ಒಟ್ಟು 614 ಕಡೆಗಳಲ್ಲಿ , 83 ದಾಸರು , 460 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

--------ನೆ ಮಾಡುವೆಯಂದರೆ ಅರಸುಳ್ಯ ದ್ವಂದ್ವಪಾದಕೆ ನಾ ವಂದನೆ ಪ ಅಂದು ಜಲದೊಳಾಡಿ ಕೊಂದ ಸೋಮಕನ ವೇದತಂದೂ ------ಗಿತ್ತಾಗೊಂದನೆ ಮಂದರಗಿರಿಯ ನೆತ್ತಿ ಚಂದದಿ --------- ಭೂಮಿ ಮೂಗಿನಿಂದ ಸೀಳಿದ ದೇವಗೆ ವಂದನೆ 1 ತರುಳನಿ ಗೋಸ್ಕರ ಸ್ತಂಭದೊಳಗೆ ಬಂದಾ ನರಹರಿ ರೂಪಗೆ ವಂದನೆ ಮುರುಡನಾಗಿ ದಾನ ಮೂರು ಪಾದವು ಕೇಳಿ ಧರುಣಿಯ ಗೆದ್ದವಗೆ ವಂದನೆ 2 ಪ್ರೇಮಸಲ್ಲದೆ ಪಿತೃವಾಕ್ಯವು ಮನ್ನಿಸಿ ಪಡೆದಮ್ಮನ ಹೊಡೆದಾತಗೆ ವಂದನೆ ತಾಮಸ ದಾನವರಗಳ ಖಂಡಿಸಿದ ಶ್ರೀರಾಮ ದೇವರಿಗೆ ವಂದನೆ 3 ಗೊಲ್ಲರ ಸ್ತ್ರೀಯರ ಕೂಡಿ ಮೆರೆದಾಡುವಂಥ ನಲ್ಲ ಕೃಷ್ಣಗೆ ವಂದನೆ ಎಲ್ಲಾನೂ ತೊರೆದು ಬತ್ತಲಲ್ಲಿ ಇರುವ ನಮ್ಮ ಬೌದ್ಧಾವತಾರಗೆ ವಂದನೆ 4 ಚಲುವ ಅಶ್ವವನೇರಿ ಚರಿಸಿದ ಮಹಾಮಹಿಮ ಕಲ್ಕಿ ಸ್ವರೂಪಗೆ ವಂದನೆ ಸುಲಭದಿ ಭಕ್ತರ ಚನ್ನಾಗಿಸಲಹುವ ಶ್ರೀ ಹೆನ್ನೆ ವಿಠ್ಠಲಗೆ ವಂದನೆ 5
--------------
ಹೆನ್ನೆರಂಗದಾಸರು
--------ಹರಿಯೆನ್ನ ಕೂಡಿಸೊ ಬಿಡದಿನ್ನು ಕೂಡಿಸು ಕೃಪಾನಿಧಿಯೆ ಕೂಡಿಸೆನ್ನ ಧೊರಿಯೆ ಪ ಉದಯದಲಿ ಏಳುತಲಿ ಊರ್ವೀಶ ನಿಮ್ಮಸ್ಮರಣೆ ಹೃದಯದಲಿ ಅನುಗಾಲ ಉಚಿತನಾಗಿ ಪದುಮನಾಭ ನಿಮ್ಮ ಪಾದವನೆ ಪೂಜಿಸುವ ಸದಮಲ ಜ್ಞಾನಿಗಳ ಸಂಗದೊಳಗೆ ಎನ್ನ 1 ನಿತ್ಯನೇಮ ವ್ರತದಲ್ಲಿ ಬೇಕಾಗಿ ಇರುತಲಿ ಅತ್ಯಂತ ಪುರುಷ ಆನಂದದಲ್ಲಿ ಕರ್ತೃ ನೀನಲ್ಲದೆ ಸರ್ವೋತ್ತಮರು ದಾರೆಂದು ನಿತ್ಯ ನೀನೆಂದು ತಿಳಿಯುವ (ತಿಳಿಸುವ ) ಆತ್ಮಕರಸಂಗ 2 ಅನುದಿನವು ನಿಮ್ಮ ಧ್ಯಾನ ಮನದಲ್ಲಿ ಮರೆಯದೆ ದಿನಗಳನು ಕಳೆವಂಥಾ ದ್ವಿಜೋತ್ತಮರಾ ಅನುಸರಿಸಿ ಅವರನನು ಅತಿಮೋದದಿಂದ ಬೆರೆದು ವನಜನಾಭನೆ ನಿಮ್ಮ ಭಜನೆ ಮಾಡುವರ ಸಂಗ 3 ವೇದಶಾಸ್ತ್ರಾದಿಗಳ ಭೇದಗಳನರಿತು ಸತ್ಯ ಬೋಧಗುರು ಕರುಣದಲಿ ಪೂರ್ಣರಾಗಿ ಸಾಧು ಸಜ್ಜನರಾದಂಥ ಸತ್ಪುರುಷರಾ ಸಂಗ 4 ಉಪವಾಸವನೆ ಮಾಡಿ ಉಚಿತ ಕರ್ಮಗಳಿಂದ ತಪಗಳನೆ ಮಾಡುವಂಥ ಧನ್ಯಜನರಾ ಸುಫಲಂಗಳನೆ ಪಡೆದು ಸೂತುತಲಿ ಇರುವರಾ ಅಪರಿಮಿತ ಮಹಿಮ ನಿನ್ನ ಹಾಡಿ ಪಾಡುವರಸಂಗ 5 ಪರಮಾತ್ಮ ನಿನ್ನ ಮಹಿಮೆ ಭಾವದಲಿ ಶೋಧಿಸಿ ಪರಿಪರಿಯಲಿರುವಂಥ ಭಾವಜ್ಞರಾ- ಚರಣೆಯನು ಮಾಡಿ ನಿಮ್ಮ ಸೇವೆಯನು ಮಾಡುವಂಥ ಪರಮ ಭಕ್ತರಾದ ಪುಣ್ಯವಂತರ ಸಂಗ 6 ಗಂಗಾದಿ ಸಕಲ ತೀರ್ಥಂಗಳನು ಆಚರಿಸಿ ಅಂಗಾದಿ ದೋಷವ ಕಳೆದ ಅಧಿಕ ಜನರಾ ಸಂಗಸುಖ ಅಬ್ಧಿಯೊಳು ಸಂತತವು ಬೆರೆವಂಥರಂಗ ' ಹೊನ್ನ ವಿಠ್ಠಲ’ ರಾಯ ಗೋವಿಂದ 7
--------------
ಹೆನ್ನೆರಂಗದಾಸರು
------ನ್ಯರ ಸಂಗಾ ಘಳಿಗೆ ಸಾಕಯ್ಯ ಪ ಎಲ್ಲಾ ಇದ್ದೂ ದುರ್ಜನ ಸಂಗ ಎಂದಿಗೂ ಬೇಡಯ್ಯ ----- ಹರಿಯಾ ಮರೆಯದೆ ಇರುವಂಥಾ ------ಕೃಷ್ಣನ ----- ನಿರುವಂಥ ಸುಜನಾರ ಸಂಗ ಕೂಡದ ನಿನ್ನಿಂತಾ ಪರಾಸು (?) ಮಕ್ಕಾಳ ಕೂಡಿ----------- 1 ಉದಯದಾವೇಳೆ ಉಚಿತಕರ್ಮ ಮಾಡುವಾ ಸದಯ ಹೃದಯರಾದ ಸಜ್ಜನಸಂಗ------- ಸದಯ ಕಾಲಾದಿ ಯಿ-----ಸನ್ನಿಧಿ ಸೇರುವಾ ಕುದಯಾ ಕುಜನಾರ ಕೂಡಿದವ -----ಸೇರುವಾ 2 ಅನೇವಿಷಾ (ಅನಿಮಿಷಾ) ಶ್ರೀ ಕೃಷ್ಣಾನ ಅರಸುತಿರುವಂಥ ಜನ ಮಹಾಮಹಿವiರಾದ ಶರಣಾರ -------ರದಂಥಾ ಹೊನ್ನ ವಿಠ್ಠಲನ ಕರುಣಾವು ಪಡುವಂಥಾ ಮಾರ್ಗ- ವನ್ನು ಸೌಖ್ಯವು ತೋರುವಂಥಾ 3
--------------
ಹೆನ್ನೆರಂಗದಾಸರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಈ) ಯತಿವರ್ಯರು ಶ್ರೀ ವ್ಯಾಸರಾಯರ ಸ್ತುತಿ ಇದಿರ್ಯಾರೊ ಗುರುವೆ ಸರಿಯಾರೊ ಯತಿಗೆ ಸಮರ್ಯಾರೊ ಪ ದುರುಳ ವಾದಿಗಳನ್ನು ಮರುಳು ಮಾಡೋರನ್ನ ತರಿದಟ್ಟಿ ಚಂದ್ರಿಕೆ ಗ್ರಂಥವ ರಚಿಸಿ ಧರಣಿ ಸುರರ ಪರಿವೃಢರ ಸುನಿಕರಕೆ ಪರಿಪರಿಯಲಿ ಉಪದೇಶಿಸುತಿಪ್ಪಗೆ 1 ಕನಕ ಕಶಿಪುತನಯನ ಘನ ಅಂಶದಿ ಫಣಿಗಣ ರಮಣನಾವೇಶದಿ ಪೊಳೆಯುತ ದಿನದಿನದಲಿ ಹರಿಮನ ತಣಿಸುತಲಿಹ ಘನ ಮಹಿಮನೆ ಶ್ರೀ ಯತಿಕುಲತಿಲಕಾ 2 ಉದ್ದಂಡ ವಿತಂಡಕೆ ಗಂಡುಸಿಂಹ ತರ್ಕದೆ ತಾಂಡವ ಯುಕ್ತಿಯ ದಂಡುಗಳನೆ ಕಟ್ಟಿಕೊಂಡು ತಾರ್ಕಿಕರ ಷಂಡಗಳನೆ ಖಂಡಿಸುತಿಹ ಯತಿಯೆ 3 ಬ್ರಹ್ಮಣ್ಯತೀರ್ಥರ ಕರಕಮಲದಿ ಪುಟ್ಟಿ ಬ್ರಹ್ಮಜನಕ ನರಸಿಂಹ ಮೂರುತಿಯ ಹೃ- ದ್ಗಂಹ್ವರದಲಿ ಧ್ಯಾನಿಸುತಿಹ ವ್ಯಾಸರಾ ಹೃದಯಾಂಬುಧಿಯೊಳು ಮೆರೆವಗೆ 4 ದಶದಿಶೆಯಲಿ ದಶರಥಸುತ ಮಹಿಮೆಯ ಕುಶಲದಿಂದಲಿ ಸಭೆಯೊಳಗೆ ಸ್ಥಾಪಿಸುತ ಹೊಸ ಹೊಸ ಬಿರುದು ಸಂದ್ಹೆಸರುವೆತ್ತಿರುವಂಥ ವಸುಧಿಯೊಳಗೆ ಸುಕರ ಸುಚರಿತೆಗೆ 5 ಹೊಳೆಯುತಲಿರುವ ರುಕ್ಮಿಣಿಪತಿ ಕೃಷ್ಣನು ನಲಿಯುತ ಕುಣಿಕುಣಿದಾಡುತಲಿಪ್ಪನು ಥಳಥಳಿಸುವ ರಾಮ ವೇದವ್ಯಾಸರು ನಿಮ- ಗಿಳೆಯೊಳಮೂಲ್ಯ ಪ್ರಸಾದವನೀವರು 6 ಅಡಿಗಡಿಗತಿ ದೃಢತರ ಯುಕ್ತಿಗಳಿಂದ ಸಡಗರದಿಂದಲಿ ಬಿಡದೆ ನುಡಿಯುತ ನಡದದ್ವೈತದಡವಿಯೊಳಗೆ ಪೊಕ್ಕು ಕೆಡಗುತಿಹ ನ್ಯಾಯಾಮೃತಾಚಾರ್ಯರಿಗೆ 7 ಶ್ರೀದವಿಠಲಗತಿ ಪ್ರೀಯರಾದ ಶ್ರೀ- ಪಾದರಾಯರಲಿ ಓದಿ ಗ್ರಂಥಗಳ ವಾದಿರಾಜ ವಿಜಯೀಂದ್ರ ಪ್ರಮುಖರಿಗೆ ಆದರದಲಿ ಪಾಠ ಹೇಳುತಲಿಪ್ಪಗೆ 8
--------------
ಶ್ರೀದವಿಠಲರು
(ಊ) ಗುರುನಮನ ಮುಳುಗಿ ಮೀಯೊ ಮನುಜ ಪ ದುರಿತ ಹರಿಸಿ ಸುಸ್ಥಿರ ಪದ (ಕರುಣಿಸುವಂಥ) ಅ.ಪ ಸ್ವಾರ್ಥವಾಗದಣ್ಣ || ಮುಕ್ತಿಸಂಪದಗಳ ಅರ್ತಿಯೊಳ್ ಪಡೆಯಲು 1 ಮೂರ್ಜಗಪತಿ ದಯವಿಡನಣ್ಣ || ಅರ್ಜುನ ಸಖನ ಪದಾಬ್ಜವ ಸೇರಲು 2 ಅಕ್ಷಯ ಸುಖವ ತನ್ನಿಚ್ಛೆಯೊಳ್ ಪಡೆದು ಮು-| ಮುಕ್ಷುವಾಗಿ ನಿಜ ಮೋಕ್ಷವ ಪಡೆಯಲು 3 ಸನ್ನಿಧಿ ಭಾಗ್ಯವನುಣ್ಣುತಿರುವರೆ 4 ಆದಿಮಧ್ಯಾಂತವಿಲ್ಲದ ಪದವಿಯೊಳ್ ಸ-| ದಾನಂದನಾಗಿ ವಿನೋದದೊಳಿರುವರೆ 5
--------------
ಸದಾನಂದರು
(ಧನ್ವಂತ್ರಿಯ ಪ್ರಾರ್ಥನೆ) ವೇದ ವೇದ್ಯ ವೈದ್ಯನಾದನು ಭಕ್ತಜನ್ಮಾದಿ ವ್ಯಾಧಿಗಳನ್ನು ಬಾಧಿಸಿ ದುಗ್ಧ ಮಹೋದಧಿ ಮಥಿಸಿದ ಸಮಯದಿ ಪಾರಿಜಾ ತೋದಯವಾದ ಮೇಲಾದರದಿ ಪ. ಧೀರದಿತೆಯಸುರಾರಿ ನಾಯಕರೆಲ್ಲ ಸೇರಿ ಕ್ಷೀರಾಂಬುಧಿ ತೀರದ ತಡೆಗಾಗಿ ಭಾರಿ ಮಂದರವೆತ್ತಿ ತಾರಲಾರದೆ ಮಧ್ಯ ದಾರಿಯೊಳಗೆ ಬಿದ್ದು ಚೀರಲಂದು ನೀರದನಿಭ ಕೃಪೆದೋರಿ ಬಂದಲ್ಲಿ ಸ- ರ್ಪಾರಿಯ ಶಿರದ ಮೇಲೇರಿಸಿ ಗಿರಿಯ ಗಂ- ಭೀರ ರವದಿ ಮುಂದೆ ಸಾರಿದ ಸುರಮೋದ- ಕಾರಿ ಸಂಸ್ಕøತಿ ಭಯವಾರಣನು 1 ಅಮರದೈತ್ಯರ ಭುಜ ಭ್ರಮಣೆಗೆ ನಿಲ್ಲದ ಕ್ಷಮೆಯಧರನ ಕಂಡು ಸುಮನಸ ಗಣಕಾಗಿ ಕಮಠಾವತಾರದಿಂದಮಿತಭಾರವ ಲಕ್ಷ್ಮೀ ರಮಣ ಬೆಂಬನಿಂದಲಾಕ್ರಮಿಸಿದ್ದನೂ ಕ್ಷಮೆಯಿಂತು ತೋರಿ ಸಂಭ್ರಮದಿಂದ ಸುರಕಲ್ಪ- ದ್ರುಮಕಂಠರತ್ನ ಚಂದ್ರಮ ಮುಖ್ಯರುದಿಸಲು ರಮೆಯೊಂದು ರೂಪದಿ ನಮಿಸುತ್ತ ಬರೆ ತನ್ನ ರಮಣೀಯ ಮದುವಿಯಾ ಕ್ರಮವ ತೋರಿ 2 ಇಂತು ವಿವಾಹದನಂತರದಲಿ ಶ್ರೀ- ಕಾಂತನು ದೇವರ್ಕಳಂತವರಿತು ನಿ- ಬೋಧ ಚಿನ್ಮಯನು ನಿರ್ಭಯದಿ ಧ- ನ್ವಂತರಿಯಾದುದನೆಂತೆಂಬೆನು ಕಂತುಕೋಟಿಯ ಗೆಲುವಂತೆ ಸಕಲ ಸುಜ ನಾಂತರ್ಬಹಿರ್ಗತ ಸಂತಾಪಗಳ ಬಲ- ವಂತದಿಂದಲಿ ಕಳವಂಥ ಮೂರುತಿಯಾಗಿ ನಿಖಿಳ ವೇದಾಂತೇಶನು 3 ಕುಂಡಲ ಹಾರ ವನರುಹಾಂಬಕ ವಲ್ಲುಹಾಸ ಕೌಸ್ತುಭಧರ ಕರಿ ಕರೋರುತರ ಕ್ಷಣಿತ ಕಿಂಕಿಣಿ ಕಾಂಚೀವರ ಮಂಜೀರಾ ಸುನಸ ಸುಂದರದಂತ ಶುಭನೀಲಕೇಶಾಂತ ವನಜ ಸಂಭವನೀಗರುಹುತಾಯುರ್ವೇದಾಂತ ನೆನೆಸುವವರಪಮೃತ್ಯುಹಾರಿ ರೂಪವ ತೋರಿ ವಿನಯದಿ ವಿಬುಧಾರ ಸೇರಿದನು 4 ಪಾತಕ ಸಂಘಾಧಾರದಿಂದ್ಯಮಪರಿ ವಾರವೆಂದೆನಿಪತ್ತಿ ಸಾರವ ಸ್ಮಾರಕ್ಷಯೋರಗಜ್ವರಕಫ ಗೂರು ಪ್ರಮೇಹಾದಿ ವಾರಕ ವರಸುಖ ಕಾರಕನು ಥೋರ ಕರದಿ ಸುಧಾಪೂರಿತ ಕಲಶವ ತೋರಿ ದಾನವ ಮೋಹಕಾರಿ ನಾರಾಯಣಿ ಸ್ತ್ರೀ ರೂಪದಿಂದ ದೈತ್ಯಾರಿಗಳಿಗೆ ಕೊಟ್ಟ ಧೀರ ವೆಂಕಟ ಶಿಖರಾರೂಢನು 5
--------------
ತುಪಾಕಿ ವೆಂಕಟರಮಣಾಚಾರ್ಯ
(ನಾರದ ಪ್ರಾರ್ಥನೆ) ನಾರದ ಮುನಿಯ ನಂಬಿರೋ ಸಜ್ಜನರೆಲ್ಲ ಪ. ನಾರದ ಮುನಿಯ ನಂಬಿ ಸೇರಿ ರಮೇಶನ ಘೋರದುರಿತ ಪರಿಹಾರಗೊಳಿಸುವಂಥ ಅ.ಪ. ಫಾಲದಿ ತಿಲಕ ನಾಮವು ಕಂಠದ ಮೇಲೆ ಜೋಲುವ ತುಳಸಿ ಮಾಲೆಯು ತಾಳ ವೀಣೆಗಳಿಂದ ಕಾಲಾನುಗುಣಸ್ವರ ಮಾಲೆ ತೋರುತ ಲಕ್ಷ್ಮೀಲೋಲನ ವಲಿಸಿದ 1 ವೇದೋಪನಿಷತ್ತುಗಳಗಾಂಧರ್ವ ವಿದ್ಯ ಹಾದಿಲಿ ತರಲು ಬಲ್ಲ ಬೋಧಿಪ ಪರತತ್ವ ವಾದವ ಸುರಕಾರ್ಯ ಸಾಧಿಸಿ ಹರಿಯ ಪ್ರಸಾದಕೆ ಪಾತ್ರನಾದ 2 ಪ್ರಲ್ಹಾದ ಧ್ರುವ ದ್ರೌಪದಿ ಮುಖ್ಯ ವೈಷ್ಣವ ರೆಲ್ಲರೀತನ ದಯದಿ ಎಲ್ಲ ಠಾವಲಿ ಲಕ್ಷ್ಮೀವಲ್ಲಭನಿಹನೆಂಬ ಸೊಲ್ಲ ತಿಳಿದು ಪರಮೋಲ್ಲಾಸ ಪಡೆದರು 3 ದೇವಾಸುರರ ಬಳಿಗೆ ಪೋಗುವ ತನ್ನ ಭಾವಾ ತೋರನು ಕಡೆಗೆ ಆವಾವ ಜನಕನುವೀವ ಮಾತುಗಳಾಡಿ ಪಾವನಾತ್ಮಕ ಹರಿ ಸೇವಾಫಲವ ಕೊಂಬ 4 ಬಂದನು ಕಲಿಯುಗದಿ ದಾಸರೊಳು ಪುರಂದರ ನಾಮದಲೀ ಮಂದಮತಿಯ ಕಳೆವಂದದಿ ಪ್ರಾಕೃತ ದಿಂದ ವೆಂಕಟಪತಿಯಂದವ ತಿಳಿಸಿದ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ರಮಣನೆಲ್ಲಿಹ ಕರೆತಾರೆ ಸಖಿಯಳೆ ) * ಪ ಮನು ಕಮಂಡಲ ಕೂಪದಲ್ಲಿ ಹಿಡಿಯದಂತೆ ಬೆಳೆದು ಅವರ ಶರಧಿ ಒಳಗೆ ಹರಿದಾಡುತಿರುವ ಕೇಳ್ ಸಖಿಯಳೆ ಶರಧಿ ಒಳಗೆ ಹರಿದಾಡುತಲೆ ವೇದತಂದು ತೋರಿದ್ಹೊಳೆವ ಮಚ್ಛನ್ನ ಬಲಗೊಂಬೆ ಕೇಳ್ ಸತಿಯಳೆ 1 ಸೃಷ್ಟಿಗೆ ಅಧಿಕ ಸ್ತ್ರೀಯಳ ದೈತ್ಯರು ಮೋಹಿಸಲು ಕಂಡು ಹುಟ್ಟಿಸಿದ ಸುಧೆಯ ಸುರರಿಗೆರೆದ ಕೇಳ್ ಸಖಿಯಳೆ ಹುಟ್ಟಿಸಿದ ಸುಧೆಯ ಸುರರಿಗೆರೆದು ಬೆಟ್ಟವನು ಬೆನ್ನ- ಲಿಟ್ಟ ಕೂರ್ಮನ ಬಲಗೊಂಬೆ ಕೇಳ್ ಸತಿಯಳೆ 2 ವಾಸುದೇವ ಕ್ರೋಡರೂಪಿಲಿಂದ ಹಿರಣ್ಯಾಕ್ಷನ ನಾಶವ ಮಾಡಿ ಕೋರೆಯಿಂದ ಕೇಳ್ ಸಖಿಯಳೆ ನಾಶವ ಮಾಡಿ ಕೋರೆಯಿಂದ ಧರಣಿ ತಂದು ಹರ್ವಿ (ರವಿ?)ದ ಭೂಪತಿವರ್ಹ(ರಾಹ?)ನ್ನ ಬಲಗೊಂಬೆ ಕೇಳ್ ಸತಿಯಳೆ 3 ಒಡೆದು ಕಂಬ ಕಡೆಗೆ ಕಿತ್ತು ಬಿಡದೆ ಅರಿಯ ತೊಡೆಯಲಿಟ್ಟು ಒಡಲ ತಾ ಬಗೆದ ಭಕ್ತರೊಡೆಯ ಕೇಳ್ ಸಖಿಯಳೆ ಒಡಲ ತಾ ಬಗೆದ ಭಕ್ತರೊಡೆಯನಾಗಿದ್ದ ಲಕ್ಷ್ಮೀ- ನಾರಸಿಂಹನ್ನ ಬಲಗೊಂಬೆ ಕೇಳ್ ಸತಿಯಳೆ 4 ಪಾದ ದಾನ ಬೇಡಿ ಪೃಥ್ವಿ ಆಕ್ರಮಿಸಿದ ಪರಮಾತ್ಮ ಕೇಳ್ ಸಖಿಯಳೆ ಪೃಥ್ವಿ ಆಕ್ರಮಿಸಿದ ಪರಮಾತ್ಮನಾದ ನಮ್ಮ ಕಶ್ಯಪರ ಸುತ ವಾಮನನ ಬಲಗೊಂಬೆ ಕೇಳ್ ಸಖಿಯಳೆ 5 ಋಷಿಗಳಲ್ಲಿ ಜನಿಸಿ ಕರದಿ ಧರಿಸಿ ಕುಠಾರವನ್ನು ಅರಸು ಕ್ಷತ್ರಿಯರಿಗಂತಕನ ಕೇಳ್ ಸಖಿಯಳೆ ಅರಸು ಕ್ಷತ್ರಿಯರ ಕುಲಕೆ ಅಂತಕನಾಗಿದ್ದ ನಮ್ಮ ಪರÀಶುರಾಮನ್ನ ಬಲಗೊಂಬೆ ಕೇಳ್ ಸಖಿಯಳೆ 6 ಮುದ್ರೆ ಕಳುವಿ(ಹಿ?) ಲಂಕಾಪುರದಲ್ಲಿದ್ದ ವಾರ್ತೆ ಕೇಳಿ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೇಳ್ ಸಖಿಯಳೆ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೂಡಿ ಬಂದ ಅ- ಯೋಧ್ಯಾರಾಮನ್ನ ಬಲಗೊಂಬೆ ಕೇಳ್ ಸಖಿಯಳೆ7 ಎಲ್ಲ ಜಗವ ತನ್ನ ಉದರದಲ್ಲೇ ಇಟ್ಟು ಗೋಕುಲದ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕೇಳ್ ಸಖಿಯಳೆ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕದ್ದು ಮೆಲ್ಲುವಂಥ ಚೆಲ್ವ ಕೃಷ್ಣನ್ನ ಬಲಗೊಂಬೆ ಕೇಳ್ ಸುಖಿಯಳೆ 8 ಮಾಯಾಶಿಶುರೂಪ ತಾನಾಗಿ ವೇದನಿಂದ್ಯವನ್ನು ಮಾಡಿ ಬೋಧಿಸಿದ ದುರ್ಮತವ ಕೇಳ್ ಸಖಿಯಳೆ ಮಾಡಿ ಬೋಧಿಸಿದ ದುರ್ಮತವ ತ್ರಿಪುರಜನರಿಗೆಲ್ಲ ಬೋಧಿಸಿದ ಬೌದ್ಧನ್ನ ಬಲಗೊಂಬೆ ಕೇಳ್ ಸಖಿಯಳೆ 9 ಕಲಿಸಮಾಪ್ತಿ ಕಾಲದಲ್ಲಿ ಚೆಲುವ ಅಶ್ವಾರೂಢನಾಗಿ ಬಿಡದೆ ಪಾಲಿಸಿದ ಶರಣಜನರ ಕೇಳ್ ಸಖಿಯಳೆ ಬಿಡದೆ ಪಾಲಿಸಿದ ಶರಣಜನರನು ಭೀಮೇಶಕೃಷ್ಣನ ಚರಣಕಮಲಕೆರಗಿ ಬಲಗೊಂಬೆ ಕೇಳ್ ಸಖಿಯಳೆ 10
--------------
ಹರಪನಹಳ್ಳಿಭೀಮವ್ವ
|| ಶ್ರೀ|| ಪದ್ಯ|| ಮುಂದೆ ತುಳುಜಾ ದೇವಿ ಬಂದು ನಿಂತಿರಲು ತ್ವರದಿಂದ ನೋಡ್ಯನುಭೂತಿ ಬಂದಂಥ ದೇವಿಯ ಚಂದದ ಬಹು ತೇಜವೆಂದು ತಿಳಿಯದೆ ಎನ್ನ ಮುಂದೆದುರಿಗೆ ಏನು ಬಂದಿರುವುದೆಂದು ತ್ವರದಿಂದ ನಡುಗಿದಳು|| ಮುಂದ ಆದೇವಿ ತಾ ಮುಂದಕ್ಕೆ ಕರೆಯುತಲೇ ಕುಂದರದನಿಯೇ ಕೇಳು ಕುಂದು ನಿನ್ನಲ್ಲಿ ಇಲ್ಲ ಎಂದು ನಿನ್ನ ಭಕ್ತಿಗೆ ಚಂದಾಗಿ ಅಭಯದ ಕೂಟ್ಟಂದಳೀಪರಿಯ||1 ಪದ ರಾಗ:ಕಾನಾಡ ಆದಿತಾಳ ಬೇಡು ಬೇಕಾದ್ದು ಬ್ಯಾಗನೇ|| ಅನುಭೂತಿ|| ಬೇ|| ನೀಡುವೆ ನಾನು|| ಪ ಮಾನಸ ದುಃಖವ್ಯಾಕಿದು || ನಿನ್ನ ಭಿಮಾನವೆಂಬುದು ನನ್ನದು|| ಮಾನಿತರೊಳ್ಹಗತಿ ಮಾನವಂತೆಯೇ ಮಾನುನಿ ಮಣಿ ಅನುಮಾನವ ಬಿಟ್ಟು|| 1 ಎಷ್ಟು ಸ್ನೇಹವ ತೋರಲಿ|| ಬಂದೆ ಸಂತುಷ್ಟಳಾಗುತ ನಿನ್ನಲಿ|| ಶಿಷ್ಟಳೆ ನೀ ಕೇಳಸ್ಪಷ್ಟದಿ ನಿನಗೆ ದೃಷ್ಟಿಗೆ ಬೀಳಲು ಕಷ್ಟಗಳುಂಟೆ|| 2 ಚಿಂತಿಸಿದಿ ಯಾಕೆನ್ನನು|| ಬಂದಂತಹ ಚಿಂತೆ ಎಲ್ಲಾನೂ ಕಳೆವೆನು|| ಸಂತೋಷದಲಿ ಅನಂತಾದ್ರೀಶನ ಚಿಂತನದಿಂದಿರು ಚಿಂತೆಯನು ಬಿಟ್ಟು|| 3 ಆರ್ಯಾ ಅತಿ ಹಿತ ವಚನವನು ಕೇಳಿ || ಅತಿ ಹರುಷಿತಳಾದಳಾಗ ಆ ಬಾಲೆ ಹಿತವಾಯಿತು ಎನಗೆಂದು || ನತಿಸುತ ಮಾತಾಡಿದಳು ಹೀಗೆಂದು|| 1 ಪದ ರಾಗ:ಮುಖಾರಿ ಆದಿತಾಳ ತುಳುಜಾದೇವಿಯೇ|| ಪ ನಮೋ ಎಂಬೆ ಮತ್ತು ಜಗದ್ಥಾತ್ತಿಯೆ || ಬಹುಪ್ರಮಿತಾ ಹಿಮಾಚಲನ ಪುತ್ರಿಯೇ || ಸುಮಹಿಮ ಸುಂದರಗಾತ್ರಿಯೇ|| ಮನದಾ ಅಮಿತಾರೋಗಕ್ಕೆ ಮಹಾಮಾತ್ತಿಯೇ|| 1 ತ್ವರಿತಾದಿಂದಲೇ ಬಂದಂಥಾಕಿಯೇ || ಎಂದು ತ್ವರಿತಾ ತ್ವರಿತಾದೇವಿಯು ಎನಿಸು ವಾಕೆಯೆ|| ಮರೆತಿರಲಾರೆ ನಾ ನಿನ್ನಕಿಯೇ || ಸ್ನೇಹಾಭರಿತಾಗಿ ಭಕ್ತರನ ಸಲಹವಾಕಿಯೇ|| 2 ಚಿಂತಿ ಮಾಡಲು ಬಂದು ನಿಂತಿಯೇ || ಎನಗೆ ಚಿಂತಿಯು ಮಾಡಬ್ಯಾಡಂತಿಯೇ|| ಎಂಥಾಕಿ ನೀನು ದಯಾವಂತಿಯೇ || ವರದಾ ನಂತಾದ್ರೀಶನ ಸಖನ ಕಾಂತಿಯೇ|| 3 ಆರ್ಯಾ ಕರ ಮುಗಿದು|| 1 ಪದ ರಾಗ :ಆನಂದ ಭೈರವಿ ವರಕೊಡು ಎನಗಿದು ತ್ವರಿತದಿ ತಾಯಿ|| ಮರೆಯ ದೆಂದೆಂದೂ ಹಗಲಿರುಳು ನೀ ಕಾಯಿ|| ಪ ಮಂದ ಮತಿಯು ದೈತ್ಯ ಬಂದಿಹನೋಡು|| ಕೊಂದವನ ಎನಗಾನಂದವ ನೀಡು 1 ಮಾಡುವ ತಪಸ್ಸಿಗೆ ಕೇಡು ತಂದಿಹನು|| ಮಾಡಲಿನ್ನೇನು ನಿನಗೆ ಬೇಡಕೊಂಬುವೆನು|| 2 ಪತಿಯ ಸೇವಿಸುವಂಥ ಸತಿಯು ಬೇಡುವೆನೂ|| ಸತತಾನಂತಾದ್ರೀಶನಾ ಸ್ವøತಿಯು ಮಾಡುವೆನು|| 3 ಅನುಭೂತಿಯ ವಚನವನು || ಅನುಸರಿಸುತ ಬ್ಯಾಗಕೊಟ್ಟು ಎನಗಿಲ್ಲೆಂತ್ಯಂದಳಾಗ ಜಗದಂಬಾ|| 1 ಮಾಡಿದಳು|| ಹುಂಕಾರ|| 2 ಒಗೆದಾನು ಯುದ್ಧದಲ್ಲಿ ಜಾಣಾ|| 3 ಸಾರಶಕ್ತಿಯನು ತೆಗೆದಾ ಶೌರ್ಯದಿ ಮತ್ತಾಕೆಯಲ್ಲೇ ಒಗೆದಾ|| 4 ಎದೆಗ್ಹೊಡೆದಳು ಶೂಲದಲೆ||ಅದುರೂಪವು ಬಿಟ್ಟು|| ತನ್ನಕ ಪಟದಲೆ ಕುದುರೆಯ ರೂಪವ ಧರಿಸಿ|| ಒದರುತ ನಿಂತಾಗ ಮುಂದ ಖ್ಯಾಕರಿಸಿ|| 5 ಗಾಢನೆ ಮಹಿಷಾಗಿ ಬಂದ ಬದಿಯ್ಮಲೇ 6 ತೋರುವ ಬಹುಬೆಟ್ಟಗಳ|| ಕೊಡಗಳಿಂದಲೇ ಕೊಡಗಳ್ಹಗಳು| ಮಾಡುವ ವೃಷ್ಟಿಯದೆಷ್ಟು|| ಕಾಡುವ ಕಪಟದಿಂದ ಮತ್ತಿಷ್ಟು 7 ಶೃಂಗಗಳಿಂದ ಹಿಡಿದಳು ದÉೈತ್ಯಬಾಯಿಬಿಡುವಾ|| 8 ಅವನ ಮುರದೊತ್ತಿ 9 ಕಡೆದಳು ಆಗವನ ಬಿಲ್ಲುಬಾಣದಲೆ|| 10 ದಾನವನು|| ಹುಟ್ಟಿದ ಸೈನ್ಯವು ಎಲ್ಲಾ|| ಪೆಟ್ಟು ಹಾಕುತ ಬಂತು ಭೂತಗಳಿಗೆಲಾ||್ಲ 11 ತಡಿಯದೇ ಅವನ ಹುಡುಕುತಲಿ || ಕಡಿದಳು ಶಿರ ಕಡೆದಳು ಮತ್ತವನ ಶಿರವು ಖಡ್ಗದಲೇ|| 12 ಸುರರು ಥಟ್ಟನೆ ಕರೆದರು ಪುಷ್ಪ ದೃಷ್ಟಿಯನು|| 13 ಪದ್ಯ ರಾಗ:ದೇಶಿ ಅಟತಾಳ, ಸ್ವರ ಷಡ್ಜ ಓಡಿ xಟ್ಟನೆ ಹಿಡಿದರಾಗ|| 1 ಕುಕ್ಷಿಗಿಲ್ಲದಲೆ ಬುಭೂಕ್ಷಿತರದು ಎಲ್ಲಾ ಭಕ್ಷಣ ಮಾಡುವರು|| ಅಕ್ಷಯ ಬಲದಿಂದ ದಕ್ಷರು ಎಲ್ಲಾರು ರಾಕ್ಷಸರಾದರು|| 2 ಭೈರವಾದಿಗಳು ಎಲ್ಲಾರು ದೇವಿಯ ಪರಿಚಾರಕರಾದವರು ಸೇರಿ ಸೈನ್ಯದಲ್ಲಿ ಅಪಾರ ಸಂಭ್ರಮದಲ್ಲಿ ಹಾರ್ಯಾಡುತಿರುವರು3 ಆ ತಾಳಮೊರದಂಥ ಬೇತಾಳ ಗಣಗಳು ಪ್ರೇತ ಪಿಶಾಚಿಗಳು|| ಯಮದೂತರಸಮರವರು|| 4 ರಕ್ತ ಪಾನವ ಮಾಡಿದರು|| 5 ದುರುಳರನೆಲ್ಲನು ಹೊರಳಿಸಿ ಹೊಟ್ಟೆಯ ಕರಳವ ಬಗಟಿದರು| ಸರಳವಾದ ಆ ಕರಳ ಮಾಲೆಯ ಮಾಡಿ ಕೊರಳೊಗ್ಹಾಕಿದರು||6 ಹಾಕಿಕೊಂಡು ಕುಣಿದಾಡಿದರು||7 ಕಂಕಲಾದಿಗಳು ಭಯಂಕರರವರು ಅಸಂಖ್ಯಾಕರಾಸವರು|| ಶಾಂಕರೀ ದೇವಿಯ ಕಿಂಕರರಿಂಥ ಅಲಂಕಾರಗಳನಿಟ್ಟರು || 8 ಅವನಂತವ ಅರಿಯೇ ನಾನು|| 9 ಆರ್ಯಾ ಬಲ್ಲಿದ ದೈತ್ಯದ ಕೊಂದು || ನಿಲ್ಲದೆ ಅನುಭೂತಿ ಬದಿಯಲೇ ಬಂದು || ಅಲ್ಲಿಹಳು ಮಹಾಮಾಯಾ|| ಇಲ್ಲಿ ಗೆ ಪೂರ್ಣಾಯಿತು ಎರಡು ಅಧ್ಯಾಯಾ || ಶ್ರೀ ಹರೇಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
ಅಂಜದಾಕ್ಷಣ ಕಂಜನೇತ್ರನೆ ಸಂಜೀವಿನಿಯಾ ತಂದು ನೀಡಿದಾ ಪ ಪಸುಳನೈಯಾ ವಪುವೆಸೆವ ರಾಯ ಅಸುರವರ್ಗದಸುವ ಮಿಸುಕದಾಕ್ಷಣ ಹಿಸುಕಿ ಬಿಡುತಿಹ 1 ಭೀಮಸೇನಾ ಭಕ್ತಕಾಮಪೂರ್ಣಾ ಕಾಮಕೀಚಕಾ ಬಾರ ಪಾಮರರಿದಾ ನಾಕ ನಾನು ಮೆರೆದಾ 2 ಶಕ್ತಿಸಾರಾ ಭಕ್ತ ವಿರಕ್ತಿ ಪೂರಾ ಭಕ್ತವೃಂದಕೆ ಮುಕ್ತಿಪಥ ಮಹಾಪೂರಾ ಯುಕ್ತಿಯಿಂದಾ ವ್ಯಕ್ತಪಡಿಸಿದಾ ಅವ್ಯಕ್ತರೂಪಾ 3 ಕ್ಲೇಶದೂರಾ ಪ್ರಾಣೇಶ ವಾರಾ ಗಂಭೀರಾ ದಾಸಜನ ನುಡಿಯಾ ಗುಣದೋಷ ಹರಣಾ ಅಣಿಮಾ ವಾಸನ ರಹಿತಾ ಗುಣಗಣಗಡಣಾ ಗರಿಮಾ 4 ದಿಟ್ಟ ರಾಮಾದಕಾ ಹೃದಯ ಪ್ರೇಮ ಮಧುರಾ ವಿಠಲನರಸಿಂಹಾ ಎದೆಯಾರವಿಂದ ನಯನಾ ದಿಟ್ಟನಿಟ್ಟಿಗೇ ಸಾಧನೆಯ ಸಾರುವಂಥಾ ಧೀರಾ 5
--------------
ನರಸಿಂಹವಿಠಲರು
ಅಂತರಾತ್ಮನ ದ್ಯಾನವನ್ನು ಅಂತರಂಗದಿ ಮಾಡೋ ನೀನು ಸಂತತ ನಿರ್ಮಲನಾಗಿ ನಲಿದಾಡು ಮನವೆ ಪ ನರದೇಹಕ್ಕೆ ಬಂದು ನೀನು ಇರುವಂಥಾ ಸಾರ್ಥಕವೇನು ಗುರುಕರುಣಕವಚವ ತೊಟ್ಟು ಕರ್ಮವ ಸುಟ್ಟು ಮಾಯಾ ಮೋಹವೆಲ್ಲವ ತರಿದು ಷಢ್ವೈರಿಗಳ ಶಿರವನು ಸರಸ ಹೃದಯದಿ ಮೆರೆವ ಜ್ಯೊತಿಯ ಬೆಳ ಗಿರುವ ಕೋಟಿಪ್ರಕಾಶದÀಂತಿಹ 1 ಬಿಡದೆ ಶ್ರೀ ಗುರುವಿನ ಪಾದಾ ಪಿಡಿದು ನಿತ್ಯಾನಂದ ಬೋಧಾ ಕಡಲ ತೆರೆಯೊಳು ಮಿಂದು ಕಾಮನ ಕೊಂದು ಅಡಿಗಡಿಗೆ ತತ್ವಾಮೃತರಸ ನಡುವಿರಳು ಶೀತ ಕಿರಣಕೋಟಿಯ ಪಡೆಯಕಟ್ಟಿದ ತರಣಿಯಂತಿಹ 2 ಮಂದಮತಿಯ ಕಳೆದು ಚಿದಾ ನಂದನ ಶ್ರೀ ದಿವ್ಯಪಾದ ಹೊಂದಿ ಬ್ರಹ್ಮಾ ನಂದರಸವಾ ಬಿಡದೆ ಸೇವಿಸುವ ಶಿವಾ ನಂದವನು ಕೈಕೊಂಡು ವಿಮಲಾ ನಂದ ದತ್ತಾತ್ರೇಯನೊಳಾಡುವಾ ಎಂದಿಗೂ ಆಳವಿಲ್ಲದಾತ್ಮನ ಚಂದವನು ನೋಡುತ್ತನಿನ್ನೊಳು 3
--------------
ಭಟಕಳ ಅಪ್ಪಯ್ಯ
ಅಧ್ಯಾಯ :ನಾಲ್ಕು ಪದ್ಯ ಮುಂದೆ ತ್ರೇತಾಯುಗವು ಬಂದಂಥ ಕಾಲದಲಿ ಇಂದಿರೇಶನು ರಾಮಯೆಂದು ದಶರಥನಲ್ಲಿ ಕಂದನಾಗ್ಯವತರಿಸಿ ತಂದೆ ಆಜ್ಞದಿ ಸೀತೆಯಿಂದ ಲಕ್ಷ್ಮಣನಿಂದ ಚಂದಾಗಿ ಬಡಗೂಡಿ ವನ ಚರಿಸಿ ಬಂದ ಯಮುನಾದ್ರಿಯಲಿ ನೊಂದು ನೀರಡಿಸಿ ತನ್ನ ಬಾಣದಿಂದ ಭೇದಿಸಿದಾ|| 1 ತಡವು ಇಲ್ಲದೆ ಭೂಮಿ ಒಡೆದು ಬಂದಿತು ಆಗ ಕಡು ಭೋಗವತಿ ನಾರಿಯು ಗುಡದಂಥ ಸವಿನೀರು ಕುಡಿದು ನರನಂತೆ ದೃಢನಿದ್ರೆಗೊಂಡ ಜಗದೊಡೆಯ ರಾಘವನು|| ದೃಢವಾಗಿ ಬಹುಕಾಲ ಬಿಡದೆ ಅಲ್ಲಿರುವ ಆ ಮೃಡನ ರಾಣಿಯು ತಾನು ನಡೆದು ಬಂದಳು ಅಲ್ಲೇ ಶರಗರಾದಿ ಕೈಯಲ್ಲಿ ಹಿಡಿದು, ಆರತಿಯನ್ನು ದೃಢಭಕುತ ಲಕ್ಷಣನು ದೃಢ ನಿದ್ರಿಗೊಂಡಂಥ ಒಡಿಯಗೆಚ್ಚರ ಮಾಡಗೊಡದೆ ಆಕೆಯ ಕಂಡು ನುಡಿದನೀಪರಿಯ|| ಪದ ರಾಗ:ಭೈರವಿ ಅಟತಾಳ ಸ್ವರ ಋಷಭ ದಾವಾಕಿ ಪೇಳಮ್ಮಾ|| ಬಂದವಳು ನೀ ದಾವಾಕಿ|| ದಾವಾಕಿ ಪೇಳಮ್ಮಾ ದಾವ ರಾಜನ ಸತಿ ದಾವ ಕಾರಣದಿಂದ ಧಾವಿಸಿಲ್ಲಿಗೆ ಬಂದೆ|| ಪ ಸುಂದರಿ ವಾಣಿಯೋ|| ಅಥವಾ ಮುಶುಂದನ ರಾಣಿಯೋ|| ಇಂದ್ರನ ರಾಣಿಯೋ|| ಚಂದ್ರನ ರಾಣಿಯೋ|| ಚಂದ್ರಮುಖಿಯೇ ನೀನು ಚಂದಾಗಿ ಪೇಳಮ್ಮಾ|| 1 ಭಾತೃರಾದವರು ನಾವು|| ಪರಸ್ಪರ ಪ್ರೀತಿಯಿಂದಿರುವೆವು|| ಸೀತಾವಿರಹದಿಂದ ಸೋತುಬಂದೆವು ಇಲ್ಲೆ ಮಾತೇ ಮೌನವು ಬಿಟ್ಟು ಮಾತಾಡು ಬ್ಯಾಗನೇ|| 2 ಬ್ರಹ್ಮಚರ್ಯವೆಂಬುದು|| ಈ ಕಾಲಕ್ಕೆ ನಮ್ಮಲ್ಲಿ ಇರುವುದು|| ತಮ್ಮ ಲಕ್ಷ್ಮಣ ನಾನು ನಿರ್ಮಲ ಗುಣರಾಮ ನಮ್ಮಣ್ಣನಿವ ಪರಬ್ರಹ್ಮಾನಂತಾಧ್ರೀಶಾ|| 3 ಆರ್ಯಾ ಲಕ್ಷ್ಮಣ ನಾಡಿದ ಮಾತೂ|| ಲಕ್ಷಿಗೆ ತರಲಿಲ್ಲ ದೇವಿ ಮಾತಾಡಿದನೂ ಹೀಗೆಂದೂ|| ಪದ ರಾಗ:ಧನ್ಯಾಸಿ ಆದಿತಾಳ ನಡಿ ನಡಿ £ಡಿ ನೀನು || ನುಡಿಯದ ಭಾಗಿಯೇನು|| ನ || ನಡಿ ನಡಿ ಹಿಂದಕು ಬಡಿವಾರೇನಿದು ಬಿಡು ಬ್ಯಾಗನೆ ನಿನ್ನ ಎನಗೆ ಬಿಡದೆ ಬಾಣದಿಂದೊಡೆವೆನು ನಾನು| ಪ ಎಕಾಂತ ಸ್ಥಳಕೆ ಕಾಲಕೆ ಒಬ್ಬಾಕೆ ಬರುವದಿದು ದಿಂದ ನೀ ಬೇಕಾದಲ್ಲೆ|| 1 ವನವನ ಚರಿಸುಲವ ವನವಾಸಿಗಳಿಗೆ ವನುತಿಯ ಸಂದರ್ಶನ ನಮಗ್ಯಾಕಿದು ಗುಣವಂತಿಯೆ ಅರಕ್ಷಣ ನಿಲ್ಲದಲೆ 2 ಕಾಲದಲಿ ಗದ್ದಲ ಮಾಡದೆ ಬುದ್ಧಿವಂತೆಯೆ|| 3 ಅನುಜನ ಈಪರಿ ಸಿಟ್ಟು || ಅನುಸರಿಸುತಾ ಎದ್ದ ನಿದ್ರೆಯನು ಬಿಟ್ಟು || ವನುತಿಯ ನೋಡಿದ ರಾಮ|| ವಿನಯದಿ ಮಾತಾಡಿವನು ಗುಣಧಾಮ || 1 ಪದ ರಾಗ:ದೇಶಿ ಅಟತಾಳ ಸ್ವರ :ಷಡ್ಜ ದಾರ್ಹೇಳಮ್ಮಯಾ ಉದಾರ್ಹಳಗಿರುವೆ ನೀ || ದಾರ್ಹೇಳಮ್ಮಯ|| ದಾರಿಲ್ಲಿ ಸ್ಥಳದಲ್ಲಿ ದಾರನ್ಹುಡುಕುವಿ ನಿ|| ದಾ|| ಪ ವನದಲ್ಲೆ ಇರುವಂಥ ವನದೇವತೆಯೇ ನೀ|| ದಾ|| ಮನಿಯಲ್ಲೇ ಇರುವಂಥ ಮನಿದೇವತೆಯೋ ನೀ || ದಾ|| 1 ಪ್ರಾಯಶ ಶ್ರೀಹರಿ ಮಾಯಾರೂಪಿಯೋ ನೀನು || ದಾ|| ಆಯಾದ ವಿಲ್ಲದೆ ಬಾಯಿಲೆ ಬಿಚ್ಚಾಡು || ದಾ||2 ಕ್ಲೇಶ ವೋಡಿಸುವಂಥ ಈಶನ ರಾಣಿಯೋ || ದಾ|| ದೋಷರಹಿ ತಾನಂತಾಧ್ರೀಶನ ರಾಣಿಯೋ|| 3 ಆರ್ಯಾ ಕೋಮಲತರ ವಚನಗಳೂ || ರಾಮನ ಬಾಯಿಂದ ಮಾತಾಡಿದಳು ಹೀಗೆಂದೂ|| 1 ಪದ ರಾಗ:ದೇಶೀ ಆಟತಾಳ ಸ್ವರ :ಷಡ್ಜÀ ಕೇಳೋ ರಾಮನೆ ನಿನಗ್ಹೇಳುವೆ ಗುರುತವ || ಕೇಳೋ ರಾಮ|| ಕೇಳುತ ನಿನ್ನ ಮಾತು ಬಾಳ್ಹಾನಂದಾಯಿತು || ಕೇಳೋ|| ಪ ವನದೇವತೆ ಅಲ್ಲ ಮನಿಯ ದೇವತೆ ಅಲ್ಲ || ಕೇ|| ವನಜಾಕ್ಷ ತುಳಜಾಯಂದ್ಯನಿ ಕೊಂಬುವೆ ನಾನೂ || ಕೇ|| 1 ಮಾಯಾರೂಪಿಯು ಅಲ್ಲ ಆಯಾಸಯನಗಿಲ್ಲ ||ಕೇ|| ಮಾಯಾರಮಣ ನಿನ್ನ ತಾಯಿ ಯಂದ್ಯನಿಸುವೆ || ಕೇ|| 2 ಶುದ್ಧ ಚಿನ್ಮಯ ಅನಂತಾದ್ರಿರಮಣ ನೀನು || ಕೇ|| ಸಿದ್ಧಾಗಿ ನಾ ಯಮುನಾದ್ರಿಯಲ್ಲಿರುವೆನು||3 ಆರ್ಯಾ ಕಾಯಜ ಪಿತ ಕೇಳಿದನೂ|| ಹಾಯಿದು ಏನೆಂದೂ|| ಮಾತನಾಡಿದನೂ || ಆಯತಾಕ್ಷಿ ಆದವಳೂ || ತಾಯಿಯು ಎನಗ್ನಾಂಗಾದಿ ನೀ ಪೇಳೆ|| 1 ರಾಮನ ಮಾತಿಗೆ ತುಳಜಾ || ಪ್ರೇಮದಿ ಮಾತಾಡಿದಳು ತಾವಿರಜಾ || ರಾಮಗ ಕಥಿ ಆದಂತಾ|| ನೇಮಿಸಿ ಹೇಳಿದಳು ಪೂರ್ವ ವೃತ್ತಾಂತಾ|| 2 ಪದ್ಯ ರಾಮಕೇಳು ಪೂರ್ವದಲ್ಲಿ ಜಮದಾಗ್ನಿಯು ಪರಶುರಾಮನಾಗಿರುವಿ ನೀನಾ ಮಹಾಮುನಿ ಪತ್ನಿ ನಾಮದಲೆ ರೇಣುಕಿಯು ನೀ ಮಗನು ಎನಗಾದಿ ಭೂಮಿಯಲಿ ಪ್ರಾಖ್ಯಾತ ನಾಮತಿ ಕೃತವೀರ್ಯಜನು ಕಾಮಧೇನುವು ಬಯಸಿ ಆ ಮುನಿಯ ಕೊಂದಿರಲು ಆಮ್ಯಾಲ ಪತಿಯಿಂದ ನೇಮದಲಿ ಸಹಗಮನ ನಾ ಮಾಡಿದೆನು|| 1 ಪತಿಯ ಪ್ರೇಮದಲಿ ಸ್ಮರಿಸಿ ಪರಶುರಾಮನು ಎನ್ನಸ್ಮರಿಸಿ ಕೈಮುಗಿದು ಈ ಪರಿಯು ಮಾತಾಡಿದನು ವರ ಮಾತೆಯನು ಕೂಡಿ ಇರದೆ ನೀ ಹೋದಿ ಸಂದರ್ಶನವು ಎಂದಿನ್ನ ತ್ವರದಿ ನೀ ಹೇಳೆನಗೆ ಕೇಳುತಲೆ ತ್ವರದಿಂದ ನಾನು ಸುಂದರ ರೂಪವ ತೋರಿ ಈ ಪರಿಯು ಮಾತಾಡಿದೆನು ವರಪುತ್ರ ಕೇಳು ಮುಂದಿರುವ ತ್ರೇತಾಯುಗವು ಬರುತಿರಲು ಆಗ ಸಂದರ್ಶನವ ಕೊಡವೆ|| 2 ಹೀಗೆಂದು ಹೇಳಿದ್ಯಾಗ ಆತಗ ನಾನು ಈಗ ಆತನೇ ನೀನು ರಾಘವನು ಆಗಿರುವಿ || ಹಿಂಗೆನಲು ಮುಂದೆ ಆ ರಾಘವನು ಕೊಟ್ಟಳಾಗ ತುಳಜಾದೇವಿ ಬ್ಯಾಗ ನಿನ್ನ ಕಾರ್ಯ ಚನ್ನಾಗಿ ಆಗುವುದೆಂದು || ನಾಗವೇಣಿಯು ತಾನು ಹೋಗಿಬರುವೆನೆಂದು ಆಗ ಅಲ್ಲೇವೇ ಗುಪ್ತಾಗಿ ಇರುವುವಳು|| 3 ಪದ ರಾಗ:ಶಂಕರಾಭರಣ ಆದಿತಾಳ ಸ್ವರ :ಮಧ್ಯಮಾ ತಂದನು ಕೇವಳ್ಹಾಗ್ನಿಯ ಸಾಕ್ಷಿಯಿಂದೆ|| 1 ಆದರೂ ಇಷ್ಟಾರ್ಥಗಳು ಕೊಡುವೋದು|| 2 ವರದ ಶ್ರೀರಾಮ ವರವು ಕೊಟ್ಟಿರುವಂಥಾ ತುಳಜಾ ದೇವಿಯ ದಿವ್ಯ ಮಹಿಮೆ || ಹರುಷದಿ ಕೇಳಿದರೆ ಹರುಷವ ಕೊಡುವುದು ಪರಿಹರಿಸೋದು ಕಷ್ಟವೆಲ್ಲಾ 3 ಪುತ್ರರು ಆಗುವರು ಪೌತ್ರರು ಆಗುವರು ಸತ್ಯಮಾತಿದು ಭಾವವ ಬಿಟ್ಟು|| 4 ಗ್ರಂಥವೆಂಬುವದಿಂದು || ಎಂಥಾದಾದರೂ ಎನೂ ಸಂತೋಷ ನಮ್ಮ ಗುರುಗಳಿಗೆ|| ಸಂತರೆಂಬುವರಿಗೆ ಸಂತೋಷಾಗಲಿ ನಮ್ಮಾನಂತಾದ್ರೀಶನೆ ನುಡಿಸಿದಾ|| 5 ಆರ್ಯಾ ವರ ಕವಿತಾ ರZನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದೆನ್ನ ಉಪಾಯಾ || ಗುರುಕೃಪೆಯಿಂದಾಯಿತು ನಾಲ್ಕು ಅಧ್ಯಾಯಾ|| 1 ಪದ ರಾಗ:ಪೂರ್ವಿ ಅಟತಾಳ ಸ್ವರ:ಮಧ್ಯಮಾ ನಿತ್ಯ ಮಂಗಳವನು ಕೊಟ್ಟು ಸಲಹುವ ತಾಯಿಗೆ|| ಪ ಘನತರ ಕೈಲಾಸ ಮನಿಯು ಮಾಡಿದವಳಿಗೆ|| ಅನುದಿನ ಅಲ್ಲಿರುವಂಥಾಕಿಗೆ | ಅನುಭೂತಿ ತಪಸಿಗೆ ಅನುಕೂಲಾಗುವೆನೆಂದು ಅನುಮಾನಿಲ್ಲದೆ ಬಂದಿರುವಾಕಿಗೆ|| 1 ಅಷ್ಟಭುಜಗಳುಳ್ಳಂಥಾಕಿಗೆ || ಅಷ್ಟೆಶ್ಚರ್ಯದಿಂದಿರುವಾಕಿಗೆ|| ದುಷ್ಟದೈತ್ಯನ ಕೊಂದಂಥಾಕೆಗೆ|| 2 ಅಮಿತ ಮಹಿಮೆ ಉಳ್ಳಂಥಾಕೆಗೆ|| ಯಮುನಾದ್ರಿಯಲಿ ಬಂದಿರುವಾಕೆಗೆ|| ಗಮನದಿಂದಲಿ ರಾಮ ಶ್ರಮಬಟ್ಟು ಅಲ್ಲೇ ವಿಶ್ರಾಮಿಸಲು ದರ್ಶನ ಕೆÀೂಟ್ಟಾಕೆಗೆ|| 3 ಕಾಮಿತ ಫಲವನು ಕೊಡುವಾಕೆಗೆ|| ರಾಮನು ಸಾವಿರ ನಾಮದಿ ಸ್ತುತಿಸಲು|| ಪ್ರೇಮದಿವರವು ಕೊಟ್ಟಂಥಾಕಿಗೆ|| 4 ಚಿಂತಿಸುವರ ಮುಂದ ನಿಂತಾಕೆಗೆ|| ಸಂತೋಷವನು ಕೊಡುವಂಥಾಕಿಗೆ|| ಅಂತರಂಗದಲ್ಲಿಹ ಚಿಂತೆಯ ಬಿಡಿಸಿ|| ಅನಂತಾದ್ರೀಶನ ತೋರುವಂಥಾಕೆಗೆ|| 5
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಆರು ರಾಗ:ನಾಟಿ ಝಂಪೆತಾಳ ಅಘಟ್ಯಘಟಿನಾಟ್ವೀ ಪುಲಿಂದಾ ಶ್ರೀಪತೇಸ್ತನುಃ ನೃಪಜಾಸ್ಮರಪೀಡಾಂ ತಾಂ ಕಥಯಂತೀ ಹರೇದಘಮ್ ನಿತ್ಯ ಸಂತೋಷ ಜಯತು ಜಯ ಲಕ್ಷ್ಮೀಶಾ ವೆಂಕಟೇಶಾ 1 ಪದ್ಮಜಾಕೃತಯಾತ್ರೆ ಪ್ರದ್ಮವಿಕಸಿತ ನೇತ್ರಾ ಪ್ರದ್ಮಾಜಾಸನ ಮುಖ್ಯ ಪದ್ಮನಾಭಾಖ್ಯ 2 ಗುರ್ವನುಗ್ರಹ ಗಮ್ಯ ಗುರುಗುಣಾರ್ಣವಸೌಮ್ಯ ಗುರ್ವನಂತಾದ್ರೀಶ ಗುರುಸುಪ್ರಕಾಶ3 ವಚನ ಪುರುಷನ ಪಾದ ನಿತ್ಯ ಮರೆಯದಲೆ ಮನದಲ್ಲಿ ಕರವ ವರಬುದ್ಧಿಯಲಿ ಎನ್ನ ಶಿರಮೆಟ್ಟಿ ಕರಮುಗಿದು ಕೊರವಂಜಿ ಕಥೆಯ 1 ಮುನ್ನಾಗಿ ನಾರೀಕುಲ ತನ್ನ ಕಾರ್ಯಕೆ ಕಳುಹಿ ಎನ್ನ ಕಾರ್ಯಕೆ ಅನ್ಯ ತನ್ನ ಕಾರ್ಯವು ಮತ್ತೆ ಮಾಡುವರಲ್ಲ ಚನ್ನವಾಗಿ2 ಉಬ್ಬುಬ್ಬಿ ವನಿತೆಯರು ಈ ರೀತಿ ಅವಲಂಬಿ ಗಂಭೀರಕೊರವಿ ಮುಖ ಬಾಯ್ವಳಗ್ಹಲ್ಲು ಎಂಬುವದು ಒಂದಿಲ್ಲ ಲಂಭಕರ್ಣಗಳಿಹವು ಲಂಭಕುಚಗಳು ಮತ್ತ ಲಂಬೋದರಿ ಯೆನಿಸಿಕೊಂಬುವಳು ತಾನು 3 ಜಡೆಗಳ ಧರಿಸಿ ಧೀರ ಮಾಡಿ ಸಾರ ಚಾರುನವಧಾನ್ಯಗಳ ಪೂರ ಚಾರು ತಿಲಕವನಿಟ್ಟು ಹಾರ ಗೀರುಕಂಕಣ ಕೈಗೆ ಚಾರು ತಾ ಐವತ್ತು ಪೂರ ವಯದವಳಾಗಿ ತೋರುತಿಹಳು4 ಮಣಿ ಮಾಲೆಗಳ ಧರಿಸಿ ಮಣಿ ಮೇಲೆ ಕರ್ಪೂರ ಮಣಿಯು ಮೇಲೆ ಸಾಲ್ಹಿಡಿದು ವಿವಿಧಮಣಿ ಬಾಲಕನ ಉಡಿಯಲ್ಲಿ ಕೋಲು ಕೈಯಲಿ ಪಿಡಿದು ನಡೆದಳಾಗ 5 ರಾಗ:ಶ್ರೀರಾಗ ಆದಿತಾಳ ಗಿರಿಯಿಂದಲಿ ನಾರಾಯಣ ಪುರಕೆ ಬಂದಳು ಪುರದ ಬಾಗಿಲುಗಳನ್ನೆಲ್ಲ ತ್ವರದಿ ದಾಟಿದಳು ತಿರವಿದ ಸೆರಗು ತಿರುಗಿ ಹೊದೆಯುತಲೆ ತಿರುಗಾಡುತ ಬಂದಳು ತಿರುಕೊಂಬುವರಂತೆ ಮನೆ ಮನೆ ಬಾಗಿಲನು ಮೆಟ್ಟುತಿಹಳು ಮನಸಿಗೆ ಬಂದ್ಹಾಂಗೆ ಧ್ವನಿಮಾಡುತಿಹಳು ಮನಗೊಟ್ಟು ಕೇಳಿರಿ ಎನ್ನ ತಾಯಿಗಳಿರಾ ಮನದ ಮಾತುಗಳ್ಹೇಳುವೆ ಮನೆಯವ್ವಗಳಿರಾ 1 ಹಿಂದಾದದ್ದು ಹೇಳೇನು ಇಂದಾದದ್ದು ಮತ್ತೆ ಚಂದಾಗಿ ಪೇಳೇನು ಮುಂದಾಗುವದೆಲ್ಲಾ ಹಿಂದಕ್ಕೆ ನಾ ಬಹಳ ಮಂದಿಗ್ಹೇಳಿದೆನು ಒಂದೂ ಸುಳ್ಳಾಗಿಲ್ಲ ಸಂದೇಹವಿಲ್ಲ 2 ಸಾಮಭೇದವ ಬಲ್ಲೆ ಸಾಮುದ್ರಿಕಿ ಬಲ್ಲೆ ಹೈಮಾದಿ ಜ್ವರಕೌಷಧ ನಾ ಮಾಡಲು ಬಲ್ಲೆ ಕಾಮಿನಿಯರಿಗಾದ ಕಾಮಜ್ವರ ಬಲ್ಲೆ ಕೌಮಾರಿಗಳಿಗಂತು ನಾ ಮುಂಚೆ ಬಲ್ಲೆ 4 ಭೂತ ಬಿಡಿಸಲು ಬಲ್ಲೆ ಬೇತಾಳವ ಬಲ್ಲೆ ಮಾತಾಡದ ಮೂಕರನು ಮಾತಾಡಿಸಬಲ್ಲೆ ನೀತಿನುಡಿಗಳ ಬಲ್ಲೆ ಜ್ಯೋತಿಷ್ಯವ ಬಲ್ಲೆ ಕೂತು ಕೇಳಿದರೆಲ್ಲ ಮಾತ್ಹೇಳಲು ಬಲ್ಲೆ5 ಹಸನಾಗಿ ಪೇಳುವೆ ಕುಶಲಾದವಾಣಿ ಹುಸಿಯಲ್ಲವಿದು ಎನ್ನ ಹಸುಗೂಸಿನಾಣಿ ಅಸು ಹೋದರು ನಾನಲ್ಲ ಹುಸಿಯಾಡುವ ಕೊರವಿ ವಸುಧೆಯೊಳಗೆ ನಾ ಹೆಸರಾದ ಕೊರವಿ6 ನರನಾರಾಯಣಲಿ ಇರುವಂಥ ಕೊರವಿ ವರನಂತಾದ್ರೀಶನ ನೆರವುಳ್ಳ ಕೊರವಿ ಕೊರವಿ ಮಾತನು ಕೇಳಿ ಪುರದ ನಾರಿಯರು ಅರಸನ ರಾಣಿಗೆ ತ್ವರದಿ ಪೇಳಿದರು7 ರಾಗ:ಪೂರ್ವಿರಾಗ ಭಿಲಂದಿ ತಾಳ ಬಂದಳಮ್ಮ ಇಲ್ಲೆ ಜನರು ನೆರೆದು ಬಹಳ ಆತುರ ಪಟ್ಟು ಕೇಳುತಿಹರÀುಪ ಮಾತನಾಡುತಿಹಳು ಮುದದಿ ಕೇಳಿ ದ್ಹೇಳುವಳು ಮುದಕಿಯಾಗಿ ತೋರುತಿಹಳು 1 ತನ್ನ ಮಕ್ಕಳಾಣೆ ಕೊಡುತಿಹಳು 2 ನರನಾರಾಯಣರು ಎಲ್ಲಿ ಇವರೊ ಅಲ್ಲೆ ಇರುವಳಂತೆ ವರದನಂತಾದ್ರೀಶ ಕೊಟ್ಟ ವರವುಳ್ಳ ಕೊರವಿಯಂತೆ 3 ರಾಗ:ಕನ್ನಡ ಕಾಂಬೋದಿ ಅಟತಾಳ ಬೇಗ ಅರಸನ ಪಟ್ಟದ ರಾಣಿ ಪನ್ನಗವೇಣಿ 1 ತಿರುಗಿ ಬಂದರು ಮತ್ತಲ್ಲೆ ಕೊರವಿ ಇದ್ದಲ್ಲೆ 2 ಎಂದು ಕರೆದರು ಕಯ್ಯ ಬೀಸುತ ಕಣ್ಣುತಿರುವುತ 3 ನುಡಿದಾಳೀಪರಿ ವಾಣಿ ಮಾತಿನ ಜಾಣೆ 4 ಆಕೆ ಸೌಭಾಗ್ಯದ ಒಡವಿ ಹುಟ್ಟನಾ ಬಡವಿ 5 ನೋಡಿ ಎನ್ನ ಒಡವೆಯ ನೋಡಿರಿ ಮಾತನಾಡಿರಿ 6 ಎನ್ನ ಕರಿದಾಳೆಂಬುವದು ಅಪಹ್ಯಾಸವಿದು 7 ನಕ್ಕು ಮಾತಾಡುವಿರಾ ಬಂಡು ಮುದಕಿಯ ಕಂಡು 8 ಅಂಜಿ ಮಾತಾಡಿದರಾಗ ವಿನಯದಿ ಬೇಗ9 ಒಮ್ಮೆಗಾದರುದಕ್ಕೀತೆ ಆಡೋದು ರೀತೆ10 ಬಂದು ನಡೆದಳು ಮುಂದೆ ಆನಂದದಿಂದ11 ಅರಮನೆಗೆ ಬಾಗಿಲೊಳಗೆ ಅಂಗಳದೊಳಗೆ 12 ಕೋಲುಕೋಲೆಂದು ಪಾಡುವಳು ಮಾಯಾತೋರುವಳು 13 ರಾಗ:ಶಂಕರಾಭರಣ ಆದಿತಾಳ ಕೋಲೆನ್ನ ಕೋಲು ಲೀಲೆಕೊಂಡಾಡುತಲಿ ಪ ಭರದಿಂದೊದೆಯುತಿರೆ ತಿರುಗಿ ಕಾಲ್ಹಿಡಕೊಂಡು ಪರಿಪರಿಸ್ತುತಿಸಿದಾ 1 ನೋಡಿ ಸಹಿಸದೆ ಕೊಲ್ಲಾಪುರಕೆ ನಡೆದಳು 2 ಹರಿ ವೈಕುಂಠದಿಂ ಧರೆಗಿಳಿದನು 3 ಹುತ್ತಮನೆಯ ಮಾಡಿ ಗುಪ್ತದಲ್ಲಿರುತಿಹ4 ನೆತ್ತಿಯ ಒಡಕೊಂಡು ಭಕ್ತನ ಸಲುಹಿದೆ 5 ಗುರುವಕರೆದ ಅವನಿಂದ ತಲೆ ಗಾಯವ ಕಳೆದನು 6 ತಾ ಬೇಡಿ ಸ್ವಾಮಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು