ಒಟ್ಟು 35 ಕಡೆಗಳಲ್ಲಿ , 11 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡುವ ಬನ್ನಿ ಮುರಳೀಧರನ್ನ ಪ ಪಾಡುತ ಕುಣಿ ಕುಣಿದಾಡಿ ಕೊಂಡಾಡುತ ಅ.ಪ ಮನೆಕೆಲಸಗಳಿಗೆ ಕೊನೆ ಮೊದಲಿಲ್ಲವು ನೆನೆದರೆ ಬೇಸರ ಮನೆಗಳಂತಿರಲಿ 1 ಪತಿಗಳ ಸೇವೆ ಶ್ರೀಪತಿಯನೆ ಒಲಿಸಲು ಅತಿ ಸುಲಭದಲಿರೆ ಪತಿಗಳಂತರಲಿ 2 ಬಾಲೆಯರಾದರೆ ಲಾಲಿಸುವನು ಬಲು ಏಳಿರೇ ಎಮ್ಮಯ ಬಾಲರಂತಿರಲಿ 3 ಪರಪುರುಷನ ಕೂಡಿ ದುರಿತಗಳೆಲ್ಲವ ತೊರೆಯುತ ಮೈಗಳ ಮರೆಯುವ ಮುದದಿ 4 ಬಂಧುಗಳೆಂದೆಮ್ಮ ಬಂಧನ ಸಾಕಮ್ಮ ಚಂದದಿ ಪ್ರಸನ್ನ ನಂದಕುಮಾರನ 5
--------------
ವಿದ್ಯಾಪ್ರಸನ್ನತೀರ್ಥರು
ಪಾಲಿಸು ಶ್ರೀಹರಿಯೆ ಯದುಭೂಮಿಪತಿಯೆ ಪ ಬಾಲಾರ್ಕ ಸಮಮುಖ ಲೋಲ ಮುರಳೀಧರ ಅ.ಪ. ನಂದ ನಂದನ ದಿವ್ಯ ಸುಂದರ ರೂಪನೆ ಬಂಧುರಾಲಕ ವರ ಮಂದಹಾಸನೆ 1 ಗೋಪ ಸುಂದರೀಗಣ ದೀಪವಿರಾಜಿತ ತಾಪಿಂಛ ಪಲ್ಲವ ನೂಪುರ ಶೋಭಿತ2 ಕಾಳೀಯ ಮರ್ದನ ನೀಲಾಂಬುದ ಪ್ರಭ ನಾಳೀಕಾನನ ಚಿತ ಲೋಲಾಕ್ಷಿ ಚಿತ್ತನೆ3 ಭವ ಭಂಗ ಮಾನುಷ ವೇಷ ಶೃಂಗಾರ ಶೋಭಿತ ಭೃಂಗಾಲಕಾರ್ಚಿತ 4 ಧೇನುನಗರ ದೊರೆ ಸಾನುರಾಗದಿ ಪೊರೆ ಗಾನ ವಿನೋದ ಹರೆ ಭಾನುಸನ್ನಿಭ ಶೌರೆ 5
--------------
ಬೇಟೆರಾಯ ದೀಕ್ಷಿತರು
ಬಾರೋ ನಿತ್ಯಾನಂದಲೀಲಾ | ಗೋಪಾಲ ಬಾಲ ಪ ಬಾರೋ ವನಜಮಾಲಾ ಬಾರೋ | ಗಾನಲೋಲಾ ಅ.ಪ ನಿನ್ನ ಕರುಣೆ ಎನ್ನೊಳಿರಲಿ ನಿನ್ನ ಚರಣ ಎನಗೆ ಸಿಗಲಿ ನಿನ್ನ ಧ್ಯಾನ ಮನದೊಳಿರಲಿ ನಿನ್ನ ನಾಮ ರಸನೆಯೊಳಿರಲಿ 1 ಮುರಳೀಧರ ಲೋಕೇಶ ಧರಣೀಧರ ವೆಂಕಟೇಶ ಶರಣಾಗತ ಕ್ಲೇಶನಾಶ ವರದಾಯಕ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಬೇಗನೆ ಕರೆತಾರೇ ಸಖಿಯೇ [ಬೆಗನೆಕರೆತಾರೆ] ಪ ನಾಗಶಯನನವ ಕೂಗದೆ ಬಾರನೆ ಅ.ಪ ಪೂತನಿ ಶಿಶುಗಳ ಫಾತಿಸುತಿಹಳೆಂಬ ಮಾತನವಗೆ ಪೇಳೆ ಭೀತಿಯತೋರಿ ಆತುರದಿಂದವ ಐತರುವನೆ ಸಖಿ ಪ್ರೀತಿಯೊಳೀವೆನೀ ರತುನದ ಹಾರವ 1 ಕರಿ ಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಮೊರೆಯಿಡುವುದ ಹೇಳೆ ಭರದಲಿ ಬರುವ ಉರಗನ ಗರಳದಿ ಕರುತುರು ನೋಯುವ ಪರಿಯ ಬಿತ್ತರಿಸಿ | ಮುರಳೀಧರಗೆ 2 ಸಂಗಡ ಬರದಿರೆ ಭಂಗಿಸುವರು ಗೋ ಪಾಂಗನೆಯರು ಎಂದು ರಂಗಗೆ ಹೇಳೇ ಇಂಗಿತಜ್ಞನು ನಮ್ಮ ಮಾಂಗಿರಿಯರಸನು ಸಂಗಡ ಬರುವನು ಸಂದೇಹವಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂಗಳಾಂಗ ಕರುಣಾಪಾಂಗ ಅಂಗಜಾರಿಪ್ರಿಯತುರಂಗ ಸಂಗ ರೂಪಜಿತ ಭವಭಂಗ ಗಂಗಾ ಜನಕ ಜಯ ಶ್ರೀರಂಗ ಪ ದೇವ ದೇವ ದಿವ್ಯ ಪ್ರಭಾವ ಭಾವನಾದಿ ದೂರ ಭಾವ ಪಾವನೈಕ ರೂಪ ನಿರ್ಲೇಪ ಶ್ರಿವಧೂಕುಚ ಕುಂಕುಮ ದೀಪ 1 ಇಂದಿರಾ ಮುಖ ಪಂಕಜಸೂರ್ಯ ಮಂದಹಾಸ ಪೂರಿತಾಸ್ಯ ಕುಂದರದನ ದಿವ್ಯಹಾರ ಬೃಂದಾವನ ವಿಹಾರಶೂರ 2 ಮುರಳೀಧರ ಗೋವಿಂದ ಮುರಾರೆ ಶರಣಜನ ಸಂರಕ್ಷಕ ಶೌರೆ ದುರಿತ ದೂರ ವರಧೇನುನಗರ ಪುರವಿಹಾರ ಪಾಲಿಸು ವೀರ 3
--------------
ಬೇಟೆರಾಯ ದೀಕ್ಷಿತರು
ಮರೆಯುವರಾರೆ ಶ್ರೀ ಮುರಳೀಧರನ ಕಂಡು ವರವ ಬೇಡದವರಾರೆ ಪಡೆಯದವರಾರೆ ಪ ಮುರಳೀದನಿಯ ಕೇಳಿ ಪರಿದೋಡದವರಾರೆ ಅವನೆಡೆ [ಪರಮಸುಖ] ಪಡೆಯದವರಾರೆ ಅ.ಪ ಕಂಜನಾಭನು ಬಂದು ಪುಂಚವನದಿ ನಿಂದು ಮಂಜುಳಗಾನವ ಮಾಡುತಿರೆ ಅಂಜುವರೇನೆ ನಿರಂಜನನವ ಪಾಪ ಭಂಜಕನೇ ತಂಗಿ ಹೋಗೋಣ ಬಾರೆ 1 ಮಂಗಳಮೂರ್ತಿ ಮಾತಂಗವರದ ಭವ ಭಂಗನ ಚರಣವ ನೋಡುವ ಬಾರೆ ಮಂಗಳ ಜಯ ಜಯ ಮಂಗಳ ಮಾಂಗಿರಿ ರಂಗಗೆ ಶುಭವೆಂದು ಪಾಡುವ ಬಾರೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಧವ ಜಯ ಜಯ ರಾಘವ ರಾಮ ಖರಾರೇ ಪ ಜಯತು ಸೀತಾಧವ ಪಾವನ ಶೌರೇ ಅ.ಪ ಜಯತು ಪೀತಾಂಬರಧರ ಶಕಟಾರಿ ಜಯ ಕನಕಾಂಬರಧರ ವಿಕಟಾರಿ ಜಯ ಜಯ ಮುರಳೀಧರ ಕಂಸಾರಿ ಜಯ ಜಯ ಶರಧರ ದಶಶಿರವೈರಿ 1 ಜಯತು ಗೋಪೀಜನಪ್ರಿಯ ಗೋಪಾಲ ಜಯತು ತಪೋಬಲ ಮುನಿಜನಪಾಲ ಜಯತು ಜಯತು ಕೌಸ್ತುಭಮಣಿಮಾಲ ಜಯ ಜಯತು ಭೂಪಾಲ ಸುಶೀಲಾ 2 ಸನ್ನುತ ನಾಮ ಜಯ ಜಯಾನತ ಮುನಿಜನ ಪ್ರೇಮಾ ಜಯತು ಜಯತು ರಾಮ ಮಾಂಗಿರಿಧಾಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಮಿಸುವೆವೆಂದಿಗೆ ಮುರಳೀಧರನ ಪ ಸುಮನಸವಂದಿತ ವಿಮಲ ಚರಿತನ ಅ.ಪ ಮಂದಮಾರುತ ಸುಮಗಂಧ ಬೀರುತಲಿರೆ ಸುಂದರವದನ ಗೋವಿಂದನ ನೊಸಲಲಿ1 ವನರುಹನೇತ್ರನ ಪರಮ ಪವಿತ್ರನ ವನಜಾಕ್ಷಿಯರೆಲ್ಲ ವನವಿಹಾರದಲಿ 2 ಹೇಮವಸನನ ಕೋಮಲ ರೂಪನ ಕಾಮಿನಿಯರು ನಾವು ಪ್ರೇಮವ ಬೀರುತ 3 ಕಲಭಾಷಣದಿಂದ ಸೆಳೆಯುತ ಮನವನು ಜಲಜಾಕ್ಷಿಯರೆಲ್ಲ ಜಲ ವಿಹಾರದಲಿ 4 ಭಾಸುರಾಂಗನ ಪರಿಹಾಸ ಮಾಡುತಲಿ ಬೇಸರವಿಲ್ಲದೆ ರಾಸಕ್ರೀಡದಿ 5 ಸಂಗೀತವ ಪಾಡಿ ರಂಗನ ಒಡಗೂಡಿ ಅಂಗನೆಯರೆಲ್ಲ ಅನಂಗ ಕೇಳಿಯಲಿ 6 ಬಿನ್ನನೆ ಬಾರೆಂದು ಕೆನ್ನೆಯ ಪಿಡಿಯುತ ಸನ್ನೆಯ ಮಾಡಿ ಪ್ರಸನ್ನಮುಖಿಯರು 7
--------------
ವಿದ್ಯಾಪ್ರಸನ್ನತೀರ್ಥರು
ಶುಕ್ರವಾರ ಕೇಶವನ ಭಜನೆ ಮಾಡಬೇಕೊ ನಮ್ಮ ಚಕ್ರಧಾರಿಯನ್ನು ಬಿಡದೆ ನೋಡಬೇಕೊ ಪ ಚಕ್ರಧಾರಿಯಾಗಿ ಸಕಲ ಚಕ್ರವರ್ತಿಗಳನು ಗೆದ್ದ ಆ ಕ್ರುರಗೆ ತಾ ವರನಿತ್ತು ನಿತ್ಯಾನಂದ ತ್ರಿವಿಕ್ರಮನನ್ನು ಅ.ಪ ಅಪ್ರಾಕೃತಮಾದ ವೈಕುಂಠನಾಥ ರಂಗಾ ಜಯ ಜಯ ಕ್ಷಿಪ್ರದಿಂದಾ ಭಕ್ತರಿಗೊಲಿಯುವಡೋಪಪತ್ರಂಗಾ ಅಪ್ರಮೇಯ ಅಚಲನಾನು ಆರೂಢರಿಗಾಧೀನವಿದಹುದೊ ನಿತ್ಯಾನಂದನೆ ಮುರಳೀಧರ ಗೋಪಾಲ ಜನಾರ್ದನ ಸತ್ಯಬ್ರಹ್ಮವೋ 1 ದಾಸದಾಸರಿಗೆ ದಾಸನಾಗಬೇಕೊ ಕೆಟ್ಟ ವೇಷ ಭಾಷೆ ದುರ್ದೋಷಗಳು ವೋಗಬೇಕೊ ಬ್ಯಾಸರಾಂತಕಮಾದ ಶ್ರೀಮದ್ದೇಶಿಕಾ ಶ್ರೀತುಲಸಿರಾಮಾ ನಾಸಿಕಾಗ್ರನಿವಾಸನೆಂದು ನಂಬಿ ನಾರಾಯಣನಂ ಬಿಡದೆ 2
--------------
ಚನ್ನಪಟ್ಟಣದ ಅಹೋಬಲದಾಸರು
ಶೂರತನವೇನೊ ಬಲು ನಾರಿ ಜನರು ನೀರೊಳಿರಲು ಪ ಸೀರೆಗಳ ಅಪಹರಿಸುತ ಬಲು ಶೌರಿ ಅ.ಪ ಸಾರಸವದನನೆ ಕಾರಣವಿಲ್ಲದೆ ನಾರಿಯರೆಮ್ಮನು ಸೇರಿ ಬಹಳ ಸರಸಗಳನ್ನು ತೋರಿ ಮಾನಸೂರೆಗೆಯ್ಯುವುದು ಭಾರಿ ನಡತೆ ಎಂದರಿತಿರುವಿಯೇನೊ 1 ಮುರಹರನೆ ಈ ಪರಿಯಲಿರುವ ಎಮ್ಮ ಕರಗಳ ಮುಗಿವುದು ತರವೇ ಬಹಳ ಮನ ಜರಿಯುವುದು ಸರಿಯೇ ಇಂತು ಕೋರುತಲಿರುವುದು ಮುರಳೀಧರನೆ ವಸನಗಳನು ಕೊಡೆಲೊ 2 ಬಿಸಜನಯನ ಇದು ಹೊಸ ಪರಿಯಲ್ಲವೆ ರಸಿಕ ಜನರು ಪರಿಹಾಸ ಮಾಡಿ ಮುಸಿ ಮುಸಿ ನಗುವರು ಶ್ರೀಶ ನಿನಗೆ ಪಸುಳೆ ಜನರ ಸಹ ವಾಸವೇ ಪ್ರಸನ್ನವದನ ಕೃಷ್ಣ 3
--------------
ವಿದ್ಯಾಪ್ರಸನ್ನತೀರ್ಥರು
ಶೌರಿ ವಿಮಲಾಂಬರಧರ ಪಾಹಿ ಮುರಾರಿ ಪ ಸುಮನಸನುತ ಪದದನುಜ ಸಂಹಾರಿ ಅ.ಪ ಸರಸಿಜಲೋಚನ ಶರಣಸಂಜೀವನ ಸುರಮುನಿಸೇವನ ಕರುಣಾಸದನ ಅರವಿಂದಾನನ ವರಮಣಿರದನ ದುರಿತವಿಮೋಚನ ನಿರುಪಮ ಗಾನ 1 ಪುರಹರ ವಿನಮಿತ ಪಾವನಚರಿತ ಧರಣಿರಮಾಯುತ ಸುರಮುನಿವಿನುತ ಫಣಿ ಫಣಿಭೂಷಿತ ಮುರಳೀಧರ ಮಾಂಗಿರಿ ಶೃಂಗಸ್ಥಿತ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಕಾರ ಶೃಂಗಾರ ಶ್ರೀಮಾಮನೋಹರ ಓಂಕಾರ ಸಾಕಾರ ಪರಮೇಶ್ವರಾ ಪ ಗಂಭೀರ ಝೇಂಕಾರ ಮುರಳೀಧರ ಗುಣ ಸುಕುಮಾರ ಬೀರ ಕರುಣಾಕರಾ ಅ.ಪ ಕಂಸಾರಿ ನರಕೇಸರಿ ಶುಭ ಜಂಭಾರಿ ಗಿರಿಧಾರಿ ದುರಿತಾರಿ ಶ್ರೀ ಮಾಂಗಿರೀ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಮುರಳೀಧರ ಕೃಪಾಕರ ಜೀಮೂತನೀಲಾಂಗ ಶೃಂಗಾರ ಪ ಸಾಮಜಭಯಪರಿಹಾರ ಕಾಮಿತ ಫಲದಾತಾರ ಸಾಮದಾನಾದಿ ಚತುರ ಪರಾತ್ಪರಾ ಶುಭಂಕರಾ ಅ.ಪ ಶಾಂತಿ ಸುಗುಣ ಪೂರಣ ಭವತರಣ ಆಂತರ್ಯ ಸಂಚಾರಣ ಭಯಹರಣ ಪೂತನೀ ಪ್ರಾಣಹರಣ ಪಾಂಡುಪುತ್ರಸಮೀಕ್ಷಣ ನೀತಿ ನಿಯಮ ಸಂತ್ರಾಣ ಮಾಂಗಿರೀಶ ಚರಣ ವಿಹರಣ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾರಸ ಚರಣವ ತೋರೋ ನಿನ್ನ [ಪಾರ] ಕರುಣಾಮೃತವನು ಬೀರೋ ಪ ಮುರಳೀಧರ ಕೃಷ್ಣ ಬಾರೋ ಎನ್ನ ಹೃದಯ ಮಂದಿರವನು ಸೇರೋ ಅ.ಪ ನಿನ್ನ ಹೊರತು ಕೈ ಹಿಡಿಯುವರಾರೋ ಎನ್ನ ಭವಗಳ ಹರಿಸುವರಾರೋ ಎನ್ನಪರಾಧವ ಮನ್ನಿಸಿ ಬಾರೋ ಪನ್ನಗಶಯನ ನೀ ನಸುನಗೆದೋರೋ 1 ನಿನ್ನ ದರ್ಶನಕಾಗಿ ಹಾತೊರೆಯುವೆನೋ ನಿನ್ನ ಸೇವೆಗೆ ಎನ್ನ ತೆತ್ತಿಹೆನೋ ನಿನ್ನ ಪರೀಕ್ಷೆಗೆ ಫಲ ನಿನಗೇನೋ ಚೆನ್ನ ಮಾಂಗಿರಿರಂಗ ಮುನಿಸೆನ್ನೊಳೇನೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್