ಒಟ್ಟು 377 ಕಡೆಗಳಲ್ಲಿ , 84 ದಾಸರು , 338 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶ್ರೀ ವೇದವ್ಯಾಸರನ್ನು ನೆನೆದು) ವ್ಯಾಸರೂಪಿಯಾದ ಶ್ರೀನಿವಾಸನ ನಂಬಿ ಪ. ದ್ವಾಪರಾಂತದಿ ದೈತ್ಯಜನರ ಪ್ರತಾಪದಿಂದಲಿ ಜ್ಞಾನತತ್ವ ಪ್ರ- ದೀಪ ಮಾಲಿನ್ಯವನು ಪೊಂದಿರಲು ಕ್ಷೀರಾಬ್ಧಿ ತಡಿಯಲಿ ಅಜ ಬಂದು ಸ್ತುತಿಸಲು ತಾಪ ಶಮಿಸುವೆನೆಂಬಭಯವಿತ್ತಾಪರಾಶಗೊಲಿದು ಕರುಣಿಸಿ ಕೃಪಾಪಯೋನಿಧಿರೂಪ ತೋರಿದ 1 ಮಹಾಭಾರತಾಮೃತ ಸಹಿತ ವಿರಚಿಸಿ ತೋರ್ಪಂತೆ ಬಹು ಗಂ- ಭೀರ ಸಾರವನಿಟ್ಟು ಪರಿಜನವಾ ತತ್ವೋಕ್ತಿಯಿಂದ ಪ- ರೋರು ಭಾವವ ತಿಳಿಸಿ ದೈತ್ಯರ ಗಾರಗೊಳಿಸುತ ಅನವರತ ಸಂ- ಸಾರ ಚಕ್ರದಿ ತಿರುಗುವವರ ವಿಚಾರ ಭ್ರಮೆಗೊಂಬಂತೆ ತಿಳಿಸಿದ 2 ಶುದ್ಧ ಸಾತ್ವಿಕರಾದ ಜೀವರನುದ್ಧರಿಸಬೇಕೆಂದು ಶ್ರುತಿಗಣ ಬದ್ಧ ಸೂತ್ರವ ನಿರ್ಮಿಸುತ್ತದನು ಸಿದ್ಧಾಂತ ಮಾಡಲು ಮಧ್ವಮುನಿವರಗಿತ್ತು ನಿಯಮವನು ನಿರ್ನೈಸಿ ತಿಳಿಸುತ ಪಾತಾಳಕೆ ಸುರೋತ್ತಮ ಸಿದ್ಧ ಸೇವಿತ ಶೇಷಗಿರಿಯೊಳಗಿದ್ದು ಭಜಕರನುದ್ಧರಿಸುತಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಅತ್ತೆಯಣುಗನು ಮತ್ತೆ ಸತ್ಯಾತ್ಮನಿವನೆನುತೆ ಚಿತ್ತದೊಳು ನೆರೆನಂಬಿ ಪತ್ನಿಯಾದೆ ಪಲಜನರನೆರೆಬೇಡಿ ಪಲಜನರನುರೆ [ವಧು]ಕಾಡಿ ಪಲಸತಿಯರ ಕೂಡಿದಿವನಗಾಡಿ ಅರಿತು ಪೇಳುವರುಂಟೆ ಸರಸಿಯಿವನೆಂದೆನುತೆ ನೆರೆದು ಜೀವಿಪರುಂಟೆ ಅರರೆ ತಂಟಿ ಮೋಸಗಾರರೊಳಗಗ್ರೇಸರನು ಈ ವರನು ವಾಸುದೇವನು ಬಂಧುದ್ವೇಷಿಯಿವನು ಸ್ತ್ರೀಯರನದಾವಗಮನದೆನಿತೊ ಜರೆವ ಮಾಯೆಯಿಂದವರೊಡನೆ ಕೂಡಿಮೆರೆವ ಬಾಯೊಳಗೆ ಸುಬ್ರಹ್ಮಜ್ಞಾನ ಮೊರೆವ ಜೀಯ ಶೇಷಗಿರೀಶತಾನೆಂದು ನಲಿವ
--------------
ನಂಜನಗೂಡು ತಿರುಮಲಾಂಬಾ
ಅಂದೇನಿಂದೆನುತಾ ಪ ಒಂದು ಮನದಿ ನಿಂದು ನಂಬ ಬಲ್ಲಡೆ ಸಾಕು|ತನ್ನ| ಹೊಂದಿದವರ ಕಾವಾ ಇಂದಿರೇಯರಸನು ಅ.ಪ. ಸಗರ ಕಾರ್ತೀಕನು ಭಗೀರಥ ಮೊದಲಾದಾ| ಸುಗುಣ ರಾಯರನುಧ್ಧರಿಸಿಹ| ಜಗದೊಳೀ ಪಾಮರ ಲೋಕದ ಕುಂದವ| ಬಗೆಯದೇಪಾವನ ಮಾಡುವ ಗಂಗೆಗೆ 1 ರನ್ನಗಣಕು ಪರೀಕ್ಷೆ ಮುಖ್ಯರಾಗಿಹ| ಮನ್ನೆಣೆಯವರನು ಎಚ್ಚರಿಸಿ| ಮುನ್ನಿನ ಬೋಧಧಿ ಭಾವಿಕ ಸಾಧಕ| ರನ್ನು ತಾರಿಸುವ ಸತ್ಸಂಗ ಮಹಿಮೆಗೆ 2 ಹಿಂದಿನ ಶರಣರ ಸಲಹಿದ ದೇವರಿ| ಗಿಂದೇನು ಮಹಿಮೆಗೆ ಬಲ್ಲವಿಲ್ಲದೇ| ತಂದೆ ಮಹಿಪತಿ ಸ್ವಾಮಿಯ ನಾಮವ| ಛಂದದಿ ನೆನೆಯುತ ಇಹಪರ ಪಡೆವುದಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಧ್ಯಾಯ ಒಂದು ಜಯ ವಿಬುಧನುತರ ಚರಣ ಜಯತು ನಾಗಾಭರಣ ಜಯ ಭಕ್ತ ಜನ ಶರಣ ಜಯ ದುಃಖಹರಣ 1 ಜಯತು ಖಳಕೃತಕದನ ಜಯಜಯತು ಜಿತಮದನ ಜಯ ಜಯತು ಸುಖಸದನ ಜಯ ಪಂಚವದನ2 ಜಯತು ಶ್ರೀಶಕೈಲಾಸ ಜಯ ಭಜಕವಿಶ್ವಾಸ ಜಯ ಅನಂತಾದ್ರೀಶ ಪ್ರಿಯಪಾರ್ವತೀಶ 3 ಪದ ಮುಂಚೆ ನುತಿಸುವೆ ಭಕುತಿಯಿಂದಲಿ ಪಂಚವದನನ ಪಾದಪಂಕಜ ಚಂಚಲಾಗದಲಿರಲಿ ಮನ ಮತಿ ಮುಂಚೆ ಕೊಡುಯೆಂದು ಹಿಂಚೆ ಕುಲ ದೇವಾದಿ ಪದಯುಗ ವಂಚನೆಯು ಇಲ್ಲದಲೆ ನುತಿಸುವೆ ಹಂಚಿಕಿಂದಲಿ ಕುಶಲಬುದ್ಧಿ ಪ್ರಪಂಚ ಕೊಡುಯೆಂದು 1 ಮನಸಿಜನ ಗೆದ್ದವರು ಮೇದಿನಿಯ ಹುಡಿಕಿದರಿಲ್ಲಾ ಮತ್ತೀಮನಸು ಗೆದ್ದವರುಂಟೆಯೆಲ್ಲರಿ ಗನುಭವಾಗಿಹುದು ಮನಸಿಜನ ಗೆದ್ದಂಥ ರುದ್ರನು ಮನಕೆ ತಾ ಅಭಿಮಾನಯಾಗಿಹ ನೆನುತ ಮೊದಲಾತನನ ನುತಿಸಿದೆ ಮನಸಿನೊಳಗಿಟ್ಟು 2 ಸಾರಲಿಂಗ ಪುರಾಣದರ್ಥದ ಸಾರಿ ತಿಳುವುತ ಮತ್ತೆ ಗ್ರಂಥ ವಿ ಚಾರ ಮಾಡುತ ಅದರ ಅರ್ಥವ ಪೂರ್ಣ ತಿಳಕೊಂಡು 'ಶ್ರೀರತಾನಂತಾದ್ರಿ' ರಮಣನ ಸಾರ ಕೃಪೆಯಿಂದಲೆಯೆ ಪೇಳುವೆ ಪಾರ್ವತೀಶಗೆ ಪ್ರೀತಿಕರ ಶಿವ ಪಾರಿಜಾತವನು 3 ಪದ ಪೂರ್ವದಲ್ಲಿ ಪಾರ್ವತಿಯು ಪರ್ವತಶ್ರೇಷ್ಠ ಹಿಮ ಪರ್ವತದ ಮಧ್ಯದಲ್ಲಿ ಸರ್ವಗುರು ಕೈಲಾಸ ಪಾರ್ವತೀಶನ ಮನ:ಪೂರ್ವಕದಿ ಬಯಸುತಲ ಪೂರ್ವ ತಪ ಮಾಡುತಿರುವಳಲ್ಲೆ ಪಾರ್ವತಿಯ ಕಷ್ಟ ಹಿಮಪರ್ವತನು ತಾ ನೋಡಿ ಸರ್ವ ಕಾರ್ಯವ ಬಿಟ್ಟು ಇರುವ ಬಲು ಚಿಂತೆಯಲಿ ಸರ್ವಸಂಪನ್ನಳಾಗಿರುವಳೆನ್ನ ಮಗಳು ಈ ಪಾರ್ವತಿಗೆ ತಕ್ಕ ವರನಿರುವನಾರೆಂದು 1 ಬಂದನಾಗಲ್ಲವನ ಮಂದಿರಕೆ ನಾರದನು ಮುಂದೆ ಗಿರಿರಾಜ ಅಲ್ಲಿಂದ ಆತನಕಂಡು ಇಂದು ಇಲ್ಲಿಗೆ ನೀವು ಬಂದು ಕಾರಣವೇನುಯೆಂದು ಕೇಳಿದನು ಅಂದ ಮಾತನ್ನು ಕೇಳಿ ಮುಂದೆ ಮುನಿರಾಜ ತಾ ಮಂದಹಾಸದಿ ನಗುತವೊಂದೊಂದು ಕಥೆ ಪೇಳಿ ಛಂದದಲಿ ಮನಸಿಗಾನಂದ ಬಡಿಸುತ ನುಡಿದ ಬಂದ ಕಾರ್ಯವ ಅವನ ಮುಂದೆ ವಿಸ್ತರದಿ 2 ಪದ ತಿಳಿಯೋ ನೀ ಗಿರಿರಾಜ ನಾ ಬಂದ ಕಾರ್ಯವ ತಿಳಿಯೋ ನೀ ಗಿರಿರಾಜ ಭೋರಾಜರಾಜಾ ತಿಳಿಯೋ ನಿನಗೊಬ್ಬಳಿಯ ಬಂದಿಹ ನಳಿಯನಾಗಿ ಮುಖಕಳೆಯು ಉಳ್ಳವ ಇಳೆಯೊಳಿಂಥಾ ಅಳಿಯನ ಸಮ ಅಳಿಯನಿಲ್ಲ ಕಾಲ್ಗಳೆಯುದಲೆ ಇರು ಪ ಹರಿಯಿರುವ ಪ್ರಖ್ಯಾತಾ ಸರ್ವರಿಗೆ ಆತನೆ ದೊರೆಯೆನಿಸಿಕೊಂಬಾತಾ ಕರಿರಾಜ ಕೂಗುತ ಕರೆಯಲೊದಗಿದನಾತಾ ತನ್ನ ಸ್ಮರಿಸಿದವರನು ಮರೆಯದಲೆ ಪೊರೆವಾತಾ ಅನಾಥಾನಾಥ ಧರೆಯೊಳಗೆ ಶ್ರೀಹರಿಯ ಮೂರ್ತಿಯ ಸರಿಯುಯಿಲ್ಲವು ಮರೆಯದಲೆ ಆ ಸಿರಿಯ ರಮಣನ ಕರೆಯ ಕಳಿಸುತ ಹಿರಿಯ ಮಗಳನು ಹರಿಗೆ ಅರ್ಪಿಸು1 ಬಡವನಲ್ಲವು ಆತಾ ಬಹುಬಡವ ಭಕ್ತರ ದೃಢವ ನೋಡುವನಾತಾ ತಾ ಬಿಡದೆ ಕರವನು ಪಿಡಿವ ಸ್ನೇಹ ಸಮೇತಾ ಬೇಡಿದ್ದು ತ್ವರದಲಿ ಕೊಡುವನವ ಬಹು ದಾತಾ ಲಕ್ಷ್ಮಿಯಸತ್ತಾ ದೃಢವಿರಲಿ ಮನ ಪೊಡವಿರಲಿ ಉಂಬುಡುವ ಮಗಳನು ತಡವು ಮಾಡದೆ2 ಕೊಡುವದುಚಿತವು ಒಡವೆಗಳು ಬಹಳಿಡುವುತಲೆ ಸುಖಪಡುವಳಾಕೆಯು ಎಂಥವನು ಅವ ತಾನು ಎಂಬಂಥ ಮನಸಿನ ಭ್ರಾಂತಿ ಬಿಡು ಎಲೋ ನೀನು ಅತ್ಯಂತವಾಗಿಹ ಶಾಂತ ಮೂರುತಿ ತಾನು ಎಂತೆಂಥವರಿಗವ ನಂತ ತಿಳಿಯದು ಇನ್ನು ಮತ್ಹೇಳಲೇನು ಇಂಥ ಶ್ರೀಮದನಂತಾದ್ರೀಶನು ಕಾಂತಿಯಿಂದಿರುವಂಥ ಮಗಳಿಗೆ ನಿಶ್ಚಿಂತೆಯಿಂದಿರು 3 ಪದ ಮುನಿಯ ಮಾತನು ಕೇಳಿ ಮನಸಿನೊಳು ಹಿಗ್ಗುತಲೆ ಮನದ ಚಿಂತೆಯ ಬಿಟ್ಟು ಮನಸಿಜಪಿತನು ಎನ್ನ ಮನಿ ಅಳಿಯನಾದ ಎನ್ನ ಜನುಮ ಸಾರ್ಥಕವಾಯಿ ತೆನುತ ತಿಳಿದನು ತಾನು ಘನ ಹಿಮಾಚಲನು ಅನುದಿನವು ತನ್ನಲ್ಲಿ ಅನು ಕೂಲವಾಗುತಲೆ ತನಗೆ ಹಿತಮಾಡುತಿಹ ಜನರೊಳಗೆ ಮ- ತ್ತಾಪ್ತ ಜನರನ್ನು ಕೇಳದಲೆ ಅನುಮಾನ ಬಿಟ್ಟು ಹೀಗೆನುತ ಮಾತಾಡಿದನು ಮುನಿಯ ಮುಂದೆ ಪದ ಕೊಡುವೆನು ಆ ವಿಷ್ಣುವಿಗೆ ಮಗಳನ್ನು ಕೊಡುವೆನು ಕೊಡುವೆನು ಸಂತೋಷ ಬಡುವೆನಾತನ ಪಾದಾ ಹಿಡಿವೆನು ಚಿಂತೆಯ ಬಿಡುವೆನು ಮಗಳನ್ನು ಪ ನಾರದ ನಿನಮಾತು ಇನ್ನು ಸರಿ ಬಾರದು ಆರಿಗೆ ಮುನ್ನ ನೀರದ ವರ್ಣನ ತೋರಿದ ಬುದ್ಧಿ ವಿ ಶಾರದ ನಿನ್ನ ಮಾತು ಮೀರದೆ ಮಗಳನ್ನು ಕೊ....1 ನಿನ್ನ ಮಹಿಮೆ ಬಲ್ಲೆ ನಾಲ್ಕುಲೋಕ ಮಾನ್ಯರಿಗತಿಮಾನ್ಯ ನೀನು ನಿನ್ನ ಚಿತ್ತಕೆ ಬಂದರಿನ್ನೇಕೆ ತಡಬಹು ಚೆನ್ನಾತ ಆತಗೆ ಮನ್ನಿಸಿ ಮಗಳನ್ನು ಕೊ....... 2 ಭಾಷೆಯು ಅದು ಸುಳ್ಳಲ್ಲ ಲೇಸಾಗಿ ನಾನಿನ್ನ ಭಾಷೆಗೆ ಮೆಚ್ಚಿ ಉಲ್ಲಾಸದಿ `ಅನಂತಾದ್ರೀಶಗೆ ' ಮಗಳನ್ನು ಕೊಡುವೆನು3 ಪದ ಬ್ರಹ್ಮಪುತ್ರ ಕೇಳಿ ಸಂಭ್ರಮ ಬಡವುತ ನಮ್ಮ ಕಾರ್ಯ ಆಯಿತೆಂದು ಸುಮ್ಮನಿರುವುತ 1 ಒಮ್ಮಿಂದೊಮ್ಮೆಲೆದ್ದು ಮತ್ತೊಮ್ಮೆ ಹೇಳುತ ರಮಿಸದಲೆ ನಡೆದ ತನ್ನ ಜಿವ್ಹೆ ತೋರುತ 2 ಹೋಳು ತಂಬೂರಿ ತಂತಿಗಳನು ಮೀಟುತ ಚೆಲುವ ಮುನಿಯ ನಡೆದ ಬಾಗಿಲವ ದಾಟುತ 3 ಚೆಂದವಾಗಾನಂದ ಭಾರದಿಂದ ಮಣಿವುತ ಮುದೆ ಪಾರ್ವತಿಯ ಬಳಿಗೆ ಬಂದು ಕುಣಿಯುತ 4 ಮುನ್ನ ನುಡಿದ ಮದುವೆಯ ಸುದ್ದಿಯನು ನಗವುತ ಚೆನ್ನಿಗ`ನಂತಾದ್ರೀಶ'ನನ್ನು ಸ್ಮರಿಸುತ 5 ಪದ ಕೇಳಮ್ಮ ಹೊಸಸುದ್ದಿ ಪಾರ್ವತಿ ನಿನಗೆ ಹೇಳಬಂದೆನು ಎನಗಿದು ಪ್ರೀತಿಪ ಪಂಕಜನಾಭ ಬರುವನಂತೆ ನಿನ್ನ ಕಂಕಣಕಯ್ಯ ಪಿಡಿವನಂತೆ ಪಂಕಜಮುಖಿಯೆ ನಿಶ್ಚಯವಂತೆ ನಿ ಶ್ಯಂಕೆಯಿಂದಿರು ಯಾತಕೆ ಚಿಂತೆ 1 ನಕ್ಕು ಆಡುವನಲ್ಲವು ನಾನು ಎ ನ್ನಕ್ಕಯ್ಯ ನಿನಗೆ ಹಿತ ಪೇಳುವೆನು ಮಿಕ್ಕ ಮಾತುಗಳಿಂದ ಫಲವೇನು ನಿನ್ನ ತಕ್ಕ ಪುರುಷ ಅವ ತಿಳಿ ನೀನು 2 ಶ್ರೀಮದನಾಂತಾದ್ರಿವಾಸಗೆ ನಿನ್ನ ನೇಮಿಸಿದ ಹಿಮವಂತನು ಈಗ ಕೋಮಲಾಂಗಿಯೇ ಎನ್ನ ಮನಸಿಗೆ ಬಂತು ಈ ಮಾತು ಸತ್ಯವಾಗಲಿ ಬೇಗ 3 ಪದ ಪರಿ ಸುದ್ದಿಯುಂಟೆಂದು ಪೇಳುತಲೆ ಟಣ್‍ಟಣನೆ ಜಿಗಿವುತು ತ್ಕಂಠzಲ್ಲಿ ಅಲ್ಲಿಂದ ಹೊರಟು ಮುನಿಬಂದು ವೈ ಕುಂಠದಲಿ ತಾ ನುಡಿದ ಉಂಟಾದ ಸುದ್ದಿ ವೈಕುಂಠಪತಿಗೆ ಎಂಟೆಂಟು ಕಳೆಯಿಂದ ಉಂಟಾದ ಪಾರ್ವತಿಯ ಗಂಟು ಹಾಕಿದೆಯೆನಲು ತಂಟಕನೋ ನೀ ಕಲಹಗಂಟಕನೋ ಸರಿಯಿನ್ನು ಭಂಟನಹುದೆಂದು ವೈಕುಂಠಪತಿನಕ್ಕ 1 ನಾರದನ ಮಾತು ಸರಿಬಾರದೆ ಪಾರ್ವತಿಯು ತೀರದಂಥಾ ದು:ಖವಾರಿಧಿಯಲಿ ಮುಳುಗಿ ಸಾರಿದಳು ತನ್ನೊಳಗೆ ಘೋರಾದ ಚಿಂತೆ ಬಂತಾರಿದನು ಬಿಡಿಸುವರು ತೋರದೆನಗೆ ತೋರದಿರಬೇಕು ನಾ ದೂರದಲಿ ಇಲ್ಲೆ ಇರಬಾರದೆಂತೆಂದು ಸುಖ ತೋರದಲೆ ತನ್ನ ಮಾತು ಮೀರದಲೆ ಇರುವ ಸುವಿ ಶಾರದಳು ಸಖಿಯೊಡನೆ ಘೋರಾದರಣ್ಯವನು ಸೇರಿದಳು ತಾನು ಮುಂದೆ ಮತ್ತಾಕೆಯ ಮುಂದೆ ಮಾತಾಡದಲೆ ನೊಂದು ತನ್ನೊಳಗೆ ತಾ ತಂದು ಆ ವನದಲ್ಲಿ ಮುಂದೇನು ಮಾಡಲೆಂತೆಂದು ತಿಳಿಯದೆ ಮರುಗಿ ಮಂದಗಮನೆಯು ಚಿಂತೆಯಿಂದ ಮಲಗಿದಳು ಮುಂದೆ ಆ ಸಖಿ ನೋಡಿ ಸಂದೇಹ ಬಡುತ ತ್ವರ ದಿಂದ ಬದಿಯಲಿ ತಾನು ಬಂದು ಹಾ ಇದುಯೇನು ಇಂದು ಮುಖಿ ಹೀಗೆಯೆಂದೆಂದು ಮಲಗುವಳಲ್ಲ ಇಂದೇನು ಬಂತು ಇಂತೆಂದು ಚಿಂತಿಸುತ ಹೀಗೆಂದಳಾಗ 2 ಪದ ಇಲ್ಲೇಕೆ ಮಲಗಿದೆ ಹೇಳಮ್ಮ ನೀ ಇಲ್ಲೇಕೆ ಎಲ್ಲಾನು ಬಿಟ್ಟು ವನದಲ್ಲಿಯೆ ಪಾರ್ವತಿ ಮಂದಿರ ಪ ಬಿಟ್ಟು ಇಲ್ಲಿ ಮಲಗುವರೆ ನಿನಗೆ ಬಂದಿಹದೇನು ಹೇಳದಿರುವರೆ ನಿನ್ನ ತಂದೆ ತಾಯಿಗಳೆಷ್ಟು ಮರಗುವರೆ ಇಂದು ಮುಖಿಯಳೆ ಯಾರೇನಂದರೇನೆ ಗೆಳತಿ ನಿನಗೆ 1 ನಿನ್ನ ಪ್ರಾಣದ ಸಖಿನಾನಲ್ಲೆ ನಿನ ಗಿನ್ನಾರಿರುವರು ಹಿತವರು ಇಲ್ಲೆ ನಾ ನಿನ್ನ ಕಾರ್ಯವ ಮಾಡುವಳಲ್ಲೆ ಚಿನ್ನದಂಥವಳೆ ನೀ ಘನ್ನಾರಣ್ಯಕೆ ಬಂದು 2 ನಿದ್ರೆ ಬಂದಿಹುದೇನೆ ನಿನಗಿಂದು ಅಥವಾ ಬುದ್ಧಿ ಹೋಯಿತೆ ಮತ್ತೆ ನಿನ್ನದು ಇಂದು ತಿಳಿಯದು ಬುದ್ಧಿವಂತಿಯೆ ಅನಂತಾದ್ರೀಶನಾಣೆ ನಿನಗೆ 3 ಪದ ಇಂದು ಮುಖಿ ಪಾರ್ವ ತಿಯು ಹಿತದಿಂದ ಆಡಿದ ಮಾತು ಒಂದೊಂದು ಸ್ಮರಿಸುತಲೆ ಛಂದಾಗಿ ಮನಸಿಗೆ ತಂದು ನೋಡಿದಳು ಇಂದು ಯೆನ್ನ ಭಾಗ್ಯಕ್ಕೆ ತಂದೆ ತಾಯಿಗಳಿಲ್ಲ ಬಂಧು ಬಾಂಧವರಿನ್ನು ಮುಂದೆಲ್ಲಿ ಬರುವವರು ಸಂದೇಹವೇಕೆ ಸಖಿ ಯಿಂದಧಿಕ ಮತ್ತಿಲ್ಲ ವೆಂದು ದು:ಖವ ಸಖಿಯ ಮುಂದ ಹೇಳಿದಳು 1 ಪದ ಏನು ಹೇಳಲಿಸಖಿ ಇನ್ನೇನು ಹೇಳಲಿ ನಾನು ಖೂನದಿ ತಂದೆಯು ಹರಿಗೆಯೆನ್ನನು ನೇಮಿಸಿದಾ ಪ ಮೃತ್ಯುಂಜಯ ಮೃಡನೆ ಎನ್ನ ಚಿತ್ತಕೊಪ್ಪುವ ಪತಿಯು ಸತ್ಯದಿ ಆಗಲಿಯೆಂದು ಚಿತ್ತದಿ ಬಯಸುತಲೆ ನಿತ್ಯದಿ ಬಹುದಿನ ಬಿಡದಲೆ ಅರ್ಥಿಲೆ ಮಾಡಿರುವಂಥ ಪಾರ್ಥೇಶ್ವರನಾ ಪೂಜೆಯು ವ್ಯರ್ಥಾಯಿತಲ್ಲೆ 1 ನಾರದ ಮುನಿಯಿ ಮಾತು ಸಾರಿದ ನನ್ನಲಿ ಬರಿದು ಬಾರದೆನ್ನ ಮನಸಿಗೆ ಅದು ತಾರದೆ ನಾ ಬಂದೆ ಮೀರಿದ ಕೆಲಸವು ತೀರಲಾರದು ಅದು ಎಂದು ಸೇರಿದೆ ವನವನು ನಾಕಾಲೂರದೆ ಮನೆಯಲ್ಲೆ2 ಹೃದ್ರೋಗದಿ ಬಳಲುವಳಿಗೆ ನಿದ್ರೆಯೆಂಬುವದೆಲ್ಲೆ ಭದ್ರಾಂಗಿಯು ಸತಿ ನಾನು ಉದ್ರೇಕದಿ ಮೈಮರೆತು, ಹಿಮಾದ್ರಿಯು ಎನ್ನನು ಕೈಲಾ ಸಾದ್ರೀಶನ ಬಿಟ್ಟು ಅನಂತಾದ್ರೀಶಗೆ ಕೊಡುವ3 ಪದ ಪರಿ ಮಾತುನು ಕೇಳಿ ಆ ಪ್ರಾಣದ ಸಖಿ ತಾನು ಪರಿ ಮಾತಾಡಿದಳು ಆ ಪಾರ್ವತಿಯ ಮುಂದೆ ಏ ಪಾರ್ವತಿಯೇ ಬಿಡುಸಂತಾಪವ ನಿನಗೊಂದು ಹೇಳುವೆ ಆ ಪಿತಗರಿಯದೆ ನಡೆ ನೀ ತಾಪಸವನದಲ್ಲೆ 1 ಈ ರೀತಿಯ ನುಡಿ ಕೇಳಿ ಹಾರೈಸುತ ಸಖಿಕೂಡಿ ಪಾರ್ವತಿ ತಾ ನಡೆದಳು ಘೋರಾರಣ್ಯದಲಿ ಇರ್ವಳು ಆಳುPದೆÀಲಿಂಗಾಕಾರವು ಪೂಜಿಸುತಲ್ಲೆ ಚಾರ್ವಾಂಗಿಯು ತಾ ನಿದ್ರಾಹಾರವು ಇಲ್ಲದಲೆ2 ದೀನೋದ್ಧಾರಕ ಶಿವನು ತಾನೆ ಅಲ್ಲಿಗೆ ಬಂದು ಏನು ಬೇಡುವೆ ಪಾರ್ವತಿ ನೀನು ಬೇಡೆಂದ ಏನು ಧೇನಿಸುವೇ ಬಿಡು ಮಾನಿನಿಯೆ ಭಕ್ತಾ ಧೀ ನಾನಂತಾದ್ರೀಶನ ಆಣೆ ನಿನಗುಂಟು 3 ಪದ ಹರನ ಮಾತನು ಕೇಳಿ ಹರಿಣಾಕ್ಷಿ ಪಾರ್ವತಿಯು ತ್ವರದಿಂದ ಎದ್ದು ಪರಮ ನಾಚಿಕೆಯಿಂದ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ನಾಲ್ಕು ಮೃಗಯಾಯೈ ಹಯಾರೂಢಂ ಗಹನೆ ಹಸ್ತಿನಾಹೃತಂ ಪದ್ಮಾವತೀ ಕಟಾಕ್ಷೇಷು ತಾಡಿತಂ ನËಮಿ ಶ್ರೀಪತಂ ವಚನ ಅಂದಿಗಾವೇಂಕಟನು ಇಂದು ಪೋಗಲಿಬೇಕೆಂದು ಸ್ಮರಿಸಿದ ಆ ಕ್ಷಣದಿ ಚೆಂದಾದ ಮೈ ಬಣ್ಣದಿಂದ ಇರುವುದು ಸ್ವರ್ಣ ಬಿಂದುಗಳು ಅಲ್ಲಲ್ಲೆ ಮೇಲ್ಗರಿಯಂ ಒಂದೊಂದು ಚಂದದರÀಳಲೆಯು ದೂರದಿಂದ ಹೊಳೆಯುವುದು 1 ಮತ್ತೆ ಸರಗಳನೆಲ್ಲ ಮತ್ತೆ ಪರಿಮಿತಿಯಿಲ್ಲ ಉತ್ತಮಾಶ್ವವ ತಾನು ಮತ್ತೆ ಮೇಲೆ ಸುತ್ತಿದನು ಕೌಸ್ತುಭ ಶಕ್ತವಸ್ತ್ರಾ2 ಊಧ್ರ್ವಪುಂಡ್ರಾಂಕಿತನು ಆಗಿ ಅಕಳಂಕಕೇಸರ ಕುಂಕುಮಾಂಕಿತ ಶ್ರೀಗಂಧ ಪೊಂಕದಲ್ಲಿ ಪಂಕಜಗಳಿಗೆ ಟೊಂಕದಲಿ ಏಲೆ ಅಡಿಕೆಸಣ್ಣ ಕೊಂಕು ಇಲ್ಲದ ಕನ್ನಡಿ ಕಟ್ಟಿದನು ವಸ್ತ್ರಾದಿಂದÀ 3 ಕಂಠದಲಿ ಇಟ್ಟು ಜರತಾರಿ ಒಂಟಿ ಚಾದರವನ್ನು ಕಂಠದಲಿ ಚಲ್ಲರಿಪುಕಂಟ- ಕಾಗಿರುವಂಥ ಒಂಟಿ ಬಂಟನಾಗಿ ಅಂಟರಾ ಬಿಗಿದು ನೂರೆಂಟು ವೈಕುಂಠನಾಥನು ಎಂಬ ಬಂಟನ ಕುದುರೆ ಹೊರಗ್ಹೊಂಟಿತಾಗ 4 ವೇಂಕಟನು ವನದಲ್ಲಿ ಘನವಾದ ಮದ್ದಾನೆಯನು ಹತ್ತಿ ನಡೆದ ವನಜ ಓಡುತ್ತ ಮುಂದೆ ಸಮ್ಮುಖವಾಗಿ ವಿನಯದಿಂದಲಿ ಸೊಂಡೆಯನು ಮೇಲೆತ್ತಿ ಗರ್ಜನವ ಮಾಡುತಲೆ 5 ಕಂಡು ಗಡಬಡಿಸಿದರು ಮುಗ್ಗುತಲೆ ಒಡಗೂಡಿ ಅಡಗಿದರು ಬೇಗ ದೃಢಭಕ್ತಿ ನಡೆದು ಅಲ್ಲಿಂದ ಹಣಹಣಿಕೆ ನೋಡ್ಯಡಗಿದರು ನಡೆಸಿದನು ಕುದರೆ 6 ಒದರಿದಳು ಅಮ್ಮಯ್ಯ ಏರಿ ನಮ್ಮೆದುರಿಗೆ ಚದುರನಾಗಿ ಮಧುರ ಹೆದರೆ ಬೇಡಿರಿ ನೀವು ಚದುರ ವೃತ್ತಾಂತವನು ಕೆದರಿ ಕೇಳಿರಿ ಅವನ ಇದರಿಗ್ಹೋಗಿ 7 ಬಂದು ಪುರುಷನ ನೋಡಿ ಇಂದು ಇಲ್ಲಿಗೆ ನೀನು ಬಂದ ಗಮನ ತಂದೆತಾಯಿಗಳ್ಯಾರು ಬಂಧು ಮಂದಿ ಎಲ್ಲರು ಏನೆಂದು ಕರೆವರು ನಿನಗೆ ಚಂದಾಗಿ ಕುಲಗೋತ್ರ ಒಂದು ಬಿಡದಲೆ ನಮ್ಮ ಮುಂದೆ ನೀಪೇಳು 8 ಇಂದು ನಮ್ಮ ಮುಂದೆ ಕೇಳಿರಿ ನಮ್ಮ ಕ್ರಮದಿಂದ ಹೇಳುವೆನು ಬಂಧು ತಾ ಬಲರಾಮ ಇಂದು ಸುಭದ್ರೆಯೆಂದೆನಿಸುವಳು ತಂಗಿ ಸುಂದರಾರ್ಜುನ ನಮ್ಮ ಹೊಂದಿರ್ದ ಬೀಗ 9 ಕೃಷ್ಣ ಪಕ್ಷದಲ್ಲಿ ನಾ ಕರೆವರು ಯೆನಗೆ ಕಿವಿಯಲ್ಲಿ ಇಟ್ಟು ಬಹುಸಂತೋಷ ಪೇಳಿರಿ ಎನಲು ಥಟ್ಟನೆ ನುಡಿದಳು ದಿಟ್ಟಪದ್ಮಾವತಿಯು ಸ್ಪಷ್ಟತಾನೆ 10 ಸುವಿವೇಕದ ವೃತ್ತಾಂತ ಶ್ರೀಕರಾತ್ರಿಯ ಗೋತ್ರ ಧರಣೀ ದೇವಿ ವಸುಧಾನ ತಾ ಖೂನ ಪದ್ಮಾವತಿಯು ನೀ ಕೇಳಿ ಆಕೆಯಮೇಲೆ ಸ್ವಲ್ಪ ಪುತ್ರಿ ತಾ ಕೋಪವನು ಎಂದಳಾ ಕಾಲದಲಿ ಹರಿ ವಿವೇಕದಲಿನುಡಿದ11 ಧ್ವನಿ ರಾಗ :ಶಂಕರಾಭರಣ ಭಿಲಂದಿತಾಳ ಇಷ್ಟು ಎನ್ನ ಮೇಲೆ ಏಕೆ ಸಿಟ್ಟು ಮಾಡುವಿ ಬಟ್ಟ ಕುಚದ ಬಾಲೆ ಬಹಳ ನಿಷ್ಠುರಾಡುವಿ 1 ಧಿಟ್ಟ ಪುರುಷ ನೀನು ನಡತೆಗೆಟ್ಟು ಇರುವರೆ ಖೊಟ್ಟಿ ಕುದುರೆಯೇರಿ ಮೈಯ ಮುಟ್ಟ ಬರುವರೆ 2 ಮೆಚ್ಚಿ ಬಂದೆ ನಿನಗೆ ನಾನು ಹೆಚ್ಚಿನ್ಹೆಂಗಳೆ ಇಚ್ಛೆ ಪೂರ್ಣಮಾಡು ನೀನು ಮಚ್ಚಕಂಗಳೆ 3 ಹೆಚ್ಚು ಕಡಿಮೆ ಆಡದೀರು ಹೆಚ್ಚಿನಾತನೆ ಎಚ್ಚರಿಲ್ಲ ಮೈಯ ಮೇಲೆ ಹುಚ್ಚು ಪುರಷನೆ4 ಏನು ಹೆಚ್ಚು ಕಡಿಮೆ ಆಡಿದೇನು ಅನುಚಿತ ನೀನು ಕನ್ಯಾ ನಾನು ವರನು ಏನು ಅನುಚಿತ 5 ಮೂಢನೀನು ಇಂಥ ಮಾತು ಆಡೋದುಚಿತವೆ ಬೇಡ ಅರಸಗ್ಹೇಳಿ ನಿನಗೆ ಬೇಡಿ ಬಿಗಿಸುವೆ 6 ಮಡದಿ ನಿನ್ನ ಕಡೆಯುಗಣ್ಣು ಕುಡಿಯ ಹುಬ್ಬುಗಳ್ ಕಡಿಯದಂಥ ಬೇಡಿ ಎನಗೆ ಕಡೆಗೆ ಅಲ್ಲವೆ 7 ಇಂದು ಪ್ರಾಣವ ತಂದೆ ಕಂಡರೀಗ ನಿನ್ನ ಕೊಂದು ಹಾಕುವ 8 ಜಾಣೆ ನಿನ್ನ ಬಿಡೆನು ಎನ್ನ ಪ್ರಾಣ ಹೋದರೂ ಪ್ರಾಣದರಸಿ ಎನಿಸು ಪಟ್ಟರಾಣಿಯಾಗಿರು 9 ಇಂದು ವ್ಯರ್ಥವು ಹಂದಿನಾಯಿ ಹದ್ದು ಕಾಗೆ ತಿಂದು ಬಿಡುವವು 10 ಎನ್ನ ಫಣಿಯಲ್ಲಿದ್ದ ಲಿಖಿತ ಮುನ್ನ ತಪ್ಪದು ಚನ್ನವಾಗಿ ನಿನ್ನಕೂಡಿ ಇನ್ನು ಇರುವುದು11 ಸೊಲ್ಲ ಕೇಳಿ ಸಿಟ್ಟಿನಿಂದ ನಿಲ್ಲೋ ಎಂದಳು ಎಲ್ಲ ಗೆಳತೆರಿಂದ ಕೂಡಿಕಲ್ಲು ಒಗೆದಳು 12 ಕಲ್ಲು ತಾಗಿ ಕುದುರೆ ಭೂಮಿಯಲ್ಲಿ ಬಿದ್ದಿತು ಬಲ್ಲಿ ದಾನಂತಾದ್ರೀಶನಲ್ಲಿ ಸ್ಮರಿಸಿತು 13 ವಚನ ಆ ಕುದುರೆಯನು ಆಗುತ ವಿವೇಕದಲಿ ಪರಿ ಆಯಿತೀಕಾಲದಲ್ಲೀ ಲೋಕದಲಿ ಕಾಲಬೀಳದಲೆ ಆಕಾಲ ದಲಿ ಹೊರಟೆ ಆ ಕಾರಣದಿಂದೆನಗೆ ಸಂಕಟವು ಸೋಕಿತಿ ಮಾಡಿದ ಕರ್ಮಫಲ ದೊರೆಯದಿರದು 1 ಗಿರಿಯೇರುತಲೆ ತಾನು ಮೂಕತನದಲಿ ಶೇಷಾಯಿಯಂತೆ ಮುಂದಕೆ ಅನೇಕ ಕರೆದು ಕೊಡುವವನ ಶ್ರೀ ಕರುಣದಿ ಆಯಿತು ನಾಲ್ಕು ಅಧ್ಯಾಯ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಅನಂತ ಅಪರಾಧ ಅನುಗಾಲ ಮಾಡುತಿಹೆ ಪ ಸ್ನಾನ ಸಂದ್ಯಾ ಜಪ ಮೌನವೇ ಮೊದಲಾದ ನಾನಾವಿಧದ ವಿಹಿತ ಧರ್ಮತೊರೆದು ನಾನು ನನ್ನದು ಎಂಬೊ ಹೀನ ಬುದ್ಧಿಗಳಿಂದ ಹೀನ ಜನರೊಡಗೂಡಿ ಙÁ್ಞನಿಗಳ ನಿಂದಿಸುವೆ 1 ಶ್ರೀಕಾಂತ ನಿನ್ನ ಸೇವೆಯನು ಮರೆದು ಬೇಕಾದ ವೈಷಿಕವ ಸ್ವೀಕರಿಸಿ ಲೋಕÀದೊಳು ಸಾಕಿದವರನು ನಾ ನಿರಾಕರಿಸಿ ಬಾಳುವೆನು 2 ಎನಗಿಂತ ಅಧಿಕರಾದವರ ಕೂಡ ದ್ವೇಷವನು ಅನುಗಾಲ ಮಾಡುವೆನೊ ಅನಿಮಿಷೇಶಾ ಎನಗೆ ಸರಿಯಾದವರ ಕಂಡು ಮತ್ಸರಿಸುವೆನು ಎನಗಿಂತ ನೀಚರನು ನಾ ನೋಡಿ ನಗುತಿಪ್ಪೆ 3 ಕಾಸಿನಾಸೆಗೆ ಪೋಗಿ ದಾಸವೇಷವÀ ಧರಿಸಿ ಮೋಸಮಾಡುವೆ ಜನರ ಪಾಶದಿಂದಾ ವಾಸುದೇವನೆ ಸರ್ವದೇಶ ಕಾಲಾದಿಗಳಿ ಗೀಶನೆಂದರಿಯದಲೆ ಮೋಸಹೋದೆನು ಸ್ವಾಮಿ 4 ಸಕಲ ದುರ್ಗುಣಕೆ ಆಗಾರ ನಾನವನಿಯೊಳು ಭಕುತಿ ವೈರಾಗ್ಯ ಪ್ರಸಕುತಿಯಿಲ್ಲಾ ಭಕುತವತ್ಸಲ ಗುರುಜಗನ್ನಾಥವಿಠಲನೆ ಅಕಳಂಕಮಹಿಮನೆ ಮುಕುತಾಮುಕುತರೊಡೆಯಾ 5
--------------
ಗುರುಜಗನ್ನಾಥದಾಸರು
ಅಂಬೆ ಶಿರಿ ವಿಹಾರಾ | ಜಗದಂಬೆ ಶಿರಿ ವಿಹಾರಾ | ಜಯ | ಶ್ರೀ ಬಿಂಬ ಪ್ರಾಣಾದಿ ರೂಪಿ ಬಹುರೂಪಿ ಪ ಜನಿತ ಪಾದ | ಶ್ರೀ ಕುಮದಾಪ್ತ ಕುಲಜ | ಭೋಸುದೀಪ್ತ ಅನಂತ ಅಚಿಂತ್ಯ 5Àುಹಿಮೋಪೇತ ಸುವ್ಯಾಪ್ತಅ.ಪ. ತುಂಬಿದಾಂಗ | ಸಿಂಧುಜೆ ಶಿರಿ ಸು | zs5iÁ | ಪ್ರತಿಬಿಂಬ ನೆನಿಪ | ಜಂಭಾರಿಯಾ | ಪ್ರೇಮಾ | ಸ್ಪದಕಂಬುಧರ ಘನ | ಶ್ಯಾಮಾ ವರ್ಣ ಸ | ನ್ನಾಮಾಜಾಂಬೂನದ | ದಾಮಧರ ಸು | ವೇಷಾ | ದು-ರ್ಗಾಂಬೆ ರಮಣ | ಭಕುತ ಸಂ | ತೋಷಾ | ನೀ-ಲಾಂಬುದಾಭ | ಸತಿರಕ್ಷಕ | ದಯೆ ಭೂಷಾ | ಭೂಮಾಂಬೆ ಸುತನ | ಹರಣ ಹರ ಸು | ವಿಶೇಷಾ | ಶ್ರೀಅಂಬುಜನಾಭ ಗೋವಿಂದ | ಅಂಬೆಯ ಅಗ್ರಜ ಮುಕುಂದನಂಬೀದವರನು ಕಾವ | ಗುರು ಗೋವಿಂದ ವಿಠಲ 1
--------------
ಗುರುಗೋವಿಂದವಿಠಲರು
ಅರಿವರಾರೆಲೋ ನಿನ್ನ ಅಗಮ್ಯ ಚರಿತ ಚರಣದಾಸರ ಪರಮ ಆನಂದಭರಿತ ಪ ದೇವರುಂಟೆಂಬ ಕೆಲವಾಧಾರಪುಟ್ಟಿಸಿದಿ ದೇವರಿಲ್ಲೆಂಬ ಹಲವು ಆಧಾರ ತೋರಿಸಿದಿ ಜೀವಬ್ರಹ್ವೈಕ್ಯೆಂಬುಪಾಯಗಳ ಸ್ಥಾಪಿಸಿದಿ ಆವರೀತಿಗು ಕಾವದೇವ ನಾನೆಂದಿ 1 ಜೀವವೆ ಮಾಯೆಯೆಂದು ಕಾಯವೆ ಕರ್ಮವೆಂದು ಭಾವಿಗಳ ಕೈಯಿಂದ ಬರೆಸಿದೆಯೋ ನಿಂದು ಜೀವಜೀವರಲಿ ಜಡ ಜೀವ ಬೇರೆನಿಸಿದಿ ಜೀವಜೀವರ ಜೀವ ಚೈತನ್ಯರೂಪ 2 ವೇದ ಸುಳ್ಳೆಂಬ್ಹಲವು ವಾದಿಗಳ ನಿರ್ಮಿಸಿದಿ ವೇದ ಅಹುದೆಂಬ ನಿಜವಾದಿಗಳ ಪುಟ್ಟಿಸಿದಿ ನಾದಬ್ರಹ್ಮವುಯೆಂಬ ಹಾದಿ ರಚಿಸಿದಿ ಸರ್ವಸಾಧನಕೆ ಒಲಿದು ಪ್ರಸನ್ನ ನೀನಾದಿ 3 ಬಗೆಬಗೆಯ ವಚನದಿಂ ಬಗೆಬಗೆಯ ನಿಗಮದಿಂ ಬಗೆಬಗೆಯ ರೂಪದಿಂ ನಿಗವಿಟ್ಟು ಸರ್ವರನು ಬಗೆಗೊಂಡು ಬೆಳಗುವೆಯೊ ಜಗಭರಿತನಾಗಿ 4 ಅವಸಾಧನವೊಲ್ಲೆ ಜಾವಜಾವಕೆ ನಿಮ್ಮ ದಿವ್ಯಸ್ಮರಣೆಯ ಎನ್ನ ಭಾವದೊಳು ನಿಲಿಸಿ ದೇವದೇವರ ದೇವ ದೇವ ಶ್ರೀರಾಮ ತವ ಸೇವಕನೆನಿಸೆನ್ನ ಕಾಯೊ ಕೈಪಿಡಿದು 5
--------------
ರಾಮದಾಸರು
ಆಂಜನೇಯನೆ ಅಮರವಂದಿತ ಕಂಜನಾಭನÀ ದೂತನೆ ಪ. ಮಂಜಿನೋಲಗದಂತೆ ಶರಧಿಯ ದಾಂಟಿದ ಮಹಾಧೀರನೆಅ.ಪ. ಆಂಜನೇಯನೆ ನಿನ್ನಗುಣಪರಾಕ್ರಮ ಪೊಗಳಲಳವೆ ಪ್ರಖ್ಯಾತನೆಸಂಜೀವನವ ತಂದು ಕಪಿಗಳ ನಂಜು ಕಳೆದ ಪ್ರಖ್ಯಾತನೆ 1 ಕಾಮನಿಗ್ರಹನೆನಿಸಿ ಸುರರಭಿಮಾನಿ ದೇವತೆಯೆನಿಸಿದೆರಾಮಪಾದಕ್ಕೆರಗಿ ನಡೆದು ನಿಸ್ಸೀಮ ನೀನೆಂದೆನಿಸಿದೆ 2 ಸಿಂಧು ಹಾರಿದೆ ಶೀಘ್ರದಿಂದಲಿ ಬಂದು ಸೀತೆಗೆ ನಮಿಸಿದೆತಂದು ಮುದ್ರೆಯನಿತ್ತು ಮಾತೆಯ ಮನವ ಸಂತೊಷಪಡಿಸಿದೆ 3 ಜನಕತನುಜೆಯ ಮನವ ಹರುಷಿಸಿ ವನವ ಕಿತ್ತೀಡಾಡಿದೆದನುಜರನ್ನು ಸದೆದು ಲಂಕೆಯ ಅನಲಗಾಹುತಿ ಮಾಡಿದೆ 4 ಶ್ರೀರಾಮಕಾರ್ಯವ ವಹಿಸಿ ಅಕ್ಷಕುಮಾರನನು ಸಂಹರಿಸಿದೆಘೋರ ರಕ್ಕಸರೆಂಬುವರನು ಮಾರಿವಶವನು ಗೈಸಿದೆ 5 ಭರದಿ ಬಂದು ಶ್ರೀರಾಮಪಾದಕ್ಕೆರಗಿ ಬಿನ್ನಹ ಮಾಡಿದೆಉರಗಗಿರಿ ಹಯವದನನ ಪರಮಭಕ್ತನೆಂದೆನಿಸಿದೆ6
--------------
ವಾದಿರಾಜ
ಆಡಣ್ಣ ನೀನಾಡಣ್ಣ ಅನುಭವದಾಟ ಆಡಣ್ಣ ಪ ರೂಢಿಯೋಳ್ಹರಿಯ ಗಾಢಮಹಿಮೆ ಕೊಂಡಾಡುವರೊಡನಾಟ ಅ.ಪ ಅಳುವರ ಕಂಡರೆ ಅತ್ತಂತೆ ಕಾಣೋ ನಗುವರ ಕಂಡರೆ ನಕ್ಕಂತೆ ಕಾಣೋ ಅಳುವ ನಗುವರಲಿ ಸಿಲುಕಿ ಸಿಲುಕದೆ ನಿ ನ್ನೊಳಗೆ ಮಾಧವನ ತಿಳಿದು ಆನಂದದಿ 1 ಅವರನು ಕಂಡರೆ ಅವರಂತೆ ಇವರನು ಕಂಡರೆ ಇವರಂತೆ ಅವರಿವರಿಗೊಂದೆಸವನೆತೋರಿ ಸಿರಿ ಪಾದ ಮನಭವನದಿಟ್ಟ್ಹಿಗ್ಗುತ 2 ವಾಸನೆ ಪ್ರಥಮ ನಾಶನ ಮಾಡೊ ದಾಸರ ಕಂಡರೆ ಸೇವೆಯ ಮಾಡೋ ಆಶಪಾಶ ನೀಗಿ ಶ್ರೀಶ ಶ್ರೀರಾಮನ ದಾಸನಾಗಿ ನಿಜ ಮುಕ್ತಿಯ ಕೂಡೊ 3
--------------
ರಾಮದಾಸರು
ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1 ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2 ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
--------------
ವಿಜಯದಾಸ
ಇ. ಶ್ರೀ ಹರಿಯ ಸ್ತುತಿ ತಿರುಪತಿ ಶ್ರೀನಿವಾಸ ದೇವರು ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1 ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2 ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3 ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4 ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
--------------
ಇಂದಿರೇಶರು
ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ. ಬಂಧುಬಳಗವ ಕಾಣೆ ಇಂದಿರೇಶನೆ ಭವದಿ ಬೆಂದು ನೊಂದೆನೊ ನಾನು ಸಿಂಧುಶಯನ ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು ಮಂದಮತಿಗೆ ಇನ್ನು ಮುಂದೆ ಗತಿ ಏನೊ 1 ಕಾಣದಲೆ ನಿನ್ನನು ಕಾತರಿಸುತಿದೆ ಮನವು ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ ಜಾಣತನವಿದು ಸರಿಯೆ ಫಣಿಶಾಯಿಶಯನ 2 ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ ಮಾಧವನೆ ಕರುಣದಲಿ ಕಾಯಬೇಕೊ ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ ಛೇದಿಸೊ ಅಜ್ಞಾನ ಹೇ ದಯಾನಿಧಿಯೆ 3 ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ ಸರ್ವರನು ಪೊರೆಯುವನೆ ಸರ್ವರಾಧೀಶ ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ ಸರ್ವ ಸಾಕ್ಷಿಯೆ ಸತತ ಆನಂದವೀಯೊ 4 ಆನಂದಗಿರಿನಿಲಯ ಆನಂದಕಂದನೆ ಆನಂದ ಗೋಪಾಲಕೃಷ್ಣವಿಠ್ಠಲಾ ಆನಂದನಿಲಯ ಶ್ರೀ ಗುರುಗಳಂತರ್ಯಾಮಿ ನೀನಿಂದು ಸರ್ವತ್ರ ಕಾಯಬೇಕಯ್ಯ 5
--------------
ಅಂಬಾಬಾಯಿ
ಇದನೆ ಬೇಡುವೆನಯ್ಯ ಒದಗಿ ಪಾಲಿಸೊ ಜೀಯ ಬದಲು ನಾನೊಲ್ಲೆನೊ ವಿದಿತ ವೇದ್ಯ ಪ ಕ್ಷಣ ನಿನ್ನ ಬಿಡಲಾರೆ ನಿನ್ನವರನು ಬಿಡೆ ಕುಣಿ ಕುಣಿವೆನು ನಿನ್ನ ಜನರೆಂದರೆ ಗುಣತ್ರಯ ವಾರಣ ನಿನ್ನ ವಾರುತಿಯಿರೆ ಒಣ ಹರಟೆಗಳ ನಾ ಕೇಳಲೊಲ್ಲೆ 1 ನೀಚ ಜನರಂಗಳ ಸಂಗವ ಕೊಡದಿರು ವಾಚದಿಗನ್ಯರಿಗಾಲ್ಪರಿಸಬೇಡ ಸೂಚಿಸು ನಿನ್ನಯ ಗುಣಗಣಂಗಳೆನೆ ನಾ ಯಾಚಿಪೆ ಇದನೆ ಇದನೆ ಮುರಾರೆ 2 ಶ್ರೀಶ ನಿನ್ನಯ ಕಥೆ ಕೇಳದೆ ಬಹಳಾಯು ಕಾಸು ಬಾಳದು ಕೇಳು ಕರುಣಾಬ್ಧಿಯೆ ತಾಸು ಒಂದಾದರು ಅವನೆ ಸುಜೀವಿಯೊ ವಾಸುದೇವವಿಠಲ ನಿನ್ನವರವನೊ 3
--------------
ವ್ಯಾಸತತ್ವಜ್ಞದಾಸರು