ಹಿಂಗದೇ ನರಸಿಂಗನನ್ನು ಕಂಗಳಿಂದ ಕಾಣುತಿಹರ ಅ.ಪ. ಪುಟ್ಟಿದಾರಭ್ಯ ಪರಮ ವೈಷ್ಣವಾಧ್ಯಕ್ಷರೆನಿಸಿ ನಿತ್ಯ ಮುದ್ದು ಕೃಷ್ಣ ಕೀರ್ತನೆಯನು ಪಾಡುತ ಕಾವ್ಯಕರ್ಮ ಬಿಟ್ಟು ಭಕ್ತಿಯನೆ ಮಾಡುತ ಮಧ್ವಮತವ ಪುಷ್ಟಿಗೈಸಿ ಖಳರ ಕಾಡುತ ಬಂದ ಲಾಭ ನಷ್ಟ ತುಷ್ಟಿಗಳಿಗೆ ಒಡಂಬಟ್ಟ ಬಗೆಯ ಪೇಳಲೆಷ್ಟು 1 ಭೂತದಯಾಶೀಲರಾದ ನೀತ ಗುರು ಜಗ- ನ್ನಾಥ ವಿಠಲಾಂಕಿತವನು ಪಡೆದು ಸಂಗೀತ ವೃತ್ತ ಪದ ಸುಳಾದಿಯ ಪೇಳಿ ಪ್ರೇ- ಮಾತಿಶಯದಿ ಒಲಿಸಿಕೊಂಡು ಮಧುವಿರೋಧಿಯ ಒಲಿಸಿಕೊಂಡ ಜಾತರಾಗಿ ಜವನಬಾಧೆಯ ಬಯಲು ಮಾಡಿ ಖ್ಯಾತರಾಗಿಹರು ಪುಸಿಯ ಮಾತಿದಲ್ಲ ಮರೆಯಸಲ್ಲ 2 ಮೇದಿನಿಯೊಳಗುಳ್ಳ ಗಂಗಾದಿತೀರ್ಥ ಸತಿಗಳಿವರ ಕಾದುಕೊಂಡಿಹರು ಬಿಡದೆ ಸ್ವಾದಿರಾಜೇಂದ್ರರ ಪ್ರ- ಸಾದದಿಂದ ಹರಿಕಾಥಾಮೃತ ಸಾರತತ್ವ ಸಾಧುಜನರಿಗಾಗಿ ಪ್ರಾಕೃತ ಪದ್ಧತಿಯಲಿ ಸಾದರದಲಿ ಪೇಳಿ ದುಷ್ಕøತ ದೂರಮಾಡಿ ಮೋದಿಸುವರಿಗೆಣೆಗಾಣೆ ಶ್ರೀದವಿಠಲನಾಣೆ 3
--------------
ಶ್ರೀದವಿಠಲರು
ಸಂತೆಯ ಬಿದನೂರು ಹನುಮಂತ ಎನ್ನ ಅಂತರಂಗದಲಿ ಹರಿಯ ತೋರು ಹನುಮಂತ ಪ. ಎನ್ನ ಮೇಲೆ ಪಂಥ ಬೇಡ ನಿಂತು ಬೇಡುವೆ ಹನುಮಂತ ಅ.ಪ. ಅಂಜನಾದೇವಿಯ ಕುಮಾರ ಅಂಜಿಸುವ ಈ ಘೋರ ಸಂಸಾರ ಅಂಜಿಕೆಯ ಬಿಡಿಸೆನ್ನ ಕಾಯೊ ಬಲು ಧೀರ ಸುಗುಣ ಗಂಭೀರ ಸಂಜೀವನನ ಕಂಡ ಶೂರ ಅಂಜನಾದೇವಿಯ ಕುಮಾರ 1 ಕುಂತಿಯಾ ಸುತನಾಗಿ ನೀ ಜನಿಸಿ ಬಂದೇ ಪಂಥದಲಿ ಕೀಚಕನ ಸೋಲಿಸಿ ನಿಂತು ಕಂತುಪಿತನಿಗೆ ದುರ್ಯೋದನನ ಶಿರವ ಒಪ್ಪಿಸಿದೆ 2 ಮದ್ದಿಗೆ ಭಟ್ಟರಲಿ ನೀ ಜನಿಸೀ ಮಧ್ವಮತವನೆ ಉದ್ಧರಿಸಿ ನೀ ಬದರಿಯಲಿ ನಿಂದಿ ಮುದ್ದು ಕೃಷ್ಣನ ಪೂಜಿಸಿ ಉಡುಪಿಲಿ ಸ್ಥಾಪಿಸಿ 3 ಸಂತೆಬಿದನೂರಿನಲಿ ನಿಂತು ಬಂದ ಜನಕೆ ಆನಂದ ಪಡಿಸಿ ಸಂತೋಷದಿಂದ ವರಗಳ ಬೇಡಿದವರಿಗೆ ನೀಡುತ್ತ ಕಂತುಪಿತನ ಧ್ಯಾನದಲಿ ಅನವರತ ಸೇವಿಸುತ 4 ರಾಮ ಸೇವೆ ನೀ ಸಂಭ್ರಮದಲಿ ಮಾಡಿ ರಾಮರ ಧ್ಯಾನ ಮಾಡುತ ಪೂಜಿಸುತಿರುವಿ ರಮಾವಲ್ಲಭವಿಠಲನ ಧ್ಯಾನದಿ ಪಟ್ಟಕೆ ಬರಲಿರುವಿ 5
--------------
ಸರಸಾಬಾಯಿ
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಕೂಸನು ಕಂಡಿರಾ-ಮುಖ್ಯಪ್ರಾಣನ ಕಂಡಿರಾ ಪಅಂಜನೆಯುದರದಲಿ ಹುಟ್ಟಿತು ಕೂಸುರಾಮರ ಪಾದಕ್ಕೆರಗಿತು ಕೂಸು ||ಸೀತೆಗೆ ಉಂಗುರ ಕೊಟ್ಟಿತು ಕೂಸುಲಂಕಾಪುರವನು ಸುಟ್ಟಿತು ಕೂಸು 1ಬಂಡಿಯನ್ನವನುಂಡಿತು ಕೂಸು |ಬಕನ ಪ್ರಾಣವ ಕೊಂಡಿತು ಕೂಸು ||ವಿಷದ ಲಡ್ಡುಗೆಯ ಮೆದ್ದಿತು ಕೂಸು |ಮುಡದಿಗೆ ಪುಷ್ಪವ ತಂದಿತು ಕೂಸು 2ಮಾಯಾವಾದಿಗಳ ಗೆದ್ದಿತು ಕೂಸು |ಮಧ್ವಮತವನ್ನುದ್ಧರಿಸಿತು ಕೂಸು ||ಮುದ್ದು ಶ್ರೀಪುರಂದರವಿಠಲನ ದಯದಿಂದ |ಉಡುಪಿಯಲ್ಲಿ ಬಂದು ನಿಂತಿತು ಕೂಸು 3
--------------
ಪುರಂದರದಾಸರು
ಗುರುರಾಘವೇಂದ್ರರಚರಣಕಮಲವನ್ನುಕರೆಕರೆಗೊಳಿಸುವದುರಿತದುಷ್ಕøತವೆಲ್ಲಗುರುಮಧ್ವಮತವೆಂಬವರಕ್ಷೀರಾಂಬುಧಿಯಲ್ಲಿಹರಿಯೆ ಸರ್ವೋತ್ತಮ ಸಿರಿಯು ಆತನ ರಾಣಿಅಂಧಕರಿಗೆ ಚಕ್ಷು ವಂದ್ಯರಿಗೆಸುರತರುರಾ ಎನ್ನೆ ದುರಿತರಾಶಿಗಳ ದಹಿಸುವವರತುಂಗಾತೀರ ಮಂತ್ರಾಲಯ ಪುರದಲ್ಲಿ
--------------
ಗೋಪಾಲದಾಸರು
ಪರಮಪದವಿಯ ನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪಅಂದು ತ್ರೇತೆಯಲಿ ಹನುಮನಾಗಿ ಅವತರಿಸಿಬಂದು ದಾಶರಥಿಯ ಪಾದಕೆರಗಿ ||ಸಿಂಧುವನೆ ದಾಟಿ ಮುದ್ರಿಕೆಯಿಕ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ 1ದ್ಪಾಪರಯುಗದಲಿ ಭೀಮಸೇನ ನೆನಿಸಿಶ್ರೀಪತಿಯಪಾದಕಡು ಭಜಕನಾಗಿಕೋಪಾವೇಶದಲಿ ದುಃಶಾಸನನನು ಸೀಳಿಭೂಪರ ಬಲದೊಳಗೆ ಜರೆಜರೆದು ಕರೆದವನ 2ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನು ಸೋಲಿಸಿಖಿಲವಾದ ಮಧ್ವಮತವನೆ ನಿಲಿಸಿ ಕಾಗೆ-ನೆಲೆಯಾದಿ ಕೇಶವನ ಪರದೈವನೆಂದೆನಿಸುವನ * 3
--------------
ಪುರಂದರದಾಸರು