ಒಟ್ಟು 33 ಕಡೆಗಳಲ್ಲಿ , 19 ದಾಸರು , 32 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಗೋಪಾಲ ಬಲುಜಾಣನೆ ಗೋಪಮ್ಮ ನೀಲ ಮೇಘಶ್ಯಾಮನೆ ಬಹುಶೂರನೇ ಜಾರನೇಚೋರನೇ ಪ ನಾರಿಯರೆಲ್ಲರು ನೀರ ತರುತಲಿರೆ ನೀರ ಕೊಡವನೆಲ್ಲ ಒಡೆದ ಗೋಪಮ್ಮ 1 ಸಣ್ಣ ಸಣ್ಣ ಹುಡುಗರ ಬಣ್ಣಿಸಿ ಕರೆತಂದು ಕಣ್ಣ ಬಿಡಿರೆನುತಲೆ ಸುಣ್ಣ ತೊಡೆದು ಪೋದ 2 ಅಂಗನೆಯರು ಪುಣ್ಯಗಂಗೆ ಮೀಯುತಲಿರೆ ರಂಗನಾಗ ದಿವ್ಯಾಂಗ ವಸ್ತುವ ನೊಯ್ದ ಗೋಪಮ್ಮ 3 ದಡದ ಮರವನೇರಿ ಉಡುವ ಸೀರೆಯನೆಲ್ಲ ಕೊಡದೆ ಕಾಡಿದ ಕೃಷ್ಣ ಮಾನ ಭಂಗವ ಮಾಡಿ 4 ತಾಳಲಾರೆವು ನಿಮ್ಮ ಮಗನ ಲೂಟಿಯ ನಾವು ಹೇಳೆ ಭೀಮನ ಕೋಣೆ ಲಕ್ಷ್ಮೀಲೋಲನಿಗೊಮ್ಮೆ ಗೋಪಮ್ಮ 5
--------------
ಕವಿ ಪರಮದೇವದಾಸರು
ಬೇಡಲೇತಕೆ ಪರರ ದೇಹಿಯೆಂದು ಪ ನೀಡುವಾ ಧೊರೆ ಎನಗೆ ನೀನಿರಲು ಸರ್ವದಾ ಅ.ಪ. ಗ್ರಾಸವನು ಬೇಡೆ ದೂರ್ವಾಸ ಮುನಿಗಂದನ್ನ ಅನಾ ಯಾಸದಿಂ ತತ್ಕಾಲದಲಿ ಕಲ್ಪಿಸಿ ಆ ಸಂಯಮಿಗೆ ಉಣಿಸಿ ದಣಿಸಿದ ಮಹಾ ದಾತಾ ದಾಶರಥೆ ನಿನ್ನ ಬಿಟ್ಟನ್ಯ ದೇವತೆಗಳನು 1 ಖಳ ದುಶ್ಯಾಸನನು ದ್ರೌಪದಿಯ ಸಭೆಯೊಳು ದು ಕೂಲವನು ಸೆಳೆಯೆ ದ್ವಾರಕ ಮಂದಿರಾ ಶ್ರೀ ಲೋಲ ಶ್ರೀ ಕೃಷ್ಣ ಕರುಣಿಸು ಕರುಣಿಸೆನೆ ಪಾಂ ಚಾಲಿ ಮೊರೆ ಕೇಳಿ ದಿವ್ಯಾಂಬರ ನಿಚಯವಿತ್ತೆ 2 ಮಡದಿ ಕಳುಹಲು ಬಂದ ಬ್ರಾಹ್ಮಣನ ಪೀಡಿಸುವ ಬಡತನವ ಕಳೆದೆ ಒಪ್ಪಿಡಿಯವಲಿಗೆ ಪೊಡವಿಯನ್ನಾಳಿಸಿದೆ ಕ್ರಿಮಿಗೊಲಿದು ಕಾರುಣ್ಯದಲ್ಲಿ ಮೃಡ ಬಿಡೌಜರೀಪ್ಸಿತ ಕೊಡುವೆ 3 ತಾಪಸೋತ್ತಮ ಮೃಕಂಡಾತೃಜಗೆ ಕಲ್ಪಾಯು ನೀ ಪೂರ್ತಿ ಮಾಡಿ ಅಲ್ಪಾಯು ಕಳೆದು ಆ ಪರ್ವತೇಶ್ವರನ ಪಟ್ಟಣವ ಸಾರ್ದು ಸಾಂ ದೀಪ ತನಯನ ತಂದ ಸರ್ವಾಂತರ್ಯಾಮಿ 4 ವಿಶ್ವ ಜೀವರಿಗನ್ನ ಕಲ್ಪಕನೆ ನೀನಿರಲು ಜ್ಞಾನ ದ್ರವ್ಯ ಅಲ್ಪ ಮಾನವರಿಗಾಲ್ಪರಿರೇನಹುದು ಅಹಿ ತಲ್ಪ ಜಗನ್ನಾಥ ವಿಠ್ಠಲ ಕಲ್ಪತರುವಿರಲು 5
--------------
ಜಗನ್ನಾಥದಾಸರು
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ
ರಂಗನ್ಯಾಕೆ ಬಾರ ತಂಗಿ ಮಂಗಳ ಮಹಿಮನ ದಿವ್ಯಾಂಗವ ಕಾಣದೆ ಎನ್ನಕಂಗಳು ಕಂಗೆಡುತಿವೆಪ. ರಂಗುಮಾಣಿಕದುಂಗುರದಂಗುಲಿಯ ಸನ್ನೆಯಿಂದಪೊಂಗೊಳಲೂದುವನ ತೋರೆ ರಮಣಿ ಅ.ಪ. ತಿಂಗಳು ಮೂಡಿತು ಪಿಕ ಸಂಗೀತವ ತೊಡಗಿತುಭೃಂಗ ತನ್ನಂಗನೆಯರ ಸಂಗಡ ನಲಿದು ಬಂದಶೃಂಗಾರವನದ ಮೃದು ತಂಗಾಳಿ ಬೀಸಿತು ನೋಡಾ-ನಂಗ ನೆಚ್ಚ ಬಾಣಗಳೆಂತೊ ಅಂತರಂಗವ ತಾಕಿದರೆನ್ನ ಇಂಗಿತವರಿತು ದೇವೋ-ತ್ತುಂಗ ಕಾಯದಿರೆ ಉಳಿವಂಗನ ನಾಕಾಣೆ ನಮ್ಮಪೆಂಗಳಿಗೆ ಬಂದ ಬಲುಭಂಗ ತನ್ನದಲ್ಲವೆ ಸಾ-ರಂಗಾಕ್ಷಿ ಬೇಗವನ ತೋರೆ ರಮಣಿ 1 ಕೌಸ್ತುಭ ರತ್ನಕರ್ಣಕುಂಡಲಸರಸಿಜಮುಖದಿ ಕಸ್ತೂರಿ ತಿಲಕವೆಸೆಯೆಪರಿಮಳಿಸುವ ಪೂಮಾಲೆಮೆರೆಯೆ ಪೊಳೆವ ಪೀತಾಂಬರದ ಸುತ್ತಲೊಲೆವಕಿರುಗೆಜ್ಜೆ ಮಣಿಮಯಕಾಂತಿ ಮಿಂಚುತಿರಲುಚರಣನೂಪುರ ಘಲುಘಲುಕೆನೆ ಕುಣಿವÀ ಶ್ರೀಹರಿಯನು ಕರೆದುತಾರೆ ರಮಣಿ 2 ಮಂದಜಾಸನನ ತಂದೆಯೆಂದೆನಿಪ ಗೋವಿಂದನಕಂದರ್ಪ ವೃಂದಾದಿಗಳ ಕಂದಿಸುವ ಕುಂದಿಲ್ಲದಸೌಂದರ್ಯಸಂದೋಹದೊಳಗೊಂದೊಂದನಾರು ಬಲ್ಲರುಎಂದೆಂದಿವನನು ಪೊಂದಿಪ್ಪಇಂದಿರೆ ಇವನ ಗುಣಸಾಂದ್ರ ಕಿರುಬೆರಳಿನಂದವನೋಡುತ್ತ ಆನಂದಸಿಂಧುವಿನೊಳ್ಮುಣುಗಿದಳಿಂದು ಹಯವದನ ಮುಕುಂದನ ತಂದೆನ್ನ ಮುಂದೆಇಂದುಮುಖಿ ಕರೆದುತಾರೆ ರಮಣಿ3
--------------
ವಾದಿರಾಜ
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ರಾಘವೇಂದ್ರಸ್ವಾಮಿಗಳ ಸ್ತೋತ್ರ ತಂಗಿನೀ ಕೇಳಿದ್ಯಾ ರಾಘವೇಂದ್ರಾ | ಘಂಗಳ ಕಳದು ಸುಖಂಗಳ ಕೊಡುವದು || ತಂಗಿ ನೀ ಕೇಳಿದ್ಯಾ ಪ ಶ್ರೀ ಪೂರ್ಣಬೋಧರ ಮತಾಪಯೋಬ್ದಿಗೆ ಚಂದ್ರ |ತಾಪಸೋತ್ತಮರ ದಿವ್ಯಾಪಾರ ಮಹಿಮೆಯ 1 ಅಂಗಹೀನರಿಗೆ ದಿವ್ಯಾಂಗ ಕೊಟ್ಟರೆಂದು |ಸಂಗೀತ ಮುಖದಿ ಜನಂಗಳು ಪಾಡುವದು 2 ಕಿವಿಯಿಲ್ಲದವರಿಗೆ ತವಕಾದಿ ಕೊಟ್ಟರೆಂದು |ಸುವಿವೇಕ ಮನದಿಂದ ಕವಿಜನ ಪಾಡುವದು 3 ವಂಧ್ಯಾಸ್ತ್ರೀಯರು ಬಂದು ನಿಂದು ಆರಾಧಿಸೆ |ಸಂದೇಹವಿಲ್ಲ ಬಹು ಮಂದಿ ಮಕ್ಕಳ ಕೊಟ್ಟ 4 ಗುರು ಪ್ರಾಣೇಶ ವಿಠಲಾ ಸರುವ ಕಾಮಿತಾರ್ಥವಾ |ಗುರು ರಾಘವೇಂದ್ರರಲ್ಲಿ ನಿರುತದಿ ಕೊಡಿಸುವ 5
--------------
ಗುರುಪ್ರಾಣೇಶವಿಠಲರು
ಶ್ರೀ ಹಯಗ್ರೀವ ಮಂತ್ರಸ್ತೋತ್ರ ಜ್ಞಾನ ಬಲಾನಂದಾದಿ ಸರ್ವಗುಣ ವಾರಿನಿಧಿ ಅನಿಷ್ಟಹರ ಇಷ್ಟಪ್ರದ ಹಯಗ್ರೀವ ಅನಘ ಸನ್ನುತ ಸೇವ್ಯ ಘನ ದಯಾಂಬುಧೇ ನಮೋ ಗುರುಗ ಲಕ್ಷ್ಮೀಶ ಪ ಕಮಲಾಸನ ಋಷಿಯು ಗಾಯತ್ರಿಛಂದಸ್ಸು ಅಮಲಾಷ್ಟಾಕ್ಷರ ಮಂತ್ರ ದೇವತೆ ಹಯಾಸ್ಯ ಸೋಮ ಮಂಡಲ ಸ್ಥಿತನು ಅಕಳಂಕ ಕಾಂತಿಮಾನ್ ಅಮೃತ ತನ್ನಯ ಸ್ವರೂಪ ಕಿರಣ ಸುರಿಸುವನು 1 ನಾಶರಹಿತನು ಅವ್ಯಯ ನಿತ್ಯೋ ನಿತ್ಯಾನಾಮ ಅಂಡ ಬಹಿರಂತರದಿ ಎಲ್ಲೂ ಪುಸ್ತಕ ಚಿನ್ಮುದ್ರೆಯು ಶಂಖಾಕ್ಷ ಮಾಲಾಧರ ಕಾಶಿಸುತಿಹ ತುರಗ ವದನ ಸರ್ವಜ್ಞ2 ಪೂರ್ಣ ಜ್ಞಾನಾತ್ಮನು ಪೂರ್ಣ ಐಶ್ವರ್ಯಾತ್ಮ ಪೂರ್ಣ ಪ್ರಭಾತ್ಮನು ಪೂರ್ಣ ತೇಜಾತ್ಮಾ ಪೂರ್ಣಾನಾನಂದಾತ್ಮನು ಪೂರ್ಣ ಶಕ್ತ್ಯಾತ್ಮನು ಪೂರ್ಣ ಗುಣನಿಧಿ ಸದಾ ನಿರ್ದೋಷ ಈಶ 3 ಪ್ರತಿವಾದಿ ಜಯಪ್ರದನು ಸರ್ವ ವಿದ್ಯಾದಾತ ಬುದ್ದಿ ಸ್ಥೈರ್ಯ ಸತ್ಜ್ಞಾನ ವರ್ಚಸ್ಸು ಈವ ಮುಕ್ತ್ತಿಸಾಧನೆ ಅಪರೋಕ್ಷಜ್ಞಾನವನಿತ್ತು ಸಾಧು ಅಧಿಕಾರಿಗಳ ಯೋಗಕ್ಷೇಮ ವಹಿಪ 4 ಏಕದಶÀ ಶತÀ ಸಹಸ್ರಾನಂತ ರೂಪನೇ ಸ್ವಗತ ಭೇದ ವಿಲ್ಲದ ಸುಪೂರ್ಣ ಸ್ವತಂತ್ರ ಶ್ರೀಕದಶ ವಿಧಿಪಿತ ಪ್ರಸನ್ನ ಶ್ರೀನಿವಾಸ ನಮೋ ವ್ಯಾಂ ಕಪಿಲದತ್ತÀ ವರಾಹಹಯಗ್ರೀವ 5 ಶ್ರೀ ಮಧ್ವಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು
--------------
ಪ್ರಸನ್ನ ಶ್ರೀನಿವಾಸದಾಸರು
ಸತ್ಯಭೋಧ ಯತಿಕುಲವರನೆ ನಿತ್ಯ ತುತಿಸಿ ವಂದಿಸುವ ತಾವಕರೊಳು ಎಣಿಸೋ ಪ ಅರ್ಥಿಜನ ಚಿಂತಾಮಣಿ ಸತ್ಕರುಣಿ ಶ್ರೀನಿವಾಸನ ಗುಣ ಸಾನುರಾಗದಲಿ ವ್ಯಾ ಖ್ಯಾನ ಪೇಳುವ ಕಾಲದಿ ಶ್ವಾನರೂಪದಿ ಪವಮಾನ ಜನರು ನೋಡೆ ಕಾಣಿಸಿಕೊಂಡನಂದೊ ತಾ ಬಂದು 1 ಬವರಗೋಸುಗ ಬಂದ ಯವನಾಧಿಪತಿ ನಿಮ್ಮ ಸುವಿಚಿತ್ರ ಮಹಿಮೆ ಕಂಡು ಪ್ರವಿನೀತನಾಗಿ ಕಪ್ಪವೆ ಕೊಟ್ಟು ನಮಿಸಿದ ಕವಿ ಆವಾ ವಿಭವಾ ವರ್ಣಿಸುವಾ 2 ಇವರು ದೇವಾಂಶರೆಂದರುಪುವಗೋಸುಗ ಬಂದು ದಿವಿಜತರಂಗಿಣಿಯು ಶಿವನಂಗಭೂರುಹ ಮೂಲ ಭಾಗದಲಿ ಉ ದ್ಭವಿಸಿ ಕಂಗೊಳಿಸಿದಳು ಕೃಪಾಳು 3 ಸ್ವಾಂತಸ್ಥ ಮುಖ್ಯ ಪ್ರಾಣಾಂತರಾತ್ಮಕ ಭಗ ವಂತನಂಘ್ರಿ ಕಮಲ ಸಂತತ ಸರ್ವತ್ರ ಚಿಂತಿಸುತಿಪ್ಪ ಮ ಹಾಂತರಿಗೇನಚ್ಚರೀ ವಿಚಾರ 4 ಚಾರು ಚರಿತ ಭೂ ಸುರವರ ಸನ್ನುತನೇ ಪರಮ ಪುರುಷ ಜಗನ್ನಾಥ ವಿಠ್ಠಲ ನಿಮ್ಮ ಪರಿಪರಿ ಮಹಿಮೆ ಎಲ್ಲಾ ತಾ ಬಲ್ಲಾ 5
--------------
ಜಗನ್ನಾಥದಾಸರು
ಸತ್ಯವರ ಮುನಿಪ ದಿಕ್ಷತಿಗಳಂತೆ ನಿತ್ಯದಲಿ ತೋರ್ಪ ನೋಳ್ಪರಿಗೆ ಸಂಭ್ರಮದಿ ಪ ಸಿಂಧೂರವೇರಿ ದೇವೇಂದ್ರನಂತೊಪ್ಪುವನು ವಂದಿಪ ಜನರಘಾಳಿವನ ಕೃಶಾನು ಮಂದ ಜನರಿಗೆ ದಂಡ ಧರನಂತೆ ತೋರ್ಪಕ ರ್ಮಂದಿಪನು ನರವಾಹನವೇರಿ ನಿಋಋತಿಯೆನಿಪ 1 ಜ್ಞಾನಾದಿ ಗುಣದಿ ರತ್ನಾಕರನೆನಿಪ ಶೈವ ಜೈನಾದಿಮತ ಘನಾಳಿಗೆ ಮಾರುತಾ ದೀನ ಜನರಿಗೆ ಧನದನಾಗಿ ಸಂತೈಪ ವ್ಯಾ ಖ್ಯಾನ ಕಾಲದಿ ಜಗತ್ತೀಶನೆಂದೊರೆವಾ 2 ಶ್ರೀಮದ್ರಮಾಪತಿ ಜಗನ್ನಾಥ ವಿಠಲ ಸ್ವಾಮಿ ಪಾದಾಬ್ಜ ಭಜನಾಸಕ್ತನಿವ ಧೀಮಂತ ಗುರು ಸಾರ್ವಭೌಮ ಭೂ ಸುರನುತ ಮಹಾ ಮಹಿಮ ಪೊಗಳಲೆನ್ನೊಶವೇ ಕರುಣಾ ಸಿಂಧು3
--------------
ಜಗನ್ನಾಥದಾಸರು
ಸರೋಜಜಾತೆ ಜಗನ್ಮಾತೆ ಪಾಲಿಸು ಜನಕಸುತೆ ಜನನಮರಣರಹಿತೆ ಪ ಬನ್ನಬಡಿಸುವುದೇ ನಮ್ಮ ಸೀತಮ್ಮ ಅ.ಪ ಪತಿಹೃದಯನಿವಾಸಿನಿ ಸುವಾಸಿನಿ ಭ- ವತ್ಪಾದಾಂಬುಜ ಭಜಿಸುವ ಜನರು ಸತತವಿಹಪರದಿ ಸೌಖ್ಯ ಪಡುವರೆಂದು ಸಾ- ರುತಿಹವು ಶೃತಿ ಸ್ಮøತಿ ಪುರಾಣ 1 ಭವ್ಯ ಚರಿತರಾದ ಬ್ರಹ್ಮಾದಿಗಳಿಗಳವೆ ನಿನ್ನ ದಿವ್ಯಾಂಘ್ರಿ ದರ್ಶನವಾಗುವುದು ಸೇವ್ಯನಾದ ಪತಿಚಿತ್ತಾನುಸಾರದಿ ಜೀವನಿಕರವ ಕರುಣದಿ ನೋಡುವ 2 ಕೃತಿ ಶಾಂತಿ ರುಕ್ಮಿಣಿ ಲಕುಮಿ ನಿರುತವು ನೆನೆವರ ದುರಿತಗಳ ಕಳೆದು ಗುರುರಾಮವಿಠಲನ ಚರಣವ ತೋರಿಸೆ 3
--------------
ಗುರುರಾಮವಿಠಲ
ಸುಜನ ಜನ ವತ್ಸಲನ ಸೋಮ ಸೂರ್ಯರ ನಯನ ಸುಗುಣಿ ಗುಣ ಗಂಭೀರನ |ಭುಜಗ ಭೂಷಣ ಕಂಕಣನ ಭುವನ ರಕ್ಷಕನ ಭುಜ ಚತುಷ್ಕಾಯುಧಗಳಿಂದೆಸೆವ ಶುಭ್ರ ರದನ ವಿಜಯ ಮೂರುತಿ ವಿಘ್ನವಿಪಿನ ದಾಹಕನ ವಿಘ್ನೇಶ್ವರಗೆ ಸಹಸ್ರನಮನ 1 ನೀನೆ ಶಾಶ್ವತ ರೂಪ ನಿನ್ನ ಕೀರ್ತಿ ಪ್ರತಾಪ ಖೂನ ಕಂಡುಉಸುರೆನೆಂದರೆ ಶ್ರುತಿಗಳಾಲಾಪ ಮೌನಗೊಂಡವು ಮಿಕ್ಕ ಶೇಷಾದಿಕರ ಸ್ಫೂರ್ತಿ ನಿಂತು ಹೋಗಿರಲು ಗಣಪ | ........................... ನಗೇಶನ ಮಾರ್ಗದ ಕೀಲ ಕೃಪೆ ಮಾಡಿ ತೋರಿದರು ಶ್ರೀನಾಥ ಶ್ರೀಹರಿಯ ಚಾರಿತ್ರ್ಯ ಪೇಳಿಸಲಿಕೆ ಆಧಾರ ನೀನೇ ಸತ್ಯ 2 ಇಂತು ವಿಘ್ನೇಶ್ವರನ ಬಲಗೊಂಡ ಬಳಿಕ ಸಮನಂತರದೊಳಾ ಶಾರದಾಂಬಿಕೆ ಶ್ರೀಪಾದ ಅಂತರಂಗದ ಪೀಠದಾಸನಕೆ ಕರಕೊಳಲು ಬಂದೊದಗು ಜಿವ್ಹಾಗ್ರದಿ | ನಿಂತು ನಡಿಸುವ ನಿನ್ನ ಶಕ್ತಿ..................................... ವಂತೆ ವಿಶ್ರಾಂತೆ ಪಾವನ ಮೂರ್ತೆ ಪ್ರಖ್ಯಾತೆ ವರದಾತೆ ಲೋಕ ಮಾತೆ 3 ಸುಜನ ಭುಜಗ ತ್ರಿಜಗ ಜೀವರ ಜನನಿ ತ್ರಿತಾಪ ಸಂಹಾರಿಣಿ ತ್ರಿದೇಹ ಸಂಚಾರಿಣಿ | ದ್ವಿಜತುರಂಗ ಗಮನಿ ದಿವ್ಯಾಂಬರಾಭರಣಿ ರಜ .........................ಗಜಗಮನಿ ಗಂಧರ್ವಗಾನ ಲೋಲಿನಿ ವಾಣೀ ರತ್ನ ಕೃತಾಂಗಿ ಅನುಕೂಲಿನಿ 4 ಹಸ್ತಿ ಕೃಮಿ ಕೀಟ ಭೃತ್ವಲಯದೊಳಗುಳ್ಳ ...................................... ಕೇವಲ ಪರಬ್ರಹ್ಮ ಸ್ಫುರಣಸ್ಫೂರ್ತಿಯು ತೋರದಾರಿಂದ ಗುರುವಿನ್ಹೊರತು 5 ಜಲಧಿ ಎಂದು ಮೊರೆ ಹೊಕ್ಕೆ ನಿನ್ನ ಶ್ರೀ ಚರಣ .......... ಮಾಡಿ ರಚಿಸುವ 6
--------------
ಭೀಮಾಶಂಕರ
ಹೆಚ್ಚಿನ ಗೋಜ್ಯಾಕೆಲೆ ಹುಚ್ಚು ತಿಳಿ ಮುಚ್ಚಿಕೊಂಡಿದೆ ನಿನ್ನ ಭವಕಿಚ್ಚು ಪ ಹುಚ್ಚು ಮತಿಯ ನೀಗಿ ಅಚ್ಯುತನಂಘ್ರಿಯ ಮೆಚ್ಚಿಸಿ ಮೆಲಿ ಅನುಭವದ್ಹುಚ್ಚು ಅ.ಪ ಕೀಳನಾಗದೆ ನೀ ನಿಜವ ತಿಳಿ ನಿನ್ನ ಕಾ ಲೊಳು ಬಿದ್ದಾದ ಸಂಕೋಲಿ ನಾಳೆಗೆ ಬರುತಾದ ಕಾಲನ ದಾಳಿಯು ತಾಳದೆಳಿತಾರ ಜಡಿದ್ವಜ್ರದ ಕೀಲಿ 1 ಹಂದಿಯ ಜನುಮಕೆ ಬೀಳಬೇಡ ಬೇಡಿ ಮಂದರ ನಿಲಯನ ಹೊಂದಿ ಭಜಿಸಿ ಆನಂದಪಡಿ 2 ದೂರದಿಂದ ಬಂದಿದ್ದಿ ಹೌಹಾರಿ ತ್ವರ ವ್ಯಾ ಪಾರ ಮಾಡಿಕೊಳ್ಳೊ ಭರ್ಜರಿ ಸಾರ ಮೋಕ್ಷಾಧಿಪ ಧೀರ ಶ್ರೀರಾಮನ ಪಾದ ವಾರಿಜ ನಂಬಿ ಹೊಡಿ ಜಯಭೇರಿ 3
--------------
ರಾಮದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ