ಒಟ್ಟು 914 ಕಡೆಗಳಲ್ಲಿ , 99 ದಾಸರು , 661 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿ ಜನರೆಲ್ಲನೋಡುವರು ನೋಡುವರು ಗುರುಗಳನಾ | ಪ್ರಹ್ಲಾದನೆಂದು ಹೊಗಳುವರು 1 ದಾಸಜನರೆಲ್ಲ ನೋಡುವರು ಮುನಿಯೆಂದು ಹೊಗಳುವರು 2 ಮಂತ್ರಾಲಯದ ದೊರೆಗಳು ಬಿಡಿಸಿ ಕಳುಹುವರು 3 ಎಂಥ ಕÀರುಣಾಳು ಸಂತಾನಕೊಟ್ಟುಸಲಹುವರು 4 ಬಂದ ಜನರನ್ನು ಪೊರೆಯುವರು ನೆಂತೆಂದು ಕರಿಯುವರು 5 ತೋರಮುತ್ತಿನ ಹಾರವನು ಕೈಯ ಮುಗಿವೇನು 6 ಅಂಗಾರ ಧರಿಸುವರು ಮಂತ್ರಾಕ್ಷತೆಯಿಂದ | ಕುಷ್ಟ ರೋಗಗಳನೆಲ್ಲ ಕಳೆಯುವರು 7 ವಂಧ್ಯುರಿಗೆ ಕಂದರಾಗುವರು ಆಗುವರು ಗುರುಗಳು | ಜನರು ಆನಂಧದಿಂದ ಭಜಿಸುವರು 8 ಆನಂದಕ್ಕೆ ಅಳವಲ್ಲ ಅಳವಲ್ಲ ಗುರುಗಳನ | ನಿಂತು ನೋಡುವರ ನೆಲೆಯಿಲ್ಲ 9 ಎಲ್ಲದುರಿತಗಳ ಪರಿಹಾರ ಪರಿಹರಿಸುವ ಲಕ್ಷ್ಮೀ ವಲ್ಲಭ | ನರಸಿಂಹ ವಿಠಲನ ನೆನೆವೇನೆ 10
--------------
ಓರಬಾಯಿ ಲಕ್ಷ್ಮೀದೇವಮ್ಮ
ಕಥನಾತ್ಮಕ ಅರಸಿಕೊಂಬೆ ಮನಸ್ಸಿಗೆ ಬಂದವಳ ಪ ಶ್ರೀ ರುಕ್ಮಿಣಿ ಸಂಗಡ ಕೇಳಿಯಲಿ ಶ್ರೀ ರಮಣ ಇರಲು | ಕೊಂಡು ಮಾತಾಡಿ ಬೇಡಿದ 1 ನಾರಿಯರು ನಿನಗೆ ಉಂಟಾಗ ಈರೈದು ಸಾವಿರ ಪರಾಕು 2 ಕೇಳೈ ಮಹ ತಪಸಿಯನ್ನೀಗ ವೇಳ್ಯ ಮೀರಗೊಡದೆ | ಸತಿ ವೇಗ ಪೋಗು ನೀ ಸಾಗು 3 ನಿಂದಿರದೆ ನಾರದಾ ಗೋಪಿಯವರ ಮಂದಿರವ ಸುತ್ತಿದಾ | ಒಂದೊಂದು ಮನೆಯಲಿ ಸೋಜಿಗ ಅತಿಶಯ | ಅಂದು ನಾರದಗೆ ತಾ ತೋರಿದ ಬಿರುದಾ 4 ಒಂದೆ ಮನೆಲಚ್ಯುತಾ ಅನಂತ ಒಂದು ಕಡೆ ಗೋವಿಂದ | ಪರಿಯಂತ ಏಕಾಂತ 5 ಚದುರಂಗ ನಗೆಕೂಟ ಒಂದು ಮನೆ | ಮಗುವು ಮುದ್ದಾಡಿ ಮಂಚದ ಮೇಲೆ ಮಡದಿಯಾ | ಬಿಗಿದಪ್ಪಿ ಸವಿನಾಡುವ ನೋಡಾ6 ಹೋಯಿದಾಟ ಒಂದು ಮನೆ | ಮನ್ಯರಾದ ಶುದ್ಧಿ ಮಕ್ಕಳ ಶೋಭನಾ | ಪಯಣಗತಿಯಲಿದ್ದ ವಾರ್ತಿ ಒಂದರ್ಥಿ7 ಕರುಗಳು ಒಂದು ಕಡೆ ಬಿಡುತ ತುರುಗಳ ಒಂದು ಮನೆ | ಕರಕೊಂಡು ಕುಡಿಯುತಾ | ಕುಸುಮವ ಮುಡಿಸುತ ನುಡಿಸುತಾ8 ಸ್ನಾನವು ಒಂದು ಕಡೆ ಸಂಧ್ಯಾನ ಮೌನವು ಒಂದು ಕಡೆ | ಧ್ಯಾನ ಜಪ ತಪ ವ್ಯಾಖ್ಯಾನ ಪುರಾಣ | ದಾನ ಧರ್ಮಗಳ ಕೊಡುವನು ನಡೆವನು 9 ಮಿಂದುಂಡು ಒಂದು ಮನೆ | ಅನಂತ ಇದ್ದಾ ಅನಿರುದ್ಧಾ10 ಬಂದು ಹರಿಯ | ಚರಣಕ್ಕೆ ಬಿದ್ದು | ಪರಬ್ರಹ್ಮ ನೀನಲ್ಲದಿಲ್ಲಾ ಇನ್ನಿಲ್ಲಾ 11
--------------
ವಿಜಯದಾಸ
ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ವ್ಯಾಸರಾಜರು ಇದಿರದಾವನು ನಿನಗೀ ಧರೆಯೊಳುಪದುಮನಾಭನ ದಾಸ ಪರಮೋಲ್ಲಾಸಾ ಪ ವಾದಿತಿಮಿರ ಮಾರ್ತಾಂಡನೆಂದೆನಿಸಿದೆವಾದಿಶರಭ ಭೇರುಂಢ ವ್ಯಾಸರಾಯಾ 1 ಯತಿಗಳೊಳಗೆ ನಿಮ್ಮಿಂದದವರುಗಳಪ್ರತಿಗಾಣೆನು ಈ ಕ್ಷಿತಿಯೊಳು ಯತಿರಾಯಾ2 ಹಮ್ಮನಳಿದು ಶ್ರೀಪತಿ ರಂಗವಿಠಲನ್ನಸುಮ್ಮಾನದಿಂ ಸೇವಿಪ ವ್ಯಾಸಮುನಿರಾಯಾ3
--------------
ಶ್ರೀಪಾದರಾಜರು
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
(ಅನಂತಪದ್ಮನಾಭ ಪ್ರಾರ್ಥನೆ) ಚಿಂತಿತದಾಯಿ ನಿರಂತರ ಸುಖದಾನಂತಪದ್ಮನಾಭಾ ಸಕಲಸುಜನಾಂತರ ಫಲದಾ ಪ. ಯಾಕೆಂದರೆ ಪೂರ್ಣಾ ನಂದನೀನೊಲಿಯಲು ಎಂದಿಗು ಕುಂದನು ಹೊಂದದಲಿರುವೆ ಸುಂದರ ವಿಗ್ರಹ ಸುಲಭದಿ ಸಕಲಾನಂದ ವಾರಿಧಿಯೊಳಿಳಿವೆ ಭವ ಬಂಧನ ಬಿಡಿಸುವ ದೊರೆ ನಿನ್ನರಿಯದೆ ಮಂದ ಬುದ್ಧಿಯಿಂದಿರುವುದು ಥರವೆ1 ನೀಲಾಳಕ ಪರಿಶೋಭಿತ ಮುಖಕಮಲಾಲಿಸು ಬಿನ್ನಪವÀ ಲೀಲಾಮೃತರಸ ಕುಡಿಸುತ ಕರುಣದಿ ಪಾಲಿಸು ವರಸುಖವಾ ಪದದೊಳಗಿರಿಸಿದ ದುರಿತ 2 ಹೆಂಡತಿ ಜನಿಸಿದ ಮನೆಯೊಳಗಿರುವುದೆ ಪುಂಡರೀಕನಾಥಾ ಪಂಡಿತರುಗಳಿದ ಕಂಡರೆ ನಗರೆ ಬ್ರಹ್ಮಾಂಡಕೋಟಿಭಾಸಾ ಅಂಡಲೆಯದೆ ಹೃನ್ಮಂಡಲದೊಳು ಶುಭಕುಂಡಲ ರಮೆಯೊಡಗೊಂಡು ಬೇಗದಲಿ ನಿಭ ಕುಂಡಲಿಗಿರಿಗ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಅಮ್ಮೆಂಬಳದ ಕುರ್ನಾಡು ಸೋಮನಾಥ) ಕಾಮಿತ ಫಲದಾತ ಕಟ್ಟೆಯ ಸ್ವಾಮಿ ಸೋಮನಾಥಾ ಪೂಜೆಯ ನಿರುತದಿ ಕೊಳ್ಳುವ ಪ. ಅಂಬಿಕೆಯನು ವರಿಸಿ ಗಜಚ ರ್ಮಾಂಬರವನು ಧರಿಸಿ ಶಂಬರಾರಿಯನು ಸುಲಭದಿ ಗೆಲಿದಂ- ಮ್ಮೆಂಬಳಜನರನು ನಂಬಿಸಿ ಸಲಹುವ 1 ಒಡೆಯನು ನೀನೆಂದೂ ಊರಿನ ಬಡ ಜನರುಗಳಿಂದೂ ಕೊಡುವ ಪೂಜೆಯನು ಮಡದಿಸಮೇತೀ- ಗಿಡದ ಬುಡದಿ ಕೊಂಬುಡುಪತಿಶಿಖರ 2 ದೋಷಗಳನು ತರಿವಾ ಪನ್ನಗ ಭೂಷಣನೀ ಬರುವಾ ತೋಷಪಡುವ ಸಜ್ಜನರಿಗೆ ಶೇಷಗಿ ರೀಶನು ಸಕಲಭಿಲಾಷೆಯ ಸಲಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಇ) ಶ್ರೀಕೃಷ್ಣಲೀಲೆ ಅಂಗಜನೈಯನು ಗೋಕುಲ ಪೋಗುವಾಗಕಂಗಳ್ಹಬ್ಬದ ಉಬ್ಬಿನೇನ ಬಣ್ಣಿಪೆನಾ ಪ ಎಳೆಗರುಗಳ ಝುಂಗುಗಳನ್ನು ಮತ್ತೆಮಲೆವ ಗೂಳಿಗಳ ಗೂರಾಟವನ್ನುಒಲಿವಾವಿನ ಕೆಚ್ಚಲು ಸಂದಣಿಯಲ್ಲಿನಲಿವ ಮರಿಗರುಗಳ ನೋಡುತಲಿ 1 ಆಡಿಸುವ ಮೊಗ ಬದಿಗಳ ತುರಿಸುತ್ತಝಾಡಿಸುವಾಕಾರ ಬೆದರು ನೋಟಏಡಿಸುವ ಹುಬ್ಬಿನ ಗೋವಳರಕೋಡಂಗಿ ಆಟಕ್ಕೆ ಕುಲುಕಿ ನಗುತ 2 ಒಂದು ಹುಬ್ಬೊಂದು ಕಿವಿಯನಲಗಿಸುತಮುಂದಣ ಚಂಡಿಕೆ ತಾಳದ ಗತಿಗೆಚಂದದಿ ಕುಣಿಸುವ ಭೃಂಗಿ ಆಟಕೆ ಗೋಪಸಂದೋಹಕೆ ಮೆಚ್ಚಿ ಬಲಗೆ ತೋರಿಸುತ 3 ಕೆಲರು ಕೋಗಿಲೆಯಂತೆ ಕೆಲರು ನವಿಲಿನಂತೆಕೆಲರು ಹಂಸದಂತೆ ಸಾರಸದಂತೆಗಳರವದಿಂ ಗೋಪರು ಕೂಗೆ ಋತುಗಳುನಳಿನಾಕ್ಷನ ಸೇವೆಗೆ ಕೂಡಿದಂತಿರೆ 4 ಒಂದೊಂದು ತಾಳಕ್ಕೆ ಒಂದೊಂದು ಪದಗತಿಒಂದೊಂದು ರಸಕ್ಕೆ ಮತ್ತೊಂದು ಕೈಗತಿಒಂದೊಂದು ಭಾವಕ್ಕೆ ಒಂದೊಂದು ನೇತ್ರವಾನಂದದಿ ಗೋವರ್ಧನ ನಾಟ್ಯವಾಡೆ 5 ಕಿನ್ನರ ಗಾನ ಗೋಪರ ಗೀತ ದೇವಕನ್ಯೇರ ನಾಟ್ಯ ಗೋಪರನಾಟ್ಯಚೆನ್ನಾರ ಕುಣಿಸುವ ಚಿಣ್ಣರ ಕಣ್ಣುಸನ್ನೆ ಝೇಂಕರಿಸುವ ಗೋಪರ ನೋಡುತ6 ನಾರಂದನ ವೀಣೆ ಗೋಪರ ಕಿನ್ನರಿಗೀರ್ವಾಣದುಂದುಭಿ ಗೋಪರ ಮುರಜಆ ರಂಭೆಯರಾಟ ಗೋಪರ ತಾಂಡವಕ್ಷೀರೋದಕದಂತೆ ಕಲೆಸಿ ಬೆರೆಸಿರೆ 7 ರಸತುಂಬಿ ತುಳುಕುವ ಕೊಳಲ ರವಂಗಳುಹಸುಗಳ ಕೊರಳ ಘಂಟೆಗಳ ನಿನಾದಎಸೆವೆಳಗಂದಿಯ ಅಂಬಾರವಂಗಳು ಪಸರಿಸೆ ಗೋವಳೆಯರು ಸಡಗರಿಸಿ8 ಜಂಗುಳಿ ಗತಿಯರ ಮುಖ ಕನ್ನಡಿ ಊರೋ-ಜಂಗಳೆ ಮಂಗಳ ಪೂರ್ಣ ಕುಂಭಗಳುಕಂಗಳೆ ನೀಲೋತ್ಪಲಂಗಳು ಕರಗಳೆತುಂಗ ಪಲ್ಲವ ತೋರಣದಂತೆಸೆಯೆ 9 ಚೆಂದದ ನೋಟವು ಮಂಗಳಾರತಿಯಾಗೆಮಂದಹಾಸವು ಪೂಮಳೆಯಾಗೆ ಆನಂದ ಪುಳಕಗÀಳೆ ಕೋಡಿಯಾಗೆ ಗೋಪವೃಂದವಿದಿರುಗೊಳ್ಳ ಬಂದರೊಲವಿಲಿ 10 ಕಂಗಳ ಕುಡಿ ನೋಟಂಗಳಿÀಂ ಸೆಳೆದುರಂಗನ ತಮ್ಮಂತರಂಗದೊಳಿಟ್ಟುಹಿಂಗದಾಲಂಗಿಸಿ ಸುಖಾಂಬುಧಿಯ ತ-ರಂಗದಿ ಗೋಪಾಂಗನೆಯರು ಮುಳುಗಿ11 ಗೋಪಿಜನರು ರಂಗಗೆ ಮರುಳಾಗಿರೆನೂಪುರ ಮರಕತ ಪ್ರಭೆ ಸಾರಳೆಯಾಗೆಆ ಪದ್ಮರಾಗವೆ ಕೆಂಪು ಕಾರಳೆಯಾಗೆಶ್ರೀಪದನಖ ಕಾಂತಿ ರಂಗವಲ್ಲಿಯಾಗೆ 12 ಬೃಂದಾರಕರು ಪೂಮಳೆಗರೆಯಲು ಬೇಗಬಂದಾಳಿಗಳು ಬೃಂದಾವನದಲ್ಲಿ ಮಕರಂದವನುಂಡು ಸ್ವರ್ಗವ ಹಳಿದಿಳೆಗೆಬಂದಳಿಂದಿರೆಯೆಂಬ ಸಂಭ್ರಮದಿಂದ 13 ತುರುಗಾತಿಯರ ನೋಟದ ಬೇಟಂಗಳುಹರಿಮುಖೇಂದವಿನಲ್ಲಿ ಚಕೋರಗಳುಹರಿನಾಭಿಸರೋವರದಲ್ಲಿ ಮೀನ್ಗಳುಹರಿಪಾದಪದುಮದಿ ತುಂಬಿಗಳಾಗೆ14 ಇತ್ತ ಗೋವಳರಾಟಕೆ ತಲೆದೂಗುತಅತ್ತ ದೇವತೆಗಳ ಸ್ತುತಿ ಕೇಳುತ್ತಇತ್ತ ಗೋವಳೆಯರ ನಗಿಸುತ್ತ ನಗುತ್ತಅತ್ತಿತ್ತ ಮುನಿಗಳ ಸ್ತುತಿ ಕೇಳುತ್ತ 15 ಕಂಜಾಸನ ನಮಿಸಲು ಕೈಹಿಡಿದೆತ್ತಿ ಮೃ-ತÀ್ಯುಂಜಯ ವಂದಿಸೆ ಬಾ ಯೆನ್ನುತ್ತಅಂಜಲಿ ಪುಂಜದ ಇಂದ್ರಾದಿಗಳನ್ನುಕಂಜನೇತ್ರಗಳ ಸನ್ನೆಯಲಿ ಮನ್ನಿಸುತ16 ಸಿರಿ ವನಿತೆಗೆ ವನಮಾಲೆ ಉಯ್ಯಾಲೆಮೊರೆವಳಿಕುಲಗಳ ರವ ಸಂಗೀತ ವರ ಮುತ್ತಿನ ಹಾರ ಚಾಮರ ಶ್ರೀಕೃಷ್ಣ-ನುರಮಧ್ಯವೆ ಮಂಟಪವಾಗೆಸೆಯೆ 17
--------------
ವ್ಯಾಸರಾಯರು
(ಈ) ತಾತ್ವಿಕ ಕೃತಿಗಳು ಓಂ ನಮೋ ನಾರಾಯಣ ಓಂ ನಮೋ ನಾರಾಯಣ ಪ ರಾಮಾನುಜ ಬೆಳೆದ ಧರೆಯೊಳಗೆ ಅ.ಪ ನಾರದ ಬಿತ್ತಿದ ನಾರಾಯಣ ಬೀಜಕೆ ಧೀರಾಂಬರೀಷನು ಗೊಬ್ಬರವಾದ ಕು- ಮಾರ ಪ್ರಹ್ಲಾದನು ನೀರಾಗೆರೆದ ಆ ರುಕುಮಾಂಗದ ಗಾಳಿಯಾದ1 ನಾರಾಯಣನೆಂಬ ಬೀಜಮಂತ್ರವು ಕು- ವರ ಧ್ರುವನ ಕಾವಲಿನಲ್ಲಿ ಸರಸರ ಬೆಳೆಯಿತು ಆಳುವಾರರು ಭೂ ಸುರ ಭಾಗವತರುಗಳಲಿ 2 ರಮಾನುಜನಿದರ ಒಕ್ಕಣೆಮಾಡಿ ಸಮಾನತೆಯಿಂದ ಹಂಚಿದನು ಶ್ರಿಮಣಿಯಲ್ಲಿ ತುಂಬಿದನು ಸಮಾನ ವೇದವೆನಿಸಿದನು 3 ಹಬ್ಬಿತು ಹರಡಿತು ಧರೆಯೆಲ್ಲ ಉಬ್ಬಿತು ಉಲಿಯಿತು ಗಿರಿಯೆಲ್ಲ ಅಬ್ಬಬ್ಬ ಜಾಜಿಪುರೀಶ ಕೇಶವನಾಮವು ಹಬ್ಬವಾಯಿತು ನಮಗೆಲ್ಲ 4
--------------
ನಾರಾಯಣಶರ್ಮರು
(ಉ) ವಿಶೇಷ ಸಂದರ್ಭದ ಹಾಡುಗಳು 486 (1) ಹೆಜ್ಜಾಜಿಕೇಶವಸುಪ್ರಭಾತ ಏಳಯ್ಯ ಜಾಜಿಪುರೀಶ ಕೇಶವರಾಯ ಬೆಳಗಾಯಿತೇಳಯ್ಯ ಎದ್ದುರುಳಯ್ಯ ಪ ಕೋಟೆ ಚನ್ನಿಗನೆಂದು ಹೆಸರಾದವನೆ ಪೇಟೆ ಚನ್ನಿಗನಾಗಿ ನೆಲೆಸಿರುವವನೆ ಏಳಯ್ಯ ಬೆಳಗಾಯಿತು 1 ಗರುಡ ವಾಹನನಾಗಿ ಕಣ್ಗಾವಲಾಗಿಹನೆ ಕು- ದುರೆ ವಾಹನನಾಗಿ ಊರೆಲ್ಲ ಕಾಯುವನೆ ಏಳಯ್ಯ ಬೆಳಗಾಯಿತು 2 ಶ್ರೀದೇವಿ ಭೂದೇವಿಯರ ನಡುವೆ ಅರಸಾಗಿ ಬಾಧೆಹೊತ್ತಾಜನರ ಹಾರೈಸುತಿರುವನೆ ಏಳಯ್ಯ ಬೆಳಗಾಯಿತು 3 ನಾರದರು ತುಂಬುರರು ದೇವತೆಗಳೆಲ್ಲ ಎ- ದುರಲಿ ನಿಂದು ವಂದಿಸುತಿಹರಲ್ಲ ಏಳಯ್ಯ ಬೆಳಗಾಯಿತು 4 ವಂದಿ ಮಾಗಧರು ಜಯಘೋಷ ಮಾಡುತ್ತ ಮಂದಿ ಮಂದಿಯೆ ನಿಂತು ನುತಿಸುತ್ತಿಹರು ಏಳಯ್ಯ ಬೆಳಗಾಯಿತು 5 ಭಂಟರು ಬಂದು ಮಂಗಳರವದಿಂದ ಗಂಟೆ ಜಾಗಟೆಗಳ ನುಡಿಸುತಲಿಹರು ಏಳಯ್ಯ ಬೆಳಗಾಯಿತು 6 ಮುನ್ನಿನ ರವಿಯು ಉದಯಿಸುತಿರುವನು ಹೊನ್ನಿನ ಕಿರಣಗಳ ಪಸರಿಸುತಿರಿವನು ಏಳಯ್ಯ ಬೆಳಗಾಯಿತು 7 ಬೀದಿಯ ಜನರೆಲ್ಲ ಬೇಗ ಬೇಗನೆ ಎದ್ದು ಹಾದಿಯ ಸಿಂಗರಿಸಿ ಕಾಯುತಲಿರುವರು ಏಳಯ್ಯ ಬೆಳಗಾಯಿತು 8 ಪೇಟೆ ಚೆನ್ನಿಗನ ಕಡೆಯಿಂದ ದಂಡೊಂದು ಭ ರಾಟೆ ವಾದ್ಯಗಳ ನುಡಿಸುತ್ತ ಬರುತಿಹುದು ಏಳಯ್ಯ ಬೆಳಗಾಯಿತು 9 ಕೊಂಬು ಕಹಳೆಗಳ ಊದುವರು ಕೆಲವರು ತುಂಬು ಮಂತ್ರಗಳ ಹೇಳುವರು ವೈಷ್ಣವರು ಏಳಯ್ಯ ಬೆಳಗಾಯಿತು 10 ಸುಮಂಗಲೆಯರು ಕಳಸ ಹೊತ್ತಿಹರು ಸುಮ್ಮಾನದಿ ಭಕುತರು ಕುಣಿಯುತಲಿಹರು ಏಳಯ್ಯ ಬೆಳಗಾಯಿತು 11 ಅಭಯ ಹಸ್ತನೆ ಏಳ ಕಮಲವದನನೆ ಏಳು ಉಭಯ ಜನರುಗಳೆಲ್ಲ ದರುಶನಕೆ ಕಾದಿಹರು ಏಳಯ್ಯ ಬೆಳಗಾಯಿತು 12 ನಿನ್ನ ಭಕ್ತರು ನಿಂತು ಧ್ಯಾನ ಮಾಡುತಲಿಹರು ಎನ್ನರಸ ಜಾಜಿಪುರ ವರದ ಕೇಶವರಾಯ ಏಳಯ್ಯ ಬೆಳಗಾಯಿತು 13
--------------
ನಾರಾಯಣಶರ್ಮರು
(ಎ) ಗುರುನಮನ ಶಿರಿವರನೆ ಕರುಣಾಂಬುನಿಧಿಯಮಲ ಚರಣಕಮಲವ ಬೇಡುತಿಪ್ಪರ ಪಾದಪಿಡಿವೆನು ನಾನು ಪ ಶಿರಿಲಕುಮಿ ಸರಸಿಜಭವ ಸರಸ್ವತಿ ಗುರುಪವಮಾನ ಭಾರತಿ ಮುಖ್ಯರ ವರ ಪಾದಂಗಳಿಗೆ ನಮಿಸುವೆ ಹರಿಯ ತೋರ್ಪದಕೆ 1 ಪನ್ನಗಾಶನ ಪನ್ನಗೇಂದ್ರರ ಪನ್ನಗ ವಿಭೂಷಣ ಸತಿಸುತರ ಸನ್ನುತಾಂಘ್ರಿಗಳ ಬಿಡದ್ವಿಡಿಪಿ ರಘುರನ್ನರರಪದಕೆ 2 ಗುರು ಶ್ರೀಪಾದರಾಯ ವ್ಯಾಸರ ಪುರಂದರ ವಿಜಯಾದಿ ಗುರುಗಳಿಗೊಂದಿಪೆನು ನರಸಿಂಹವಿಠಲನಂತುಪಾದ್ಯನು ದಾರಿತೋರ್ಪುದಕೆ 3
--------------
ನರಸಿಂಹವಿಠಲರು
(ಬ್ರಹ್ಮಣ್ಯತೀರ್ಥರು) ಬ್ರಹ್ಮಣ್ಯತೀರ್ಥರ ಚರಣಾಬ್ಜಯುಗ್ಮವ ಸಂಭ್ರಮದಲಿ ಸೇವಿಪೆ ಪ ಅಂಬುಜಬಂಧು ಸನ್ನಿಭಸಾಧುವೆನುತ ಶ್ರೀ ಕುಂಭಿಣಿ ಮುನಿವರ್ಯರಾ ಆರ್ಯರಾ ಅ.ಪ. ತಿದ್ದಿದ ಶ್ರೀಪುಂಡ್ರ ಮುದ್ರೆಗಳಿಂದಲಿ ಸಂ- ಶುದ್ಧಿ ಮಂಗಳಗಾತ್ರರ ರುದ್ರಗಳೊಲಿದು ಸದ್ವಿದ್ಯೆಗಳನಿತ್ತು ಉದ್ಧಾರ ಮಾಡಲೆಂದೂ ನಾ ಬಂದೂ 1 ಶಿಷ್ಯರುಗಳು ತಂದ ಭಿಕ್ಷಾನ್ನಂಗಳನಂದು ಆಕ್ಷಣ ಮಂತ್ರದಿಂದ ತÀಕ್ಷಣ ಕಲ್ಪಸಿದಂತೆ ಗೈದಾ ಧೀರ ರÀಕ್ಷಿಸೆಂದೆರಗುವೆ ನಾ ಬೇಡುವೆ 2 ಕಾಂತೆಯೋರ್ವಳು ತನ್ನ ಕಾಂತ ಸ್ವರ್ಗವನೈದೆ ಚಿಂತಿಸುತತಿ ಶೋಕದಿ ಕಾಂತೆ ವಂದಿಸಲು ಸೌಮಾಂಗಲ್ಯವರವನಿತ್ತು ಕಾಂತನ ರಕ್ಷಿಸಿದ ಕೋವಿದರಾದ 3 ಕುಂದದೆ ಸನ್ಮುನಿವೃಂದದೊಡನೆ ಬಹು ವೃಂದಾವನದಿ ಶೋಭಿಪ ಇಂದಿರೆಯರಸ ನರಸಿಂಹವಿಠ್ಠಲನ ಸನ್ನಿಧಿವರ ಪಾತ್ರರಾ ಪೂತಾತ್ಮರಾ 4
--------------
ನರಸಿಂಹವಿಠಲರು
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು