ಒಟ್ಟು 37 ಕಡೆಗಳಲ್ಲಿ , 22 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಂದರ ದಾಸರಾಯಾ | ನಮಿಸೆ ನಿಮ್ಮಚರಣ ಸರಸೀರುಹವಾ ಪ ಮೊರೆಹೊಕ್ಕ ಜನರ ನೀ | ಪೊರೆಯದೆ ಬಿಡುವರೆವರಪ್ರಹ್ಲಾದ್ ಗರುಹಿದಂ | ತರುಹು ಮಂತ್ರಾರ್ಥಿವ ಅ.ಪ. ದ್ವಾರಕ ಪುರದೊಳಗೆ | ನರ್ತನ ಗೈಯ್ಯೆವಾರ ಕಾಂತೆಯರೆಲ್ಲರೂ |ಭೋರಿಟ್ಟು ಮೊರೆಯುವ | ಸ್ವರಕೇಳಿ ಸುರರೆಲ್ಲಹರಿಯ ಓಲಗವಾರು | ಹೊಗುವರು ಎಂದರು1 ಓಲಗ ಸೇರ್ದ 2 ಷೋಡಶದ್ವಯ ಸ್ವರದಿ | ಮೈ ಮರೆಯುತ್ತಪಾಡಿ ಪೊಗಳಿ ಮುದದೀ |ಮೃಡವಂದ್ಯ ಹರಿಯವನ | ಕಡುಭಕುತಿಗೆ ಮೆಚ್ಚಿನೀಡುವೆ ವರವ ನೀ | ಬೇಡು ಬೇಡನೆ ಪೇಳ್ದ3 ಎಚ್ಚತ್ತು ಮುನಿ ನೋಡಿದ | ನಗುತಿರ್ಪಅಚ್ಚ್ಯುತನ್ನಾ ಬೇಡಿದ |ಸಚ್ಛಾರಿತ್ರನೆ ಕೇಳು | ನಿಚ್ಚಾಟೆನ್ನಯ ಕೂಡೆಪೆಚ್ಚ ಪೇರ್ಮಲಿ ಆಡು | ಲಕ್ಷಣಾಗ್ರಜನೇ 4 ಪುರಂದರ | ಗಡದಲ್ಲುದೀಸಿದ 5 ಚಿನಿವಾರ ವರದನಲ್ಲೀ | ಜನಿಸುತ್ತಧನ ನವಕೋಟಿಯ ಗಳಿಸೀ |ಘನ ಲೋಭಿ ದ್ವಿಜನ | ಜ್ಞಾನೋದಯ ಮಾಡುತಘನಗುಣ ಸಿರಿಪತಿ | ಅಣುಗನ್ನ ಪೊರೆದ 6 ಪುರಂದರ ದಾಸರ 7 ಹಿರಿಯ ವೈರಾಗ್ಯ ಪೊಂದಿ | ಸಕಲವನ್ನುಸಿರಿಕೃಷ್ಣಗರ್ಪಣೆಂದೀ |ಗುರು ವ್ಯಾಸರಲಿ ಪುರಂ | ದರನೆಂಬಂಕಿತ ಪೊಂದಿಪರಿಸರ ಮತ ಸರ್ವೋತ್ತಮವೆಂದು ಬರೆದಂಥ8 ಸಾರ ವಿಸ್ತಾರದಿವೇದ ಗಮ್ಯಾನಂದ | ಮಯನ ಬೋಧಿಸಿದ 9ನಾಲ್ಕಾರು ಜನ ಶಿಷ್ಯರ | ಜ್ಞಾನೀಗಳ ಲೋಕೋದ್ದಾರಕೆ ಈಯುತೆ ಕಾಕು ಮಾಯ್ಮತಗಳ | ಸಾಕಷ್ಟು ಖಂಡಿಸಿಮಾಕಳತ್ರನ ಮಹಿಮೆ | ಮನೆಮನೆ ಬೀರಿದ 10 ಮಾಸ ಪುಷ್ಯವದ್ಯದೀ | ಪರಮೋತ್ತಮಶಶಿ ರವಿಗಳ ಮೇಳದೀ |ರಸೆಯ ತ್ಯಜಿಸಿ ಗುರು ಗೋವಿಂದ ವಿಠಲನಎಸೆವ ಪಾದಗಳ್ಬಿಸಜ | ಸೇರುತ ಮೆರೆದಾ 11
--------------
ಗುರುಗೋವಿಂದವಿಠಲರು
ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಬಡವನಾಗಿರುವನಕ ಭಯವಿಲ್ಲವಯ್ಯ ಪ ಕೆಡುಕ ವಂಚಕ ಕಳ್ಳ ಬಳಿಬಾರನಯ್ಯ ಅ.ಪ ಬಡವತಾನಡಿಗಡಿಗೆ ಕಡುದೈನ್ಯಭಾವದಲಿ ದೃಢ ಭಕ್ತಿಯೊಳು ಹರಿಗೆ ಪೊಡಮಡುವನು ಕಡವರವನಾಂತವನು ಕಡುನುಡಿಗಳನು ಕಲಿತು ಪೊಡವಿಚನೆಂದೆನಿಸಿ ಕಡುಲೋಭಿಯಹನು 1 ಗುಣ ಶಾಂತಿ ನಯ ವಿನಯ ಹಣವಂತಗಿರದಯ್ಯ ಹಣವು ಕಪಿಯಂತವನ ಕುಣಿಸದಿರದು ಉಣಿಸು ನಿದ್ರಾದಿಗಳು ಕ್ಷಣಮಾತ್ರವಿಲ್ಲವಗೆ ಹಣದಾಸೆ ಎಳ್ಳಷ್ಟು ಬೇಡ ಮಾಂಗಿರಿರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಂದೆವಯ್ಯ ಗೋವಿಂದಶೆಟ್ಟಿ - ನಿಮ್ಮಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ ಪ ಅಪ್ಪವು ಅತಿರಸ ತುಪ್ಪವು ಚಿನಿಪಾಲುಒಪ್ಪುವ ಸಕ್ಕರೆ ಯಾಲಕ್ಕಿಯುಅಪರೂಪವಾದ ಕಜ್ಜಾಯಗಳನೆಲ್ಲಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ1 ತುಂಬಿ ಮಿಕ್ಕ ಅನ್ನವ ಮಾರಿಸಿಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ 2 ಶೇಷಗಿರಿಯಲ್ಲಿ ವಾಸ ಮಾಡಿಕೊಂಡುದೇಶದೇಶಕ್ಕೆ ಹೆಸರಾದ ಶೆಟ್ಟಿಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿಕೇಶವ ನಾರಾಯಣ ತಿಮ್ಮಶೆಟ್ಟಿ 3
--------------
ಕನಕದಾಸ
ಮೂಳಾ ಹರಿದ್ಹಾಕೆಲೋ ಮಾಯದ ಜಾಲ ಹಾಳುಜಗದ ಮಾತಿಗ್ವ್ಯಾಕುಲವ್ಯಾಕೆಲೋ ಪ ಅನ್ಯಗುಣಗಳನು ಅನ್ನಗೇಡಾಗಿ ಬಲು ಭಿನ್ನ ಭೇದದಧೋಪಾತದುರುಳತಿರು ಕುನ್ನಿಮಾನವರ ಭಿನ್ನಭೇದಕಂಡು ನಿನ್ನ ಗುಣವ ಬಿಟ್ಟು ಬನ್ನಬಡಲಿಬೇಡ 1 ಕರ್ಮಿಲೋಭಿಗಳ ಮೋಹದಿಂದ ದು ಷ್ಕರ್ಮದಿ ಬಿದ್ದು ಕುಂಭೀಪಾಕಕ್ಕಿಳಿದರೇನು ಧರ್ಮಕರ್ಮಗಳ ಮರ್ಮ ತಿಳಿದು ಸ ದ್ಧರ್ಮದೊಳಾಡುತ ನಿರ್ಮಲನಾಗಿ ಬಾಳು 2 ಶಿಷ್ಟಪದ್ಧತಿಗಳ ಬಿಟ್ಟುಕೊಟ್ಟು ಮಂದಿ ಕೆಟ್ಟಪದ್ಧತಿ ಸುದ್ದಿಯಾಡುವುದ್ಯಾಕೆಲೋ ಸೃಷ್ಟಿಯೊಳಗೆ ನಮ್ಮ ಶಿಷ್ಟ ಶ್ರೀರಾಮನ ಮುಟ್ಟಿಪೂಜಿಸಿ ಮುಕ್ತಿಪಟ್ಟಕ್ಕೆ ಕೂಡ್ರೆಲೋ 3
--------------
ರಾಮದಾಸರು
ಯಾಚಕ ಜನ್ಮಾ ಯಾಕೆ ಬರೆದನೊ ಬ್ರಹ್ಮಾ ನಾಚಿಕೆಯಾಗಿ ನಷ್ಟಾಗುವಂತೆ ಸ್ವಧರ್ಮಾ ಪ ಒಡಲಾಶೆಗಾಗಿ ಹೊಲೆಯನ ಹೊಗಳಬೇಕು ಕಡುಲೋಭಿಯಾದ ಅರಸನೋಲಗವೆ ಸಾಕು ಬಡತನವೆಂದು ಪರರ ಸೇರುವದೆ ಸಾಕು ಒಡಲು ಪರಾಕು 1 ತ್ಯಾಗದಿ ಕರ್ಣಾ ಭೋಗದಿ ದೇವೇಂಧ್ರನೆಂದು ಕೊಂಡಾಡಲು ಪೋಗಿ ಬಾ ನಾಳೆ ಎಂದು ಎನುತ ಪೇಳಲಾಗಿ ಬೈದಾಡುತ ಬಂದು ಬಳಲುತಿರಲಾಗ ಚಿತ್ತಕ್ಕೆ ತಂದು 2 ಪರ್ವತವನ್ನು ಕಂಡು ಕೈತಿಕ್ಕಿ ಕೋರಿದೆ ಬರಿದೆ ಇಂಥಾ ಗರ್ವದಿಂದುಕ್ಕಿ ಏರಿದೆ ಗುರುವಿಮಲಾನಂದ ಸರ್ವೋತ್ತಮನ ನೆನೆಯ ಬಾರದೇ 3
--------------
ಭಟಕಳ ಅಪ್ಪಯ್ಯ
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ಶಯನ ಸುಖವೇ ಸುಖವೆ ರಂಗನಾಥ ಭಯಗೊಂಡ ಭಕ್ತರೊಳು ದಯವಿಲ್ಲವೆ ಪ ಶರಣನ ಕೈ ನೀಡಿ ಪೊರೆಯೆಂದು ಪೇಳ್ವಾಗ ದುರಿತಗಳ ಹರಿಸೆಂದು ಬೇಡುವಾಗ ಕರುಣಾನಿಧಿ ನೀನೆಂದು ಹಾಡಿ ಹಂಬಲಿಪಾಗ ಶಿರಬಾಗಿ ಪಾದಕೆ ವಂದಿಸುವಾಗ ರಂಗಾ 1 ಜೀವಿಗಳ ಪಾಲಿಸುವ ಹೊಣೆ ನಿನಗೆ ಸಲುವಾಗ ದೇವ ನೀನೋಬ್ಬನೇ ದಿಕ್ಕೆನುವಾಗ ಭಾವದಲಿ ನಿನ್ನಮೂರ್ತಿಯ ನೆನೆದು ನಲಿವಾಗ ದೇವ ಎನ್ನಪ್ಪ ಬಾಯೆನುವಾಗ ರಂಗಾ 2 ಸ್ವಾಭಿಮಾನದಿ ನೀನು ಲೋಕವನು ಮರೆವಾಗ ಲೋಭಿ ನೀನೆನ್ನದೇ ಜಗವೆಲ್ಲ ರಂಗಾ ಲಾಭವುಂಟೇ ಭಕ್ತಜನಕೆಲ್ಲ ಕ್ಷಯರೋಗ ನಾಭಿಗಂಟದೆ ಪೇಳು ಮಾಂಗಿರಿಯರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಸಾಧು ಸಜ್ಜನ ಸತ್ಯಗುಣಕಿದಿರುಂಟೆಆದಿಕೇಶವನ ಪೋಲುವ ದೈವವುಂಟೆ ಪ ಸತ್ಯವ್ರತವುಳ್ಳವಗೆ ಮೃತ್ಯುಭಯವುಂಟೆಚಿತ್ತಶುದ್ಧಿಯಿಲ್ಲದವಗೆ ಪರಲೋಕವುಂಟೆವಿತ್ತವನರಸುವಂಗೆ ಮುಕ್ತಿಯೆಂಬುದುಂಟೆಉತ್ತಮರ ಸಂಗಕಿಂತಧಿಕ ಧರ್ಮವುಂಟೆ 1 ಸುತಲಾಭಕಿಂತಧಿಕ ಲಾಭವುಂಟೆಮತಿರಹಿತನೊಳು ಚತುರತೆಯುಂಟೆಪತಿಸೇವೆಗಿಂತಧಿಕ ಸೇವೆಯುಂಟೆಸತಿಯಿಲ್ಲದವಗೆ ಸಂಪದವೆಂಬುದುಂಟೆ 2 ಪಿಸುಣಗಿನ್ನಧಿಕ ಹೀನನುಂಟೆವಸುಧೆಯೊಳನ್ನದಾನಕೆ ಸರಿಯುಂಟೆಅಶನವ ತೊರೆದ ಯೋಗಿಗೆ ಭಯವುಂಟೆವ್ಯಸನಿಯಾದ ನೃಪನಿಗೆ ಸುಖವುಂಟೆ 3 ಧನಲೋಭಿಗಿನ್ನಧಿಕ ಹೀನನುಂಟೆಮನವಂಚಕ ಕಪಟಿಗೆ ನೀತಿಯುಂಟೆಸನುಮಾನಿಸುವ ಒಡೆಯಗೆ ಬಡತನವುಂಟೆವಿನಯವಾಗಿಹ ಸಂಗದೊಳು ಭಂಗವುಂಟೆ4 ಹರಿಭಕ್ತಿಯಿಲ್ಲದವಗೆ ಪರಲೋಕವುಂಟೆಪರಮಸಾತ್ತ್ವಿಕ ಗುಣಕೆ ಪಿರಿದುಂಟೆಪರನಿಂದೆಗಿಂತಧಿಕ ಪಾತಕವುಂಟೆವರದಾದಿಕೇಶವನಲ್ಲದೆ ದೈವವುಂಟೆ 5
--------------
ಕನಕದಾಸ
ಹದ್ದೇಹಿ ಭಟರಿಂದ ಯಮನಾಜ್ಞೆಯಂತೆ ಪ ಶರಣಜನನಿಂದಕಗೆ ಪರಮಕುಂಭೀಪಾಕ ಪರಮಭೀಕರಜ್ವಾಲೆ ಕರುಣಶೂನ್ಯರಿಗೆ ಪರನಾರಿಗಳುಕುವಗೆ ಮೂತ್ರ ರಕ್ತಾಮೇಧ್ಯ ಉರುಬಾಧೆ ಕರ್ಮದುರ್ಗಾ ಪರಮ ನೀಚರಿಗೆ 1 ಮಾತಾಪಿತದೂಷಕಗೆ ಪ್ರೇತಕ್ರಿಮಿಕುಂತ ಭಯ ಪಾತಕಗೆ ರಾಕ್ಷಸರ ಭೂತಕ್ರಮಿದೀರ್ಘ ಘಾತಕಗೆ ಉಗ್ರತರ ವ್ಯಾಘ್ರಮುಖ ಭಟ ಶಿಕ್ಷೆ ರೋತು ಮಲತ ಮಜ್ಜ ನೀತಿಬಾಹಿರಗೆ 2 ಕಂಚಿನ್ವಾಯಸ ನರಕ ಕೇಳಾ ಕಪಟರಿಗೆ ಪಂಚಮಹಾಪಾತಕರಿಗುಳಿವಿನ ಉರುನರಕ ಕೂಪ 3 ಕಾದ ಉಕ್ಕಿನ ಪ್ರತಿಮೆ ಕಾಮಾಂಧ ಮೂಢರಿಗೆ ಕಾದು ಉರಿವರಗಿನೂಟ ಕಡುಲೋಭಿಗಳಿಗೆ ಕಾದ ಸೀಸದ ಮಡುವು ಮನೆಮುರುಕ ತುಂಟರಿಗೆ ಕಾದೆಣ್ಣೆಕೊಪ್ಪರಿಗೆ ಕುಟಿಲ ಕುಹಕರಿಗೆ 4 ಪರದ್ರವ್ಯಪಹಾರಿಗೆ ಭೇದಿ ಭೈರವಕೂಪ ನೆರೆನಂಬಿ ಕೊಲ್ಲವಗೆ ಮಸೆದಲಗುಕೊಡಲಿ ಪರರೊಗತನರಿದಗೆ ನರಕ ಚಂದ್ರಾರ್ಕಪರಿ ಗುರು ಹಿರಿಯರ್ಹಳಿದರಿಗೆ ಉರಿಸರಳ ಮಂಚ 5 ಕಾಲಯಮಪಾಶವು ತುಳಸಿದಳ ತುಳಿದವರಿಗೆ ಕಾಲಭೈರವ ಮೃತ್ಯು ಮಾಯಮೋಹಿಗಳಿಗೆ ಕಾಲಕರ ಶೂಲ ಕೊಂಡಿ ಚಾಂಡಾಲಗೆ ಸೂಳೆಯರ ಸೇವಕಗೆ ಕಾಲಯಮದಂಡ 6 ಸಂತ ಸಜ್ಜದಾನಸಂಗರಿಯದಧಮರಿಗೆ ಇಂತು ಎಂಬತ್ತು ಕೋಟಿ ನರಕಯಾತನವು ಅಂತಕಾರಿ ನಿನ್ನಾಜ್ಞೆಯಂತೆ ನಡೆಯುತಿವೆ ಎನ್ನ ಅಂತರದಿ ನಿಂತಿದನು ಗೆಲಿಸು ಶ್ರೀರಾಮ7
--------------
ರಾಮದಾಸರು
ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹೆದರಿಕೆ ಬರುತದೆಲೋ ಪದುಮಾಕ್ಷ ನಿನ್ನ ಮುಂದೆ ಹೇಳಿಕೊಳ್ಳಲು ಎನಗೆ ಪ ಹೆದರಿಕೆ ಬರುತಿದೆ ಜಗದ ಜನರು ನಿನಗೆ ವಿಧವಿಧದಾಡುವ ಸುದ್ದಿಯ ಪೇಳಲು ಅ.ಪ ಹಳಿವರು ಹೆಳವನೆಂದು ಅಂಜದೆ ನಿನಗೆ ತಲೆಯಿಲ್ಲದವನೆನುವರು ಇಲ್ಲದೆ ಹೊಟ್ಟಿಗೆ ಹುಲ್ಲುಮೆದ್ದವನೆಂದು ಹಲವು ಬಗೆಯಲಿ ಹೀಯಾಳಿಪುದ್ಹೇಳಲು 1 ದೃಢದಿ ಭಕುತಜನರು ಬೇಡಿದ ವರವು ಕೊಡಬೇಕಾಗುವುದೆನುತ ಓಡಿ ಹಾವಿನಮೇಲೆ ಪವಡಿಸಿದ ಮಹ ಕಡುಲೋಭಿಯೆಂದೆಂಬ ನುಡಿನಿನ್ನೊಳ್ಪೇಳಲು 2 ಒದೆಸಿಕೊಂಡ್ವೊಯ್ಕುಂಠದಿ ಶೇಷಾಚಲದಿ ಸದನಗೈದನುಯೆಂಬರು ಇದು ಅಲ್ಲದತಿ ವಿಧವಿಧ ಲೋಕ ಸುಲಿದರ್ಥ ನಿಧಿಗಳಿಸಿದ ಚಿನಿವಾರೆಂಬದ್ಹೇಳಲು 3 ಕುದುರೆಮಾವುತನೆಂಬರು ಎಲವೋ ರಂಗ ಕದನಗಡಕನೆನುವರು ಹದಿನಾರು ಸಾವಿರ ಸುದತಿಯರೊಶನಾದ ಸುಧೆಗಳಜಾರನೆಂಬ ವಿಧಿಯನ್ನು ಪೇಳಲು 4 ವಿಪಿನವಾಸಿಕನೆನುವರು ನಿಷ್ಕರುಣದಿ ನೀ ಕಪಿವರನ ತರಿದೆನುವರು ಕಪಟ ತಿಳಿಯುವರಾರು ಅಪರೂಪಮಹಿಮನೆ ಕೃಪಾನಿಧಿ ಶ್ರೀರಾಮ 5
--------------
ರಾಮದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೇಳು ಕೋಪಿಸಬೇಡ ಹೇಳಲಿಕಂಜುವೆಬಾಳು ಬಡತನವ ನಾನು ಪ.ತಲೆಗೊಯ್ಕ ಹಿರಿಯ ಮಗ ಇಳೆಗೆ ಪೂಜಿತನಲ್ಲಬಲು ಭಂಡ ನಿನ್ನಯ ಕಿರಿಯ ಮಗ ||ಲಲನೆಯು ಸೇರಿದಳು ಬಲು ಲೋಭಿಗಳ ಮನೆಯಹೊಲಕುಲವರಿಯಳು ನಿನ್ನ ಸೊಸೆಯು ರಂಗ 1ಮಗಳ ಮಾರ್ಗವುಡೊಂಕು | ಮೈದುನ ಗುರುದ್ರೋಹಿಮಗನ ಮಗನು ಚಾಡಿಗಾರಹಗರಣಕೆ ನೀಚರ ಹಣ್ಣು ಮೆದ್ದೆಂಜಲಜಗದೊಡೆಯನೆನಿಸಿಕೊಂಡೆ - ನೀನುಂಡೆ 2ಲಕ್ಷ್ಮೀಪತಿಯು ಎನಿಸಿಭಿಕ್ಷೆ ಬೇಡಲು ಪೋದೆಪಕ್ಷಿಯ ಪೆಗಲೇರಿ ರಾಜನೆನಿಸಿದೆ ||ಸಾಕ್ಷಾತು ಪುರಂದರವಿಠಲನೆ ನಿನ್ನಗುಣಲಕ್ಷಣ ಪೇಳಲಳವೆ - ಕಳೆವೆ 3
--------------
ಪುರಂದರದಾಸರು