ಒಟ್ಟು 30 ಕಡೆಗಳಲ್ಲಿ , 12 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಮೆಯರಸ ರಕ್ಷಿಸೋ ನಮಿತಜನರ ಕಲ್ಪದ್ರುಮ ಸುಮನೋಹರ ಪ ಅಮಿತ ಸುಗುಣ ಪೂರ್ಣ-ಶಮಲವರ್ಜಿತ ಹೃ- ತ್ಕಮಲ ದ್ಯುಮಣಿ ನಿಸ್ಸೀಮಮಹಿಮ ಸಂಪೂರ್ಣಕಾಮ ಹರಿ1 ಅಘ ಸಂ- ಕಷ್ಟಹರಿಸಿ ಸಂತುಷ್ಟಿಯನೀವ ನಿರ್ದುಷ್ಟಫಲಪ್ರದ 2 ಉರಗಾದ್ರಿವಾಸವಿಠಲ ದೇವ ಹರೇ ಕರೆ ನಿನ್ನ ಬಳಿ ಸಿರಿ ವೆಂಕಟೇಶನೆ ದೊರೆ-ಪೊರೆ ನಿನ್ನ್ಹೊರತು ನಾನರಿಯೆ 3
--------------
ಉರಗಾದ್ರಿವಾಸವಿಠಲದಾಸರು
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು
ವೆಂಕಟೇಶನೆ ಬಲ್ಲ ಪರಮ ಪಾತಕೀಯಾ | ಕಿನ್ನೇಶ ಮುನಿದು ಬಂದೇನು ಮಾಡುವನು ಪ ಚಿತ್ತದೊಲ್ಲಭನ ಸಮ್ಮತದಲ್ಲಿ ನಾರಿಯು | ಅತ್ತವಿತ್ತ ಊರು ಸುತ್ತುತಿರಲು | ಸುತ್ತಯಿದ್ದ ಬಂಧು ಬಳಗದವರು ಕೂಡಿ | ಮುತ್ತಿಕೊಂಡು ಅವಳನೇನು ಮಾಡುವರು 1 ಕದ್ದು ತಂದಾ ಒಡವೆ ರಾಜ್ಯವಾಳುವನಿಗೆ | ತಿದ್ದುವಾ ಸರಿಪಾಲು ಲಂಚಕೊಟ್ಟು | ಇದ್ದವನು ಹಗಲಿರಳು ಕದ್ದರೆ ಆ ಊರು | ಎದ್ದು ಹಿಡಿದವರೆಲ್ಲ ಏನು ಮಾಡುವರು2 ತೊತ್ತಿನ ಮೇಲೆ ಒಡೆಯನ ದಯವಿರೆ | ತೊತ್ತು ಗರ್ತಿಗೆ ಅಂಜಿ ನಡಕೊಂಬಳೆ | ಕರ್ತು ಶ್ರೀ ವಿಜಯವಿಠ್ಠಲ ವೆಂಕಟೇಶನ | ಚಿತ್ತದಿ ನೀನಿರೆಯನೆವುಂಟೆ3
--------------
ವಿಜಯದಾಸ
ವೆಂಕಟೇಶನೆ ಶ್ರೀ ವೆಂಕಟೇಶನೆ ಪ. ಶಂಖ ಚಕ್ರಗಳನೆ ಪಿಡಿದುಬಿಂಕದಿಂದ ಮೆರೆಯುತಿರುವ ಅ.ಪ. ಮೀನನಾಗಿ ಬಂದು ಘೋರ ದಾನವನೆ ಕೊಂದುಯನ್ನೇ ಎತ್ತಿದಂಥ ಜಾಣ ಕೂರ್ಮಾವತಾರ1 ಧರಣಿದೇವಿಯನ್ನು ಕದ್ದ ಹಿರಣ್ಯಾಕ್ಷನೆ ತರಿದುಕರುಳಮಾಲೆಯನ್ನೆ ಧರಿಸಿ ವರ ಪ್ರಹ್ಲಾದನ ಕಾಯ್ದ 2 ಬಲಿಯ ದಾನವನ್ನೆ ಬೇಡಿ ನೆಲವ ಮೂರಡಿ ಮಾಡಿಛಲದಿ ಕ್ಷತ್ರಿಯನಳಿದ ಚಲುವ ಪರಶುರಾಮ3 ಹತ್ತುರಥನ ತನಯನೆನಿಸಿ ಹತ್ತುಶಿರನ ಸಂಹರಿಸಿಮತ್ತೆ ಕಂಸಾದಿ ಖಳರ ಹತ್ಯಮಾಡಿದಂಥ ಶ್ರೀ 4 ಚಾರು ಬುದ್ಧರೂಪವಾಗಿ ನಾರಿಯರ ವ್ರತವ ಕೆಡಿಸಿತುರಗವೇರಿ ಚರಿಪ ತಂದೆವರದವಿಠಲ ಕಲ್ಕಿ 5
--------------
ಸಿರಿಗುರುತಂದೆವರದವಿಠಲರು
ಶ್ರೀ ವೆಂಕಟೇಶ ಎನ್ನ ಸಲಹಲ್ಯಾಕೆ ಬಳಲುವೆ ಪ ದುರಿತ ಪರಿಹರಿಸೊ ಬಂದು ತಾಪವನ್ನು ಬಿಡಿಸೊ ಮಂದ ಬುದ್ದಿಯನ್ನೆ ಕೆಡಿಸೊ ಮದನನಯ್ಯ ಮಮತೆ - ಇಂದು ಎನ್ನ ಮಾತ ಲಾಲಿಸೊ ತಂದೆ ಕುಂದು ಎಣಿಸದೆನ್ನ ಪಾಲಿಸೊ 1 ನಕ್ರನ ಬಾಧೆಯೊಳಗೆ ಸಿಳುಕಿ ಗಜವು ನರಳುತಿರಲು ತ್ರಿ- ವಿಕ್ರಮನೆ ಸಲಹೊಯೆಂದು ಕರೆಯಲಾಗ ನಕ್ರನ ಚಕ್ರದಿಂದ ಹೊಡೆದು ಕೆಡಹಿದೆ ಆ ಗಜಕೆ ಬಂದ ವಕ್ರವನ್ನು ಬಿಡಿಸಿ ಸಲಹಿದೆ ಎನ್ನ ಮನದ ವಕ್ರವನ್ನು ಬಿಡಿಸಲಾಗದೆ 2 ತರಳ ಧ್ರುವನು ತನ್ನ ಪಿತನ ತೊಡೆಯ ಮ್ಯಾಲೆ ಬಂದು ಕುಳ್ಳಿರೆ ತರವೆ ನಿನಗೆ ಎಂದು ಸುರುಚಿ ತವಕದಿಂದ ಎಳೆಯಲವನ ಸ್ಥಿರಪದವಿಯಿತ್ತೆ ಕರುಣದಿ ನಾನು ನಿನ್ನ ಸ್ಮರಣೆಗೈವೆದಿವ್ಯನಾಮವ 3 ಆರು ಸಲಹುವರು ಎನ್ನ ಪಾರುಗಾಣಿಸುವರ ಕಾಣೆ ಸೇರಿದೆನೊ ಶೇಷಶಯನ ಶ್ರೀನಿವಾಸ ಎನ್ನನು ಸೇರಿತಲ್ಲವೆ ಬೇರೆ ವಿಚಾರವಿಲ್ಲದೆ ನಿನ್ನ ನಂಬಿದೆ 4 ದುಷ್ಟ ದನುಜರನ್ನು ಮುರಿದು ಧಾರುಣಿಯೊಳು ಇರುವೆ ಎನ್ನ ಕಷ್ಟವ ಬಿಡಿಸಿ ಕಾಯೊ ಕಮಲನಾಭ ಹೆಳವನ ಕಟ್ಟೆವಾಸ ವೆಂಕಟೇಶನೆ ಸಕಲ ಭಾರ ಸುಜನಪಾಲನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀನಿವಾಸನೆ ನಿನ್ನ ಮಹಿಮೆಯ ಏನ ಪೇಳ್ಪೆನಾ ಜ್ಞಾನರಹಿತಳು ಗಾನಲೋಲನೆ 1 ಮಂಕುಮಾನವರಿಂದ ಸಾಧ್ಯವೆ ಶಂಕರಾದಿ ವಂದಿತನ ಸ್ತುತಿಸಲು ಪಾದ ಪಂಕಜ ಧ್ಯಾನಿಸೆ ನಿನ್ನ ಕೃಪೆಯನಾತಂಕವಿಲ್ಲದೆ2 ನಿನ್ನ ಭಕ್ತರಾ ಕಾಯ್ವೆಯೆಂಬುವುದನ್ನು ಅರಿತೆಹೆ ಪನ್ನಗಾಚಲ ಚಿನ್ನಭೊಮ್ಮನಿಂದಳವೆ ದೇವನೆ 3 ಕಿರೀಟಶೋಭನÀ ವರ್ಣಿಪೆ ಕರ್ಣಕುಂಡಲ 4 ಪದ್ಮನಾಭಗೆ ಪದ್ಮದಕ್ಷಿಯ ತಿದ್ದಿದ ಚಂಪಕದ ನಾಸಿಕ ಮುದ್ದುದಂತ ಪಂಕ್ತಿಗಳ ಕಂಡೆನೊ ಪೂತನಿಯ ಅಸುಹೀರಿದ ಆ ಭುಜಕೀರ್ತಿಗಳ ಕಂಡೆನು ಭಕ್ತಪಾಶ ನಿನ್ನ ಹಸ್ತ ಕಂಕಣವಾ ಕಂಡೆನು 5 ಬೆರಳ ಮುದ್ರಿಕೆ ಕೊರಳೊಳ ಸಾಲಿಗ್ರಾಮದ ಸರ ವೈಜಯಂತಿ ಮಾಲೆಗಳ ಕಂಡೆನು 6 ವÀರ ಶ್ರೀ ತುಳಸಿಯ ಹಾರಗಳ ಮಧ್ಯದಿ ಮೆರೆವ ರಮಾದೇವಿಯಳ ಕಂಡೆನು ಜಾನು ಜಂಘೆಯೊಳ ಮೆರೆವ ಪೀತಾಂಬರ ಕಂಡೆನು 7 ಆಜಾನುಬಾಹು ನೀನ್ಹೊದ್ದವಲ್ಲಿ ವಜ್ರದ್ಪಡ್ಯಾಣಕಂಡೆನು ಸಾನುರಾಗದಿ ಸ್ತುತಿಸಿ ಹಿಗ್ಗುತ ನಾನುಸ್ತುತಿಪ ನಿನ್ನಂಘ್ರಿ ಕಮಲವ 8 ಚರಣಕೊಪ್ಪುವೊ ಗಗ್ಗರಿಪಾಡಗ ವರಗೆಜ್ಜೆ ಪೈಜಣಿ ಕಂಡೆ ದೇವನೆ ಶ್ರೀವೆಂಕಟೇಶನೆ 9 ಕಾಯ ಬೇಕೆÉಲೊ ಕ್ಷಮಿಸೊ ದೇವನೆ 10
--------------
ಸರಸ್ವತಿ ಬಾಯಿ
ಸರ್ವಾಮಯ ಹರ ವಿಠಲನೇ | ಸರ್ವದಾನೀನಿವರ ಸಲಹ ಬೇಕೊ ಪ ಶರ್ವಾದಿ ಸುರವಂದ್ಯ ಸಾರ್ವಭೌಮ ಸ್ವಾಮೀಅ.ಪ. ತ್ರಿವಿಧ ಭವ ಹಾರೀ 1 ಸರ್ವಸೃಷ್ಟೀಶನೇ ಸರ್ವಪಾಲಕ ಹರಿಯೇಸರ್ವ ಸಂಹಾರಕನೇ ಸರ್ವೋತ್ತಮಾಸರ್ವಾಂತರಾತ್ಮ ಶ್ರೀ ವೆಂಕಟೇಶನೆ ನಿನ್ನಸರ್ವದಾ ಭಜಿಸುವಗೆ ಸರ್ವಮಂಗಳವೀಯೋ 2 ಭಾವಿಮರುತಲೀತ | ಭಾವ ಭಕುತಿಗಳಿಂದಸೇವಿಸುವ ಹಯಮೊಗನ | ತವ ದಿವ್ಯ ರೂಪಾಆವ ತನುಕರಣ ಮನ | ಸರ್ವಾರ್ಪಣೆಂಬ ಮತಿಓವಿನೀನಿವಗಿತ್ತು | ಪಾವನವಗೈಯ್ಯೊ 3 ಪಂಚಬೇಧದ ಜ್ಞಾನ | ಸಂಚಿಂತನೇ ಇತ್ತುಅಂಚೆವಹ ಮತ್ತೆ ಹರಿ | ಮಂಚವಿಪಗೇಂದ್ರಾ |ಮುಂಚೆ ತರತಮ ತಿಳಿಸಿ | ವಾಂಛಿತಾರ್ಥದ ನಿನ್ನಸಂಚಿಂತನೆಯಲೇ ಇರಿಸೊ ಪಂಚಾಸ್ಯ ಪ್ರಿಯನೆ 4 ಅದ್ವೈತ ಚಿಂತನೆಯನೀವೊಲಿದು ಇವಗಿತ್ತು | ಭಾವದಲಿ ತೋರೊ ತವರೂಪ |ಈ ವಿಧದಿ ಬಿನೈಪೆ ಪವನಾಂತರಾತ್ಮ ಗುರುಗೋವಿಂದ ವಿಠಲಯ್ಯ ಪಾಲಿಸೋ ಜೀಯಾ 5
--------------
ಗುರುಗೋವಿಂದವಿಠಲರು
ಸಿಟ್ಟು ಮಾಡುವುದೆಂದಿಗು ಸಲ್ಲ ಪೂರ್ಣ ಸಿರಿನಲ್ಲ ಪ. ಮೋಹ ಪಾಶ ಮಿಕ್ಕು ಬಿಗಿದಿಹುದು ರಿಪು ವ್ಯೂಹ ಸುತ್ತಮುತ್ತ ನೆಗದಿಹುದು ದೇಹದಿ ದಿನದಿನ ಬಲಕುಂದಿ ಬಂತು ಚಿ- ದ್ದೇಹ ನೀನೊಲಿವ ಸನ್ನಹಗೊಳ್ವದೆಂತೊ 1 ಒಂದು ಸತ್ಕರ್ಮ ಸಾಧಿಸುವಲ್ಲಿ ಬೇಗ ಪಾತಕ ಝಲ್ಲಿ ಮಂದರಧರ ಮಧುಸೂದನ ಮನದಿ ನೀ ನಿಂದು ಸಾರ್ಥಕ ಮಾಳ್ಪ ತೆರವೆಲ್ಲ ಬಲ್ಲಿ 2 ಹಿಂದೆ ಮುಂದಿನ ಸರ್ವ ಕರ್ಮಫಲ ಎನ್ನ ತಂದೆ ಸ್ವೀಕರಿಸಿ ಮಾಡಿಸು ನಿರ್ಮಲ ಇಂದಿರೇಶ ವೆಂಕಟೇಶನೆ ತ್ವಚ್ಚರ- ಣೆಂದೀವರ ನೆರಳಿರಿಸನುಗಾಲ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏಳು ವಾರಿಜನೇತ್ರ ಏಳು ಚಿನ್ಮಯಗಾತ್ರಏಳು ಪಾಂಡವಪಾಲ ಏಳುಸಿರಿಭೂಲೋಲಏಳು ಪಾವನಚರಿತ ಏಳೆರಡು ಜಗಭರಿತಏಳು ಯದುಕುಲಲಲಾಮಾ ಪ.ಮೂಡುತಿವೆಅರುಣಕಿರಣೋಡುತಿವೆ ತಮದ ಕುಲಬಾಡುತಿವೆ ತಾರಿನನ ಬೇಡುತಿವೆ ಚಕ್ರವಾಕಾಡುತಿವೆಕೀರಬಲು ಪಾಡುತಿವೆತುಂಬಿನಲಿದಾಡುತಿವೆಖಗಸಮೂಹರೂಢಿಯೊಳು ಮುನಿಜನರು ನೋಡಿ ರವಿಗತ ಹರಿಯಷೋಡಶುಪಚಾರಾರ್ಚನೆ ಮಾಡಿ ಮನದಣಿಯೆ ಕೊಂಡಾಡಿ ಕುಣಿದಾಡಿ ಭವಕಾಡನೀಡಾಡಿವರಬೇಡುತೈದಾರೆ ಗಡ ಹರಿಯೆ 1ವಿಷ್ಣುಪದೆ ವೃದ್ಧನದಿ ಕೃಷ್ಣವೇಣ್ಯಖಿಳ ಸಂಹೃಷ್ಟಿಪ್ರದೆ ಕಾವೇರಿ ಇಷ್ಟದಾ ಯಮುನೆಅಘನಷ್ಟಕಾರಣೆ ಭೀಮೆ ಶಿಷ್ಟಾಂಗೆ ತುಂಗೆವರತುಷ್ಟಿದಾಯಕ ನದಿಗಳುಕೃಷ್ಣ ನಿನ್ನಡಿಯುಗಳ ಸ್ಪøಷ್ಟರಾಗುತಲಿ ಉತ್ಕøಷ್ಟ ಪದ ಪಡೆವೆವೆಂದಷ್ಟ ದಿಗತಟದಿಂದಚೇಷ್ಟಿತ ತರಂಗದಿಂ ಸ್ಪಷ್ಟ ಬಂದಿರೆ ಕರುಣದೃಷ್ಟಿಯಿಂದವರ ನೋಡೈ ಹರಿಯೆ 2ಕೇಶನಾಕೇಶ ಕಕುಭೇಶಾದಿ ಅಮರರಾಕಾಶದಲಿ ದುಂದುಭಿಯ ಘೋಷ ಮೊಳಗಿಸಿದರನಿಮೇಷ ಮುನಿ ವೀಣೆಯುಲ್ಲಾಸದಿಂ ಮಿಡಿಮಿಡಿದು ಧನಶ್ರೀ ಭೂಪಾಳಿಯಿಂದಶೇಷಶಯನಖಿಳ ನಿರ್ದೋಷಗುಣಪೂರ್ಣಸರ್ವೇಶ ಮುಕುಂದ ಭಟಕೋಶನೆಂದವರು ನಿನ್ನಬೇಸರದೆ ಪಾಡುತಿಹರು ಶ್ರೀಶ ಪ್ರಸನ್ವೆಂಕಟೇಶನೆ ಒಲಿದುಪ್ಪವಡಿಸೊ ಹರಿಯೆ 3
--------------
ಪ್ರಸನ್ನವೆಂಕಟದಾಸರು
ಜೋಗಿಯ ಕಂಡೆಪರಮಯೋಗಿಯ ಕಂಡೆಭೋಗಿಶಯನಗಂಬೂರ ಚರ್ಚಿತಾಂಗ ವೆಂಕಟೇಶಪ.ವೇದವ ಕದ್ದೊಯ್ದವನ ಕೊಂದ ಜೋಗಿಯ ಕಂಡೆಭೂಧರಧರನಾದ ಜೋಗಿಯ ಕಂಡೆಭೇದಿಸಿ ಪಾತಾಳ ಪೊಕ್ಕು ಗರ್ಜಿಪ ಜೋಗಿಯ ಕಂಡೆಆದರದಿ ಕಂದನ ನುಡಿಯನಾಲಿಸಿ ಬಂದ 1ಅಂಗುಟದಿ ಬೊಮ್ಮಾಂಡವ ಸೀಳಿದ ಜೋಗಿಯ ಕಂಡೆಹೆಂಗಳ ತಲೆಯನರಿದ ಜೋಗಿಯ ಕಂಡೆಅಂಗನೆಗೋಸುಗಾರಣ್ಯ ಸಂಚಾರಿ ಜೋಗಿಯ ಕಂಡೆಪೊಂಗೊಳಲನೂದಿ ಮೂಜಗವನು ಮೋಹಿಸುವ 2ಕನ್ಯೇರ ವ್ರತಗೇಡಿ ದಿಗಂಬರ ಜೋಗಿಯ ಕಂಡೆಉನ್ನತ ವಾಜಿಯೇರಿದ್ದ ಜೋಗಿಯ ಕಂಡೆಪನ್ನಗಾದ್ರಿವರದ ಪ್ರಸನ್ನವೆಂಕಟೇಶನೆಂಬತನ್ನ ನಂಬಿದವರನು ಬಿಡದೆ ಪಾಲಿಸುವ 3
--------------
ಪ್ರಸನ್ನವೆಂಕಟದಾಸರು
ರಾಮ ರಾಮ ರಘುನಾಥನೆ ಸುರಸ್ತೋಮತಿಲಕ ವಿಶ್ವಕರ್ತನೆ ದಿವ್ಯಸ್ವಾಮಿ ಪುಷ್ಕರತೀರವಾಸನೆ ನನ್ನಸ್ವಾಮಿವರಾಹವೆಂಕಟೇಶನೆಪ.ಕಾಯೊ ಕಾಯೊ ಮಧುಮರ್ದನಭವಸಾಯಕದೂರ ಜನಾರ್ದನ ಯದುನಾಯಕಧೃತಗೋವರ್ಧನ ನಾರಾಯಣ ನಿಜಜನವರ್ಧನ 1ಹೊಂದಿದಭಟಕಲ್ಪವೃಕ್ಷನೆ ನನ್ನತಂದೆ ತಾಯಿ ವಿಶ್ವಕುಕ್ಷನೆಕ್ಷೀರಸಿಂಧುಮಂದಿರ ಅಧ್ಯಕ್ಷನೆ ನಿನ್ನಿಂದಾರುಗತಿ ಪದುಮಾಕ್ಷನೆ 2ಅಡಿಗಡಿಗೊದಗದ ತಪ್ಪನೆ ಇಕ್ಕಡಿಮಾಡುದೇವ ತಿಮ್ಮಪ್ಪನೆಮಾಯಾಸಡಕ ತಪ್ಪಿಸು ಸುಪ್ರದೀಪನೆನಿತ್ಯಬಿಡದೆ ಕ್ರೀಡಾದ್ರಿಯೊಳಿಪ್ಪನೆ 3ಲೇಶಭಕ್ತಿಗೆ ಮನ ಹಾರಿತು ವಿಷಯಾಸೆಯಟವಿಯನೆ ಸೇರಿತು ಈಹೇಸಿ ಚಂಚಲಚಿತ್ತ ಹೋರಿತು ತವದಾಸರ ಸಂಗಕೆ ಜಾರಿತು 4ಕುಸುಮಶರನಂತ:ತೇಜನೆ ಮಹಮಿಸುನಿವೆಟ್ಟದ ಕಲ್ಪಭೂಜನೆ ಅಜÕನಿಶಾಕುಲ ಉಡುಗಣರಾಜನೆ ಶ್ರೀಪ್ರಸನ್ವೆಂಕಟ ರಾಜಾಧಿರಾಜನೆ 5
--------------
ಪ್ರಸನ್ನವೆಂಕಟದಾಸರು
ಶರಣು ಶರಣುಪರಮಪುರುಷಶರಣು ಭಯಶರ ಖಂಡನಶರಣುಸಿರಿವಿಧಿಮರುತ ಪೂಜಿತಶರಣು ವೆಂಕಟನಾಯಕ ಪ.ಭಾಸಿತ ತಟಿತಮಕರಕುಂಡಲಭಾಸಕರ ಶಶಿಲೋಚನಸಾಸಿರಶತ ವೇದವಂದಿತವಾಸವಾರ್ಚಿತ ಪದಯುಗದೇಶಕಾಲ ಸುವ್ಯಾಪ್ತಾಜಾಂಡ ವಿಶೇಷಸ್ಥಿತಿಲಯಶೀಲನೆತೋಷಮಂದ ಸುಹಾಸವದನನೆಶೇಷಗಿರೀಶ ನಮೋ ಹರೆ 1ಶಂಖ ಚಕ್ರಗದೆ ಪದುಮ ವರಾಭಯಕಂಕಣಕರ ರಾಜಿತಕುಂಕುಮಮೃಗಮದತಿಲಕಧರಾತಂಕಕುಂಭಿಮೃಗಾಧಿಪಕಿಂಕರಾನತ ರಕ್ಷಕರಿಪುಶಂಖ ದೈತ್ಯ ವಿಶಿಕ್ಷಕಪಂಕಜಾನನ ಗರುಡವಾಹನಅಂಕಿತಾಖಿಳ ಭೂಷಣ 2ಜನನ ಮೃತ್ಯುವಿದೂರಅಚ್ಯುತಮುನಿಮನಾಲಯಮಾಧವಕನಕನೇತ್ರವಿದಾರಿ ಪೋತ್ರ್ಯಾಂಗನೆ ವಿಮಲಗುಣ ಪೂರ್ಣನೆದನುಜನಿಕರಾಟವಿ ದಾವಾನಲಸನಕಸನಂದನ ಸ್ತುತಿಪ್ರಿಯಅನವರತವರಸ್ವಾಮಿಪುಷ್ಕರಸನ್ನಿದ ಪ್ರಸನ್ವೆಂಕಟೇಶನೆ 3
--------------
ಪ್ರಸನ್ನವೆಂಕಟದಾಸರು
ಹಕ್ಕಿಯ ಹೆಗಲೇರಿ ಬಂದವಗೆ ನೋಡಕ್ಕ ಮನಸೋತೆ ನಾನವಗೆ ಪ.ಸತ್ರಾಜಿತನ ಮಗಳೆತ್ತಿದ ಉನ್ಮತ್ತ ನರಕನೊಳು ಕಾದಿದಮತ್ತೆ ಕೆಡಹಿದ ಅವನಂಗವಸತಿಗಿತ್ತನು ಆಲಿಂಗನವ 1ಹದಿನಾರು ಸಾವಿರ ನಾರಿಯರ ಸೆರೆಮುದದಿಂದ ಬಿಡಿಸಿಮಾಮನೋಹರಅದಿತಿಯಕುಂಡಲತಳೆದಾ ಹರವಿಧಿಸುರ ನೃಪರನು ಸಲಹಿದ2ಉತ್ತಮ ಪ್ರಾಗ್ಜೋತಿಷ ಪುರವ ಭಗದತ್ತಗೆ ಕೊಟ್ಟ ವರಾಭಯವಕರ್ತಕೃಷ್ಣಯ್ಯನ ನಂಬಿದೆ ಶ್ರೀಮೂರ್ತಿಯ ಪಾದವ ಹೊಂದಿದೆ 3ನರಕ ಚತುರ್ದಶಿ ಪರ್ವವಹರಿಹರುಷದಿ ಪ್ರಕಟಿಸಿದನು ದೇವಶರಣಾಗತಜನ ವತ್ಸಲ ರಂಗಪರಮಭಾಗವತರ ಪ್ರತಿಪಾಲ4ಹೊಗಳಿ ಕೃಷ್ಣಯ್ಯನ ಮಹಿಮೆಯ ಮುಕ್ತಿನಗರದ ಅರಸನ ಕೀರ್ತಿಯಜಗದೀಶ ಪ್ರಸನ್ವೆಂಕಟೇಶನೆ ಭಕ್ತರಘಹಾರಿ ರವಿಕೋಟಿಕಾಶನೆ 5
--------------
ಪ್ರಸನ್ನವೆಂಕಟದಾಸರು