ಒಟ್ಟು 81 ಕಡೆಗಳಲ್ಲಿ , 41 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಮೂರು ವಚನ ಪ್ರಹ್ಲಾದ ಹೀಗೆ ಬಾಲಕರಿಗ್ಹೇ ಳುವಾಗ ಕೇಳುತಲದನು ಬೇಗಶಂಡಾಮರ್ಕ- ರ್ಹೋಳಗಿ ಹೇಳಿದರು ಚಂದಾಗಿ ದೈತ್ಯನಾಗಲಾಕ್ಷಣದಲ್ಲಿ ಬೇ ಆಗ ಪ್ರಹ್ಲಾದನಾ ಬೇಗ ಕರೆ ಕಳಿಸುತಲೆ ಹೀಗೆಂದ ಕ್ರೋಧ ಭರಿತನಾಗಿ ತಾನು 1 ರಾಗ ಆವಾತ ಬಲನಿನಗೆ ಪ ನಾನೊಬ್ಬನೆ ಬಲ ಅ.ಪ ಕುಲಭೇದ ಮಾಡುವಿಯೋ ಹುಟ್ಟಿ ನೀಕುಲಕಂಟನಾದ್ಯೋ1 ಕೆಟ್ಟರಲ್ಲಾ ಕಡುದೈತ್ಯ ಜಾಲಿಗಿಡನಾಗಿ ಹುಟ್ಟಿದ್ಯೋ 2 ಇದ್ದರೇನು ಬಿಡದೆ ಆ ಕೊಡಲಿಗೆ ಕಾವಾದ್ಯೋ 3 ವಚನ ನಾ ಮಾತುಗಳು ವಿರಸಾದ ಸರಿಸಿ ಅವನಲಿ ಸ್ನೇಹ ಸ್ಮರಿಸಿ ಅವನಲಿ ಭಕ್ತಿಸುರ ಹರುಷದಿಂದಲಿ ನುಡಿದ ಹರಿ ಹಿರಣ್ಯ ಕಶಿಪುವಿಗೆ ರಾಗ ಅವನೆ ಎನಗೆ ಬಲವು ಪ ಶ್ರೀ ವೈಕುಂಠ ಭುವನಕ್ಕೆ ಒಡೆಯಾ ಅ.ಪ ಕುಲಗಳಿಗೊಡೆಯ 1 ಅವನೆ ಪಾಲಿಸಿ ನಾಶವನು ಅವನೆ ಸರ್ವೋತ್ತಮನವನೆ ಎನ್ನೊಡೆಯಾ 2 ಸರ್ವರಲ್ಲಿ ಇಡು ಸ್ನೇಹವ ಪಾದ ಅನಂತಾದ್ರಿಗೊಡೆಯ ನಾಗಿರುವಾ 3 ರಾಗ ಮಗನಮೇಲೆ ಖಡ್ಗ ಹಿಡಿದನು 1 ಮಾತಾಡಿದ್ಹೇಳೆಲೊ ನೀನು 2 ಹರಿಯನ್ನೇ ಕೊಂಡಾಡುವೆಯಲ್ಲಾ ಆಹರಿಯ ಹೊರತು ಗತಿಯೆನಗಿಲ್ಲಾ 3 ಕಡಿದು ಬಿಡುವೆ ನಿನ್ನನ್ನು ನಾನು ಹಿಂದೆ ಕಡಿದೇನು ಮಾಡಿದಿ ಎಲೋ ನೀನು 4 ಕಂಡಂಜುವನಲ್ಲವೆಲೊ ನಾನು 5 ಸ್ಥಿರವೆಂಬುದನರಿಯೆಯೋ 6 ಶ್ರೀಹರಿವಶವಾಗಿಹುದು 7 ಅವನಿದಿರುವಾ ಸ್ಥಳವಾವುದು 8 ಕೊಡುವ ನೆನಗವತಾನು 9 ಮೂರ್ಖ ತಿಳಿ ನೀನು 10 ಪ್ರಕಟನಾಗುವ ಅನಂತಾದ್ರೀಶಾ 11 ವಚನ ದೃಢವಾದ ಕಂಬವನು ದೃಢಮುಷ್ಠಿ ಕಡುಶಬ್ಧ ತಡವಿಲ್ಲ ಹೋಯಿತು ಒಳಗೆಹಿಡಿ ಬ್ರಹ್ಮಾದಿಗಳು ಪೊಡ ನಡುವೆ ಬಂದಿತು ಎಂದು ಸಿಕ್ಕಲ್ಲೇ ಅಡಗಿದರು ಆಗ ಪಟುತರ ಶ್ರೀಹರಿಯುಕುಟಿ ಮಹಾಕಠಿನ ನರಮೃಗನಾಗಿ ಭಟರು ಇರುವಲ್ಲೆ ಆರ್ಭ ಸಂಹನನ ನರನುನರ ಸಿಂಹ ಜಿಹ್ವೆನಲಿದಾಡುವದು ದೈತ್ಯಸಿಂಹ ನಡುಗಿದನು ರಾಗ ಶೌರ್ಯದಿಂದ ಯುದ್ಧವೆಂಬೋ ಕಾರ್ಯ ಮಾಡಿದಾ 1 ಗದೆಯ ಸಹಿತ ಕೈಯ ಹರಿಯು ವದಗಿ ಹಿಡಿದನು 2 ಖಡಗಚರ್ಮ ಹಿಡಿದು ಬಂದ ನಡೆದು ಮುಂದಕ್ಕೆ 3 ತಕ್ಕವಾಗಿರುವ ಹೊಸ್ತಿಲಕ್ಕೆ ನಡೆದನು 4 ಹೃದಯದಲ್ಲಿ ಸೀಳಿದಾ 5 ಕೊಂದು ಎಲ್ಲ ಸರಳ ಮಾಡಿದಾ 6 ಸ್ತುತಿಸಿ ಪುಷ್ಟವೃಷ್ಟಿಕರೆದುರು7 ಭಯನಿವಾರಣನ ದಯದಿ ಭಯವ ಕಳೆದರು 8 ನುಡಿದವಾಗ ತೀವ್ರದಿಂದಲಿ 9 ಗಾಯನವ ಮಾಳ್ಪರು 10 ಸಾಹಿತ್ಯದಿಂದಲಿ11 ಮೂರ್ತಿ ಕಂಡು ದೂರ ನಿಂತರು 12 ಸಂತತಾನಂತದ್ರೀಶನಂತ ತಿಳಿಯರು 13 ವಚನ ಸಂಪೂರ್ಣ ಕೇಳ್ವರೂ ಅವರು ದುರಿತ ತೋರುವನು ಪ್ರತ್ಯಕ್ಷ ಚಾರ್ವನಂತಾದ್ರೀಶ ನಾರಸಿಂಹನು ಮಾಡಿರುವಲ್ಲಿ ಪೂರ್ಣವಾಯಿ ದಯದಿಂದ ಮೂರು ಅಧ್ಯಾಯ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅಸುರ ಬಾಧಿಸುತಿರಲು ಋಷಿಗಳು ಸ್ತುತಿ ಮಾಡೆ ದಶರಥನ ಗರ್ಭದಲಿ ಜನಿಸಿ ಬಂದೆ 1 ಶಿಶುವಾಗಿ ಕೌಸಲೆಗೆ ಬಾಲಲೀಲೆಯ ತೋರ್ದು ಕುಶಲದಿಂ ನಾಲ್ವರ ಕೂಡೆ ಬೆಳೆದೆ 2 ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದು ವಸುಧೆಯೊಳು ಶಿಲೆಯನ್ನು ಸತಿಯ ಮಾಡಿ 3 ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದು ಕರವ ಪಿಡಿದು 4 ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿ ದಶರಥಗೆ ಏಕೀಭಾವವನೆ ತೋರಿ 5 ಪರಮ ಹರುಷದಲಿ ಸಾಕೇತನಗರಿಗೆ ಬಂದು ಕಿರಿಯ ಮಾತೆಯ ಕಠಿಣ ನುಡಿ ಕೇಳಿ 6 ಚಿತ್ರಕೂಟಕೆ ಬಂದು ಕೃತ್ಯವೆಲ್ಲವ ನಡೆಸಿ ಭ್ರಾತೃ ಭರತನಿಗೆ ಪಾದುಕೆಯನಿತ್ತು 7 ವನದೊಳಗೆ ಸಂಚರಿಸಿ ಘನ ಕಾರ್ಯಗಳ ಮಾಡಿ ಹನುಮನ ಕಳುಹಿ ಮುದ್ರಿಕೆಯ ಕೊಡಲು 8 ಮಿತ್ರೆ ಜಾನಕಿಗರುಹಿ ರತ್ನ ಕೊಂಡು ಬರಲು ಶರಧಿ ಕಟ್ಟಿ 9 ದುಷ್ಟ ರಾಕ್ಷಸ ಕುಲವ ಕುಟ್ಟಿ ಬೇರನೆ ಸವರಿ ಸೃಷ್ಟಿಸುತೆ ಜಾನಕಿಯ ಅಗ್ನಿ ಹೊಗಿಸಿ 10 ಪಟ್ಟಣಕೆ ಬಂದು ಭರತನಿಗೆ ಪೇಳೆ ಅಷ್ಟಗಂಗೆ ಉದಕವನೆ ತಂದು 11 ಅಷ್ಟಋಷಿಗಳು ಎಲ್ಲ ಕೂಡಿ ಕೊಂಡು ಪಟ್ಟಾಭಿಷೇಕವನು ಮಾಡುತಿರಲಂದು 12 ಸೃಷ್ಟಿಯೊಳು ಜಗನ್ನಾಥವಿಠಲನಿಗೆ ಪುಷ್ಪ ವೃಷ್ಟಿಗಳನ್ನು ಕರೆದರಾಗ13
--------------
ಜಗನ್ನಾಥದಾಸರು
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಎಷ್ಟೆಂದು ಹೇಳಲಮ್ಮಯ್ಯಕೃಷ್ಣನ ದಯವ ದಿಟ್ಟ ಪಾಂಡವರಲ್ಲೆಪ್ರಾಣ ಇಟ್ಟುಕೊಂಡಿ ಹನಮ್ಮ ಪ. ನೀರಜಾಕ್ಷಗೆ ನಮಿಸಿ ವೀರರೈವರು ಮಹಾದ್ವಾರದಲ್ಲಿ ಹೋರೆಂದು ಸಾರಿ ಹೇಳಿದೆನಮ್ಮಮಾರನಯ್ಯನ ಪಿತನ ಮೋರೆ ನೋಡುತಲಿತೀವ್ರ ಕರೆತಾರೆ ಮುತ್ತಿನ ಹಾರ ನಿನಗೆ ಈವೆನೆಂದ1 ಇಂದು ಮುಖಿಗೆ ನಾನು ವಂದಿಸಿ ಐವರು ಹೊರಗೆ ಬಂದಾರೆ ಹೀಗೆಂದೆ ನಮ್ಮಯ್ಯಮಂದಹಾಸನು ದಯದಿಂದ ನೋಡುತಲೆನ್ನತಂದು ತೋರಮ್ಮ ತೋಳಬಂದಿ ನಿನಗೀವೆನೆಂದ2 ಪುಟ್ಟ್ಟಸುಭದ್ರೆ ಪಾಂಡವರ ಪಟ್ಟದರಾಣಿ ದ್ರೌಪತಿಅಷ್ಟೂರೂ ಬಂದಾರೆಂಬೊ ಉತ್ಕ್ರಷ್ಟ ಹೇಳಿದೆನಮ್ಮತುಷ್ಟÀನಾಗಿ ರಮಿಯರಸು ಥಟ್ಟನೆ ಕರೆತಾರೆÀಂದುಕೊಟ್ಟು ವೀಳ್ಯವ ದಯದ ವೃಷ್ಟಿಗರೆದನಮ್ಮ 3
--------------
ಗಲಗಲಿಅವ್ವನವರು
ಏನು ಧನ್ಯರೋ ಜಗದಿ ಎಂಥ ಮಾನ್ಯರೋ | ಮೌನಿ ಶ್ರಿ ರಘುಪ್ರೇಮತೀರ್ಥರು ಪ ಕಲಿಯುಗದಿ ಕÀ್ರತುಗೈದ ಇಳಿಯ ಜನಕ ಸಾಧ್ಯವೆಂದು ಕುಲಿಶಪಾಣಿಯಂತೆ ತೋರ್ಪರು 1 ಧೂರ್ತರಿಂದ ದೂರವಿದ್ದು | ಸ್ವಾರ್ಥರಹಿತರಾಗಿ | ಸಕಲ ತೀರ್ಥಕ್ಷೇತ್ರ ಚರಿಸಿ ಜನ್ಮ ಸಾರ್ಥಕೆನಿಸಿದ ಯತಿಯು 2 ಸದನ ತೃಣಸಮಾನವೆನಿಸಿ ಮುದದಿ | ವಿನಯಶೀಲ ದ್ವಿಜರಿಗಿತ್ತು ಮುನಿಯೆನಿಸಿ ವಿರುಕ್ತರು 3 ಚತುರಾಶ್ರಮ ವ್ರತದಿ ನೇಮ ಸತತಾ ಚರಿಸುತಲಿ | ಶಿಷ್ಯರಾದಿಗೆ ವ್ರತಬೋಧವೃಷ್ಟಿ ಹಿತದಿಗರೆದು ಪೊರೆವ ಯತಿಯು 4 ಶ್ರೀಮಧ್ವಸುಮತವಾರಿಧಿ ಸೋಮನೆಂದೆನಿಸಿ | ಜಿತ ಕಾಮರಾಗಿ ಕಠಿಣ ತಪದಿ | ಶ್ರೀ | ಶಾಮಸುಂದರನ ವಲಿಸಿದವರು 5
--------------
ಶಾಮಸುಂದರ ವಿಠಲ
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಾಯೆ ಶ್ರೀ ಹರಿ ಜಾಯೆ ಸಜ್ಜನಪ್ರೀಯೆ ಸುರಮುನಿ ಗೇಯೆ ಪ ಕಾಯ ನಿನ್ನದುಕಾಯೇ ಕರುಣಾಬ್ಧಿಯೇಅ.ಪ. ಪದ್ಮ ಮಂದಿರೆ ಪದ್ಮ ಗಂಧಿನಿಪದ್ಮಕುಚ ರಾಣಿ ಪದ್ಮಶರ ಮಾತೇಪದ್ಮ ಬಾಂಧವೆ ಪದ್ಮರಿಪು ತಾಯೆ ||ಪದ್ಮಿ ಪದ್ಮಾಕ್ಷಿ ಪದ್ಮಾಭಿನ್ನ ಪದ್ಮಪಾದ ಹೃ-ತ್ಪದ್ಮದೊಳಗಿಟ್ಟ ಮುದ್ದು ಮಹಾ ಲಕುಮೀ 1 ವೃಷ್ಟಿ ಗರೆಯಾಲುಈ ಕೊಲ್ಲೂರೊಳು ನೀ ಕರುಣದಿ ನಿಂದೀ 2 ನಿನ್ನ ಪಾದಾಬ್ಜವನ್ನು ಅನುದಿನಸನ್ನುತಿಸುವೆ ಚೆನ್ನ ವಿಜಯ ರಾ-ಯನ್ನ ಮನೆ ಮುಂದೆ ಕುನ್ನಿಯನ್ನೇ ಮಾಡಿ ಎನ್ನ ಪುಟ್ಟಿಪುದು ||ಪನ್ನಗವೇಣಿ ಘನ್ನ ದುರಿತಾಬ್ಧಿಯನ್ನೆ ದಾಟಿಸಿನಿನ್ನ ಆಳ್ವ ಮೋಹನ ವಿಠ್ಠಲ ರಾಯನ್ನ ಎನಗೆ ತೋರೆ 3
--------------
ಮೋಹನದಾಸರು
ಕಾಲ ಚಕ್ರವನೇರಿ ಭಾಸಿಪ ಬಾಲ ಸೂರ್ಯನ ವಂದಿಪೆ ಪ ಕಾಲ ರೂಪನೆ ಬಾಲ ಚಂದ್ರನೆ ಪೂಜಿಪೆ ಅ.ಪ. ಸೃಷ್ಟಿ ರೂಪನೆ ವೃಷ್ಟಿದಾಯಕ ಶ್ರೇಷ್ಠ ಭೂಮಿಯ ಪುತ್ರನೆ ಕಷ್ಟಹರ ಸುಜ್ಞಾನ ಮೂರುತಿ ಇಷ್ಟದಾಯಕ ಸೌಮ್ಯನೆ 1 ದೇವಗಣಗುರು ಕ್ಷೇಮದಾಯಕ ಜೀವವರ ಗುರು ಪಾಲಿಸೈ ದೇವಶುಕ್ರನೆ ಕಾವ್ಯರೂಪನೆ ಕಾವ್ಯ ಸೇವನೆ ಪೋಷಿಸೈ 2 ಪುಂಗವರ ಮಹಿಮಾಂಗ ಶನಿ ಸನ್ಮಂಗಳಾತ್ಮಕ ದೇವನೆ ಮಂಗಳವನೆಸಗೆಂದು ವಂದಿಪೆ ರಾಹುವೆ ವರಕೇತುವೆ 3 ಶ್ರೀನಿವಾಸನೆ ಪಾಲಿಸುವುದೆಂದೀ ನವಗ್ರಹ ಭಕ್ತಿಯಿಂಧೇನುನಗರ ಜನೇಶನೇವರ ವೇಂಕಟೇಶನೆ ಪೋಷಿಸೈ 4
--------------
ಬೇಟೆರಾಯ ದೀಕ್ಷಿತರು
ಕೃಷ್ಣಾ - ಶ್ರೀಕೃಷ್ಣಾ ಪ ಕೃಷ್ಣ ಕೃಷ್ಣ ಹರಿವೃಷ್ಟಿ ಕುಲೋದ್ಭವಸೃಷ್ಟಿ ಕರ್ತ ಹೃತ್ಪುಷ್ಕರ ನಿಲಯ ಅ.ಪ. ವಲಲ ಸಂರಕ್ಷಕ | ಅಲವ ಭೋದನುತಕಲಿಮಲ ಕಲುಷಹ | ನಳಿನೇಕ್ಷಣಪಾಹಿ 1 ನಂದನ ಕಂದ ಮು | ಕುಂದನೆ ಮಾಧವಸಿಂಧು ಶಯನ ಕೃಷ್ಣ | ಮಂದರೋದ್ಧಾರಿ 2 ಕರ | ಪರಿಗ್ರಹಿಸಿದನೇ 3 ಚಿತ್ತಜಾರಿ ಸಖ | ವಿತ್ತವನೊಲ್ಲೆನೊಭೃತ್ಯನ ಗೈ ಸ | ರ್ವೋತ್ತಮ ದೇವ 4 ಪಾಪಿಯು ಎನೆ ನಾ | ಶ್ರೀಪತಿ ನಿನ್ನನುನಾಪೊಂದಲು ಆ | ಪಾಪೆಲ್ಲಿ ಹುದೋ 5 ಕಾಮಪಿತನೆ ಸ | ದ್ಭೂಮ ಗುಣಾರ್ಣವಪಾಮರ ಮನುಜನ | ಪ್ರೇಮದಿ ಸಲಹೋ6 ಶಿರಿ ಸಹ ಗುರು ಗೋ | ವಿಂದ ವಿಠಲ ಹೃತ್‍ಸರಸಿಜ ಪೀಠದಿ | ದರುಶನ ವೀಯೋ7
--------------
ಗುರುಗೋವಿಂದವಿಠಲರು
ಚಿತ್ತಾವೆ ಚಿಂತಿಸು ಶ್ರೀ ಹರಿಯನ್ನ | ಗುಣಗಣ ಮಣಿಯನ್ನ ಪ ದ್ರುತ :ಕೃತ್ತಿವಾಸನುತ ಹೃತ್ಕಮಲಸ್ಥನ |ಸುಸ್ಥಿರ ಚಿತ್ತದಿ ನೀ ನಿಲಿಸುತ್ತ ಅ.ಪ. ಪರ ಪರ ಪರ ಮಖಗಳೆಂದು 1 ಪರ ಪರ ಪರ ಗತಿಗಳಿಗೆಂದು 2 ಸೇವ್ಯ ಸೇವಕನೆಂದು | ಪ್ರೇರ್ಯ ಪ್ರೇರಕನೆಂದೂ |ಕಾರಣ ಕಾರ್ಯಗಳಲಿ ನಾರಾಯಣ |ಪೂರಣನಹುದೆಂದು ನೀ ನಮಿಸುತ್ತ 3 ಸೃಷ್ಟ್ಯಾದ್ಯಷ್ಟಕ ಕಾರಣ ಕರ್ತ | ಇಚ್ಛಾ ಮಾತ್ರ ಸಮರ್ಥಶಿಷ್ಟೇಷ್ಟ ಪುಷ್ಟ ಮಹಿಮನು ಎನುತ | ಹೃಷ್ಟ ನೀನಾಗೊ ಸತತಾ | ಕಷ್ಟ ಕ್ಲೇಶಹರ ಭೃತ್ಯಾಭೀಷ್ಟದ | ವೃಷ್ಟಿಕುಲೇಶನ ನಿಷ್ಠೆಯಲಿಂದ 4 ಉಂಬೂವ ಉಡುವ ಕ್ರಿಯೆಗಳನೆಲ್ಲ | ಹಂಬಲಿಸುವುದೆಲ್ಲಚುಂಬೀಸಿ ಮಕ್ಕಳ ಮುದ್ದಿಪುದೆಲ್ಲ | ಬಿಂಬನದೆಂಬ ಸೊಲ್ಲ |ಬಿಂಬನು ಗುರು ಗೋವಿಂದ ವಿಠಲ - ಸೂಕ್ಷ್ಮಾಂಬರದಲಿ ಮಾಡಿ ಮಾಡಿಪನೆಂದು 5
--------------
ಗುರುಗೋವಿಂದವಿಠಲರು