ಒಟ್ಟು 217 ಕಡೆಗಳಲ್ಲಿ , 54 ದಾಸರು , 201 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದವಾ ನೋಡು ನೀ ವಿಚಾರಿಸಿ ಏನೊಂದುಮಿಲ್ಲಾಗಿ ತಾನೆ ತಾನಾಗಿಹ ಪ ಅನಿಸಿಕೆ ತೋರಿಕೆ ಅಡಗುತಲಿರುತಿರೆ ತನಿನಿದ್ರೆಯೆನಿಸದ ಘನಪದವಾಗಿಹ ಮನಸಿನಿಂದಾಚೆಗೆ ನಿಜವಾಗಿ ನೆಲಗೊಂಡ 1 ಇದೇ ಬ್ರಹ್ಮಾನಂದವು ನೋಡೈ ಸದಾ ನಿರ್ವಿಕಲ್ಪವಾಗಿರುವಾ ಆ ಸ್ಥಿತಿಯನೆ ಗುರುತಿಸಿ ಅನುಭವಿಸುತದನಾ ಮರಳಿ ಜಾಗರದಲಿ ನೆನೆಸಿ ಆ ಸ್ಥಿತಿಯನು ಮರಣರಹಿತವದು ಅದೇ ಪರಮಾತ್ಮನುಗುರುಶಂಕರನು ಪೇಳ್ದ ಅದೇ ತಾನು ಎನ್ನುತ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಆವ ಕಾರಣ ಮೊಗವ ತಿರುಗಿಹಿದ್ಯೊ ಪೇಳು ಭೂವರಹ ಸ್ವಾಮಿ ಪುಷ್ಕರಣಿ ತೀರಗನೆ ಪ ರಥ ಸಮೂಹಗಳೇರಿ ನೀ ಪ್ರಕಾಶಿಪ ಬಗೆಯೇ ಸತಿಯ ಲಾವಣ್ಯಾತಿಶಯವ ನೋಡುವ ಬಗೆಯೋ ಮಿತಿಯಿಲ್ಲದಸುರರ ಉಪೇಕ್ಷೆ ಮಾಡುವ ಬಗೆಯೋ ಪತಿತ ಪಾವನ ಪೂರ್ಣಕಾಮ ನಿನಗೆ ನುತಿಸಿ ಬಿನ್ನೈಸುವೆನು ಪೇಳೋ ಗುಣಧಾಮಾ 1 ಭಜಕರೆನ್ನನು ಬಿಡರೆಂಬ ಮನಸಿನಾ ಬಗೆಯೇ ಅಜಭವಾದಿಗಳ ಸಂಸ್ತುತಿಗಳಾಲಿಪ ಬಗೆಯೋ ರಜನೀಚರರ ಸದೆಯ ನಾಟ್ಯವಾಡುವ ಬಗೆಯೇ ಭುಜಗ ಭೂಷಣ ಪೂಜ್ಯ ಚರಣ ತ್ರಿಜಗದ್ವಿ ಲಕ್ಷಣ ಸುರೂಪಾ ನಿರ್ಲೇಪ 2 ಅನುಗರೊಶ ನೀನಾದಡೆಮ್ಮನ ಮರೆವರೆಂದು ವನತಿಗಾರರಿಯದಂತುಪದೇಶಿಸು ಬಗೆಯೋ ಘನಲಕ್ಷಣ ಮುಖಾಬ್ಜವನು ಚುಂಬಿಸುವ ಬಗೆಯೋ ವನಜ ಸಂಭವನ ನಾಸಜನೆ ಜಗ ಜ್ಜನಕ ಜಗನ್ನಾಥವಿಠ್ಠಲ ಕೃಪಾಸಾಂದ್ರಾ 3
--------------
ಜಗನ್ನಾಥದಾಸರು
ಇದನೆ ಪಾಲಿಸೆನಗೆ ದೇವ ಸುದಯದೇನುಕೊಟ್ಟರು ಒಲ್ಲೆ ಪ ಸದಾ ಎಡೆಬಿಡದೆ ನಿಮ್ಮ ಸದಮಲ ನಾಮೆನ್ನೊದನಕೆ ಅ.ಪ ಹಲವು ಚಿಂತನೆಯೊಳಗಿರಲಿ ನಲಿಯುತಿರಲು ಮಲಗಿರಲಿ ಚಲಿಸದೆ ತವ ಚೆಲುವಮೂರ್ತೆ ನ್ನೊಳನೇತ್ರದ್ಹೊಳೆಯುತಿರಲಿ 1 ಘನತರದ ದುಃಖದೊಳಗೆ ಅನುಪಮ ಆನಂದದೊಳಗೆ ಕನಸುಮನಸಿನೊಳಗೆ ನಿಮ್ಮ ನೆನವು ಕ್ಷಣ ಮರೆಯದಂತೆ 2 ಕ್ಷೇತ್ರದಿರಲಿ ಯಾತ್ರದಿರಲಿ ಧಾತ್ರಿ ತಿರುಗುತ್ತಿರಲಿ ಜಗ ತ್ಸೂತ್ರ ಶ್ರೀರಾಮ ನಿಮ್ಮ ಪಾದ ಮಾತ್ರೆನ್ನ ಮಂಡೆಮೇಲೆ ಇರಲಿ 3
--------------
ರಾಮದಾಸರು
ಇಂದು ಎನ್ನ ಜನುಮ ಸಾಫಲ್ಯವಾಯಿತು | ಬಂದು ಎನ್ನ ಮೊದಲೆ ಪುಣ್ಯ ಕೈಗೂಡಿತು ಧ್ರುವ ಭಾನುಕೋಟಿ ತೇಜವಾಗಿ ರೂಪದೋರಿತು ತಾನೆ ತನ್ನಿಂದೊಲಿದು ದಯವು ಬೀರಿತು ಜ್ಞಾನ ಭಕುತಿ ವೈರಾಗ್ಯವನ್ನು ಅರುಹಿತು ನಾನು ನೀನು ಎಂಬ ಅಹಂಭಾವ ಹರಿಯಿತು 1 ಎಂದು ಇಂದಿರೇಶನ ಕಾಣದ ಕಣ್ಣದೆರೆಯಿತು ಬಂದು ಬೀಳುವ ಭವಪಾಶದ ಬಲಿಯು ಹರಿಯಿತು ಚಂದವಾಗಿ ಸದ್ಗುರು ಕರುಣ ಮಳೆಯು ಗರೆಯಿತು ಹೊಂದಿ ಹರುಷ ಪಡುವಾನಂದ ಪಥವು ದೋರಿತು 2 ಕಣ್ಣು ಕಂಡು ಪಾವನವಾಯಿತು ವಾಸುದೇವನ ಎನ್ನ ಮನಸಿನಂತಾಯಿತು ಪುಣ್ಯಸಾಧನೆ ಧನ್ಯಗೈಸಿತು ಮಹಿಪತಿ ಪ್ರಾಣಜೀವನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದುವೆ ಕೈವಲ್ಯವು | ಸದ್ಗುರುವೇ | ನಿಮ್ಮಿಂದೆವೆ ಕೈವಲ್ಯವು | ನಂದನ ಕಂದ ಮುಕುಂದನ | ಛಂದದಿ ನೆನೆವುತಾನಂದದಲಿಪ್ಪರಾ ಪ ಭಂಗ ಬಡುವಾ ಭವದಾ | ಚಿರಳಿಯೆನಿಸ್ಸಂಗ ಶಸ್ತ್ರವ ವಿಡಿದಾ | ಹಂಗವಳಿದು ದೇಹದಾ ಪ್ರಪಂಚದ ರಂಗನೊಳಗ ಬೆರೆದಾ | ಅನುದಿನ | ಮಂಗಳ ಹರಿಚರಿತಂಗಳ ಕೇಳುವಗಿಂದೇ 1 ಕಂತು ಪಿತನ ಧ್ಯಾಯಿಸೀ ಮನಸಿನಿಂದಾ | ಅಂತರಂಗದಿಪೂಜಿಸೀ | ಶಾಂತಿಯ ಗುಣ ಧರಿಸೀ | ತಂತು ವಿಡಿದು ನಿಶ್ಚಿಂತದಿ ಇಹಪರ ಭ್ರಾಂತಿಯಳಿದು ವಿಶ್ರಾಂತಿಯ ಪಡೆದವಗಿದೇ2 ಮುಂದಾಗುವ ಮುಕ್ತಿಯನು ಗುರುದಯದಿ | ಇಂದೇಕಾಣುತ ಧನ್ಯನು | ಸಂದೇಹ ವಳಿದನು ತುರ್ಯಾತೀತಾ | ವಂದಿಸಿ ಭಾವದಿ ತಂದೆ ಮಹೀಪತಿ | ದ್ವಂದ್ವ ಚರಣವನು ಹೊಂದಿದ ನಂದನಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವುಗಳ ಹಾವಳಿಗಂಜುವಳಲ್ಲ ಅ ಲ್ಲವುಗಳ ಸ್ಮøತಿಗೆ ನಾನಂಜುವೆನೆ ಪ ಚಂದ್ರ ಚಂದ್ರಿಕೆಯು ಉದಯಿಸಲ್ಯಾತಕೆ ನಿಂದ್ರಿಸುವೆನೆ ನಾನದರನ್ನು ಇಂದ್ರನನುಜನಾ ಶ್ರುತಿಗೆ ಸ್ಮøತಿಗೆ ಬರಲು ನಿಂದ್ರಿಸಲಾರೆನೆ ನಿಮಿಷ ಮನ 1 ಪಲ್ಲವಿಸವ್ಯಾತಕೆ ಚೂತ ತರುಗಳಿಗಿನ್ನು ನಿಲ್ಲಿಸುವೆನೆ ಅದರುಲ್ಬಣವ ಪಲ್ಲವ ಪಾದವ ಮನಸಿಗೆ ಬಂದರೆ ತಲ್ಲಣಿಸುವೆನೆ ತಾವರೆ ನಯನೆ 2 ಅಂಬುದಗಳೆಲ್ಲ ಅಂಬರವೇರಲಾ ಇಂಬು ಕೊಡೆ ಅಂಬುದ ಶ್ಯಾಮನು ಮನದಲಿ ನಿಲಲು ಕಂಬು ಕಂಠಿ 3 ಕುಂದ ಕುಸುಮಗಳು ವಿಕಸಿತವಾದರು ಅಂದಗೆಡುವುದಿಲ್ಲ ಮನಸಿನಲಿ ಕುಂದರದನ ಎನ್ನ ಮನಸಿಗೆ ತೋರಲು ಕಂದಿ ಕುಂದುವೆ ಮನ ಮಂದಿರದಿ 4 ಏವಮಾದಿಗಳೆಲ್ಲ ಏನು ಮಾಡವೋ ವಾಸು- ದೇವವಿಟ್ಠಲ ಸ್ಮøತಿ ಬಾರದಿರೆ ಶ್ರೀವರ ಚಿತ್ತಕ್ಕೆ ಬಂದರೆ ನಿಂದರೆ ತಾವರೆನಯನೆ ನೀ ತಂದು ತೋರೆ 5
--------------
ವ್ಯಾಸತತ್ವಜ್ಞದಾಸರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಊರ್ವಶಿ : ಬಂದ ಕಾಣೆ ಗೋವಿಂದ ಕ್ಷೀರ- ಸಿಂಧುಶಯನ ವನದಿಂದ ಇಂದಿರೇಶ ಮುದದಿಂದ ಮೌನಿಮುನಿ- ವೃಂದದಿಂದ ಸ್ತುತಿವಂದನೆಗೊಳ್ಳುತ1 ಏಸು ಲೋಭಿಯೊ ತಿಮ್ಮಶೆಟ್ಟಿ ಒಂದು ಕಾಸಿಗೆ ಮಾರುವ ರೊಟ್ಟಿ ದಾಸರ ಕೂಡಿ ಜಗಜಟ್ಟಿ ಬಹು ದೇಶವ ತಿರುಗುವ ಶೆಟ್ಟಿ ದೂಷಣಾರಿ ಪಾದಾಶ್ರಿತಜನರಭಿ- ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ2 ದೊಡ್ಡವನೈ ಮಹಾರಾಯ ಹಳೆ ದುಡ್ಡಿಗೆ ನೀಡುವ ಕೈಯ ಅಡ್ಡಿಗೈದರೆ ಬಿಡನಯ್ಯ ಇವ ಬಡ್ಡಿಕೇಳುವ ತಿಮ್ಮಯ್ಯ ದಡ್ಡುಕೇಸಕ್ಕಿಯ ಮಡ್ಡಿಪ್ರಸಾದವ ಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ3 ತಿರುಪತಿಗೆ ಪ್ರತಿಯಾಗಿ ಪಡು ತಿರುಪತಿಯೆಂದಿಹ ಯೋಗಿ ಮೆರಸುವನೈ ಸ್ಥಿರವಾಗಿ ಶ್ರೀ ವರ ವೆಂಕಟ ಲೇಸಾಗಿ ಶರಣರು ಏನೆಂದು ಸಂತೋಷಿಪ ಕರುಣಾಕರ ಚಪ್ಪರ ಶ್ರೀನಿವಾಸನು4 ಈ ಪರಿಯಲಿ ಒಲಿದಿಪ್ಪಾ ಬಹು ಕಾಪಟ್ಯರಿಗೆ ತಾನೊಪ್ಪನಮ್ಮ ಗೋಪಾಲಕ ಜಗದಪ್ಪ ಶ್ರೀಪರಮಾತ್ಮ ನಾನಾಪರಿ ವಿಭವದಿ ಗೋಪುರದಲಿ ತಾ ವ್ಯಾಪಿಸಿ ನಿಂದನು5 ರಂಭೆ : ನಾರೀವರ್ಯಾರಮ್ಮ ನೋಡಲು ಸಾರಹೃದಯರಮ್ಮ ತೋರಣಛತ್ರಚಾಮರ ಬಿರುದುಗಳಿಂದ ಭೂರಿ ವಿಭವದಿಂದ ಸಾರಿಬರುವರಮ್ಮ1 ಕರದಿ ಕಲಶವಿಹುದು ಶಾಲಿನ ನಿರಿ ಮುಂದಿರುತಿಹುದು ಬೆರಳಿನೊಳುಂಗುರು ವರ ದ್ವಾದಶನಾಮ ಧರಿಸಿ ಸಮಂತ್ರೋಚ್ಚರಿಸುತ ಬರುವರು2 ಮಂದಿಗಳೊಡ್ಡಿನಲಿ ಬರುವರು ಮಂದಸ್ಮಿತದಲಿ ಚಂದದಿ ಜನಗಳ ಸಂದಣಿ ಮಧ್ಯದಿ ಇಂದಿರೆಯರಸನ ಧ್ಯಾನದಿ ಬರುವರು3 ಹಿಂಗದೆ ಬರುತಿಲ್ಲಿ ಮನಸಿನ ಇಂಗಿತವರಿತಿಲ್ಲಿ ಬಂಗಾರದ ಭೂಷಣಸಮುದಾಯದಿ ಅಂಗಜಪಿತನಿಗೆ ಶೃಂಗಾರಗೈವರು4 ವಿಪ್ರೋತ್ತಮರ ಗುಣ- ಕೆಂತು ಸೈರಣೆಯಾಂತು ನಾನಿರಲಿ ಚಿಂತಿತಾರ್ಥವನೀವ ಲಕ್ಷ್ಮೀ- ಸಂತಸದಿ ಪೂಜಾದಿ ಸತತಿ- ಯಾಂತಕೊಂಡಿಹೇಕಾಂತಭಕ್ತರು1 ಕೀರ್ತಿಯನು ಧರಿಸಿ ಮ- ತಾವೆಂದು ಧರ್ಮವನು ಪಾಲಿಸಿ ಸಿಂಧುಶಯನನ ಚಾರುಚರಣ- ದ್ವಂದ್ವಕಾನತರಾಗಿ ಲೋಕದಿ ವಂದ್ಯರೆನಿಸಿಯಾನಂದ ಪರರಿವ- ರೆಂದು ಶ್ರೀಗೋವಿಂದ ನಡೆಸುವ2 ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿ ಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿ ವಾದಗೈವ ಕುವಾದಿಗಳ ಮನ- ಭೇದಿಸುತ ನಿಜವಾದ ಮಾರ್ಗವ ಸಾಧುಗಳಿಂದ ದೃಢವಾದ ಮಾತಿದು3 ಮೇಗರೆಡಂಭಮಾತಲ್ಲ ಧನಿಯ ಕು- ಗೊಂಬರೆ ಎಲ್ಲ ಸಂತಸ ಸಂಭ್ರಮದಿ ವೇದ್ಯಾಂಬುನಿಧಿಯಲಿ ತುಂಬಿರುವರೀ ಕುಂಭಿನಿಯೊಳು ಜ- ಸಂಬಡುವುದು ವಾಸಿಷ್ಠಗೋತ್ರಜ- ರೆಂಬ ವಿಪ್ರಕದಂಬಪೂಜ್ಯರು4 ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆ ಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1 ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆ ಮಹಾಲೀಲೆ2 ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇ ಲೀಲೆಯ ನಾನರಿಯೆ3 ಫಾಲೇಂದು ಕುಂದದ ವರ್ಣಕೋಲು ಚಾಮರಗಳ ನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು4 ಚಂಡವೈಶ್ವಾನರನ ತೇಜಾಖಂಡದಿಂದೋರಂತೆ ಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ5 ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿ ಆದಿನಾರಾಯಣ ಮದುಸೂದನನೆ ಮುದದಿ6 ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರು ನಾದಿನಿ ಕೇಳಿದರ ಪರಿಯನೀ ದಯದಿಂದುಸುರು7 ಊರ್ವಶಿ :ಭಾವೇ ನೀ ಕೇಳೆ ಇದನು ತ್ರೈಲೋಕ್ಯ- ದೇವನಾಗಮನವೆಲ್ಲನೂ ದೀವಟಿಗೆ ಸೇವೆಯೆಂದು ಪೇಳುವರು ಭಾವುಕರು ಮನದೊಳಂದು1 ಸಾಯನವನು ಸುರಿದು ಸಾವಿರ ಸಾಲದು ಶ್ರೀಯರಸನ ಮಹಿಮೆಯರಿವದಾರಿಗಳವಲ್ಲ3 ದೈತ್ಯವಿನಾಶನ ಜಯಜಯ ಜಾಹ್ನವಿತಾತ ಜಯಜಯ ಜಗದಾತ ಆಶ್ರಿತ ಸುರಭೂಜ ತೋರುತ ಒಲಿದು4 * * * ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ- ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ1 ಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2 ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ- ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ3 ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ- ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ4 ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥ ಮೌರಿ ಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5 ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ- ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ6 ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ- ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ7 ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ- ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ8 ನಿತ್ಯ ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ9 ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದ ಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ10 ನೋಡೆ ತಂಗಿ ನಮ್ಮ ದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ11 ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ- ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತು ಮೀರುವೆ ಮಾಯವಾ ಪ. ಮಾಯಾ ಕಂತು ಕಂತು ಜನಕ ಹರಿಯೆ ಸಂತತ ಗೃಹಧನ ಭ್ರಾಂತಿಗೆ ಸಿಲುಕುತಾ ತಂತ್ರವಾದೆನು ಸರ್ವತಂತ್ರ ನೀ ಕರುಣಿಸು ಅ.ಪ. ದೇಹವೆ ನಾನೆಂಬ ಮೋಹದಿ ಬಹು ವಿಧ ಮೋಹಗೊಂಡನುದಿನವು ಆಹಾರ ನಿದ್ರಾ ಮೈಥುನಗಳೆ ಗತಿ ಎಂಬ ಹಾಹಾಕಾರವು ಬಿಡದು ಇಹಪರಗಳ ಸನ್ನಾಹ ಒಂದನು ಕಾಣೆ ಗೇಹಾಂಧಕೂಪಮಹಾಹಿಮುಖದಿ ಸಿಕ್ಕಿ 1 ವೇದವಿಹಿತ ಕರ್ಮವಾದರು ಮಾಡದೆ ಸಾಧು ಮಾರ್ಗವ ಮೀರಿದೆ ಮಾದಿಗನಂತೆ ಮನಸಿನಲಿ ಬಹು ವಿಧ ಕಪಟ ತಾಳಿದೆ ವ್ಯಾಧಿ ಪೀಡಿತ ದೇಹ ಬಾಧೆಯ ಸಹಿಸದೆ ಶ್ರೀದ ನಿನ್ನಯ ಪದ್ಮ ಪಾದವೆ ಗತಿಯೆಂಬೆ 2 ಮತಿವಂತ ಜನರ ರಕ್ಷಿಪುದು ದುರ್ಘಟವೆ ಶ್ರೀ- ಪತಿ ನಿನಗುಸುರುವದೆ ಶತಕೋಟಿ ಮಿತ ಜನ್ಮಾರ್ಜಿತ ಪಾಪ ತತಿ ನೀ ಸಂ- ಸೃತನಾಗೆ ನಿಲುವುಂಟೆ ಪತಿತ ಪಾವನನೆಂಬ ಪರಮಾತ್ಮ ಶೇಷಾದ್ರಿ ಪತಿ ನೀನೆ ಗತಿಯೆಂದು ಸತತ ನಂಬಿದೆ ದೇವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಎಂದಿಗೆ ಕಾಂಬುವೆ ಇಂದಿರೇಶನೆ ನಿನ್ನ ಪಾದ ಕೃಪೆಯ ಪ ಒಂದರಲವ ನಿಂದು ಒಂದೇ ಮನದಿ ನಿನ್ನ ಮಂದ ಭಾಗ್ಯನು ನಾನು ಅ.ಪ ಎನ್ನ ಮನಸಿನ ಚೇಷ್ಟೆ ವರ್ಣಿಸಲಳವಲ್ಲ ಕ್ಷಣಕೊಂದು ಪರಿಯಪ್ಪುದು ಘನದೃಢ ಹರಿಪಾದ ನೆನೆಯುವುದು ನಿಮಿಷದಿ ಎಣಿಯಿಲ್ಲದೈಶ್ವರ್ಯವನು ಭೋಗಿಸುವುದು 1 ಗಳಿಗೆಯೊಳ್ದಶಲಕ್ಷ ಸುಲಭದಿಂ ಗಳಿಸರ್ಥ ಬಲವಾಗಿ ನಿಲಯದಿಟ್ಟು ಲಲನೆಯೊಳೊಡಗೂಡಿ ಬಲುಸೌಖ್ಯ ಬಡುಕೊಂಡು ಗಳಿಗೆಯೊಳ್ ದೇಶಾಂತರಕೆಳಸುವುದಭವ 2 ಅರಿಗಳಂ ಬಂಧಿಸಿ ಸೆರೆಯೊಳಿಟ್ಟರಲವದಿ ಶಿರವರಿಪೆನೆನುತಿಹ್ಯದು ಪರಮ ವೈರಾಗ್ಯದಿಂ ಚರಿಸುವುದರಲವದಿ ಪರಲೋಕ ಸಾಧನದಿರುತಿಹ್ಯದಕಟ3 ದೃಢದಿ ನಡೆವುದು ನಿಮಿಷ ಪೊಡವಿಜನಕೆ ಸತ್ಯ ನುಡಿಯು ಬೋಧಿಸುತಿಹ್ಯದು ದೃಢತರಬಲದಿ ತಾ ಕಡುಗಲಿಯೆನಿಸೊಂದೇ ಕೊಡೆಯಿಂದಲಾಳುವುದು ಪೊಡವಿಯಂ ಸಕಲ 4 ಕಾಮಿಸುತೀಪರಿ ಕಾಮಕೊಳಪಡಿಸೆನ್ನ ಪಾಮರನೆನಿಸುವುದು ಸ್ವಾಮಿ ಶ್ರೀರಾಮ ಎನ್ನ ಪಾಮರಮನಸಿನ ಕಾಮಿತವಳುಕಿಸಿ ಪ್ರೇಮದಿಂ ಸಲಹಯ್ಯ 5
--------------
ರಾಮದಾಸರು
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಲ್ಲಿ ನೋಡಿದರಲ್ಲಿ ಚನ್ನಕೇಶವನು ಪುಲ್ಲಲೋಚನನಾದ ಶ್ರೀ ಕೃಷ್ಣನು ಪ ಭೂತಳ ಪಾತಾಳ ಸಕಲ ಲೋಕಗಳಲ್ಲಿ ಭೂತ ಪ್ರೇತಾಳ ಕ್ರಿಮಿ ಜಂತುಗಳಲ್ಲಿ ಮಾತು ಚೇಷ್ಟಗಳಲ್ಲಿ ಕೆರೆ ಭಾವಿ ವನದಲ್ಲಿ ಕೋತಿ ಖಗವೃಂದ ಪಶುವರ್ಗಂಗಳಲ್ಲಿ 1 ವೇದ ಶಾಸ್ತ್ರಗಳಲ್ಲಿ ಸರ್ವ ಧರ್ಮಗಳಲ್ಲಿ ಬೋಧಕ ಮೊದಲಾದ ಗುರು ವರ್ಗದಲ್ಲಿ ಪಾದ ಪಾದಗಳಲ್ಲಿ ಸಾಧು ಸಜ್ಜನರಲ್ಲಿ ವಾದ್ಯ ಮೃದಂಗಾಗಿ ನಾದಂಗಳಲ್ಲಿ 2 ಕಣ್ಣುಗಳಿಗೆಸೆಯುವ ಸಕಲ ವಸ್ತುಗಳಲ್ಲಿ ಮಣ್ಣಿನಲಿ ಸರ್ವತ್ರ ಘನ ಸೃಷ್ಟಿಯಲ್ಲಿ ಬಣ್ಣಿಸಲ್ಕಾಗದ ಹರಿ ಕೀರ್ತನೆಗಳಲ್ಲಿ ಹೆಣ್ಣು ಹೊನ್ನು ಮಣ್ಣು ತ್ರಿವರ್ಗದಲ್ಲಿ 3 ಸಕಲ ಚರ ಪ್ರಾಣಿಯಲಿ ಅಚರ ಜೀವಗಳಲ್ಲಿ ಸಕಲ ಸ್ತ್ರೀ ಪುರುಷರಲಿ ಸುರದನುಜರಲ್ಲಿ ಸಕಲ ಧಾನ್ಯಗಳಲಿ ತಿಂಡಿ ತಿನಸುಗಳಲ್ಲಿ ಸುಖ ದುಃಖ ಬಹಿರಂಗ ಅಂತರಂಗದಲಿ 4 ದಿನದಲ್ಲಿ ನಿಶೆಯಲ್ಲಿ ಅನ್ನಪಾನಗಳಲ್ಲಿ ಅಣುರೇಣು ತೃಣಕಾಷ್ಟ ಸರ್ವ ದಿಕ್ಕಿನಲೀ ಕನಸಿನಲಿ ಮನಸಿನಲಿ ಪಂಚ ಭೂತಗಳಲ್ಲಿ ಜನನ ಮರಣಾತೀತ ಚನ್ನಕೇಶವನು 5
--------------
ಕರ್ಕಿ ಕೇಶವದಾಸ