ಒಟ್ಟು 21 ಕಡೆಗಳಲ್ಲಿ , 13 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶುಭ ಯೋಗಿ ಪುಂಗಗೆ | ಮಂಗಳಂ ಪಾಪೌಘ ಭಂಗಗೆ | ಮಂಗಳಂ ಯಾಳಗಿಯ ದೊರೆ ರಾಮಲಿಂಗನಿಗೆ ಪ ಮೋದದಲಿ ದತ್ತಾವಧೂತನು ಪೇಳಿದನು ಶ್ರೀಕಪಿಲ ಮುನಿವರ |ಗಾಧಿಯಂ ಮಣಿಚೂಲ ಶೈಲದ ಗುಹದಿ ತಪಮಾಡಿ ||ಮೇದಿನಿಯ ಜನರಿಂಗೆ ಸಹಜದಿ ವೇದ ವೇದಾರ್ಥವನು ಬೋಧಿಸಿ |ಭೇದ ಬುದ್ಧಿಯ ಬಿಡಿಸಿ ಕೃಪೆಯನು ಮಾಡಿ ಪೊರೆ ಎಂದು 1 ಕಪಿಲಮುನಿ ಲಿಂಗಾಂಬಿಕೆಗೆ ತಾ ಸ್ವಪ್ನದಲಿ ಪೇಳಿದನು ನಿಶ್ಚಯ |ಅಪರಿಮಿತ ವರ ಕೊಡುವ ಬೆಟ್ಟದ ರಾಮಲಿಂಗೇಶ ||ತಪವು ಮಾಡಲು ಕೊಡುವ ನೀ ತಪವು ಮಾಡೆಂದು ಪೇಳಿದ |ಗುಪಿತ ಮೂಲವ ತೋರಿ ಬೋಧಿಸಿ ಸುಖವ ಪಡೆ ಎಂದ 2 ಮೊದಲು ಲಿಂಗಾಂಬಿಕೆಯು ಮನದಲಿ ನೆನೆದು ಬೆಟ್ಟದ ರಾಮಲಿಂಗನ | ಪದುಳದಿಂ ಸೇವಾ ಪ್ರದಕ್ಷಿಣೆ ಭಕ್ತಿಭಾವದಲಿ |ಮುದದಿ ಪ್ರಾರ್ಥಿಸೆಗೈದು ಎನ್ನಗೆ ಸುತನ ಕೊಡಬೇಕೆಂದು ಪ್ರಾರ್ಥಿಸೆ | ಸದಮಲಾತ್ಮರಾಮಲಿಂಗನು ಜನಿಸುತಿಹನೆಂದ 3 ಸತಿ ಲಿಂಗಾಂಬೆ ಗರ್ಭದೊಳುಪಾವನಾತ್ಮಕ ಜನಿಸಿ ಬೆಳೆದುದ್ದಾಮ ಆನಂದಾಭ್ಧಿಯೊಳು ಸ- |ದ್ಭಾವದಿಂ ಮಣಿಚೂಲ ಶೈಲದಿ ತಪವನೆಸಗಿದಗೆ 4 ಕೆಲವು ದಿನ ಮಣಿಚೂಲ ಶೈಲದ ಗುಹೆಯೊಳಗೆ ತಪಗೈಯುತಿರೆ ಶ್ರೀಮಲಹರಿಯು ಪ್ರತ್ಯಕ್ಷರೂಪದಿ ಮಂತ್ರ ಬೋಧಿಸಿದ ||ಚೆಲುವ ರಾಮಪ್ಪಯ್ಯ ಮನದಲಿ ಹರುಷವಂ ಕೈಕೊಂಡು ಸಿದ್ಧಿಯಫಲವ ಪಡೆದನು ಮಂತ್ರ ಮಹಯೋಗಾದಿ ಸಿದ್ಧಿಗಳ 5 ಗೌತಮಾನ್ವಯದಲ್ಲಿ ಜನಿಸಿ ಸುಕೀರ್ತಿ-ಪಡೆದಪ್ಪಯ್ಯ ಗುರುವರ |ಮಾತು ಮಾತಿಗೆ ರಾಮಲಿಂಗನ ನೆನೆ ನೆನೆದು ಮನದಿ ||ಸಾತಿಶಯ ಮಣಿಚೂಲ ಶೈಲವ ಸೇರಿ ಕಂಡಿಹ ರಾಮಲಿಂಗನ |ಮಾತು ತಿಳುಹಿಸಿ ಗ್ರಹಕೆ ಕರಕೊಂಡು ಬಂದಿಹಗೆ 6 ಪರಮ ತಾರಕ ಮಂತ್ರ ಕರ್ಣದೊಳೊರೆದ ಗುರು ಅಪ್ಪಯ್ಯ ಮೂರ್ತಿಯ | ಚರಣವನು ಧ್ಯಾನಿಸುತೆ ಮಹಾ ವಾಕ್ಯಾರ್ಥ ಶೋಧಿಸಿದ | ಪರಿಪರಿಯ ವೇದಾರ್ಥವನು ಬಹು ಹರುಷದಿಂ ಶಿಷ್ಯರಿಗೆ ಬೋಧಿಸಿ | ನಿರುತ ಬ್ರಹ್ಮಾಕಾರ ವೃತ್ತಿಯೊಳಿರುವ ಶರಣಂಗೆ 7 ಪಂಚಲಿಂಗವು ಪಂಚ ತೀರ್ಥಗಳುಳ್ಳ ಯಾಳಗಿ ಕ್ಷೇತ್ರದಲಿ ಪ್ರ- |ಪಂಚವನು ಪರಮಾರ್ಥ ಬುದ್ಧಿಯಲಿಂದ ನೆರೆಗೈದು ||ವಂಚನಿಲ್ಲದ ರಾಮಲಿಂಗ ವಿರಂಚಿ ಭಾವದೊಳಿರ್ದು ಜನರಿಗೆಹಂಚಿಕೆಯ ಪೇಳಿದನು ಇಲ್ಲಿಗೆ ಗಂಗೆ ಬರುತಿಹಳು 8 ಇಂದು ವೇದ ರಸೈಕ ಶಕದ ವಿಕಾರಿವತ್ಸರ ದಕ್ಷಿಣಾಯನ |ಛಂದದಾಶ್ವೀನ ಶುದ್ದ ಸಪ್ತಮಿ ಸೌಮ್ಯ ವಾಸರದಿ ||ಸುಂದರದ ಜ್ಯೇಷ್ಠರ್ಕ ವೃಶ್ಚಿಕ ರಾಶಿ ಶುಭದಿನ ತೃತಿಯ ಪ್ರಹರದಿಹೊಂದಿದನು ಸುಸಮಾಧಿ ಸುಖವನು ರಾಮಗುರುವರನು 9 ಸುರರು ಅಂಬರಕೇರಿ ಪುಷ್ಪದ ಮಳೆಯ ಸುರಿದರು ಹರುಷದಿಂದಲಿಪರಮ ವಿಸ್ಮಯವಾಗೆ ಸುರದುಂದುಭಿಯ ಧ್ವನಿಕೇಳಿ || ಹರುಷ ದಿಂದಲಿ ಶಿರವ ನಲಿಯುತ ದೇವ ಗಣಿಕೆಯರು ನೃತ್ಯ ಮಾಡುತ ತರ ತರದಿ ಜಯ ಘೋಷ ಮಾಡುತ ಜನ ಸಹಿತವಾಗಿ 10|| ಜಯ ಜಯತು ಜಯ ನಿರ್ವಿಕಾರಗೆ ಜಯ ಜಯತು ಜಯ ನಿರ್ವಿಶೇಷಗೆ | ಜಯ ಜಯತು ನಿಃಸೀಮ ಪರಮಾನಂದ ರೂಪನಿಗೆ || ಜಯ ಜಯತು ಭಕ್ತಾಭಿಮಾನಿಗೆ ಜಯ ಜಯತು ಮಹ ಸಿದ್ಧ ವರದಗೆ | ಜಯ ಜಯತು ಸಿಂಧಾಪುರದ ಸಖರಾಮ ಗುರುವರಗೆ 11
--------------
ಗುರುರಾಮಲಿಂಗ
ಸಾಮಜ ವರದಗೆ ಮಾಮನೋಹರಗೆ ಕಾಮನ ಪಿತ ಶಾಮವರ್ಣ ಶ್ರೀಹರಿಗೆ ವಾಮದೇವನ ಸಖ ಸೋಮವದನ ಹರಿಗೆ ಕಾಮಿನಿ ಸತ್ಯಭಾಮ ಪತಿಗೆ ಹೊಸ ಹೇಮದಾರುತಿಯ ಬೆಳಗಿರೆ 1 ಲಕ್ಷ್ಮೀಯ ಅರಸಗೆ ಪಕ್ಷಿವಾಹನಗೆ ಮೋಕ್ಷದಾಯಕ ಪಾಂಡವ ಪಕ್ಷ ಶ್ರೀಹರಿಗೆ ವಕ್ಷಸ್ಥಳದಿ ಲಕ್ಷ್ಮೀಯ ಪೊರೆವ ಕುಕ್ಷಿವಳಗೆ ಜಗವ ರಕ್ಷಿಸುವ ಹರಿಗೆ ಲಕ್ಷದಾರತಿಯ ಬೆಳಗಿರೆ 2 ಭೋಗಿ ಶಯನಗೆ ಬೇಗದಿಂದಲಿ ಭಕ್ತರ ಪೊರೆವಗೆ ವಾಗೀಶವಂದ್ಯ ಶ್ರೀ ಗುರು ವಿಜಯವಿಠ್ಠಲ ಮಂಗಳ ಮಹಿಮ ತುಂಗ ಚರಿತ ಹರಿಗೆ ಮಂಗಳಾರುತಿಯ ಬೆಳಗಿರೆ 3
--------------
ವಿಜಯದಾಸ
ಜಯಮಂಗಳಂನಿತ್ಯಶುಭಮಂಗಳಂ ||ಪ.ಶ್ರೀ ವತ್ಸಲಾಂಛನಗೆ ಕ್ಷೀರಾಬ್ಧಿ ವಾಸಗೆ |ಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದುಮಕರಕುಂಡಲ ಧರಿಸಿ |ಜೀವಾತ್ಮನಾದ ಚಿನ್ಮಯರೂಪಗೆ 1ಅಂಬುಧಿಯ ಶಯನಗೆ ಅಖಿಲ ಭೂತೇಶಗೆ |ತುಂಬುರ - ನಾರದ ಮುನಿವಂದ್ಯಗೆ ||ಎಂಭತ್ತನಾಲ್ಕು ಲಕ್ಷ ಯೋನಿಗಳ ರಾಶಿಯನು |ಗೊಂಬೆಯನು ಮಾಡಿ ಕುಣಿಸುವ ದೇವಗೆ 2ಕಂದರ್ಪನಯ್ಯನಿಗೆ ಕೋಟಿ ಲಾವಣ್ಯನಿಗೆಸುಂದರ ಮೂರುತಿಹರಿ ಸರ್ವೋತ್ತಮನಿಗೆ ||ಕಂದ ಪ್ರಹ್ಲಾದನ ಕಾಯ್ದ ದೇವನಿಗೆಅರ |............................................. 3ಪನ್ನಂಗಶಯನಗೆಪಾವನ್ನ ಚರಿತೆಗೆ |ಸನ್ನುತರಾದ ಸಜ್ಜನ ಪಾಲಿಗೆ ||ಎನ್ನೊಡೆಯ ಸಿರಿದೇವಿಯರಸು ಮುದ್ದುರಂಗಗೆ |ತನ್ನ ನಂಬಿದವರನು ಸಲಹುವವಗೆ 4ಕರಿರಾಜವರದಗೆ ಕರುಣಾಸಮುದ್ರಗೆ |ಗರುಡ ಗಮನನಿಗೆ ವೈಭವಹಾರಗೆ ||ವರಪುರಂದರವಿಠಲ ಕಂಬುಕಂದರನಿಗೆ |ಅರವಿಂದನಾಭನಿಗೆ ಅಜನ ಪಿತಗೆ 5
--------------
ಪುರಂದರದಾಸರು
ಮಂಗಲಂ ಮಂಗಲಂ ಭವತು ತೇ ಮಂಗಲಂ ಪ.ವಿಜ್ಞಾನಶಕ್ತಿ ಪ್ರಕಾಶಗೆ ಈಶಗೆಸಜ್ಜನನಿವಹಾರಾದಿತಗೆಅಜ್ಞಾನತಿಮಿರಮಾರ್ತಾಂಡ ಪ್ರಚಂಡಗೆಮೂಜದೊಡೆಯ ಮನೋಜÕ ಮೂರುತಿಗೆ 1ಚಂದ್ರಶೇಖರಸುಕುಮಾರಗೆ ಮಾರನಸುಂದರರೂಪ ಪ್ರತಾಪನಿಗೆನಿಂದಿತ ಖಲಜನವೃಂದವಿದಾರಗೆಸ್ಕಂದರಾಜ ಕೃಪಾಸಿಂಧು ಪಾವನಗೆ 2ತಾರಕದೈತ್ಯಸಂಹಾರಗೆ ಧೀರಗೆಶೂರಪದ್ಮಾಸುರನ ಗೆಲಿದವಗೆಸೇರಿದ ಭಕ್ತರ ಸುರಮಂದಾರಗೆನಾರದಾದಿ ಮುನಿವಾರವಂದಿತಗೆ 3ವಲ್ಲೀವಲ್ಲಭನಿಗೆ ಒಲಿದರ್ಗೆ ವರದಗೆಎಲ್ಲ ಭೂತಾಶ್ರಯ ಬಲ್ಲವಗೆಖುಲ್ಲದಾನವರಣಮಲ್ಲ ಮಹೇಶಗೆಬಿಲ್ಲುವಿದ್ಯಾಧೀಶ ಭೀಮವಿಕ್ರಮಗೆ 4ಕಂಜಾಕ್ಷ ಲಕ್ಷ್ಮೀನಾರಾಯಣ ತೇಜಗೆಮಂಜುಳಕಾಂತಿ ವಿರಾಜನಿಗೆನಂಜುಂಡನ ಕರಪಂಜರಕೀರ ಪಾ-ವಂಜೆ ಕ್ಷೇತ್ರಾದಿವಾಸ ಸುರೇಶನಿಗೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಂಗಲಂ ಮಂಗಲಂ ಭವತು ತೇಮಂಗಲಂ ಮಂಗಲಂ ಪ.ಅಂಗಜರೂಪಗೆ ಅಖಿಲ ಲೋಕೇಶಗೆಶೃಂಗಾರಮೂರ್ತಿಗೆ ಶ್ರೀಕಾಂತಗೆಸಂಗೀತ ಲೋಲಗೆ ಸಾಮಜವರದಗೆಬಂಗಾರಗಿರಿವಾಸ ಭವಭವ ಹರಗೆ 1ಕೃತ್ರಿಮ ರಕ್ಕಸ ಮೊತ್ತ ಸಂಹರಗೆಭಕ್ತರ ಹೃದಯದಿ ಬೆಳಗುವಗೆಸತ್ಯಾತ್ಮಕನಿಗೆ ಸತ್ಯನೇತ್ರನಿಗೆಚಿತ್ತಜಪಿತ ಚಿನುಮಯ ಮೂರ್ತಿಗೆ 2ಉತ್ತಮ ಗೌಡಸಾರಸ್ವತ ವಿಪ್ರರಿಂನಿತ್ಯಪೂಜೆಯಗೊಂಬ ನೀಲಾಂಗಗೆಛತ್ರಾಖ್ಯಪಟ್ಟಣಮಸ್ತಕಮಕುಟಗೆಕರ್ತಲಕ್ಷ್ಮೀನಾರಾಯಣ ಗುಣಾಂಬುಧಿಗೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಕಲವೆಲ್ಲವು ಹರಿಸೇವೆಯೆನ್ನಿರುಕುಮಿಣಿಯ ರಮನ ವಿಠಲನಲ್ಲದಿಲ್ಲವೆನ್ನಿ ಪ.ನುಡಿಗಳೆಲ್ಲವು ನಾರಾಯಣನ ಕೀರ್ತನೆಯೆನ್ನಿನಡೆವುದೆಲ್ಲವು ಹರಿಯಾತ್ರೆಯೆನ್ನಿ ||ಕೊಡುವುದೆಲ್ಲವು ಕಾಮಜನಕಗರ್ಪಿತವೆನ್ನಿಎಡೆಯ ಅನ್ನವು ಶ್ರೀ ಹರಿಯ ಪ್ರಸಾದವೆನ್ನಿ 1ಹೊಸವಸ್ತ್ರ ಉಡುವಲ್ಲಿ ಹರಿಯ ಬೆಳ್ಳುಡೆಯೆನ್ನಿಕುಸುಮ ಪರಿಮಳವು ಕಂಜನಾಭಗೆನ್ನಿ ||ಎಸೆವಾಭರಣವು ಯಶೋಧೆನಂದನಗೆನ್ನಿಶಶಿಮುಖಿಯರ ಕೂಟ ಸೊಬಗು ಗೋವಳಗೆನ್ನಿ 2ಆಟಪಾಟಗಳೆಲ್ಲ ಅಂತರ್ಯಾಮಿಗೆಯೆನ್ನಿನೋಟ ಬೇಟಗಳೆಲ್ಲ ನಾಟಕಧಾರಿಗೆನ್ನಿ ||ನೀಟಾದ ವಸ್ತುಗಳೆಲ್ಲ ಕೈಟಭ ಮರ್ದನಗೆನ್ನಿಕೋಟಲೆ ಸಂಸಾರ ಕಪಟನಾಟಕಗೆನ್ನಿ 3ನಿದ್ರೆ ಜಾಗರವು ಸಮುದ್ರಶಯನಗೆನ್ನಿಭದ್ರಗಜನಿಧಿ ವರದಗೆನ್ನಿರೌದ್ರದಾರಿದ್ರವು ರಾಘವನ ಮಾಯೆಯೆನ್ನಿ ಶ್ರೀಮುದ್ರೆ ಧರಿಸಿದವ ಹರಿದಾಸನೆನ್ನಿ 4ಅಣುರೇಣು ತೃಣಕಾಷ್ಠ ಪರಿಪೂರ್ಣನಹುದೆನ್ನಿಎಣಿಸಬಾರದನಂತ ಮಹಿಮನೆನ್ನಿಸೆಣಸುವ ರಕ್ಕಸರ ಶಿರವ ಚಂಡಾಡುವಪ್ರಣವಗೋಚರ ಪುರಂದರವಿಠಲರಾಯನೆನ್ನಿ 5
--------------
ಪುರಂದರದಾಸರು