ಒಟ್ಟು 105 ಕಡೆಗಳಲ್ಲಿ , 38 ದಾಸರು , 95 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಕಂದ ಹಳ್ಳಿಯ ಹನುಮ ಪ ಚೆನ್ನಾಗೈದಾರ ಲಕ್ಷ್ಮಣ ದೇವರು ಅ ತುಪ್ಪ ಪಂಚಾಮೃತವಂದು ಅಡವಿಗಡ್ಡೆಗಳಿಂದುಕರ್ಪೂರ ವೀಳ್ಯವಂದು ಕುರುಕು ಇಂದುಸುಪ್ಪತ್ತಿಗೆ ಮಂಚವಂದು ಹುಲ್ಲು ಹಾಸಿಗೆಯಿಂದುಶ್ರೀಪತಿ ರಾಘವ ಕ್ಷೇಮದಲೈದಾರೆ1 ನವ ವಸ್ತ್ರಗಳು ಅಂದು ನಾರಸೀರೆಗಳಿಂದುಹೂವಿನ ಗಂಟು ಅಂದು ಜಡೆಗಳಿಂದುಜವ್ವಾಜಿ ಕತ್ತುರಿಯಂದು ಭಸಿತ ಧೂಳಿಂದುಶ್ರೀವರ ರಾಘವ ಕ್ಷೇಮದಲೈದಾರೆ2 ಕನಕ ರಥಗಳಂದು ಕಾಲುನಡಿಗೆಯಿಂದುಘನ ಛತ್ರ ಚಾಮರವಂದು ಬಿಸಿಲು ಇಂದುಸನಕಾದಿಗಳೋಲೈಪ ಆದಿಕೇಶವ ನಮ್ಮಹನುಮೇಶ ರಾಘವ ಕ್ಷೇಮದಲೈದಾರೆ 3
--------------
ಕನಕದಾಸ
ಏನು ಪೇಳಲಮ್ಮಯ್ಯಾ ರಂಗನ ಕ್ರೀಡಾ ಏನು ದಂಡಿಸಲಮ್ಮಯ್ಯಾ ಶ್ರೀ ಕೃಷ್ಣನ್ನ ಪ ಪಿಡಿದು ನಿಂದಾ ದುರುಳ ದೈತ್ಯನ್ನೆಳದೊಡಲವೆ ಸೀಳಿದಾ ಬಲಿಯಲ್ದೈನ್ಯದಿ ದಾನಬೇಡಿ ತಾಯ ಶಿರವ ಕಡಿದು ತೋರಿದಾ ಕಲೆವೆಣ್ಣೈದ್ಮೊಲೆಯುಂಡು ಕಳದ್ವಟ್ಟೆ ಹಯವೇರಿದಾ 1 ಕಾನನದಾ ವರಹನಾದಾ ಆಗಲು ಪಂಚಾನನ ರೂಪನಾದಾ ಸೂನು ಪರಶುರಾಮನಾಗಿ ಜಾನಕಿವರನಾಗಿ ರಾವಣನಾಗಿ ಮಾನಬಿಟ್ಟು ವಾಜಿಯನೇರ್ದಾ 2 ನಿಗಮ ತೋರ್ದಾ ಬೆನ್ನಲಿ ಬೆಟ್ಟವಿರಿಸಿ ಸುರರಾ ಪೊರೆದಾ ಧರಾಲಲನೆಯನೆತ್ತಿ ತಂದಾ ದೈತ್ಯನ ಶೀಳಿ ತರಳನಳಲನು ಕಳೆದಾ ಸುರತಟಿನಿಯಂಗುಟದಿ ಜನಿಸೆ ಧರೆಯ ಪಾವನಗೊಳಿಸೆ ನರಲೋಕವುದ್ಧಾರ ಜನಕ ಸಿರಿಪಾವನ ನರಸಿಂಹವಿಠಲನ 3
--------------
ನರಸಿಂಹವಿಠಲರು
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಒಳ್ಳೆವಾಜಿಯ ಕಲಿತಿದ್ದಿತಾಳೊ ಬುದ್ಧಿಲ್ಲ ಕೇಳೊಒಳ್ಳೆ ವಾಜಿಯ ಕಲಿತಿ ತಾಳೊಸುಳ್ಳು ಕೆಲಸವ ಹೇಳಿ ಸುಳಿಯುವಿ ನೆರೆಮನೆಯಚಲುವನರಿಯುತ ಚಲುವೆರಿಬ್ಬರ ಕುಚೋದ್ಯದಲಿ ಪ. ಹೆಣ್ಣು ಕೊಟ್ಟವನಿಗೆ ಕಣ್ಣು ಕಾಣದು ಏನೊಇನ್ನೆಲ್ಲಿ ವರನ ಕಾಣದೆ ಇನ್ನೆಲ್ಲಿ ವರನ ಕಾಣದೆ ಇಂಥವಗೆಹೆಣ್ಣು ಕೊಟ್ಟವನು ಬಲು ಹೇಡಿ 1 ಕೊಟ್ಟರೇನಾಯಿತು ಅಟ್ಟುಣಲು ಬಲ್ಲಹುಟ್ಟು ಗತಿಯಂತು ಮೊದಲಿಲ್ಲಹುಟ್ಟು ಗತಿಯಂತು ಮೊದಲಿಲ್ಲ ದಾನವಕೊಟ್ಟ ಬಲೀಂದ್ರ ಇದು ಬಲ್ಲ 2 ಕುಲವಿಲ್ಲಗೋತ್ರವಿಲ್ಲ ನೆಲೆಯಿಲ್ಲ ಆಚಾರವಿಲ್ಲಬಲುದೈತ್ಯರೊಳು ಹಗೆಯಾದ ಬಲುದೈತ್ಯರೊಳು ಹಗೆಯಾದ ಇಂಥವಗೆ ಜಲನಿಧಿ ಮಗಳ ಕೊಡಬಹುದೆ 3 ಮೂರು ಗುಣಗಳ ಮೀರಿದವ ನೀಚನೆನಿಸುವ ಇವನು ನೀಚನೆನಿಸುವಇವನ ಗುಣಯಾರು ಅರಿಯರು ಧರೆ ಮ್ಯಾಲೆ4 ಹಾಲು ಕೆನೆಯ ಕದ್ದು ಬಾಲೆರೆಲ್ಲರಪೀಡಿಸಿಬಾಲನಾಗಿ ಒರಳ ಎಳೆಯುತಬಾಲನಾಗಿ ಒರಳ ಎಳೆಯುತಜನನಿಗೆ ಚಾಲವರೆದದ್ದು ಮರೆತೇನೊ5 ಬೆಣ್ಣಿ ಮೊಸರು ಕದ್ದು ಹೆಣ್ಣುಮಕ್ಕಳ ಕಾಡಿಸಿ ಮುನ್ನ ತೊತ್ತಿನ ಮನೆಯಲ್ಲಿಮುನ್ನ ತೊತ್ತಿನ ಮನೆಯಲ್ಲಿ ಉಂಡುನೀ ಹೆಣ್ಣಾಗಿದ್ಯಲ್ಲೊ ರಮಿಯರಸು6
--------------
ಗಲಗಲಿಅವ್ವನವರು
ಕಂಡೆನು ಕೌತುಕವ ಏನೆಂದ್ಹೇಳಲಿ ಸೋಜಿಗವ ಧ್ರುವ ಅಜ ನುಂಗಿತು ಗಜನ ವಾಜಿ ನುಂಗಿತು ಈ ಮೂಜಗವ ಸಂಜೀವ ಸಂಜೀವ 1 ಇಲಿಯು ನುಂಗಿತು ಮೊಲವ ಹಲ್ಲಿ ನುಂಗಿತು ಹಲವು ಕುಲವ ಜಲ ನುಂಗಿತು ಜಲವ ಹುಲಿ ನುಂಗಿತು ಈ ಮಾರ್ಜಲವ 2 ನೊರಜು ನುಂಗಿತು ಗಿರಿ ಪರ್ವತವಇರಹು ನುಂಗಿತು ಸರ್ವ ಬೆರಗಾಯಿತು ಮಹಿಪತಿ ಜೀವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು
ಕುದುರೆ ಕಂಡೀರ್ಯಾ ಬಿಳಿ ಕುದುರೆ ಕಂಡೀರ್ಯಾ ಚೆಲುವ ಕುದುರೆ ಕಂಡೀರ್ಯಾ ಮಧ್ವರಾಯರಿಗೊಲಿದ ಕುದುರೆ ವಾದಿರಾಜರ ಪೊರೆದ ಕುದುರೆ ಇಂದಿರಾ ದೇವಿಯನಪ್ಪಿದ ಕುದುರೆ ಬಂದರೆ ನರರು ಬೆದರದಂಥ ಕುದುರೆ 1 ಮಂದರಗಿರಿಯನ್ನೆತ್ತಿದ ಕುದುರೆ ಚಂದಿರನಂತೆ ಪೊಳೆಯುವ ಕುದುರೆ ಸೋದೆಯ ಪುರದೊಳಿರುವ ಕುದುರೆ ಮೋದದಿಂದ ಮೆರೆಯುವ ಕುದುರೆ 2 ನರನ ರಥವನು ಏರಿದ ಕುದುರೆ ಸ್ಮರನ ತಾತನೆನಿಪ ಕುದುರೆ ಸುರತರುವನೆ ಭೂಮಿಗೆ ತಂದ ಕುದುರೆ 3 ಕಡಲೆ ಹೂರಣ ಮೆಲುವ ಕುದುರೆ ಪಂಡರಪುರದಿ ಮೇದ ಕುದುರೆ ಪುಂಡರೀಕನಿಗೆ ಒಲಿದಿಹ ಕುದುರೆ ಪಾಂಡವರನೆ ಪೊರೆದ ಕುದುರೆ 4 ರಾಜನಾಥನೆನಿಪ ಕುದುರೆ ವಾಜಿವದನ ತಾನೆನಿಪ ಕುದುರೆ ಕಂಜಸುತಗೆ ಶ್ರುತಿಯನ್ನಿತ್ತ ಕುದುರೆ ಕಂಜನಾಭನೆನಿಪ ಕುದುರೆ 5
--------------
ವಿಶ್ವೇಂದ್ರತೀರ್ಥ
ಗಂಗೆ ಮಂಗಲ ತರಂಗೆ ಪಾಹಿ ಪಾಪಭಂಗೆ ಹರಿಪಾದಸಂಗೆ ಪ ನಿತ್ಯ ನೆಲಸಿದೆ ಮತ್ತೆ ಸ್ಮರಿಪರ ಚಿತ್ತದೊಳ್ ವಾಸಿಸಿದೆ 1 ಸಗರಪುತ್ರರ ಪವಿತ್ರಿಸಿದೆ ಜಗವರಿಯೆ ಜಹ್ನುತನಯೆಯಾದೆ 2 ರಾಜೇಶ ಹಯಮುಖ ತನಯೆ ರಾಜಧರ್ಮನು ನಿನ್ನ ತಟದಲ್ಲಿ ಮೂಜಗವು ತಾ ಪೊಗಳುವಂದದಿ ವಾಜಿಮೇಧನ ಗೈದನಾದರದಿ 3
--------------
ವಿಶ್ವೇಂದ್ರತೀರ್ಥ
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು
ಗಿರಿಜೆಪತಿ ಪ್ರಿಯ ವಿಠಲ | ಪೊರೆಯ ಬೇಕಿವನಾ ಪ ವಾರಿಧಿ ಪೋತ | ಹರಿಯೇ ವಿಖ್ಯಾತ ಅ.ಪ. ಮಂದ ಮಾನವ ನೀದಯಎಂದಿಗೊ ಗತಿ ನೀನೆ | ಯೆಂದು ನಂಬಿಹೆನೋ 1 ತೈಜಸನು ಶ್ರೀ ಹರಿಯೆ | ವಾಜಿವದನನು ಆಗಿನೈಜರೂಪವ ತೋರಿ | ಸೋಜಿಗವ ಬೀರಿ |ಭ್ರಾಜಿಷ್ಣು ಭಯ ತೋರೆ | ಓಜಸವ ಕಳಕೊಂಡುಮಾಜದಲೆ ದುಷ್ಕರ್ಮ | ಗೋಜಿದೊಳಗಿಹನಾ 2 ಪತಿ ಕಲ್ಯಾಣನಿರುತ ಭಕ್ತರು ಗೈವ | ಪರಮ ಸೇವೆಗಳಾ 3 ಸಾರ ನಾಮಾ ಮೃತವಬಾರಿ ಬಾರಿಗೆ ಉಣಿಸಿ | ತಾರಿಸೋ ಭವವಾ 4 ಸತಿ ಸುತರು ಹಿತರಲ್ಲಿ | ವ್ಯಾಪ್ತನಿಹ ಶ್ರೀ ಹರಿಯೇಅತುಳ ಮಹಿಮೆಯ ತಿಳಿಸಿ ವಾತಸುತ ವಂದ್ಯಾ |ಕೃತ ಕೃತ್ಯನೆಂದೆನಿಸಿ | ಭಕ್ತನ್ನ ಪೊರೆಯೆಂದುಹಿತ ಗುರೂ ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಗೋಪಿ ನಿನ್ನ ಬಾಲನ ಮಾಡುವ ಆಟದ ಪರಿಯನು ಪ ತುಡುಗಿಲಿ ಗೋರಸ ಕುಡಿವಾ | ಅವ | ಘಡಿಸಲು ಕಣ್ಣನೆ ಬಿಡುವಾ | ಹಿಡಿಯಲು ಬರೆ ಬೆನ್ಗೊಡುವ | ಅಡಿ | ಇಡುತಲಿ ತಿರುಗದೆ ಓಡುವನವ್ವಾ 1 ಕೊಡಮಸರಿಗೆ ಬಾಯ್ದೆರೆವಾ | ತಾ | ಬೇಡುವ ಪಸರಿಸಿ ಕರವಾ | ಕೊಡಲಿ ದಣಿಯದೆ ಸುರಿವಾ | ನ | ಟ್ಟಡವಿಲಿ ನಿಂದು ಹೊರೆವನವ್ವಾ 2 ಕೊಳಲನೂದಿ ಹೊಳೆವಾ | ಹೆಂ | ಗಳೆಯರ ಸನ್ಮತಿಗಳೆವಾ | ಅಳುಕದೆ ವಾಜಿಲಿ ನಲಿವಾ | ಇಳೆ | ಯೊಳು ಮಹಿಪತಿ ಸುತ ಪ್ರಭು ಲೀಲೆವ್ವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಡಂಭ ತೋರಿದರೆ ಬಂತೆ ಇಂಬವಾಗದ ಗುಂಭಗುರುತ ಪಥ 1 ಶಬ್ದ ಜ್ಞಾನದಿಂದ ನಿಗಗೇನು ಲಬ್ಧ ಲಬ್ಧಾ ಲಬ್ಧ ತಿಳಿಯಗೊಡುದು ನಿನ್ನ ಪ್ರಾರಬ್ಧ ಧ್ರುವ ನೀರ ಕಡಿದರೆ ಬಂತೆ ಸಾರಸದ ನವನೀತ ಮಾರಪೀತನಂಘ್ರಿ ಗುರುತಾಗುದೇ ಹಿತ 2 ಹರಿವ ಮೃಗಜಲವಾಯಿತೆ ಅರಿತುಕೊಂಬಗೆ ಗಂಗಾಮೃತ ಅಮೃತ ಹಸ್ತ 3 ಮಣಿ ಆದೀತೆ ರಾಜಿಸುವ ನವರತ್ನ ನಿಜತತ್ವ ತಿಳಿಯುದೊಂದೇ ವಾಜಿಯ ಯತ್ನ 4 ಹೊಂದಿ ಬದುಕಿರೊ ಮಹಿಪತಿ ತಂದೆಯ ಗುರುಪಾದ ಬೋಧ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇಶಾಧಿಪತಿ ನರಹರಿಯೆ ನಿನ್ನಯ ಪಾದದಾಸರ ದಾಸನೆಂದೆನಿಸಬೇಕೆನ್ನ ಪ ರಜತಮೋಗುಣ ಪ್ರವರ್ತಕ ಮೂಲಾಂತರದಿಂಯಜಮಾನತನದಹಂಕಾರವನು ಒಲ್ಲೆಭುಜ ಚಕ್ರ ಧರಿಸಿ ಸಾತ್ತ್ವಿಕರ ಪಾದಾಂಬುಜರಜ ಭಜಕರ ಭಜಕನೆಂದೆನಿಸೆನ್ನ1 ಸಿರಿಗಂಧ ಕುಂಕುಮ ಸಾದು ಜವ್ವಾಜಿ ಕ-ಸ್ತೂರಿ ತಿಲಕವನಿಡುವುದ ನಾನೊಲ್ಲೆಸಿರಿ ಊಧ್ರ್ವಪುಂಡ್ರ ದ್ವಾದಶನಾಮವಿಡುವವರಪರಿಚಾರಕರ ಪರಿಚಾರಕನೆನಿಸೆನ್ನ 2 ಸ್ವಾದು ಕಲ್ಪಿತವಾದ ಭಕ್ಷ್ಯ ಭೋಜ್ಯಗಳನುಆದರದ ಅಮೃತಾನ್ನ ಉಣುವುದನೊಲ್ಲೆಬೋಧೆಯನು ಹೇಳುವ ಕೇಳುವ ಹರಿದಾಸರಪಾದತೀರ್ಥ ಪ್ರಸಾದವನುಣಿಸೆನ್ನ3 ಕಾಲ ಕರ್ಮದೊಳುಪೇಕ್ಷೆಯ ಮಾಡಿ ಹರಿಭಕುತಿಶೀಲರಹಿತ ಬ್ರಾಹ್ಮಣನಾಗಲೊಲ್ಲೆಕೀಲನರಿತು ಹರಿಭಕುತಿಯನು ಮಾಳ್ಪ ಪರಚಾಂ-ಡಾಲನ ಮನೆ ಬಾಗಿಲ ಕಾಯಿಸೆನ್ನ 4 ಕ್ರೂರಶಾಸ್ತ್ರವನೋದಿ ಕುರಿ ಕೋಣವನೆ ಕಡಿದುಘೋರ ನರಕದಿ ಬೀಳುವುದನು ನಾನೊಲ್ಲೆವಾರಿಜಾಕ್ಷ ನಿನ್ನ ಚರಣ ಸೇವಕರ ಮನೆಯದ್ವಾರಪಾಲಕನೆಂದೆನಿಸೆನ್ನ 5 ಪಟ್ಟೆಪಟ್ಟಾವಳಿ ದಿವ್ಯ ದುಕೂಲ ಮಿಂ-ಚಿಟ್ಟ ವಸ್ತ್ರ ಉಡುವುದನೊಲ್ಲೆನೆಟ್ಟನೆ ಕಾವಿ ಕಾಷಾಯಾಂಬರಗಳನುಉಟ್ಟವರ ಬಂಟನೆಂದೆನಿಸೆನ್ನ 6 ಅರ್ಥ ವಿಷಯಂಗಳ ಫಲಾಪೇಕ್ಷೆಯಿಂ ಪುಣ್ಯತೀರ್ಥಯಾತ್ರೆಯ ಮಾಡಲೊಲ್ಲೆದೈತ್ಯ ಮರ್ದನ ಬಾಡದಾದಿಕೇಶವ ನಿನ್ನಕೀರ್ತನಗೈವರ ಸ್ತುತಿಕನೆನಿಸೆನ್ನ 7
--------------
ಕನಕದಾಸ
ಧೀಂಧೀಂಧೀಂಧಿಂ ಧೀರು | ಮಜರೆ ಸಂಭ್ರಮದ | ಅಂದು ಶ್ರೀಕೃಷ್ಣ ರುಕ್ಮಿಣಿಯ ಪಾಣಿ | ಗ್ರಹಣ | ದಿಂದ ದ್ವಾರಕೆಯ ಹುಗುವ ಸಮಯದಲಿ ಪ ಚಪಳ ವಾಜಿಗಳು | ಬೆರೆಬೆರೆದು ಕುಣಿವಾಟಾದಿಂದಾ ಇಡಿಯೇ | ತೆರೆಹಿಲ್ಲ | ಸಿಂಧು ಗುರಿ ಪತಾಕೆಗಳ ಹೊಳೆವ | ರೂಪಿಯೇ | ಮೆರೆವ ತಮ್ಮಟ ಭೇರಿನಾದ ಕಹಳೆಗಳಿಂದ | ಹರಿಪದದಿ ಪ್ರತಿ ಶಬ್ದವು ನುಡಿಯೇ 1 ಭಟ್ಟರು ಗಾಯಕವಂದಿ ಬಿರುದು ಕೊಂಡಾಡು ತಲಿಹ | ನಟನೆ ದಿವ್ಯಾಂಗ-ನೆಯರಾ ಮುಂದ | ಘಟನೇ ಪುಟುವೆರಸೀ ಸ್ವಸ್ತಿ ವಚನಾದಿಂದ ನಟನುಗ್ರಶೇನ ತಾಯಿ | ತಂದಿ ದಂಪತಿಗಳ ಕುಟಿಲೀರ್ವ ಸಾಂಬ ಕೃತ ವವರ್ಮನಾ | ರ್ಭಟೆಯ ಬಲರಾಮ ನೋಡನೀ ವೃಂದ 2 ಹೃದಯ ಮಧ್ಯದ ಪದಕದಂತೆ ಬರಿತಿಹ ನಡುವೆ ವಧು ಇದಿರು ಗೊಂಬುವ ಸಂಭ್ರಮದ ಪಟ್ಟಣದಲಾರು ತುದಿ ಮೊದಲ ಬಣ್ಣಿಸುವಾ ಸಿರಿಯಾ | ವದಗಿ ಮುಂದಕ ಹೋಗಿ ಮಂಗಳಾರುತಿಗಳನು ಸುದತಿಯರು ತಂದೆ ತ್ತಲು ತ್ವರಿಯು | ಮುದದಿಂದ ಗೃಹ ಪ್ರವೇಶವ ಮಾಡಿದನು ಸರ್ವಾ | ವಿದಿತ ಮಹಿಪತಿ ನಂದನಾ ಧೂರೆಯು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು