ಒಟ್ಟು 24 ಕಡೆಗಳಲ್ಲಿ , 19 ದಾಸರು , 24 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದ ಶ್ರೀ ಹರಿ ಬಂದ ಪ ಬಂದ ಬಂದ ಮುಚುಕುಂದ ಪರದ ಅರ- ವಿಂದನಯನ ಗೋವಿಂದ ಪರಾತ್ವರ ಕಂದನೆನ್ನ ಮನ ಮಂದಿರಕೀಗಲೆ ನಂದವ ನೀಡುತ ಇಂದಿರೆಸಹಿತದಿ ಅ.ಪ. ಪೊತ್ತವ ಬಂದ ಅಜಿತನುಬಂದ ಚಾರುವರಾಹನು ಭೂಸಹಬಂದ ಪೋರನ ಸಲಹಿದ ಘೋರನು ಬಂದ ಭಾರ್ಗವ ಬಂದ ಕೌರವವಂಶಕುಠಾರನು ಬಂದ ಕಲ್ಕಿಯು ಬಂದ 1 ಉಸುರಲು ಹಯಮುಖಬಂದ ದತ್ತನುಬಂದ ನೀಡಲು ಯಜ್ಞನುಬಂದ ಸಾಧುಹರಿನಾರಾಯಣ ಬಂದ ಶಿಂಶುಮಾರನು ಬಂದ ಧನ್ವಂತ್ರಿಯು ಬಂದ 2 ಶ್ರೀ ವಿಷ್ಣುವು ಬಂದ ಉಲ್ಲಾಸದಿ ಬಂದ ಸಂತೋಷನು ಬಂದ ತೈಜಸ ಕರುಣದಿ ಬಂದ ಮುಕ್ತೇಶನು ಬಂದ ಪರಾದ್ಯನಂತನು ಬಂದ 3 ಜಗನೂಕೂವ ಬಂದ ಪುರುಹೂತ ವಿನುತ ಸಕಲಾರ್ತಿಹರ ತಾ ಬಂದ ವೈರಾಜ್ಯನು ಬಂದ ಶೃತಿ- ನೀಕ ಸುವಂದಿತನಿರುಪಮ ಬಂದ ವಾಕುಮನಕೆ ಸಾಕಲ್ಯಸಿಗದ ಪುಣ್ಯ- ವಿವರ್ಜಿತ ಭಗಲೋಕೈಕ ವಂದ್ಯ ನಿಜಭಕ್ತಗಣ ಜಯಪರಾಕುನುಡಿಯುತಿರೆ ಮೆಲ್ಲ ಮೆಲ್ಲಗೆ4 ಸರ್ವಸಾಕ್ಷಿಗಭೀರ ಪರಾಕು ಸ್ವತಂತ್ರನೆ ಪರಾಕು ಸರ್ವರಪಾಲಿಪ ಸರ್ವರ ರಕ್ಷಿಪ ಸರ್ವಚರಾಚರಭಿನ್ನ ಪರಾಕು ಪ್ರತಿಪಾದ್ಯಪರಾರು ಸರ್ವಕಾಲದಲಿ ಸರ್ವದೇಶದೊಳು ಸರ್ವದೆಶೆಯೊಳು ಸಮನೆ ಪರಾಕು ಪರಾಕು 5 ನಿತ್ಯಾನಿತ್ಯಜಗಜ್ಜನಕ ಸರ್ವೋತ್ತಮ ಸತ್ಯಸಂಕಲ್ಪ ಪರಾಕು ನಿಖಿಳಪ್ರದಾಯಕ ಪರಾಕು ಭೃತ್ಯಾನುಗ್ರಹ ಕಾರಕಶೀಲ ಸದಾಪ್ತತಮ ವಿಶ್ವಾತ್ಮನೆಪರಾಕು ನಿತೈಶ್ಪರ್ಯ ಕೀತ್ರ್ಯಾತ್ಮಕ ಸರ್ವಾತತ ಬಲವಿಖ್ಯಾತಪರಾಕು ನೀತ ಜ್ಞಾನಾನಂದ ಪರಿಪೂರ್ಣನಿತ್ಯತೃಪ್ತ ಮಹಾಂತ ಪರಾಕು ಪರಾಕು 6 ಪರಾಕು ರೂಪಾತ್ಮ ಪರಾಕು ಪುರುಷ ಸೂಕ್ತ ಸುಗೇಯ ಪ್ರಖ್ಯಾತ ಮಹಾಮಹಿಮ ಪರಾಕು ನಾಮಕ ಪರಾಕು ಸುನಾಮ ಓಂಕಾರಾಧಿಪ ಪರಾಕು ವಿಭೂತಿ ಪರಾಕು 7 ಪ್ರೇಮ ಚೊಕ್ಕ ಸೃಷ್ಟಿಗೈವನಿತ್ಯಸುನೇಮ ಕರುಣಾಮಣಿ ಶ್ರೀಕಾಮ ಅಕ್ಕರೆಯಲಿ ಜಗಕಾವ ನಿಸ್ಸೀಮ ಮುಕ್ಕಣ್ಣ ವಿಧಿಸಿರಿ ಸಾರ್ವಭೌಮ ವಿನುತ ಗುಣಲಲಾಮ ಸುನಾಮ ಮೇಘಶ್ಯಾಮ 8 ಸುಂದರ ಬಂದ ಸೃಷ್ಠಿಸ್ಥಿತಿಲಯಗೈವ ಮು- ವೃಂದಕಳೆದು ನಿಜ- ಸುಧಾರ್ಣವ ಬೃಹತೀನಾಮಗ ಮಂದಸ್ಮಿತ ವದನವ ತೊರುವ ಈತನು ಸ್ಯಂದನವೇರಿಹ ಜಯಮುನಿಹೃದಯಗ ಮಧ್ವರಮಾವರ ಶ್ರೀಕೃಷ್ಣವಿಠಲನು ಭವ ಪರಿವಾರದ ಕೂಡಿಯೆ ಬಂದಾ 9
--------------
ಕೃಷ್ಣವಿಠಲದಾಸರು
ಭೂರಿ ಮಹಿಮೆಯಾ ಪ ಕಾಲ ಹದಡಮೇಲೆ ವೀಣೆಯ ಶಾಲನ್ಹೊದ್ದು ಹರಿಯಗಾಯ ಲೀಲೆ ಬಾ ಹೊದೊ1 ಕರೆದ ಕ್ಷಣಕೆ ಬರುವಿ ಎನ್ನೊಳುಕರುಣವೇನಿದು ಗುರುತು ತೋರದಂತೆಎನ್ನ ಬಳಿಗೆ ಬರುವುದೋ 2 ನಿನ್ನ ನಂಬಿದೆನ್ನ ಭಾಷೆಯನ್ನು ಲಾಲಿಸೋಇನ್ನು ಇಂದಿರೇಶ ವದನವನ್ನು ತೋರಿಸೋ 3
--------------
ಇಂದಿರೇಶರು
ಯಜನವಾಗಲಿ ನಾನು ಭುಜಿಸುವುದು ಎಲ್ಲ ಪ ಅಜಪಿತನೆ ಅದರ ಅನುಸಂಧಾನವನು ಅರಿಯೆ ಅ.ಪ ದೇಹವೆಂಬುದೆ ಯಜ್ಞಶಾಲೆಯಾಗಿ ಮಹಯಜ್ಞಕುಂಡವು ಎನ್ನ ವದನವಾಗಿ ಆವಹನೀಯಾಗ್ನಿಯು ಮುಖದಲ್ಲಿ ಹೃದಯದೊಳು ಗಾರ್ಹಸ್ಪತೀ ದಕ್ಷಿಣಾಗ್ನಿಯು ಸುನಾಭಿಯಲ್ಲಿ 1 ಅರಿ ಪಂಚಾಗ್ನಿಯೊಳು ಆಕ್ಷಣದಿ ಪ್ರಾಣಾದಿ ಪಂಚರೂಪಗಳು ಹೋತಾಉದ್ಗಾತಾದಿ ಋತ್ವಿಕ್ಕುಗಳಾಗಿ ನಿಂತಿಹರೆಂದು2 ಆಹುತಿಯ ಕೊಡತಕ್ಕ ಶೃಕಶೃಕ್‍ಶೃವಗಳು ಬಾಹುಗಳು ಇಹಭೋಜ್ಯವಸ್ತುವೆಲ್ಲ ಆಹುತಿಯು ದೇಹಗತ ತತ್ವರು ಪರಮಾತ್ಮ ಬ್ರಾಹ್ಮಣರು ಜೀವ ದೀಕ್ಷಿತನು ಬುದ್ಧಿತತ್ಪತ್ನಿ 3 ಅಹಂಮಮತಾದಿ ಅರಿಷಡ್ವರ್ಗಗಳು ವುಹಯಜ್ಞದ ಯೂಪಸ್ಥಂಭದ ಪಶುಗಳು ಅಹರಹ ಬಹ ನೀರಡಿಕೆಯು ಕುಡಿವನೀರೆಲ್ಲವು ಯಜನಕಾರ್ಯದ ಮಧ್ಯ ಪರಿಷಂಚಾಮಿ4 ಇಷ್ಟಾದರನುಸಂಧಾನವನೆ ಕೊಡುಕಂಡ್ಯ ಶ್ರೇಷ್ಠಮೂರುತಿ ಶ್ರೀ ವೇಂಕಟೇಶ ನಿಷ್ಠೆಯೆನ್ನೊಳಗಿಲ್ಲ ಉರಗಾದ್ರಿವಾಸವಿಠಲ ಹೊಟ್ಟೆಹೊರೆವುದು ನಿನಗೆ ತುಷ್ಟವಾಗಲಿ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶ್ರೀ ಪತಿಯೆ ನಿನ್ನ ದಯವೆಂತಾಹದೋ ಪಾಪಕರ್ಮವ ಮಾಡಿ ಜೀವಿಸುವೆ ನಿರುತ ಪ ಬಾಲತನವನು ಬಾಲಲೀಲೆಯಿಂದಲಿ ಕಳೆದೆ ಕೀಳು ಜನರೊಡನೆ ಸ್ನೇಹವ ಬೆರಸಿದೆ ಹಾಳು ಹರಟೆಗೆ ಹೊತ್ತು ಸಾಲದೋಯಿತು ಯನಗೆ ಶ್ರೀ ಲೋಲ ನಿನ್ನಡಿಗೆ ದೂರಾದೆ ನಾನು 1 ಬುದ್ಧಿ ಪೂರ್ವಕದಿ ಸದ್ವಿದ್ಯೆಯನು ಕಲಿಯದಲೆ ಶುದ್ಧ ತಾಮಸ ವಿದ್ಯದೊಳು ರಮಿಸಿದೆ ಮಧ್ವಶಾಸ್ತ್ರದಸಾರವನ್ನು ತಿಳಿಯದೆ ನಾನು ಕದ್ದಕಳ್ಳನ ತೆರದಿ ಬಾಳಿದೆನು ಬರಿದೆ 2 ಪ್ರಾಯತನವೆ ವಿಷ ಪ್ರಾಯವಾಯಿತು ಎನಗೆ ಕಾಯಜನ ಉಪಟಳದಿ ಮತ್ತನಾದೆ ತೋಯಜಾಕ್ಷಿಯರ ದುರ್ಮಾಯ ಜಾಲಕೆ ಸಿಲುಕಿ ನೋಯಿಸಿದೆ ನಿಜ ಸತಿಯ ಪರಿಪರಿಯಲಿಂದ 3 ಮದನ ಜನಕನೆ ನಿನ್ನ ಮಧುರನಾಮವ ಮರೆದು ಸುದತಿಯರ ಅಧರಾಮೃತಕೆ ಬೆರೆದು ವಿಧಿಕುಲಾಚರಣೆ ಜರೆದ್ಹÀÀಗಲಿರುಳು ನಾರಿಯರ ವದನವನು ನೋಡಿ ಮೋದಿಪನರಾಧಮನೊಳ್ 4 ಉದರ ಗೋಸುಗ ಪರರ ಹೃದಯ ದ್ರವಿಸುವ ತೆರದಿ ವಿಧ - ವಿಧದಿ, ಆತ್ಮ ಸ್ತೊತ್ರವನೆ ಪೊಗಳಿ ಸದ-ಸದ್ವಿ ವೇಕವನು ತೊರೆದನ್ಯರ್ಹಳಿದು ಬಲು ಚದುರ ನಾನೆಂಧೇಳಿ ಮೋಸಗೊಳಿಸುತ ಜನರ 5 ಸಿರಿ ಚರಣಕ್ಕೆ ಶಿರ ಬಾಗ ದ್ಹರಿ ಭಕುತರಿಗೆ ವಿನಯದಿಂದೆರಗದೆ ನಿರುತದಲಿ ನಾಚಿಕಿಲ್ಲದಲೆ ಭೂದನುಜಯ ವಾನರಿಗೆ ಕರಮುಗಿದು ಜೀವಿಪÀಖೂಳ ಮನುಜನೊಳು 6 ಸತ್ಯಧರ್ಮವÀ ತ್ಯಜಿಸಿ ಮತ್ತೆಯುತ್ತಮರಜಾ - ನ್ನತ್ಯವನು ಸಹಿಸದಲೆ ತತ್ತಳಿಸುವೆ ಪೆತ್ತವರ ಸೇವಿಸದೇ ಮಿಥ್ಯವನೆ ಬೊಗಳಿದು - ಷ್ಕøತ್ಯದಿಂಬಾಳ್ವ ಉನ್ಮತ್ತನರ ಪಶುವಿನೊಳು 7 ಹರಿಗೆರಗದಿರುವÀÀ ಶಿರ ಹರಿಯ ಸ್ಮರಿಸದ ಜಿಂಹೆ ಹರಿವಾರ್ತೆಯಾಲಿಸದ ಕರ್ಣಂಗಳು ಕರ ಹರಿಯ ನೋಡದ ಚಕ್ಷು ಸರುವ ಪರಿಯ ಪವಿತ್ರದೇಹಧರಿಸಿದ ನರಗೆ 8 ವಿತ್ತ ಪಹರಿಸಿ ಪರರ ನಿಂದಿಸಿ ಪರರ ಬಲುವಂಚಿಸಿ ಪರಮೇಷ್ಟಿ ಜನಕನೆ ಪರತರ ಪರಂಜ್ಯೋತಿ ಪರದೈವನೆಂದರಿಯದಿರುವ ಪಾಮರನಿಗೆ 9 ನಾಮಾಡದಿಹ ಪಾಪ ವೀಮಹಿಯೊಳೊಂದಿಲ್ಲ ಸೀಮೆಗಾಣಲು ರವಿಜನಿಗೆ ಸಾಧ್ಯವಿಲ್ಲ ಆ ಮಹಾನರಕÀಂಗಳೆನಗೆÀ ತಕ್ಕವು ಅಲ್ಲ ಸ್ವಾಮಿ ನೀಪೊರೆಯದಿರೆ ಯನಗಾರು ಗತಿಯಿಲ್ಲ 10 ಏನಾದರೊಳಿತೆ ವರದೇಶ ವಿಠಲ ನಿನ್ನಾ ಙÁ್ಞನುಸಾರದಿ ಕರ್ಮಗಳ ಮಾಡಿದೆ ಧೀನರಕ್ಷಕನೆಂಬ ಬಿರಿದು ನಿಜ ವಿದ್ದರಾ - ದೀನನಾದವನನುದ್ಧರಿಸಲರಿಯಾ 11
--------------
ವರದೇಶವಿಠಲ
ಶ್ರೀನಿವಾಸ ಜಗನ್ನಿವಾಸ ಪ ದೀನ ರಕ್ಷಕ ನಿಖಿಲ ಮಾನವರಮಾನಾಭಿಮಾನ ದೊಡೆಯನು ನೀನೇಯಲ್ಲದಿಲ್ಲಾ ಅ.ಪ. ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣು ಹೊಕ್ಕೆನನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವಸೀಳಿ ರಕ್ಷಿಸಿದೆ ಗಜವಾ-ದೇವ 1 ಹಿಂದೆ ನಾನಾನ್ನಗಿರಿಯಿಂದ ಬಹದಾರಿಯೊಳು ಸಂದುಗೆಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂದು ಜನಕೆಲ್ಲಿನೀ ಬಂದು ಬೆಳಕನು ತೋರಿ ಮಂದೆಗೂಡಿದೆ ಕೃಷ್ಣಾ 2 ಇಂದು ನಿಜ ಸತಿಯುನೊಂದಳುಬ್ಬಸರೋಗದಿಂದ ಗಾಳಿಯದೀಪದಂದಮಾಗಿ/ ನಂದಿಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲೀಗ ಬಂದು ಸಲಹಿದೆ ತಂದೆ 3 ತುರುಗಾಯ್ವರಸುಗಳನು ಮರಳಿಪಡೆದೆ ನರಪೌತ್ರನನು ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕುರು ವರವಿಭೀಷಣ ತಾಪಸರನುಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರಗಿರಿಯೊಳಗೆ ನೆಲಸಿರುವ ವರದ ವಿಠಲ ರಾಯ 5
--------------
ಸರಗೂರು ವೆಂಕಟವರದಾರ್ಯರು
ಸೇವಕನೆಲೊ ನಾನು ನಿನ್ನಯ ಪಾದಸೇವೆ ನೀಡೆಲೊ ನೀನು ಪ. ಸೇವಕನೆಲೊ ನಾನು ಸೇವೆ ನೀಡೆಲೊ ನೀನುಕಾವದೇನೆಲೊ ಶ್ರೀವಧೂವರ ರಾವಣಾಂತಕ ರಕ್ಷಿಸೆನ್ನನುಗೋವರ್ಧನ ಗಿರಿಧರ ದೇವ ಗೋವುಗಳ ಕಾವಶ್ರೀಮಹಾನುಭಾವ ವರಗಳನೀವ ದೇವಶ್ರೀವಲ್ಲಭ ದಯಮಾಡೆನ್ನನುಈ ವ್ಯಾಳೆಗೆ ಇಂದಿರೆರಮಣ ಅ.ಪ. ರಾಮ ದಶರಥನಂದನ ರಘುಕುಲಾಬ್ಧಿಸೋಮ ಸುಂದರವದನವಾಮನ ಪರಿಪೂರ್ಣಕಾಮ ಕೌಸಲ್ಯರಾಮಸ್ವಾಮಿ ಶ್ರೀರಂಗಧಾಮ ದೈತ್ಯವಿರಾಮಶ್ರೀಮದನಂತ ನಾಮಭೀಮ ಮುನಿಜನಸ್ತೋಮರಮ್ಯಗುಣಧಾಮ ರಣರಂಗಭೀಮಕೋಮಲಶ್ಯಾಮ ಹೇಸಾಮಜವರದ ನೀನನುದಿನಕಾಮಿತಫಲವನು ಕರುಣಿಸಿ ಕಾಯೊ 1 ಶಂಕರ ಸುರಸೇವಿತ ಶೇಷಗರುಡಾ-ಲಂಕಾರ ಮಣಿಶೋಭಿತಪಂಕಜನಯನ ಮೀ-ನಾಂಕ ಜನಕ ಪಾದ-ಪಂಕಜಾಸನವಿನುತ ತಿರುಪತಿವೆಂಕಟ ಬಿರುದಾಂಕ ಜಯ ಜಯಶಂಖಚಕ್ರಗದೆ ಪಂಖ ಪಿಡಿದಕಳಂಕ ಚರಿತ ತಾ-ಟಂಕಗೊಲಿದ ನಿಶ್ಶಂಕಲಂಕಾಧಿಪರಿಪು ರಘುಪತಿಕಿಂಕರರಿಗೆ ಕಿಂಕರ ನಾನೆಲೊ 2 ಮಾಧವ ಮಧುಸೂಧನನಂದಮಂಗಳ ವಿಗ್ರಹಬಿಂದುಮಾಧವ ಶ್ರೀಮುಕುಂದ ಶ್ರೀಮದಾ-ನಂದ ವಂದಿತಾಮರವೃಂದ ಶ್ರುತಿಗಳ ತಂದ ತುರಗವನೇರಿ ಬಂದವೃಂದಾವನದೊಳಗಿಂದ ಯಶೋದೆಯಕಂದ ಹರಿಗೋ-ವಿಂದ ಶೇಷಗಿರಿಯಲಿ ನಿಂದಮಂದಾಕಿನಿ ಪಡೆದೆಲೊ ಧ್ರುವಗೊಲಿ-ದಂದದಿ ಎನಗೊಲಿಯೊ ಹಯವದನ 3
--------------
ವಾದಿರಾಜ
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಪ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರÀಮಾ ಉದಿಸಲಿ 1 ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ 2 ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು3 ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ 4 ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ 5 ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ6 ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ 7
--------------
ವಿಜಯದಾಸ
ಕಂಡು ಅಂಜಿದೆವಯ್ಯ ವೆಂಕಟನಿನ್ನ ಕಂಡು ಅಂಜಿದೆವಯ್ಯಪುಂಡರಿಕಾಕ್ಷ ನಿನ್ನ ಸೊಂಡಿಲಮಾರಿಸಾಲದೆ ವದನವ ಪ.ಅಚ್ಯುತನಿನಗುಣ ಸ್ವಚ್ಚವೆÉಂದು ಬರಲುಮಚ್ಚಕೂರ್ಮಅತಿ ಹುಚ್ಚುರೂಪಗಳು1ಮುರಲಿಧರ ನಿನಗೆ ಎರಗಲು ಬಂದರೆಕ್ವಾರಿದಾಡಿಲುರಿಬಾಯಿ ತೆರೆದದ್ದು ನಾವು 2ಸುರತನೆಂದು ನಾವು ನಿರುತಲಿ ಬಂದರೆತಿರಕ ಕೊಡಲಿ ಎತ್ತಿ ಕರಕರ ಬಡಿಸÀುವ 3ಕೊಂಡಾಡೊ ಗುಣವಿಲ್ಲ ಹೆಂಡÀತಿಯನೆ ಒಲ್ಲಿಬಂಡಿ ಮುರಿದು ಅತಿದಿಂಡೆ ಪುರುಷನ 4ಉತ್ತಮನೆ ರಮಿಯರಸು ಬತ್ತಲಿದ್ದ ಮ್ಯಾಲೆಹತ್ತಿ ಕುದುರೆ ಕತ್ತಿ ಸುತ್ತ ಬೀಸುವನ 5
--------------
ಗಲಗಲಿಅವ್ವನವರು
ಪೇಳಲಳವೆ ನಿನ್ನ ಮಹಿಮೆಯ-ಶ್ರೀರಂಗಧಾಮ|ಪೇಳಲಳವೆ ನಿನ್ನ ಮಹಿಮೆಯ ಪನೀಲಮೇಘಶ್ಯಾಮ ನಿನ್ನ |ಬಾಲಲೀಲೆಯಾಟವ ಅ.ಪವಿಷದ ಮೊಲೆಯ ಪೂತನಿಯ |ಅಸುವ ಹೀರಿದ ಶೂರನಾದೆ |||ಉಸಿರಲಳವೆ ನಿನ್ನ ಮಹಿಮೆ |ಅಮ್ಮಮ್ಮಮ್ಮಮ್ಮಮ್ಮ ||ಕೆಸರ ತಿನಬೇಡೆನುತ ತಾಯಿ |ಶಿಶುವಿನ ವದನವ ನೋಡಿದಳಾಗ |ದಶಚತುರ್ಭುವನವ ತೋರಿದ ಬಾಯೊಳ |ಗಲ್ಲಲ್ಲಲಲ್ಲಲ್ಲಲ್ಲೇ 1ಬಾಲಲೀಲೆಯ ಬಂಡಿ |ಕಾಲಿಲೊದ್ದು ಶಕಟಾಸುರನ ||ಮೂಲನಾಶ ಮಾಡಿದೆ ನೀ |ನಬ್ಬಬ್ಬಬ್ಬಬ್ಬಬ್ಬಬ್ಬ ||ತಾಳಮರದ ನಡುವೆಒರಳ|ಕಾಲಿಗೆ ಕಟ್ಟೆಳೆಯುತಿರಲು |ಬಾಲ ಸತ್ತನೆಂದುಗೋಪಿಅತ್ತ-|ಳಯ್ಯಯ್ಯಯ್ಯಯ್ಯಯ್ಯಯ್ಯೊ 2ಸಣ್ಣವನಿವನಲ್ಲ ನಮ್ಮ |ಬೆಣ್ಣೆ ಕದ್ದು ಗೊಲ್ಲರ ಮನೆಯ |ಹೆಣ್ಣು ಮಕ್ಕಳನು ಹಿಡಿದ ಕಳ್ಳ |ಎಲ್ಲೆಲ್ಲೆಲ್ಲೆಲ್ಲೆಲ್ಲೆಲ್ಲೆ ||ನಿನ್ನಾಣೆಯಿಲ್ಲೆಂಬ ರಂಗನ |ಬಿನ್ನಾಣಕೆ ನಕ್ಕವರನು ಬಯ್ಯುತ |ಎನ್ನ ಕಂದ ಹುಸಿಯನಾಡ |ನೆಂದೆಂದೆಂದೆಂದೆಂದು 3ನಾರಿಯರೆಲ್ಲ ಬತ್ತಲೆಯಾಗಿ |ನೀರಾಟವನಾಡುತಿರಲು |ಸೀರೆಗಳೊಯ್ದು ಮರವನೇರಿದ |ನತ್ತತ್ತತ್ತತ್ತತ್ತತ್ತ ||ವಾರಿಜಮುಖಿಯರು ಲಜ್ಜೆಯ ದೊರೆದು |ಸೀರೆಗಳನು ಬೇಡಲವರಮೋರೆ ನೋಡಿ ರಂಗ ನಕ್ಕ |ಅಬ್ಬಬ್ಬಬ್ಬಬ್ಬಬ್ಬಬ್ಬ 4ಕಾಡು ಕಿಚ್ಚು ಮುಸುಕಿ ಗೋವ-|ವಾಡಿಯು ಬೆಂದದ್ದು ನೋಡಿ |ಈಡಿಲ್ಲದ ಉರಿಯ ತೀಡಿದ |ಅತ್ತತ್ತತ್ತತ್ತತ್ತತ್ತ ||ಬೇಡಿದ ವರಗಳನೀವ |ಪುರಂದರವಿಠಲನ ಲೀಲೆಯ |ರೂಢಿಯೊಳೀಡನ ಸಮರು ಯಾರುಇಲ್ಲಿಲ್ಲಿಲ್ಲಿಲ್ಲಿಲ್ಲಿಲ್ಲ 5
--------------
ಪುರಂದರದಾಸರು