ಒಟ್ಟು 22 ಕಡೆಗಳಲ್ಲಿ , 16 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಕ್ತಿ ದೊರಕಿತು ಗುರುಕೃಪೆಯಿಂದಲಿ ಪ ಒಮ್ಮನದಿಂದಲಿ ವಿವರಿಸಿ ನೋಡಲುಕರ್ಮ ಬ್ರಹ್ಮಾಗಿ ತೋರಿತಕ್ಕ |ಅಮ್ಮಾ ಅಮ್ಮಾ ಈ ಮಾತು ಏನಂತ ಹೇಳಲಿನಿರ್ಮಳ ನಿಜ ವಸ್ತು ಕಾಣ ಬಂತಕ್ಕ 1 ಮಾತು ಮಾತಿನಲಿ ಸಪ್ತಧಾತುವಿನಲಿಮತ್ತೊಂದು ತೋರಿದ ಭುವನದಲಿ |ಎತ್ತ ನೋಡಿದರತ್ತ ವಸ್ತುವೇ ಪರಿಪೂರ್ಣವಿಚಾರದಿಂದಲಿ ಅನುಭವದಿಂದಲಿ2 ಇಂದು ಜ್ಞಾನಬೋಧಗೆ ಆನಂದವಾಯಿತುಸಂದೇಹ ಹೋಯಿತು ಮನಸಿನಲಿ |ಎಂದಿಗೂ ಅಳಿಯದ ಸೌಭಾಗ್ಯ ದೊರಕಿತುತಂದೆ ಗೋವಿಂದನ ವಾಕ್ಯದಲಿ 3
--------------
ಜ್ಞಾನಬೋದಕರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ವಂದಿಸಿ ಬದುಕಿ ತಂದೆ ಮುದ್ದು ಮೋಹನ ಗುರುಗಳ ಪ ಇಂದಿರೆ ಅರಸ ಅಂದ ತಲ್ಪರಂಶರೆಂಬರಾ ಅ.ಪ. ತರಳತನಾರಭ್ಯ ಹರಿಯ | ಪರಮ ಅನುರಾಗದಿಂದ ಪರಿಸರಾನಂದ ತೀರ್ಥ | ಪರಮಮತ ವಿಚಾರದಲ್ಲಿ |ಅರೆಕ್ಷಣವು ಬಿಡದೆ ನಿರತರಾ | ಆತ್ಮ ಜ್ಞಾನದರ್ಶನಾನುಷ್ಠಾನ ಚರಿಸುತಾ | ಭಕ್ತಿಯೇ ಸುಪ್ರಚುರ ಪಂಥವನ್ನೆ ಮಾಡುತಾ | ಯುಕ್ತಿಯಿಂದಚರಿಪ ಸರ್ವವೂ ಶ್ರೀಹರಿಯ | ಪರವು ಎಂದ ಕಡಿದ ಬಂಧ 1 ವ್ಯಾಸ ಗ್ರಂಥ ಸದಾಭ್ಯಾಸಿ | ದಾಸಕೂಟವೆಂಬ ವರಜಲಾಶಯಕೆ ಪರಮ ಅರ್ಥ ತಾ | ರೇಶನ್ನುದಿಸಿ ಭೂಸುರ ಮನೋಲ್ಲಾಸ ಮಾಡಿ ಲೇಸಾಗಿ ಬೆಳಗುತ | ಜ್ಞಾನ ಕಿರಣಸೂಸ್ಯನೇಕಾಂಕಿತಾಗಳ | ಇತ್ತು ಕರ್ಮಹ್ರಾಸ ಮಾಳ್ವ ಬಗೆಯ ತಿಳುಹುತ | ಕವನದಿಂದಸಾಸಿರ ಪುಷ್ಪಮಾಲೆ ಹರಿಗಿತ್ತ ದಯವ ಪೊತ್ತ2 ಕ್ಲೇಶ ಸಂಶಯಾ | ಹರಿಸಿ ಪವನ ಮತದಿ ದೀಕ್ಷೆಯಾನಿರತಿಶಯದ ದಾಸದೀಕ್ಷೆಯ | ಇತ್ತು ಹೃದಯದಲ್ಲಿಹರಿಯ ಮೂರ್ತಿಯನ್ನೆ ನೋಡುವ | ಶಾಸ್ತ್ರ ಸಮ್ಮತಿಕೀರ್ತನೆಗಳ ನುಡಿಸಿದಾ | ಗುರು ಗೋವಿಂದ ವಿಠಲ ಪದಸರೋಜ ರಜವ ಶಿರದೊಳ್ ಧೃತರ | ಕೃಪಾಕರರ 3
--------------
ಗುರುಗೋವಿಂದವಿಠಲರು
ಸಮಿಪ ಸದ್ಗುರುರಾಯಾ ಆ ನಿನ್ನ ದಯದಿ ಪುನೀತವಾದುದು ಕಾಯಾ ಅರಿವಾಯ್ತು ಎನ್ನ ಸ್ವರೂಪದನುಭವ ಜೀಯಾ ಮಾಯಾ ಘೋರಕರ್ಮವ ನೀಗಿದೆನು ನಾ ಪಾರಮಾರ್ಥಿಕ ಸತ್ಯವರಿಯುತ ಮೀರಿದಾನಂದದಲಿ ಮುಳುಗತ ಸೇರಿ ಒಂದಗಿಹೆನು ನಿನ್ನೊಳು ಸರಸ ನಿನ್ನಯ ಬೋಧಾ ಈ ಮರುಳು ಮಾನವರೇನು ಬಲ್ಲರು ಮೋದ ಮಾತೆನಲುಬೇಗನೇ ಸಚ್ಚಿದಾತ್ಮನ ಶೋಧಾ ಮರುಳುಮತಿಗಳು ಅರಿದರೆಂತೋ ಪರಮತತ್ವವ ಪರವಿಚಾರದಿ ದುರುಳರಾ ಮಾತೇಕೆ ನಿನ್ನಯಕರುಣೆಯಿಂದಲಿ ಪಾರುಗಂಡÉನು
--------------
ಶಂಕರಭಟ್ಟ ಅಗ್ನಿಹೋತ್ರಿ
ಮಂದಿಯಗೊಡವೆ ಇನ್ನೇನು ಮಗಳೆ |ಮುಂದೆ ನೋಡಿ ಹಂಜಿ ನೂಲವ್ವ............ ಪ.ಕಣ್ಣ ಮುಂದಿನ ಕಸವನು ತೆಗೆದು |ಸಣ್ಣಗೆ ನೀ ನೂಲವ್ವ............... ಅಪವಸುಧೆಯ ದೊಡ್ಡ ಮಣೆಯಮಾಡಿ |ಶಶಿರವಿಗಳೆರಡು ಕಂಬವ ಹೂಡಿ ||ಆ ಸಿರಿರಂಗರ ಎರಡು ಚಕ್ರವ ಮಾಡಿ |ದರ್ಶನವೆಂಬುವ ನುಲಿಯನು ಬಿಗಿದು 1ಪರಬ್ರಹ್ಮನಅಳವು ಮಾಡಿ |ಕುರುಡು ನಾಶಿಕ ಬೆನಕದಿ ತಿಕ್ಕಿ ||ಹರಿ ನೀನೆ ಎಂಬ ದಾರವಕಟ್ಟಿ |ವಿರತಿವಿಚಾರದ ಬೆಲ್ಲಗಳಿಕ್ಕಿ2ಜಾÕನವೆಂಬುವ ಕದರನ್ನಿಕ್ಕಿ |ಮಾನಮದವೆಂಬ ಹಂಜಿಯ ಹಿಡಿದು ||ಧ್ಯಾನವೆಂಬ ಎಳೆಯನು ತೆಗೆದು |ಮೌನದಿಂದಲಿ ನೂಲವ್ವ 3ಕಕ್ಕುಲಾತಿ ಕಾಂಕ್ಷೆಗಳೆಂಬ |ಸಿಕ್ಕುದೊಡಕುಗಳನೆ ಬಿಡಿಸಿ ||ಒಕ್ಕುಡಿತೆಯ ಮಾಡಿದ ಮನದಿ |ಕುಕ್ಕಡಿನೂಲು ಕೂಡಿ ಹಾಕಮ್ಮ 4ಇಪ್ಪತ್ತೊಂದು ಸಾವಿರದ ಮೇ -ಲಿಪ್ಪ ನೂರು ಎಳೆಯನು ಹೊಡೆದು ||ತಪ್ಪದೆ ಹುಂಜವಕಟ್ಟಿ ನೀನು |ಒಪ್ಪದಿ ಸೀಳು ಇಳುವಮ್ಮ 5ಸದ್ಯದಿ ನೀ ಜಾಡರಲ್ಲಿ |ಸಿದ್ಧಬದ್ಧ ಸೀಳುಗಳ ಹಾಕಿ ||ವಿದ್ಯೆಯೆಂಬುವ ಹಚ್ಚಡವನ್ನು |ಬುದ್ಧಿಯಿಂದಲಿ ನೇಯಿಸಮ್ಮ 6ಒಪ್ಪುವಾತ್ಮ ಪರಮಾತ್ಮನೆಂಬ |ಒಪ್ಪ ಎರಡು ಹೋಳುಗಳಹಚ್ಚಿ ||ತಪ್ಪದೆ ಪುರಂದರವಿಠಲನ ಪಾದಕೆ |ಒಪ್ಪಿಸಿ ಕಾಲವ ಕಳೆಯಮ್ಮ 7
--------------
ಪುರಂದರದಾಸರು
ಸಂಸಾರದೊಳು ಸಾರದಾವುದು ಸಾರದಾವುದಯ್ಯ ಸುಖತೀರಥಗುರುಸಾರಿದ ಮತಸೇರಿ ತತ್ವ ವಿಚಾರಿಸದೆಪ.ದಾವಕಾಲಕೆದಾವಧರ್ಮವುಈ ವಿಚಾರದಿ ಜೀವಿಸುತ ಮತ್ತಾವ ತರತಮ ಭಾವದಲಿ ರಾಜೀವನೇತ್ರನ ಭಾವಿಸದೆ 1ಇಂದಿರಾಧವಗೆಂದು ಆತ್ಮಗೆಹೊಂದಿಸದೆ ಸ್ವಾನಂದ ಬಯಕೆಗೆಇಂದುನಾಳೆಗೆ ಎಂದು ಅಲಸದೆತಂದೆ ಕೃಷ್ಣಗೆ ವಂದಿಸದೆ 2ತನ್ನಗುರುಮತಿ ಸನ್ಮತದಿ ತಾಧನ್ಯನಾಗಿ ಚಿನ್ಮಯ ಪ್ರಸನ್ನವೆಂಕಟ ಎನ್ನಯ್ಯನವರಪೀಯೂಷವುಣ್ಣದ3
--------------
ಪ್ರಸನ್ನವೆಂಕಟದಾಸರು