ಒಟ್ಟು 79 ಕಡೆಗಳಲ್ಲಿ , 39 ದಾಸರು , 77 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕೃಷ್ಣದ್ವೈಪಾಯನ ಗುರುರಾಜರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಪ ವೇದವ್ಯಾಸರ ಕರಕಮಲಜರೆನಿಸಿ ವೇದೇಶರ ಮುಖದಿ ವೇದಾಂತ ಸುಶಾಸ್ತ್ರ ಜ್ಞಾನವ ಘಳಿಸಿ ಮೇದಿನಿಯೊಳು ಚರಿಸಿ ಮೇದಿನಿ ಸುರರಿಗೆ ಮೋದವ ಗರೆದ 1 ಧರಿಜಾರಮಣನ ಪದಪೂಜಿಸಿದಂಥ ಶ್ರೀ ವ್ಯಾಸರ ಮಂತ್ರ ಧರಿಯೊಳು ಜಪಿಸಿದರಿವರೆ ಮಹಾಂತರೆನಿಸಿದರತಿ ಶಾಂತ ವರುಣಿಸಲೊಶವೆ ಗುರುವರ ಮಠದಲಿ ಸುರಗಂಗೆಯು ಬಂದಿರುವ ಮಹಿಮೆಯನು 2 ವರ ಭೀಮಾತಟದಿ ವಿರಾಜಿಸುವಂಥ ಕುಸುಮೂರುತಿ ಸಂಸ್ಥ ಶರಣಾಗತ ಜನರಿಗೆ ಸಕಲಾಭೀಷ್ಟ ಗರಿಯುವ ಸುಸಮರ್ಥ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿ' ಯ ನೊಲಿ-ಸಿರುವ ಪರಮ ಮಹಾತ್ಮ3
--------------
ಕಾರ್ಪರ ನರಹರಿದಾಸರು
ಕೇಳು ಪೊರೆ ಶಾಂತ ತಾಳು ರಂಗಾ ನಿನ್ನಾಳು ನಾನಿರುವೆ ಕೃಷ್ಣಾ ಪ ಆಳೋ ಅರಸನೇ ಅ.ಪ. ಗಾಣ ಎಳೆಯುವ ಕ್ವಾಣನಾದೆನೋ ಕಾಣವೋ ನಯನಾ ಕಾಣಿ ವೇಣುಗೋಪಾಲ 1 ಮಾಯಾ ಮಗನಿಗೆ ನಾಯನಾಗಿರುವೆ ಮಾಯಾ ಕಾಯೋ ನರಹರಿ 2 ಬೇಡುವರು ಧನ ಕಾಡಿ ಎನ್ನನು ನೋಡು ಫಣಿಶಯನಾ ನಾಡಿಗೊಡೆಯಾ ಕೈ ಜೋಡಿಸುವೆನಯ್ಯಾ 3 ಬೇಗ ತವದಾಸನಾಗಿ ಮಾಡಿಕೋ ಸಾಗರಶಯನಾ ಈಗ ಭವಭಯ ನೀಗಿಸೈಯ್ಯ ಕೈ ಸಾಗದಾಯಿತು ಭಾಗವತಪ್ರಿಯಾ 4 ಆಶಾ ಬಿಡಿಸಿ ನೀ ಲೇಸು ಕೊಡು ಹನುಮೇಶವಿಠಲನೇ ಘಾಸಿಯಾದೆನು ಪೋಷಿಸಯ್ಯ ರಮೃಶ ಪಂಢರಿವಾಸ ವಿಠಲ 5
--------------
ಹನುಮೇಶವಿಠಲ
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಗಿರಿಶಾ ಗೌರೀಪ್ರಾಣಾಧೀಶ ಜಯ ಜಯದುರಿತ 'ನಾಶ ಮಹೇಶ ಪದಕ್ಷಯಜ್ಞ 'ಧ್ವಂಸಕಾರಿ ಸುರಪಕ್ಷಪಾತಿ ಕಾಮಾರಿ ದುಃಖಹರ 1ಘೋರಪಾಪ ಸಂದೋಹನಾಶನಭೂರಿ ದಯಾಳೋ ಭೋಗಿಭೂಷಣ 2ಈಶಗಿರೀಶ ಧನೇಶ್ವರ 'ುತ್ರಕಾಶೀಶ್ವರ ಸುರಸನ್ನುತಿ ಪಾತ್ರ 3ವಾಸವಾದಿನುತ ದುಷ್ಟಭಯಂಕರವೇಷ ಜಟಾಧರ ಚಂದ್ರಶೇಖರ 4ಕಲಭಪ್ರೌಢ ಮಹಾನಾಟ್ಯೇಶ್ವರಆ'ಮುಕ್ತೇಶ್ವರ ಪ್ರಮಥ ಗಣೇಶ್ವರ 5ಕಾಳಿಂದೀಪ್ರಿಯ ಕಮಲನಯನಸಖಕಾಲಕಾಲ ಕಾಲಾಗ್ನಿ ಪಂಚಮುಖ 6ನೀಲಕಂಠ ನಿಖಿಲಾಮರ ರಕ್ಷಕಫಾಲಚಂದ್ರ ಸಂಸೃತಿ 'ಷಭಕ್ಷಕ 7ಶಾಂತಮೂರ್ತಿವರಕಾಂತಿ ಗುಣಪ್ರಿಯಶಾಂತಿದಾಯಕಾ ಶಾಂತ ಸಂಶಯ 8ಕುಂಭಜಾತ ನುತನಟನ'ಲಾಸಶಂಭು ಹರ ಚಿದಾಕಾಸ ನಿವಾಸ 9
--------------
ಹೊಸಕೆರೆ ಚಿದಂಬರಯ್ಯನವರು
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗುರುವೇ ನಿತ್ಯನು ಗುರುವೇ ನಿತ್ಯನುಗುರುವೇ ನಿತ್ಯನು ಸತ್ಯ ಪ ಬೋಧ ಬೋಧ 1 ಬುದ್ಧಿ ಬುದ್ಧಿ ತಾನ್ಯಾತರ ಬುದ್ಧಿಯುಬುದ್ಧಿಯು ನಿಶ್ಚಯ ಬುದ್ಧಿಸಿದ್ಧಿ ಸಿದ್ಧಿ ತಾನ್ಯಾತರ ಸಿದ್ಧಿಯುಸಿದ್ಧಿಯು ಜ್ಞಾನದ ಸಿದ್ಧಿ 2 ಶಾಂತ ಶಾಂತ ತಾನ್ಯಾತರಶಾಂತವು ಎಲ್ಲಕೆ ನಿಂತುದೆ ಶಾಂತಭ್ರಾಂತುಭ್ರಾಂತು ತಾನ್ಯಾತರಭ್ರಾಂತದು ಗುರುವಿನಲ್ಲಿದ್ದುದೆ ಭ್ರಾಂತು3 ಧ್ಯಾನ ಧ್ಯಾನ ತಾನ್ಯಾತರ ಧ್ಯಾನವುಧ್ಯಾನವು ತನ್ನದೆ ಧ್ಯಾನಮೌನ ಮೌನ ಅದು ಯಾತರ ಮೌನವುಮೌನವು ತುರ್ಯದೆ ಮೌನ 4 ಭಕ್ತಿ ಭಕ್ತಿ ತಾನ್ಯಾತರ ಭಕ್ತಿಯುಮುಕ್ತಿಯು ನಿಜವಹ ಭಕ್ತಿಮುಕ್ತಿ ಮುಕ್ತಿ ತಾನ್ಯಾತರ ಮುಕ್ತಿಯುಮುಕ್ತಿ ಚಿದಾನಂದ ಮುಕ್ತಿ5
--------------
ಚಿದಾನಂದ ಅವಧೂತರು
ಗೌರಿನಂದನ ಗಜವಂದನ ಗೌರಿನಂದನ ಸೂರಿ ವಿಘ್ನಹರಣ ಪ. ಯೋಗಿವರ್ಯ ಗುರುವೆ ಬಾಗಿ ಬಿನ್ನವಿಸುವೆ ಭಾಗವತರ ಸಂಗವಾಗಲಂತರಂಗ 1 ಲೋಕೈಕಶರಣ್ಯ ಲೇಖಕಾಗ್ರಗಣ್ಯ ಏಕದಂತ ಶಾಂತ ಶ್ರೀಕರ ನಿಶ್ಚಿಂತ 2 ಅನಘ ಲಕ್ಷ್ಮೀನಾರಾಯಣ ಪದಾಬ್ಜಭ್ರಮರ ಪ್ರಣತಕಲ್ಪಭೂಜ ಪಾಹಿ ವಿಘ್ನರಾಜ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೌರಿನಂದನ ಗಜವಂದನ ಗೌರಿನಂದನ ಸೂರಿ ವಿಘ್ನಹರಣ ಪ. ಯೋಗಿವರ್ಯ ಗುರುವೆ ಬಾಗಿ ಬಿನ್ನವಿಸುವೆ ಭಾಗವತರ ಸಂಗವಾಗಲಂತರಂಗ 1 ಲೋಕೈಕಶರಣ್ಯ ಲೇಖಕಾಗ್ರಗಣ್ಯ ಏಕದಂತ ಶಾಂತ ಶ್ರೀಕರ ನಿಶ್ಚಿಂತ 2 ಅನಘ ಲಕ್ಷ್ಮೀನಾರಾಯಣ ಪದಾಬ್ಜಭ್ರಮರ ಪ್ರಣತಕಲ್ಪಭೂಜ ಪಾಹಿ ವಿಘ್ನರಾಜ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗನ್ನಾಯಕ ಗುರುಪಾಹಿಮಾಂ | ಅಘನಾಶಕ ವರದಾಯಕಾ | ಪ ವರಮಾನವಿ ಪುರ ಮಂದಿರ ಕರುಣ ಭರಣ ಶಾಂತ ಮೂರುತಿ1 ನಿರುತ ನಿನ್ನಯ ಚರಣನಂಬಿದೆ ದುರಿತ ತರಿದು ತೋರೋ ಸತ್ವಥ 2 ಭೂಮಿಜಾವರ ಶಾಮಸುಂದರ ನಾಮಗರಿಯೋ ಪ್ರೇಮಸಾಗ 3
--------------
ಶಾಮಸುಂದರ ವಿಠಲ
ಜಯ ದೇವ ಜಯ ದೇವ ಜಯ ಮಂಗಳ ಮಹಿಮ ದಯಗುಣದಲಿ ನಿಸ್ಸೀಮ ಜಯಗುರು ನಿರುಪಮ ಧ್ರುವ ಅನುಭವಕಾಗುವ ಚಂದ ಸ್ವಾನುಭವದÀ ಕಂದ ಜ್ಞಾನ ವಿಜ್ಞಾನಂದ ಘನಮಯ ನಿದ್ರ್ವಂದ್ವ ದ್ವಂದ್ವನಿರ್ದೂಂದ್ವ ತಾನೆ ತನ್ನಿಂದ ಎಂದೆಂದಿಗೆ ಬ್ಯಾರಿಲ್ಲ ದೋರುದು ನಿನ್ನಿಂದ 1 ದ್ವೈತಾದ್ವೈತಕೆ ರಹಿತಾಶ್ರಯಗುರು ನಿಜದಾತ ತ್ರೈಗುಣಾತೀತ ಶಾಂತ ನಿರ್ಗುಣ ನಿಶ್ಚಿಂತಾ ನಂತಾನಂತಕೆ ಸಂತತ ನೀನೆ ಏಕಾಂತ ಪಂಥ ಪರಮಗುಹ್ಯಾನಿಹ ಶ್ರೀ ಅವಧೂತ 2 ಸ್ವಸಂವೇದ್ಯ ನೀ ಪೂರ್ಣಋಷಿಮುನಿಗಳ ಧ್ಯಾನ ಲೇಸುಲೇಸಾಗಿಹ ಆತ್ಮನುಭವ ಖೂನ ಈಶ ನೀನೊಬ್ಬನಾಗಿಹ ಅನುದಿನ ದಾಸ ಮಹಿಪತಿ ಪ್ರಾಣ ಭಾಸ್ಕರ ಘನಕರುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ರುಕ್ಮಿಣೀ ಕಾಂತ ಜಯ ಪಯೋನಿಧಿ ಶಾಂತ ಪ ಜಯತು ಜಯ ಭಗವಂತ ಜಯತು ಧೀಮಂತ ಅ.ಪ ಜಯ ಭಕ್ತಮಂದಾರ ಜಯ ಮೌನಿಪರಿವಾರ ಜಯತು ಜಯ ಧುರಧೀರ ಜಯತು ಸಾಕಾರಾ 1 ವಿಜಯ ಮೌಕ್ತಿಕಾಭರಣ ಜಯತು ವಿಧಿನುತಚರಣ ಜಯತು ಜಯ ಭವತರಣ ಜಯ ಶರಣಕರುಣಾ 2 ಜಯನಾದ ಸುವಿಲಾಸ ಜಯತು ಭಾಸ್ಕರ ಭಾಸ ಜಯ ಮಾಂಗಿರೀವಾಸ ಜಯ ಶ್ರೀನಿವಾಸ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜ್ಞಾನಾನಂದಮಯಂ ಭಜೇಹಂ ಪ ಶ್ರೀನಿವಾಸ ಕರುಣಾರಸಪೂರಂ ಅ.ಪ ಸಕಲ ಕಲಾಕೃತಿ ಪೂರ್ಣಮನಂತಂ ಸಕಲ ವರಪ್ರದಮನುಪಮ ಶಾಂತಂ ವಿಕಸಿತ ಕಮಲೋಪಮ ಶಂಭುಚಿತ್ತಂ ಶ್ರೀಕರಮಮಿತ ಕೃಪಾಗುಣ ಸಹಿತಂ1 ಮೂಲಮಂತ್ರ ಸಕಲಾರ್ಥಸಮೀರಂ ಮೂಲತತ್ವ ನಿರ್ಧಾರಕಮಮರಂ ಗಾಲವ ನಾರದ ಮುನಿಜನನಿಕರಂ ಸಾಲಂಕೃತ ಮಾಂಗಿರಿವರಮಿಹಿರಂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್