ಒಟ್ಟು 84 ಕಡೆಗಳಲ್ಲಿ , 4 ದಾಸರು , 82 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದೆ ಮೂಢಮನುಜಾಮಾನವ ಜನುಮದಿ ಬಂದೀ ಜಗದೀ ಪ ದೇಶದ ಸೇವೆಗೆ ತನು ನೀಡಿದೆಯಾಭಾಷೆಯ ಏಳ್ಗೆಗೆ ಮನ ಮಾಡಿದೆಯಾಕಾಸಿಗಾಗಿ ವಂಚಿಸಿ ನಿನ್ನೊಡಲಿನಪೋಷಣೆಗಾಗಿ ದುಡಿದೆಯಲ್ಲದೆ 1 ಆರ್ತರ ದುಃಖವನೀಡಾಡಿದೆಯಾಸ್ವಾರ್ಥದ ಹಂಬಲ ಬಿಟ್ಟು ನಡೆದೆಯಾಪೂರ್ತಿಯಾಗಿ ಜನಹಿತ ನೋಡಿದೆಯಾಧೂರ್ತತನವ ಬರಿದೆ ತೋರಿದೆಯಲ್ಲದೆ 2 ಮದಮತ್ಸರಗಳ ನೆಲಕೆ ಬಡೆದೆಯಾಹೃದಯ ನಿರ್ಮಲಗೊಳಿಸಿ ನುಡಿದೆಯಾಮುದದಿ ಗದುಗಿನ ವೀರನಾರಾಯಣನಪದವನೊಮ್ಮೆಯಾದರೂ ಸ್ಮರಿಸಿದೆಯಾ 3
--------------
ವೀರನಾರಾಯಣ
ಏನು ವೈಭವವೊ ಶ್ರೀನಿವಾಸ ಧೊರೆಯೆನಿನ್ನದೇನು ವೈಭವವೊ ಪ ಸಿರಿಯು ತಾನೆ ನಿಂತು ನಿನ್ನನಿರುತ ಸೇವೆ ಗೈಯ್ಯುತಿಹಳೊಸರಸಿಜಾಸನಾದಿ ಸುರರುಕರವ ಮುಗಿದು ತುತಿಸುತಿಹರೂ 1 ನಾಗರಾಯ ದಿವ್ಯಾಸನನಾಗಿ ಹೆಡೆಯ ಛತ್ರ ಪಿಡಿವಯೋಗಿ ನಾರದ ತುಂಬುರಾರುರಾಗ ಮಾಡಿ ಹಾಡುತಿಹರೊ 2 ಗರುಡ ವಾಯು ಸುತರು ನಿನ್ನಪರಮ ವಾಹನರಾಗಿ ಬಹರುಸುರಮುನಿಗಳು ಸಕಲ ನರರುನಿರುತನಾಮ ಜಪಿಸುತಿಹರು 3 ಮಂಗಳ ವಾದ್ಯಗಳು ಮೊಳಗಿಮಂಗಳಾರುತಿಯಾಗಿ ಬೆಳಗಿತಿಂಗಳು ನೇಸರರು ದಿವ್ಯಮಂಗಳ ದೀವಟಿಗರಾಗಿ 4 ಅಮೃತ ನಿನ್ನ ಪಾನತೋರ ಭಕುತರಾಳೆ ಗದಗುವೀರನಾರಾಯಣನೆ ನಿನ್ನದೇನು ವೈಭವವೊ 5
--------------
ವೀರನಾರಾಯಣ
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಒಲಿಯುವೆ ನೀನೆಂತು ಹಲಧರಾನುಜಾ ಪ ಹೊಗಳಲು ನೀ ಮರುಳಾಗುವನಲ್ಲಾತೆಗಳಲು ನೀ ಮುನಿಯುವನಲ್ಲಾಹೊಗಳಲ್ಯೊ ತೆಗಳಲ್ಯೊ ತಿಳಿಯುವುದಿಲ್ಲಬಗೆಯನು ತೋರಲು ಹೇಳಸೊಲ್ಲ 1 ಪಂಚಪಕ್ವಾನ್ನವ ಹಂಚೇನೆಂದರೆಲಂಚಗುಳಿಯು ನೀನಲ್ಲಚಂಚಲಮನದವ ತಾನಾಗಿಹನೈಹಂಚಿಕೆಯನು ಹೇಳ್ ನಿತ್ಯತೃಪ್ತನೆ 2 ಪತಿ ನೀನಹುದೋಘನತರ ಗದುಗಿನ ವೀರನಾರಾಯಣಮನಸಿನ ಇಂಗಿತವನು ಪೇಳೆಲೊ ನೀ 3
--------------
ವೀರನಾರಾಯಣ
ಕಂಡಿರೇನಯ್ಯ ಹರಿಯನ್ನು ಪ ಅಲ್ಲಲ್ಲಿ ಇರುವನಂತೆ ಎಲ್ಲೆಲ್ಲೂ ಶಿಕ್ಕನಂತೆಗುಲ್ಲನು ಕೊಡದಿಹನಂತೆ ಬಲ್ಲವ ಬಲ್ಲನಂತೆ 1 ಧ್ರುವನ ಮುಂದೆ ನಿಂತಿದ್ದನಂತೆಕುವರ ಪ್ರಹ್ಲಾದನ ಹಿಡಿದಿದ್ದನಂತೆಬವರದಿ ಪ್ರಾರ್ಥಿಸೆ ತೋರಿದವನಂತೆಶಬರಿಯ ಎಂಜಲ ತಿಂತಿದ್ದನಂತೆ 2 ಮುನಿಗಳು ಹೃದಯದಿ ಕಂಡರಂತೆವನಿತೆ ಯಶೋದೆಗೆ ಸಿಕ್ಕಿದನಂತೆಹನುಮ ಭೀಮರು ನೋಡಿದರಂತೆಅನಿತೋದ್ಭವಗೆ ಮೆಚ್ಚಿದನಂತೆ 3 ದ್ರೌವ್ಯದ ಕಣ್ಣಿಗೆ ಕಾಣಿಸನಂತೆದಿವ್ಯ ದೃಷ್ಟಿಗೆ ಸಿಲುಕುವನಂತೆಭವ್ಯ ಗದುಗಿನ ವೀರನಾರಾಯಣದಿವ್ಯ ದೃಷ್ಟಿಯ ಕೊಡು ಓರಂತೆ 4
--------------
ವೀರನಾರಾಯಣ
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕಾಯೋ ತೋಯಜ ನೇತ್ರ ಪ ಸುಮಿತ್ರ ಪವಿತ್ರ ಚರಿತ್ರ ಅ.ಪ. ಮಾನವ ಜನುಮದಿ ನೀ ತಂದೆಯೊಎನ್ನ ಗ್ಲಾನಿಯ ಕಳೆದು ಸುಜ್ಞಾನವನಿತ್ತು 1 ಕಠಿಣ ಸಂಸಾರದ ಕಟು ಅನುಭವವ ಸೈಸೆಸಟಿಯಲ್ಲೋ ಇದ ಸಂಕಟವ ಪರಿಹರಿಸಿ 2 ಹೃದಯದಿ ನೆಲಿಸಿ ನೀ ಸದಾವಕಾಲದೊಳುಗದುಗಿನೊಳ್ಮೆರೆಯುವ ವೀರನಾರಾಯಣ 3
--------------
ವೀರನಾರಾಯಣ
ಕಾಲಬೆರಳು ಬಾಯೊಳೇತಕೊ ರಂಗಯ್ಯ ನಿನ್ನ ಪ ಸಾಲದಾಯ್ತೆ ಭಕ್ತರಿತ್ತ ಕಾಲೋಚಿತ ಶಾಲ್ಯನ್ನವುಹಾಲೋಗರ ಭಕ್ಷ್ಯಗಳು ಅ.ಪ. ಆಲದೆಲೆಯ ಮೇಲೆ ಮಲಗಿರೆ ಚೆಲುವ ನಿನ್ನಕಾಲುಚಾಚಲನುವೆ ಇಲ್ಲವೆಬಾಲನಿನ್ನ ನಾಭಿಕಮಲ ಕಾಲಿವಾಲಿದಲ್ಲಿ ಗಂಗೆಜಲವ ಬಿಡುತಲಿರುವೆಯೇನು 1 ಹಸಿವೆ ಬಹಳವಾಗಿರುವದೆ ನಿನ್ನಮ್ಮ ಆಯಶೋದೆ ನಿನಗೆ ಮೊಲೆಯನುಣಿಸಳೆನಿಶಾಚರಿ ಪೂತನಿಯ ಮೊಲೆಯವಿಷವನುಂಡ ಕಾರಣದಲಿ ನೀರಡಿಸುತಲಿರುವೆಯೇನು 2 ಪದದಿಂದಲಿ ಬರುವ ಗಂಗೆಯ ಉದಕದಿಂದಉದರದೊಳಿಹ ಜೀವರಾಶಿಯಮುದದಿಂದುದ್ಧರಿಸಲೆಂದುಪದುಮಾಕ್ಷನೆ ಜುರುಜುರು ನೀ ಚೀಪಲಿರುವೆಯೇನು ಹೇಳು 3 ಹಸುಳ ನಿನ್ನ ಪದದೊಳಿಡುತಿಹ ಭಕ್ತರ ಭಕ್ತಿರಸವ ಸವಿದು ನೋಡುತಿರುವೆಯಾಪೆಸರನೆತ್ತ ಗದುಗಿನ ಶ್ರೀ ವೀರನಾರಾಯಣನೆದಯವ ತೋರಿ ಹೇಳು ಬೇಡುತಿಹೆನು 4
--------------
ವೀರನಾರಾಯಣ
ಕುಮಾರವ್ಯಾಸ ನಿತ್ಯ ಶುಭ ಮಂಗಳಂ ಪ ಮಂಗಳಂ ವೀರನಾರಾಯಣನ ಭಕ್ತಂಗೆಮಂಗಳಂ ಶಿವನಂಶ ದ್ರೋಣಸುತ ಶಿಷ್ಯಂಗೆಮಂಗಳಂ ಕನ್ನಡದೆ ಭಾರತವನೊರೆದವಗೆಮಂಗಳಂ ಯೋಗೀಂದ್ರ ಕುವರವ್ಯಾಸಂಗೆ 1 ಕವಿ ಪುಂಗವಂಗೆ 2 ಭಾರತದ ಶಾಸ್ತ್ರಾರ್ಥದೊಗಟವನು ಬಿಡಿಸುತಲಿಸಾರಿಜನರಿಗೆ ರಮ್ಯಗಮಕದಲಿ ಹೇಳಲಿಕೆಭಾರತದ ಶ್ರೀ ಬಿಂದುರಾಯರನು ಪ್ರೇರಿಸಿದ ತೋರ ಗದುಗಿನ ವೀರ ನಾರಾಯಣಂಗೆ 3
--------------
ವೀರನಾರಾಯಣ
ಕೂಗಿತು ತಾಮ್ರದ ಚೂಡ ಪರ ಇಲ್ಲ್ಲೆಂದು ಪ ಪಕ್ಕಗಳೆರಡು ಚಪ್ಪರಿಸಿ ಡಂಗುರುವ ಹೊಯ್ಯೆ ಸೂಕ್ಕಿದವರ ಎದೆ ಜರ್ಝರಿಸೆ ರೆಕ್ಕಿಯ ಮುಖವೆತ್ತಿ ಹರಿಸರ್ವೋತ್ತಮನೆಂದು ಕೊಕ್ಕಟೆ ಕೊಕ್ಕಟೆ ಕೊಕ್ಕಟ್ಟೆ ಕೋ ಎಂದು1 ಒಂದು ಝಾವದಿ ಓಂಕಾರನೆಂದು ಕೂಗೆ ಇಂದಿರಾಪತಿ ವಿಧಿಜನಕನೆಂದೂ ಸಂದೇಹಪಡಬೇಡಿ ಸಕಲಾಂತರ್ಯಾಮಿ ಶ್ರೀ ಬಿಂದುಮಾಧವನಲ್ಲದಿಹಪರವಿಲ್ಲವೆಂದು 2 ಎರಡು ಝಾವದಿ ಪುರುಷೋತ್ತಮನೆಂದು ಗರುಡಾಚಲ ನರಸಿಂಹನೆಂದು ಮೂರನೆ ಝಾವಕ್ಕೆ ವೀರನಾರಾಯಣ ಹÀರಿಗಯಾಗದಾಧರನಲ್ಲದಿಲ್ಲವೆಂದು3 ಏಕೋ ನಾರಾಯಣ ದೇವನೆಂದು ಗೋಕುಲಪತಿಯಲ್ಲದಿಹಪರ ಇಲ್ಲವೆಂದು 4 ಯಾಮ ಆರರೊಳು ವ್ಯಾಸಮೂರ್ತಿ ಎಂದು ರೋಮಕೋಟಿ ಬ್ರಹ್ಮರುದ್ರರೆಂದು ಸಾಮಗಾಯನ ಕಾವೇರಿ ರಂಗೇಶ ಸ್ವಾಮಿ ಅಳಗಿರಿ ತಿಮ್ಮನಲ್ಲದಿಲ್ಲವೆಂದು 5 ಏಳು ಝಾವದಿ ವೇಣಿಮಾಧವನೆಂದು ಮೇಲಗೋಟೆ ಚಳ್ಳಾಬಳ್ಳನೆಂದು ಶ್ರೀಲೋಲ (ಆಯೋಧ್ಯಾ) ರಘುರಾಮ ಗಂಡಕಿ ಪರ ಇಲ್ಲೆಂದು6 ಶ್ವೇತ ವರಾಹನೆಂದು ಮಾವ ಮರ್ದನ ಜನಾದರ್Àನನೆಂದು ಶ್ರೀ ಉಡುಪಿಯ ಕೃಷ್ಣ ವಿಜಯವಿಠ್ಠಲ ತಿಮ್ಮ ದೇವನಲ್ಲದೆ ಬೇರೆ ಇಹಪರ ಇಲ್ಲವೆಂದು 7
--------------
ವಿಜಯದಾಸ
ಕೇಳಿಸಲೊಲ್ಲದೇನೋ ಕೃಷ್ಣಾ ಕೇಳಿಕೇಳದಂತಿರುವಿಯೇನೋ ಪ ಬಾಳುವೆಯೊಲು ಕೀಳಾದೆನಾನಿಂತುಏಳಿಸೆನ್ನನು ಎಂದು ಕೇಳಿಕೊಳ್ಳುವದಿನ್ನು ಅ.ಪ ಯಾವತ್ತೂ ತಿಳಿದವನು ಎಂಬರು ಎನ್ನನೋವು ತಿಳಿಯದಾಯ್ತೇನುಸಾವಿರ ವಿಥಿಗಳಿದ್ದೆನ್ನಯ ಪಾಲಿಗೆದೇವಾ ಅವಲ್ಲವು ಕಿವುಡಾದವೇನೋ 1 ತುಂಬಿ ನಿಂತಿಹನೆಂಬೀಭಾವಕೆ ನೀನೆಂಬಿ ಆವಾವಜೀವರ ಭಾವವರಿತು ನೀಕಾವುದೆಂತೆಂಬೊ ಈ ವಚನವು ನಿನಗೆ 2 ಭೇದಭಾವವು ಇಲ್ಲೆಂದೂ ಸಾಧಿಸುವವುವೇದಗಳೆಲ್ಲ ಎಂದುಬಾಧೆಯ ಬಿಡಿಸೆಂದು ಬೇಡಿಕೊಳ್ಳುವೆಗದುಗಿನ ಆಧಾರಿ ದೇವನೆ ವೀರನಾರಾಯಣ 3
--------------
ವೀರನಾರಾಯಣ
ಕೊಳಲನೂದೆಲೋ ಕೃಷ್ಣ ಕೊಳಲನೂದೆಲೊ ಪ ಕೊಳಲನೂದು ಮನದ ದುಗುಡಕಳೆದು ಮತ್ತೆ ಮನಕೆ ಪ್ರಶಾಂತೆತಳೆಯುವಂತೆ ನಿತ್ಯಮಂ_ಜುಳ ಸ್ವರಗಳನ್ನು ತೆಗೆದು ಅ.ಪ. ತುಂಬಿ ನಳಿನಬೆರಳುಗಳು ತೂತು ಮುಚ್ಚಿತೆರೆದು ಸವಿಯ ನಾದದಲ್ಲಿ ನಿಸಾರ ನಿ ದ ಪ ಮ ಪ ನಿ ಎಂದು 1 ಇಲ್ಲಿ ಪೀಠದಿ ಎದ್ದು ನಿಲ್ಲು ಥಾ7ಟದಿಮಲ್ಲಿಗೆ ವನಮಾಲೆ ಕೊರಳೊಳಲ್ಲಾಡುತಿರಲು ರೂಪದಲ್ಲಿ ಮನವಿನೈಕ್ಯವಾಗಿತಲ್ಲೀನರಾಗುವಂತೆ ಕೃಷ್ಣಾ 2 ಎದ್ದುನಿಂತು ಮಾಟದಿ ನಿಂತು ಮುದ್ದು ನೋಟದಿಬಿದ್ದವರನು ನೋಡಿ ನಮಗೆಶುದ್ಧ ಬುದ್ಧಿ ಕೊಟ್ಟು ನಮ್ಮದುದ್ಧರಿಪುದು ಗದುಗಿನ ಪ್ರಸಿದ್ಧ ವೀರನಾರಾಯಣ 3
--------------
ವೀರನಾರಾಯಣ
ಕೊಳಲೂದೋ ಕೃಷ್ಣ ಕೊಳಲೂದೊ ಪ ಕೊಳಲೂದಲು ಮನ ತಳೆವುದು ಮನವಿದೊಬಳಲಿಪ ಚಿಂತೆಯ ಕಳೆವುದು ನಾದೊ ಅ.ಪ. ಸವಿಸವಿ ಸ್ವರಗಳು ಕಿವಿಗಳ ಹೊಗಲದು _ಭವಿಸುದೆನ್ನೊಳು ಭಕುತಿಯನಾದೊ 1 ತನು ಕೊಳವೆಯಲಿ ನಿನದುಸಿರನು ಕೊಡೆಇನಿದು ನುಡಿದು ಪಾವನ ತನುವಹುದೊ 2 ಸ್ವರಮಧುರತೆಯು ಶಿರದೊಳು ಚರಿಸುತೆನಿರುತ ನಿನ್ನಯ ಸ್ಮರಣೆಯ ನೀವುದೊ 3 ಮಧುರ ನಿನ್ನಯ ಗಾನವ ಕೇಳ್ವುದುಗದುಗು ವೀರನಾರಾಯಣನ ಮಹಾ ಪ್ರಸಾದೊ 4
--------------
ವೀರನಾರಾಯಣ
ಚಂಚಲಿಸಲು ಕೊಡದಿರು ನೀನೆನ್ನ ಮನಕೆ ಶ್ರೀಹರಿಯೇ ಪ ವಂಚಿಸುತಿಹುದೀ ಮನವು ಸ್ಥಿರಗೊಳಿಸಲರಿಯೇ ಅ.ಪ. ನಿನ್ನ ಪದದಿ ಏನಿರಿಸೆ ಇನ್ನು ಭಜಿಸಬೇಕೆಂದರೆಭಿನ್ನ ದೆಸೆಗೆ ಓಡಿಸದೆ ಅನ್ಯವನ್ನೆ ಚಿಂತಿಸುವುದು 1 ಕಡಲ ಕಡಿಯುವಾಗ ಗಿರಿಯು ನಡುಗದಂತೆ ಗಟ್ಟಿ ನಿಂತುಹಿಡಿದ ತೆರದೊಳಡಲ ಹೊಕ್ಕು ಜಡಿದು ಎನ್ನ ಮನದಿ ನಿಂದು 2 ಸದಾ ಭಜಿಸುವಂತೆ ಮಾಡೋ ಗದುಗು ವೀರನಾರಾಯಣ 3
--------------
ವೀರನಾರಾಯಣ
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ