ಒಟ್ಟು 89 ಕಡೆಗಳಲ್ಲಿ , 36 ದಾಸರು , 85 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ವಾಯು ಹನುಮಂತ ಜಯ ಭೀಮ ಬಲವಂತ ಪ ಜಯಪೂರ್ಣ ಮತಿವಂತ ಜಯ ಸಲಹೊ ಸಂತ ಅ.ಪ. ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂದು ಲಂಘಿಸಿ ಖಳರ ವನ ಭಂಗಿಸಿ ಸೀತೆ-ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ 1 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಅರಿಬಲವ ಕುಟ್ಟಿಉರಗ ಬಂಧನದಿಂದ ಕಪಿವರರು ಮೈಮರೆಯೆಗಿರಿಯ ಸಂಜೀವನವ ತಂದು ಬದುಕಿಸಿದೆ 2 ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂಜ್ಜಗದಿ ಮೆರೆದೆ 3 ಧsÀುರದಲಿ ದುರ್ಯೋಧನನ ಬಲವನು ತರಿದೆಅರಿತು ದುಶ್ಶಾಸನನ ಒಡಲನ್ನು ಬಗೆದೆಉರವ ತಪ್ಪಿಸಿ ಕೌರವನ್ನ ತೊಡೆಗಳ ಮುರಿದೆಹರಿಯ ಕಿಂಕರ ಧುರಂಧರಗಾರು ಸರಿಯೆ ಕಲಿಯುಗದಲಿ ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀಹರಿಯ ಗುಣಗಳನು ಮರೆಸಿಕಲಿಯನನುಸರಿಸಲು ಗುರುವಾಗಿ ಅವತರಿಸಿಖಳರ ದುರ್ಮತ ಮುರಿದೆ ಶ್ರೀಕೃಷ್ಣಪರನೆಂದೆ
--------------
ವ್ಯಾಸರಾಯರು
ಜೋ ಜೋ ಜೋ ಜೋ ಜೋ ಕೃಷ್ಣ ಪರಮಾ- ನಂದ ಗೋಪಿಯ ಕಂದ ಮುಕ್ಕುಂದ ಜೋಜೋ ಪ ಪೆಟ್ಟಿಗೆಯೊಳಗಿದ್ದ ಪರಿಪೂರ್ಣ ಕಾಮಾ ಮುಟ್ಟಿ ಭಜಿಸೊ ಮಹಾಯತಿಗಳ ಪ್ರೇಮಾ ತೊಟ್ಟಿಲವೊಳಗೆ ಮಲಗಿದ್ದ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಸ್ತೋಮಾ 1 ಪಠವಳಿನುಟ್ಟು ಬಂದರು ಸುರರಾಗ ಘಟಣಿ ಬಿದ್ದೀತೆಂದು ಮಹಪುಣ್ಯವೀಗ ವಟಪತ್ರ ಕಲ್ಪನ್ನ ತೂಗಿರಿ ಬೇಗ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಪ್ರೇಮಾ2 ಪಾಕಶಾಸನ ಬಂದು ಮಳೆಗಳ ಕರೆಯೆ ಗೋಕುಲವನು ಕಾಯ್ದ ಮಹಿಮೆಯು ಸರಿಯೆ ಲೋಕದೊಳಜಭವರಿಗೆ ದೊಡ್ಡ ಧೊರೆಯೆ ಶ್ರೀಕಾಂತ ಸರ್ವೋತ್ಮ ನೀನೆ ಶ್ರೀಹರಿಯೆ 3 ಆಲದೆಲಿಮ್ಯಾಲೆ ಮಲಗಿರೊ ಕಂದಾ ಮ್ಯಾಲ ಕಲ್ಪವನು ದೃಷ್ಟಿಸಿದ್ಯೋ ನಿನ್ನಿಂದಾ ಬಾಲನ ಪಡದ್ಯೊ ನಾಭಿಕಮಲದಿಂದಾ ಪಾಲಾಬ್ಧಿ ಶ್ರೀರಮಣ ಮುಕ್ಕುಂದಾ 4 ಮಾಮುನಿ ಸತ್ಯಬೋಧರಾಯರಿಂದ ಪ್ರೇಮದಿಂದಲ್ಲೆ ತೂಗಿಸಿಕೊಂಬೊ ಛೆಂದಾ ಸ್ವಾಮಿ ಕದರುಂಡಲಗಿ ಹನುಮಯ್ಯಗಾನಂದ ಪ್ರೇಮದಿಂದಲ್ಲೆ ತೂಗಿದರು ಗೋವಿಂದ 5
--------------
ಕದರುಂಡಲಗಿ ಹನುಮಯ್ಯ
ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ದುಷ್ಟ ರಕ್ಕಸರನು ಜಯಿಸಿದ ಪರಮವಾಯುಸುತಗೆ ಮಂಗಳಂ ಪ್ರಾಣೇಶಗೆ ಮಂಗಳಂ ಪ ಬೆಟ್ಟ ಪುಚ್ಛದಿ ತಂದಿಟ್ಟು ಸಂಜೀವನ ಕೊಟ್ಟ ಶ್ರೀ ರಾಮನ ಭಕ್ತನಿಗೆ ಮಂಗಳಂ 1 ಸಿಟ್ಟಿಲಿ ದುಶ್ಶಾಸನನ ಹೊಟ್ಟೆ ಬಿಗಿದು ಇಷ್ಟ ಪೂರೈಸಿದ ಕೃಷ್ಣನ ದಾಸಗೆ ಮಂಗಳಂ 2 ಹನುಮೇಶ ವಿಠಲನ ಪ್ರೀತಿಪಾತ್ರನೆಂದೆನಿಸಿದ ಮುನಿವರ ಗುರು ಮಧ್ವರಾಯಗೆ ಮಂಗಳಂ 3
--------------
ಹನುಮೇಶವಿಠಲ
ನಕ್ತಂಚರವಿದಾರಿ ಭಕ್ತವತ್ಸಲಶೌರಿ ವ್ಯಕ್ತಾವ್ಯಕ್ತನಮೋ ವಿಶ್ವಕರ್ತ ಪಾಹಿ ತ್ರೈವಿಕ್ರಮ ಪರಮಪಾವನನಾಮ ಅಹಿತಸಂಕುಲಭೀಮ ಪೂರ್ಣಕಾಮ ಬಲಿಮಂದಿರದ್ವಾರ ತಲನಿಲಯ ಶ್ರೀಧರ ಜಲಧಿಸಮಗಂಭೀರ ವರದ ಧೀರ ಪಾಕಶಾಸನ ಪಕ್ಷ ನಾಕಾರಿ ಕುಲಶಿಕ್ಷ ಶ್ರೀಕಲಾಂಕಿತವಕ್ಷ ಶರಣ ರಕ್ಷ ಪಂಕಜಾಸನ ಪೂಜಿತಾಂಘ್ರಿಯುಗಳ ಪಂಕಜೇಕ್ಷಣ ಪಾಹಿ ಪದ್ಮನಾಭ
--------------
ನಂಜನಗೂಡು ತಿರುಮಲಾಂಬಾ
ನಾರಾಯಣ--------ಜಾಯನಮ: ಪ ಸರ್ವವಾರಿಜೋದ್ಭವ ಹರಿ ನೀ ಪೊತ್ತ ಶಿರಲೋಕ ಎರಡೇಳಾರೊಳಾನೇಕ ದ್ವಾದಶಾದಿ-- ಶಾಸನ ಆದಿದಿಕ್ಪಾಲರಾ ಬೇಕಾದ ಹಾಗೆ ಪತಿ ¨್ರಹ್ಮನೀನೆ 1 ಜಗದೊಳು ಹುಟ್ಟಿದ ಪ್ರಾಣಿಗಳಿಗೆ ಎಲ್ಲ ಬಗೆ ಬಗೆ ಸಂಹಾರ ಕರ್ತನಾಗಿ ಅಗಣಿತ ಮಹಿಮ ತಾಮಸಯುಕ್ತನಾದಂಥ ಮೃಗ ಚರ್ಮಾಂಬರಧರ ಮಹಾದೇವನೀನೆ 2 ಸಕಲ ಚರಾಚರ ಸಲಹುತಲಿರುವಂಥ ನಿಕರಾದಿ ಸಾತ್ವಿಕ ನಿಜಧರ್ಮಾದಿ ಅಕಲಂಕ ಮಹಿಮ ಶ್ರೀಹರಿ 'ಹೊನ್ನ ವಿಠ್ಠಲ’ ಸಕಲ ಸ್ವತಂತ್ರನಾದ ಸರ್ವೋತ್ತಮ ನೀನೆ 3
--------------
ಹೆನ್ನೆರಂಗದಾಸರು
ನಿತ್ಯ ಶುಭ ಮಂಗಳಂ ಪ. ಸರಸೀರುಹಾಕ್ಷಾಯ ದುರುಳಮದಶಿಕ್ಷಾಯ ಸುರಮೌನಿ ಪಕ್ಷಾಯಾಧೋಕ್ಷಜಾಯ ಶರಣನ ರಕ್ಷಾಯ ಕರುಣಾಕಟಾಕ್ಷಾಯ ಧರಣಿಜಾರಮಣಾಯ ರಾಮಭದ್ರಾಯ 1 ಕ್ರತು ಪಾಲಕಗೆ ಶಶಿವದನೆ ಜಾನಕಿಯ ಕೈಪಿಡಿದವಂಗೆ ಶಶಿಮೌಳಿಚಾಪಮಂ ಮುರಿದ ಅಸಮಬಲನಿಗೆ ದಶಕಂಠಕಾಲಂಗೆ ರಾಘವೇಂದ್ರನಿಗೇ 2 ಕಾಕುತ್ಸ್ಥಕುಲಮಂಡನಗೆ ಕಮಲಾಪ್ತ ಕುಲದೀಪಂಗೆ ಸಾಕೇತನಗರಾಧಿಪಗೆ ಲೋಕೇಶನಿಗೆ ಪಾಕಶಾಸನಮುಖ್ಯ ನಾಕಪೂಜಿತಚರಣ ವೈಕುಂಠನಾಯಕ ಶ್ರೀ ಶೇಷಗಿರಿವರಗೆ 3
--------------
ನಂಜನಗೂಡು ತಿರುಮಲಾಂಬಾ
ನೀನು ಸರ್ವಜ್ಞನಾಗಿರಲು ನಿನ್ನಲಿ ಜನರು ಜಾಣತನ ತೋರಲಾಗುವುದೆ ಪವಮಾನ ಪ ಪ್ರಾಣಪತೇ ನಿನ್ನೊಲುಮೆ ಪಡೆದು ಸುಜನರು ದಿವ್ಯ ಸ್ಥಾನಗಳ ಪೊಂದಿ ಇಹಪರದಿ ಸುಖಿಸುವರು ಅ.ಪ ಧರ್ಮಯೋನಿಯ ಶಾಸನಗಳ ಸಂರಕ್ಷಣೆಯ ಕರ್ಮ ನಿನಗಲ್ಲದನ್ಯರಿಗೆ ತರವೆ ಕಿಮ್ಮೀರ ಕೀಚಕ ಜರಾಸಂಧ ಮೊದಲಾದ ಧರ್ಮಘಾತಕರ ಸದೆ ಬಡಿದ ಬಲಭೀಮ 1 ಜ್ಯೇóಷ್ಠನೆಂಬುವ ಮಮತೆ ತೊರೆದು ಧೈರ್ಯದಲಿ ಧೃತ ರಾಷ್ಟ್ರನಿಗೆ ಕಿಲುಬು ಕಾಸನು ಕೊಡದೆಲೆ ಭಾಗವತ ಧರ್ಮಗಳ ಹಂಚುವ ಹರಿಗೆ ಪ್ರೇಷ್ಟತಮ ನೀನಲ್ಲದನ್ಯರಾರಿಹರೊ 2 ನಿನ್ನ ಮತವೇ ಸಿರಿಯರಮಣನಿಗೆ ಸಮ್ಮತವು ನಿನ್ನ ದಯವೇ ಸಾಧು ಜನಕೆ ಅಭಯ ನಿನ್ನ ಮಾರ್ಗವ ನಂಬಿ ಧನ್ಯರಾಗುವರಲಿ ಪ್ರ ಸನ್ನನಾಗುವ ಹನುಮ ಭೀಮ ಮಧ್ವೇಶ 3
--------------
ವಿದ್ಯಾಪ್ರಸನ್ನತೀರ್ಥರು
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ಪರಮದಯಾಕರೆ ಪೊರೆಯೆನ್ನನು ಜನನಿ ಪ. ಪಂಕಜಾಕ್ಷಿ ಪಂಕಜಾಸ್ಯೆ ಪಂಕಜಾಶ್ರಯೆ ಪಂಕಜೋದ್ಭವಾದಿಜನನಿ ಪಂಕಜಾಲಯೇ 1 ಪಾಕಶಾಸನಾದಿವಿನುತೆ ಲೋಕವಿಶ್ರುತೇ ಶೋಕಹರಣೆ ಸಾಕುಯೆಮ್ಮ ಕೋಕಿಲರವೇ 2 ಇಂದು ಸೋದರಿ ಮಂದಹಾಸಿನಿ ಕುಂದರದನೆ ವಂದಿಸುವೆನು ಮಂದಗಾಮಿನೀ 3 ಪೊಡವಿಯಣುಗಿ ಪೊಡಮಡುವೆ ನಿನ್ನಡಿಯೊಳೀಪರಿ ಕಡುನೇಹದೆ ಪಿಡಿದುಕರವ ಬಿಡದಿರೌ ಸಿರಿ4 ದೋಷರಹಿತ ಶೇಷಗಿರಿಯ ವಾಸನರಸಿಯೆ ಶೇಷಭೂಷಣ ನಮಿತಚರಣೆ ಪೋಷಿಸೌ ಜಯೆ5
--------------
ನಂಜನಗೂಡು ತಿರುಮಲಾಂಬಾ
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪರಲೋಕವಿಲ್ಲೆಂಬೊ ಪರಮ ಪಾಪಿಗಳಿಗೆ ನರಲೋಕವೇ ನರಕವಣ್ಣ ಪ ಪರಲೋಕವಿಹುದೆಂದು ಗುರುಕರುಣವನು ಪಡೆದ ಕುರುಬನದ ಅರಿತನಣ್ಣ ಅ.ಪ ಈಶ ಜಡ ಜೀವರೆಂಬುವ ಭಿನ್ನ ತತ್ವಗಳು ಈಶನೊಬ್ಬನೆ ಕರ್ತನಣ್ಣ ಸಾಸಿರದಿ ಆಸೆ ಭಂಗಗಳ ಪೊಂದುತಲಿರಲು ಮೀಸೆಯನೇತಕೆ ತಿರುವಬೇಕಣ್ಣ 1 ಹರಿಯು ಪರನಲ್ಲದಿದ್ದರೆ ಸರ್ವಭುವನಗಳು ಹರಿಯಧೀನದಲಿರುವುದೇಕೆ ಹರಿಯಧೀನಲಿಲ್ಲದಿದ್ದರೀ ಜಗದೊಳಗೆ ಕೊರತೆಯೇತಕೆ ಮಂದಿಗಳಿಗೆ 2 ದೇವದತ್ತನು ಧನಿಕ ಪ್ರೇತದತ್ತನು ಬಡವ ಯಾವ ಕಾರಣ ವಿಷಮಗತಿಗೆ ಸಾವು ನೋವುಗಳ ಪ್ರತಿಕ್ಷಣಗಳಲಿ ನೋಡಿ ದೊರೆ ಭಾವವಿರುವುದು ನ್ಯಾಯವೇ 3 ಈಶನಿಲ್ಲೆಂಬುವರು ಹೇಸಲಾರರು ಪಾಪ ರಾಶಿ ರಾಶಿಯ ಗಳಿಸಲು ಆಶೆಬಡುಕರ ಜಗವ ನಾಶಮಾಡಲು ರಾಜ ಶಾಸನಕೆ ಬುಡವೆಲ್ಲಿಯಣ್ಣ 4 ಇಂದು ಇದನು ಪಡೆಯುವೆ ಮುಂದೆ ಅಧಿಕ ಧನವನು ಗಳಿಸುವೆ ಸದೆ ಬಡಿಯುವೆನು ಪರರನೆಂಬ ನುಡಿ ತಮಗುಣದ ಬೆದೆಯಲಿರುವನು ನುಡಿವನು 5 ಎಲ್ಲಿಂದ ಬಂದೆ ಹೋಗುವುದೆಲ್ಲಿಗೆಂಬುದನು ಬಲ್ಲವಗೆ ಮುಕುತಿ ಇಲ್ಲೇ ಒಳ್ಳೆ ಮನವನು ಪಡೆದು ಬಲ್ಲವರ ಸೇವೆಯಿಂ ದೆಲ್ಲವನು ತಿಳಿಯಲಳವಣ್ಣ 6 ಕಾಯವಾಚಾಮನಸದಿ ತಪವಗೈಯುತ ಶುದ್ಧ ಭಾವವನು ಗಳಿಸಿರಣ್ಣ ದೇವಗುರು ಪ್ರಾಜ್ಞ ಪೂಜನ ಲಾಭವಿದು ವಿನಯ ಭಾವಕೆ ಪ್ರಸನ್ನರಿವರು 7
--------------
ವಿದ್ಯಾಪ್ರಸನ್ನತೀರ್ಥರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಫಾಲಲಿಪಿ ಪರಿಹರಿಸಿಕೊಂಬರುಂಟೆ |ಕಾಲನಾಮಕ ನಿನ್ನ ಕ್ಲಪ್ತದಲಿ ಬರೆದಿದ್ದ ಪ ಸಾಲು ಸ್ಫಟಿಕದ ರತ್ನಮಯವಾದ ಮನೆ ಇರಲು ವಿಶಾಲ ಪರ್ನದ್ದಾದರಿರಬಾರದೆ ||ಆಳುಗಳು ಬಹುಮಂದಿ ಇದ್ದವಗೆನುಡಿದ ಮಾತಾಲಿಸುವ ನರನೊಬ್ಬನಿರಬಾರದೆ 1 ಜ್ಞಾನದಲಿ ಹರಿರೂಪ ಬಹಿರಂತರದಿ ನೋಳ್ಪಆನಂದದಲಿ ಸತತ ಇದ್ದವಗೆ ||ಧ್ಯಾನದಲಿ ಕ್ಷಣಮಪಿ ಕರುಹು ಕಾಣಿಸಿಕೊಂಬ ದೀನ ಮನವಾದರೂ ಇರಬಾರದೆ 2 ಕೋಟಿ ದ್ರವ್ಯವು ಇದ್ದು ನೀಟ ಕವಡಿ ಇಲ್ಲದೆಕಾಟ ಕಾಣದೆ ಸೊರಗಿ ಮರುಗಿದಂತೆ ||ಹಾಟಕಾಂಬರಧಾರ ಗುರು ವಿಜಯವಿಠ್ಠಲರೇಯದಾಟುವರಿಲ್ಲ ನಿನ್ನ ಪ್ರಬಲ ಶಾಸನವ 3
--------------
ಗುರುವಿಜಯವಿಠ್ಠಲರು