ಒಟ್ಟು 94 ಕಡೆಗಳಲ್ಲಿ , 34 ದಾಸರು , 90 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳು ಬೆಳಗಾಯಿತು ಯದುಕುಲೋತ್ತಮ | ಪರಮೇಷ್ಠಿ ಹರ ಸುರಪಾಲಕರು ಪ ಆಳುಸಹಿತದಲಿ ರಂಗಾಅ.ಪ. ವೇದವನು ತಮ ಕದ್ದು ಒಯ್ದನು | ಆಧಾರಾಗದೆ ಅದ್ರಿ ಮುಣಗಿತು || ಮೇದಿನಿಯ ಬಳಕೊಂಡು ಹೋದನು | ಅದಿತಿಯ ಸುತನು ಭಾದಿಗಾಗದಲೆ ಬಂದು ಸಕಲರು || ಆದರಣೆಯಿಂದ ಕೈಯ ಮುಗಿದು ನೀ | ದಯಾನಿಧಿ ಎಂದು ಹೊರಗೆ ಕಾದು ಐದಾರೆ ರಂಗ 1 ಅಟ್ಟುಳಿ ಹೆಚ್ಚಿತು ವೆ ಗ್ಗಳಿಸಿದರು ಛತ್ರಿಯರು ಈರೈದು ತಲೆಯವನು || ಬಲವಂತನಾದನು ಆರಿಗೊಶವಿಲ್ಲ | ಇಳೆಗೆ ಭಾರವು ತೂಕವಾಯಿತು ಕಳ-| ವಳಗೊಳಲಾರೆವೆನುತಲಿ ಅಳುಕಿ ಭಯದಲಿ | ನಿಮ್ಮ ಬಾಗಿಲ ಬಳಿಯ ಸಾರಿದರೊ ರಂಗಾ2 ಮೂರು ಪುರದವರೀಗ ನಮ್ಮನ್ನ ಮೀರಿದರು | ಕಲಿಪುರುಷ ಸುಜನರ ಮೇರೆದಪ್ಪಿಸಿ ನಡೆಸಿ || ಬಲು ವಿಕಾರ ಮಾಡಿದನು ಈ ರೀತಿ ಶ್ರಮವೆಂದು | ಸಿರಿ ವಿಜಯ- || ವಿಠ್ಠಲ ಕಾರಣಾರ್ಧವ ಕಳೆದು | ಮುಂದೆ ಉದ್ಧಾರ ಮಾಡಿದನು 3
--------------
ವಿಜಯದಾಸ
ಕಂಡೆನದ್ಭುತ ಮೂರ್ತಿಯನೂ ಹಿಂಡು ದೈವದಗಂಡ ವೇಲಾಪುರಾಧೀಶನನು ಪ ಪರಮಪದನಾಥ ಜಯ ಪರಮಪುರುಷನೆ ಜಯ ಮರಮೇಷ್ಠಿಜನಕಜಯ ಪರಮಪಾವನನೆ ಜಯ ಪರಮ ಸುಖವಾರ್ಧಿಜಯ ಪರಮಸುಜ್ಞಾನಿ ಜಯ ಪರಮ ಶುಭಗಾತ್ರಜಯ ಪರಮಸಂತೋಷಿ ಜಯತು 1 ಪರಮಸ್ವತಂತ್ರಜಯ ಪರಮ ಕಾರಣನೆಜಯ ಪರಮತ್ರಿಗುಣಾತ್ಮಜಯ ಪರಮಪಂಡಿತನೆ ಜಯ ಪರಮಗುರುವರ್ಯಜಯ ಪರಮಮುನಿವಂದ್ಯಜಯ ಭಾಗವತ ಪ್ರಿಯ ಜಯಜಯತು2 ಸರ್ವೋತ್ತಮನೆ ಜಯಜಯತು ಸ್ವಾಮಿ ಕರಿರಾಜವರದ ಜಯಜಯತು ಹರಿಯೇ ಅರವಿಂದನಾಭ ಜಯಜಯತು ಅಸುರ ಶರಧಿ ಬಡಬಾನಲನೆ ಜಯಜಯತು 3 ತರಳನ ಕಾಯ್ದವನೆ ಜಯಜಯತು ಶಿಶುವು ಕರೆಯೆ ಬಂದವನೆ ಜಯಜಯತು ತಪವ ಚರಿಸಿದನ ಕಾಯ್ದವನೆ ಜಯತು ನಿಜ ಶರಣರಿಗೆ ಪದವನಿತ್ತವನೆ ಜಯಜಯತು 4
--------------
ಬೇಲೂರು ವೈಕುಂಠದಾಸರು
ಕರವ ಜೋಡಿಸಿ ಎಲ್ಲರಿಗೊಂದಿಸಿ ಪ. ಎಲ್ಲರಿಗೊಂದಿಸಿ ಫುಲ್ಲನಾ¨sನÀ ಮುಖ್ಯವಲ್ಲಭೆಯರುನಾವು ಗೆಲ್ಲಬೇಕೆಂದುಅ.ಪ. ಮಡದಿ ಇಂದಿರಾದೇವಿ ಕಡೆಗಣ್ಣನೋಟದಿ ಪಡೆದಾಳು ಲೋಕಬ್ರಹ್ಮರುದ್ರಾದಿ ಪಾದಂಗಳಿಗೆ ನೀವೆ ಮಹಾಲಕ್ಷ್ಮಿಪಾದಂಗಳೆಗೆ ನೀವೆ ಮಹಾಲಕ್ಷ್ಮಿ ದೇವಿಯಶುಭಾಂಗಿಯ ಮೊದಲೆ ಬಲಗೊಂಬೆ 1 ಪರಮೇಷ್ಠಿ ಪರಮೇಷ್ಠಿ ಪಾದ ಪದ್ಮವನೆ ಮೊದಲೆ ಬಲಗೊಂಬೆ2 ವಾಣಿ ಅಜನ ಪಟ್ಟದರಾಣಿ ಪನ್ನಂಗ ವೇಣಿಜಾಣಿ ಕೊಡು ಎಮಗೆ ಮತಿಗಳಜಾಣಿ ಕೊಡು ಎಮಗೆ ಮತಿಗಳ ನಿನ್ನಪಾದರೇಣುವ ಮೊದಲೆ ಬಲಗೊಂಬೆ 3 ಪಾದ ವನಜವ ಮೊದಲೆ ಬಲಗೊಂಬೆ4 ಭಾರತಿ ನಿನ್ನ ಪಾದವಾರಿಜ ಚರಣವ ಬಾರಿ ಬಾರಿಗೆ ಸ್ಮರಿಸುವೆಬಾರಿ ಬಾರಿಗೆ ಸ್ಮರಿಸುವೆ ನಮಗಿನ್ನುತೋರೆ ಬೇಗ ಮತಿಗಳು5 ಇಂದ್ರನ ಗೆದ್ದು ಸುಧೆಯ ತಂದ ಮಾತೆಯ ಬಂಧನ ಕಡೆದ ಬಲು ಧೀರಬಂಧನ ಕಡೆದ ಬಲುಧೀರನಾದ ಖಗೇಂದ್ರನ ಮೊದಲೆ ಬಲಗೊಂಬೆ6 ಸಾಸಿರ ಮುಖದಿಂದ ಶ್ರೀಶನ ಸ್ತುತಿಸಿದವಾಸುದೇವಗೆ ಹಾಸಿಗೆವಾಸುದೇವಗೆ ಹಾಸಿಗೆ ಯಾದಶೇಷಗೆ ಮೊದಲೆ ಬಲಗೊಂಬೆ7 ಅಪಾರ ಮಹಿಮನೆ ತ್ರಿಪುರಸಂಹಾರಕಚಂದ್ರ ಶೇಖರನೆ ಸರ್ವೇಶ ಚಂದ್ರ ಶೇಖರನೆ ಸರ್ವೇಶ ನಿನ್ನಪಾದದ್ವಂದ್ವವ ಮೊದಲೆ ಬಲಗೊಂಬೆ 8 ವಾರುಣಿ ಅಪರ್ಣಾದೇವಿಯರು ಕರುಣಿಸಿನಮಗೆ ಕಾಲಕಾಲಕರುಣಿಸಿನಮಗೆ ಕಾಲಕಾಲಕೆರಾಮೇಶನ ತರುಣಿಯರೆ ಗೆದ್ದು ಬರಬೇಕ9
--------------
ಗಲಗಲಿಅವ್ವನವರು
ಕೃಷ್ಣ ದ್ವೈ ಪಾಯನ ಕೃಪಣವತ್ಸಲ ಪರ ಮೇಷ್ಠಿ ಜನಕನ ತೋರೊ ಪ ಅನಿಮಿಷ ಕುಲಗುರು ಆನಂದತೀರ್ಥ ಸ ನ್ಮುನಿಮತ ವಿಮಲಾಂಬುಜಾ ಅ.ಪ. ದಿನಕರ ದಯದಿ ನೋಡೆನ್ನನು ಬಾದರಾ ಯಣ ನಾಮಧೇಯರ ತನಯ ಸಂಯಮಿ ವರ 1 ಭೀಮ ತರಂಗಿಣಿ ಬದಿಗನೆನಿಸಿ ಸೀತಾ ಕರ್ಮ ಗುಣಕೀರ್ತನಗೈವ ನಿರ್ಮಲಾತ್ಮಕನ ಸತ್ಪ್ರೇಮದಿ ಸಲಹುವ ಸುಜನ ಶಿರೋಮಣಿ 2 ವಿಗತದೇಹಾಭಿಮಾನಿಯೆ ನಿಮ್ಮೊಡನೆ ನಿತ್ಯ ಹಗೆಗೊಂಬ ಪಾಪಿಗಳ ವಿಗಡಕರ್ಮಗಳೆಲ್ಲ ಮರೆದು ವಿಶ್ವವ್ಯಾಪಿ ಜಗನ್ನಾಥ ವಿಠಲ ಸ್ವತಂತ್ರ ಕರ್ತಯೆಂಬಾ 3
--------------
ಜಗನ್ನಾಥದಾಸರು
ಘೋರವಿದು ಮಹ ಘೋರವಿದು ಸಂ ಸಾರದ ನೆಲೆ ದಾರಿಗರಿತಿಹ್ಯದು ಪ ತೋರದೆ ಮೂಜಗ ಹಾರೈಸಿದನು ದು:ಖ ವಾರಿಧಿಯೊಳು ಘೋರ ಬಡುತಿಹ್ಯದು ಅ.ಪ ಪರಮೇಷ್ಠಿ ಶಿರವಂದು ತೆಗೆಸಿಹ್ಯದು ಮುರಹರನನು ಸುಡುಗಾಡು ಹೊಗಿಸಿಹ್ಯದು ಸಿರಿವರ ಹರಿಯನು ಪರಿಪರಿ ಜನುಮವ ಧರಿಸುತ ಧರೆಮೇಲೆಳೆಸಿಹ್ಯದು 1 ಚಂದ್ರಗೆ ಕುಂದುರೋಗ್ಹಚ್ಚಿಹ್ಯದೋ ಬಲು ಮೇಂದ್ರ ಸೂರ್ಯನ ಪೊಲ್ಲ ಕಳಚಿಹ್ಯದು ಇಂದ್ರನ ಅಂಗಾಂಗ ಸಂದು ಬಿಡದಲತಿ ರಂಧ್ರಗೊಳಿಸಿ ಹೇಯ ಸುರಿವುವುದು 2 ಕಾಲ ತಂದಿಹ್ಯದು ಪಾ ತಾಳಕೆ ಬಲಿಯನು ಇಳಿಸಿಹ್ಯದು ವಾಲಿಯ ನಿಗ್ರಹ ಮಾಡಿಸಿ ಲಂಕೆಯ ಪಾಲದಶಕಂಠನ ವಧಿಸಿಹ್ಯದು 3 ಪರಮ ಪಾಂಡವರನ್ವನಕೆಳಸಿಹ್ಯದು ಆ ಕುರುಪನ ಕುಲನಾಶ ಮಾಡಿಹ್ಯದು ಪರಮ ತ್ರಿಪುರ ಶಿರಸೆರೆ ಸೂರೆಮಾಡಿಸಿ ಸುರನಿಕರರಿಗ್ಹಂಚಿಕೊಟ್ಟಹ್ಯದೊ 4 ಹಿರಿಯರನೀ ಪಾಡ ಪಡಿಸಿಹ್ಯದು ಈ ಮರುಳ ನರರ ಪಾಡೇನಿಹ್ಯದು ಗುರುವರ ಶ್ರೀರಾಮನೋರ್ವನ ಹೊರತಾಗಿ ಸರುವ ಜಗವ ಗೋಳಾಡಿಸಿಹ್ಯದು 5
--------------
ರಾಮದಾಸರು
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ದಂಡಿಸಬೇಡೈ ದಯೆದೋರೈ ಕರದಂಡದಳಾಂಬಕನೆಪ. ಕಂಡೀಶವಿನುತ ಬ್ರಹ್ಮಾಂಡಪಾಲ ಮಾ- ರ್ತಾಂಡಮಂಡಲಗ ಶುಂಡಾಲವರದಅ.ಪ. ಕ್ಷೇಮದಿ ಶ್ರೀಹರಿನಾಮವ ವರ್ಣಿಸೆ ನೇಮಾನುಷ್ಠಾನದೊಳಿರಲು ನಾ ಮಾಡಿದ ನಾನಾವಿಧ ಪಾಪವ ತಾಮಸಗೊಳಿಸುವ ಕಾಮಕ್ರೋಧಗಳಿಂ1 ಶಿಷ್ಟಾಚಾರದೊಳಿಷ್ಟನಾಗಿ ಪರ ಮೇಷ್ಠಿಜನಕ ಜಯ ಜಯವೆನಲು ಭ್ರಷ್ಟಾಲೋಚನೆ ಪುಟ್ಟಿಸಿ ಪಾಪದ ಬಟ್ಟಿಯ ಹೊದ್ದಿಪ ದುಷ್ಟಸಂಗದಿಂ2 ನಾರಾಯಣ ನರಹರಿಯೆನ್ನುವ ವ್ಯಾ- ಪಾರವ ನಾ ಮಾಡುತ್ತಿರಲು ಆರೋಹಣಾವರೋಹಣ ನಾದವಿ- ಕಾರಗೊಳಿಪ ಶಾರೀರಪ್ರಕೃತಿಯಿಂ 3 ಆರ್ಕಾರಣ ರಿಪುಗಳಿಗೈ ಸರ್ವ ದೇ- ವರ್ಕಳ ಮಸ್ತಕಮಣಿ ನೀನೈ ತರ್ಕಾಗಮ್ಯ ಲಕ್ಷ್ಮೀನಾರಾಯಣ ಅರ್ಕಾಮಿತಪ್ರಭ ಕಾರ್ಕಳಪುರವರ4
--------------
ತುಪಾಕಿ ವೆಂಕಟರಮಣಾಚಾರ್ಯ
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ಧ್ಯಾನವನು ಮಾಡಿ ತ್ರಿವೇಣಿ ಕ್ಷೇತ್ರವ ಬಿಡದೆ | ಙÁ್ಞನಭಕ್ತಿ ವೈರಾಗ್ಯ ನಾನಾ ಸತ್ಕರ್ಮ ನಿ | ಸಿರಿ | ಪ್ರಾಣೇಶ ಕುಣಿಯುವನಯ್ಯಾ ಅಯ್ಯಯ್ಯಾ ಪ ಹರಿವೀರ ದ್ರುಪದನುದ್ಧರಿಸಿವಾಗಲು ತನ್ನ | ಶರೀರದಿಂದಲಿ ಅಷ್ಟಕೇತ್ರಗಳ ಪುಟ್ಟಿಸಿ | ವರದೇಶ ವೈಕುಂಠದಲ್ಲಿಟ್ಟನು ಸಪ್ತ | ಪಿರಿಸಹಿತ ತೀರ್ಥರಾಜಾ || ಮೆರೆವದಿದೆ ಪುಂ ಕ್ಷೇತ್ರ ಉಳಿದವೇಳು ಸ್ತ್ರೀ | ಇರುತಿಪ್ಪವಲ್ಲಿ ಮಿಗಿಲಿದಾದಕೆ ಅತಿಶಯವೊ | ಧರಣಿಯೊಳಗಿದಿ ಕಾಲಾಂತರಕೆ ಹರಿತಂದ ವಟ | ತರು ಸಹವಾಗಿ ಅಯ್ಯಾ ಅಯ್ಯಾ ಅಯ್ಯಾ 1 ತರಣಿಸುತೆ ಮಾನಸೋತ್ತರ ಶೈಲದಲಿ ಕುಳಿತು | ವರರಾಜ ತೀರ್ಥ ಮಾಧವನ ಸಾರುವೆನೆಂದು | ಭರದಿಂದ ತಪವು ಮಾಡೆ ಸರಸಿಜೋದ್ಭವನೊಲಿದು | ವರವಿತ್ತ ಮುಂದೆ ನೀನು ಧರೆಯೊಳು ಕಾಳಿಂ || ದ ರಾಯಗೆ ಕುವರಿ ಎನಿಸಿ ಮಹಾಸರತಿಯಾಗಿ ಪೋಗಿ | ಸಿರಿ ಮಾಧವನ ಚರಣ | ನೆರೆ ಮೆರೆದಳೈಯ್ಯಾ ಅಯ್ಯಾ ಅಯ್ಯಾ ಅಯ್ಯಾ 2 ತುರುಗಮ ನೆವದಿಂದ ಅರವತ್ತು ಸಾವಿರ ಸ | ಗರನ ಕುಲದವರು ಕಪಿಲಾಖ್ಯಾ ಹರಿ ಮುನಿಯಿಂದ | ಉರಿದು ಪೋಗೆನಲಾಗಿ ಭಗೀರಥ ಭೂಪತಿ ಉಗ್ರ | ಧುರಧಿ ತಪವನ್ನೆ ಮಾಡೇ | ಹರಿ ನಿರೂಪವ ತಾಳಿ ಗಿರಿಗಹ್ವರವನೊಡದು | ಸಿರಿ | ಚರಣದೆಡೆಯಲ್ಲಿ ನಿಂದು ಯಮುನೆ ವಡಗೊಡಿ ಬಾ | ಮರವಾದವಳಂದು ಅಯ್ಯ ಅಯ್ಯಾ ಅಯ್ಯಾ3 ಸರಸ್ವತಿಯ ಬೆರೆದು ತ್ರಿವೇಣಿ ಸಂಗಮವೆಂದು | ಕರಿಸಿಕೊಂಡಿತು ವಿಕರ ಸೋಮೇಶ್ವರನ ತನಕ | ಪರಮೇಷ್ಠಿಯಿಲ್ಲಿಗೈತಂದು ಬೊಮ್ಮಾಂಡವನು | ಸರಿ ಮಾಡಿ ತೊಲಗಲಾಗೀ || ಸುರರು ಶಿರದೂಗುತಿರೆ | ವರರಾಜತೀರ್ಥ ಮಹಾಭಾರವಾಗಲು ಇದಕೆ | ಸರಿ ಮಿಗಿಲು ಇಲ್ಲೆನುತ ಪೊಗಳಿ ಕರದರು ಮಹ | ವರದ ಪ್ರಯಾಗವೆಂದಯ್ಯಾ ಅಯ್ಯಾ ಅಯ್ಯಾ 4 ಪುರವೈರಿ ನಟಣೆ ಪೂ ತುಲಸಿ ಸುರಪತಿ ವೈಶ್ವಾ | ನರನು ತಿಲ ಹೋಮ ಯಮರಾಯಕಿಂಚಿತು ದಾನ | ನಿಋರುತಿತ ಪೈತೃಕಕರ್ಮ ವರುಣ ಜಲದಾನಸ್ತುತಿ | ಮರುತ ಭೂತನು ಕುಬೇರ || ಅರಗಳಿಗೆ ವಸತಿ ಈ ವಟನಿಕಟ್ಟಿಯಲಿಯಿದ್ದು | ಪರಿಪರಿಯಿಂದಲಿ ಒಲಿಸಿ ಮಾಧವನಿಂದ | ಪುರಷಾರ್ಥ ಪಡೆದು ಸುಖಿಸಿದರು ಸಮಸ್ತ ಬಗೆ | ಅರಿತು ಕೊಂಡಾಡಿ ಜನರೈಯ್ಯ ಅಯ್ಯಾ ಅಯ್ಯಾ5 ಎರಡೊಂದು ಮೂರು ಕುಲದ ಮಧ್ಯ ನಿಂದು | ಕರ್ತಾರಿಯೊಳಗೆ ಮಿಂದು ಸತ್ಕರ್ಮವನೆಸಗಿ ಭೂ | ಸುರರ ಮೆಚ್ಚಿಸಿ ಮನದಿ ಪಾಪಗಳ ಉಚ್ಚರಿಸಿ | ಕರಣ ನಿರ್ಮಲಿನರಾಗಿ | ವಿಪ್ರ ಚಂಡಾಲ || ಪರಿಯಂತ ವಪನವೆ ಮುಖ್ಯವೆಂದು ತಿಳಿದು | ಚರಿಸಿದರೆ ಅನಂತ ಜನ್ಮಕ್ಕೆ ಮಹಾಸೌಖ್ಯ | ಬರಿದೆ ಆಗದು ಕಾಣಿರೈಯ್ಯ ಅಯ್ಯ ಅಯ್ಯಾ6 ಧರೆಯ ಮೇಲೆ ಬಿದ್ದ ಶಿಶುಗಳ ತಂದು ಮುಂಡಣವ | ಉರುತರ ಬುದ್ದಿಯಿಂದ ಮಾಡಿಸಲಿ ಬೇಕು ವಿ | ಸ್ತರಿಸುವೆನಯ್ಯಾ ಯೌವನ ವಾರ್ಧಿಕರಿಗೆ ನಿಜ | ವರನಾರಿಯರಿಗೆ ವೇಣಿ ಸರಿ ಎನ್ನಿ ಸಾತ್ವೀಕ || ಪುರಾಣದಲಿ ಪೇಳಿದ ಎರಡು ಭುಜದಲಿ ತಪ್ತ ಚಕ್ರ | ವಿರಹಿತರಾಗಿ ಬರಲು ಷಣ್ಮುತ ಜನಕ ಗತಿಯಿಲ್ಲ ಮತಿಯಿಲ್ಲ | ಸ್ಥಿರವಾಕ್ಯ ಲಾಲಿಪುದು ಅಯ್ಯಾ ಅಯ್ಯಾ ಅಯ್ಯಾ 7 ಎರಡೈದು ತುರಗ ಕೃತು ಮೊದಲಾದ ತೀರ್ಥಗಳು | ಪರಿಪರಿ ದೇವ ಮುನಿಗಳು ನಾಮದಲಿ ಉಂಟು | ಪರಮಭಕುತಿಯಿಂದ ಮಜ್ಜನಾದಿಯ ಮಾಡೆ | ಪರಲೋಕ ಕರತಳದೊಳು || ಇರುತಿಪ್ಪದು ನಿತ್ಯಾ ಪ್ರಯಾಗರಾಜನ | ಸ್ಮರಣೆ ಮಾಡಿದ ಮನುಜನು ಆವಾವಲ್ಲ್ಯಾದರು ಇರಲು | ಮಾಧವ ವೊಳಗೆ ಮೊಳೆವ | ದರುಶನವ ಕೊಡುತಲಯ್ಯ ಅಯ್ಯಾ ಅಯ್ಯಾ 8 ಅರುಣೋದಯಲೆದ್ದು ಶುದ್ಧಾತ್ಮರಾಗಿ | ಪರಿಪರನೆಂಬೊ ಙÁ್ಞನದಲಿ ಹಾಡಿಪಾಡಿದವರ | ದುರಿತ ರಾಸಿಗಳ ದಹಿಸಿ ನಿಂ | ದಿರದೆ ಸಂತರ ಕೊಡಿಸಿ || ಮೊರೆವುತಿಪ್ಪುದು ಗಡಾ ಸಿದ್ದಾರ್ಥ ಕ್ಷೇತ್ರವಿದು | ನೆರೆನಂಬಿ ಮಾನವನು ಮಾನಸದಲಿ ಭಜಿಸಿ | ಸಿರಿ ವಿಜಯವಿಠ್ಠಲ ಕರುಣವುಳ್ಳವನಿಗೆ | ದೊರಕುವದು ದೊರಕುವದಯ್ಯಾ ಅಯ್ಯಾ ಅಯ್ಯಾ 9
--------------
ವಿಜಯದಾಸ
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನರಸಿಂಹ ನರಸಿಂಹ ನಮಿಸುವೆನೊ ಘೋರ ದುರಿತ ಬೆನ್ನ ಬಿದ್ದಿದೆ ಪರಿಹರಿಸೋ ಶ್ರೀ ನರಸಿಂಹ ಪ ಪರಮೇಷ್ಠಿ ಹರ ಸುರಪತಿ ಮುಖರಾ ಸುರನಿಕರ ಪೊರೆವ ಪ್ರಭೊ ಪ್ರವರ ದುರಿತವು ಅವರನ್ನ ಬಾಧಿಸದಂತೆ ಪೊರೆದ ಪರಿಯಿಂದ ಎನ್ನ ಪೊರೆಯೊ 1 ಕಾಯ್ದು ತನ್ನಯ ತನ್ನ ತಂದೆಯ ಬಾಧೆ ಭಯದಿಂದ ಮನದಲ್ಲಿ ನಿನ್ನ ನೆನಿಯೆ ದಯದಿಂದ ನೀ ಕಂಭದಲಿ ಬಂದು ಪೊರೆದಂತೆ ಎನ್ನ ಭಯ ಪರಿಯೆ ಪೊರೆ ಶ್ರೀ ನರಸಿಂಹ 2 ನಿನ್ನ ಪೆಸರೆಂದರೆ ದುರಿತಂಗಳು ತನ್ನಿಂದ ತಾನೆ ಜರಿಯುವವು ಚನ್ನಾಗಿ ಶರಣರ ಪೊರೆದದಕೆ ನಿನ್ನವರೆಂದು ಕೇಳಿ ಬಲ್ಲೆ ಶ್ರೀ ನರಸಿಂಹ 3 ನಖ ಮುಖ ಶಿಖಿ ತನ್ನ ನೆನೆಯೆ ಸುಖಿತರವಾಹೋದು ಶರಣರಿಗೆ ಮಖಭುಜ ರವಿ ಸಾಕ್ಷಿ ಇದಕಾಗಿರೆ ವಿಖನಸಾರ್ಚಿತ ಪಾದ ಸುಖಮಯನೆ ಶ್ರೀ ನರಸಿಂಹ ಕಾಯೊ 4 ಅರಿದರೀಧರ ವರ ಕರಯುಗನೆ ಕರಯುಗ ಜಾನು ಶಿರದಲ್ಲಿಪ್ಪನೆ ಶಿರದಿಂದೊಪ್ಪುವ ಕರತಳನೆ ವರ ವಾಸುದೇವವಿಠಲ ಪೊರೆಯೊ ಶ್ರೀ ನರಸಿಂಹ ಕಾಯೊ 5
--------------
ವ್ಯಾಸತತ್ವಜ್ಞದಾಸರು