ಒಟ್ಟು 19 ಕಡೆಗಳಲ್ಲಿ , 15 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೋ ಶ್ರೀ ನಾರಸಿಂಹ ಕಾಯೋಕಾಯೋ ಶ್ರೀನಾರಸಿಂಹ ತ್ರಿಯಂಬಕಾದ್ಯಮರೇಶಘೋರಅಕಾಲಮೃತ್ಯು ಮೀರಿಬರಲು ಕಂಡುಭೀಷಣನೆ ಸುಭದ್ರ ದೋಷ ಮೃತ್ಯುಗೆ ಮೃತ್ಯುಜ್ಞಾನರಹಿತನಾಗಿ ನಾ ನಿನ್ನ ಮರೆತರೆಪ್ರಬಲೋತ್ತಮನೆನಿಸಿ ಅಬಲರ ಕಾಯದಿರೆಪಾಲಮುನ್ನೀರಾಗರ ಪದುಮೆ ಮನೋಹರ ಗೋ-
--------------
ಗೋಪಾಲದಾಸರು
ದುರಿತಪರಿಹರಿಸು ರಂಗಾಪರಮಪಾತಕರು ಬಂದರು ನೆರೆದು ರಂಗಾಪ.ಪ್ರತ್ಯಕ್ಷ ಜೀವನ ಶವಕೆ ಯಮನ ಚಾರಕರುಮುತ್ತಿ ಕೊಲುವಂತೆ ಕಾಣಿಸುತದೆ ದಯಾಳುಕರ್ತನೀನಲ್ಲದಿನ್ನೊಬ್ಬ್ಬೊಡೆಯಕಾಲಮೃತ್ಯು ವಿನಯದೆಶೂಲನರಪಂಚವದನ1ನೀನರಸನೆನಗಾಗಿ ಇನ್ನೊಬ್ಬ ನೀಚರಿಗೆದೀನನಾಗುವುದುಚಿತೆ ಕರುಣಗುಣ ಖಣಿಯೆಮಾನನಿನ್ನದು ಅವಮಾನ ನಿನ್ನದು ಪಾಂಡವಮಾನಿನಿಯ ಸಮಯಕೊದಗಿದ ಭಕ್ತ ಬಂಧು 2ಮರೆಹೊಕ್ಕೆ ದಾಸವತ್ಸಲನೆಂಬ ಬಿರುದು ಕೇಳಿರುವೆ ತಪ್ಪಿಸಿಕೊಳಲುಬೇಡ ಭುವನೇಶಉರಗಗಿರಿವಾಸ ಪ್ರಸನ್ವೆಂಕಟೇಶ ಸಂಹರಿಸು ಅಪಕಾರಿಗಳ ಸಲಹು ಸಜ್ಜನರ 3
--------------
ಪ್ರಸನ್ನವೆಂಕಟದಾಸರು
ಮಂಜುಳ ವೇಣುಗಾನವ ಮಾಡಿ ಮೋಹಿಪ ಜಗವಕಂಜಜನಯ್ಯ ಮುರಾರಿ ಕಾಮಿನಿಯರಿಗುಪಕಾರಿ ಪ.ಯಮುನೆಯ ಪುಲಿನದಿ ಯದುಕುಲ ಚಂದ್ರ ಹೊಂದೆರಮಣೀರ್ವಕ್ಷ ಮಧ್ಯದಿ ರಾಜಿಸುತ ಕುಲಾಂಬುಧಿ 1ಪೂರ್ಣ ಪೀಯೂಷಕರನು ಪೂರ್ವಾಚಲಕೆ ಸಾರ್ದನುಪೂರ್ಣಾನಂದ ಮುಕುಂದ ಪವನ ಸಂಚಾರದಿಂದ 2ಕುಂದನೀಲೋತ್ಪಲ ಜಾಜಿಕಮಲಮಲ್ಲಿಗೆ ಜುಜಿ( ?)ಮಂದಾರಪುನ್ನಾಗಭುಜಮೂಲದಿ ಗೋಪಾಲರಾಜ3ಕುಸುಮಾಕರಕುಂಜದಿ ಕುಶಲಕ್ರೀಡಿತನಾದಿಸುಸಪ್ತ ಸ್ವರದಿಂದ ಸುಖದಾನಂದ ಮುಕುಂದ 4ಕತ್ತಲೆವಿರಿ ಸಂಪಿಗೆಕಮಲಮೊಲ್ಲೆ ಮಲ್ಲಿಗೆಸುತ್ತಿದ ಎಳೆಪಲ್ಲವ ಮಾರನಂತಹ ಚೆಲುವ 5ಮುತ್ತಿನ ಚೊಲ್ಲೆಯಲ್ಲಿಯ ಮುಂಗುರುಳಲ್ಲಿ ವಲಯಕಸ್ತೂರಿ ತಿಲಕ ಒಪ್ಪೆ ಕವಿದಡರ್ವದ್ವೀರೇಫೆ 6ಕಡೆಗಣ್ಣಿನ ನೋಟದಿ ಕುಡಿಹುಬ್ಬಿನ ಮಾಟದಿಮಡದೇರ್ಗೆ ಮಾರಶರ ಮೂಡಿಸುತತಿ ಸುಂದರ 7ಮುಗುಳುನಗೆಮೊಗದ ಮಣಿಕುಂಡಲ ಕರ್ಣದಯುಗ ಕರ್ಣಾಕರ್ಣಿಕರಾಯತ ನಟ ನರಾಕಾರ 8ವನಮಾಲೆವೈಜಯಂತಿಶ್ರೀವತ್ಸಕೌಸ್ತುಭಕಾಂತಿಮಿನುಗುವಾಮೋದ ಗಂಧಮುಡಿ ತೋರೋ ಶ್ರೀ ಗೋವಿಂದ 9ಹಾರಕೇಯೂರ ಕಂಕಣ ಹೊಳೆವ ಮಧ್ಯಒಡ್ಯಾಣಚಾರುಪೀತಾಂಬರೋತ್ತರಿ ಚೀರದಿಂದೆಸೆವಹರಿ10ವಾಮಬಾಹುವಿಲೊಪ್ಪುವ ವೇಣುವಿನ ಘನರವಬ್ರಹ್ಮ ಗಂಧರ್ವರ ಗಾನ ಬಗೆಗೆ ಮೀರುವ ದೇವ 11ಸುಲಲಿತಂದುಗೆ ಗೆಜ್ಜೆ ಸಂದ್ರೇಖೆ ಶೋಭಿತಹೆಜ್ಜೆಕೆಲದ ಗೋಪಾಂಗನೇರ ಕಾಮಧೇನು ಸಾರೋತ್ತರ 12ಧರೆಗೆರಗಿದ ಜಡೆ ಸಲೆ ಕಾಳಿಂದಿ ಮೇಲಾಡೆ ಸಕಳ ಪಕ್ಷಿಮೃಗವು ಸಂಚರಿಸದೆ ನಿಂದವು 13ಜಡಂಗಳು ಚೇತರಿಸೆ ಜನದ ಚೇಷ್ಟೆ ಥಂಬಿಸೆಕಡುರಸತುಂಬಿತುಳುಕಲಜಭವಾಂಡೊಲಿಯಲು14ವೃಕ್ಷಗಳ ಶೃಂಗಾರಿಯ ವತ್ಸಗಳಾವದೊರೆಯಈಕ್ಷಿಸಿ ತೃಣ ಮೆಲ್ಲದೆಯಿದ್ದವು ಗೀತಕೇಳುತ 15ನೀರಸ ತರುಫಲಾಗೆ ನಿತ್ಯಪ್ರಜÕತೆಗೆನೀರದಗೆ ಸ್ವರಗೈಯೆ ನಿಗಮನಯ್ಯ ಮರೆಯ 16ಮಂಗಳಮೇಘಘರ್ಜನೆ ಮಾಡಿದವು ಮೆಲ್ಲಮೆಲ್ಲನೆರಂಗನ ಮೇಲಮೃತ ಧಾರೆಯವಿತ್ತವರ್ಥಿಯಿಂದ 17ನಂದವ್ರಜದ ವನವು ನಂದನ ಚೈತ್ಯಾಧಿಕವುನಂದಸೂನುವಿನ ಗೀತ ನಾದ ವೇದಾನಂತಾನಂತ 18ಕಮಲಜ ಭವೇಂದ್ರಾದಿಕರು ಭ್ರಾಂತಿಯನೈದಿದರುಅಮರಜನ ನಾರೇರು ಅಂಗಜವಶವಾದರು 19ಗೋಷ್ಠದ ಗೊಲ್ಲ ಗೋಪೇರ ಗೋವರ್ಧನ ಗೋಪಾಲರದೃಷ್ಟಕೆ ಸುರಮುನಿ ಗಂಧರ್ವರು ಪೊಗಳಿದರಾಗ 20ಸುರಭ್ಯಾಗಾರದಿ ಕೃಷ್ಣ ಸಂಚರಿಸಲು ಸರ್ವೇಷ್ಠಪೂರಣವಪ್ಪಿತುಧರೆಪರಮಮಂಗಳ ಸಾರಿ21ಸುರರುಸುಖ ಸಂಭೃತ ಶರಧಿಯೊಳೋಲಾಡುತಸಿರಿಮಂಗಳವ ಹೇಳಿ ಸುರಿದರರಳ ಮಳೆ22ಪ್ರಸನ್ನತರ ಚರಿತ ಪ್ರಸನ್ನಾವ್ಯಾಕೃತಗಾತ್ರಪ್ರಸನ್ನಪೂರ್ಣ ಪ್ರಜೆÕೀಷ್ಠ ಪ್ರಸನ್ನವೆಂಕಟಕೃಷ್ಣ 23
--------------
ಪ್ರಸನ್ನವೆಂಕಟದಾಸರು
ವೃಂದಾವನವೇ ಮಂದಿರವಾಗಿಹಇಂದಿರೆಶ್ರೀ ತುಳಸಿ ||ನಂದನಂದನ ಮುಕುಂದಗೆ ಪ್ರಿಯಳಾದ |ಚೆಂದದ ಶ್ರೀ ತುಳಸಿ ಪತುಳಸಿಯ ವನದಲಿ ಹರಿಯಿಹನೆಂಬುದ |ಶ್ರುತಿಸಾರುತಲಿದೆಕೇಳಿ|ತುಳಸೀದರ್ಶನದಿಂದ ದುರಿತಗಳೆಲ್ಲವುದೂರವಾಗುವುವುಕೇಳಿ||ತುಳಸೀ ಸ್ಪರ್ಶವ ಮಾಡೆ ದೇಹ ಪಾವನವೆಂದುತಿಳಿದಿಲ್ಲವೇನು ಪೇಳಿ |ತುಳಸೀಸ್ಮರಣೆ ಮಾಡಿ ಸಕಲೇಷ್ಟಗಳ ಪಡೆದುಸುಖದಿಂದ ನೀವು ಬಾಳಿ 1ಮೂಲಮೃತ್ತಿಕೆಯನು ಮುಖದಲಿ ಧರಿಸಲುಮೂಲೋಕ ವಶವಹುದು |ಮಾಲೆ ಕೊರಳಲಿಟ್ಟ ಮನುಜಗೆ ಮುಕ್ತಿಯಮಾರ್ಗವು ತೋರುವುದು ||ಕಾಲಕಾಲಗಳಲಿ ಮಾಡುವ ದುಷ್ಕರ್ಮಕಳೆದು ಬೀಸಾಡುವುದು |ಕಾಲನ ದೂತರ ಕಳಚಿ ಕೈವಲ್ಯದಲೀಲೆಯ ತೋರುವುದು 2ಧರೆಯೊಳು ಸುಜನರ ಮರೆಯದೆ ಸಲಹುವವರಲಕ್ಷ್ಮಿ ಶ್ರೀ ತುಳಸಿ |ಪರಮಭಕ್ತರ ಪಾಪಗಳನೆಲ್ಲ ತರಿದು ಪಾ-ವನಮಾಡುವಳು ತುಳಸಿ ||ಸಿರಿಆಯು ಪುತ್ರಾದಿ ಸಂಪದಗಳನಿತ್ತುಹರುಷವೀವಳು ತುಳಸಿ |ಪುರಂದರವಿಠಲನಚರಣಕಮಲಗಳಸ್ಮರಣೆಯೀವಳು ತುಳಸಿ 3
--------------
ಪುರಂದರದಾಸರು