ಒಟ್ಟು 141 ಕಡೆಗಳಲ್ಲಿ , 36 ದಾಸರು , 94 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪ ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು 1 ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ2 ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು 3
--------------
ವಿಜಯದಾಸ
ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಎನಗ್ಯಾರು ಗತಿಯಿಲ್ಲ ನಿನಗ್ಯಾರು ಸರಿಯಿಲ್ಲ | ಎನಗೆ ನಿನಗೆ ನ್ಯಾಯ ಪೇಳುವರಿಲ್ಲ ಪ ಒಂದುಗೂಡಿಲಿ ಬಂದು ಒಂದು ಕ್ಷಣ ವಗಲದೆ | ಪಾದ ಪೊಂದಿರಲೂ || ಬಂದ ವಿಷಯಂಗಳಿಗೆ ಯೆನ್ನನೊಪ್ಪಿಸಿ ಕೊಟ್ಟು | ನೀನಂಧಕನಂತೆ ನೋಡುವದುಚಿತವೆ ರಂಗಾ 1 ಪರಸತಿಯರ ಕೂಡಿದರೆ ಪರಮ ಪಾತಕವೆಂದು | ಪರಿ ಪರಿಯ ನರಕಗಳ ನಿರ್ಮಿಸಿರುವಿ || ಪರಸತಿಯರೊಲುಮೆ ನಿನಗೊಪ್ಪಿತೆಲೋ ದೇವಾ | ನಿನ್ನ | ದೊರೆತನಕಂಜಿ ನಾ ಶರಣೆಂಬೆನಲ್ಲದೇ 2 ನಿನ್ನಾಜ್ಞ್ಞಧಾರನಾಗಿ ನಿನ್ನ ಪ್ರೇರಣೆಯಿಂದ | ಅನೇಕ ವಿಧಕರ್ಮಗಳ ಮಾಡುತಿರುವೇ || ಯೆನ್ನಪರಾಧಗಳ ವರ್ಣಿಸಲಾಗದೊ | ದೇವ | ಪನ್ನಂಗಶಯನ ಶ್ರೀ ವಿಜಯವಿಠಲನೇ 3
--------------
ವಿಜಯದಾಸ
ಕರುಣದೆನ್ನ ಕರಪಿಡಿ ಕಾಯೋ ಪ ಸಿರಿನಾರಾಯಣ ಶರಣೆಂಬೆ ಅ.ಪ ಮೇಲ್ ಮೇಲ್ ಗುಣಗಾನವ ಮಾಡೆ ಬಾಲ್ಯಮೊದಲು ಮುದಿತನ ದೊಳಗುಂ ಸೌ ಶೀಲ್ಯ ಸ್ತುತಿಪೆ ಶುಕನುಡಿಯಂತೆ 1 ದಶರೂಪಗಳಂ ಧರಿಸುತ ಮರೆಸಲು ವಿಶ್ವವ್ಯಾಪಕಗುರು ತರವೇ ಕೃಷ್ಣನಾಮನಾವೆಯೊಳು ಬಹೇ 2 ವೈನತೇಯನನೊಡಗೊಂಡು ಬಹೆ ನಿನ್ನ ಸೆರಗ ಪಿಡಿಯುತ ಬರುವೆ3 ಸುಮನಸ ಪೂಜಿತ ನಮಿಸುವೆ ನಾಂ ಭ್ರಮೆಗಳ ಬಿಡಿಸುತ ಭವಭಯ ಹರ¸ ಕಮಲನಯನ ಹೆಜ್ಜಾಜೀಶ 4
--------------
ಶಾಮಶರ್ಮರು
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕುಂಟೆ ಹೊಡೆಯೊ ಜಾಣ ಅದನೋಡಿ ಕುಂಟೆ ಹರಗೋ ಜಾಣ ಪ ಕುಂಟೆ ಹೊಡ್ಸೋನಾಗಿ ಕಂಟಿಕಡಿದು ನೀ ಎಂಟೆತ್ತುಗಳ ಹೂಡಿ ಮಂಟಪದ್ಹೊಲವನ್ನುಅ.ಪ ಅರಿವೆಮಡಿಕೆಹೊಡೆಯೊ ಮರವ್ಯೆಂಬ ಕರಿಕಿದಡ್ಡನಳಿಯೊ ಶರಣೆಂಬಗುದ್ದಲ್ಹಿಡಿಯೊ ಗರುವೆಂಬ ದುರಿತಕರುಣಗಳಗಿಯೊ ತೆರಪಿಲ್ಲದ್ಹೇಳುತ ಜರಾಮರಣೆಂಬ ಕಸ ಕರುಣೆಂಬ ಮಾಗಿ ಮಡಿ ಮಾಡಿ ಭರದಿ ಹಸನಮಾಡು 1 ಧ್ಯಾನ ದಾಸರಸೇವೆಯೆಂದೆಂಬುವ ಖೂನ ಮಾಡೆಲೊ ಬದುವ ದಾನಧರ್ಮಯೆಂಬುವ ಸತತದಿ ಹನಿಸು ಗೊಬ್ಬರವ ಜ್ಞಾನಿಸಂಗವೆಂಬ ಜಾಣಬೆದೆಗಾಲದಿ ಜ್ಞಾನಕೂರಿಗೆಯಿಂದ ಧ್ಯಾನಬೀಜವ ಬಿತ್ತು 2 ಮನನೆಂಬಬೆಳೆ ಕಾಯೋ ನಿಜವಾದ ನೆನೆವೆಂಬರ ಕವಣ್ಹಿಡಿಯೊ ಮನಚಂಚಲ್ಹಕ್ಕ್ಹೊಡೆಯೊ ಶಾಂತಿಸದ್ಗುಣವೆಂಬ ಫಲ ಪಡೆಯೊ ಘನತರ ದೃಢವೆಂಬ ಧಾನ್ಯರಾಸಿಮಾಡಿ ವನಜಾಕ್ಷ ಶ್ರೀರಾಮನೊನರುಹಕರ್ಪಿಸು 3
--------------
ರಾಮದಾಸರು
ಕೊಡಿಸೊ ಅಂಕಿತವಾ ಗುರುರಾಯಾ ನಿನ್ನ ಅಡಿಗಡಿಗೆರಗಿ ನಾ ಬೇಡುವೆನಯ್ಯಾ ಪ ನಾ ಶರಣೆಂಬೆ ತಂದೆ ದರುಶನ ನುಡಿಯ ಪಾಲಿಸೋದಯದಿಂದ 1 ಎಂದು ಬಿಡದಲೇ ಕಾಡಿ ನೀ ದಯ ಮಾಡಿ 2 ಬೇಡ್ವೆ ಈ ಭಾಗ್ಯ ಯೋಗಿ 3 ಇಷ್ಟಾ ಪೂರೈಸೋ ನೀನು ನೋಡೊ ಸುರ ಕಾಮಧೇನು 4 ಅಂತರ್ಯಾಮಿ ಬಲ್ಲ ಇತ್ತರೆ ನಿನ್ನ ಕೇಳ್ವರಿಲ್ಲಾ 5
--------------
ಹನುಮೇಶವಿಠಲ
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗುರು ವಾದಿರಾಜ ರವಿಕೋಟಿ ತೇಜಾ ಶರಣೆಂಬೆನಯ್ಯಾ ಸತತಗೇಯಾ ಪ ನಂಬಿದೆನು ನಿನ್ನ ದಯ ಸಂಪನ್ನ ಸಂಭ್ರಮದಲ್ಲೆನ್ನ ಪೊರೆಯೊ ಪ್ರಸನ್ನ 1 ವೇದಶಾಸ್ತ್ರ ಬಲ್ಲ ಭಳಿರೆ ಮಲ್ಲ ಭೇದ ಜ್ಞಾನವೆ ಎಂಬೊ ನಿಜವೆಂಬ ಫಲ 2 ಮಾಯಿಗಳ ವದ್ದ ಮಮತಾ ಗೆದ್ದ ಗಾಯನ ಪ್ರಸಿದ್ಧ ಗುಣದಲಿ ಇದ್ದ 3 ನಾನಾ ಚಾರಿತ್ರ ತೋರಿದ ಮಿತ್ರ ಸಿರಿ ಹರಿಯ ಗಾತ್ರದೊಳಿಟ್ಟ ಪಾತ್ರ4 ಸಂತತ ವಿರಕ್ತ ಜೀವನ ಮುಕ್ತಾ ಸಂತಾರಿ ಸುಶಕ್ತಾ ಹರಿನಾಮ ಭೋಕ್ತಾ 5 ಸ್ವಾದಿಪುರವಾಸ ಸಾಧುಗುಣ ಭಾಸಾ ಸದ್ಭಕುತ ಪೋಪ ಮಧ್ವಮುನಿಯ ದಾಸಾ 6 ವಿಜಯವಿಠ್ಠಲನ್ನ ನೆನೆಸುವ ಘನ್ನ ಹರಿ ತ್ರಿಜಗ ಹಯವದನನ್ನ ಪರನೆಂಬೊ ಪೂರ್ಣಿ7
--------------
ವಿಜಯದಾಸ
ಗುರುರಾಜ ಗುರುಸಾರ್ವಭೌಮ ಪ ಗುರುರಾಜ ತವ ಪಾದ ಸರಸಿಜಯುಗಲಕ್ಕೆ ಮೊರೆಪೊಕ್ಕ ಜನರನ್ನ ಪೊರೆ ಎಂದೇ ಅ.ಪ ಶರಣ ಪಾಲಕನೆಂಬೊ - ಬಿರುದು ಬೀರುತಲಿದೆ ಶರಣರ ಮರೆವೊದು ಥರವೇನೋ 1 ಸಾರಿದಜನರ‌ಘ ದೂರಮಾಡುವೆನೆಂಬೊ ಧೀರರ ವಚನವು ಸಾರುತಿದೆ 2 ದೂರದೇಶದಿ ಜನ - ಸಾರಿ ಬಂದರೆ ವಿ - ಚಾರಿಸಿ ಹರಕೆ ಪೊರೈಸುವೀ 3 ಕುಷ್ಟಾದಿ ಮಹರೋಗ ನಷ್ಟಮಾಡುತಲ - ಭಿಷ್ಟೇಯ ಪೂರ್ತಿಪ ಮಹ ಶ್ರೇಷ್ಠನೆ 4 ಆದಿವ್ಯಾಧಿ ಉ-ಪಾಧಿ ಸಂಘಗಳನ್ನು ಮೋದ ಸಲಿಸುವಿ 5 ಸತಿಜನರಿಗೆ ಅತಿ ಹಿತದಿಂದ ಸುತರನ್ನ ಸತತ ನೀಡುವಿ ಯತಿ ಕುಲನಾಥ 6 ಮತಿ ಹೀನ ಅತಿ ಮೂರ್ಖ ತತಿನಿನ್ನ ಭಜಿಸಲು ವಿತತ ಭಕುತಿ ಜ್ಞಾನ ನೀಡುವೀ 7 ಮೂಕ - ಬಧಿರ - ಪಂಗು - ಏಕೋಭಾವದಿ ಸೇವೆ ಏಕಮನದಿ ಮಾಡೆ ರಕ್ಷೀಪಿ 8 ಅವರ ಮನೋ ಬಯಕೆ ಹವಣಿಸಿ - ನೀಡುತ ಅವನಿಯೊಳಗೆ ನೀ ಮೆರೆಯುವೀ 9 ಅಂಧಜನಕೆÀ ಚಕ್ಷು - ವಂಧ್ಯಜನಕೆ ಸುತರು ಬಂದ ಬಂದವರರ್ಥ ಪೂರೈಸುವೀ 10 ಪರಮಂತ್ರ ಪರಯಂತ್ರ ಪರಕೃತ್ಯಪರಮಾಹಿ ಪರಿಪರಿ ವ್ಯಥೆಗಳ ಹರಿಸುವೀ 11 ದುರುಳಜನರ ಬಾಧೆ ಮೊರಳುಮಾಯದ ಮೊದ್ದು ಕಿರಳುಪದ್ರಗಳೆಲ್ಲ ಕಳೆಯುವೀ 12 ಕಾಮಿತ ಫಲಗಳ - ಕಾಮಿಪ ಜನರಿಗೆ ಪ್ರೇಮದಿ ನೀಡುವೊ ಧ್ವರಿ ನೀನೇ 13 ಅನ್ನ ವಸನ ಧನ - ಧಾನ್ಯ ಹೀನರಗಿನ್ನು ಮನ್ನಿಸಿ ನೀನಿತ್ತು ಸಲಹುವೀ 14 ಅಧಿಕಾರ ಕಳಕೊಂಡು ಬದಕಲಾರದ ಜನ ವದÀಗಿ ನಿನ್ನನು ಭಜಿಸೆ ಕರುಣಿಪೀ 15 ಮಾನವ ನಿನ್ನ ಸೇವೆ ಮಾಡುವನವ ಕೋವಿದನಾಗುವ ನಿಶ್ಚಯಾ 16 ಇನಿತೆ ಮೊದಲಾದ ಘನತರ ಮಹಿಮವು ಜನರಿಗೆ ಶಕ್ಯವೆ ಗುರುರಾಯಾ 17 ಸುರತರು ಸುರಧೇನು ವರಚಿಂತಾಮಣಿ ನೀನೆ ಶರಣವತ್ಸಲ ಬಹು ಕರುಣೀಯೇ 18 ದಿನ ದಿನ ಮಹಿಮವು ಘನ ಘನ ತೋರೋದು ಬಿನಗು ಮಾನವರಿಗೆ ತಿಳಿಯಾದೋ 19 ಕರುಣಾನಿಧಿಯೆ ನೀನು ಶರಣ ಮಂದಾರನೆ ಶರಣ ವತ್ಸಲ ನಿನಗೆ ಶರಣೆಂಬೆ 20 ವಸುಧಿತಳದಿ ನೀನೆ ವಶನಾಗೆ ಜನರಿಗೆ ವ್ಯಸನಗಳುಂಟೇನೊ ಪೇಳಯ್ಯಾ 21 ದುರಿತ ದುಷ್ಕøತವೆಲ್ಲ ದೂರದಲೋಡೋವು ಕರಿಯು ಸಿಂಹನ ಕಂಡತೆರನಂತೆ 22 ನಿನ್ನ ನಾಮದ ಸ್ಮರಣೆ ಘನ್ನ ರೋಗಗಳನ್ನು ಚೆನ್ನಾಗಿ ನಾಶನ ಮಾಳ್ಪೋದೋ 23 ರಾಘವೇಂದ್ರ ಗುರು ಯೋಗಿಕುಲಾಗ್ರಣಿ ವೇಗಾದಿ ಪೊರೆದೆನ್ನ ಪಾಲಿಪೆ 24 ಜನನಿ ಜನಕರು ತಮ್ಮ ತನಯರ ಪೊರೆದಂತೆ ದಿನದಿನ ನೀನೇವೆ ಸಲಹೂವಿ 25 ಅನಿಮಿತ್ತ ಬಾಂಧವ ಅನುಗಾಲ ನೀನಿರೆ ಜನರು ಮಾಡುವ ಬಾಧೆÉ ಎನಗೇನೋ 26 ಮನಸಿನೊಳಗೆ ನಿತ್ಯ ನೆನೆಯುತ ತವ ಪಾದ ವನಜ ಯುಗಳ ಮೊರೆ ಪೊಂದಿದೆ 27 ನಿನ್ನ ಮಹಿಮ ಶ್ರವಣ ನಿನ್ನ ಗುಣಕೀರ್ತನ ನಿನ್ನ ಮೂರ್ತಿಧ್ಯಾನ ನೀಡೈಯ್ಯಾ 28 ನಿನ್ನ ಉಪಾಸನ ನಿನ್ನ ದಾಸತ್ವವ ಚನ್ನಾಗಿ ಎನಗಿತ್ತು ಸಲಹೈಯ್ಯಾ 29 ನಿನ್ನನುಳಿದು ಈಗ ಮನ್ನಿಸಿ ಪೊರೆವಂಥ ಘನ್ನ ಮಹಿಮರನ್ನ ಕಾಣೆನೋ 30 ದಾತ ಗುರು ಜಗ ನ್ನಾಥ ವಿಠಲಗತಿ ಪ್ರೀತಿ ಪಾತ್ರನು ನೀನೆ ನಿಜವಯ್ಯೊ 31
--------------
ಗುರುಜಗನ್ನಾಥದಾಸರು
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ನಾನಾಗಿ ನನಗಾಗಿ ನಮಿಸುವೆನು ಬಾಗಿ ನೀನಾಗಿ ಕೃಪೆಮಾಡೋ ದೀನಾನುರಾಗಿ ಪ ನಾನಿನ್ನ ಕೈಗೊಂಬೆ ನೀನೆಗತಿಯೆಂಬೆ ನೀನನ್ನ ಕರೆತಂದೆ ಶ್ರೀನಾಥ ನಾ ಬಂದೆ ಅ.ಪ ತರಳನ ಕರೆತಂದೆ ತರುಣಿಕೂಗಿ [ದರಿಕೆಬಿಡಿಸಿ ಮಾನಿನಿಯ ರಕ್ಷಿಸಿದೆ] ಹರಿಯೊಂದು ಜಲದಲಿ ನರಳಿದಕರೆಗೆ ಕರುಣದೊಳೋಡಿ ಬಂದು ಪೊರೆದೆ ನೀತಂದೆ 1 ಜ್ಞಾನಿಯು ನಾನಲ್ಲ ಮಾನಿಯುಮಲ್ಲ ಧ್ಯಾನದ ರೀತಿಯ ನಾನರಿತಿಲ್ಲ ನಾನಾ ಶಾಸ್ತ್ರಂಗಳ ಕಲಿತವನಲ್ಲ ನೀನೆ ಶರಣೆಂಬೆ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ