ಒಟ್ಟು 55 ಕಡೆಗಳಲ್ಲಿ , 29 ದಾಸರು , 52 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೀವನ್ಮುಕ್ತನೆ ಇದ ಮಾಡು ನಿನಗುಂಟೆ ಜೋಡುದಿವಸದಿಂದಲಿ ದೃಢನಾಗಿ ಸಾಧಿಸುಕೇವಲ ಶಿವನೀನಾಗುವಿ ಆಗುವಿ ಪ ಏರಿಸು ವಾಯುವನು ಏರಿಸಿದ ಬಳಿಕಪೂರಿಸು ಕುಂಭವನು ಘಳಿಗಿಂತಿರಲಲ್ಲಿಭೇರಿಯ ಕಹಳಾರವ ಮೃದಂಗವಸಾರಿಯೆ ಕೇಳುತ ಶ್ರಮವನು ಹರಿಸುತ 1 ಆರು ನೆಲೆಗೆ ಮುಟ್ಟಿನಿಲ್ಲು ನಿಂತ ಬಳಿಕಕಾರಣ ಮೃಡನಾಳಪೊಕ್ಕು ಮರವೆಂದು ಕಳೆದಿಕ್ಕುವಾರಿಯಮೃತಧಾರೆ ತ್ರಿವೇಣಿಯಸಾರಸನದಿಯಲಿ ಮುಳುಗುತ ಮುಳುಗುತ 2 ಚಂದ್ರಮಂಡಲ ಎದುರಲಿ ಇರಲು ನೋಡುತಲಿಮುಂದೆ ಜೋತಿರ್ಮಯವಿರಲು ಬ್ರಹ್ಮವೆ ತಾನಿರಲುಇಂದ್ರಾದಿಗಳಿಗಳವಡದಿಹ ಸ್ಥಾನವಾನಂದದೆ ಎರೈ ಗುರು ಕೃಪೆಯಿಂದಲಿ 3 ಕರ್ಮ ಅವಿದ್ಯೆಯನುಳಿದುತಾಮರ ಸಾಧಿಪ ನಂದದಿ ಬೆಳಗುತ4 ನಿತ್ಯ ಆಗುವುದು ತಥ್ಯಾಯೋಗಿ ಜನಕೆ ಇದು ಪಥ್ಯಾ ಸತ್ಯವಿದು ಸತ್ಯಭೋಗೈಶ್ವರ್ಯದ ಮುಕ್ತಿಗಧಿಪತಿಯಾಗು ಚಿದಾನಂದ ಗುರು ನೀನಾಗಿಯೆ5
--------------
ಚಿದಾನಂದ ಅವಧೂತರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾಳಬೇಕು ಭಕ್ತಿಯೇಳಬೇಕು ಪ ತಾಳಬೇಕಾದವನು ಮೇಳದಲಿ ಬಾಳಬೇಕು ಅ.ಪ ಹಾಡಲು ತಾಳಬೇಕು ಬೇಡಲು ತಾಳಬೇಕು ಓಡಾಡಿ ಕುಳಿತು ಮಾತಾಡಲು ತಾಳಬೇಕು ನೋಡಬೇಕಾದವನು ನೋಡಲು ತಾಳಬೇಕು ಮಾಡಿ ಮುಳುಗುವ ಜನ್ಮಬೇಡೆಂದು ತಾಳಬೇಕು 1 ತಾಳರಿತಮೇಲಂತರಾಳವನು ಕಾಣಬೇಕು ತಾಳದವ ಬಾಳುವನೇ ಮೇಳದೊಳಗೇ ತಾಳ ನೋಡುವರೆಲ್ಲ ಹೂಳನೋಡಲಿಬೇಕು ತಾಳಿ ಮಾಂಗಿರಿರಂಗನೂಳಿಗಕ್ಕೆ ನುಗ್ಗಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೇವತಾಗುರುಸ್ತುತಿ ಆಶೀರ್ವದಿಸು ಗುರುರಾಜ ನಾ ಶೀರ್ಷವನೆ ಬಾಗುತ ನಮಿಸುವೆ ಜ್ಞಾನದಾತ ಕರುಣಿಸು ತಾತಾ ಆತ್ಮಾನುಭವಾ ಪಡೆವ ವರವಾ ಜ್ಞಾನನಿಧಿಯ ಬೇಡುವೆ ನಿನ್ನೋಳ್ ಮನದಿ ಜ್ಞಾನವು ಹೊಳೆಯುವತೆರನಾ ದೇವನಾನೆಂದರಿವತೆರದಿ ಜೀವಭಾವ ಮರೆವತೆರದಿ ಭಾವದಿ ನೀನೆ ನೆಲೆಸುವ ತೆರದಿ ಸಾವಿನಂಜಿಕೆ ಸರಿಯುವತೆರನಾ ಅನುಭವನಿಧಿಯೆ ಚಿನುಮಯರೂಪಾ ಮನವು ನಿನ್ನೋಳ್ ಮುಳುಗುವ ತೆರದಿ ಆ ನಾರಾಯಣ ಶಿಷ್ಯ ಶಿಖಾಮಣಿ
--------------
ಶಂಕರಭಟ್ಟ ಅಗ್ನಿಹೋತ್ರಿ
ಧ್ಯಾನವ ಕೊಡು ಹರಿಯೆ | ನಿರಂತರ ಧ್ಯಾನವ ಕೊಡು ಹರಿಯೆ ಪ ನೀನೆ ಗತಿಯೆಂದಾನುಪೂರ್ವಕ ಧ್ಯಾನ ಮಾಳ್ವರ ಜನ್ಮಕರ್ಮಗ ಳೇನು ನೋಡದೆ ಪೊರೆವೆ ನಿನ್ನ ಸುನಾಮವೆ ಸುರಧೇನುವೆಂದು ಅ.ಪ. ನಿನ್ನ ನಾಮವ ನೆನೆದು | ಅಜಾಮಿಳನು ಧನ್ಯನು ತಾನಾದನು ಈ ಭುವನದಿ ತನ್ನ ದೇಹಾತುರದೊಳನ್ಯರ ಬನ್ನ ಬಿಡಿಸುತಲಿದ್ದ ಖಳನು ನಿನ್ನ ನಾಮಸ್ಮರಣೆ ಮಾತ್ರದಿ ಘನ್ನ ಮುನಿಪತಿ ಎನ್ನಿಸಿದನು 1 ದುರುಳ ದುಶ್ಯಾಸನನು | ಸಭೆಯೊಳಗಂದು ತರಳೆ ದ್ರೌಪದಿದೇವಿಯ ಸೆರಗನ್ನು ಸೆಳೆಯೆ ಮುರಹರನೆ ಹಾ ಕೃಷ್ಣ ದ್ವಾರಕಾ- ಪುರನಿಲಯ ಪರಮಾತ್ಮ ಭಕ್ತರ ಸುರತರುವೆ ಎಲ್ಲಿರುವೆ ಏತಕೆ ಮರೆವೆ ಎನ್ನುತ ಮೊರೆಯೆ ಪೊರೆದೆಯೊ 2 ನರಕ ಕೂಪದೊಳು ಬಿದ್ದು | ಏಳುತ್ತ ಮುಳುಗುತ ಪರಿಪರಿ ಭಾಷೆಯಲಿ ಮುಂದೋರದೆ ಹೊರಳುತ್ಹೊರಳುತ ಮರುಕಗೊಳುತ ಹರಿಹರಿ ನಾರಾಯಣೆನ್ನಲು ಸುರಲೋಕವನ್ನಿತ್ತು ಸಲಹಿದೆ ವರದ ಲಕ್ಷ್ಮೀಕಾಂತ ಶಾಶ್ವತ 3
--------------
ಲಕ್ಷ್ಮೀನಾರಯಣರಾಯರು
ನಿಜವೆಂದು ತಿಳಿದು ಪೂಜಿಸೋ ಗುರುಚರಣ ಮಾಯಾ ಪ್ರಪಂಚದ ಸ್ಮರಣಾ ಪ ರಮಣೀಯರ್ಮೋಹವೆಂಬುದು ದೊಡ್ಡಶರಧಿ ಭ್ರಮಿಸಿ ನೀ ಮುಳುಗುತ್ತೇಳುವೆ ವ್ಯರ್ಥಭರದಿ ನಿಜ ಸತ್ತು ಹುಟ್ಟುವ ದೇಹ ಸಾಧ್ಯವ ಮಾಡಾ ಅ ನಿತ್ಯ ಪ್ರಪಂಚ ದೊಳ್ಕೆಡಬೇಡ ಮೂಢಾನಿಜ ನೀರ ಮೇಲಣ ಗುಳ್ಳೆಯಂತೆ ಶರೀರಾ ಬಾರಿಬಾರಿಗೆ ಸತ್ತು ಜನಿಪ ವಿಚಾರ ನಿಜ ಎಂದಿಗೂ ಮರಣತಪ್ಪದು ಕೇಳುಮರುಳೆ ಚಂದ್ರಶೇಖರನಾ ಧ್ಯಾನಿಸು ಹಗಲಿರುಳೆ ನಿಜ ಗುರುವಿಮಲಾನಂದ ಸ್ಮರಣೆಯ ಮಾಡೋ ಜನನ ಮರಣದ ಭಯವ ನೀಗಾಡೋ ನಿಜ
--------------
ಭಟಕಳ ಅಪ್ಪಯ್ಯ
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನೀ ಬಿಟ್ಟ ಬಳಿಕೆನ್ನ ಸಾಧ್ಯವೇನಿಹ್ಯದು ನೀ ಕರುಣಗೈದರೆ ಸಕಲ ಸಾಧ್ಯ್ಹರಿಯೆ ಪ ಯಂತ್ರವಾಹನೆ ಯಂತ್ರ ನಡೆಸದೆಯಿರಲು ಯಂತ್ರ ನಡೆಯುವುದೆಂತು ಸ್ವಂತ ತಾನೇ ಮಂತ್ರಗಾರಿಲ್ಲದೆ ತಂತ್ರ ತೋರ್ವುದೆ ಸ್ವ ತಂತ್ರ ನೀನಲ್ಲದೆ ಅತಂತ್ರನಿಂದೇನಹುದು 1 ಪಡೆದ ಮಾತೆಯು ಕೂಸಿನೊಡಲು ತಾ ನೋಡದಿರೆ ಒಡಲೊಳಿಟ್ಟ್ಹದಿನಾಲ್ಕುಪೊಡವಿಗಳನಾಳುವ ಒಡೆಯ ಕೊಡದಿರೆ ಕೀರ್ತಿ ಪಡೆಯುವುದೆ ಜೀವಿ 2 ನಿನ್ನಿಂದೆ ಬೆಳಗುವುದು ನಿನ್ನಿಂದೆ ಮುಳುಗುವುದು ನಿನ್ನಿಂದಳಿಯುವುದು ನಿನ್ನಿಂದಲುಳಿಯುವುದು ನಿನ್ನಿಬಿಟ್ಟಿನ್ನಿಲ್ಲ ಎನ್ನಯ್ಯ ಶ್ರೀರಾಮ ಮನ್ನಿಸಿ ಕೃಪೆಮಾಡು ಎನ್ನ ನೀ ಬಿಡದೆ3
--------------
ರಾಮದಾಸರು
ನೀನೆಂನ ಕಾಯಬೇಕೊ ಕೇಶವನೇ ನೀನೆಂನ ಸಲಹಬೇಕು ಪ ನೀನೆಂನ ಕಾಯದಿದ್ದರೆ ಕಾವರಾರಯ್ಯಾ ನಾನಂಬಿ ಮರೆಹೊಕ್ಕೆ ಶರಣರಕ್ಷಕನೇ ಅ.ಪ. ಮುಂದೆ ನೋಡಿದರೆ ಹೆಬ್ಬಾವು ನುಂಗುತಲಿದೆ ಬಂದು ಬಾಂಧವರೆಲ್ಲ ತಲೆಯ ಮೇಲೆರಿವರು ಬಂದೆನ್ನ ಕಾಯ್ವರನೊಬ್ಬ ಕಾಣೆ 1 ನಂಬುತ್ತ ಗಿಡವೇರೆ ಗಿಡವು ಬಾಗುತಲಿದೆ ನಂಬಿದ ಹರಿಗೋಲು ಮುಳುಗುತ್ತಲಿದೆಯೋ ತುಂಬಿದ ಪಟ್ಟಣ ಸೂರೆಯಾಗುತಲಿದೆ ಕಂಬನಿ ನೀಗುವ ಪ್ರಾಣೆಯಕಾಣೆ2 ಪಶುಗಳ ಕಾಯ್ದೆ ನೀ ಬಾಲ ಕ್ರೀಡೆಯೊಳಾಗ ವಿಷದ ಕಾಳಿಂಗನ ಸೊಕ್ಕನು ಮುರಿದೇ ದಶರೂಪಗಳ ತಾಳ್ದು ಸುಜನರ ಪೊರೆದಂತೆ ಶಿಶುವನು ರಕ್ಷಿಸೈ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ನೀರಿನೊಳು ಮುಳುಗುತಿರೆ ತೋರದಲಿ ಪೋಗುವರೆ ಕರ ಪಿಡಿವರೈ ತೋರು ಶೌರೇ ವಾರಿಜಾನಾಭ ಭಯ ತೋರುವರೆ ಕರುಣಾಳು ಬಾರದಿರುವಂಥ ಅಪರಾಧವೇನೆಲೊ ಹರೀ ಪ. ಪರಿ ಮನಸಿನೊಳಗೊಂದು ಪರಿ ವನಜನಯನನೆ ಭಯವ ತೋರಿ ತೋರೀ ಪರಿ ಏನೋ ಬಿನಗುದೈವರ ಗಂಡ ಪರಿಹರಿಸು ಗಂಡಾ1 ಕರಿಯ ನೀರೊಳು ಕಾಯ್ದೆ ಪೊರೆದೆ ನೀರೊಳು ಮನುವ ಧರಣಿ ಪ್ರಹ್ಲಾದರನು ಜಲದಿ ಸಲಹೀ ಬಿರುದು ಪೊತ್ತವ ಎನ್ನ ಪರಿಯನರಿಯೆಯೆ ದೇವ ಪೊರೆವರಿನ್ನಾರು ಹೇ ಕರುಣಾಳು ಶರಣೂ 2 ಮುಳುಗಿಹೆನು ಸಂಸಾರ ಗಣಿಸಲಾಗದ ಕರ್ಮ ಕರವ ಪಿಡಿದೂ ಧಣಿಸು ನಿನ ದಾಸತ್ವ ಧರೆಯೆ ಮೇಲ್ ಡಂಗುರದೀ ಘಣಿಶಾಯಿ ಗೋಪಾಲಕೃಷ್ಣವಿಠಲ ಕೈಪಿಡಿದು 3
--------------
ಅಂಬಾಬಾಯಿ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಬರಿದಿದೇಕೆಲೋ ನಿನ್ನಂತರಿರವು ಸಿರಿಯರರಸ ಅರಿಯನೇನೆಲೋ ಪ ಮರೆಯ ಮೋಸದಿ ಕುಕ್ಕಲು ಮೀನ ಹರಿವ ಉದಕದಿ ಬಕನು ಮೌನ ಧರಿಸಿದಂದದಿ ಪರಮಮೌನ ಧರಿಸಿ ಕುಳಿತು ಮರುಳುಗೊಳಿಸಿ ಪರರ ಕೊರಳ ಮುರಿವ ದುರುಳತನದ ಕೃತಿಗೆ ಹರಿಯು ಒಲಿಯುವನೇನು ಮರುಳೆ1 ಕಪಟ ನೀಗದೆ ಹುಚ್ಚು ಬಿಡದೆ ಗುಪಿತ ತಿಳಿಸದೆ ಮುಚ್ಚಿ ಕಣ್ಣು ತಪಸಿಯಂದದಿ ಕುಪಿತ ಮಾನಿಸನಾಗಿ ಕುಳಿತು ತಪಸಿಯಂತೆ ತೋರಿ ಜನರ ಅಪಾಯಮಾಳ್ಪ ಕಪಟವೇಷಕೆ ಸುಫಲ ದೊರೆಯುವುದೇನು ಮರುಳೆ 2 ಉದಯದೇಳುತ ಓಡಿ ಹೋಗಿ ನದಿಯ ಮುಳುಗುತ ತೀಡಿಗಂಧ ಹದದಿ ಬರೆಯುತ ವಿಧವಿಧಮಂತ್ರೊದರಿ ಇತರರ ಸದನ ಮುರಿದು ಸತಿಯ ಸುತರ ಮುದದಿ ಪೊರೆವ ಅಧಮ ವ್ರತಕೆ ಸದಮಲಾಂಗೊಲಿವನೆ ಮರುಳೆ 3 ಕಪಟ ನೀಗದೆ ಜಟೆಯ ಬೆಳಸಿನ್ನು ಚಪಲತನದಿಂ ದುಟ್ಟು ಕೌಪೀನ ನಿಟಿಲದಲ್ಲಿ ಭಸ್ಮಧರಿಸಿ ನಟಿಸಿ ಸಾಧುವರ್ತನದಿಂ ದ್ಹೊಟ್ಟೆ ಹೊರೆವ ಭ್ರಷ್ಟತನಕೆ ಕೆಟ್ಟ ಬವಣಳಿಯುವುದೆ ಮರುಳೆ 4 ತತ್ವದರ್ಥವ ಬೋಧಿಸುತ್ತ ಭೃತ್ಯ ಸಮೂಹವ ಸಂಪಾದಿಸುತ್ತ ನಿತ್ಯಸತ್ಯವ ವಿತ್ತದಾಸೆಗುತ್ತರಿಸುವಸತ್ಯಭ್ರಷ್ಟ ವರ್ತನಕೆ ಮುಕ್ತಿದಾಯಕ ಸಿರಿಯರಾಮ ಮುಕ್ತಿಸುಖ ನೀಡುವನೆ ಮರುಳೆ 5
--------------
ರಾಮದಾಸರು
ಬಿಡಬೇಕು ಸ್ತ್ರೀಸಂಗ ಬ್ರಹ್ಮನಾಗುದಕೆಬಿಡದಿರಲು ಕೆಡುತಿಹನು ಬಿಡೆಯವಿಲ್ಲಯ್ಯ ಪ ಕಣ್ಣುಗಳು ತಿರುಹಲಿಕೆ ಕಾಲುಕೈಯುಡುಗುವುದುನುಣ್ಣನೆಯ ಗಂಟೊಲಿಯೆ ಎದೆಗುಂದುವುದು ಅಯ್ಯ ಸಣ್ಣ ಹಲ್ಲನು ಕಾಣೆ ಸರಿವುದು ಶಿವಧ್ಯಾನನುಣ್ಣನೆಯ ಮುಖಕ್ಕೆ ನುಗ್ಗಹುದು ದೃಢ ಚಿತ್ತ 1 ಕಿರುನಗೆಯ ಕಾಣಲು ಕಳಚಿಹೋಹುದು ಬುದ್ಧಿಸೆರಗು ಸಡಿಲಲು ಸೈರಣೆಯು ಅಡಗುವುದು ಅಯ್ಯತಿರುಗಾಡುತಿರಲು ತಿಳಿವಳಿಕೆ ಹಾರುವುದು ಮು-ಕುರ ಮುಖ ಕಾಣಲು ಮುಳುಗುವುದು ಅರಿವು ಅಯ್ಯ 2 ಗಾಳಿಯದು ಹಾಯಲಿಕೆ ಗತವಹುದು ಅನುಭವವುಬೀಳೆ ಅವರ ನೆರಳು ಬಯಲಹುದು ಬೋಧನೆಯುಬಾಲ ನುಡಿಗಳ ಕೇಳೆ ಬೀಳುವುದು ಬಲ್ಲವಿಕೆಬಾಲೆಯರ ಸಂಗವದು ಭವದ ತಿರುಗಣೆಯಯ್ಯ 3 ನವನೀತ ಪುರುಷನು ನಾರಿಯೇ ಅಗ್ನಿಯುನವನೀತ ಕರಗದೆ ಅಗ್ನಿಯೆದುರಿನಲಿಯುವತಿ ಸನಿಹದಲಿರಲು ಎಲ್ಲಿ ಬ್ರಹ್ಮವು ನಿನಗೆಶಿವನಾಣೆ ಸತ್ಯವಿದು ಸುಳ್ಳೆಂದಿಗೂ ಅಲ್ಲ 4 ಪಾತಕದ ಬೊಂಬೆಯು ಫಣಿವೇಣಿಯರ ರೂಪಘಾತಕವು ತಾನಹುದು ಯೋಗಗಳಿಗೆಯಲಯ್ಯಮಾತು ಬಹಳವದೇಕೆ ಮಹಿಳೆಯನು ತ್ಯಜಿಸಿದರೆದಾತ ಚಿದಾನಂದನು ತಾನೆ ಅಹನಯ್ಯ5
--------------
ಚಿದಾನಂದ ಅವಧೂತರು
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಮಗುವಿನ ಮರುಳಿದು ಬಿಡದಲ್ಲ - ಈ ಪ ಜಗದೊಳು ಪಂಡಿತರಿದ ಬಿಡಿಸಿ ಅ ನೀರನು ಕಂಡರೆ ಮುಳುಗುತಿದೆ - ತನ್ನಮೋರೆಯ ತೋರದೆ ಆಡುತಿದೆಧಾರಿಣಿ ಹಲ್ಲಲಿ ಎಳೆಯುತಿದೆ - ದೊಡ್ಡಭೈರವಾಕಾರದಿ ಕೂಗುತಿದೆ 1 ಪೊಡವಿಯ ಕೊಟ್ಟಗೆ ಅಳೆಯುತಿದೆ - ತನ್ನಕೊಡಲಿಯೊಳು ಭೂಪರ ಕಡಿಯುತಿದೆಅಡವಿ ಕೋತಿಗಳ ಕೂಡುತಿದೆ - ಚೆಲ್ವಮಡದಿಯರನು ಹಿಡಿದೆಳೆಯುತಿದೆ 2 ಉಟ್ಟಿದ್ದ ವಸ್ತ್ರವ ಬಿಸುಡುತಿದೆ - ತನ್ನದಿಟ್ಟ ತೇಜಿಯನೇರಿ ನಲಿಯುತಿದೆಸೃಷ್ಟಿಯೊಳು ಭೂಸುರರ ಪೊರೆದ ಜಗಜಟ್ಟಿಯಾದಿಕೇಶವ ರಾಯನಂತೆ 3
--------------
ಕನಕದಾಸ