ಒಟ್ಟು 22 ಕಡೆಗಳಲ್ಲಿ , 13 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿನೀನನ್ನ ಹೇಳಬಾರದೇನೆ ತಾಯಿನಿನನ್ನವಾನರವಂದಿತ ಶ್ರೀನಿವಾಸಗೆ ಬುದ್ಧಿ ಪಶ್ರೀನಿಧಿಪರನೆಂದು ನಂಬಿ ಬಂದ ಬಡಪ್ರಾಣಿಯ ಪೊರೆಯಂದು ಜಾನಕಿ ದೇವಿಯೇ 1ಮೊರೆ ಹೊಕ್ಕವರಕರಪಿಡಿವನೆಂಬೊ ಘನಾಬರದು ಉಳಿಸಿಕೊ ಎಂದ್ಹರುಷದಿ ಸಿರಿದೇವಿ 2ಉರಗಶಾಯಿ ಶಿರಿಗೋವಿಂದ ವಿಠಲ ತುರುಗಗ್ರೀವನರಹರಿಗೆ ತ್ವರಿತದಲ್ಲಿ 3
--------------
ಸಿರಿಗೋವಿಂದವಿಠಲ
ಶೋಭನ ಶೋಭನವೆ ನಮ್ಮಶ್ರೀ ಭೂದೇವಿಯರ ಅರಸು ವೆಂಕಟಗೆ ಪ.ಅಂದು ಕ್ಷೀರಾಂಬುಧಿಯನ್ನು ಮಥಿಸಲಾಗಇಂದಿರೆ ಹರುಷದಿಂದುದಿಸಿ ಬಂದು ||ಮಂದಾರ ಮಾಲೆಯ ಹಾಕಿದ ದೇವಗೆಕಂದರ್ಪಕೋಟಿ ಲಾವಣ್ಯ ಮೂರುತಿಗೆ 1ಜನಕನ ಮನೆಯಲ್ಲಿ ರಾಜಾಧಿರಾಜರುಎಣಿಕೆಯಿಲ್ಲದೆ ಬಂದಿರಲಾಗಿ ||ಸನಕಾದಿವಂದ್ಯನ ಕಂಡು ಸಂತೋಷದಿಜನಕಜೆ ಮಾಲೆಯ ಹಾಕಿದ ರಾಮಗೆ 2ರುಕುಮನು ಶಿಶುಪಾಲಗೀವೆನೆಂಬ ಮಾತಿಗೆಸಕಲ ರಾಯರು ಬಂದಿರಲಾಗಿ ||ಭಕುತಿ ವತ್ಸಲನ ಕಂಡು ಸಂತೋಷದಿರುಕುಮಿಣಿ ಮಾಲೆಯ ಹಾಕಿದ ಕೃಷ್ಣೆಗೆ 3ಸತ್ಯಭಾಮೆ ನೀಳಾ ಭದ್ರಾ ಕಾಳಿಂದಿಯುಮಿತ್ರವಿಂದಾ ಲಕ್ಷಣಾ ಜಾಂಬವತಿ ||ಮತ್ತೆ ಸೋಳಾಸಾಸಿರ ಗೋಪಿಕೆಯರಪ್ರತ್ಯಕ್ಷವಾಳಿದ ಕಲ್ಯಾಣಗೆ 4ಪದ್ಮದೇಶದಲೊಬ್ಬ ದೇವಾಂಗನೆಯುಪದ್ಮಮುಖಿಯು ಶ್ರುತಕೀರ್ತಿಯಾಗಿ ||ಪದ್ಮನಾಭ ಶ್ರೀ ಪುರಂದರವಿಠಲಗೆಪದ್ಮಾವತೀ ಪ್ರಿಯ ಶ್ರೀನಿವಾಸಗೆ 5
--------------
ಪುರಂದರದಾಸರು
ಶೋಭಾನ ಪಾಂಡುರಂಗಗೆ | ಶೋಭನ ಶ್ರೀನಿವಾಸಗೆ |ಶೋಭನಉಡುಪಿನಿಲಯಾಗೇ ಪಸುಮನಸರಾಳ್ದವನ ವರಜ ಬಾ |ಕಮಲೆಸದನಮುಖಕಂಜರವಿಬಾ |ವಿಮಲ ಗುಣಾರ್ಣವನೀಲಜಲದನಿಗಾತ್ರಾ ಬಾ ||ವಾರಿಜನೇತ್ರ ಬಾ ಮಂಗಳ ಸ್ತೋತ್ರ ಬಾ |ವಹನ ಪತತ್ರಾ ಬಾ ನತಜನ ಮಿತ್ರಾ ಬಾಹಸಿಯಾ ಜಗುಲೀಗೇ 1ಅಷ್ಟನಾಮ ಒಪ್ಪುವನೇ ಬಾ |ದುಷ್ಟ ದಿತಿ ಸುತ ಮದಹರಣಾ ಬಾ |ಮುಷ್ಟಿಕ ಪ್ರಮುಖಹ ಗೋವರ್ಧನಧರ ಕೃಷ್ಣಾ ಬಾ ||ಹರಿಗತಕಷ್ಟಾ ಬಾ ತ್ರಿಜಗಚ್ಚೇಷ್ಟಾ ಬಾ |ಅಕ್ಷರಜೇಷ್ಠಾ ಬಾ ನಿರುತ ವಿಶಿಷ್ಟಾ ಬಾಹಸಿಯಾ ಜಗುಲೀಗೇ 2ಮಾತುಳರಿಪುವನಅನಳಬಾ |ಶ್ವೇತವಹನ ರಥಸಾರಥಿಬಾ |ಮಾತಿ ಶಿರ ಕಡಿದು ಬಾಹುಜರೊರಸಿದ ನಾಥಾ ಬಾ ||ಗೋಕುಲ ತ್ರಾತಾ ಬಾ ಲೋಕೈಕದಾತಾಬಾ |ವಸುದೇವ ಜಾತಾ ಬಾ ಸುಪ್ರಖ್ಯಾತಾ ಬಾಹಸಿಯಾ ಜಗುಲೀಗೇ 3ವಾಮನ ಕೇಶವ ಹಯಮುಖ ಬಾ |ಭೀಮವಿನುತನಿಃಸೀಮಾ ಬಾ |ಕಾಮಿನಿಯರ ಚೈಲಹರಣ, ಋಷಿ, ರಣಭೀಮಾ ಬಾ ||ದಶರಥ ರಾಮಾ ಬಾ ಬಾಣವಿರಾಮಾ ಬಾ |ಅಜಮುಖ ನಾಮಾ ಬಾ ಕೃಷ್ಣಾ ಪ್ರೇಮಾ ಬಾಹಸಿಯಾ ಜಗುಲೀಗೇ 4ಕಂದರ್ಪಜನಕ ನರಹರಿ ಬಾ |ಅಂದಮೃತವ ತಂದವನೇ ಬಾ |ಮಂದೇತರಮುದಘಟಜ ಪ್ರಮುಖ ಮುನಿವಂದ್ಯಾ ಬಾ ||ಕಸ್ತುರಿ ಛಂದಾ ಬಾ ದೇವ ಮುಕುಂದಾ ಬಾ |ದೇವಕಿ ಕಂದಾ ಬಾ ಸದ್ಗುಣ ವೃಂದಾ ಬಾಹಸಿಯಾ ಜಗುಲೀಗೆ 5ಕ್ಷಿತಿಧರ ಜಿನಧರ ಸಖನೇ ಬಾ |ಅತುಳಮಹಿಮನೆ ಅಜಿತನೇ ಬಾ |ಸತಿಗಮರ ಸದನದಕುಸುಮತಂದಚ್ಯುತನೇ ಬಾ ||ಮೂರುತಿ ಸುತನೆ ಬಾ ಲೋಕ ವಿತತನೆ ಬಾ |ಪೂಜಿಗುಚಿತನೆ ಬಾ ರಕ್ಷಣರತನೇ ಬಾಹಸಿಯಾ ಜಗುಲೀಗೆ 6ಪ್ರಾಣೇಶ ವಿಠ್ಠಲರಾಯಾ ಬಾ |ವೀಣಾಪಾಣೀ ಜನಕನೆ ಬಾ |ಮಾಣದೆಭಕ್ತರ ಪೊರವುತಿಹನೆ ಸತ್ರಾಣಾ ಬಾ ||ಸತ್ಯಾ ಪ್ರಾಣಾ ಬಾ ಶ್ರೀ ಪಾಠೀಣಾ ಬಾ |ನಿಜ ವಿಜ್ಞಾನಾ ಬಾನಿತ್ಯಕಲ್ಯಾಣಾ ಬಾಹಸಿಯಾ ಜಗುಲೀಗೆ 7
--------------
ಪ್ರಾಣೇಶದಾಸರು
ಶ್ರೀ ಭವಾನಿ ಕ್ಷೇತ್ರಸ್ತ ಸಂಗಮೇಶ್ವರ ಸ್ತೋತ್ರ76ಸಂಗಮೇಶ್ವರ ಶರಣು ಸದಾಶಿವಸಂಗಮೇಶ್ವರ ರಂಗ ಶ್ರೀಪತಿಯರ ಅಚಲಭಕ್ತಿಯನಿತ್ತುಭಂಗವಿಲ್ಲದೆ ಪರಿಪಾಲಿಸೋ ಎನ್ನ ನೀ ಪರಮ್ಯ ಭವಾನಿ ಕಾವೇರಿ ಸಂಗಮದಲಿ |ಉಮೆ ಸಹಿತದಿ ನಿಂತು ಎಮ್ಮ ಪಾಲಿಸುತಿ ನೀ || 1ಅಮರಸುಮನಸವೃಂದಾರಾಧ್ಯನೇ |ಷಣ್ಮುಖ ಗಜಮುಖತಾತಕೃಪಾನಿಧೆ2ಶುದ್ಧ ಸ್ಪಟಿಕಾಮಲ ನಿರ್ಮಲ ಕಾಯನೆ |ದುಗ್ಧ ಸಾಗರ ಭವಶೇಖರ ಶಂಕರ |ಸ್ನಿಗ್ಧ ಲೋಹಿತ ಜಟಾಜೂಟಿ ಗಂಗಾಧರ |ಮೃತ್ಯುಂಜಯಅಹಿಭೂಷಣಶರಣು3ಅಸಿತ ಲೋಹಿತ ಸಿತ ಶ್ಯಾಮ ವಿಧ್ಯುನ್ನಿಭ |ಭಾಸಿಪ ಪಂಚ ಸುವದನ ತ್ರಿಲೋಚನ |ಈಶಾನಮಃ ದೇವನೇ ವೇದ ನಾಯಕಿ ಪತಿಯೇ |ಅಜಪಿತಪ್ರಸನ್ನ ಶ್ರೀನಿವಾಸಗೆ ಪ್ರಿಯ4
--------------
ಪ್ರಸನ್ನ ಶ್ರೀನಿವಾಸದಾಸರು