ಒಟ್ಟು 351 ಕಡೆಗಳಲ್ಲಿ , 65 ದಾಸರು , 298 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೋಗಣೆಯ ಮಾಡೋ ಮುಕುಂದಾ ಪ ಆರೋಗಣೆಯ ಮಾಡೋ ವಾರಿಜರಮಣಾ ಸಾರಿದವರಿಗೆ ಭಯನಿವಾಕರದಿ 1 ಪೊಂಬ್ಹರಿವಾಣದಿರನ್ನ ಬಟ್ಟಲುಗಳು ಅಂಬುಜಾನನಸಿರಿ ಲಕುಮಿಯವೇರಿಸಿ 2 ಶಾಲ್ಯೋದನಸೂಪಘೃತ ಪರಿಪರಿಯಾ ಶಾಲ್ಯಾಶಾಖಂಗಳಸವಿಯನೆ ಕೊಳುತಾ3 ಪಂಚಭಕ್ಷವು ಕೆನೆಹಾಲು ಸೀಖರಿಣಿಯಾ ಮುಂಚೆ ಪಾಯಸಪರಿಪರಿಶರ್ಕರದಲಿ4 ದದ್ಯೋದನದಲುಪಗಾಯಿಸ್ವಾದಿಸುತ ದಮನ ಕಲ್ಪಿತರುವೆಲ್ಲಾ5 ಪತ್ರಸುಮನತೋಯ ಭಕ್ತರು ಕೊಟ್ಟು ದರ್ಥಲಿ ಕೊಂಬ ದಯಾಳುತನದಲಿ6 ತಂದೆ ಮಹಿಪತಿ ನಂದನ ಸಾರಥಿ ಎಂದೆಂದು ಸ್ಮರಣೆ ಗೊದಗಿ ಮುದ್ದು ಮುಖದಿ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ಸಾಧನದ ಗೋಜ್ಯಾಕೆ ನಿನ್ನ ಭಾವದೊಳಗೆ ಹರಿಯಿರಲಿಕ್ಕೆ ಪ ಜಾವಜಾವಕೆ ಗೋವಳರೊಡೆಯನ ಕೇವಲಭಕ್ತಿಯಿಂ ಕೂಗಲು ಸಾಲದೆ ಅ.ಪ ಎಷ್ಟು ಆಸನ್ಹಾಕಿದರೇನೋ ಬಲು ಕಷ್ಟದಿ ದೇಹದಂಡಿಸಲೇನೋ ಬೆಟ್ಟವೇರಿ ಕೂತರೆ ಏನೋ ಅನ್ನ ಬಿಟ್ಟು ಉಪವಾಸ ಮಲಗಿದರೇನೋ ಕಷ್ಟಹರಣ ಮಹ ಶಿಷ್ಟಪಾಲನೆಂದು ನಿಷ್ಠೆಯಿಂ ಭಜಿಸಲಿ ಸಾಕಾಗದೇನೋ 1 ತೊಪ್ಪಲ ತಿಂದು ಬಾಳಿದರೇನೋ ಮತ್ತು ತಿಪ್ಪೆಯೊಳಗೆ ಉಣಕೂತರೇನೊ ಕಪ್ಪೆಯಂತೆ ಜಲ ಮುಳುಗಿದರೇನೋ ಎಲೊ ಮುಪ್ಪಿನ್ಹದ್ದಿನಂತೆ ಮೇಲಕ್ಹೋದರೇನೋ ಅನುದಿನ ಮುಪ್ಪುರಾಂತಕನ ಗೌಪ್ಯದಿಂ ನೆನೆಯಲು ಸಾಕಾಗದೇನೊ 2 ಸೊಟ್ಟಿ ಹಾಕಿಕೊಂಡು ಪೋದರೇನೋ ಚರ್ಮ ಉಟ್ಟುಕೊಂಡು ತಿರುಗಿದರೇನೋ ಬಟ್ಟಿ ನುಂಗಿ ದೇಹ್ಯ ತೊಳೆದರೇನೋ ಬಲು ಕಷ್ಟದೆಷ್ಟು ಸಾಧಿಸಲೇನೋ ಕೆಟ್ಟಗುಣವ ಬಿಟ್ಟು ದಿಟ್ಟ ಶ್ರೀರಾಮನ ಗಟ್ಟ್ಯಾಗಿ ನಂಬಲು ಮುಕ್ತಿಕಾಣೊ 3
--------------
ರಾಮದಾಸರು
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇದು ಸಮಯ ಜಗದೀಶ ಯಾಕೆ ಸಾವಕಾಶ ಮದಮುಖರ ಮುರಿದೊತ್ತು ಮಾಕಮಲಜೇಶ ಪ. ಕ್ಷೀರಾಬ್ಧಿ ಸುಧೆ ಸುರರ ಸೇರಿತೆಂದಸುರೇಶ ರಾರುಭಟಿಗೊಳೆ ಶಂಬರಾರಿ ಕೆಂಗೆಡಲು ಕಾರುಣ್ಯವಾರ್ಧಿ ಖಗವೇರಿ ಬಂದ ಭಯಕರ ದೋರಿದವನೆಂದರಿದು ಚೀರುವೆನು ನಿನ್ನಿದಿರು 1 ಎಷ್ಟೋ ಪರಿಯಿಂದ ಪರಮೇಷ್ಠಿವಂದ್ಯನೆ ಕೃಪಾ- ದೃಷ್ಟಿಯೆನ್ನಲಿ ನೀನಿಟ್ಟು ಸಲಹುವುದು ಅಷ್ಟಮದಮೋಹದಿಂದೆಷ್ಟಾದರೂ ಬೇಸರದೆ ನಿಷ್ಠೂರ ನುಡಿವ ಮತಿಭ್ರಷ್ಟರ ಮನದಪ್ಪದಕೆ2 ನಿನ್ನ ದಾಸರ ನಿಂದೆ ನೀ ಸಹಿಸದವನೆಂದು ಮುನ್ನ ಮುನಿಗಳು ಪೇಳ್ದ ಮುಖ್ಯ ತತ್ವವನು ಪನ್ನಗಾಚಲನಾಥ ಪಾಲಿಸುವುದುಚಿತ ಸುರ ಮಾನ್ಯ ಮಾನವಕಾವರನ್ಯರನು ನಾ ಕಾಣೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇನ್ನಾರಿಗುಸುರುವೆನುಎನ್ನ ಸುಖದುಃಖವನುಪನ್ನಗಾಭರಣ ಶ್ರೀರಾಮೇಶಲಿಂಗ ಪ ಸುರಪತಿಗೆ ಅಂಡವರತವು ಅಗುನಿ ಆಶ್ರಯಿಸಿದರನೆ ಭಕ್ಷಿಪನು ಯಮ ನಿಷ್ಕರುಣಿಯುನಿರುತಿ ರಾಕ್ಷಸ ವರಣ ನೀರೊಳಿಹ ವಾಯು ಸಂ-ಚರಿಪ ಭಾಗ್ಯೋನ್ಮತ್ತನಾತ್ಮಘಾತಕನು 1 ನಾರಾಯಣಗೆ ನಿದ್ರೆ ನಾಗೇಂದ್ರಶಯನಗೇವಾರಿಜಭವಗೆ ಪ್ರಣವ ಜಪಕಾಲವುವೀರಭದ್ರನೆ ಕೋಪಿ ಪಾರ್ವತಿಯೆ ಚಂಡಿ ಮದವೇರಿ ಮುಕುಟವನು ತೂಗುವನು ಗಣವರನು 2 ಸರಸಿಜಾಪ್ತಗೆ ಸಮಯವಿಲ್ಲ ಶಶಿ ತನ್ನೊಳಂಕುರಿಸಿದ ಕಲಂಕ ಕಳಕೊಳಲಾರನುವರ ಕೆಳದಿ ರಾಮೇಶ ನೀನೇ ಚಿತ್ತಕೆ ತಂದುಮರೆಯೊಕ್ಕವನ ನೋಡಿ ಪೊರೆಯದಿದ್ದ ಮೇಲೆ 3
--------------
ಕೆಳದಿ ವೆಂಕಣ್ಣ ಕವಿ
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉಪೇಂದ್ರ ಹರಿ ವಿಠಲ ಕೃಪೆಯಲಿಂದಲಿ ಇವನಕಾಪಾಡ ಬೇಕೆಂದು ಪ್ರಾರ್ಥಿಸುವೆ ಹರಿಯೇ ಅ.ಪ. ಹರಿಗುರೂ ಭಕ್ತಿಯುತ | ತರಳ ನಿರುವನು ಹರಿಯೆಸುರರಾಜ ಭೋಗಗಳ | ಕರುಣಿಸುತ ಇವಗೇ |ಒರೆದು ತತ್ವ ಜ್ಞಾನ | ಮರಳಿ ಭಕ್ತ್ಯಭಿವೃದ್ಧಿಕರುಣಿಸುತ ಕಾಪಾಡೊ | ಕರಿವರದ ಹರಿಯೆ 1 ವಿಯದಧಿಪ ಸುತನಿಗೆ | ಭಯವ ಪರಿಹರಗೈದುದಯದಿಂದ ಪೊರೆದಂತೆ | ಕಾಯಬೇಕೋಹಯವೇರಿ ಇಂದ್ರಿಯದ | ಜಯಸೂಚಿ ಸ್ವಪ್ನದಲಿಭಯಕೃತೂ ಭಯನಾಶ | ಅಭಯನೀಯೋ2 ಪಿತೃ ಮಾತೃ ಸೇವೆಯಲಿ | ರತನನ್ನ ಮಾಡುತಲಿಹಿತ ಆಹಿತ ವೆರಡನ್ನು | ಸಮತೆಯಲಿ ಉಂಬಾಮತಿಯನ್ನೆ ಕರುಣಿಸುತ | ಕೃತಕಾರ್ಯನೆಂದೆನಿಸಿಸತತ ತವ ಸಂಸ್ಕøತಿಯ | ಇತ್ತು ಪೊರೆ ಇವನಾ 3 ಕಾಕು ಪಾದ | ಪಂಕಜವ ತೋರೋ 4 ಪಾವಮಾನಿಯ ಪ್ರೀಯ | ಶ್ರೀವರನೆ ಈಶಿಯವಕೋವಿದನ ಗೈಯ್ಯತ್ತ | ಭುವಿಯೊಳಗೆ ಮೆರೆಸೋಗೋವಿದಾಂಪತಿಯೆ ಗುರು | ಗೋವಿಂದ ವಿಠ್ಠಲನೆನೀ ವೊಲಿಯದಿನ್ನಾರು | ಕಾವರನು ಕಾಣೇ 5
--------------
ಗುರುಗೋವಿಂದವಿಠಲರು
ಎಂತು ವರ್ಣಿಸಲಮ್ಮ ನಾನು ಕಂತುಜನಕನಾನಂತನಗಮ್ಯನನÀಂತವತಾರನಪ. ಸಂತತ ಸಜ್ಜನರಂತರಂಗದಲಿ ನಿಂತಿಹ ಲಕ್ಷ್ಮೀಕಾಂತನ ಮಹಿಮೆಯ ಅ.ಪ. ನೀರೊಳಾಡುತ ಭಾರವ ಹೊರೆವ ಧಾರುಣಿಯ ಪೊರೆವ ಘೋರ ರೂಪದಲಿ ಭೂಮಿಯನಳೆವ ಕ್ರೂರನೃಪರಳಿವ ಆ ರಾವಣನ ಬಲವ ಮುರಿವ ಚೋರ ದಿಗಂಬರವ ಚಾರು ಕುದುರೇಯನೇರಿ ಬರುವ ಸುಕು- ಮಾರ ಜಗದೊಳು ಶೂರ ಜಾರುವ ಕಠಿಣಶರೀರದಿ ಭೂಮಿಯ ಸೇರುವ ಕಂಬವಿದಾರಣ ಮಾಡುವ ಮೀರುವಭುವನಕೆ ತೋರುವ ಪರಶುವ ಜಾರ ವಸನಹೀನ ಧೀರ ಸುಅಶ್ವವನೇರಿ ಮೆರೆವನ 1 ನಿಗಮೋದ್ಧರಿಸುವ ನಗವನು ತರುವ ಜಗತಿಯುದ್ಧರಿಸುವ ಮಗುವ ಪಾಲಿಸುವ ಮಾಯದಿ ಬೆಳೆವ ದುಗುಡ ನೃಪಕುಲವ ಬಗಿದು ಭಾಸ್ಕರ ತನಯನಿಗೊಲಿವ ನೆಗಹಿ ಗೋವರ್ಧನವ ಬಗೆಬಗೆ ಮಾತಾಡಿ ಸುಗುಣ ವಾಜಿಯನೇರಿ ಬಂದ ಸಚ್ಚಿದಾನಂದ ಹುಗಿದು ಸೋಮಕನ ಅದ್ರಿಗೆ ಬೆನ್ನಿತ್ತು ಅಗಿದು ಭೂಮಿಯ ನರಮೃಗನಾಗುತ ಗಗನಕೆ ಬೆಳೆದು ಘಾತಿಸಿ ಕ್ಷತ್ರಿಯರ ರಘುವರ ಯದುಪತಿ ವಿಗತವಸನನಾಗಿ ಜಗಕೆ ಬಲ್ಲಿದ ಹಯವೇರಿ ಬರುವನ 2 ನಳಿನೋದ್ಭವನಿಗಾಗಮವನಿತ್ತ ಗಿರಿಯ ನಿಲಿಸಿತ್ತ ಇಳೆಯ ಕದ್ದೊಯ್ದ ದಾನವನಳಿದ ನರಹರಿ ತಾನಾದ ಬಲಿಮುಖವ ಮುರಿದ ಖಳಭೂಪರಳಿದ ದÀಶಶಿರನÀಳಿದ ಕೊಳಲನೂದಿದ ದುಷ್ಟ ಲಲನೇರ ವ್ರತವಳಿದ ಕಲಿಯ ಮರ್ದಿಸಿದ ಹೊಳೆವ ಬೆನ್ನಲಿ ಗಿರಿತಳವೆತ್ತಿದನ ನೆಲನ ಬಗಿದು ಕಂಬದಲಿ ಬಂದವನ ಬೆಳೆದ ಬೊಮ್ಮಾಂಡಕೆ ಭಾರ್ಗವಾಧಿಪನ ಬುದ್ಧ ಕಲ್ಕಿ ಚೆಲುವ ಹಯವದನನ ಬಲ್ಲಿದನ 3
--------------
ವಾದಿರಾಜ
ಎಂಥ ಕೌತುಕವೆ ನಿಮ್ಮಿಬ್ಬರದೆಂಥ ಕೌತುಕವೆಎಂಥ ಕೌತುಕ ಚಿಂತಾಮಣಿಯ ನೋಡಿಸಂತೋಷ ವಾಗದೆ ಕಾಂತೆಯರುಕಾದುವ ಎಂಥ ಕೌತುಕವೆ ಪ. ನಾರಿಯರಿಬ್ಬರ ಬಿಟ್ಟು ನೀರೊಳಡಗಿದಮಾರಿ ತೋರದಲೆ ನೆಲವನೆ ಮಾರಿ ತೋರದಲೆ ನೆಲವನೆ ಬಗಿದುಅತಿ ಕ್ರೂರನಾದರೂ ಬಿಡರೆಲೆ ಸಖಿಯೆ1 ತಿರಕ ತಾಯಿಯಸುದ್ದಿ ಅರಿತವನಲ್ಲದೆದೊರೆತನ ಬಿಟ್ಟು ದನವನೆ ಕಾಯ್ದುದೊರೆತನ ಬಿಟ್ಟು ದನವ ಕಾಯ್ದರುನಿಮ್ಮ ಕರಕರೆ ಒಂದು ಬಿಡರೆಲೆ ಸಖಿಯೆ2 ಬತ್ತಲಾಗಿ ಎನ್ನ ಹತ್ತಿಲೆ ನಿಲ್ಲೆಂದುಎತ್ತ ಓಡಲೆನುತÀ ಕುದುರೆಯಎತ್ತ ಓಡಲೆನುತ ಕುದುರೆ ಜಳಕಿಸಿಬೆನ್ಹತ್ತಿ ಕೊಂಡವನ ಬಿಡರೆಲೆ ಸಖಿಯೆ3 ಕಾಲ ನಳಿನಾಕ್ಷಿ ಆಗ ನೆರವಾದಿನಳಿನಾಕ್ಷಿ ಆಗ ನೆರವಾದಿ ಉಪಕಾರ ಒಲಿದುಶ್ರೀಕೃಷ್ಣ ಮದುವ್ಯಾದ ಸಖಿಯೆ 4 ಕುಂದುಗುಣಗಳೆಲ್ಲ ಮುಂದಕ್ಕೆ ತಾರದೆ ಹಿಂದಿನ ಉಪಕಾರ ಸ್ಮರಿಸುತ ಹಿಂದಿನ ಉಪಕಾರ ಸ್ಮರಿಸುತ ಅವಳು ಮುಂದೆ ಬೇಕೆಂದು ಮನಸೋತ ಸಖಿಯೆ5 ಭಾವೆ ರುಕ್ಮಿಣಿ ನಿಮ್ಮ ಹೀನಗುಣನೋಡದೆಕಾಮನ ಪಿತನು ಕೈ ಹಿಡಿದ ಕಾಮನ ಪಿತನು ಕೈ ಹಿಡಿದ ಕಾರಣಭೂಮಂಡಲವೆಲ್ಲ ನಮಿಸಿತು ಸಖಿಯೆ 6 ಅಷ್ಟು ಜನರೊಳು ಧಿಟ್ಟತನವ ಮಾಡಿಗಟ್ಯಾಗಿ ನೀನು ರಥವೇರಿಗಟ್ಯಾಗಿ ನೀನು ರಥವೇರಿ ಧೈರ್ಯದಿಕೃಷ್ಣನ ಬೆರೆದು ತೆರಳಿದಿ ಸಖಿಯೆ 7 ಮುದ್ದು ರಾಮೇಶಗೆÀ ಕದ್ದು ಓಲೆಯ ಬರಿಯೆಹದ್ದು ವಾಹನನು ಎರಗಿದಹದ್ದು ವಾಹನನು ಎರಗಿದ ಕಾರಣವಿದ್ವಜ್ಜನರೆಲ್ಲ ನಮಿಸಿತು ಸಖಿಯೆ8
--------------
ಗಲಗಲಿಅವ್ವನವರು
ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ