ಒಟ್ಟು 29424 ಕಡೆಗಳಲ್ಲಿ , 137 ದಾಸರು , 9577 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಬ್ಜಭವಪಿತ | ಮದ್ಗುರ್ವಂತರ್ಯಾಮಿ | ಸಲಹಯ್ಯ ಕುಬ್ಜ ಮೂರುತಿ | ಯಾದ ಗುರು | ಗೋವಿಂದ ವಿಠಲಯ್ಯ ||ಪ| ಈಶ ತಂದೆ ವೆಂಕ | ಟೇಶ ವಿಠಲನ | ದಾಸ ಸಹವಾಸ |ದೋಷ ರಾಶಿಯ | ನಾಶ ಗೈಸಿತು | ಶ್ರೀಶ ಕೇಶವನೇ 1 ಮರಣ ಸಮಯದಿ | ಚರಣ ಪುಷ್ಕರ | ಭಜಿಸಿದ ಜಮಿಳನ |ಕರುಣದಿಂದಲಿ | ಮರೆದ ವೋಲ್ | ಎನ್ನ ಮನಕೆ ಬಾ ನಾರಾಯಣ 2 ಭೇದ ಮತವೆಂ | ಬಬ್ಧಿಯಲಿ | ಉದಿಸಿವೆನು ಕಾಣಯ್ಯ |ಮಧ್ವಪತಿ | ಮದ್ಭಾರ ನಿನ್ನದು | ಸಲಹೊ ಮಾಧವನೆ 3 ಗೋವಿದಾಂಪತಿ | ಗೋಪ ಪಾಲಕ | ಶ್ರೀಶ ಗೋವಿಂದಮಾವ ಕಂಸನ | ಕೊಂದಸಿರಿ | ಗೋವಿಂದ ಸಲಹಯ್ಯ 4 ಸಿರಿ | ಕೃಷ್ಣ ಬೇಡುವೆ | ಕಷ್ಟ ಬಿಡಿಸಯ್ಯ |ವೃಷ್ಟಿಕುಲ ಸಂ | ಪನ್ನ ಪಾವನ | ವಿಷ್ಣು ಮೂರುತಿಯೆ 5 ವೇದಗಮ್ಯ | ದಯಾಪಯೋನಿಧಿ | ಸಾಧು ವಂದಿತನೆ |ಮೋದದಿಂ | ತವಪಾದ ಪೂಜಿಪೆ | ಪಾಲಿಸೈ ಮಧುಸೂಧನ 6 ಕಾಯ ಮಮತೆಲಿ | ಕಟ್ಟೆ ಧರ್ಮಾತ್ಮ |ಭವದ ಭವಣೆಯ | ಬಿಡಿಸುವುದು | ಬಲಿವರದ ತ್ರಿವಿಕ್ರಮ 7 ವಿಮಲ ಸತ್ಕಲ್ಯಾಣ | ಗುಣ ನಿಸ್ಸೀಮ | ಸುಜ್ಞಾನಾಅಮರಾರಿಯ ಧ್ವರ | ಕೆಡಿಸಿ ಉಳಿಸಿದೆ | ಶೀಲ ವಾಮನ 8 ಹೃದಯ ಶೋಭಿತ | ಮೋದಮಯ | ಮಧ್ವಾಂತರಾತ್ಮಕನೇ |ಆದಿಮೂರುತಿ | ಸಾಧು ವಂದಿತ ಕಾಯೋ ಶ್ರೀಧರನೇ 9 ಭಂಜನ ಬಿಸಜ ಭವ ಪಿತ | ಈಶ ಸರ್ವೇಶಾ |ಒಸೆದು ಬೇಡುವೆ | ಕಸರು ಕರ್ಮವ | ಹರಿಸೋ ಹೃಷಿಕೇಶ 10 ಬದ್ಧ ಜೀವನ | ಅಬದ್ಧ ಮಾಡಲು | ತಿದ್ದಿ ಸೃಜಿಸಿದೆಯೋ |ಸದ್ಗುರುವೆ ಮತ್ | ಪೊದ್ದಿಕೆಯ ಕಳೆ | ಪದ್ಮನಾಭನೆ 11 ಸಿರಿ ಮನೋಹರ |ಧಾಮತ್ರಯ ಸು | ತ್ರಾಮ ವಂದಿತ | ಪಾಲಿಸೈ ದಾಮೋದರ 12 ಪಂಕ ಕಳೆಯಯ್ಯ |ವೆಂಕಟಾ ಬಿರು | ದಾಂಕ ಜಯ ಜಯ | ಸಂಕರುಷಣ 13 ವಿಶ್ವ ವ್ಯಾಪಕನೇಶ್ರೀಶ ಸದ್ಮನೆ | ವಾಸುದೇವನೆ | ಪೋಷಿಸೈ ಪರಮಾತ್ಮನೇ 14 ನಿರವದ್ಯ ಆಪನ್ನ ಪಾಲನೆ | ಪೊರೆಯೊ ಪ್ರದ್ಯುಮ್ನ 15 ಅನಿರುದ್ಧ 16 ಕರಿವರನು ತವ | ಚರಣ ಸರಸಿಜ | ನಂಬಿ ಮೊರೆಯಿಡಲು |ಕರದ ಚಕ್ರದಿ | ತರಿದು ನಕ್ರನ | ಬಿಸುಟ ದೊರೆ ಪುರುಷೋತ್ತಮ 17 ದರ ಚಕ್ರಧರ | ಅಧೋಕ್ಷಜ18 ತರಳ ಕರೆಯಲು | ಭರದಿ ಕಂಬದಿ | ಬಂದ ತ್ರಿಪದಾಹ್ವದುರುಳ ಹಿರಣ್ಯನ | ತರಿದು ಭಕ್ತನ | ಸಲಹಿದ್ಯೋ ನರಸಿಂಹನೆ 19 ಕಚ್ಛಪ ಅಚ್ಯುತ | ಸಲಹೊ ಚ್ಯುತಿ ದೂರ | 20 ಸಾನುಕೂಲವು | ಸಕಲ ಸಾಧನ | ನಿನ್ನ ಭಜಿಸುವಗೇ ಜ್ಞಾನಗಮ್ಯ | ಅನಾದಿ ರೋಗವ | ನೀಗೋ ನೀ ಜನಾರ್ಧನ 21 ಸ್ಮರ ಕೋಟಿ ಸುಂದರ | ಪಾಹಿ ಉಪೇಂದ್ರ 22 ಮರದಿ ಎಂಜಲ | ಸವಿದು ಶಬರಿಯ | ಕಾಯ್ದೆ ಮುರವೈರಿ ತ್ವರದಿ ತ್ವತ್ಪದ | ವನಜ ಕಾಂಬುವ | ಹದನರುಹು ಶ್ರೀಹರಿ 23 ಜಿಷ್ಣು ಸಖ | ಶಿಷ್ಟೇಷ್ಟಪರಿ | ಹರಿಸಯ್ಯ ಮುತೃಷ್ಣಾ |ಕೃಷ್ಣೆ ಗಕ್ಷಯ | ವಸನ ದಾತನೆ | ಕಾಯೊ ಶ್ರೀ ಕೃಷ್ಣ 24 ನಿರುತ ನಿನ್ನಯ | ಚರಣ ಪುಷ್ಕರ | ಮಧುಪನೆನಿಸಯ್ಯಸ್ಮರಿಪರಘ | ಪರಿಹರಿಪ ಗುರು | ಗೋವಿಂದ ವಿಠಲಯ್ಯಾ | 25
--------------
ಗುರುಗೋವಿಂದವಿಠಲರು
ಅರಿಯೆನೋ ನಿನ್ಮಾಯ | ಸದ್ವಪುಷ ಚಿನ್ಮಯ ಪ ಪತಿ ಪರಿ ಮಿಗಿಲು ಇಲ್ಲವೊಚೆಲ್ವ ಹಯವೇರುತ್ತ ಮ್ಲೇಂಛರ ಸದೆವವನೆ ಅ.ಪ. ಪರಿ | ಪಂಥಿ ಬಾಧಕಕಂತುಹರ ಸಖ ಸೃಷ್ಟಿಕರ್ತನೆ | ಪ್ರಾಂತಗಾಣದ ಶಿರಿಸ್ತವನ ಕೊಂದನೆ 1 ಅಮಿತ ಮಹಿಮೋಪೇತ್ ಶಿರಿಹರಿ |ಸುಮತಿ ಸುಜನಾಂಬೋಧಿ ಚಂದಿರ | ಪ್ರಮಿತ ಜಗ ಸತ್ಕರ್ತ ಪ್ರಾಣನೇ 2 ಹರಿಯೆ ನಿನ್ನಯ ರೂಪ | ನೋಡುವುದಕೆ ಇರುವುದವು ಅಪರೂಪ |ದೇವಾದಿ ವರ್ಣಿಸೆ | ಇರುತಿರುವೆ ಬಹುರೂಪ | ಆರು ಅರಿಯದ ರೂಪ ನೀರೊಳಿರುತಿಹೆ | ಭಾರಪೊತ್ತಿಹೆ | ಕೋರೆದಂತನೆ ನಾರಸಿಂಹನೇ ಪೋರ ವಟುವೆ | ವೀರರಾಮನೆ | ಕ್ರೂರ ಖಳಹನ ನಾರಿಯರ ವ್ರತವಳಿದು ತೇಜಿಯನೇರ್ದ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಆಣೆಕಲ್ಲಾಡಿದಳೇ ಆನಂದದಲಿ ಬಗಳೆಸೆಣಸುವ ವೈರಿಗಳ ಶಿರಗಳ ಪಿಡಿದು ಪ ಮೊಂಡ ಮೂಕರ ತಲೆಯ ಮೂಳ ಮೂಸರ ತಲೆಯಭಂಡತನದಿ ಬಗುಳುವ ಪಾಪಿಯಚಂಡಾಲರ ತಲೆಯ ಚರಿಗೇಡಿಯ ತಲೆಯಪುಂಡರ ತಲೆಯನಂದು ಎನ್ನ ಕಣ್ಣಮುಂದೆ ತಾನು 1 ಒಂದೊಂದು ಎರಡು ಎಂದುಮುಂದೆ ಮೂರು ನಾಲ್ಕು ಎಂದುಹಿಂದೆ ಆದುದು ತಪ್ಪಿತು ಥೂ ಥೂ ಎಂದುಇಂದಿದು ಸದ್ಗುರು ರಾಯನ ಗುಸ್ತೆಂದುಚೆಂದದಿ ಆಡಿದಳೆ ಎನ್ನ ಕಣ್ಣ ಮುಂದೆ ತಾನು 2 ನಾನು ಎಲ್ಲಿದ್ದರೆ ತಾನಲ್ಲಿದ್ದಾಡುತಧ್ಯಾನವೆನ್ನಯ ಮೇಲೆ ಇಟ್ಟುಕೊಂಡುಮಾನನಿಧಿ ಚಿದಾನಂದ ರಾಣಿ ಬಗಳೆಏನ ಹೇಳಲಿ ನಿದ್ರೆ ನೀರಡಿಕೆಯಿಲ್ಲದೆ ಎನ್ನ ಕಾಯುತ
--------------
ಚಿದಾನಂದ ಅವಧೂತರು
ಆನಂದ ಚಂದಿರನೇ ದಾಸನನೇಕಿಂತು ಮರೆವೇ ಪ ದೀನ ದಯಾಪರ ನೀನು ಮನುಜಾಧಮ ನರ ನಾನು ಅ.ಪ ತ್ರಿಜಗಾಧಿಪ ಸುಪೂಜ್ಯನೇ | ಗಜರಾಜ ನತ ಪಾದನೇ ಅಜಸನ್ನುತ ವೈಭವನೇ | ಸುಜನಾವಳಿ ಸನ್ನುತನೇ 1 ಕರುಣಾಮಯ ಸಾಗರನೇ | ಪುರುಷೋತ್ತಮ ಮಾಧವನೇ ಉರಗಾಧಿಪ ಭೂಷಿತನೇ | ಗರುಡಧ್ವಜ ಕೇಶವನೇ2 ಕಡಲವಾಸ ದುರಿತನಾಶ | ಒಡಲ ಬೇಗೆ ಮನದ ಕ್ಲೇಶ ದಡಕೆಸೆಳೆದ ಬಂಧುನಾಶ | ಬಿಡಿಸಿ ಕಾವವ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆರೀಗೆ ಮೊರೆ ಇಡಲೋ | ನಿನ್ಹೊರತಿನ್‍ಆರೀಗೆ ಮೊರೆ ಇಡಲೋ ಪ ಮಾರ ಜನಕೆ ಹರೇ ಅ.ಪ. ಭಾರ ಬೆನ್ನಿಲಿ ಪೊತ್ತುಧಾರುಣಿಯನೆ ಚಿಮ್ಮಿ | ದುರುಳನ ತಂದೆಯೋ 1 ಕರವ ಚಾಚಿದೆ ದೇವಾ 2 ಪರಶುವ ಸಿಡಿದು ನೀ | ತರಿದೆಯೊ ತಾಯ್ ಕೊರಳಶರದಿಯ ಬಂಧಿಸಿ | ದುರುಳರ ತರಿದೆಯೋ 3 ಪೂಥಣಿ ಶಕಟ ಧೇನುಕ ವತ್ಸ ಭಂಜನಮಥಿಸಿ ಕಂಸನ ನಿನ್ನ ಮಾತಾಪಿತರ ಕಾಯ್ದೆ 4 ಬೆತ್ತಲೆ ತಿರುಗಿ ನೀ | ಉತ್ತಮ ಹಯವೇರಿವತ್ತಿ ದುರುಳನ ಶಿರ | ಕತ್ತರಿಸಿದೆ ದೇವಾ 5 ಆರತ ಜನ ನಿನ್ನ | ಈ ರೀತಿ ಪೇಳ್ವರುವಾರುತೆ ಕೇಳಿ ನಾ | ಮೊರೆಯಿಟ್ಟು ಅರುಹುವೆ 6 ಮುರಹರ ಶ್ರೀಕೃಷ್ಣ | ಗುರು ಗೋವಿಂದ ವಿಠಲಸರುವ ದೇವೋತ್ತಮ | ಕರುಣದಿ ಸಲಹೆನ್ನ 7
--------------
ಗುರುಗೋವಿಂದವಿಠಲರು
ಇಂದಿರಾನಂದ ಉದಧಿವರ್ಧನನೆಂದು ಪ ಕಂದರ್ಪಕೋಟಿ ಲಾವಣ್ಯನಿಧಿ ಮನಪೊಂದು ಅ.ಪ ನಾನು ನನ್ನದು ಎಂಬ ಜ್ಞಾನ ಸಂತತಿಯಿಂದ ನಾನಾ ಯಾತನೆ ಭಾವ ಬಲೆಯ ಕಟ್ಟಿ ಹೀನಗೋಜಿಲಿ ಸಿಕ್ಕಿ ಬಲುನೊಂದೆ ಗೋವಿಂದ ನೀನು ನಿನ್ನದು ಎಂಬ ಅಮೃತಗಾನದಿ ನಿಲಿಸು 1 ದರ್ವಿಯಂದದಿ ನಾನು ನೀ ಸರ್ವ ಸ್ವಾತಂತ್ರ ನಿರ್ವಾಹ ನಿನ್ನಿಂದ ಸರ್ವ ಜಗಕೆ ದೂರ್ವ ಏರಿಸೆ ಸಕಲ ದುರಿತವಳಿಸಿ ಮುಕ್ತಿಸುಖ ತೋರ್ವಂಥ ಗುಣನಿಧಿ ಸರ್ವಾತ್ಮ ಹೊರೆ ಹೊರೆಯೊ 2 ನಿನ್ನ ದರುಶನ ಬಿಟ್ಟು ಅನ್ಯತ್ರ ನಿರ್ಭೀತಿ ಎನ್ನಲಿ ಎಂದೆಂದು ವೇದವೇದ್ಯ ನಿನ್ನ ದರುಶನ ಫಲಕೆ ನಿನ್ನ ಮಹಕರುಣ ಇನ್ನು ಕಾರಣದೇವ ಧನ್ಯರಲಿ ಇಡು ಎನ್ನ 3 ಮನೋವಿಕಾರಗಳೆಂಬ ದುಃಖಾರ್ಣದಿ ಬಿದ್ದು ಅನುಮಾನ ಮಾಡಿದೆನೊ ನಿನ್ನ ಅಮೃತ ತನುಧ್ಯಾನ ಮನಕಿಡಿಯದೇನುಗತಿ ಯದುವರ್ಯ ತೃಣಕೆ ಕೈವಲ್ಲೀವ ತ್ರ್ಯಧೀಶಮನಪೊಂದು 4 ಜ್ಞಾನಮನ ಬಿಡದಿರು ದೀನ ಬಾಂಧವ ಕೃಷ್ಣ ಇನ್ನು ಮಾಯವನು ತೆಗೆದೆನ್ನ ಬೆರೆಯೊ ಜ್ಞಾನನಿಧಿ ಜಯೇಶವಿಠಲನೆ ವಿಧಿವಂದ್ಯ ಪ್ರಾಣಾಧಾರಕ ಶುಕನ ಆನಂದನಿಧಿ ಪಾಹಿ 5
--------------
ಜಯೇಶವಿಠಲ
ಇಂದಿರೆಯರಸನ ಛಂದದಿಂದ ಭಜಿಸೋ | ಮನದಲಿ ನೀ ನಿಲಿಸೊ ಪ ಕುಂದನು ಎಣಿಸದೆ ಬಂದು ಕಾಯ್ವ ನಿನ್ನಾ |ನೆಂದು ಕಂದ ಬಲು ಘನ್ನಾ ಅ.ಪ. ಪಾದದ ಮೂಲವು | ಪಾತಾಲವು ಎಂದೂ | ಉಪರಿ ರಸಾತಲವೆಂದುಪಾದದ ಪರ್ವವು | ಮಹಾ ತಲಾಖ್ಯ ಲೋಕ | ಉಪರಿ ತಲಾತಲ ಲೋಕ ||ಸಾಧಿಸು ಜಂಘೆಗಳ್ | ದ್ವಯವೆ ಸುತಲ ಲೋಕ |ಚಿಂತಿಸಿ ಕಳೆ ಶೋಕ ||ಮೋದದ ಊರು ದ್ವಯ | ವಿತಲಾತಲವೆನ್ನೂ | ಮುಂದೆ ಸಾಗುತಲಿನ್ನು 1 ಭೂರಿ ಲಲಾಟವೆ | ತಪಸಿಗಳಾಸ್ಥಾನಾ | ಶಿರ ಬ್ರಹ್ಮನ ಸ್ಥಾನ 2 ಮುನ್ನ ಸೂಕ್ಷ್ಮ ಚಿಂ | ತನೆಯೇ ಬಲು ಕಷ್ಟ | ಎಂದೆನುತ ವಿಶಿಷ್ಟಘನ್ನ ಮಹಿಮ ಹರಿ | ತಾಳಿದ ಬೃಹದ್ರೂಪ | ಅದುವೆ ವಿರಾಟ್ರೂಪಾ ||ನಿನ್ನ ಬಿಂಬ ಗುರು | ಗೋವಿಂದ ವಿಠಲನ್ನ | ಮತ್ತೆ ಸ್ಥೂಲವನ್ನಾ ನನ್ನೆಯೆಂದೈಕ್ಯವೆ | ಚಿಂತಿಸೋದು ಮುನ್ನ | ಒಲಿವನು ಗುಣ ಪೂರ್ಣ 3
--------------
ಗುರುಗೋವಿಂದವಿಠಲರು
ಇಂದು ನಾನು ಕರುಣಿಸೊ ಎನ್ನೊಡೆಯನೆ ಪ. ಕೌಸ್ತುಭ ಭೂಷಣಮೆಟ್ಟಿದ ನವರತ್ನದ್ಹಾವಿಗೆಇಟ್ಟ ಕಸ್ತೂರಿ ತಿಲಕವ 1 ಮಂದಹಾಸವು ದಂತಪಂಙÉ್ತಯುಉಂದದ ಕಡೆಗಣ್ಣ ನೋಟವುಅಂದವಾದ ಕುರುಳುಗೂದಲುಮುದ್ದು ಸುರಿವೋ ಮುಖವ ನಾ 2 ಮೊಲ್ಲೆ ಮಲ್ಲಿಗೆ ದಂಡೆ ಕೊರಳಲಿಚೆಲ್ವ ಕಂಕಣ ಕೈಯಲಿಗೊಲ್ಲಸತಿಯರ ಕುಚಗಳಲ್ಲಿ[ಅಲ್ಲಳಿ] ಮಾಡಿ ನಗುವನ3 ವೃಷ್ಟಿ ಕರೆಯಲು ಅ-ಸುರರೆಲ್ಲರು ಓಡಲುಕ್ರೂರ ಕಾಳಿಯ ಫಣಗಳಲ್ಲಿಧೀರ ಕುಣಿಕುಣಿದಾಡಿದ 4 ಎನ್ನ ಬಂಧನ ತರಿಸಿದನೆಎನ್ನ ಪಾಪವು ಓಡಿತುಅನ್ಯದೈವವ ಭಜಿಸಲ್ಯಾತಕೆಮನ್ನಿಸೊ ಹಯವದನನೆ5
--------------
ವಾದಿರಾಜ
ಇನ್ನಾದರೂ ಮನದ ಚಂಚಲವ ನಿಲ್ಲಿಸೋ ನೆನ್ನೆ ಕಳೆಯಿತು ನಾಳೆ ಇನ್ನೇನು ಗತಿಯೋ ಪ ಗುರುಹಿರಿಯರನು ಕಂಡು ಶಿರಬಾಗಿ ವಂದಿಸಲು ಚಿರಬಾಳು ನೂರ್ವರ್ಷ ಎಂದೆಂಬರು ಧರೆಯಿಂದ ಜವನವರು ಕರೆಯ ಬರುವಾದಿನವೆ ಬರಿದಾಗುವುದು ನೂರು ವರ್ಷವದರಿಂದ 1 ಧನಕನಕ ಮನೆ ಮಾಟ ಎನಗೆ ಚಿರವೆಂದೆನುತ ಮನವಿಂದ್ರಿಯಂಗಳನು ನಡಸಿತೆಲ್ಲೆಡೆಗೆ ತನಗಾಗಿಯೇ ಸಕಲ ಜನರು ಜನಿಸಿದರೆಂದು ನೆನೆದು ಹಿಂಸಿಸಿತವರ ಓ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇನ್ನಿವನು ಈಗ ಬರಲಿದಕೆ ಬಗೆಯೇನುಚೆನ್ನಾಗಿ ಪೇಳೆ ರಮಣಿ ಪ ಮನ್ನಿಸಿ ಮಮತೆಯಲಿ ಮನವ ಸೆಳಕೊಂಡೊಯ್ದುಅನ್ಯರನು ಕೂಡುವನೆ ಕೆಳದಿ ಅ.ಪ. ಬಣ್ಣದ ಗಿಣಿ ಬರೆದ ಸಣ್ಣ ಕುಪ್ಪಸವುಳ್ಳಚಿನ್ನದ ಶ್ರೀರೇಖೆ ಸೀರೆಬಿನ್ನಣವುಳ್ಳ ಬಿಳಿಯೆಲೆ ಅಡಿಕೆ ಕೆನೆಸುಣ್ಣಕರ್ಪೂರ ಕಾಚಿನುಂಡೆಕಣ್ಣಿಗಿಂಪಾದ ಕಡು ಚೆಲ್ವ ಮಲ್ಲಿಗೆ ಮೊಗ್ಗೆ ಉನ್ನತವಾದ ದಂಡೆಇನ್ನು ಈ ಪರಿಮಳವು ಬಗೆಬಗೆಯ ಆಭರಣರನ್ನ ಕೆತ್ತಿಸಿದ ಗೊಂಡೆಮುನ್ನ ಸಿಂಗರ ಮಾಡಿ ಎದೆಹಿಡಿದು ಬಿಗಿಯಪ್ಪಿನಿನ್ನ ಈ ವೇಳೆ ಕೂಡಿದೆ ದೃಢದೆ 1 ಈಗಾಗು ಬಾಹನೆಂತಿರುವೆ ತಾನೂರಿದ್ದಉಗುರು ಗುರುತನು ನೋಡುತಸೋಗೆಗಣ್ಣಿನ ಕಾಡಿಗೆಯ ಕಲಕಿದನೆಂದುಬೇಗ ನಟನೆಯ ಮಾಡುತರಾಗದಿಂದದಲಿ ರವಿಕೆ ನೆರಿಯನು ಬದಲುಟ್ಟುಭೋಗಕ್ಕೆ ಅನುವಾಗುತಹಿಂಗೆ ಸಿಂಗರಿಸಿಕೊಂಡಿಷ್ಟು ಹೊತ್ತನು ಕಳೆದೆಹೇಗೇ ಸೈರಿಪೆ ಕೂಡದೆ ಮುಂದೆ 2 ಇಂದಲ್ಲದಿರೆ ನಾಳೆ ಬಹನೆಂದು ಇದ್ದರೆಕಂದರ್ಪ ಕಾಡುತಿಹನೆತಂದು ತೋರಿಸು ತನ್ನ ತಂದೆಯನೆಂದು ಪೂ-ವಿಂದ ಬಾಣವ ಎಸೆವನೆಇಂದುಬಿಂಬವು ಮಂದ ಮಾರುತವು ಸುಮದ ಮಳೆ-ಯಿಂದ ಸೆಕೆಗಾನಾರೆನೆಒಂದು ನಿಮಿಷದಲಿ ಶ್ರೀರಂಗ ವಿಠ್ಠಲನನ್ನುಹೊಂದಿಸೆನ್ನಗಲದಂತೆ ಕಾಂತೆ 3
--------------
ಶ್ರೀಪಾದರಾಜರು
ಇಷ್ಟ ಲಿಂಗವ ಪೂಜಿಸೆಂದು ಗುರುವು ಕೈಯಲಿ ಕೊಟ್ಟಇಷ್ಟಲಿಂಗ ನೀನೆ ಎಂದು ಕಿವಿಯಲಿ ಹೇಳಿಬಿಟ್ಟ ಪ ಉದಯದಲಿ ಲಿಂಗವನ್ನು ಬಯಲ ಕಡೆಗೆ ಒಯ್ಯುವೆಅದರ ತರುವಾಯದಲಿ ಲಿಂಗಮುಖವನೀಗ ತೊಳೆವೆಹದ ಮಾಡಿಯೆ ಬಿಸಿನೀರನು ಲಿಂಗಕ್ಕೆ ಎರೆವೆವಿಧವಿಧದ ವಸ್ತ್ರಗಳನ್ನು ಲಿಂಗಕ್ಕೆ ಉಡಿಸುವೆ 1 ಬಸಿತವನು ಹಣೆಯ ತುಂಬ ಲಿಂಗಕ್ಕೆ ಧರಿಸುವೆಕುಸುಮವೇನು ದೊರಕಿದರು ಲಿಂಗಕ್ಕೆ ಮುಡಿಸುವೆಬಿಸಿಯಾರಿದ ಎಡೆಯ ನಾನು ಲಿಂಗಕ್ಕೆ ಉಣಿಸುವೆಪಶುಪತಿಯೆ ಉದಕವೆಂದು ಲಿಂಗಕ್ಕೆ ಕುಡಿಸುವೆ2 ಲಿಂಗ ಕೊಳ್ಳೆಂದು ತಾಂಬೂಲ ನೀಡುವೆಭಂಗಭವನ ಸ್ತೋತ್ರ ಮಾಡಿ ಲಿಂಗವನ್ನು ಮಲಗಿಸುವೆಲಿಂಗವನ್ನು ನಡೆಸ್ಯಾಡಿ ಲಿಂಗವನ್ನು ಮಲಗಿಸುವೆಲಿಂಗ ಚಿದಾನಂದ ಬ್ರಹ್ಮಲಿಂಗವಾಗಿ ಇರುತಿಹೆ 3
--------------
ಚಿದಾನಂದ ಅವಧೂತರು
ಉಗಾಭೋಗ ಪರಶು ಮುಟ್ಟಲು ಲೋಹ ಸ್ವರ್ಣವಾಗುವ ಪರಿ ಸಿರಿ ಒಲಿಯೆ ದಾರಿದ್ರ್ಯ ಹತವಾಗಿ ಪೋಪಂತೆ ಅರಸು ಮುಟ್ಟಲು ದಾಸಿ ವರನಾರಿ ಅಪ್ಪಂತೆ ವಿರಜೆ ಮುಳುಗಲು ಜೀವ ವಿರಜನಾಗುವ ತೆರದಿ ವರ ಸುಧಾಪಾನದಿ ಜರೆ ಮರೆ ರೋಗಗಳು ಹರಿದ್ಹೋಗುವಂದದಿ ಹರುಷದಿ ನಮಗಿನ್ನು ಗುರುವರ ದೊರಕಲು ವರ ಪುಣ್ಯರಾಸಿಯಂತೆ ಪಾಪಿ ನಾನು ಹರಿಭಕ್ತನಾದೆ ಮುಂದೆ ಕರುಣಾರ್ಣವ ಸುರತ ಜಯೇಶವಿಠಲ ಸುರಿವ ಕರುಣ ನಿಶ್ಚಿಂತೆ
--------------
ಜಯೇಶವಿಠಲ
ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ಎಂಥ ಮಹಿಮ ಬಲವಂತ ನಮ್ಮ ್ಹನುಮಂತ ನಿಂತು ನೀ ಸಲಹೋ ನಿರಂತರದಲ್ಲೆನ್ನ ಪ ರಾಮನುಂಗುರ ಸೀತೆಗಿಟ್ಟ ಮರವ ಕಿತ್ತಿಸೂ- ರೆ ಮಾಡ್ಯಕ್ಷಕುಮಾರನ್ನ ಮುರಿದು ರಾವಣೇಶನ ಲಂಕಾದ್ವೀಪಕೆ ದೀಪಗಳ್ಹಚ್ಚಿ ಹಾರಿದ್ವಾರಿಧಿ ವಾರ್ತೆ ಹರಿಗೆ ಬಂದರುಹಿದ 1 ಭೀಮಸೇನವತಾರ ಮಾಡಿ ತಾ ಪಾಂಚಾಲಿ ಕೂಡಿ ಕೊಂಡ್ವನವಾಸ ಚರಿಸಿ ಬಂದು ಕ್ರೂರ ಕುರುಪತಿ ಕುಲಕಂತಕನೆಂದರಸನ ಪಟ್ಟ- ರಾಜ್ಞಿ ದ್ರೌಪದಿಧರ್ಮರಾಜಗ್ವಂದಿಸಿದನು 2 ಮಾಯಾವಾದಿಯ ಮುರಿದೊತ್ತಿದ ತಾ ಮಧ್ವ- ರಾಯರಾಗಿ ರಜತಪೀಠಪುರದಲ್ಲೆ ಭೀಮೇಶ ಕೃಷ್ಣನ್ನ ನಿಲಿಸಿ ಬಂದೀ ಬೊಮ್ಮ ಗ್ರಾಮದಿ ನಿಂತನೆ ಸೀತಾರಾಮರ ಸಹಿತವಾಗಿ3
--------------
ಹರಪನಹಳ್ಳಿಭೀಮವ್ವ
ಎಂಥಾ ದಯಾಕರನು ನೋಡೆ ಸದ್ಗುರುರಾಯಎಂಥಾ ದಯಾಕರನು ನೋಡೆ ಅಂತರಂಗದ ತಾಪವ ಹರಿಸಿ ಅಂತರಾತ್ಮನ ತೋರಿದ ಪ ಹಸಿವು ತೃಷೆ ಪರಿಹರಿಸಿ ನಾನಾಬಗೆವಿಷಯವೆಲ್ಲವ ತೊರೆಸಿಮುಸುಕ ನುಗಿದು ಮಾಯೆಯಪರಂಜ್ಯೋತಿಯ ಬೆಳಗಿಸಿದನು ನೋಡೆ 1 ಸಂಸಾರದ ಬಹು ದುಃಖವ ಹರಿಸಿಶಿಂಶುಮಾರ ಚಕ್ರವ ಹಂಸೋಹಂಸೋಹಮೆಂದೆನ್ನನೇರಿಸಿಸಂಶಯ ಹರಿಸಿದನೆ2 ನಿರುಪಮ ನೀನೆ ಎಂದು ನಿರ್ಗುಣಪರಮ ಪುರುಷನೆ ಬಂದುಗುರು ಚಿದಾನಂದ ಸಾಕ್ಷಾತ್ಕಾರ ನೀನೆಂದುಗುರು ನೀನೆ ನಿಜವೆಂದನೆ 3
--------------
ಚಿದಾನಂದ ಅವಧೂತರು