ಒಟ್ಟು 24 ಕಡೆಗಳಲ್ಲಿ , 11 ದಾಸರು , 24 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಜಗನ್ನಾಥದಾಸ ನಮಿಪೆ ಗುರುರಾಜ ಸಾತ್ವಿಕವಪುಷ ಪ ಈ ಜಗದೊಳು ನಿಮಗೆಣೆಗಾಣೆ ಸತತ ನಿ - ವ್ರ್ಯಾಜದಿ ಹರಿಯ ಗುಣೋಪಾಸನೆ ಮಾಳ್ಪ ಅ.ಪ. ಹರಿದಾಸ ಕುಲವರ್ಯರೆನಿಸಿ ಕಲ್ಪತರುವಂದದಿ ಚರ್ಯ ಚರಿಸುತ ಧರೆಯೊಳು ಮೆರೆವ ಮಹಾತ್ಮರ ಚರಣೇಂದ್ರೀವರಯುಗ್ಮ ದರುಶನ ಮಾಳ್ಪರ ದುರಿತರಾಶಿಗಳಿರಗೊಡದೆ ನೆರೆ ಪರಮಮುಕ್ತಿಯ ದಾರಿ ತೋರುತ ಸಿರಿಸಹಿತ ಹರಿ ತೋರುವಂದದಿ ಕರುಣ ಮಾಳ್ಪ ಸುಗಣಮಹೋದಧಿ 1 ರವಿಯು ಸಂಚರಿಸುವಂತೆ ಭೂವಲಯದಿ ಕವಿಶ್ರೇಷ್ಠ ಚರಿಸಿದೆಯೋ ಅವಿರುದ್ಧ ತ್ರಯಿಜ್ಞಾನ ಪ್ರವಹಂಗದಲಿ ಭುವನೈಕ ವೇದವದ್ಯನ ಶ್ರವಣಭಕುತಿಯಿಂದ ದಿವಸ ದಿವಸದಿ ಪ್ರೀತಿ ಬಡಿಸುತ ಧ್ರುವವರನಂಘ್ರಿಗಳಿಗರ್ಪಿಸಿ ಭುವನ ಪಾವನ ಮಾಡಲೋಸುಗ ಅವನಿ ತಳದಿ ವಿಹರಿಸುತಿಹ ಗುರು 2 ಅಹೋ ರಾತ್ರಿ ಕ್ಷಣ ಬಿಡದೆ ಸನ್ಮನ ಹೃ - ದ್ಗುಹಾಧೀಶನನು ಬಿಡದೆ ಅನುದಿನ ಸ್ಮರಿಸುತ ಸಹನದಿ ಶಮದಮಯತು ನಿಯಮಗಳನ್ನು ವಹಿಸಿ ಶ್ರೀದವಿಠಲನಂಘ್ರಿಯ ಮಹಿಮೆ ತೋರುತ ಪೂಜಿಸುತ ಬಲು ಮಹಿತಪೂರ್ಣಾನಂದತೀರ್ಥರ ವಿಹಿತ ಶಾಸ್ತ್ರಗಳರಿತು ಬೋಧಿಪ 3
--------------
ಶ್ರೀದವಿಠಲರು
ಶ್ರೀ ರುಧಿರೋದ್ಗಾರಿ ಸಂವತ್ಸರ ಸ್ವಾಮಿ ಧನ್ವಂತರಿ ಸ್ತೋತ್ರ 155 ಆನಂದ ಚಿನ್ಮಾತ್ರ ವಪುಷ ಸರ್ವಾಧಾರ ಅನಘ ಕೂರ್ಮಹÀಯ ಶೀಷ್ರ್ಯ ಸ್ತ್ರೀರೂಪ ಅಜಿತ ಆನಮೋ ರುಧಿರೋದ್ಗ್ಗ್ಗಾರಿ ಸಂವತ್ಸರ ಸ್ವಾಮಿ ಅನುತ್ತಮ ಸರ್ವೋತ್ತಮ ಧನ್ವಂತರಿ ರಮೇಶ ಪ ರಾಜಗುರು ಮಂತ್ರಿಗುರು ಸÉೀನಾಧಿಪತಿ ಬುಧನು ರಾಜಿಸುವರು ಸೂರ್ಯೇಂದು ಕವಿ ಭೂಮ ರವಿಜ ಪ್ರಜ್ವಲಿಸಿ ನೀ ಇವರೊಳ್ ಕೃತಿಯ ನಡೆಸಿ ಲೋಕ ಪ್ರಜೆಗಳಿಗೆ ಮಳೆ ಬೆಳೆ ಸೌಖ್ಯವಿತ್ತು ಪÉೂೀಷಿಸುವಿ 1 ದೇಶದೇಶ ರಾಜ್ಯಾಧಿಪರ್ಗಳ ಪರಸ್ಪರ ಸಂಶಯ ದುರ್ಮನವ ಆಗಾಗ ಶಾಂತ ಮಾಡುವುದು ಮೋಸಗಾರ ಕುಜನರು ಚೋರ ಕ್ರೂರರು ಮಾಳ್ಪ ಹೊಸ ಹೊಸ ಚಟುವಟಿಕೆ ಪರಿಹರಿಸಿ ಕಾಯೋ ಲೋಕವನು 2 ವೇದವ್ಯಾಸವಿರಚಿತ ಸಾತ್ವಿಕ ಪುರಾಣಗಳ ಯಥಾರ್ಥ ಪೇಳಿದೆ ದುಷ್ಟಾರ್ಥ ಪೇಳಿ ಜನರ ಮೋಹಿಸಿ ಸಾಧು ಸ್ತ್ರೀಪುರುಷರ ಪ್ರೌಢಕನ್ಯೆ ಬಾಲರ ವಂಚಿಪ ಧೂರ್ತರನು ಅಡಗಿಸಿ ಸತ್ಯಧರ್ಮ ಸಂತಾನ ಬೆಳೆಸೋ 3 ರಾಜ ಸಚಿವನು ಬೃಹಸ್ಪತಿಯಂತರ್ಗತನಾದ ರಾಜರಾಜೇಶ್ವರನೆ ನೀ ಅಂದು ಮಾನವಿಗೆ ಮದುವೆ ಉಜ್ವಲ ತಪಸ್ವಿಗೆ ಪುತ್ರರ ಒದಗಿಸಿದಿ ಇಂದು ನಿಜ ಭಕ್ತಸುತ ಕಾಮ ಪರಕಾಮ ಜನರಿಗೆ ಒಲಿಯೋ 4 ಹಿಂದಿನ ಇಂದಿನ ಸ್ವಕರ್ಮ ಪರಕರ್ಮ ಲಬ್ಧ ಮಾಂದ್ಯ ನರತ್ವಕೆ ಚರ್ಮ ಸೂತಕ ಗರ್ಭಿ ವ್ಯಾಧಿಪೀಡಿತ ಸಜ್ಜನರಿಗೆ ಸುಖವೀಯೋ ವೇಧಪ ಪ್ರಸನ್ನ ಶ್ರೀನಿವಾಸ ರುಧಿರೋಧ್ಗಾರಿ ಸ್ವಾಮಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವಾಯು ದೇವರು ಅನುದಿನ ಸ್ತುತಿಸುವೆ ದೀನಮನುಜನ ಜನುಮಗಳಳಿಸೋ ಪ ವಾಣಿವಂದಿತ ಪಾದಪದ್ಮನೆ ಕಾಯೋ ಈಗಲೇ ಅ.ಪ. ಜಾನಕೀರಮಣನ ಪ್ರಿಯ ದಾನವಾಂತಕ ಕಾಯ ಮಣಿಮಂತಾದಿಗಳ ಶೂಲ ಘನ ಪರಾಕ್ರಮ ಭೀಮ ಜ್ಞಾನದಾಯಕ ವಪುಷ ಆನಂದ ತೀರ್ಥಪ್ರಖ್ಯಾತ ಮೌನಿಮಾನಸ ಚಂದ್ರ ಅನಿಮಿಶೇಷಗಳಾದಿಗೊಡೆಯ ಭಾನುಕುಲತಿಲಕ ದೂತನೆ ಭಾನುಕೋಟಿತೇಜರೂಪನೆ ಗಣಿಸಲಾಗದ ಸತ್ವಮಂದಿರ ಮೌನಿಗಳ ಕಲಶ ಪ್ರಾಯನೆ ಕನಕವರ್ಣದಶುಭಗಾತ್ರನೆ ಧ್ಯಾನಗೋಚರ ವಿಶ್ವರೂಪನೆ ಮಾನದಿಂದಲಿ ಪಾಲಿಸಯ್ಯ 1 ವಾರಿಧಿ ದಾಟಿದಶೂರ ಭಾರಿವನವ ಕಿತ್ತವೀರ ಜರಾಸಂಧನ ಕೊಂದ ಧೀರ ವೈರಿತಿಮಿರಕೆ ಸೂರ್ಯ ಹರಿಯ ಹರಡಿದ ರಾಯ ಪರಾಶರಾತ್ಮಜಪ್ರಿಯ ಕರಿರಾಜವರದನೆ ಪ್ರಥಮಾಂಗ ಭಾರತಿ ರಮಣಮುಖ್ಯಪ್ರಾಣ ಹರಿಯು ಆಗಿ ಹರಿಯ ಒಲಿಸಿದೆ ವೀರಮಾರುತಿ ದೇವ ದೇವನೆ ಬಗೆದು ಧರಿಸಿ ಮೆರೆದೇ ಎಂದು ಸಾರಿದೆ ತೋರಿಸಿ ಕಾಯೊ ಸೂತ್ರನೆ 2 ಅಕ್ಷಯನ ಕೊಂದು ಮೆರೆದ ಲಕ್ಷ್ಮಣನ ಪ್ರಾಣವನುಳಿದ ರುಕ್ಮಿಣೀ ಪತಿಯ ಕಿಂಕರನಾದ ಲಕ್ಷ್ಯವಿಲ್ಲದೆ ಸೈನ್ಯಗಳಳಿದಾ ಪಕ್ಷವಾಹನನೆ ದೈವವೆಂದ ಮೋಕ್ಷಸಾಧನಗಳ ತೋರಿನಿಂದ ವೈರಿ ಅನಿಲ ರಕ್ಷಿಸು ರಕ್ಷಿಸು ತತ್ವೇಶರೊಡೆಯ ಲಕ್ಷ್ಮಿಮಾತೆಯಕಂಡುವಂದಿಸಿ ಲಂಕೆ ಸುಟ್ಟು ಸೊಕ್ಕೂ ಮುರಿದೆ ಅಕ್ಷನಾಟವ ಸೋತುನಟಿಸಿ ಕಾಂತೆಗಭಯವ ನೀಡಿ ಪೊರೆದೆ ಅಕ್ಷರೇಡ್ಯನ ಕರುಣದಿಂದಲಿ ಸೂತ್ರಭಾಷ್ಯವ ರಚಿಸಿ ಮೆರೆದೇ ಇಕ್ಷುಚಾಪನ ಪಿತನ ತೋರಿಸೋ ದಕ್ಷಿಣಾಕ್ಷಿಗವತ್ಸರೂಪಿಯೆ 3 ವಿಷಉಂಡುಪೊರೆದ ರೋಮರೋಮಕೆ ಕೋಟಿ ಲಿಂಗಗಳುದುರಿಸಿ ಬಂದ ಧಾಮಸಕಲ ಗುಣಕೆಂದೆನಿಕೊಂಡ ಅನಾದಿ ಅಪರೋಕ್ಷದೇವ ರಾಮಭಕ್ತಾಗ್ರೇಸರನೆನಿಸಿದ ತಾಮಸಾಂತಕ ವಿಜಯರಥಧ್ವಜ ಭಾಮೆಯರೂಪವ ತಾಳಿಮೆರೆದ ಭೀಮವಿಕ್ರಮ ಸಪ್ತಶಿವಧರ ಸಾಮಗಾಯನ ಲೋಲ ಕೃಷ್ಣನ ಪ್ರಿಯದಾಸ ಮೋದಮುನಿಯೆ ಎನಿಸಿಮೆರೆಯುವೆ 4 ವಾನರರೂಪಿಲಿ ಬಂದ ಜಾನಕಿ ಗುಂಗುರಕೊಟ್ಟು ನಿಂದ ರಾಜಸೂಯವ ಮಾಡಿನಿಂದ ಹರಿಯು ಎಂದ ವನಜನಾಭನಮುಖ್ಯ ಪ್ರತಿಬಿಂಬ ಕ್ಷಣದಿ ಸಂಜೀವನವ ತಂದೆ ವಾನರರ ಪ್ರಾಣ ಉಳಿಸಿದೆ ದ್ರೋಣಸುತನ ಅಸ್ತ್ರನಿಲಿಸಿದೆ ಸಾಮ ದೂರ ಖ್ಯಾತನಾಮನೆ ವಾಯು ಅಂತರ ವಿಶ್ವ ಚರಣ ನಂಬಿದೇ 5
--------------
ಕೃಷ್ಣವಿಠಲದಾಸರು
ಸೂತ್ರನಾಮಕಪ್ರಾಣ ಜಗತ್ರಾಣ ಸೂತ್ರನಾಮಕ ಜಗಸೂತ್ರನೆ ಹರಿಕೃಪಾ ಪಾತ್ರ ನೀನಹುದೋ ಸರ್ವತ್ರದಿ ನೀನೆ ಪ ದೇವಾ ನೀನಿಲ್ಲದಿರೆ ಜಗವೆಲ್ಲವು ತಾ ನಿರ್ಜೀವ ಜೀವ ಕೋಟಿಗಳೆಲ್ಲ ಕಾವ ಪಾವನಾತ್ಮಕ ಸಂಜೀವ ಲವಕಾಲ ಬಿಡದೆ ಎಮ್ಮೊಳಿರುವ ಭೋ ದೇವ ಅ.ಪ ಸಾಟಿ ಯಾರೆಲೆ ತ್ರಿಕೊಟಿರೂಪನೆ ನಿಶಾಚರ ಕುಲಕೆ ಕುಠಾರಿ ಅಜಾಂಡ ಖರ್ಪರದಿ ಸೃಷ್ಟಿಯೊಳು ಸಂಚಾರಿ ಪಟುತರ ತ್ರಿವಿಕ್ರಮ ಚಟುಲ ಮೂರುತಿ ಮನತಟದಲಿ ಭಜಿಸಿದ ಶ್ರೇಷ್ಠನೆ ನಿಜಪರಮೇಷ್ಠಿಪದವನು ತೊಟ್ಟು ಪಾಲಿಪೆ ನಿಂದು ಬ್ರಹ್ಮಾಂಡ ಪೊತ್ತು ಅಂದು ಜಗಭಾರ ವಹಿಸಿದೆಯೊ ದಯಾಸಿಂಧು ಎಂದೆಂದೂ 1 ಸರುವ ತತುವೇಶರ ವ್ಯಾಪಾರ ಧೀರ ನೀ ನಡೆಸೆ ಜಗಸಂಸಾರ ಕಾರಣನು ಜಗಕಾರ್ಯ ಕಾ ವೈರಾಗ್ಯ ಐಶ್ವರ್ಯ ನಿನ್ನಯ ಗುಣ ಸ್ವರೂಪತನುಕರಣೇಂದ್ರಿಯ ಕರ್ಮಫಲವನು ಜೀ ವರುಗಳಿಗುಣಿಪ ಅನಿಲರೂಪನೆ ತನುಗೋಳಕದಲಿ ನೀ ನೆಲ ಅಂದು ಸೃಷ್ಟಿಯೊಳು ಬಂದೂ ಪೊಂದಿ ಸರ್ವರೊಳು ನಿಂದು ಹಿಂದೂ ಇಂದೂ ಇನ್ನು ಮುಂದೂ ಕರುಣಾಸಿಂಧು ಎಂದೆಂದೂ 2 ಪ್ರಾಣಪ್ರಾತರ ಸಾಯಂಬೀತೆರ ಅಭಿಧಾನ ಗುಣಸ್ತವನ ಮಾಳ್ಪರೆಲ್ಲ ಸುರ ಗಣಾ ಮಣಿದು ಬೇಡುವರೆಲ್ಲ ಅನುದಿನಾ ಎಣೆಯುಂಟೆ ನೀನಮಿತ ಗುಣಗಣಾ ಶ್ರೀ ಮುಖ್ಯ ಪ್ರಾಣಾ ಜಗಬಂಧಕೆ ಮಹಾರಜ್ಜು ರೂಪ ನೀ ಚಿತ್ಸುಖಮಯ ವಪುಷ ಖಗಪ ಶೇಷ ಶಿವ ಶಕ್ರಾದೀ ಜಗ ಬದ್ಧವು ಕೇಶ ನಖಾಗ್ರ ಪರ್ಯಂತ ಚಿತ್ಸುಖ ಗಭೇದ ನೀ ಛಂದ ಶಾಸ್ತ್ರದಿ ತನು ತ್ವಗ್ರೋಮ ಉಷ್ಣಿಕ್ ಗಾಯತ್ರಿ ನರ ಮಾಂಸನುಷ್ಟುಪ್ ಅನುಷ್ಟಪು ಅಸ್ತಿಮಜ್ಜಾ ಜಗತೀ ಪಂಕ್ತಿ ಬೃಹತಿನಾಮಕ ಘನ್ನಾ ಉರಗಾದ್ರಿವಾಸ ವಿಠಲನ್ನ 3
--------------
ಉರಗಾದ್ರಿವಾಸವಿಠಲದಾಸರು
139-4ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಗುರುಗಳು ಏಕಾಂತದಲ್ಲಿ ಇತ್ತ ಉಪದೇಶಮರೆಯದೇ ಅನುಸರಿಸಿ ಭೀಮರತಿಯನ್ನುಸೇರಿ ವಿಹಿತದಿ ಸಂಕಲ್ಪಾದಿಗಳ ಮಾಡಿನೀರಲ್ಲಿ ಇಳಿದರು ಶ್ರೀನಿವಾಸಾಚಾರ್ಯ 1ಸರ್ವ ಜಗತ್ಪಾಲ ಶ್ರೀ ಪಾಂಡುರಂಗವಿಠ್ಠಲನುಪ್ರವಾಹ ಸುಳಿಯಿಂದ ಬಡುಗಾತ್ರ ಭಕ್ತನ್ನಕಾಯ್ವುದಕೆ ಗಂಡಾ ಶಿಲಾ ನಿರ್ಮಿಸಿದ ಅಲ್ಲಿದೇವಗುರುಸ್ಮರಣೆಯಿಂ ಇಳಿದರಾಚಾರ್ಯ2ನರಸಿಂಹ ವಿಠ್ಠಲದಾಸರು ತಂದೆಯಗುರುಗಳು ಗೋಪಾಲ ವಿಠ್ಠಲ ದಾಸರಪರಮಗುರುಗಳುವಿಜಯವಿಠ್ಠಲ ದಾಸರಪುರಂದರದಾಸರಾಜರ ಸ್ಮರಿಸಿದರು3ತೀರ್ಥಾಭಿಮಾನಿಗಳ ಭಾರತೀಪತಿಯಪದುಮೆ ಪದ್ಮೇಶ ಫಂಡರಿ ನಾಥ ಹರಿಯಮೋದಚಿನ್ಮಯ ಜಗನ್ನಾಥನ ಸ್ಮರಿಸುತ್ತಉದಕಪ್ರವಾಹದೊಳು ತನುವ ಅದ್ದಿದರು4ಸೀನಪ್ಪ ಶ್ರೀನಿವಾಸ ಶ್ರೀನಿವಾಸಪ್ಪ ಈಶ್ರೀನಿವಾಸಾಚಾರ್ಯ ಒಂದು ಸಲ ಮುಳುಗೇಳೆತನುಗತ ಒಳ ಹೊರಗಿನಕಲುಷಕಳೆದವುಪುನಃ ಮುಳಗೇಳಲು ಸುಪವಿತ್ರರಾದರು 5ಪುನಃ ಮುಳುಗಿ ಎದ್ದು ಅ ಘ್ರ್ಯವ ಅರ್ಪಿಸಲುಇನನ ಮಂಡಲದಿ ವರವಾಯು ಅಧಿಷ್ಠಾನದಲಿಶ್ರೀ ನಾರಾಯಣ ಸರ್ವಜನ ಹಿತಕರನಆನಂದ ಚಿನ್ಮಾತ್ರ ವಪುಷನ್ನ ಸ್ಮರಿಸಿದರು 6ಋಕ್ಸಾಮ ವೇದಗಳಿಂದ ವಾಣೀವಾಯುಸುಖಪೂರ್ಣ ನಾರಾಯಣನ ಸ್ತುತಿಸುವರುಆಕಳಂಕ ಉನ್ನಾಮಸಾಮನಾಮ ಹೀಂಕಾರಶ್ರೀಕೃತಿಪತಿ ಪ್ರದ್ಯುಮ್ನಾದಿ ಸ್ವರೂಪ 7ಸಪ್ತಕಾಲದಿ ಸಪ್ತಸಾಮ ಪ್ರತಿಪಾದ್ಯನುಸಪ್ತಸ್ವರೂಪನು ಆದಿತ್ಯಾಂತಸ್ತಪ್ರದ್ಯುಮ್ನವಾಸುದೇವವರಾಹನಾರಾಯಣಅನಿರುದ್ಧ ನರಸಿಂಹ ಸಂಕರುಷಣ 8ಪರಮಗುರುವಿಜಯದಾಸಾರ್ಯರ ಪ್ರೇರಣೆಯಿಂದಗುರುಗಳು ಗೋಪಾಲದಾಸಾರ್ಯರುಅರುಪಿದಅನುಸಂಧಾನಕ್ರಮದಿಂದಲೇಗುರುತಮ ಸಮೀರನಲಿ ಹರಿಯ ಸ್ಮರಿಸಿದರು 9ಸೂರ್ಯನೊಳಿಪ್ಪಸಮೀರಅಧಿಷ್ಠಾನಸ್ಥಸೂರಿಜನ ಪ್ರಾಪ್ಯ ಋಕ್ ಸಾಮಾದಿಸ್ತುತ್ಯಸೂರ್ಯತೇಜಃ ಪುಂಜ ಸ್ಫೂರ್ತಿದ ಜಗತ್ಕರ್ತ ಶ್ರೀಶ್ರೀನಾರಾಯಣಗಘ್ರ್ಯ ಅರ್ಪಿಸಲು ಒಲಿದ 10ಝಗಝಗಿಪ ತೇಜಸ್ಸು ಶಿರೋಪಕಂಡರುಮೂಗಿನಿಂದೊಂದಡಿ ಶಿರದ ಮೇಲೆಜಗನ್ನಾಥವಿಠ್ಠಲ ಎಂದು ಪ್ರಜ್ವಲಿಸಿತುಹೇಗೆ ವರ್ಣಿಸುವೆ ಆ ಅದ್ಭುತ ದೃಶ್ಯ 11ಸರ್ವ ಜಗದ್ರಕ್ಷಕ ವಿಠ್ಠಲನು ತತ್ಕಾಲಪ್ರವಾಹವ ತಡೆಯಲು ನಿರ್ಮಿಸಿದ ಶಿಲೆಯುಪ್ರಜ್ವಲಿಪ ಈ ದಿವ್ಯ ಹರಿನಾಮ ಅಂಕಿತಕ್ಕೆಐವತ್ತು ಅಂಗುಲ ಹಿಂದೆ ನಿಂತಿತ್ತು 12ಕ್ಷಣಮಾತ್ರದೊಳಗೆ ಈತಟಿತ್ಕೋಟಿನಿಭಜ್ಯೋತಿಫಣೆಮುಂದೆ ನಿಂತಿತು ಆಗ ಆಚಾರ್ಯಚೆನ್ನಾಗಿ ನೋಡಿದರುಹರಿಇಚ್ಛಾಶಕ್ತಿಯಿಂಶ್ರೀನಿವಾಸವಿಜಯಗೋಪಾಲ ವಿಠ್ಠಲನ13ಶ್ರೀ ಶ್ರೀನಿವಾಸನೇವಿಜಯವಿಠ್ಠಲನಾಗಿಶ್ರೀ ಶ್ರೀನಿವಾಸ ಗೋಪಾಲ ವಿಠ್ಠಲನಾಗಿಶ್ರೀ ಶ್ರೀನಿವಾಸ ಶ್ರೀ ಜಗನ್ನಾಥ ವಿಠ್ಠಲನಾಗಿಶಿರಿ ಜಗನ್ನಾಥ ದಾಸಾರ್ಯರು ನೋಡಿದರು 14ಶ್ರೀ ಶ್ರೀನಿವಾಸನೆ ಪ್ರಸನ್ನನು ಆಗಿತೋರಿಹನು ಜಗನ್ನಾಥ ವಿಠಲನೆನಿಸಿತಿರುಪತಿ ಶ್ರೀನಿಧಿಯೇ ಪಂಡರಿ ವಿಠ್ಠಲನುಸೂತ್ರನೋಡಿ ನಸ್ಥಾನ ತೋಪಿ15ಶ್ರೀ ರುಕ್ಮಿಣೀಪತಿ ಪರಂಜ್ಯೋತಿ ಪರಂಬ್ರಹ್ಮಉರುಅಖಿಳಸಚ್ಛಕ್ತ ಜಗನ್ನಾಥ ವಿಠ್ಠಲಶಿರಿ ಜಗನ್ನಾಥದಾಸರ ಹೃದಯ ¥ದ್ಮದೊಳುಸೇರಿದನು ಜ್ವಲಿಸುತಿಹ ಸರ್ವೋತ್ತಮ ಅಲ್ಲಿ 16ಎಂಟುಅಕ್ಷರಮೂಲಮಂತ್ರದಿ ನಾರಾಯಣನವಿಠ್ಠಲ ಹಯಗ್ರೀವ ವೆಂಕಟೇಶಾದಿಷಡಕ್ಷರಿ ವಿಷ್ಣು ರಾಮ ಕೃಷ್ಣಾದಿಗಳಕ್ರೋಡನರಸಿಂಹಾದಿಗಳನು ಜಪಿಸಿದರು17ಗುರುಪರಮಗುರುಪೇಳ್ದ ರೀತಿಯಲಿ ಜಪಚರಿಸಿಶ್ರೀ ರುಕ್ಮಿಣಿ ವಿಠ್ಠಲ ಮಂದಿರಕೆ ಪೋಗಿಪುರಂದರಾರ್ಯರ ನಮಿಸಿಗುರುಪರಮಗುರುಗಳಸ್ಮರಿಸಿ ಒಳಪೊಕ್ಕರು ವಿಠ್ಠಲನ್ನ ನೋಡೆ 18ಶ್ರೀ ಮಧ್ವರಮಣ ನಿನ್ನ ಅದ್ವಿತೀಯ ಮಹಿಮೆಈ ಮಹೋತ್ತಮಕೃತಿಪುರಂದರದಾಸರದುಅಮಲ ಭಕ್ತಿಯಲ್ಲಿದನ್ನ ಅರ್ಥ ಅರಿತು ಪಠಿಸಿಶ್ರೀಮಂದಿರದೊಳು ಪ್ರವೇಶ ಮಾಡಿದರು 19ತ್ರಿಜಗದೀಶನಪಾದಪದ್ಮಗಳ ನೋಡುತ್ತನಿಜಭಕ್ತಿ ಭಾವದಲಿ ಸಾಷ್ಟಾಂಗ ನಮಿಸಿಅಜಭವೇಂದ್ರಾದಿ ಸುರವಂದ್ಯನ್ನ ಕೇಶಾದಿರಾಜೀವಪಾದಾಂತ ದರುಶನ ಮಾಡಿದರು20ಜ್ವಲಿಸುವ ಕಿರೀಟ ಸುಳಿಗುರುಗಳು ಫಣಿಯ ತಿಲಕಬಿಲ್ಲುವೋಲ್ ಸುಂದರ ಭ್ರೂ ಮುಖಕಮಲಜಲಜೇಕ್ಷಣ ಮುಗುಳುನಗೆಯು ತಟಿದಂದಿಪೊಳೆವ ಕುಂಡಲಕರ್ಣ ಕಂಬುಗ್ರೀವ 21ವನಮಾಲೆ ಎಳೆ ತುಳಸಿದಳ ಹಾರ ಕೊರಳಲ್ಲಿಘನಬಾಹು ವಿಸ್ತಾರವಕ್ಷ ಶ್ರೀವತ್ಸಸ್ವರ್ಣಮಣಿ ಗ್ರೈವೇಯಕೌಸ್ತುಭರತ್ನವುಕಣ್ಣಾರ ಕಾಣಲಾನಂದ ಸೌಂದರ್ಯ 22ಮೂರುಗೆರೆ ಉದರದಲಿವನರುಹನಾಭಿಯುಕರಗಳು ಕಟಿಯಲ್ಲಿ ಶಂಖಾರವಿಂದಪುರುಟಮಣಿ ಗಣಸೂತ್ರ ಪೀತಾಂಬರ ಉಡಿಸ್ಫುರದ್ರತ್ನ ನೂಪುರ ಸಮಪಾದದ್ವಯವು 23ತಟಿತ್ಕೋಟಿನಿಭ ತನ್ ಕಾಂತಿಯಲಿ ಜ್ವಲಿಸುವಸಾಟಿಯಿಲ್ಲದ ಸುಂದರಾಂಗ ಶ್ರೀರಮಣವಿಠ್ಠಲ ಕೃಪಾನಿಧಿ ಶರಣಜನ ಪಾಲನ್ನಹಾಡಿ ಸ್ತುತಿಸಿದರು ಜಗನ್ನಾಥ ದಾಸಾರ್ಯ 24ಫಣಿಪಶಾಯಿಯ ಅನಂತ ಪದ್ಮನಾಭನು ತನ್ನಆನಂದಲೀಲೆಯಲಿ ಜಗವ ಪಡೆಯುವನುಆನಂದಲೀಲೆಯಲಿ ಅವತಾರ ರೂಪಗಳತಾನೇ ಪ್ರಕಟಿಸಿ ಸಜ್ಜನರ ಪಾಲಿಸುವ 25ದೇಶಗುಣಕಾಲ ಅಪರಿಚ್ಛಿನ್ನನು ಅನಂತನುಶ್ರೀಶಸರ್ವೇಶ ಚಿನ್ಮಯನುಅನಘಐಶ್ವರ್ಯ ಪೂರ್ಣಜಗದೇಕ ಪಾಲಕನುಅಸಮ ಸರ್ವೋತ್ತಮನು ಸುಖಮಯನು ಸುಖದ 26ಮೀನಕೂರ್ಮಸ್ತ್ರೀ ಅಜಿತ ಧನ್ವಂತರಿಕ್ರೋಢಶ್ರೀನಾರಸಿಂಹ ವಟುಭೃಗು ರಾಮರಾಮಕೃಷ್ಣ ಜಿನಸುತ ಕಲ್ಕಿ ಠಲಕ ವೆಂಕಟರಮಣಆನಂದಚಿತ್ತನು ಅನಂತ ಅವತಾರ 27ದಾಸೋಹಂ ತವ ದಾಸೋಹಂ ಎಂದುದಾಸವರ್ಯರು ಬಿನ್ನೈಸಿ ಸ್ತುತಿಸಿದರುನಸುನಗುತ ವಾತ್ಸಲ್ಯದಿಂದ ವಿಠ್ಠಲನುವಿಶೇಷಾಪರೋಕ್ಷ ಅನುಗ್ರಹಿಸಿದನುದಯದಿ 28ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್ಕು ವಿದಿಕ್ಕುಗಳ ರಂಜಿಸುವರೂಪದಿಂದ ಪಾಲ್ಗಡಲಲಿ ಆವಿರ್ಭವಿಸಿದ ಶ್ರೀಇಂದಿರೆಯೆ ರುಕ್ಮಿಣಿ ಸೌಂದರ್ಯಪೂರ್ಣೆ 29ಮಾಯಾಜಯಾಕೃತಿಶಾಂತಿ ಸೀತಾಲಕ್ಷ್ಮಿತೋಯ ಜಾಲಯ ಚಿತ್ಪ್ರಕೃತಿ ಭೂದುರ್ಗಾತೋಜಯಾಕ್ಷಿವೇದವತಿದಕ್ಷಿಣಾ ಶ್ರೀಜಯಂತಿ ಸತ್ಯಾರುಕ್ಮಿಣಿ ಸುಂಧುಕನ್ಯಾ 30ಸರ್ವ ಜಗಜ್ಜನನಿಯು ಸರ್ವ ವಿಧದಲಿ ಹರಿಯಸೇವಿಸುತಿಹಳು ಸದಾ ನಿತ್ಯಾವಿಯೋಗಿನಿದೇವದೇವೋತ್ತಮ ರಾಜರಾಜೇಶ್ವರನು ವಿಠ್ಠಲನುದೇವಿ ಶ್ರೀ ರಾಜರಾಜೇಶ್ವರಿಯು ರುಕ್ಮಿಣಿಯು 31ಜ್ವಲಿಸುವ ಮುತ್ತು ನವರತ್ನದಿ ಕಿರೀಟಒಳ್ಳೆ ಪರಿಮಳ ಹೂವು ಮುಡಿದಂತ ತುರುವುಫಾಲದಲಿ ಶ್ರೇಷ್ಠತಮ ಕಸ್ತೂರಿ ತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬೊಟ್ಟು 32ಅಂಬುಜಾಕ್ಷಿ ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯದ ಕೃಪಾನೋಟಕಂಬುಕಂಠದಿ ಮಂಗಳಸೂತ್ರಕರಯುಗದಿಅಂಬುಜವರಕೊಡುವಅಭಯಹಸ್ತಗಳು33ಕಂಧರದಲಿ ಪರಿಮಳಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟೆವಸ್ತ್ರವು ಸ್ವರ್ಣಸರ್ವಾಭರಣ ಭೂಷಣವುಪಾದಉಂಗುರ ಪೆಂಡೆ ಕಂಡು ನಮಿಸಿದರು34ಜಗನ್ನಾಥ ವಿಠ್ಠಲನೂ ಜಗನ್ಮಾತೆ ರುಕ್ಮಿಣಿಯೂಜಗನ್ನಾಥದಾಸರಿಗೆ ಔತಣ ಮಾಡಿದ್ದುಜಗತ್ತಲ್ಲಿ ಭಕ್ತಜನರೆಲ್ಲ ಪೇಳ್ತಿಹರುಜಗದೀಶ ಪಂಢರೀ ವಿಠ್ಠಲನ ಮಹಿಮೆ 35ಕೇಶವ ನಾರಾಯಣಮಾಧವಗೋವಿಂದಶ್ರೀಶ ವಿಷ್ಣು ಮಧುಸೂದನ ತ್ರಿವಿಕ್ರಮಈಶ ವಾಮನ ಶ್ರೀಧರ ಹೃಷಿಕೇಶರಮೆಯರಸಪದ್ಮನಾಭದಾಮೋದರ36ಸಂಕರುಷಣ ವಾಸುದೆವ ಪ್ರದ್ಯುಮ್ನ ನಮೋಅಕಳಂಕ ಅನಿರುದ್ಧ ಪುರುಷೋತ್ತಮನಿಷ್ಕಳಅಧೋಕ್ಷಜನರಸಿಂಹಅಚ್ಯುತಶ್ರೀಕರ ಜನಾರ್ದನ ಉಪೇಂದ್ರ ಹರಿಕೃಷ್ಣ 37ರಮಾಪತಿ ರಮಾಯುತನು ಶ್ರೀಹರಿಯ ರೂಪಗಳಬ್ರಹ್ಮವಾಯು ವಾಣೀಭಾರತಿ ಉಮೇಶಉಮಾ ತತ್ವದೇವದಿಕ್ಪಾಲಕರು ಗಂಗಾಕರ್ಮಮಾನಿ ಪುಷ್ಕರಾದಿಗಳೊಳ್ ತಿಳಿದರು 38ಭೋಜನ ಪದಾರ್ಥದಲು ತದ್ಗತ ಶಬ್ದಂಗಳಲುಭೋಜ್ಯಗಳ ಬಡುಸುವರಲ್ಲೂ ಕ್ಷೇತ್ರದಲ್ಲೂಭೋಜಭಿಮಾನಿಗತ ಖಂಡಾಖಂಡಗನುಭಜನೀಯ ಸ್ಥೂಲಭುಕ್ ಅವ್ಯಯನ ಕಂಡರು 39ಕರುಣಾಬ್ಧಿ ಶ್ರೀ ಹರಿಯ ಔದಾರ್ಯ ಏನೆಂಬೆಶ್ರೀ ಶ್ರೀನಿವಾಸನು ಅಂದು ತಿರುಪತಿಯಲ್ಲಿಶಿರಿ ವಿಜಯಾರ್ಯರ ರೂಪದಿ ಪ್ರೇರಿಸಿಧಾರೆಯೆರಿಸಿದ ಆಯಸ್ ಗುರುಗಳ ಕೈಯಿಂದ 40ಶ್ರೀ ಶ್ರೀನಿವಾಸನ ಮಹಾದ್ವಾರಕೆದುರಾಗಿಹಾರೆ ಕಲ್ಲುಮಂಟಪ ಆಗ್ನೇಯ ದಿಕ್ಕುಎರಡನೆಯದೋ ಮೂರನೆಯದೋ ಅಂಕಣದ ಖೋಲಿಹರಿದಾಸರು ಇದ್ದ ಮುಖಾಮಿ ಬಿಡಾರ 41ಎಳೆಕೆಂಪು ರೋಜ ಊದಾವರ್ಣದಿ ಅಂಚುಬಿಳಿರೇಷ್ಮೆ ವಸ್ತ್ರವ ಮೇಲ್ ಹೊದ್ದುಕೊಂಡುಮಲಗಿ ಚಲಿಸದೆ ನಿತ್ರಾಣನಾಗಿದ್ದವಗೆಒಲಿದು ಆಯುರ್ದಾನ ಮಾಡಿಸಿದ ಕರುಣಿ 42ಗುರುಗಳು ಗೋಪಾಲದಾಸರ ರೂಪದಿಂದ ಬಂದುಶಿರಿವರನು ತಾನೇನೆ ಅನ್ನಪ್ರಸಾದಕರದಲ್ಲಿ ಇತ್ತನು ಅವನೇವೆಇಂದುಶಿರಿಸಹ ಅಮೃತಾನ್ನ ಔತಣವನ್ನಿತ್ತ 43ಶಿರಿಯ ವಾತ್ಸಲ್ಯ ದಯೆ ಏನೆಂದು ಪೇಳಲಿಚಾರುದೇಷ್ಣಾಹ್ವಯ ತನ್ನಸುತ ಈಗವರಗೋಪಾಲದಾಸರುಅವರಶಿಷ್ಯರಿವರೆಂದು ಪ್ರೀತಿಯಲಿ ಔತಣ ಮಾಡಿಹಳು 44ಈ ರೀತಿ ಹರಿಶಿರಿ ಇತ್ತ ಔತಣ ಮತ್ತುಹರಿಯ ಕೈಯಿಂದ ಹರಿಗರ್ಪಿತ ಮಾಲಾದಿಹರಿಪ್ರಸಾದವ ಕೊಂಡು ಫಂಡರಿಪುರದಿಂದಹೊರಡಲಾದರು ಜಗನ್ನಾಥದಾಸಾರ್ಯ 45ನರಸಿಂಹಾದಾಸಾರ್ಯರಾದ ತನ್ನ ತಂದೆಗೆಗುರುಗಳುಪುರಂದರದಾಸಾರ್ಯರೆಂದುಪರಮಗುರುವಿಜಯದಾಸಾರ್ಯರ ಗುರುಯೆಂದುಚರಣವಂದಿಸಿ ಹೊರಡೆ ಅಪ್ಪಣೆ ಕೊಂಡರು46ಪರಮಗುರು ವಿಜಯದಾಸಾರ್ಯರ ಸ್ಥಳಕೆಸ್ಮರಣೆ ಪೂರ್ವಕ ಮನಸಾ ಪೋಗಿ ಸನ್ನಮಿಸಿಗುರುಗಳಚರಣಆಕಾಂಕ್ಷಿಗಳು ತ್ವರಿತದಿಹೊರಟರು ಶ್ರೀ ಜಗನ್ನಾಥನ್ನ ಸ್ಮರಿಸುತ್ತ 47ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 48- ಇತಿ ಪಂಚಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಥಮ ಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪಅಖಿಳಗುಣಆಧಾರ ನಿರ್ದೋಷ ಶ್ರೀರಮಣಜಗದಾದಿ ಮೂಲಗುರು ಅಗುರು ಶ್ರೀ ಹಂಸವಾಗೀಶಸನಕಾದಿ ದೂರ್ವಾಸಾದಿಗಳಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1ಪುರುಷೋತ್ತಮತೀರ್ಥಅಚ್ಯುತಪ್ರೇಕ್ಷರಿಗೆಪುರುಷೋತ್ತ ಮಾರ್ಯರಕರಕಮಲಜಾತವರವಾತಅವತಾರ ಆನಂದತೀರ್ಥರಚರಣಪದ್ಮದಲಿ ನಾ ಶರಣಾದೆ ಸತತ2ಶ್ರೀ ಮಧ್ವ ಆನಂದತೀರ್ಥಕರಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆನಮಿಪೆಶ್ರೀ ಮನೋಹರ ಪ್ರಿಯರು ಸಂತೈಪರೆಮ್ಮ 3ತ್ರೇತೆಯಲ್ಲಿ ಶ್ರೀ ರಾಮಚಂದ್ರನ್ನ ಸೇವಿಸಲುಸೀತಾ ಪ್ರತಿಕೃತಿಯಲ್ಲಿ ತಾಪೊಕ್ಕವಾತನ್ನೊಲಿಸಿಕೊಳ್ಳ ದವರ್ಗೆಹರಿಒಲಿಯಎಂದು ಜಗಕೆ ತೋರ್ದ ವಾಲಿಯೇ ಇಂದ್ರ 4ವಾತಾವತಾರ ಹನುಮಂತನೇ ದ್ವಾಪರದಿಕೌಂತೇಯ ಭೀಮನು ಅವನಿಗೆಅನುಜಇಂದ್ರ ಅರ್ಜುನನಾಗಿ ಸೇವಿಸಿ ಹನುಮಧ್ವಜಪಾದಮೂಲದಿ ಕುಳಿತ ಕೃಷ್ಣನು ಒಲಿದ5ಅಖಂಡೈಕ ಸಾರಾತ್ಮ ಅನಂತರೂಪಾಭಿನ್ನಶ್ರೀಕೃಷ್ಣ ರಾಮನೇ ಋಷಿವಂಶದಲ್ಲಿಈ ಕುವಲಯದಲ್ಲಿ ಪ್ರಾದುರ್ಭವಿಸಿದ ವ್ಯಾಸಅಕಳಂಕ ಸುಖಜಿತ್ವಪುಷಶ್ರೀಪತಿಯು6ಆಮ್ನಾಯತತಿಪುರಾಣಗಳು ಪೇಳ್ವಂತೆರಮೆಯರಸ ವ್ಯಾಸನ್ನ ಸೇವಿಸಲು ಇಳೆಯೋಳ್ಭೀಮನೇ ಯತಿ ರೂಪದಲ್ಲಿ ಬಂದಿಹನೆಂದುಸುಮನಸರಾಜ ಪುಟ್ಟಿದನು ಪುನಃ7ಹದಿನೆಂಟು ವರುಷಗಳು ಎತ್ತಾಗಿ ತಾನಿದ್ದುಹೊತ್ತು ಮಧ್ವಾಚಾರ್ಯರ ಪುಸ್ತಕಗಳಭಕ್ತಿಯಲಿ ಸೇವಿಸಿ ಮಧ್ವರಾಯರು ಪಾಠಬೋಧಿಸುವದು ಕೇಳ್ದ ವೃಷಭರಾಟ್ ಇಂದ್ರ 8ಆನಂದಪ್ರದ ತತ್ವಬೋಧಕ ಭಾಷ್ಯಾದಿಗಳಆನಂದ ಮುನಿಮಧ್ವ ಬೋಧಿಸಲು ಗ್ರಹಿಸಿವಿನಯದಿ ಕೇಳ್ದರು ಶಿಷ್ಯರು ಟೀಕೆಗಳಗ್ರಂಥಗಳಿಗೆ ಯಾರು ಮಾಡುವುದು ಎಂದು 9ಈ ಗೋರಾಜನೇ ಟೀಕೆಗಳ ಸಂರಚಿಸಿಜಗತ್ತಲ್ಲಿ ಸತ್ತತ್ವ ಶಾಸ್ತ್ರ ಪ್ರಕಟಿಸುವಹೀಗೆಂದು ಶ್ರೀ ಮಧ್ವಾಚಾರ್ಯರಾಜ್ಞಾಪಿಸಲುಮಿಗೆ ಹರುಷದಲಿ ಗೋರಾಟ್ ಶಿರವ ಬಾಗಿದನು 10ಯುಕ್ತ ಕಾಲದಿ ಈ ಗೋರಾಜ ನೇವೆರಘುನಾಥ ದೇಶಪಾಂಡೆ ರುಕ್ಮಾಬಾಯಿಗೆಮಗನಾಗಿ ಜನಿಸಿದನು ಮಂಗಳವೇಢೆಯಲಿಈ ಗ್ರಾಮ ಪಂಢರಪುರದ ಸಮೀಪ 11ಧೋಂಡುರಾಯನು ಎಂಬ ನಾಮದಲಿ ಬೆಳೆದಗಂಡಿಗೆ ಉಪನಯನ ಮದುವೆಯೂ ಆಯ್ತುಹೆಂಡತಿ ಭೀಮಾಬಾಯಿ ಸುಗುಣೆ ಸೌಂದರ್ಯವತಿಚಂಡ ಶ್ರೀಮಂತರ ಮನೆತನದವಳು 12ಒಂದುದಿನ ಧೋಂಡುರಾಯನು ನದೀ ದಡಕೆಬಂದನು ಕುದುರೆಯ ಮೇಲೇರಿಕೊಂಡುಅಂದು ಅಕ್ಷೋಭ್ಯ ಮಠ ಸಂಚಾರ ಕ್ರಮದಲ್ಲಿನಿಂತಿತ್ತು ಮೊಕ್ಕಾಮಾಗಿ ಆಚೆಕಟ್ಟೆಯಲಿ 13ನದೀತೀರ ಕುಳಿತಿದ್ದ ಅಕ್ಷೋಭ್ಯ ತೀರ್ಥರುಎದುರಾಗಿ ನದಿಯಲ್ಲಿ ಆಚೆದಡದಿಂದಕುದುರೆ ಸವಾರನು ವರ್ಚಸ್ವಿ ಯುವಕನುಬೆದರದೆ ಪ್ರವಾಹದಲಿ ಬರುವದು ನೋಡಿದರು 14ಕುದುರೆ ಮೇಲ್ ಅಸೀನನಾಗಿದ್ದ ಯುವಕನುಕ್ಷುತ್ತೃಷೆಶಮನಕ್ಕೆ ಯತ್ನ ಮಾಡುತ್ತಾಉದಕವ ಕೈಯಿಂದ ತುಂಬಿಕೊಳ್ಳದಲೇಎತ್ತಗಳು ಕುಡಿವಂತೆ ಬಾಯಿ ಹಚ್ಚಿದನು 15ಮಾಧವಮಧ್ವರು ಮೊದಲೇ ಸೂಚಿಸಿದಂತೆಇಂದುಆ ಕುರುಹ ಅರಿತು ಅಕ್ಷೋಭ್ಯರುಇದು ಏನು `ಪಶು' ವಂತೆ ಎಂದು ಧ್ವನಿಕೊಟ್ಟರುಹಿಂದಿನ ಜನ್ಮ ಧೊಂಡೋಗೆ ನೆನಪಾಯ್ತು 16ಪ್ರವಾಹದ ನಗಾರಿಯ ಸಮಬಲಿ ಧೋಂಡುವೇಗ ಲೆಕ್ಕಿಸದಲೇ ದಡಕೆ ತಾ ಬಂದುಮುಗಿದಕರಬಾಗಿ ಶಿರ ನಮಿಸಿ ಅಕ್ಷೋಭ್ಯರಆಗಲೇ ಸಂನ್ಯಾಸಕೊಡಲು ಬೇಡಿದನು 17ಗಾಧಿ ಅರ್ಜುನ ಸಮ ಬಲ ರೂಪದಲಿ ತೋರ್ಪಈತ ರಾಯರ ಸುತನಾದರೂ ವೈರಾಗ್ಯಯುತ ಭಕ್ತಿಮಾನ್ ಸುಶುಭ ಲಕ್ಷಣನೆಂದುಹರಿಮಧ್ವ ನಿಯಮಿತ ಅವಗೆ ಕೊಟ್ಟರು ಸಂನ್ಯಾಸ 18ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವಜಯ ಶೀಲ ಹೊಸಯತಿಗೆ ಇತ್ತು ಅಭಿಷೇಕಅಕ್ಷೋಭ್ಯಗುರು ಮಾಡೆ ಗಗನದಿ ಪೂವರ್ಷಜಯ ಷೋಷ ಹರಡಿತು ಪರಿಮಳ ಸುಗಂಧ 19ತಂದೆ ರಘುನಾಥರಾಯನು ಸುದ್ದಿಕೇಳಿಬಂದು ಅಕ್ಷೋಭ್ಯರ ಕಂಡು ಬಲುಕೋಪದಿಂದ ಯಾಕೆ ಸಂನ್ಯಾಸ ಯುವಕಗೆ ಕೊಟ್ಟಿರಿಎಂದು ವಾದಿಸಿದನು ಪುತ್ರ ಮೋಹದಲಿ 20ಪೂರ್ವಧೋಂಡುರಾಯ ಈಗ ಜಯತೀರ್ಥರುತಾವೇ ಸ್ವೇಚ್ಛೆಯಿಂದ ಕೊಂಡರು ಸಂನ್ಯಾಸಈ ವಿಷಯ ತಿಳಕೊಂಡರೂ ಸಹ ರಘುನಾಥಸೇವಕರ ಸಹ ಮಗನ ಕರಕೊಂಡು ಹೋದ 21ರಾಯನು ಮಗನನ್ನ ಗೃಹಸ್ಥ ಚರ್ಯದಲಿರಿಸೆಶಯನಗೃಹದೊಳು ಪತ್ನಿ ಸಹಿತ ಕಳುಹಿದನುಶಯನ ತಲ್ಪದಿ ದೊಡ್ಡ ಸರ್ಪಕಂಡಳು ಯುವತಿಭಯದಿಂದ ಹೊರಬಂದು ಹೇಳಿದಳು ವಿಷಯ 22ತನ್ನಪತಿಧೊಂಡರಾಯನ್ನ ತಲ್ಪದಲಿಕಾಣದೆ ಅವರಿದ್ದ ಸ್ಥಾನದಲಿ ಸರ್ಪಘನಧೀರ್ಘಗಾತ್ರವಿಸ್ತಾರ ಹೆಡೆಯಿಂದಮಿನುಗುತ್ತ ಕುಳಿತಿದ್ದ ವಿವರ ಪೇಳಿದಳು 23ರಘುನಾಥರಾಯನು ಹರಿಚಿತ್ತ ಇದು ಎಂದುಮಗನ ಪ್ರಭಾವವ ಅರಿತು ತ್ವರಿತದಲಿಅಕ್ಷೋಭ್ಯರಲಿ ಹೋಗಿ ಶಿಷ್ಯನ್ನ ಒಪ್ಪಿಸಿಬಾಗಿ ಶಿರ ಸನ್ನಮಿಸಿ ಕ್ಷಮೆಯ ಬೇಡಿದನು 24ವಂಶ ವೃಧ್ಧಿಗೆ ಮತ್ತೂ ಪುತ್ರಪುಟ್ಟವನೆಂದುದೇಶಪಾಂಡೆಯ ಅನುಗ್ರಹಿಸಿ ಕಳುಹಿಸಿದಶಪ್ರಮತಿ ಪೀಳಿಗೆಯೊಳು ಅಕ್ಷೋಭ್ಯಮುನಿಗ¼ Àುಶಿಷ್ಯ ಜಯತೀರ್ಥರಿಗೆ ಸ್ಥಾನ ನೇಮಿಸಿದರು 25ಶ್ರೀ ಮದ್ವಾಚಾರ್ಯರು ಬೋಧಿಸಿ ತೋರಿಸಿದಶ್ರೀ ರಮಾಪತಿ ಪೂಜಾ ಸತ್ತತ್ವವಾದದುರ್ಮತ ಖಂಡನದ ರೀತಿಯ ಜಯಾರ್ಯರಿಗೆಸಮ್ಮುದದಿ ಅರುಹಿದರು ಅಕ್ಷೋಭ್ಯ ಗುರುವು 26ಶಕ ವರುಷ ಹನ್ನೊಂದು ನೂರು ಅರವತ್ತೇಳುಮಾರ್ಗಶಿರ ಕೃಷ್ಣ ಪಂಚಮಿ ವಿಶ್ವಾವಸುವಲ್ಲಿಅಕ್ಷೋಭ್ಯ ತೀರ್ಥರ ಪೀಠ ಆರೋಹಿಸಿಶ್ರೀಕರಗೆ ಪ್ರೀತಿಕರ ಪಟ್ಟವಾಳಿದರು 27ದೇವತಾರ್ಚನೆ ಶಿಷ್ಯ ಉಪದೇಶ ಮಾಡುತ್ತದಿಗ್ವಿಜಯದಲಿ ದುರ್ವಾದಿಗಳ ಗೆದ್ದುಮಧ್ವಗ್ರಂಥಗಳಿಗೆ ಟೀಕೆಗಳ ರಚಿಸಿಪ್ರಖ್ಯಾತರಾದರು ಜಯತೀರ್ಥ ಆರ್ಯ 28ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನ ಕರುಣಿಜಯತೀರ್ಥಗುರುನಮೋಪಾಹಿ29|| ಪ್ರಥಮ ಕೀರ್ತನೆ ಸಮಾಪ್ತ ||ದ್ವಿತೀಯಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪನರಹರಿಯ ಮಹಾದುರ್ಗೆಯ ಕುರಿತು ತಪಸ್ ಆಚರಿಸಿವರವ ಪಡೆದಿಹರು ಈ ಜಯತೀರ್ಥ ಆರ್ಯಬರೆವುದಕೆ ಲೇಖನವು ಅಡಿಕೆಯುಅರದೂರದುರ್ಗೆಯು ಕೊಟ್ಟಿಹಳು ಇವರ್ಗೆ1ಎರಗೋಳದಲ್ಲಿದ್ದು ಶ್ರೀ ಮದಾಚಾರ್ಯರಪರಸುಖಪ್ರಮೂಲಗ್ರಂಥಗಳ ಟೀಕಾಬರೆದಿಹರು ಅನುಪಮ ಉತ್ತಮ ರೀತಿಯಲಿಭರದಿ ಓದುವವರೇ ಬಲ್ಲರು ಮಹಿಮೆ 2ಶ್ರೀ ಮಧ್ವಕೃತವು ಶ್ರೀ ಬ್ರಹ್ಮಸೂತ್ರಭಾಷ್ಯವುಆ ಮೂಲಗ್ರಂಥವು ಎರಡು ಸಾವಿರವುಆ ಮಹಾಭಾಷ್ಯಕ್ಕೆ ಟೀಕೆ ಅಷ್ಟ ಸಹಸ್ರವುಅಮ್ಮಮ್ಮ ಏನೆಂಬೆ ಈ ಮಹಾ ಕಾರ್ಯ 3ಅನುವ್ಯಾಖ್ಯಾನದ ನಾಲಕ್ಕು ಸಾವಿರಘನತರ ಗ್ರಂಥಕ್ಕೆ ಜಯತೀರ್ಥರಜ್ಞಾನಪ್ರದ ಅಜ್ಞಾನಗಿರಿವಜ್ರಟೀಕೆಯಗ್ರಂಥ ಇಪ್ಪತ್ತೆಂಟು ಸಾವಿರ ಸಂಖ್ಯಾ 4ಈ ನುಡಿ ಬರೆವಾಗ ಬಿಂದುಮಾಧವ ಪೇಳ್ದಘನ್ನ ಶುಭತರ ಮಧ್ವ ವಿಜಯದಲ್ಲಿಅನುವ್ಯಾಖ್ಯಾನದ ಟೀಕಾ ಸುಧಾ ಎಂದುಶ್ರೀ ನಾರಾಯಣಾಚಾರ್ಯ ಸೂಚಿಸಿಹರೆಂದು 5ತತ್ವ ಸಂಖ್ಯಾನಕ್ಕೂ ಕಥಾ ಲಕ್ಷಣಕ್ಕೂತತ್ವ ವಿವೇಕಕ್ಕೂ ಋಗ್ಬಾಷ್ಯಕ್ಕೂತತ್ವ ನಿರ್ಣಯಕ್ಕೂ ಪ್ರಮಾಣ ಲಕ್ಷಣಕ್ಕೂತತ್ವೋದ್ಯೋತಕ್ಕೂಕರ್ಮನಿರ್ಣಯಕ್ಕೂ6ಮಾಯಾವಾದಉಪಾಧಿಖಂಡನಗಳಿಗೂಮಿಥ್ಯಾತ್ವಾನುಮಾನ ಖಂಡನಕ್ಕೂನ್ಯಾಯ ವಿವರಣಕ್ಕೂ ಗೀತಾ ಭಾಷ್ಯಕ್ಕೂನ್ಯಾಯ ತೇಜೋಜ್ವಲ ಗೀತಾ ತಾತ್ವರ್ಯಕ್ಕೂ 7ಪಟ್ಟ್ರಶ್ನ ಈಶಾವಾಸ್ಯ ಭಾಷ್ಯಗಳಿಗೂಅಷ್ಟಾದಶ ಈ ಗ್ರಂಥಗಳಿಗೆಪಟು ಪಟೀಯಸವಾಗಿ ಟೀಕೆಯಾ ಬರೆದಿಹರುಇಷ್ಟೇ ಅಲ್ಲದೇ ಇನ್ನೂ ನಾಲ್ಕು ರಚಿಸಿಹರು 8ಪ್ರತ್ಯಕ್ಷ ಅನುಮಾನಆಗಮಪ್ರಮಾಣಗಳರೀತಿ ಲಕ್ಷಣ ಪೇಳ್ವ ಪ್ರಮಾಣ ಪದ್ಧತಿಯುಮಾಧವನ ಸರ್ವೋತ್ತಮ ಜಗತ್ ಸತ್ಯತ್ವಇಂಥಾದ್ದು ಸಾಧಿಸುವ ವಾದಾವಳಿಯು 9ತಂತ್ರಸಾರಪಾಂಚರಾತ್ರಾಗಮಾನುಸರಿಸಿಪದ್ಯಮಾಲಾನಾಮ ಗ್ರಂಥದಲ್ಲಿಶ್ರೀಧರ ಸರ್ವೋತ್ತಮಾರ್ಚನೆ ಬಗೆ ಪೇಳಿದರುಶತಾಪರಾಧ ಸ್ತೋತ್ರವು ಮಾಡಿಹರು 10ದಿಗ್ವಿಜಯ ಮಾಡಿ ಸಜ್ಜನರ ಉದ್ಧರಿಸುತ್ತಾದುರ್ವಿದ್ಯಾ ದುರ್ಮತಗಳನ್ನ ಛೇದಿಸುತಸುವೈದಿಕ ಮಧ್ವಸಿದ್ಧಾಂತ ಸ್ಥಾಪಿಸುತಭುವಿಯಲಿ ಪ್ರಖ್ಯಾತರಾದರು ಜಯಾರ್ಯ 11ಒಂದು ಸಮಯದಿ ವಿದ್ಯಾರಣ್ಯರು ಶ್ರೀಮಧ್ವಗ್ರಂಥ ಓದಿ ನೋಡಿ ಅರ್ಥವಾಗದಲೆಗ್ರಂಥಕ್ಕೆ ಜಯರಾಯರು ಬರೆದ ಟೀಕೆಯಓದಲು ಅರ್ಥವು ವಿಶದವಾಯ್ತು 12ಪೂರ್ವಾಪರ ಸಂಗತಿ ಮತ್ತು ವಾಕ್ಯಾರ್ಥಸರ್ವ ಪ್ರಕಾರದಲೂ ಉತ್ತಮವಾಗಿಹುದುಸರ್ವಜÕ ಮುನಿಗಳ ಗ್ರಂಥದ ಸರಿಯಾದಭಾವವ ವಿವರಿಸುವುದೆಂದು ಹೇಳಿದರು 13ಈ ರೀತಿ ವಿದ್ಯಾರಣ್ಯರು ಕೊಂಡಾಡಿಪುರಿ ರಾಜಬೀದಿಯಲಿ ಆನೆ ಅಂಬಾರಿಮೆರವಣಿಗೆ ಮಾಡಿಸಿ ಜಯಘೋಷ ಮಾಡುತ್ತಾಮರ್ಯಾದೆ ಮಾಡಿದರು ವಿಜಯನಗರದಲಿ 14ಮಧ್ವಗಂಥಗಳನ್ನು ಜಯಾರ್ಯ ಬರೆದಿರುವಉತ್ತಮ ಟೀಕೆಗಳ ಬಲು ಶ್ಲಾಘಿಸುತ್ತವಿದ್ಯಾರಣ್ಯರು ನಮಸ್ಕಾರ ಮಾಡಿದರುಎಂದು ಇತಿಹಾಸವ ಸುಜನರು ಪೇಳುವರು 15ಸ್ವಮತ ಪರಮತ ವಿದ್ವಜ್ಜನರಿಂದಈ ಮಹಾಮಹಿಮ ಟೀಕಾಚಾರ್ಯ ಆರ್ಯಈ ಮಹಿಯಲ್ಲಿ ಪ್ರಖ್ಯಾತ ಪೂಜಿತರಾಗಿತಮ್ಮ ಗುರುಕ್ಷೇತ್ರ ಮಳಖೇಡ ಸೇರಿದರು 16ಮಳಖೇಡ ಕ್ಷೇತ್ರದಲ್ಲಿ ಕಾಗಿನೀ ನದಿತೀರಮಾಲೋಲ ಪ್ರಿಯ ಅಕ್ಷೋಭ್ಯರ ವೃಂದಾವನಶೀಲತಮ ಜಯರಾಯ ಅಲ್ಲಿಯೇ ನಿಂತರುಅಳವೇ ವರ್ಣಿಸಲು ಈ ಮಹಾತ್ಮರ ಮಹಿಮೆ 17ಹನ್ನೊಂದು ತೊಂಭತ್ತು ಶಕವಿಭವಆಷಾಢಕೃಷ್ಣ ಪಂಚಮಿ ಪುಣ್ಯದಿನದಲ್ಲಿ ಇವರುತನ್ನ ಸೇವಾ ವಿಷ್ಣು ಮಧ್ವರಿಗೆ ಪೂರೈಸಿಶ್ರೀ ನಾರಾಯಣನಪಾದಸೇರಿದರು18ಮತ್ತೊಂದು ಅಂಶದಲ್ಲಿ ವೃಂದಾವನದಲ್ಲಿಇದ್ದು ಸೇವಿಸುವವರ್ಗೆ ವಾಂಛಿತವೀಯುತ್ತಮಧ್ವಸ್ಥ ಶ್ರೀ ಹರಿಯ ಧ್ಯಾನಿಸುತ ತಮ್ಮಗುರುಬದಿಯಲ್ಲಿ ಕುಳಿತಿಹರು ಸ್ಮರಿಸೆ ಪಾಲಿಪರು 19ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನಕರುಣಿ ಜಯತೀರ್ಥಗುರುನಮೋಪಾಹಿ20||ಇತಿ ಶ್ರೀ ಜಯತೀರ್ಥವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಕೂರ್ಮ5ಪ್ರಥಮ ಅಧ್ಯಾಯಶ್ರೀಕೂರ್ಮಪ್ರಾದುರ್ಭಾವಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ತನು ಕೂರ್ಮರೂಪಪಾಲಾಬ್ಧಿಜಾಪತಿಅನಘಅಜಿತ ಧನ್ವಂತರಿಲೀಲಾ ಮೋಹಿನಿಅನಘಶರಣು ಮಾಂಪಾಹಿಪವೇದಾದಿ ಸಚ್ಛಾಶ್ರ(ಪ್ರ)ಮೇಯ ವೇದವತೀಶಪದುಮಜಾಂಡವ ಪಡೆದ ಜಗದೇಕಭರ್ತಾಅದ್ವಿತೀಯನು ಸ್ವಾಮಿ ಸಮರಧಿಕರಿಲ್ಲದವವೇಧಮುಕ್ಕಣ್ಣಾದಿ ಸುರಸೇವ್ಯಪಾಹಿ1ಸತ್ಯ ಜ್ಞÕನಾನಂತ ಭೂಮಾದಿ ಗುಣನಿಧಿಯೇಸತ್ಯಸೃಷ್ಟಿ ಮಾಳ್ಪಿ ಸತ್ಯನಾಮಾಪ್ರತ್ಯಕ್ಷ ಪ್ರಮಾಣ ಸಿದ್ಧವು ಈ ಜಗತ್ತುತತ್ಸøಷ್ಟಿ ಪಾಲನಾದಿಗಳೆಲ್ಲ ಸತ್ಯ 2ಸೃಷ್ಟಿ ಪ್ರವಾಹವು ಅನಾದಿಯೂ ನಿತ್ಯವೂಘಟಾದಿ ಕಾರ್ಯಗಳ ಉಪಾದಾನ ಕಾರಣಮೂಲ ಜಡಪ್ರಕೃತಿಯೂ ಅನಾದಿಯೂ ನಿತ್ಯವೂಸೃಷ್ಟ್ಯಾದಿಕರ್ತಾ ನಿನ್ನಾಧೀನವು ಎಲ್ಲಾ 3ಕಾರ್ಯಕಾರಣಾತ್ಮಕ ಜಗತ್ತು ಸರ್ವಕ್ಕೂತೋಯಜಾಕ್ಷನೇ ನೀನು ನಿಮಿತ್ತ ಕಾರಣನುನಿಯಾಮಕನು ನೀನೇವೇ ಚಿದಚಿತ್ ಅಖಿಳಕ್ಕೂಅನ್ಯರಿಗೆ ಸ್ವಾತಂತ್ರ್ಯ ಸಾಮಥ್ರ್ಯವಿಲ್ಲ 4ವಿಧಿಶಿವಾದಿ ಸರ್ವ ಸುರಾಸುರರುಗಳಿಗೆಸತ್ತಾಪ್ರತೀತಿ ಪ್ರವೃತ್ತಿಪ್ರದ ಹರಿಯೇಭೂತಭವ್ಯ ಭವತ್ಪ್ರಭುವು ವಿಷ್ಣು ನೀನೇವೇಚೇತನಾ ಚೇತನಾಧಾರ ಸರ್ವತ್ರ 5ದೂರ್ವಾಸರ ಶಾಪ ನಿಮಿತ್ತದಿ ಸ್ವರ್ಗದಐಶ್ವರ್ಯವು ಕ್ಷಿಣವು ಆಗಿ ಬಹುವಿಧದಿದೇವಶತೃಗಳ ಬಲ ಉನ್ನಾಹವಾಗಲುದೇವರಾಜನು ಬ್ರಹ್ಮನಲ್ಲಿ ಪೋದ 6ವಾಸವವರುಣಾದಿ ಸುರರ ಮೊರೆಕೇಳಿಬಿಸಜಸಂಭವ ಶಿವ ಶಕ್ರಾದಿಗಳ ಕೂಡಿಶ್ರೀಶನೇ ರಕ್ಷಕನು ಎಂದು ನಿನ್ನಲ್ಲಿ ಬಂದುಸಂಸ್ತುತಿಸಿದನುಪರಮಪೂರುಷ ನಿನ್ನನ್ನ7ಅವ್ಯಯನೇ ಸತ್ಯನೇ ಅನಂತನೇ ಅನಘನೇಶ್ರೀವರನೇ ಪೂರ್ಣೈಶ್ವರ್ಯ ಮಹಾಪುರುಷದೇವವರೇಣ್ಯ ನಿನ್ನಲ್ಲಿ ಸ್ತುತಿ ಬ್ರಹ್ಮಸುವಿನಯದಿ ಮಾಡಿದ ವೇದಾರ್ಥಸಾರ 8ಸಹಸ್ರಾರ್ಕೋದಯ ದ್ಯುತಿ ಸುಂದರರೂಪಮಹಾರ್ಹ ಭಗವಂತಹರಿಈಶ್ವರನೇ ನೀನುಬ್ರಹ್ಮಾದಿಗಳ ಸ್ತುತಿಗೆ ಪ್ರಸನ್ನನು ಆಗಿಮಹಾನುಭಾವ ನೀ ಒಲಿದಿ ಕೃಪೆಯಿಂದ 9ಪದುಮನಾಭನೇನಿರ್ವಾಣಸುಖಾರ್ಣವನೇಪದುಮಭವ ಸನ್ನಮಿಸಿ ಪೇಳಿದ್ದಕೇಳಿಸಿಂಧುವಮಥನಮಾಡಲಿಕೆ ಬೇಕು ಎಂದಿಅದರ ಬಗ್ಗೆ ಉಪಾಯವ ಅರುಹಿದಿ ವಿಭುವೇ 10ಕ್ಷೀರಾಬ್ಧಿಯಲಿ ವೀರು ತೃಣ ಲತೌಷಧಿ ಇಟ್ಟುಗಿರಿಶ್ರೇಷ್ಠ ಮಂದರವ ಕಡೆಗೋಲು ಮಾಡಿವರಸರ್ಪ ವಾಸುಕಿಯ ಹಗ್ಗ ಮಾಡಿ ಮಥಿಸಿಅಮೃತೋತ್ಪಾದನ ಯತ್ನಿಪುದು ಎಂದಿ 11ದೈತ್ಯ ದಾನವರೆಲ್ಲ ಶತೃಗಳು ಆದರೂಸಂಧಿಯ ಅವರೊಡೆ ಮಾಡಿ ಕೂಡಿಮಂದರವ ಸಿಂಧುವಲಿ ತಂದಿಟ್ಟು ಮಥಿಸುವುದುಸುಧೆಯ ಉತ್ಪಾದನಕೆ ಉಪಾಯ ಇದು ಎಂದಿ 12ದೈತ್ಯರ ಸಹಕಾರ ಬಗೆ ಯುಕ್ತಿಗಳ ಪೇಳಿಭೀತಿ ಪಡಬೇಡ ವಿಷ ಉಕ್ಕಿ ಬರುವಾಗಅದಿತಜರಿಗೇವೇ ಫಲ ಲಭಿಸುವುದು ಎಂದುದಿತಿಜರಿಗೆಕ್ಲೇಶಭವಿಸುವುದು ಎಂದಿ13ಪುರುಷೋತ್ತಮ ಜಗತಃಪತಿ ಅಜಿತನಾಮಾಸುರರಿಗೆ ಬೋಧಿಸಿದ ರೀತಿ ಅನುಸರಿಸಿಶಕ್ರಾದಿಗಳು ವೈರೋಚನಾದಿಗಳೊಡೆತ್ವರಿತ ಯತ್ನಿಸಿದರು ಕಡಲ ಮಥನಕ್ಕೆ 14ದೂರದಲ್ಲಿ ಇದ್ದ ಆ ಅತಿಭಾರ ಗಿರಿಯನ್ನಸುರರುದಾನವರೆತ್ತಿ ಸಮುದ್ರ ತಟಕೆತರಲು ಬಹು ಯತ್ನಿಸಿದರು ವ್ಯರ್ಥದಿಗಿರಿಯ ಭೂ ಮೇಲೆತ್ತೆ ಅಸಮರ್ಥರು 15ಮೇರುಗಿರಿ ಬದಿ ಇದ್ದ ಮಂದರಾಚಲವುರುದ್ರ ರುದ್ರವರ ಬಲಯುತವು ಎತ್ತಲು ಅಶಕ್ಯಸುರದಾನವರು ಬೆರಗಾಗೇ ಒಂದೇ ಕರದಿಂಗಿರಿಯ ನೀ ಎತ್ತಿ ಗರುಡನ ಮೇಲೆ ಇಟ್ಟಿ 16ಗರುಡನಿಂದ ತಮ್ಮ ಮೇಲೆ ಇರಿಸೆ ಪರಿಕ್ಷಾರ್ಥಭಾರತಾಳದೇ ಸುರಾಸುರರು ಹತರಾಗೇಕಾರುಣ್ಯ ನೋಟದಿ ಬದುಕಿಸಿದಿ ಮೃತರನ್ನತೀವ್ರ ಗಾಯಗಳನ್ನ ಸೌಖ್ಯ ಮಾಡಿದಿಯೋ 17ಲೀಲೆಯಿಂದಲಿ ಪುನಃ ಒಂದೇ ಹಸ್ತದಿ ಗಿರಿಯಮೇಲೆತ್ತಿ ಗರುಡನ ಹೆಗಲಲಿಟ್ಟು ಕುಳಿತುಪಾಲಸಾಗರದಲ್ಲಿ ಸ್ಥಾಪಿಸಿ ಮಥನಕ್ಕೆವ್ಯಾಳನ ಹಗ್ಗದಂದದಿ ಸುತ್ತಿಸಿದಿಯೋ 18ಪುಚ್ಛಭಾಗವು ಅಮಂಗಳವು ಬೇಡವೆಂದುಅಸುರರ ವಾದಾ ಮುಖಭಾಗ ಹಿಡಿಯೇವಾಸುಕಿಯ ಪುಚ್ಛಾಂಗ ದೇವತೆಗಳು ಹಿಡಿದುಶ್ರೀಶ ನೀ ಸಹಕರಿಸೆ ಮಥನವ ಮಾಡಿದರು 19ಪರಮಯತ್ನದಿ ಅಮೃತಾರ್ಥ ಪಯೋನಿಧಿಯಗಿರಿಯಿಂದ ಮಂಥನ ಸುರಾಸುರರು ಮಾಡೆಪರಮಗುರುತರಅದ್ರಿಆಧಾರವಿಲ್ಲದೆಸರಿದು ಮುಳುಗಿ ಬೇಗ ಕೆಳಗಡೆ ಹೋಯಿತು 20ಶೈಲವು ಮುಳುಗಲು ಸುಧಾಕಾಂಕ್ಷಿಗಳ ಮನವ್ಯಾಕುಲದಿ ಮುಖಕಾಂತಿ ಮ್ಲೌನವು ಆಯಿತುಎಲ್ಲಾ ಶ್ರಮವು ವ್ಯರ್ಥ ಎಂದು ಬೆರಗಾಗಿರೆಬಲು ಕೃಪೆಯಲಿ ನೀನು ಒದಗಿದಿ ಆಗ 21ಅದ್ಭುತ್ ಮಹತ್ ಕಚ್ಛಪ ರೂಪದಲಿ ನೀಅಬ್ಧಿಯಲಿ ಬೇಗನೇ ಬಂದು ಮೇಲೆಎಬ್ಬಿಸಿದಿ ಆ ಮಂದರಾಚಲಗಿರಿಯಸುಬಲ ಪೂರುಷ ನಮೋ ಚಿನ್ಮೋದಗಾತ್ರ 22ಚನ್ಮೋದಮಯ ಮಹಾಕೂರ್ಮರೂಪನೇ ನಿನ್ನಅಮಿತ ಸುಬಲ ಲಕ್ಷ ಯೋಜನ ವಿಸ್ತಾರಸುಮಹಾ ದ್ವೀಪದಂದಿರುವ ಪೃಷ್ಠದ ಮೇಲೆಆ ಮಹಾದ್ರಿಯ ಹೊತ್ತಿ ಪುನರ್ ಮಥಿಸಲೊದಗಿದಿ 23ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧೀಶಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀಪ್ರಸನ್ನ ಶ್ರೀನಿವಾಸಧನ್ವಂತರೀ ಶರಣು ಅಜಿತ ಸ್ತ್ರೀಕೂರ್ಮ24-ಇತಿ ಪ್ರಥಮಾಧ್ಯಾಯ ಸಂಪೂರ್ಣಂ-ದ್ವಿತೀಯ ಅಧ್ಯಾಯನೀಲಕಂಠವೃತ್ತಾಂತಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಸಿರಿವರಹರಿಕೂರ್ಮನ ಪೃಷ್ಠೋಪರಿನಿಂತಗಿರಿಯಿಂದ ಅಸುರರುಸುರರುಪುನರ್ಮಥಿಸೆಗಿರ್ಗಿರಿ ಗಿರಿ ಗಿರಿ ಎಂದು ಭ್ರಮಿಸಿತು ಗಿರಿಯುಪರಿಮಳ ಪೂ ಸುರಿಸಿದರು ಬ್ರಹ್ಮಾದಿಗಳು 1ವಾಸುಕಿತಾಳದೇ ಬುಸು ಬುಸು ಎಂದು ಮೇಲ್ಶ್ವಾಸದಿ ವಿಷಜ್ವಾಲೆ ಹೊರಗೆ ಬಿಡಲುಅಸುರಬಲಿಇಲ್ವಾದಿಗಳು ಬಿಸಿ ಸಹಿಸದೇಘಾಸಿಹೊಂದಿದರುದಾವಾಗ್ನಿಪೀಡಿತರ ಪÉೂೀಲ್2ದಿತಿಜರು ಅದಿತಿಜರು ಎಷ್ಟೇ ಯತ್ನಿಸಿದರೂಸುಧಾ ಇನ್ನೂ ಪುಟ್ಟದೇ ಇರುವುದ ಕಂಡುದಂತ ಶೂಕವ ಆಗ ಸ್ವಯಂ ನೀನೇ ಹಿಡಿದುಮಥನಮಾಡಿದಿ ಸ್ವಾಮಿ ಕಾರುಣ್ಯದಿಂದ3ಪೀತಾಂಬರಿ ಸುಖ ಚಿನ್ಮಾತ್ರ ಚಾರ್ವಾಂಗಸದಾ ನಮೋ ಶರಣಾದೆ ಲೋಹಿತಾಕ್ಷದಿತಿಜಾ ಅದಿತಿಜಾರೊಡೆ ನೀನು ಸಹಮಥಿಸಲುಲತಾ ಓಷಧಿ ಕಲುಕಿ ಉಕ್ಕಿತುಸಿಂಧು4ಹಾಹಾ ಭಯಂಕರವು ಇದೇನು ಲೋಕಗಳದಹಿಸುವಂದದಿ ಫೇಣ ಉಕ್ಕಿ ಬರುತಿದೆಯುಮಹಾ ವೀರ್ಯತರ ಹಾಲಾಹಲವೆಂಬ ವಿಷ ಇದುಮಹೀಭರ್ತಾ ಮಹಾದೇವ ಮಹಾದ್ರಿದೃತ್ಪಾಹಿ5ಅಸಮ ಸ್ವಾತಂತ್ರ್ಯ ನಿಜಶಕ್ತಿ ಪರಿಪೂರ್ಣವಿಶ್ವರಕ್ಷಕ ನೀ ವಿಷಭಯ ನಿವಾರಿಸೆಸ್ವಸಮರ್ಥನಾದರೂ ಭೃತ್ಯರ ಕೀರ್ತಿಯಪ್ರಸರಿಸೆ ಒದಗಿದಿ ಮಹಾದೇವ ಶಾಸ್ತ 6ಮಹತ್ ಎಂಬ ಬ್ರಹ್ಮನ ಸ್ವಾಮಿ ಆದುದರಿಂದಮಹಾದೇವ ಎಂಬುವ ನಾಮ ನಿನ್ನದೇವೇಮಹಾದೇವ ಶಿವ ಈಶ ರುದ್ರಾದಿ ಶಬ್ದಗಳುಮಹಾಮುಖ್ಯ ವೃತ್ತಿಯಲಿ ನಿನಗೇವೇ ವಾಚಕವು 7ಭಸ್ಮಧರ ದೇವನಿಗೆ ಮಹಾದೇವ ಎಂಬುವನಾಮ ಔಪಚಾರಿಕದಲ್ಲೇವೇ ರೂಢಬ್ರಹ್ಮನಾಮನು ನೀನೇ ಬ್ರಹ್ಮಾಂತರ್ಯಾಮಿಯುಬ್ರಹ್ಮನೊಳು ಇದ್ದು ನೀ ಭುವನಂಗಳ ಪಡೆವಿ 8ರುದ್ರ ನಾಮನು ನೀನೇ ರುದ್ರಾಂತರ್ಯಾಮಿಯುರುದ್ರನೊಳು ಇದ್ದು ನೀ ಸಂಹಾರವ ಮಾಡುವಿತತ್‍ತತ್ರಸ್ಥಿತೋ ವಿಷ್ಣುಃ ತತ್‍ಚ್ಛಕ್ತಿ ಪ್ರಬೋಧÀಯನ್ರುದ್ರನಿಂ ವಿಷಪಾನ ನಿನ್ನ ನಿಯಮನವೇ 9ಶಕ್ರಾದಿ ಸರ್ವರಿಗೂಗುರುಆಶ್ರಯನು ಶಂಕರನುಶಂಕರನಿಗೆ ಆಶ್ರಯನು ಗುರುಮುಖ್ಯವಾಯುಮುಖ್ಯವಾಯುಗಾಶ್ರಯ ಶ್ರೀಕಾಂತ ನೀನುಶ್ರೀಕಾಂತ ನೀನೇವೇ ಸರ್ವಾಶ್ರಯ ಅನೀಶ 10ಯಾವ ಮಹಾದೇವನೊಲಿಯದೇ ವಾಯು ಒಲಿಯಆ ವಾಯು ಒಲಿಯದೇಹರಿತಾನೂ ಒಲಿಯಆ ವಾಯು ಹರಿಒಲಿಯದಿರೆ ಬೇರೆ ಗತಿಇಲ್ಲಆ ವಾಯು ಹರಿಧಾಮ ಮಹಾದೇವ ಸ್ತುತ್ಯ 11ಸರ್ವಾಂತರ್ಯಾಮಿ ಯಾವನಲಿ ಪ್ರಸನ್ನನು ಆಗಿಯಾವನ ಮೂಲಕ ಶಕ್ರಾದಿಗಳ ಕಷ್ಟತೀವ್ರದಿ ಪೋಗುವುದೋ ಆ ಮಹಾದೇವನ ಸ್ತುತಿಸಿದರುಸುರರುಶಿವಾಂತರ್ಯಾಮಿ ಶ್ರೀಹರಿ ಮಹಿಮೆಗಳ ಕೂಡಿ 12ಕರತಲೀಕೃತ್ಯಹಾಲಾಹಲವಿಷವಶಕ್ರಾದಿ ಜನರಲ್ಲಿ ಕೃಪೆ ಮಾಡಿ ಉಂಡುಕರುಣಾಳು ಮಹಾದೇವ ಭೂತದಯಾಪರನು ಈಹರಿಭಕ್ತಾಗ್ರಣಿ ಶಿವ ಉಮೇಶನಿಗೆ ಶರಣು 13ಹರಿಬ್ರಹ್ಮ ಪಾರ್ವತಿ ಪ್ರಜೇಶ್ವರರುಹರನ ಈ ಮಹತ್ಸೇವೆ ಬಹು ಶ್ಲಾಘಿಸಿದರುಕರದಿಂದ ಕೆಳಗೆ ಪ್ರಸ್ಕನ್ನ ಗರವಾದ್ದುಸರೀಸೃಪ ವೃಶ್ಚಿಕಾದಿಗಳೊಳು ಸೇರಿತು 14ಗರವು ಭೂಷಣವಾಯಿತು ವೈರಾಗ್ಯಾಧಿಪ ಶಿವಗೆಸುಪ್ರಸಿದ್ಧನು ಆದ ನೀಲಕಂಠನೆಂದುಧೀರ ಕರುಣಾಂಬುನಿಧಿ ನಂಜುಂಡೇಶ್ವರನು ಈಗಿರಿಜೇಶನಿಗೆ ನಾ ನಮಿಪೆ ಶರಣೆಂದು 15ಈ ಕೃಪಾಕರ ನೀಲಕಂಠ ಕರತಲೀಕೃತ್ಯಆ ಕಾಲಕೂಟವಿಷ ಉಂಡ ಮಹತ್ಕಾರ್ಯಸಂಕೀರ್ತಿ ಪೇಳಿರುವುದು ಶ್ರೀ ಭಾಗವತದಿಬಾಕಿ ಬಹು ಮಹೋಲ್ಪಣ ವಿಷ ವಿಷಯ ಶೃತಿ ವೇದ್ಯ 16ಉರಗಭೂಷಣ ವಿಪ ಉರಗಪರುಗಳಿಗಿಂತನೂರುಗುಣ ಎಂಬುದಕೆ ಅತ್ಯಧಿಕ ಬಲಿಯುವರಮುಖ್ಯ ಪ್ರಾಣ ಜಗತ್ ಪ್ರಾಣಗೆ ಸಮರಿಲ್ಲನೀರಜಜಾಂಡದಿ ಎಲ್ಲೂ ಶರಣೆಂಬೆ ಇವಗೆ 17ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ18-ಇತಿ ದ್ವಿತೀಯಾಧ್ಯಾಯಂ ಸಂಪೂರ್ಣಂ -ತೃತೀಯ ಅಧ್ಯಾಯಶ್ರೀ ಇಂದಿರಾ ಆವಿರ್ಭಾವಸಾರಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಗರಪಾನವ ವೃಷಾಂಕನು ಮಾಡೆ ಇಂದ್ರಾದಿಸುರರುದಾನವರು ಪುನರ್‍ಮಥನವ ಚರಿಸೆಕ್ಷೀರಸಾಗರದಿಂದ ಉತ್ಪನ್ನವಾದವುಪರಿಪರಿ ವಸ್ತುಗಳ್ ಒಂದರ ಮೇಲೊಂದು 1ಯಜÉೂÕೀಪಯೋಗಿಗಳಪ್ರದ ಕಾಮಧೇನುಉಚ್ಛೈಶ್ರವನಾಮ ಸುಲಕ್ಷಣ ಅಶ್ವಸಚ್ಛಕ್ತಿ ಶ್ರೇಷ್ಠತರ ಐರಾವತನಾಮಗಜೇಂದ್ರ ನಾಲ್ಕು ಚಂದದಂತ ಭೂಷಿತವು 2ಸರಸಿಜೋದ್ಭವಸೇವ್ಯಶ್ರೀಶವರಾಹಹರಿನಿನ್ನ ವಕ್ಷ ಸಂಬಂಧದಿ ಹೊಳೆವಸುಶ್ರೇಷ್ಠ ಕೌಸ್ತುಭರತ್ನ ಎಂಬುವಂತಹಸುಭ್ರಾಜಮಣಿ ಬಂತು ಆ ಸಿಂಧುವಿನಿಂದ 3ಸುರಲೋಕ ವಿಭೂಷಣವು ಸರ್ವವಾಂಛಿತ ಪ್ರದವುಪಾರಿಜಾತವು ಉದ್ಭವವಾಯಿತು ತರುವಾಯಸ್ಫುರದ್ರೂಪ ರಮಣೀಯ ಸುಂದರಾಂಗಿಗಳುಹಾರವಸನಭೂಷಿತ ಅಪ್ಸರಸರು 4ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್‍ವಿದಿಕ್ಕುಗಳ ರಂಜಿಸುವರೂಪ -ದಿಂದ ಆವಿರ್ಭವಿಸಿದಳು ಸಾಕ್ಷಾತ್ ಶ್ರೀಇಂದಿರೆಅಲೌಕಿಕ ಸೌಂದರ್ಯಪೂರ್ಣೆ5ಸರ್ವದಾ ಸರ್ವವಿಧದಿ ನಿನ್ನ ಸೇವಿಸಿ ನುತಿಪಸರ್ವಜಗಜ್ಜನನಿಯೇಸಿಂಧುಕನ್ಯಾದೇವ ದೇವೋತ್ತಮ ರಾಜರಾಜೇಶ್ವರ ನಿನಗೆದೇವ ಶ್ರೀ ರಾಜರಾಜೇಶ್ವರಿನಿತ್ಯನಿಜಸತಿಯು6ಇಂದ್ರಾದಿ ದೇವತೆಗಳು ಮುನಿಜನರುಇಂದಿರೆಯನ್ನು ವಿಧಿಯುಕ್ತ ಪೂಜಿಸಿದರುಸಿಂಧುರಾಜನು ವರುಣ ಏನು ಧನ್ಯನೋ ಜಗನ್ -ಮಾತೆ ನಿರ್ದೋಷೆ ರಮಾ ಮಗಳಾಗಿ ತೋರಿಹಳು 7ಅಲೌಕಿಕ ಮುತ್ತು ನವರತ್ನದ ಮುಕುಟಒಳ್ಳೇ ಪರಿಮಳ ಹೂವು ಮುಡಿದ ತುರುಬುಪಾಲದಲಿ ಶ್ರೇಷ್ಠತಮ ಕಸ್ತೂರಿತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬಟ್ಟು 8ಅಂಬುಜಾಕ್ಷಗಳು ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯಪ್ರದ ಕೃಪಾನೋಟಕಂಬುಕಂಠದಿ ಮಂಗಳಸೂತ್ರ ಕರಯುಗದಿಅಂಬುಜಾವರಕೊಡುವ ಅಭಯಹಸ್ತಗಳು9ಕಂದರದಿ ಎಂದೂ ಬಾಡದಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟಿವಸ್ತ್ರ ರಾಜಿಸುವಂತಹ ಸ್ವರ್ಣಹಾರಗಳುಕಾಂತಿಯುಕ್ ಭಂಗಾರ ಸರ್ವಾಭರಣಗಳು 10ಆನಂದಮಯಅಜಿತನಾಮಾ ನಿನ್ನನು ಮನ-ಮಂದಿರದಿ ಪೂಜಿಸುತ ಇಂದಿರಾದೇವಿಬಂದು ಸಭೆಯಲಿ ಸಾಲು ಸಾಲಾಗಿ ಕುಳಿತಿದ್ದವೃಂದಾರಕರನ್ನ ಮಂದಹಾಸದಿ ನೋಡಿದಳು 11ಒಬ್ಬೊಬ್ಬ ದೇವತೆಯಲೂ ಗುಣವಿದ್ದರೂಅಬ್ಬಬ್ಬ ಏನೆಂಬೆ ದೋಷಗಳೂ ಉಂಟುಅದ್ಭುತ ಗುಣನಿಧಿನಿರ್ದೋಷಸರ್ವೇಶ-ಅಂಬುಜನಾಭ ನೀನೇವೇ ಎಂದು ನಮಿಸಿದಳು 12ಕ್ಷರರಿಗೂ ಅಕ್ಷರರಿಗೂ ಎಂದೆಂದೂ ಆಶ್ರಯನುಪುರುಷೋತ್ತಮಹರಿವಿಷ್ಣು ಸ್ವತಂತ್ರಸರಿ ಅಧಿಕರು ಇಲ್ಲದ ಅನಘನು ಸರ್ವಗುಣಪರಿಪೂರ್ಣನಿಗೇವೇ ಅರ್ಪಿಸಿದಳು ಮಾಲೆ 13ಉತ್ತಮ ಸುತೀರ್ಥಗಳಿಂದ ಅಘ್ರ್ಯ ಚಮನಪಾದ್ಯಾದಿ ಅರ್ಚನೆ ವಿಧಿಯುಕ್ತವಾಗಿಸುತಪೂನಿಧಿ ವಸಿಷ್ಠಾದೀಯರು ವೇದೋಕ್ತಮಂತ್ರ ಪಠಿಸೆ ವರುಣ ಹರಿಯ ಪೂಜಿಸಿದ 14ಆನಂದಪೂರ್ಣಅಜನಿತ್ಯಮುಕ್ತೆ ಮಗಳುಇಂದಿರೆಯಆನಂದಮಯಹರಿನಿನಗೆಸಿಂಧುಧಾರೆ ಎರೆದು ಮದುವೆ ಮಾಡಿಕೊಟ್ಟಆನಂದ ನಿತ್ಯದಂಪತಿ ರಮಾ ಮಾಧವರು 15ಪೀತಾಂಬರ ದಿವ್ಯ ಆಭರಣ ಪೊಳೆಯುತ್ತಮೋದಮಯ ನೀ ಸಿಂಧುಜಾ ಸಹ ದಿವ್ಯರತ್ನ ಖಚಿತ ಮಂಟಪದಲಿ ಕುಳಿತರೆಮುದದಿ ವರ್ಷಿಸಿದರು ಪೂಮಳೆಸುರರು16ಸಂಭ್ರಮದಿ ಮಂಗಳವಾದ್ಯ ಸುಧ್ವನಿಗಳುತುಂಬಿತುಅಂಬರಅಂಬುಧಿಎಲ್ಲೂಗಂಭೀರ ಸುಸ್ವರ ವೇದಘೋಷಗಳುತುಂಬರ ನಾರದಾದಿಗಳ ಗಾಯನವು 17ದೇವಗಾಯಕರುಗಳ ದಿವ್ಯ ಕೀರ್ತನೆಗಳುದೇವನರ್ತಕ ನರ್ತಕಿಯರ ನರ್ತನವುದೇವತೆಗಳ ಆಭರಣಾದಿ ಕಾಣಿಕೆಗಳದೇವಿ ರಮೆಗೂ ನಿನಗೂ ಅರ್ಪಿಸಿದರು ಮುದದಿಂ 18ವನಜಭವ ರುದ್ರಾದಿಗಳು ಮುನಿವೃಂದವುಸನ್ನುತಿಸುತ ಸರ್ವ ಕೀರ್ತನವನ್ನುಆನಂದ ಭಕ್ತಿಯಂ ಶ್ರೀ ಲಕ್ಷ್ಮೀಯನ್ನು ನೋಡಿಧನ್ಯರಾದರು ನಮೋ ವಿಷ್ಣುಗೆ ಶ್ರೀರಮೆಗೆ 19ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ20- ಇತಿ ತೃತೀಯ ಅಧ್ಯಾಯ ಪೂರ್ಣಂ -ಚತುರ್ಥ ಅಧ್ಯಾಯಶ್ರೀ ಧನ್ವಂತರಿ ಹಾಗೂ ಮೋಹಿನಿವೃತ್ತಾಂತಸಾರಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪವಿಸ್ತಾರವಾಗಿ ಫೇಣವು ವ್ಯಾಪಿಸಿರುವಆ ಸಮುದ್ರದಿಂದ ವಾರುಣಿಯು ಬರಲಾಗಅಸುರರನು ತಮಗೇವೆ ಬೇಕೆಂದು ಕೊಂಡರುಈಶ ನೀ ಅವರಿಗೆ ಅನುಮತಿ ಕೊಡಲು 1ಸುಧೆಗಾಗಿ ಸಿಂಧುವ ಮತ್ತೂ ಮಥನಮಾಡೆಉದಿಸಿದನುಪರಮಅದ್ಭುತ ಪುರುಷನುಸುಂದರ ವಿಗ್ರಹ ಕಂಬುಗ್ರೀವ ಅರುಣೇಕ್ಷಣಅಂದ ಸುದೀರ್ಘ ಪೀವರದೋರ್ದಂಡ 2ಸಗ್ನಧರ ಶ್ಯಾಮಲಸ್ತರುಣ ಸರ್ವಾಭರಣ -ದಿಂದ ಒಪ್ಪುವ ರತ್ನಖಚಿತ ಕುಂಡಲವುಪೀತವಾಸ ಮಹಾಸ್ಕಂಧ ಸುಶುಭಾಂಗನುಸ್ನಿಗ್ದ ಕುಂಚಿತ ಕೇಶ ಸಿಂಹ ವಿಕ್ರಮನು 3ಅನುಪಮಾದ್ಭುತ ಈ ಮಹಾಪುರುಷ ಸಾಕ್ಷಾತ್ವಿಷ್ಣು ನೀನೇವೆ ಮತ್ತೊಂದವತಾರಆನಂದ ಚಿನ್ಮಾತ್ರ ಹಸ್ತದಲಿ ಹಿಡಿದಿರುವಿಪೂರ್ಣವಾಗಿ ಅಮೃತ ತುಂಬಿರುವ ಕಳಸ 4ಆಯುರ್ವೇದ ಮಹಾಭಿಷಕ್ ಶ್ರೀ ಧನ್ವಂತರಿ ನೀನುಕೈಯಲ್ಲಿ ಪಿಡಿದ ಪಿಯೂಷ ಕುಂಭವನುದೈತ್ಯರು ನೋಡಿ ಬಹು ಇಚ್ಛೈಸಿ ಅಪಹರಿಸೆಶ್ರೀಯಃಪತಿಯೇಸುರರುನಿನ್ನಲ್ಲಿ ಮೊರೆಇಟ್ಟರು5ದೇವತಾವೃಂದವಿಷ್ಣಮನಸ್ಸಿಂದಲಿದೇವವರೇಣ್ಯಹರಿನಿನ್ನ ಶರಣು ಹೋಗಲುಯಾವ ಮನಖೇದವೂ ಬೇಡ ಅನುಕೂಲವನೇಮಾಡುವಿ ಎಂದು ನೀ ಅಭಯವನ್ನಿತ್ತಿ 6ಅಮೃತಕಲಶವು ಎಂದು ನೆನೆದು ಆ ಅಸುರರುನಾಮುಂಚಿ(ಚೆ) ನಾಮುಂಚಿ (ಚೆ) ನೀ ಮುಂಚಿ (ಚೆ) ಅಲಲ್ತಮ್ಮೊಳಗೆ ಈ ರೀತಿ ಪರಸ್ಪರ ಕಾದಾಡೇನೀ ಮೋಹಿನಿ ರೂಪದಲಿ ತೋರಿ ನಿಂತಿ 7ಪರಮಅದ್ಭುತ ಅನಿರ್ದೇಶ್ಯ ಸ್ತ್ರೀರೂಪವಧರಿಸಿ ನಿಂತಿಯೋ ಆ ಅಸುರರ ಮುಂದೆಅರಳಿದಮಲ್ಲಿಗೆ ಮುಡಿದ ಕುಂತಳವುವರಾನನ ಕರ್ಣಕುಂಡಲಕಪೋಲ8ಸುಗ್ರೀವ ಕಂಠಾಭರಣ ಸುಭುಜಾಂಗದಸ್ಫುರತ್ ನವ ಯೌವನಗಾತ್ರ ಸೌಂದರ್ಯಉರದಿ ಪೊಳೆಯುವ ನವರತ್ನಪದಕಗಳುಭಾರಿ ಪೀತಾಂಬರವುದಿವ್ಯಒಡ್ಯಾಣ9ಸರ್ವಅವಯವಗಳು ಅನುಪಮ ಸುಂದರವುಸರ್ವಾಭರಣ ವಿಭೂಷಿತ ಸೊಬಗುಸರ್ವಾಕರ್ಷಕ ಮಂದಗತಿ ನೋಟವುಸರ್ವ ಆ ದೈತ್ಯರೊಳು ಕಾಮ ಪುಟ್ಟಿಸಿತು 10ಅಮರರೊಳು ದೈತ್ಯರೊಳು ಗಂಧರ್ವ ನರರೊಳುಈ ಮಹಾ ಸೌಂದರ್ಯರೂಪ ಕಂಡಿಲ್ಲಸುಮೋಹಿತ ದೈತ್ಯರು ಸುಧಾ ವಿಷಯದಲಿತಮಗೂ ಸುರರಿಗೂ ನ್ಯಾಯಮಾಡೆ ಕೋರಿದರು 11ಮಾಯಾಯೋಷಿದ್ವಪುಷಅಮೃತ ವಿನಿಯೋಗನ್ಯಾಯವೋ ಸರಿಯೋ ಸರಿಯಲ್ಲವೋನೀ ಹ್ಯಾಗಾದರೂ ಮಾಡಲಿಕೆ ಒಪ್ಪಿದರುಮಾಯಾಮೋಹವೃತ ಆ ದೈತ್ಯಜನರು12ಉಪವಾಸ ಸ್ನಾನ ಹೋಮಾದಿಗಳು ಆಗಿದೀಪಾವಳಿಗಳ ಹಚ್ಚಿಟ್ಟು ಮುದದಿತಪ್ಪದೇಮುಕ್ತಆಚರಣೆ ತರುವಾಯಸುಪವಿತ್ರ ಸುಧೆಗೆ ಕಾದರು ಸುರಾಸುರರು 13ಸುಧೆಗೆ ಕಾದಿರುವ ಸುರಾಸುರರ ನೋಡಿಸುಧಾ ಕಲಶ ನಿಜವಾದ್ದನ್ನ ಹಿಡಿದಿಮಂದಗಜ ಗತಿಯಲ್ಲಿ ಶೃಂಗಾರ ಸುರಿಸುತ್ತಬಂದಳು ಮೋಹಿನಿ ಚಂದ ನವಯುವತಿ 14ಅಸುರರು ಅರಿಯರು ಯೋಷಿದ್ ವಪುಹರಿಯೇವೇಆ ಸ್ಫುರದ್ರೂಪಿಣಿ ಮೋಹಿನಿ ಎಂತಅಸುರರು ಲೋಲುಪಮರು ಸುಧಾ ಅನರ್ಹರು ಎಂದುಶ್ರೀಶ ನೀ ನಿಶ್ಚಯಿಸಿದಿ ದೇವ ದೇವ 15ದೇವತೆಗಳ ಪಂಕ್ತಿ ಒಂದು ಸಾಲು ಮತ್ತುದೇವಶತೃಗಳ ಪಂಕ್ತಿ ಮತ್ತೊಂದು ಸಾಲುದೇವತೆಗಳಿಗೇವೇ ನೀ ಸುಧ ಉಣಿಸಿದಿದೇವಶತೃಗಳಿಗೆ ಸುಧಾ ಉಣಿಸಲಿಲ್ಲ 16ಕೂರ್ಮರೂಪದಲಿ ನೀ ಮಂದರಾಗಿರಿ ಪೊತ್ತುಅಮರರ ಸಹಿತಸಿಂಧುಮಥಿಸಿದಿ ಅಜಿತಅಮೃತ ಕಲಶವ ತಂದಿ ಶ್ರೀಶ ಧನ್ವಂತರಿಸುಮನಸಸುಧಾಪ್ರದ ಮೋಹಿನಿರೂಪ17ಹರಿಪಾದಾಶ್ರಿತರಾಗಿರುವ ಸುರರಿಗೆ ಅಮೃತಹರಿಪರಾನ್ಮುಖ ದ್ವೇಷಿ ದೈತ್ಯರಿಗೆ ಇಲ್ಲಸುರಾಸುರಗಣಕೆ ಸಮ ಕರ್ಮೋಪಕರಣಗಳುಆದರೂ ಯೋಗ್ಯತೆಯಿಂದ ಫಲ ಬೇರೆ ಬೇರೆ 18ಜ್ಞಾನಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ19- ಇತಿ ಚತುರ್ಥ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧರ್ಮಪುರಿ ಕ್ಷೇತ್ರ ಪರವಾಸುದೇವ ಸ್ತೋತ್ರ61ಶರಣು ಹೊಕ್ಕೆನೋ ನಿನ್ನ |ಪರವಾಸುದೇವನೇ ಪಾಲಿಸೆನ್ನಲಿ ಕೃಷ್ಣ |ಕರಿರಾಜವರದನೇ ಶರಣ ವತ್ಸಲ ಘನ್ನ |ಭಕ್ತಜನ ಪ್ರಸನ್ನ |ಉರುಗುಣಾರ್ಣವ ವೇದವೇದ್ಯನೆ |ಶಿರಿ ಕರಾಂಬುರುಹಾಚೀತಾಂಘ್ರಿ |ಸರೋಜವಿಧಿಶಿವಾದ್ಯಮರ ವಂದ್ಯನೆ ಸರ್ವಕರ್ತಾಶರಣುಹೊಕ್ಕೆನೋ ನಿನ್ನ|| ಪಮೀನಕೂರ್ಮವರಾಹ| ಚಿನ್ಮಾತ್ರವಪುಷವೀರಭದ್ರ ನೃಸಿಂಹ||ಬಲಿರಾಯಗೊಲಿದು ಕೆಡಹಿದೈತ್ಯ ಸಮೂಹ ||ದುಷ್ಟನೃಪರ ಸೀಳಿ ಬಿಸುಟು ಬ್ರಹ್ಮ | ಕುಲವರವಾಯು ಮಹಾರ್ಹಹನುಮಪ್ರಿಯರವಿ ಸುತ ವಿಭೀಷಣರಿಗೆ ನೀ ಅಭಯನೀಡಿ ಪಾಂಡು -ತನಯರು ದ್ರೌಪದೀ ವಿದುರಉದ್ಧವಇನ್ನುಬಹು ಸಜ್ಜನರಿಗೊಲಿದು ||ಜನಜನೆನಿಸಿದಿ ದೈತ್ಯಮೋಹಕ ಸುರಸುಬೋಧಕ ಬುದ್ಧಶರಣು |ಕ್ಷೋಣಿಯಲ್ಲಿ ಚೋರರಾಜರ ಸದೆದು -ಧರ್ಮಸ್ಥಾಪಿಸಿದಿ ಹೇ ಕಲ್ಕಿ ನಮೋ ನಮೋಪಾಹಿಸಂತತ1ಸರ್ವಗತ ಸರ್ವೇಶ | ಸರ್ವೇಶ್ವರನು ನೀನೇ ಕಾಲವಸ್ತುದೇಶ ||ಸರ್ವತ್ರಒಳಹೊರ ವ್ಯಾಪ್ತನಾಗಿಹ ಶ್ರೀಶ ||ಶ್ರೀತತ್ವ ನಿನ್ನಲಿ ಓತಪ್ರೋತಮಹೇಶ | ಅಕರನೇನಿರ್ದೋಷ ||ಸಚ್ಚಿತ್ ಸುಖಮಯ ಆತ್ಮಾಪ್ರೇದಕ್ಕೂ ಅಮಿತ ಸತ್ಕಲ್ಯಾಣಗುಣನಿಧೇ ||ಸರ್ವಜಗಚ್ಚೇಷ್ಟೆಯನು ಗೈಸುತಿ ಸ್ವಪ್ರಯೋಜನ ರಹಿತಸ್ವಾಮಿಯೇ |ಅಜಿತರುಚಿರಾಂಗದನೇ ಸ್ವಾಸ್ಯನೇ ಸರ್ವಭೂತಾಂತರಾತ್ಮನೇ ||ಅಚ್ಯುತನೇ ಸಂಪೂರ್ಣ ಕಾಮನೇ ಅತಿಜ್ಞಾನ ವೈರಾಗ್ಯ ಸಂಪತ್‍ದಾತಕರುಣಿ | ಗುರುವೇಂಕಟ || ಶರಣು || 2ಧರ್ಮಪುರಿಯಲ್ಲಿರುತ್ತಿ | ಶೇಷಶಯನನೇನಮೋ ಪರವಾಸುದೇವ ಪ್ರಮೋದಿ ||ಮದ್ದೋಷ ಕಳೆದು ಸದ್ಧರ್ಮದಲಿ ಇಡು ದಯದಿ |ವೃಷಾತಪಿಯೇ ಕಪಿತನಾಮಕನಮೋ ಆನಂದಿ ನಂದಾ ನಂದನ ನಂಹಿಜಗದಾಧಾರ ಶ್ರೀಕೂರ್ಮನಭ ಅರ್ಕಾದಿ ಧಾರಕ ಶಿಂಶುಮಾರನೇಸಾಗರವು ಭೂಮಿಯನು ನುಂಗದೇ ಹಿಂದೆ ಸೆಳೆದು ಧರೆಯರಕ್ಷಿಪ ||ಸಾಗರದಲ್ಲಿರುವ ವಡವಾವತ್ತಅಗ್ನಿನೀನು ಸವತ್ರ ಹರವು |ಮುಖ್ಯ ರಕ್ಷಕ ವೇಧತಾತ ಪ್ರಸನ್ನ ಶ್ರೀನಿವಾಸ ಶ್ರೀಪತಿಗರುಡಕೇತನಶರಣು ಹೊಕ್ಕೆನೋನಿನ್ನ 3
--------------
ಪ್ರಸನ್ನ ಶ್ರೀನಿವಾಸದಾಸರು
ಸಮಸ್ತ ನಾಮಮಣಿಗಣ ಷಟ್ಚರಣ ಪದ್ಯಮಾಲಾಶ್ರೀ ರಮಾವರ ಶ್ರುತಿವಿನುತ ಸುಖಸಾರಗೃಹಕೆ ಸರ್ವೇಶ ಸುರದ್ರುಮವಾರಿಜಾಕ್ಷ ಮುಕುಂದಮುರಹರನಾರಸಿಂಹ ನಮೋಪ.ಗರುಡಗಮನ ಗುಡಾಳಕಾಖಿಳಶರಣಜನಸುರಧೇನುಸುರಮಣಿಕರುಣಸಾಗರ ಕಾಮಿತಾರ್ಥದದುರಿತಗಜಸಿಂಹಾಸರಸಿಜಾಸನಸೇವ್ಯಮುಕ್ತಾಭರಣನಮಿತ ಸುರೇಶ ನಿಶಾಚರಹರಣಶೀಲ ಸದಾಗಮ ಜೆÕೀಯಾದಿ ಪುರುಷ ನಮೋ 1ವಿಶ್ವಗರ್ಭ ವಿಚಿತ್ರಚರಿತ ಶುಭಾಶ್ವವದನ ವಿಶಾಲವಿಕ್ರಮಶಶ್ವದೇಕ ಸುವ್ಯಾಪ್ತ ಜ್ಞಾನಾನಂದ ಬಲಪೂರ್ಣನಶ್ವರೇಶ್ವರ ಸವಿತರೇಶ್ವರಈಶ್ವರೇಶ್ವರವೇದಗೋಚರಸುಸ್ವಭಾವ ನವಾಂಬುದಾಂಗ ಕೃಪಾಳು ಕೃಷ್ಣ ನಮೋ 2ಜನಪಮುನಿನುತ ತಾಟಕಾಂತಕಜನಕಜಾವರ ಲಕ್ಷ್ಮಣಾಗ್ರಜಜನಕ ವಾಗ್ವರ ಇಂದ್ರಪೂಜಿತ ಸೂರ್ಯಸುತಪಾಲದಿನಪ ಕುಲಪತಿ ದೀನವತ್ಸಲವನಧಿಬಂಧ ವಿಹಾರದಶಶಿರಹನನಕಾರಣ ಭರತಪಾಲಕ ರಾಮರಾಜ ನಮೋ3ಪೂತನಾಂತಕ ಶಕಟಮಾರಕವಾತಚಕ್ರಾನಿಷ್ಟಹರ ನವನೀತ ಪ್ರಿಯ ದಧಿಸಾರ ಭೋಜಕ ಗೋಪವಧುಲೋಲಶೀತಕರ ಕುಲತಿಲಕ ಶ್ರುತಿವಿಖ್ಯಾತಕರಿಚಾಣೂರ ಬಕಹರ&ಟsquo;ಮಾತುಳಾಂತಕ ಪಾರ್ಥಸ್ಥಾಪಕ ಕೌರವಾಂತ ನಮೋ 4ಚಕ್ರ ಶಂಖ ಗದಾಬ್ಜಧರ ತ್ರಿವಿಕ್ರಮಾಚ್ಯುತ ವರಹ ವಾಮನನಕ್ರಶಿಕ್ಷಕ ನಾಗರಕ್ಷಕ ನಿತ್ಯತೃಪ್ತ ಹರೇಶಕ್ರಗಿರಿಶಾರ್ಚಿತ ಪದಾಬ್ಜ ತ್ರಿವಕ್ರವಧು ಸೌಂದರ್ಯದಾಯಕಅಕ್ರುರಾಭೀಷ್ಟದ ವಿದುರ ಉದ್ಧವವರೇಣ್ಯ ನಮೋಮ 5ಮಧುಮಥನ ಕೈಟಭವಿದಾರಣಕುಧರವರ ಆನಂತವರ್ಣಾಭಿಧ ಜನಾರ್ದನ ಸಾಮಗಾಯನ ವೇದ್ಯಅನವದ್ಯವಿಧಿನಿಷೇಧಾಲಿಪ್ತ ಸತತ ವಿಬುಧನಿಯಾಮಕ ನಿರ್ಭಯಾತ್ಮ ತ್ರಿವಿಧ ಜನಾಶ್ರಯ ಕುಶಶಯನ ಶಾರಙ್ಗಪಾಣಿ ನಮೋ 6ವಾಸುದೇವಕುಭಾರವಾಹಕವಾಸವೇಯ ಕಪಿಲ ಋಷಭಮಹಿದಾಸ ಯಜ್ಞಾದತ್ತ ನಾರಾಯಣ ನಿರಾಮಯ ಭೋಶ್ರೀಸನಾತನ ಸಕಲಭುವನ ನಿವಾಸ ಸಂಕರುಷಣ ಸದಾಸ್ಮಿತಹಾಸ ದಿವಾಕರೇಕ್ಷಣಸ್ವಪ್ರಕಾಶನಮೋ7ಶೇಷಶಯನ ಜಗಚ್ಚರಾಚರಪೋಷಕಾಧಾರಕ ಸ್ವಜನ ಹೃದ್ಭೂಷಣಾಪರಿಚ್ಛಿನ್ನ ಅಪ್ರಮೇಯಾದಿ ಶ್ರುತಿವಕ್ತಘೋಷ ವರ್ಣ ಸುಪೂರ್ಣ ವಾಚ್ಯಾಶೇಷದೋಷವಿದೂರ ಖಳಜನಭೀಷಣಾಪ್ರಾಕೃತ ಅನುಪಮ ಪರಮಪುರುಷ ನಮೋ 8ಇಹದ್ಭಯ ಕ್ಷಯಕರ ಗುಣತ್ರಯರಹಿತ ವೃದ್ಧಿ ಹ್ರಾಸವರ್ಜಿತವಿಹಗತೈಜಸಪ್ರಾಜÕವಿಶ್ವಾವಸ್ಥತ್ರಯದಾತಾಅಹಿತನಾಶ ಪರೇಶ ಗಹನಾತ್ಗಹನಅವ್ಯಯಅತಿಶಯಾದ್ಭುತಬಹುಳ ಜೀವಾಂತರಿಯ ಅಂತರ್ಬಹಿಃಸ್ವತಂತ್ರ ನಮೋ 9ಪೂರ್ಣ ಕಾಮಾಂಬೋಧಿ ಶ್ರೀವಟಪರ್ಣತಲ್ಪ ಪರಾತ್ಪರಾಪ್ರತಿವರ್ಣ ನಿಗಮಾಗಮ ಅತಕ್ರ್ಯಾನಂತ ಸದ್ಗುಣ ಧೇನಿರ್ಣಯಾತೀತಾನಿರುದ್ದ ಸುಖಾರ್ಣವಾಚ್ಯುತ ಸೌಖ್ಯಕರ ನವಕೀರ್ಣ ವಿಗ್ರಹಪದ್ಮನಾಭಉದಾರಲೀಲ ನಮೋ10ಮೋಕ್ಷವಲ್ಲಭ ಭವಮಲಘ್ನ ಮುಮುಕ್ಷುವರದ ಮುನೀಂದ್ರ ಸುಮನೋಧ್ಯಕ್ಷ ದಾಮೋದರ ದಯಾಪರ ಜಿತದಿತಿಜ ಸಮರಭಿಕ್ಷುಕಾನ್ವಯಪ್ರಿಯ ಸಮಾಧಿಕಪಕ್ಷ ಸೃಷ್ಟ್ಯಾದ್ಯಷ್ಟ ಕಾರಣದಕ್ಷಾಧ್ವರಹರ ಬ್ರಹ್ಮ ನಿವಹಾದ್ಭಿನ್ನರೂಪ ನಮೋ 11ಕಂಠಕೌಸ್ತುಭಭೂಷಣಾಂಶಾಕುಂಠಿತಾತ್ಮೈಶ್ವರ್ಯ ಅಶುಭವಿಲುಂಠಕಾಧೋಕ್ಷಜ ಉಪೇಂದ್ರನೆ ಶ್ರೀಶ ಅನಿರುದ್ಧಕುಂಠಿತ ಜನನ ಮರಣ ಶಿರಿ ವೈಕುಂಠಪಾಬ್ಜಾಮ್ಲಾನ ತುಲಸೀಕಂಠಮಾಲಾನ್ವಿತ ಸುಗಂಧ ಜ್ಞಾನಕೋಶ ನಮೋ 12ನಿರ್ಜರೇಷ್ಟದ ನೀತಫಲದನೆದುರ್ಜನಾರ್ದಕ ದೂಷಣಾಂತಕನಿರ್ಜಿತಾಖಿಳ ಸುಜನಪಾಲಕ ನಿಶಾಚರೌಘಹರವರ್ಜಿತಕಲುಷನಿತ್ಯವಿಬುಧರಊರ್ಜಿತರ ಚಾರಿತ್ರವಿಮಲ ಗುಣಾರ್ಜಿತೋದಧಿ ವಿಪದಧ್ವಜ ವೈರಾಗ್ಯ ಪುರುಷ ನಮೋ 13ಅಪುಶಯನ ಆದ್ಯಾಪ್ತ ಇಷ್ಟಜನ ಪರಗತಿಪ್ರದ ಈಶ ವರನುತಉಪಮವಿರಹಿತ ಊಧ್ರ್ವಗಪ್ರಿಯ ಋಜು ಭೃನ್ರೂಪಧರಲುಪತ ದುಷ್ಕøತ ಲೋಕ ಮೋದಕಚಪಲ ಏಕಾನೇಕ ವಿಗ್ರಹಸ್ವಪರ ಐಶ್ವರ್ಯೋಜ ಔದಾರ್ಯ ಸಹಸ್ರ ನಮೋ 14ಕರುಣನಿಧಿ ಖಳಹರ ಗರಾದಪಘರಘರಧಿ ಸಮ್ಯಙ್ಞ್ನಮಕ ಸುಚರಿತಪ್ರಾಕೃತಛವಿರಹಿತ ಜನಪಾಲಝಷಋಷಭಾಞುರು ಜಗತ್ಪರ್ಯಟನಕಮಠಡಮರ ಧರೇಢ್ಯನೆ ಗೂಢ ಗುಣಚಿತ್ಪರಕುಧರಧಿಕೋಚ್ಚರ ಜಾರಗ ಧನುಹನ್ಧನದನಮೋ15ನರಸಖಾಮಿತಪಶುಪಫಣಿಮದಹರ ಬಲಾನುಜಭರಿತವಿಕ್ರಮಮರುತ ಕಾಂಗಯರುಘ್ನ ನೆರಲೇಶ್ವಶುರ ಲಕ್ಷ್ಮೀಶಾವರದರಾಟ್ ಶಶಿವದನ ಷಕೃಸನಿರುತ ಸರ್ವಭುಕ್ ಯಜÕ ಹವ್ಯೇಶ್ವರ ಸ್ವತೃಪ್ತ ಸ್ವಪೂರ್ಣಲಕ್ಷ್ಮೀಧರ ಯಜ್ಞಾಂಗ ನಮೋ 16ಕಪಟನಾಟಕಕಾಲಕಿತವಭಯಪರಿಹರ ಕೀಚಕರಿಪುಪ್ರಿಯಕುಪುರುಷಾಂತಕ ಕೂಬಕೇಶನೆ ಕೈವಲ್ಯಕೀಶವಿಪುಲಕೋಶನೆ ಕೌಶಿಕಮುನಿ ಮಖ ಪರಿಪೋಷಕಕಂಬುಕಂಧರತÀಪನ ಕೋಟಿಪ್ರಕಾಶ ಕಶ್ಯಪಸುತ ಸುರೇಂದ್ರ ನಮೋ 17ಖರವಿದಾರಕ ಖಾದಿ ಪಂಚಕಭರಿತನಖಿಳ ವ್ರಜಸಖೀಮನೋಹರ ಸುಖುರಪುಟ ಶೋಭಿತ ಖಡ್ಗ ಖೂಚ್ರ್ಛ ಇಷುಪಾಣಿಸುರಸಖೇಳನ ಪರಸುಖೈಕ ಶರಿರ ವಿಶಿಷ್ಟ ಸುಖೋದಯಾಂಕುರವರಸುಖೌಘಾಖಂಡಪರಶೋ ದುಃಖಹರಣ ನಮೋ18ಗಗನನಾಭಾಗಾಧ ಚರಿತ ಗಿರಿಗಣಸೇವ್ಯ ಸುಗೀತಪ್ರಿಯ ಗುಪ್ತಗುಣ ಗೂಢಧಿ ಗೇಹ್ಯತ್ರಯಯುತ ಗೈದಿಹನೆ ಗೋಪ್ತಾಸ್ವಗತ ಗೌರವ ಗಂವ್ಹರಾಂಕಿತಸುಗಃನೋತ್ತರ ಶುಭಸುಖಾಕರಸುಗಮಸೂಕ್ಷ್ಮ್ಮ ಸುದುರ್ಗಮಾಲಯ ವಿಜಿತರೋಷ ನಮೋ19ಘಟಶ್ರವಣ ಘಾತಕ ಲಘಿಮಯುಕ್ಚಟುಲಗಾತ್ರಾ ಘೀಜನಹರಣಪಟು ರಘುದ್ವಹ ಪಿಶಿತಭೋಜಕ ಘೂಕಖದ್ಯೋತಕಠಿಣ ಘೇರಟಮಾನಖಳಸಂಕಟ ನಿವಾರಕಘೋರಯೋಧಕನಟಕಾಘೌಘ ವಿದಾರ ಘಂಟಾಚಾಪ ದೀರ್ಘ ನಮೋ 20ಚಕ್ಷುಷಾಲಯ ಚಾರುಗುಣಚಿತ್ಕುಕ್ಷ್ಷೆ ಚೀರದ್ವಯ ಚುತೇತರರಕ್ಷ ಚೂಡಾಚೇಷ್ಟ ಚೈದ್ಯಹರಾದ್ಯ ಚೋರಾರೇರಿಕ್ಷಜಾತಾವರ ಚೌರಾಶಿತಿಲಕ್ಷ ಪ್ರತಿಮಾದ್ಯಕ್ಷಚಂದನವಕ್ಷ ವನಸ್ರಗ್ಧರ ಋಚಃಸ್ವನ ಪ್ರೀಯಪುರುಷ ನಮೋ 21ಛತ್ರಯುಕ್ ಛಾಯಘ್ನ ಛಿಧ್ವರಕ್ಷುತೃಷಾರ್ದಕ ಛೇದವರ್ಜಿತ* * * ಸ್ವೇಚ್ಚೈಕಚರ ಇಚ್ಛೋದ್ರೇಕ ಮಾಂದ್ಯಹರಶತ್ರುಭಿತ್ಸಚ್ಛೌರ್ಯ ಭೂಷಿತಸತ್ರಭುಕ ಛಂದೋಮಯಾತ್ಮಕಪುತ್ರ ಪೌತ್ರ ಪ್ರಪೌತ್ರ ಶೋಭಿತ ಸ್ವಚ್ಛಃ ವರ್ಣ ನಮೋ 22ಜಯತರಾನನ ಜಾಡ್ಯಹರಜಿತಭಯನಿಚಯ ಜೀವೌಘರಕ್ಷಯಜುರ್ಯಜಾಸುರ ಜೂಕನುತ ಸುರಜೇಷ್ಠ ಜೈನಧಿಹನ್ಲಯ ಜಲಾಶ್ರಯ ಜೋತಿರ್ಮಯ ತನುವ್ಯಯ ವ್ರಜೌಕಸ ವಂದ್ಯ ಜಂಬುನಿಲಯ ಕುವಲಯನಯನ ಅಜಸ್ರಾನಂದ ಬಲಗ ನಮೋ 23ಝಡಿತಿಚರ ಝಂಝಾಮರುಚ್ಚರಝಡುಪಚರ ಝಿಲ್ಲಿಕ ವನೇಚರಜಡಧಿಚರ ಝೀರಿತ ಸುರ ಝುಂಟಾವಲಯ ಝೂಣಿಚರ ?ಒಡನೆ ಝೇಂಕರಿಸುತಲಿ ಝೈಡಿಯುದೃಢದಿ ಝೋಂಡಿಯೋಳ್ಚ್ಚರಿಸಿ ಝೌಂಕರಿಸ್ಯೊಡಲಿನೊಳು ಝಂಕಾರಪೂರ್ಣನೆ ಝಷಪತಿಯೆ ನಮೋ 24ಪಟಲಹೈಮಕಟಾಹಭಂಜಕನಿಟಿಲದೃಕ್ ಟೀಕಾರ್ಥಸುಪ್ರಿಯಕಟುಮತಿಘ್ನ ಭವೇಡ್ಯಾ ಟಂಕಾನ್ವಿತ ಕರಾಬ್ಜೇಕಾಜಠರಜಡಹ ಕುಠಾರಧರಸತ್ಕಠಿಣಕರ ಸುಕಠೋರ ಯೋಧ ಕಮಠವಿಕಾರ ಶಠೌಘಸಂಹರ ನೃಹರೆ ಭೃಗುಜ ನಮೋ 25ಕುಂಡಲೀಶ ಷಡಾಸ್ಯಸನ್ನುತಪಂಡಿತಾರ್ಚಿತ ಪಾಂಡುರಾಂಬರಮಂಡಲೇಶ ಬಿಡೌಜನುತ ನೃವಿಡಂಬನ ಚರಿತ್ರಪಂಢರಾಪುರ ರಾಜವಿಠಲಾಖಂಡಮತಿ ಪಾಖಂಡ ದೂಷಕಖಂಡಮರಕ ಪ್ರಭುಘ್ನಮುನಿ ಪುಂಡರೀಕವರದ ನಮೋ 26ಪ್ರಣತಪ್ರಿಯ ಪ್ರಣಾಯ್ಯಪ್ರಿಯ ವಿಪಫಣಿಪಪ್ರಿಯ ವಾಣೀಧವಪ್ರಿಯಅಣುಮಹದ್ರೇಣೂಸ್ಥಪ್ರಿಯ ಸುಗಣೇಶ ಪ್ರಿಯಕರನೇಕ್ಷಣ ಕ್ಷಣೈಕ್ಯ ಸುವ್ಯಕ್ತಧಾರಣಗುಣಗಣೋತ್ಪಾಟಣ ರಣೌಘಾಂಗಣ ಭಯೋಚ್ಚಾಟಣ ಗುಣಾಂಕ ಶರಣ್ಯಸುಖದ ನಮೋ 27ತÀಥ್ಯವ್ರತ ಸತ್ತಾತ್ವಿಕಾಗಮಕಥ್ಯ ತಿಲಮಾತ್ರಾರ್ಪಕೇಷ್ಟದಮಿಥ್ಯದೂಷಕ ತೀರ್ಥಶ್ರವ ತುರ್ಯಾತ್ಮಾತೂರ್ಣಪ್ರಿಯನಿತ್ಯತೇಜಸ ತೈತ್ತಿರಿಯಶ್ರುತಿಸ್ತುತ್ಯ ತೋಯಾಯನ ಧೃತೌಷಧಪಥ್ಯ ತಾಂತ್ರಿಕಪರಮಚೇತಃಪರಮಕಾಲ ನಮೋ28ಪ್ರಥಮಪುರುಷ ಪೃಥಾತ್ಮಜಾನ್ವಗಮಥಿತವೀರ್ಯ ರಥೀಂದ್ರ ಪರಿಚರಪೃಥಿವಿ ಪೂಜಿತ ಸ್ಥೂಲಕೃತ್ಯಥೇಚ್ಛ ಸ್ಥೈರ್ಯಮತೇಪಥಿಕಸದನ ಯಥೋಕ್ತ ಫಲದ ವಿಪಥರಥೌಘಪ ಸುರಥಚರಣ ಕುಪಥಗÀ ದೂರಕ ಬ್ರಹ್ಮಸ್ತಂಭಾಂತಸ್ಥ ಸ್ವಸ್ಥಃ ನಮೋ 29ದಹರ ವ್ಯೋಮಗ ದಾತೃ ದಾಂತ ಹೃದ್ಗುಹಸದನ ಕರ್ತ ತುಹಿನಬಿಂಬಗಅಹಿಪದೀಪ್ತ ಮಯೂಖ ದುರ್ಗಾವ್ಯಾಕೃತಾಂಬರಗಾಅಹಿತದೂಷಕ ದೇವ ದೈತ್ಯರದೋಹನ ಕಾರ್ಯಗ ದೌತ್ಯಕರ್ಮಗದ್ರುಹಿಣದೇಹ್ಯಗ ದಂಡಕಾರಕ ದರ್ಪಕಸಹ ನಮೋ 30ಧÀರ್ಮನಿಚಯಪ ಧಾತು ಸಮುಹಪಕರ್ಮಧಿಷÀಣಪ ಧೀರಪ್ರಜÕಪನರ್ಮವಾಗ್ಮಿಪ ಧುನಿಕದಂಬಪ ಧೂರ್ಜಟಾಂಕಿತಪಚÀರ್ಮಖಡ್ಗಪಧೇನುವಿಪ್ರಪಮರ್ಮ ಧೈರ್ಯಾಂಕಿತನಧೋಕ್ಷಜನಿರ್ಮಲಾತ್ಮಕ ಧೌಮ್ಯಗರ್ಗಪ ಧನ್ಯಧನಪ ನಮೋ 31ನಗವಿಧೃತಕರ ನಾಗಗರ್ವಹನ್ನಿಗಮರಿಪುನಾಶಕ ನೀತಪ್ರಭುಸುಗುಣಸೇವ್ಯ ನುತಜನಮಂದಾರ ನೂತನಾಬ್ಜಾಂಘ್ರೀಯುಗ ಯುಗಾಂತಕ ನೇಮನೈಷ್ಟಿಕಸುಗುಣನೋದಧಿ ನೌಗ ನಂದಕವಿಗತ ಸ್ನೇಹವಿನಷ್ಟ ಜಗದೋದ್ಧರಣಶೀಲ ನಮೋ 32ಪವನ ಮತಿ ಪರಿಪಾಕ ಬಿಂಬಸ್ತವನನಿರತ ಪಿನಾಕಿಮೋಹನಸುವಧು ಪೀಯೂಷಧರ ಪುಷ್ಪವಿಹಾಸ ಪೂರ್ಣಪ್ರಭಾಕವಿವರದ ಪೇಶಲ ಜಟಿಲ ಪೈಲವಿನುತ ಶುಕವಿಪೋಷ ಪೌರಾಣವಿರಚಕ ಪಂಚನಿಶಿ ಭಾರತ ಸೂತ್ರಕರ್ತ ನಮೋ 33ಫಲಿತ ಸದ್ರಸ ಫಾಲಲೇಖಕಲಲಿತ ಸ್ಫೀತಾತ್ಮಕ ಸ್ಫುಟಥಭೃಜ್ವಲ ಮರುತ ಪಯಫೇನ ಭುಕ್ಷತ ಸ್ಫೋಟಾತಂಕಹಾಬಲಬಲದ ಬಾಣಘ್ನ ಬಿಲಗಿರಿನಿಲಯಮುನಿ ಹೃನ್ನಿಲಯಬುಧಮಂಡಲ ವಿರಾಜಿತ ಬೋಧಯುತಕರ ಬಂಧಮೋಕ್ಷ ನಮೋ 34ಭದ್ರಪದ ಭಾವಕ ಭಿಷಗ್ವರರುದ್ರಭೀಕರ ಭುಕ್ತಿದಾ ದಾರಿದ್ರ್ಯದೂರಕ ಭೂರಿಭೂತಿದ ಭೇದವಾದೀಶಾಹೃದ್ರುಜಹನ್ ಭೈಷ್ಮೀಶ ಭೋಜೇಶಾದ್ರಿಕುಲಿಶಕುಶಸ್ಥಳೋಕ ಸುಪದ್ರವಾರ್ದಕ ಭೌಮವರಪ್ರದ ಭಂಗರಹಿತ ನಮೋ 35ಮಕರಧ್ವಜಜಿತ ಮಾಸಖಾಮಿತಭುಕುಲಜೀವನ ಮೀನ ಮುರಲಿಧರಕರ ಮೂಲಕವೀಂದ್ರ ಮೇಧ್ಯಚರಿತ್ರ ಮೈಥುಳಪಾಸುಕರಮೋಹಕ ಮೌನಿಪೂಜಕಚಕಿತಕರ ದನುಜೇಂದ್ರ ಕಷಣಾಂಬಕ ಬಕಾಂತಕ ಮಂಜುಹಾಸ ಮಹಾಧಿರಾಜ ನಮೋ 36ಯಜÕ ಭಿಕ್ಷುಕ ಯಾಜÕರತ ಯಿಂದ್ರಾಜÕ ದೂಷಕ ಯೀಷಣಾರ್ದಕಸುಜÕರಾಡ್ಯುಗ ಯೂಗಸಂಭವ ಯೂಥಪೋತ್ತಂಸಅಜÕಭಿದ್ಯೇಕೇಶ ಮೌನಿಗಣಜÕ ಯೌವನ ಪುಂಸಯಂತ್ರಾರ್ಥಜÕ ಪೋಷಕ ಕಿಂಕರೋಧೃತ ಕಾಮುಕಾಷ್ಟ ನಮೋ 37ರಸಿಕರಾಜಪ ರಾಜ್ಯಚಕ್ರಪವಸುಪ ವೃಕ್ಷಪ ಕುಲಪರೀಕ್ಷಿಪಪ್ರಸರಪಾಂಥಪ ರುಚಿಗುಣೌಘಪರೂಪಬಹುರೂಪಾಅಸುಪ ರೇತೋದ್ಭವಪ ರೈಗಪರಸಪ ರೋಷಪ ರೌಪ್ಯನಗಪಪಕುಸುಮಬಾಣಪ ರಂಗಕ್ಷೇತ್ರಪ ರಹಸ್ಯಪಾಲ ನಮೋ 38ಲವಜನಕ ಲಾಘವ ಕರಾಬ್ಜ ಲಿಪ್ತವಿಮಲ ಶ್ರೀ ಚಂದನಾಂಗ ಸುಕವಿನಚರಲುಬ್ಧ ವಧು ಪೂಜ್ಯನುಲೂಖ ಲೋಧಕನೇಭವಜಪಾಕ್ಷರ ಲೇಶ ಮೋಹ ಮದವಿರಹಿತ ಲೋಭಘ್ನ ಲೌಕಿಕಪ್ರವಹೇತರ ಲಂಕೌಕಸಾರ್ದಕ ಲಬ್ಧತುಷ್ಟನಮೋ39ವಕ್ತøವರ ವಾಲ್ಮೀಕಿ ಕೃತೀಶ ವಿವಿಕ್ತಮತಿ ಪದವೀಶಗತಿದನೆವುಕ್ತ ಸುಚರಿತ ಊಧ್ರ್ವಪಟ ಪ್ರಸ್ಥಾಪ ವೇದ್ಯ ನಮೋರಿಕ್ತಭಯ ವೈದೇಹಿ ಮನೋಹರತ್ಯಕ್ತಪ್ರಾಕೃತವೋಂ ವೌಷಡಾದ್ಯುಕ್ತಿವಾಚಕ ವಂದ್ಯವಂದಿತ ವಹಕ ವಾಹಕ ನಮೋ 40ಶಮಯುತಾಗ್ರಣಿ ಶಾಮಶಿವಕರಗಮನಶೀಘ್ರಗ ಶುದ್ಧ ವಿದ್ಯೋದ್ಯಮ ಶುಚಿವ್ರತ ಶೂರ್ಪನಖಿ ಮದಹರ್ತ ಶೇಷಸಹಯಮ ದಯಾಂಬುಧೆ ಶೈಲಗ್ರಹ ಸಂಯಮಿ ಗಣಾರ್ಥಿತ ಶೋಕತಾಪ ಪ್ರಶಮನ ಶೌಚಾಚಾರಯುತ ಪ್ರಭೊ ಶಾಂತ ಶಸ್ತ ನಮೋ 41ಷಡ್ವಿಭೂತೆ ನಿಷಾದ ಭಯಹರಷಡ್ವಧೂಧವ ಋಷಿವಧೂಸಖಶಾಡ್ವಲಚರ ಇಷೀಕ ಇಷುಧರ ಕಾಂಡ ಸುವಿಹಾರಾಷಡ್ವಿಕಾರಾತೀತ ವಿಜಿತಾನಡ್ವಷೇಚಿತ ಸೌರಭೇಯ ಭೂವಿಡ್ವರಘ್ನ ವೃಕ್ಷೌಘಘ್ನ ಸ್ವರ್ಣ ನಿಷಂಗಚಾಪನಮೋ42ಸರಸಿಜಾನನ ಸಾಧ್ಯ ಸಿದ್ಧನಿಕರಕರಾರ್ಚಕ ಸೀಕ್ಷರಕ್ಷಕಸುರಹೃನ್ಮಂದಿರಸೂರಿಹೃದ್ಗುಹಸೇವ್ಯ ಸುರಮೌಳಿನಿರುಜ ಸೈಂಧವಕಾಸ್ತø ಸೋಮಾಭರಣತೋಷಕ ಸೌಮ್ಯ ರತ್ನಾಕರನಿರಂಜನಸಂಜಯೋತ್ಸವ ಸಹಜಶೂರ ನಮೋ43ಹಲಿ ಸಹಗ ಹಾರ್ದಿಕ ಮನೋಗತಫಲ ಹಿರಣ್ಮಯವಸನ ಹೀರಾವಲಯ ಹುತ ಭುಗ್ಬಲದ ಹೂಣಪವಿತ್ರ ಹೇತ್ವರ್ಥಜಲಧಿಪುರಪತೆ ಹೈಮರಾಶಿದಬಲಿದ ಹೋಮದ ಹೋತ್ರಭಾಗದಸುಲಲಿತೋದನ ಪರಮಹಂಸ ಸತ್ಕುಲ ಹರುಷ ನಮೋ 44ಪಳಲವಾಂತ ಕಳಾಢ್ಯ ಯಜ್ಞಾವಳಿ ಕೃತಾದರ ನಿವ್ರ್ಯಳೀಕ ನಿಖಿಳ ಕೃಪಾಳುವರೇಣ್ಯಜೀವ ಜಿಳೂಕ( ಜಾಳಕ?) ತೃಪ್ತಿಕರಸ್ಥಳಕಳೇವರಭರಿತ ಬ್ರಹ್ಮ ವಿಪುಳ ಕಳೈಕ್ಯ ತಳೋಧ್ರ್ವಮದ ವಿಹ್ವಳ ಬಳೌಘನೆ ನಿಷ್ಕಳಂಕ ಕಳಾಪ್ರವೀಣ ನಮೋ 45ಕ್ಷತರಹಿತ ಕ್ಷಾರಾಬ್ಧಿ ಬಂಧಕಕ್ಷಿತಿಭರಹರ ಕ್ಷೀರನಿಧಿಗ್ರಹಅತುಳಗ್ರಹ ಕ್ಷುದ್ರಾರೆ ಕ್ಷೂರಾಯುಧನೆ ಕ್ಷೇಮೇಶಗತಿಗತೇ ದೀಕ್ಷೈಕ್ಯಕ್ಷೋಣಿಪತಿಪತೇ ಕ್ಷೌಮರಥ ಕ್ಷಾಂತಿಭರಿತ ನೃಗೋದ್ಧರ ಕ್ಷತ್ರವಲ್ಲಭ ಕ್ಷತ್ರವೇಷ ನಮೋ 46ಏಕರಾಡ್ ವಿಶ್ವೇಕಕಾರಕಏಕವ್ಯಾಪಕ ಏಕಸ್ಥಾಪಕಏಕಭೋಜಕ ಏಕಯಾಜಕ ಏಕತೋಕಾತ್ಮಏಕಸೃಜ ಭುವನೈಕವರ್ಧಕಏಕಮಾರಕ ಏಕತಾರಕಏಕಯಾಚಕ ಏಕಸೂಚಕ ಏಕಪತ್ರನಮೋ 47ದ್ವಯಕ್ರಿಯೇಶ್ವರ ದ್ವಯಪಥೇಶ್ವರದ್ವಯಸುವಿಸ್ತರ ದ್ವಯವಿಗೋಚರದ್ವಯನಿವಾರಕ ದ್ವಯಪ್ರದಾಯಕ ದ್ವಯಸಮಯಪೂರ್ಣದ್ವಯ ಪ್ರವಾಹಕ ದ್ವಯನಿಯಾಮಕದ್ವ್ವಯನಿರಂತರ ದ್ವಯದ್ವಯೇತರದ್ವಯಸುಬೋಧಕ ದ್ವಯಪ್ರಸ್ಥಾಪಕ ದ್ವಯಭಯಘ್ನ ನಮೋ48ತ್ರಯ ಸುವಿಗ್ರಹ ತ್ರಿಪದಕಾಲತ್ರಯಗ ತ್ರಿದಿವಪ ತ್ರಿಪಥಗಪಿತ ತ್ರಿನಯನಾರಿಹನ್ ತ್ರಿಪುರಮೋಹಕ ತ್ರಯ ಸ್ತ್ರಿಂಶತ್ ಸುರಪತ್ರಿಯುಗುದಿತ ತ್ರಿಗುಣೇಶ ಸಾಗರತ್ರಯಪ ಪಂಚಕತ್ರಿವಿಧಭಾಷ್ಯನಿಚಯಕಚಕ ತ್ರಿದಶಾರ್ಚ ತ್ರಿಜಗದ್ಧರಣಮಾರ್ಗನಮೋ49ಚತುರ್ವಿಧಾತ್ಮಾ ಚತುರ್ಭುಜಾಂಚಿತಚತುರ್ಮುಖಾಧಿಪ ಚತುರ್ವಿಧಾರ್ಥದಚತುರ್ವರ್ಣಾಶ್ರಯ ಚತುರ್ಮುಕ್ತಿ ಚತುಷ್ಟಯೇಶ್ವರ ತೇಚತುಃಸಮುದ್ರಗ ಚತುರತರಮತಿಚತುರ್ವಿಧಾಯಥ ಚತುರ್ಬಲಾಂಬುಧಿಚತುರವೇದಾರ್ಥಿತಚರಣ ಚತುಶ್ಯಾಸ್ತ್ತ್ರಪೂಜ್ಯನಮೋ 50ಪಂಚಮುಖಮುಖ ಪಂಚಮುಖನುತಪಂಚಜನರಿಪು ಪಂಚಮೋಕ್ಷದಪಂಚಪಾಂಡವಪ್ರಾಣ ವರಪಂಚಾಕೃತಾವ್ರಾತಪಂಚಶರಪಿತ ಪಂಚವ್ಯೂಹ ಸುಪಂಚಭಿದಮತ ಪಂಚಪರ್ವಹಪಂಚಕಾಲಜÕ್ಯಜÕ ಸಂಭೃತಪಂಚಬಾಣನಮೋ51ಷಟ್ಸಹೋದರ ಷಟ್ಚರಣಚರಷಟ್ಸಪತ್ನಹನ್ ಷಡೂರ್ಮಿಹರಷಟ್‍ಶಕ್ತ್ಯಾತ್ಮಕ ಷಡ್ಗುಣೋತ್ತರ ಷಡೃತುಪ್ರವಹಷಟ್ಕರಾಭಿದ ಷಟ್ಪರೋಕ್ಷದಷಟ್ಕ್ಕ್ರಯುಗ ಷಟ್ಶಾಸ್ತ್ರಪ್ರಿಯತಮ ಷಟ್ಕಸಹಗÀ ನಮೋ 52------------------------- 53ಅಷ್ಟಕಾರಣ ಶ್ಲಿಷ್ಟ ಮಹಿಷಿಯರಷ್ಟಕಾಶ್ರಯ ಅಷ್ಟಮದಹರಅಷ್ಟಕಾಷ್ಟಿಗ ಅಷ್ಟಭೂತಿದ ವ್ಯಷ್ಟಸೃತ್ಯಹಅಷ್ಟದಂಶಕ್ಷೋಣಿಪ್ರಜಹರಅಷ್ಟನಾಗಪ ಅಷ್ಟಭುಜಧರಅಷ್ಟ ಆಯುಧ ಸಂಭೃತಾಷ್ಟೌಷಧ ತ್ರಿಭಂಗ ನಮೋ 54ನವಸುರತ್ನಾಭರಣಯುಕ್ ತ್ರಿರ್ನವಕಪ್ರಿಯ ನವದ್ವಾರಪುರ ಪ್ರಭೊನವಶಯುಕ್ತ್ಯಾತ್ಮಕ ನವಗ್ರಹ ನವದೃಯಾಗದ್ರುಣನವರಸೇಶ್ವರ ನವಪ್ರಜೇಶಪನವನಿಧೀಶ ನವಾರ್ಥದೆ ದಾನವರಿಪುವೆ ನವಕೋಟ್ಯಮರರಿಂ ನಮಿತಚರಣ ನಮೋ 55ದಶಶತಾನನ ದಶಶತಾಂಬಕದಶಶತ ಸುತೋರ್ದಂಡ ದರಕಳದಶದಶಾಭಿದ ದಶಶತಾಭಿದ ದಶಖಗಾಮರಪದಶವರೂಥಜ ದಶಮುಖಘ್ನ ತ್ರಿದಶ ಭಯಾಂತಕ ದಶಕಕುಭ ಹಸತ್ದಶನ ದಶಮತಿಭಾಷ್ಯ ಋತದಶನೀಶದ್ರಕ್ಷ ನಮೋ 56ಶತಸುಖಾರ್ಥಿ ಶತಾಬ್ದಶಯನ ಸುಶತಮಖಾರ್ಚಿತ ಶತಗೋಪಿಪತೆಶತಸೋಮನೃಪಶತಕ ಸ್ಥಾಪಕ ಶತಶತಾಂಶುಧರಾಶತಕುರುಜಹನ್ ಶತಕುಲೋದ್ಧರಶತಾಯುಃಪ್ರದ ಶತಾಪರಾಧಿಪಶತಸಹಸ್ರಾರ್ಕಭ ಶತಪತ್ರಾಕ್ಷ ಸುಖದ ನಮೋ 57ಕ್ಷಿತಿಪ್ಲವೋದ್ಧರಕ್ಷಿತಿಭೃತೋದ್ಧರಕ್ಷಿತಿತಳೋದ್ಧರಕ್ಷಿತಿಚಲನಕರಕ್ಷಿತಿತ್ರಿಪದಧರ ಕ್ಷಿತಿಪಕ್ಷಯಕರ ಕ್ಷಿತಿಕನ್ಯಾಸುವರಕ್ಷಿತಿಜನಾಶಕ್ಷಿತಿಖಳಮೋಹಕಕ್ಷಿತಿಭರಾರ್ದಕ ಕ್ಷಿತಿಪಾಲನಪರಕ್ಷಿತಿವಲಯಚರ ಕ್ಷಿತಿಜನೇತರ ಕ್ಷಿತಿಸುರೇಶ ನಮೋ 58ಅಂಬುಗಮನ ಪಯೋಂಬುಮಥನ ಲಯಾಂಬು ತಳಗಾರುಣಾಂಬು ಸಟ ಬಾಹ್ಯಾಂಬುವಾಹಕ ಅಂಬುಶೋಷಕ ಅಂಬುಧಿಮದಘ್ನಅಂಬುಗೃಹ ಮೋಹಾಂಬುಧೆ ಧರ್ಮಾಂಬು ಶ್ರೀಮತ ಅಂಬುಜೇಶ ಸುಧಾಂಬುಧಿ ಸಮಾನೋದರಾಂಬುದಗಾತ್ರ ಕಪಿತ ನಮೋ 59ಅಗ್ನಿನಿಭ ಅಬ್ಧ್ಯಾಗ್ನಿ ಸಹಚರಅಗ್ನಿಮಯ ಪ್ರಳಯಾಗ್ನಿಲೋಚನಅಗ್ನಿಕಾರ್ಯಜ್ಞಾಗ್ನಿ ಪೂಜಿತ ಅಗ್ನಿ ಹೋತ್ರಯುತಾಅಗ್ನಿ ರುಧನ್ನಾಗ್ನಿಕೋಪನಅಗ್ನಿಸ್ಥಾಪಕ ಅಗ್ನಿವ್ಯಾಪಕಅಗ್ನಿವರ್ಧಕ ಅಗ್ನಿದೀಪಕ ಅಗ್ನಿವರ್ಣ ನಮೋ 60ವಾತಜನಕನೆ ವಾತಸಮಭ್ರಮವಾತಪಾಗ್ರಜ ನಾಸಿಕಜಲಯವಾತಸಮ ಕ್ವಾಶಾಂಕ ವಾತಭ್ರಾತೃ ಹಿತಕರಣಾವಾತಸಖಗತ ವಾತಭವನುತವಾತಸುತನುತ ವಾತರಶನ ಸುವಾತಸಮ ಹರಿಗಮನಸೂತ್ರಸುವಾತಜನಕ ನಮೋ61ಅಂಬರ್ವಾನರಜಾರ್ಚಿತ ನಗಾಂಬರಾಂಬರ ಕ್ರೀಡಾಂಬರಾಳಕಸಂಭಜಿತ ಸ್ವಾಂಬರಭರಿತಪದ ಅಂಬರೇಣುಕಹನ್ಅಂಬರಗ ವಂಶೇಂದ್ರ ಗೋವಧ್ವಾಂಬರಾಪಹರಾಂಬರಾಂಬರಅಂಬರಗ ಹಯಗಾಂಬರಪ ಪಾಂಬರ ಸುನಾಭಿ ನಮೋ 62ಶಬ್ದಬೋಧಕ ಶಬ್ದಕಾರಕಶಬ್ದಘರ್ಘರ ಶಬ್ದಹುಂಕರಶಬ್ದಪಾರಗ ಶಬ್ದ ವೀರಗಭೀರ ಶಬ್ದಾಂಕಾಶಬ್ದಶೋಧಕ ಶಬ್ದದೂಷಕಶಬ್ದಸ್ಥಾಪಕ ಶಬ್ದವಿಸ್ತøತಶಬ್ದ ಬ್ರಹ್ಮಜೆÕೀಶ ಶಬ್ದಾತೀತ ಶಬ್ದ ನಮೋ 63ವೃಷಭಗೇಷ್ಟ ಮಿಥುನ ಕುಜಾರ್ದಕವಿಷಮಕರ್ಕಶಮೃತ್ಯು ಕರಿಹರಿವಿಷರದನ ಕನ್ಯಾಪತಿಸಖ ವೃಶ್ಚಿಕಾಭಾಂಗಾವಿಷಪಧನುಹರಮಕರಕುಂಡಲವಿಷಕುಂಭ ಸ್ತನಪಾನ ತತ್ಪರವಿಷಯಸುಖಮಾಯ ಮೀನ ಮೇಷಾರೂಢಸೇವ್ಯನಮೋ64ಅಶ್ವರೂಪ ಮಹಾಭರಣಿಸಖವಿಶ್ವಕೃತ್ತಿಕಾಯಂಗಿ ವರರೋಹಿಣೇಶ್ವರೋದ್ಭವ ಮೃಗಮದಾಂಕಾರಿದ್ರವಿಣ ಹರಣಾನಿಸ್ವಜನ ಪುನರ್ವಸುದ ಗುರುಗಣಹೀಶ್ವರಾಸನ ಪಿತೃಚಯಾರ್ಚಿತಸ್ವ ಸ್ವಭಾಗ್ಯ ಸುಪೂರ್ಣ ಅಮೃತೋತ್ತರ ಸುಹಸ್ತ ನಮೋ 65ಚಿತ್ರರಥ ಸ್ವಾತಿಶಯದೂರ ಮರುತ್ತವೇಶಾನುರಾಧಕೋದ್ಧರಗೋತ್ರಿ ಸುಖಕರ ಮೂಲರಾಕ್ಷಸವಂದ್ಯ ಜಲರೂಪಶತ್ರು ಶ್ರವಣರಹಿತ ಧನಿಷ್ಠ ನಕ್ಷತ್ರ ಶತಪತಿ ಕುಲಜ ಮಧ್ಯ ಪೂರ್ವೊತ್ರ ಭದ್ರಪದೇಶ ರೇವತಿ ರಮಣಾವರಜ ನಮೋ 66ಕತರಕರ್ಚಿತ ಕಿತವಹರ ಸತ್ಯವ್ರತಪ ಕ್ರೀಡಾಪರಕುಧರಕೂಜಿತನಿಗಮಕೇಡ್ಯ ಕೋಟರಮುಖ ಕೌಶಲ ಜವಗಮಾಶ್ರುತಿಹರಹರ ಕಂಠರೇಖಾಂಕಿತ ಕಶ್ಯಪಸುತ ಕರುಣಭಾಷಕಶತಸುಖೋದ್ಧರ ಸಿತತರೋದರ ಶಫರಿರೂಪ ನಮೋ 67ಕಮಠಕಾಲಯ ಕಿಲ್ಬಿಷೋದರವಿಮಲ ಕೀಲಾಲೇಷ್ಟ ಕುಲಗಿರಿಭ್ರಮಣಕರ ಕುಪರ ಕರ್ಮೇತರ ಕೇಶ್ವರೇಷ್ಟಕರಅಮಿತ ಕೈತವಾನಿಷ್ಟ ಕೋಮಲವಿಮಲಜಠರಕಠಿಣವಪುಃ ಕೌರ್ಮ ಮಹತ್ಸ್ಮøತಿಪ್ರಿಯ ಕಂಠಲಂಬ ಕಚ್ಛಪಾತ್ಮ ನಮೋ 68ಕನಸಭವ ಕಾಪುರುಷಮಥನಕಿಟಿನಟ ಕೀರ್ತಿತಯಜÕ ಕುಶಮಯತನೋ ಶ್ರೀ ಕುಧವ ಕೆಗಕ್ರೋಡ ಕೈಶೋರ ಕುಜವರದಘನಸಮಸ್ವನಕೋಲಘರ್ಘರಮನುಸನಕನುತ ಕೌತುಕಾಟಣಕನಕಗಿರಿಚರ ಕಂಜಭವನುತ ಕಷ್ಟಹರಣ ನಮೋ 69ಮಧ್ವವಲ್ಲಭ ಮಧ್ವತೀರ್ಥಗಮಧ್ವಮತಪರ ಮಧ್ವಪತೆ ಮುನಿಮಧ್ವರಮಣ ಶ್ರೀಮಧ್ವಯತಿನುತ ಮಧ್ವಪುಷ್ಕರಪಾಮಧ್ವಪೋಷಕ ಮಧ್ವಭಾಷಕಮಧ್ವತೋಷಕ ಮಧ್ವರಿಪುಹರಮಧ್ವಕಾಮದ ಮಧ್ವಹೃದ್ಗುಹ ಮಧ್ವವಿಭವ ನಮೋ 70ಪ್ರಸನ್ನವದನ ಪ್ರಸನ್ನಲೋಚನಪ್ರಸನ್ನಭವನ ಪ್ರಸನ್ನಭಾಷಣಪ್ರಸನ್ನಕಾರ್ಯ ಪ್ರಸನ್ನಗುಣನಿಧೆ ಪ್ರಸನ್ನತರ ಮೂರ್ತೆಪ್ರಸನ್ನಪುರುಷ ಪ್ರಸನ್ನ ಸೋಂಕಿತಪ್ರಸನ್ನಕಥನ ಪ್ರಸನ್ನಭೂಷಣಪ್ರಸನ್ನಚರಿತ ಪ್ರಸನ್ನವೆಂಕಟ ಪ್ರಸನ್ನಕೃಷ್ಣ ನಮೋ 71
--------------
ಪ್ರಸನ್ನವೆಂಕಟದಾಸರು