ಒಟ್ಟು 43 ಕಡೆಗಳಲ್ಲಿ , 19 ದಾಸರು , 40 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಜಯ ತುಂಗಭದ್ರೆ ನಮಿತರನು ಪಾಲಿಸುವ ಸದ್ಗುಣ ಸಮುದ್ರೆ ಪ ವೈರಾಚ ನಗರಿಯಲಿ ವಿಧಾರುಣಿಯ ರೋಚಕನು ಮೀರಿ ದೇವಾದಿಗಳಿಗಂಜದಿರಲು ಘೋರ ರೂಪವ ತಾಳಿ ಅವನ ಕೊಲ್ಲಲು ಹರಿಯ ಮೋರೆ ಕರಿಬೆವರಿಡಲು ಅತಿ ಹರುಷದಿಂದ 1 ರೂಢಿಯೊಳಗೆಲ್ಲ ಸಮಸ್ತ ನದಿ ಉದಕಗಳು ನೋಡಿದರು ರುಚಿಕರವಿಲ್ಲವೆಂದೂ ಸುರರು ಕೊಂಡಾಡುತಿರೆ ಈಡ್ಯಾರು ನಿನ್ನ ಮಹಿಮೆಗೆ ವರಹತನಯೇ 2 ಸಲಿಲವೇ ಹರಿಯಾದ ಶಿವ ನಿನಗೆ ಶಿಲೆಯಾದ ಬಲು ಮುನಿಗಳು ಮಳಲವಳಗಾದರೂ ಜಲಜ ಸಂಭವನು ತೃಣನಾದ ಬಳಿಕ ವಿಷ್ಣು ಕೆಲವುಕಾಲ ನಿನ್ನೊಳಗೆ ನಿಲಿಸಿದನು ತುಂಗೆ ಗಂಗೆ3 ವೇದಾದ್ರಿಯಲಿ ಜನಿಸಿ ನರಸಿಂಹ ಕ್ಷೇತ್ರದಲಿ ಭೇದವಿಲ್ಲದಲೆ ಸಂಗಮವು ಎನಿಸೀ ಆದರದಿಂದ ಹರಹರ ಪೊಂಪ ಬಲಗೊಂಡು ಮೊದಲು ಶ್ರೀ ಕೃಷ್ಣ ಬೆರದೆ ಕೂಡಲಿಯೊಳು 4 ತುಂಗೆ ತುಂಗೆ ಎಂದು ಸ್ಮರಿಸುವಾ ಜನರಿಗು ತ್ತಂಗ ಗತಿಯಾಗುವುದು ಪಾಪವಳಿದು ಮಂಗಳ ಮೂರುತಿ ವಿಜಯವಿಠ್ಠಲನ ಚರಣಂಗಳಲಿ ಇದ್ದವರ ಸತತ ಪೊರೆವುದು ದೇವಿ 5
--------------
ವಿಜಯದಾಸ
ನಿಂದಕರು ಎಂದವರ ತುಚ್ಚಿಸಲಾಗದುಸಂದೇಹವಿಲ್ಲವು ಅವರು ಅತಿಹಿತರು ಪ ಸಂಚಿಸಿದ ಕರ್ಮದಿಂ ಸತ್ಪುರುಷರುದಿಸಿರಲುಹಂಚಿಕೊಂಬರು ತಾವು ಎಲ್ಲರದನುವಂಚಕರು ಎಂದವರ ನೀಚಸಲಿಕಾಗದು ಮುಂಚೆವಂದಿಸಬೇಕು ಅವರ ಪದಕೆ 1 ತಾಯಿ ಶಿಶುವಿನ ಮಲವ ತಾ ತೃಣದಿ ತೆಗೆಯುವಳುಮಾಯಹರ ಮಹಾಪುರುಷರ ಮಲವನುಆಯಾಸವಿಲ್ಲದಲೆ ತಮ್ಮ ನಾಲಿಗೆಯಲಿ ತೆಗೆಯುವರುಪ್ರಿಯರಿಂತವರಿಗಿಂತ ಹಿತವರುಂಟೆ 2 ಉದಯ ಮಧ್ಯಾಹ್ನ ಮುಹೂರ್ತಗಳ ನೋಡದಲೆವಿಧವಿಧದ ಪಾಪಗಳ ತಮ್ಮ ಮುಖದಿಮುದದಲುಚ್ಚರಿಸಿ ಚಿದಾನಂದ ಗುರುಭಕ್ತರನುಸುಧೆಯ ಸುಖಮುಕ್ತಿಯೊಳು ಹೊಂದಿಸುವವರು 3
--------------
ಚಿದಾನಂದ ಅವಧೂತರು
ಪರತತ್ವ ವಿಠಲನೇ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ತರಿದು | ಕರಪಿಡಿಯ ಬೇಕೋ ಅ.ಪ. ಕಾಲ ಕಾಲ ರೂಪಾತ್ಮಾ 1 ಗುರು ಕರುಣವಿಲ್ಲದಲೆ | ಹರಿಯೊಲಿಯನೆಂದೆಂಬಪರಮರಾಹಸ್ಯವನು | ಅರುಹಿ ಪ್ರೀತಿಯಲೀಕರುಣಿಸೋ ತವನಾಮ | ಸ್ಮರಣೆ ಸುಖ ಸಖ್ಯವನುಮರುತಾಂತರಾತ್ಮ ಹರಿ | ದುರಿತವನದಾವಾ 2 ಹರಿದಾಸ್ಯವತಿ ಕಷ್ಟ | ವಿರುವುದೆಂದರಿತಾಗ್ಯುಪರಿ ಪ್ರಶ್ನೆ ಭಕ್ತಿಯಲಿ | ಮೊರೆಯನಿಡುತಿರುವಾ |ತರಳೆ ಗಂಕಿತ ವಿತ್ತೆ | ವರ ಸ್ವಪ್ನ ಸೂಚ್ಯದಲಿಹರಿಯೆ ನಿನ್ನಾದೇಶ | ವಿರುವುದೆಂದರಿತು 3 ಪರಿ ಪರಿಯಗೈಯ್ಯುವಲಿಹರಿಯೆ ತವ ಸಂಸ್ಮರಣೆ | ಮರೆಯದಂತಿರಿಸೋ 4 ಜೀವೇಶ ಸನ್ನುತನೆ | ಜೀವರಂತರ್ಯಾಮಿಗೋವತ್ಸದನಿ ಗಾವು | ಧಾನಿಸೂವಂತೇ |ಕೈವಲ್ಯ ಪ್ರದ ಗುರೂ | ಗೋವಿಂದ ವಿಠ್ಠಲನೆಭಾವುಕಳ ಮಾಡಿವಳ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಪಾಪೇಂದ್ರಿಯಗಳಿಗೆರಗಿ ಪರಹಿತಾರ್ಥವ ಮರೆದು ವ್ಯಾಪಾರ ವಿಷಯಂಗಳಲ್ಲಿರೆ ಯಮನೊಯ್ದು ಕೋಪಾಟೋಪದಲಿಂದ ದಂಡಿಸಿ ತಮಸಿನ ಕೂಪದಲ್ಲಿ ಹಾಕದಲೆ ಬಿಡುವನೆ ಮರುಳೆ ಪ ಉಡಿಗೆ ತೊಡಿಗೆ ಇಡಲು ಮಡದಿಯಳ ಮುಖ ನೋಡಿ ಕಡು ಹಿಗ್ಗಿ ಹುಗ್ಗಿ ಪಡಗದಂತೆ ಹಿರ್ರನೆ ಪಿಡಿದು ಗಲ್ಲವ ಮುಟ್ಟಿ ಮುಡಿಗೆ ಮುಡಿವಾಳವನು ತಡಿಯದಲೆ ಮುಡಿಸುತ್ತಲಿ ಕಕ್ಕಸ ಕುಚ ವಡನೊಡನೆ ನೋಡಿ ಸುಖಬಡುತಾ ಬಿಡದೆ ಕಾಳ್ಯಾಡುವುದು ಸುಡುಸುಡು ಮಾಡಿದರಿನ್ನಾವ ಗತಿ ಮರುಳೇ 1 ನೆಂಟರು ಮನೆಗೆ ಬರಲು ವಂಟಿಯಂತೆ ಮೊಗವ ಸೊಂಟ ಮಾಡಿಕೊಂಡು ಕಂಠವನು ತರ್ಕೈಸಿ ಕುಂಟವಾರ್ತೆಯ ಕೇಳಿ ಬಂಟನು ನಾನೆಂದು ತೊಂಟತನ ಬಗೆ ತೋರುತಾ ಉಂಟಾದ ಗೋಧಿಯ ಸೊಂಟೆ ಬೆಲ್ಲನು ತಂದು ಹೆಂಟಿಯಂತೆ ಹದಿನೆಂಟು ಕಡುಬನೆ ಕೊರಿಸಿ ವಂಟಿಲಿ ಕುಳಿತು ಸುಂಡಿಗೆಯನ್ನು ಚಾಚುತ್ತಾ ಎಂಟು ಮಡಿಸದೆ ವಾರ್ತಿ ಪೇಳುತಲಿ ಮರುಳೇ 2 ಇಂದು ನಮ್ಮನೆ ಪ್ರಸ್ತÀವೆಂದು ಆರಾದರೂ ಬಂದು ಪೇಳಲು ಊರ ಹಂದಿಯಂತೆ ಕಾಯಿದು ಒಂದು ಕಾಳು ತಿನದೆ ಸಂದಿಗೊಂದಿ ಸುತ್ತಿ ಸಂಧ್ಯಾಕಾಲ ವಾನರಾಗುತ್ತ ಚಂದದಿಂದ್ಯುಕ್ತಿಯೊಳು ದ್ವಂದ್ವದಲಿ ಕುಳಿತಿವರು ತಂದೆ ತಾಯಿ ಕಡೆ ಬಂಧುಬಳಗವೆಂದೂ ಒಂದಿಷ್ಟು ಕಡಿಮೆ ತಿನ್ನದೆ ಪರರ ಒಡವೆಯನು ತಿಂದು ಡರ್ರನೆ ತೇಗಿ ನಸುವ ನಗುವ ಮರುಳೇ3 ನಾಡಾಡಿ ಚಾಡಿ ಮಾತಾಡಬೇಕಾದರೆ ಖೋಡಿ ನಾಲಿಗೆ ದೊಡತಾಗಿ ಬಾಹಿನೀ ನಿಡಿ ಲಟಲಟವೆನುತಾ ಕೋಡಗದಂತೆ ಕುಳಿತು ಹೇಡಿ ಪರನಿಂದೆಗಳಿಗೆ ಬಾಡದಲೆ ಬತ್ತದಲೆ ಮಾಡಿದ ಮಹಾಪುಣ್ಯ ಕಾಡಿಗೊಪ್ಪಿಸಿ ಕೊಟ್ಟ ಮೂಢ ಗಾರ್ಧಬನಂತೆ ಓಡಾಡಿ ಬಳಲಿ ನಾಡಾಡಿ ಸುದ್ದಿಗಳಿಗೆ ಬಿಡಿ ಬಿಡಿಂದಾ ತಿರುಗುವಾ ಹೀನ ಮರುಳೇ 4 ಸಂಸಾರವೆಂಬಾ ಸಾರಾ ಸಾಗರ ಮಧ್ಯ ಹಿಂಸನಾಗದೆ ಬಿಟ್ಟು ಇದರಂತೆ ಭಕುತಿ ಮರು ದಂಶ ಗುರು ಮಧ್ವಮುನಿರನ್ನನಾ ಶ್ರೀ ಚರಣ ಸಂಶಯವಿಲ್ಲದಲೆ ನಂಬಿ ಸಂಸಾರ ಉತ್ತರಿಸು ಸಂದೇಹ ಇದಕಿಲ್ಲ ಕಂಸಾಸುರನ ಪ್ರಾಣಹರ ಎನ್ನ ಮನಸ್ಸಾ ಹಂಸ ಶ್ರೀ ವಿಜಯವಿಠ್ಠಲನ್ನ ಪಾದದಾ ಪಾಂಶವೊ ಮಾಡಿ ಗತಿಯಲಿ ಬಾಳು ಮರುಳೇ5
--------------
ವಿಜಯದಾಸ
ಪ್ರಾಣಾ ನೀ ಕಲ್ಯಾಣಗುಣ ಗೀರ್ವಾಣಾದ್ಯರ ಮಣಿ ಜೀವಗಣ ಗುಣಕಾರ್ಯತ್ರಾಣ ಅಗಣಿತಮಹಿಮ ಪ ಇನ್ನೆಣೆಯುಂಟೆ ತ್ರಿಭುವನ ತ್ರಾಣ ನಿನ್ನ ಆಣತಿಯಂತೆ ಪಂಚಪ್ರಾಣ ಅಣುಘನತೃಣ ಮೊದಲು ಪಣೆಗಣ್ಣ ಸುರ ಗಣಾದ್ಯಮರರೊಳಗನವರತ ನೀ ಘನ್ನ ಫಣಿರಾಜಗುರು ನಿನಗೆಣೆಯುಂಟೆ ನೀರಜಭ ಮುಖ್ಯಪ್ರಾಣ ಬಾದರಾ ಯಣನನುಗ ಆನಂದಗುಣಭರಿತ ಕೃತಿರ- ಮಣನ ಸುತೆ ರಮಣ ನೀ ಕ- ರುಣಿಸಿದರುಂಟು ಶ್ರೀಹರಿಯ ಕರುಣಾಅ.ಪ ಮರುತಾ ಶ್ರೀ ಹರಿಯಿಂದಲನವರತ ಪ್ರೇರಿತನಾಗಿ ನಿರುತಾ ಜಗಕಾರ್ಯದೊಳು ಸತತ ನೀ ಬಿಡದಿರೆಡರಿಲ್ಲ ಮರುತಾ ಜಗಚೇಷ್ಟಪ್ರದ ನೀನಹುದೊ ಶಕ್ತಾ ವರ ಮಂತ್ರಿಯಾಗಿ ನೀ ಹರಿಗೆ ಭಕ್ತಾಗ್ರಣಿಯೆ ಯಂತ್ರೋ- ದ್ಧ್ದಾರ ಶ್ರೀ ಹನುಮಂತಾ ಬಲಭೀಮ ಗುರುಮಧ್ವಶಾಂತಾ ತ್ರಿಕೋ ಟಿರೂಪಧರ ಖ್ಯಾತ ಸುರಾಸುರನರೋರಗಗಳನವರತ ಸರ್ವವ್ಯಾಪಾರ ನೀ ನಡೆಸಿ ಪೊರೆವ ಸದ್ಗುರುವರ ಸುಸಮೀರಾ ನೀರಜಾಂಡವ ಕೂರ್ಮರೂಪದೊಳು ನಿಂತು ನೀ ಭಾರವಹಿಸಿ ಮೆರೆದೆ ಶ್ರೀ ವಾಯುಕುವರಾ1 ಸೃಷ್ಟಿಗೊಡೆಯನಿಗೆ ನೀನಿಷ್ಟಪುತ್ರ ನಿನ್ನಷ್ಟುಜ್ಞಾನ ಪರಮೇಷ್ಠಿಗಲ್ಲದೆ ಎಷ್ಟು ನೋಡಿದರು ಇತರರಲಿ ಎಳ್ಳಷ್ಟಿರೆಣೆಯಿಲ್ಲ ತುಷ್ಠಿಪಡಿಸುವೆ ಹರಿಯ ಜೇಷ್ಟದಾಯರ ಶ್ರೇಷ್ಟ ಮೂರುತಿ ಕವಿಶ್ರೇಷ್ಟ ನೀನೆನಿಸಿ ಲಂಕಾ ಶ್ರೇಷ್ಟನೆನಿಸಿದ ದುಷ್ಟದೈತ್ಯನಾ ಮರವನ್ನ ಹುಟ್ಟನಡಗಿಸಿ ಸುಟ್ಟಿ ಲಂಕಪಟ್ಟಣವನ್ನು ಪುಟ್ಟಿದಾಗಲೆ ಬೆಟ್ಟ ಹಿಟ್ಟನು ಮಾಡಿ ಆ ದುಷ್ಟಭಾಷ್ಯಗಳ ಕಷ್ಟ ಪರಿಹರಿಸಿ ನಿ- ರ್ದುಷ್ಟತತ್ವವ ತೋರ್ದೆ ಎಷ್ಟು ಶಕ್ತನು ಜೀವ- ಶ್ರೇಷ್ಠಮೂರುತಿ ಸರ್ವ ಕಷ್ಟ ಹರಿಸಿ ನಿನ್ನ ಇಷ್ಟಭಕುತರ ಸೇವೆ ಕೊಟ್ಟು ಶ್ರೀ ಹರಿಯ ಶ್ರೇಷ್ಠಮೂರುತಿ ತೋರೋ ಇಷ್ಟದಾಯಕ ಗುರು ಶ್ರೇಷ್ಠ ಮಾರುತಿಯೆ2 ಈಶ ಪ್ರೇರಣೆಯಿಂದ ಈ ನಶ್ವರದೇಹದೊಳು ಆ ಸಮಯದಲಿ ಅಪಾನನಿಂದೊಡಗೂಡಿ ಪ್ರಾಣೇಶ ನಿನ್ನಿಂದ ಎಲ್ಲ ಚೇತನವಿಹುದೋ ವಾಸವಾಗಿರುವನಕ ಈ ಶರೀರ ಕಾರ್ಯ ಶಾಶ್ವತ ನಡೆವುದೋ ಕಲ್ಪಾವಸಾನ ಮೋಕ್ಷಪರಿಯಂತ ಲೇಶ ಬಿಡದಲೆ ಬಪ್ಪ ಜಡದೇಹದೊಳು ನೀ ವಾಸವಾಗಿಹೆ ದೇವ ಶಾಶ್ವತನಾಗಿ ಆಯಾಸವಿಲ್ಲದಲೆ ಊಧ್ರ್ವಗಮನದಿ ಪ್ರಾಣ ಅಪಾನನಿಂದಗಲಲೀದೇಹ ಭೂಶಯನ ವಾಸ ಜಡವೆಂದೆನಿಸಿ ಆ ಶರೀರವು ಭೂತಪಂಚಕದಿ ಸೇರುವುದು ಪ್ರಾಣೇಶ ನೀನಾಗ ಹರಿಯನ್ನು ಸೇರುವೆ ಏಸು ಚರಿತೆಯೊ ಅನಿಲ ಶಾಶ್ವತನು ನೀನು ಅಶಾಶ್ವತ ದೇಹಗಳ ಮಾಳ್ಪ ನಿನ್ನಯ ಕಾರ್ಯ ಏಸುಕಾಲಕು ದೇಹದಿಂ ಮೃತರೈಯ್ಯ ಜೀವರು ಶ್ರೀಶನಾತ್ಮಜ ನೀನಮೃತನೆನಿಸೀ ಮೆರೆವೆ ಈಶ ಪ್ರೇರಣೆ ನಿನಗೆ- ನಿನ್ನ ಪ್ರೇರಣೆ ಎಮಗೆ ಅಸುಪತಿಯೆ ನಿನಗಿದು ಹೊಸ ಪರಿಯಲ್ಲವೊ ಮೀಸಲಾಗಿರಿಸು ಶ್ರೀ ವೇಂಕಟೇಶನ ಪಾದ ದಾಸನೆನಿಸೊ ಪವನೇಶ ಉರಗಾದ್ರಿವಾಸ ವಿಠಲನ ದಾಸ ಎನ್ನ ಮನದಾಸೆ ನೀ ಸಲಿಸಿ ನಿಜ ದಾಸಜನ ಸಹವಾಸವಿತ್ತು ಅನಿಶ ಭವ ಪಾಶ ಸಡಿಲಿಸಿ ಸುಖವಾಸವೀಯೊ ಗುರು ಮಾತರಿಶ್ವ 3
--------------
ಉರಗಾದ್ರಿವಾಸವಿಠಲದಾಸರು
ಫಲವಿದು ಬಾಳ್ದ್ದುದಕೆ ಪÀ ಸಿರಿ ನಿಲಯನ ಗುಣಗಳ ತಿಳಿದು ಭಜಿಸುವುದೆ ಅ.ಪ. ಸ್ವೋಚಿತ ಕರ್ಮಗಳಾಚರಿಸುತ ಬಹು ನೀಚರಲ್ಲಿಗೆ ಪೋಗಿ ಯೊಚಿಸದೆ ಖೇಚರವಾಹ ಚರಾಚರ ಬಂಧಕ ಮೋಚಕನಹುದೆಂದ್ಯೋಚಿಸುತಿಪ್ಪುದೆ 1 ನಿಚ್ಚ ಸುಭಕುತಿಯಲಚ್ಯುತನಂಘ್ರಿಗ ತುಚ್ಚ ವಿಷಯಗಳ ಇಚ್ಛಿಸದೆ ಯ ದೃಚ್ಛಾಲಾಭದಿಂ ಪ್ರೋಚ್ಚನಾಗುವುದೆ 2 ಮನೋವಾಕ್ಕಾಯದನುಭವಿಸುವ ದಿನ ದಿನದಿ ವಿಷಯ ಸಾಧನಗಳಿಗೂ ಅನಿಶಾಂತರ್ಗತ ವನರುಹದಳ ಲೋ ಚನಗರ್ಪಿಸಿ ದಾಸನು ನಾನೆಂಬುದೇ 3 ವಾಸವ ಮುಖ ವಿಬುಧಾಸುರ ನಿಚಯಕೆ ಈ ಸಮಸ್ತ ಜಗಕೀಶ ಕೇಶವಾ ನೀಶ ಜೀವರೆಂಬ ಸುಜ್ಞಾನವೆ 4 ಪಂಚ ಭೇದಯುತ ಪ್ರಪಂಚವು ಸತ್ಯ ವಿ ಭವ ಮುಖ ಬಲಿ ವಂಚಕಗೆ ಸಂಚಲ ಪ್ರತಿಮೆ ಅಚಂಚಲ ಪ್ರಕೃತಿಯು ಸಂಚಿಂತಿಸಿ ಮುದ ಲಾಂಭಿತನಹುದೆ 5 ಪಂಚ ಋತುಗಳಲಿ ಪಂಚಾಗ್ನಿಗಳಲಿ ಪಂಚ ಪಂಚರೂಪವ ತಿಳಿದು ಪಂಚ ಸುಸಂಸ್ಕಾರಾಂಚಿತನಾಗಿ ದ್ವಿ ಪಂಚ ಕರಣದಲಿ ಪಂಚಕನರಿವುದೆ 6 ಹೃದಯದಿ ರೂಪವು ವದನದಿ ನಾಮವು ಉದರದಿ ನೈವೇದ್ಯವು ಶಿರದಿ ಪದ ಜಲ ನಿರ್ಮಾಲ್ಯವನೆ ಧರಿಸಿ ಕೋ ಸದನ ಹೆಗ್ಗದವ ಕಾಯುವುದೆ 7 ಪಾತ್ರರ ಸಂಗಡ ಯಾತ್ರೆ ಚರಿಸುತ ವಿ ಧಾತೃ ಪಿತನ ಗುಣ ಸ್ತೋತ್ರಗಳಾ ಶ್ರೋತ್ರದಿ ಸವಿದು ವಿಚಿತ್ರಾನಂದದಿ ಗಾತ್ರವ ಮರೆದು ಪರತ್ರವ ಪಡೆವುದೆ 8 ಹಂಸ ಮೊದಲು ಹದಿನೆಂಟು ರೂಪಗಳ ಸಂಸ್ಥಾನವ ತಿಳಿದನುದಿನದಿ ಸಂಸೇವಿಸುವ ಮಹಾಪುರುಷರ ಪದ ಪಾಂಸುವ ಧರಿಸಿ ಅಸಂಶಯನಪ್ಪುದೆ 9 ವರ ಗಾಯಿತ್ರೀ ನಾಮಕ ಹರಿಗೀ ರೆರಡಂಘ್ರಿಗಳ ವಿವರವ ತಿಳಿದು ತರುವಾಯದಿ ಷಡ್ವಿಧ ರೂಪವ ಸಾ ಅನುದಿನ ಧ್ಯಾನಿಸುತಿಪ್ಪುದೆ 10 ಬಿಗಿದ ಕಂಠದಿಂ ದೃಗ್ಭಾಷ್ಪಗಳಿಂ ನಗೆ ಮೊಗದಿಂ ರೋಮಗಳೊಗೆದು ಮಿಗೆ ಸಂತೋಷದಿಂ ನೆಗೆದಾಡುತ ನಾ ಲ್ಮೊಗನಯ್ಯನ ಗುಣ ಪೊಗಳಿ ಹಿಗ್ಗುವುದೆ 11 ಗೃಹಕರ್ಮವ ಬ್ಯಾಸರದಲೆ ಪರಮೋ ತ್ಸಹದಲಿ ಮಾಡುತ ಮೂಜಗದ ಮಹಿತನ ಸೇವೆ ಇದೆ ಎನುತಲಿ ಮೋದದಿ ಅಹರಹರ್ಮನದಿ ಸಮರ್ಪಿಸುತಿಪ್ಪುದೆ12 ಕ್ಲೇಶಾನಂದಗಳೀಶಾಧೀನ ಸ ಮಾಸಮ ಬ್ರಹ್ಮ ಸದಾಶಿವರೂ ಈಶಿತವ್ಯರು ಪರೇಶನಲ್ಲದೆ ಶ್ವಾಸ ಬಿಡುವ ಶಕ್ತಿ ಲೇಸಿಲ್ಲೆಂಬುದೆ 13 ಏಕೋತ್ತರ ಪಂಚಾಶದ್ವರ್ಣಗ ಳೇಕಾತ್ಮನ ನಾಮಂಗಳಿವು ಸಾಕಲ್ಯದಿಯಿವರರಿಯರೆಂಬುದೆ 14 ಒಂದು ರೂಪದೊಳನಂತ ರೂಪವು ಪೊಂದಿಪ್ಪವು ಗುಣಗಳಾ ಸಹಿತ ಇಂದು ಮುಂದೆಂದಿಗು ಗೋ ವಿಂದಗೆ ಸರಿಮಿಗಿಲಿಲ್ಲೆಂತೆಂಬುದೆ 15 ಮೇದಿನಿ ಪರಮಾಣಂಬು ಕಣಂಗಳ ನೈದಬಹುದು ಪರಿಗಣನೆಯನು ಮಾಧವನಾನಂದಾದಿ ಗುಣಂಗಳ ನಾದಿ ಕಾಲದಲಿ ಅಗಣಿತವೆಂಬುದೆ 16 ಹರಿಕಥೆ ಪರಮಾದರದಲಿ ಕೇಳುತ ಮರೆದು ತನುವ ಸುಖ ಸುರಿವುತಲೀ ಉರುಗಾಯನ ಸಂದರುಶನ ಹಾರೈ ಸಿರುಳು ಹಗಲು ಜರಿ ಜರಿದು ಬಾಳ್ವುದೆ 17 ಆ ಪರಮಾತ್ಮಗೆ ರೂಪದ್ವಯವು ಪ ರಾಪರ ತತ್ತ್ವ ಗಳಿದರೊಳಗೆ ಸ್ತ್ರಿ ಪುಂ ಭೇದದಿ ಈ ಪದ್ಮಜಾಂಡವ ವ್ಯಾಪಿಸಿಹನೆಂದೀಪರಿ ತಿಳಿವುದೆ 18 ವಿಷಯೇಂದ್ರಿಯಗಳಲಿ ತದಭಿಮಾನಿ ಸುಮ ನಸರೊಳು ನಿಂದು ನಿಯಾಮಿಸುತಾ ವಾಸುದೇವ ತಾ ವಿಷಯಂಗಳ ಭೋಗಿಸುವನೆಂದರಿವುದೆ 19 ಮೂಜಗದೊಳಗಿಹ ಭೂ ಜಲ ಖೇಚರ ಈ ಜೀವರೊಳೊ ಮಹೌಜಸನ ಪೂಜಿಸುತನುದಿನ ರಾಜಿಸುತಿಪ್ಪುದೆ 20 ಗುಣಕಾಲಾಹ್ವಯ ಆಗಮಾರ್ಣವ ಕುಂ ಭಿಣಿ ಪರಮಾಣ್ವಾಂಬುಧಿಗಳಲಿ ವನಗಿರಿ ನದಿ ಮೊದಲಾದದರೊಳಗಿಂ ಧನಗತ ಪಾವಕನಂತಿಹನೆಂಬುದೆ 21 ಅನಳಾಂಗಾರನೊಳಿದ್ದೋಪಾದಿಯ ಲನಿರುದ್ಧನು ಚೇತನರೊಳಗೆ ಕ್ಷಣ ಬಿಟ್ಟಗಲದೆ ಏಕೋ ನಾರಾ ಯಣ ಶ್ರುತಿ ಪ್ರತಿಪಾದ್ಯನು ಇಹನೆಂಬುದೆ 22 ಪಕ್ಷಗಳಕ್ಷಿಗಳಗಲದಲಿಪ್ಪಂ ತ್ಯಕ್ಷರ ಪುರುಷನಪೇಕ್ಷೆಯಲಿ ಕುಕ್ಷಿಯೊಳಬ್ಜಜ ತ್ರ್ಯಕ್ಷಾದ್ಯಮರರ ಈಕ್ಷಿಸಿ ಕರುಣದಿ ರಕ್ಷಿಪನೆಂಬುದೆ 23 ಕಾರಣ ಕಾರ್ಯಾಂತರ್ಗತ ಅಂಶವ ತಾರಾವೇಶಾಹಿತ ಸಹಜಾ ಪ್ರೇರಕ ಪ್ರೇರ್ಯಾಂಹ್ವಯ ಸರ್ವತ್ರ ವಿ ಕಾರವಿಲ್ಲದಲೆ ತೋರುವನೆಂಬುದೆ 24 ಸ್ತುತಿಸುತ ಲಕ್ಷ್ಮೀ ಪತಿಗುಣವ ಕೃತಿಪತಿ ಸೃಷ್ಟಿ ಸ್ಥಿತಿಲಯ ಕಾರಣ ಇತರ ಸರ್ವ ದೇವತೆಗಳಿಗಿನಿತಿಲ್ಲೆಂಬುದೆ25 ಪವನ ಮತಾನುಗರವ ನಾನಹುದೆಂ ದವನಿಯೊಳಗೆ ಸತ್ಕವಿ ಜನರ ಭವನಂಗಳಲಿ ಸಂಚರಿಸುತ ಸುಕಥಾ ಶ್ರವಣವ ಮಾಡುತ ಪ್ರವರನಾಗುವುದೆ26 ಪನ್ನಗಾಚಲ ಸನ್ನಿವಾಸ ಪಾ ವನ್ನಚರಿತ ಸದ್ಗುಣಭರಿತಾ ಜನ್ಯಜನಕ ಲಾವಣ್ಯೇಕನಿಧಿ ಜ ಗನ್ನಾಥವಿಠಲಾನಾನ್ಯಪನೆಂಬುದೆ 27
--------------
ಜಗನ್ನಾಥದಾಸರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಮುರಳೀ ಮನೋಹರ ವಿಠಲ | ಪೊರೆ ಇವಳಾ ಪ ಗುರು ರಾಘವೇಂದ್ರರ್ಗೆ | ತೋರ್ದ ಶಿರಿಕೃಷ್ಣಾ ಅ.ಪ. ಸಿರಿ | ನರಸಿಂಹ ಮೂರುತಿಯೆಚಂದದಲಿ ಸುಜ್ಞಾನ | ದೊಂದು ಅಂಕುರವಾ |ಸಂದೇಹ ವಿಲ್ಲದಲೆ | ಅಂದು ಸ್ವಪ್ನದಿ ತೋರಿಮಂದಳನ ಉದ್ಧಾರ | ವೆಂದು ಸೂಚಿಸಿದೇ 1 ಭಯ ಕೃತುವು ಭಯನಾಶ | ವಿಯದಧಿಪ ಗೊಲಿದವನೆನಯ ವಿನಯದಿಂ ಬೇಡ್ವ | ಹಯಮೊಗನ ದಾಸ್ಯದಯದಿ ಕೊಟ್ಟವಳೀಗೇ | ಭಾಗ್ಯ ವೈರಾಗ್ಯವನುದಯೆಗೈದು ಹೇಯೊ ಸಾ | ದೇಯಗಳ ತಿಳಿಸೋ 2 ಹರಿಯು ನೀ ನಿತ್ತುದಕೆ | ಉರುತರದ ತೃಪ್ತಿಯನುಅರಿತಿಹಳು ಈ ಗೃಹಿಣಿ | ಪರಿಸರೇಡ್ಯಾ |ದುರಿತ ರಾಶಿಗಳಳಿದು | ಹರುಷವನೆ ಸುಡಿಸುವುದುಶರಣ ಜನ ಮಂದಾರ | ಕರುಣಾಬ್ಧಿ ಹರಿಯೇ 3 ಮಧ್ವಮತ ಪದ್ಧತಿಗ | ಳುದ್ಧರಿಸ ಇವಳಲ್ಲಿಶ್ರದ್ಧೆ ಭಕುತಿಯು ಜ್ಞಾನ | ಮಧ್ವಮತದೀಕ್ಷಾವೃದ್ಧಿಗೈಸಿವಳಲ್ಲಿ | ಶುದ್ಧ ಆನಂದಾತ್ಮಅಧ್ವರೇಡ್ಯನೆ ಅನಿ | ರುದ್ಧ ಮೂರುತಿಯೇ 4 ಮೋದ ಮೋದ ಬಡಿಸಿವಳಾ 5
--------------
ಗುರುಗೋವಿಂದವಿಠಲರು
ಮೋಹನ ಕೃಷ್ಣವಿಠಲ | ಸಲಹ ಬೇಕಿವಳಾ ಪ ದೇಹ ಮಮತೆಯ ಕಳೆದು | ವೈರಾಗ್ಯವಿತ್ತೂ ಅ.ಪ. ವನಧಿ ಉತ್ತರಿಪ | ನವಪೋತ ಹರಿಯಾ |ಸ್ತವನ ಗೈಯುವ ಭಕ್ತಿ | ಪ್ರವಹ ಕೊಟ್ಟಿವಳಿಗೆಹವಣಿಸೋ ಸಾಧನವ | ಶ್ರೀವರನೆ ಕೃಷ್ಣಾ 1 ಭಾರತೀ ಪತಿಯಾದ | ಮಾರುತದ ಮತದಲ್ಲಿಸಾರತತ್ವವ ತಿಳಿಸಿ | ತೋರೋ ಸುಜ್ಞಾನ |ಮಾರುತಾಂತಾರ್ಗತನೆ | ಧೀರ ಸುಜನರ ಸಂಘಸಾರುವಂತೆಸಗೊ ಹರಿ | ಕಾರುಣ್ಯ ಮೂರ್ತೇ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀ ಹರಿಯೆಂಬಗುಪ್ತ ಮಹಿಮೆಯ ತಿಳಿದು | ಸೇವೆ ಸಲ್ಲಿಸುತಾ |ಅತಿಶಯದ ಆನಂದ | ಗತಿಯ ಸೇರುವ ಹವಣೆಕೃತಿಪತಿಯ ತೋರೆಂದು | ಪ್ರಾರ್ಥಿಸುವೆ ಹರಿಯೇ 3 ಗುರುಕರುಣವಿಲ್ಲದಲೆ | ಹರಿಯೊಲಿಯನೆಂದೆಂಬವರತತ್ವ ಸಾರವನೆ | ಕರುಣಿಸುತ ಹರಿಯೇ |ಹರಿಗುರು ಸೇವೆಯನು | ಕರಣತ್ರಯದಲಿ ಮಾಳ್ದವರಮತಿಯ ಪಾಲಿಸುತ | ಪೊರೆಯ ಬೇಕಿವಳಾ 4 ಸೃಷ್ಠಿ ಸ್ಥಿತಿ ಲಯ ಕರ್ತ | ವಿಷ್ಣು ಲೀಲಾಮೃತವಸುಷ್ಟುಸಂತತ ಸವಿವ | ಶ್ರೇಷ್ಠ ಸಾಧನವಾಕೊಟ್ಟು ಪಾಲಿಪುದೆಂಬ | ಇಷ್ಟವನೆ ಸಲಿಸೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ರಾಮಚಂದ್ರವಿಠ್ಠಲನೆ ನೀನಿವನ ಕಾಮಿತಾರ್ಥಗಳಿತ್ತು ಕಾಪಾಡೊ ಹರಿಯೇ ಪ ಭೂಮಿಜೆಯ ರಮಣ ಸುರಸಾರ್ವಭೌಮನೆ ದೇವಪ್ರೇಮ ಈಕ್ಷಣದಿಂದ ನೋಡೊ ದಯಾಸಾಂದ್ರ ಅ.ಪ. ಗುರುದ್ವಾರವಿಲ್ಲದಲೆ | ಗರುಡವಾಹನ ಕರುಣದೊರಕಲಾರದು ಎಂಬ | ಸ್ಥಿರಮತಿಯನಿತ್ತೂಗುರುಭಕ್ತಿ ಹರಿ ಭಕ್ತಿ | ಕರುಣಿಸುತ ವೈರಾಗ್ಯಸ್ಥಿರಮಾಡಿ ಪಾಲಿಪುದು | ತರತಮದ ಜ್ಞಾನಾ 1 ಪತಿ ಪ್ರೀಯಪ್ರಾಕ್ಕುಕರ್ಮವ ಕಳೆದು ಕಾಪಾಡಬೇಕೋ 2 ಮಧ್ವಮತ ಸಿದ್ಧಾಂತ ಪದ್ಧತಿಯ ತಿಳಿಸುತ್ತಬುದ್ಧಿಪೂರ್ವಕ ನಿನ್ನ ಗುಣರೂಪ ಕ್ರಿಯೆಗಳಾಶ್ರದ್ಧೆಯಿಂದಲಿ ಭಜಿಪ ಸದ್ಬುದ್ಧಿ ಪಾಲಿಸುತಮಧ್ವೇಶ ಇವನ ಹೃನ್ಮಧ್ಯದಲಿ ಪೊಳೆಯೋ 3 ಶರ್ವಾದಿ ದಿವಿಜೇಡ್ಯ ದುರ್ವಿಭಾವ್ಯನೆ ದೇವಸರ್ವತ್ರ ಸರ್ವದಾ ತವಸ್ಮøತಿಯನಿತ್ತೂನಿರ್ವಿಘ್ನತೆಯಲಿವನ ಸಾಧನವ ಪೂರೈಸಿಅಸ್ವತಂತ್ರನ ಬಂಧ ಪರಿಹರಿಸಿ ಕಾಯೋ 4 ಭಕ್ತವತ್ಸಲನೆಂಬೊ ಬಿರಿದುಳ್ಳ ಶ್ರೀಹರಿಯೆಭೃತ್ಯನಿಗೆ ಬಪ್ಪ ಅಪಮೃತ್ಯು ಪರಿಹರಿಸೀಸತ್ಯ ಗುರು ಗೋವಿಂದ ವಿಠ್ಠಲನೆ ನೀನಿವಗೆನಿತ್ಯಾಯು ಪ್ರದನಾಗು ಎಂದು ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಖಿ ನೋಡ ದ್ವಾಪರ ಯುಗವ ದ್ವಾಪರಯುಗವ ಅಪಾರ ಭಾಗ್ಯವ ಶ್ರೀಪತಿ ಇವರಿಗೊಲಿದಿರುವ ಸಖಿ ಪ. ಪಾದ ಬಲ್ಲಷ್ಟು ಬಲಗೊಂಡುಗೊಲ್ಲರ ಅರಸು ಜನಿಸಿದ ಗೊಲ್ಲರ ಅರಸು ಜನಿಸಿದ ಯುಗ ಧರ್ಮಎಲ್ಲವಿಸ್ತಾರ ರಚಿಸುವೆ ಸಖಿ 1 ಅಕ್ಕ ದ್ವಾಪರ ಧರ್ಮ ಶಕ್ಯವೆ ವರ್ಣಿಸಲುಲಕುಮಿದೇವಿಗೆ ವಶವಲ್ಲಲಕುಮಿದೇವಿಗೆ ವಶವಲ್ಲ ಯುಗಧರ್ಮತಕ್ಕಷ್ಟು ಹೇಳಿ ರಚಿಸುವೆ ಸಖಿ2 ಭೂಪ ದ್ವಾಪರದಲ್ಲೆ ಪಾಪಿ ಒಬ್ಬನಿಲ್ಲತಾಪಕೋಪಗಳು ಮೊದಲಿಲ್ಲತಾಪಕೋಪಗಳು ಮೊದಲಿಲ್ಲ ಧರೆ ಮ್ಯಾಲೆ ತಾಪಸ ಜನವೇ ಹರವಿತ್ತು ಸಖಿ 3 ಅಕ್ಷಯ ದ್ರವ್ಯವಲಕ್ಷ್ಯವಿಲ್ಲದಲೆ ಕೊಡುವೋರುಲಕ್ಷ್ಯವಿಲ್ಲದಲೆ ಕೊಡುವೋರು ರಂಗನ ರಕ್ಷೆಯ ಮಾಡಿಜೈಸೋರು ಸಖಿ 4 ಕೃಷ್ಣನ ಪಾದದಲೆ ನಿಷ್ಠೆಯುಳ್ಳವರನ್ನುದೃಷ್ಟಿಲೆ ನೋಡಿ ಸಹಿಸದೆದೃಷ್ಟಿಲೆ ನೋಡಿ ಸಹಿಸದೆ ಧರೆಮ್ಯಾಲೆ ಪುಟ್ಟಿದನಾಗ ಕಲಿಬಂದು ಸಖಿ5 ಸತ್ಯಶೌಚ ಆಚಾರ ಉತ್ತಮ ಧರ್ಮತತ್ವವಿಚಾರ ಮೊದಲಿಲ್ಲತತ್ವವಿಚಾರ ಮೊದಲಿಲ್ಲ ಧರೆ ಮ್ಯಾಲೆ ದೈತ್ಯಮಯವಾಗಿ ಜಡದಿತು ಸಖಿಯೆ 6 ಹರಿಗುರುಗಳರಿಯದ ಪರಮ ಪಾಮರಜನ ಧರೆಯ ಮೇಲಾಗ ಜನಿಸಿತುಧರೆಯ ಮೇಲಾಗ ಜನಿಸಿತು ರಾಮೇಶನಪರಮ ಭಕ್ತರನ ದಣಿಸಿತು ಸಖಿಯೆ 7
--------------
ಗಲಗಲಿಅವ್ವನವರು
ಸರ್ವ ವಿಪತ್ ಪರಿಹಾರ ಸ್ತುತಿ ಕರ್ಮ ಫಲದಾತನು ಶೂನ್ಯ ಪ ವಾಹನ ಪತನ ಉಕ್ಕಿ ಪ್ರವಹಿಸುವ ನದಿ ಮೊದಲಾದ್ದರಿಂದ ಏಕ ಕಾಲದಿ ಸಂಗ ಮರಣ ಸಂಭವಿಸುವುದು ಏಕೆಂದು ಶಂಕಿಸುತಿ ಕೇಳು ಶ್ರದ್ಧಾಳು 1 ಏಕ ಕಾಲದಿ ನಾನಾ ಜನರು ಸಂಗದಿ ಕೂಡಿ ಮಂದ ಮಾರುತ ಪುಷ್ಪವನದಿ ಶ್ರೀಕರ ಕಥಾ ಶ್ರವಣ ನಾಟಕ ಕೇಳಿಕೆಯು ಹೀಗೆ ಜನ ಸಂಘದಲಿ ನಾನಾ ಸಂಭವವು 2 ಒಂದೊಂದು ಮನುಜನಿಗು ಇಂಥಾ ಕಾಲದಿ ಇಂಥಾ ರೀತಿಯಲಿ ಇಂಥಾ ಸ್ಥಳದಲ್ಲಿ ಇಂಥಾ ಹಿತಕರವೊ ಅಹಿತವೊ ಕರ್ಮಗತಿ ಸಂಭವವು ಶ್ರೀದ ನಿಯಮಿಸುವ ವೈಷಮ್ಯವಿಲ್ಲದಲೆ 3 ಮಳೆ ಬಿಸಿಲುಭೂಕಂಪ ಚಂಡಮಾರುತ ಸುಳಿಸುಳಿದು ಪ್ರವಹಿಸುವ ನದಿ ಹರಡುವ ದಾವಾಗ್ನಿ ಎಲ್ಲ ಇಂಥಾ ಅಹಿತ ಸಂಭವದಿ ಸಿಲುಕುವರು ಅಲ್ಲಲ್ಲಿ ಬಹುಜನರು ಕರ್ಮಗತಿಯಲ್ಲಿ 4 ಘೋರ ಭೂಕಂಪದ ಪೀಡೆಗೆ ಯೋಗ್ಯರು ಯಾರು ಯಾರೊ ಒಳ್ಳೆವರೋ ಕೆಟ್ಟವರೊ ಹರಿಯು ಆ ಜನರನ್ನು ಕಂಪನಕೆ ಒಳಮಾಡಿ ಮರಣಾಂಗ ಹೀನತೆಯು ರಕ್ಷಣೆಯು ಈವ 5 ಭಿನ್ನ ಜೀವರು ಭಿನ್ನ ಕರ್ಮಗತಿ ಉಳ್ಳವರು ಭಿನ್ನ ಫಲಯೋಗ್ಯರು ಆದ ಕಾರಣದಿ ಕ್ಷೋಣಿ ಕಂಪನದಲ್ಲಿ ಮರಣ ಕೆಲವರಿಗೆ ಅಂಗ ಹೀನತೆ ಕೆಲವರಿಗೆ ರಕ್ಷಣೆ ಕೆಲವರಿಗೆ 6 ಘೃಣಿ ಹರಿಯು ಭೂಕಂಪ ಆಗುವ ಪೂರ್ವದಲೆ ಜನರು ಕೆಲವರನ್ನು ಬೇರೆ ಊರಿಗೆ ಕಳುಹಿ ಹಾನಿಗೊಳಿಸುವ ಕಂಪನಕೆ ಸಿಲುಕದಂತೆ ಇನ್ನು ಕೆಲವರನ್ನು ಅಲ್ಲಿ ಬಾರದೇ ಮಾಳ್ಪ 7 ಸಿಂಧು ವಿಜ್ಞಾನಂದ ಹರಿಯೇ ಕರ್ಮಾಧ್ಯಕ್ಷನು ಕರ್ಮಫಲದಾತ ಕರ್ಮ ಕೊಡದು ಫಲ ಕರ್ಮಾಧ್ಯಕ್ಷ ಶ್ರೀಹರಿಯೇ ಫಲದಾತ 8 ಸಂಘ ದುಃಖ ಪ್ರಾಪ್ತಿಯು ಹಾಗೆ ಭವಿಸುವುದು ಐಹಿಕ ವಿಷಯಜವು ಉದಾನಿಸಿ ಅಘದೂರ ಗುರುಗ ಶ್ರೀ ಹರಿಯ ಸ್ಮರಿಸು 9 ನರಜನ್ಮ ಹೊಂದಿದವ ಹರಿನಾಮ ಸರ್ವದಾ ಸ್ಮರಿಸುವುದು ಕರ್ತವ್ಯ ದೊರಕಿದ ಸ್ಥಳದಿ ಹರಿನಾಮ ಭಕ್ತಿ ಪೂರ್ವಕದಿ ನುಡಿಯಲೇ ಬೇಕು ನರಪಶÀು ಜಡಮತಿ ಮೂಢನು ನುಡಿಯ 10 ಹರಿಯೇ ಸರ್ವೋತ್ತಮನು ಮುಖ್ಯಕಾರಣ ವಿಷ್ಣು ಶ್ರೀರಮಾಪತಿಯೇ ಸ್ವತಂತ್ರ ಜಗನ್ನಾಥ ಸರಸಿಜೋದ್ಭವ ಶಿವ ಶಕ್ರಾದಿ ಸರ್ವರಿಗೂ ಪ್ರೇರಕನು ಸ್ವಾಮಿಯು ಚಿತ್ ಅಚಿತ್ ನಿಯಂತ 11 ವಿಹಿತ ಸಾಧನಕ್ಕೊದಗೆ ನ್ಯಗ್ರೋಧೋದುಂಬರ ಹರಿ ದೇಹ ಬೆಳಸುವ ಪೋಷಿಸುವ ರಕ್ಷಿಸುವನು ಅಹರ್ನಿಶಿ ಪಾಲಿಸುವ ಭಕ್ತವಾತ್ಯಲ್ಯದಿ ಮಹಾರ್ಹರ ರಕ್ಷಿಸಿದ ಪ್ರಹ್ಲಾದ ಗಜಪತಿಯ 12 ಹರಿಯ ಪಾದಕೆ ಅಭಿಷೇಕ ಮಾಡಿದ ಬ್ರಹ್ಮ ಹರನು ಕೈಲಾಸ ವಾಸನು ಆ ತೀರ್ಥ ಸಹಸ್ರನಾಮ ಬೃಹತೀ ಸಹಸ್ರ ಸಹ ಪಠಿಸುತ್ತಾ ಸತಿ ಪಾರ್ವತಿಗೆ ಎರೆದ 13 ಹರಿನಾಮ ಸಂಸ್ಮರಣೆ ಪೂರ್ವಕದಿ ಈ ನುಡಿಯ ಬರೆಯುವ ಪಠಿಸುವ ಕೇಳುವ ಭಕ್ತರನ್ನು ಶ್ರೀರಮಾಯುತ ಹರಿ ಸುರವೃಂದ ಸಹ ಬಂದು ಸಂರಕ್ಷಿಸುವ ಸರ್ವವಿಪತ್ ದೂರ ಮಾಡಿ 14 ವರಾಹ ನರಸಿಂಹ ಭೂತಿದ ದಯಾಬ್ಧಿ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಸದಾ ಶರಣು ಮಾಂಪಾಹಿ ಸಜ್ಜನರ 15
--------------
ಪ್ರಸನ್ನ ಶ್ರೀನಿವಾಸದಾಸರು