ಒಟ್ಟು 18 ಕಡೆಗಳಲ್ಲಿ , 15 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಣ್ಣರೊಡನಾಡನಡೆದ ಮುದ್ದುರಂಗ ಮುದ್ದು ಕೃಷ್ಣ ಪ.ಇಟ್ಟು ಹಣೆಯೊಳು ಉಗುರು ನಾಮವ ಗೋವಗಟ್ಟಿಗೆಯನು ಕರದೊಳು ಪಿಡಿದುಪುಟ್ಟ ಕಂಬಳಿ ಹೊದ್ದು ಪದಕೆ ಪಾದುಕೆಮೆಟ್ಟಿ ಅಣ್ಣ ಬಲರಾಮ ನಡೆಯೆಂದು 1ಆಡಲೊಲ್ಲೆನೆಂಬ ಮಕ್ಕಳ ಮನ್ನಿಸಿಕೂಡಿಕೊಂಡು ಅಣ್ಣ ತಮ್ಮನೆಂದುಹಾಡುತ ಕುಣಿದು ಚಪ್ಪಾಳೆ ಹೊಯಿದಾಡುತಓಡ್ಯಾಡಿ ಅಮ್ಮನ ಮಾತ ಕೇಳದೆ ಕೃಷ್ಣ 2ಚಿಣ್ಣಿ ಪೊಂಬಗರ್ಚೆಂಡು ಗುಮ್ಮ ಗುಸಕು ಹಬ್ಬೆಅಣ್ಣೆಕಲ್ಲು ಹÀಲ್ಲೆ ಗಜಗ ಗೋಲಿಕಣ್ಣುಮುಚ್ಚಾಲೆ ಮರನೇರಾಟ ನೀರಾಟಸಣ್ಣರೊಳಾಡಿ ಸೋಲಿಪೆನೆಂಬ ತವಕದಿ 3ರಾಜಿಪ ರಾಜಬೀದಿಲಿನಿಂದುನೋಡುವರಾಜಮುಖಿಯರೊಳು ಸೆಣಸ್ಯಾಡುತರಾಜಕುಲಾಗ್ರಣಿ ಸರ್ವಭೂಷಣದಿ ವಿರಾಜಿತನಾಗಿ ಗೋಳಿಡುತ ಮುರಾರಿ 4ಜಗವ ಪುಟ್ಟಿಸಿ ನಲಿದಾಡುವಾಟವು ತನಗೆ ಸಾಲದೆಂದು ಆವಹಳ್ಳಿಲಿಬಗೆ ಬಗೆ ಲೀಲೆಯ ತೋರಿ ಗೋಗಾವರ್ಗೆಸುಗತಿನೀವೆನೆಂದು ಪ್ರಸನ್ವೆಂಕಟ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು
ಹಕ್ಕಿಯ ಹೆಗಲೇರಿ ಬಂದವಗೆ ನೋಡಕ್ಕ ಮನಸೋತೆ ನಾನವಗೆ ಪ.ಸತ್ರಾಜಿತನ ಮಗಳೆತ್ತಿದ ಉನ್ಮತ್ತ ನರಕನೊಳು ಕಾದಿದಮತ್ತೆ ಕೆಡಹಿದ ಅವನಂಗವಸತಿಗಿತ್ತನು ಆಲಿಂಗನವ 1ಹದಿನಾರು ಸಾವಿರ ನಾರಿಯರ ಸೆರೆಮುದದಿಂದ ಬಿಡಿಸಿಮಾಮನೋಹರಅದಿತಿಯಕುಂಡಲತಳೆದಾ ಹರವಿಧಿಸುರ ನೃಪರನು ಸಲಹಿದ2ಉತ್ತಮ ಪ್ರಾಗ್ಜೋತಿಷ ಪುರವ ಭಗದತ್ತಗೆ ಕೊಟ್ಟ ವರಾಭಯವಕರ್ತಕೃಷ್ಣಯ್ಯನ ನಂಬಿದೆ ಶ್ರೀಮೂರ್ತಿಯ ಪಾದವ ಹೊಂದಿದೆ 3ನರಕ ಚತುರ್ದಶಿ ಪರ್ವವಹರಿಹರುಷದಿ ಪ್ರಕಟಿಸಿದನು ದೇವಶರಣಾಗತಜನ ವತ್ಸಲ ರಂಗಪರಮಭಾಗವತರ ಪ್ರತಿಪಾಲ4ಹೊಗಳಿ ಕೃಷ್ಣಯ್ಯನ ಮಹಿಮೆಯ ಮುಕ್ತಿನಗರದ ಅರಸನ ಕೀರ್ತಿಯಜಗದೀಶ ಪ್ರಸನ್ವೆಂಕಟೇಶನೆ ಭಕ್ತರಘಹಾರಿ ರವಿಕೋಟಿಕಾಶನೆ 5
--------------
ಪ್ರಸನ್ನವೆಂಕಟದಾಸರು