ಒಟ್ಟು 300 ಕಡೆಗಳಲ್ಲಿ , 66 ದಾಸರು , 270 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಅನುದಿನವು ಶ್ರವಣಮನನಾದಿ ಸಾಧನ ಮಾಡು ಇನ್ನು ಸಂಶಯವ್ಯಾತಕೊ ಪ. ಏನು ಶಪಥವ ಮಾಡಲಿ ಮತವು ಹಿರಿದೆಂದು ಜ್ಞಾನಿಗಳ ಸಮ್ಮತವೊ ಅ.ಪ. ಗುರುಮಧ್ವಶಾಸ್ತ್ರವೆ ಸಕಲ ಶಾಸ್ತ್ರಧಿಕೆಂದು ಶಿರವರಿದು ಮುಂದಿರಿಸಲೆ ಪರಮತಜಾಲವೆಲ್ಲ ವೇದವಿರುದ್ಧವೆಂದು ಶರಧಿಯನು ನಾ ದಾಟಲೆ1 ಭಾಗವತಶಾಸ್ತ್ರವೆ ಬಹು ಭಾಗ್ಯವೆಂತೆಂದು ನೆಗಹಿ ಪರ್ವತವ [ನಿಲಿಸಲೆ] ಭಾಗವತ ನಿಂದಕಗೆ ಬಹು ನರಕವೆಂತೆಂದು ಪರ್ವ- ತಾಗ್ರದಿಂ ಧುಮುಕಲೆ 2 ವಿದಿತ ದೈವರೊಳಗೆ ವಿಷ್ಣು ಉತ್ತಮನೆಂದು ವೇದಂಗಳ ಒಡನುಡಿಸಲೆ ಅಧಿಕಾರಿಗಳೊಳಗೆ ಅಂಬುಜಸಂಭವನೆಂದು [ಕಾದೆಣ್ಣೆ]ಯೊಳು ಮುಣುಗ [ಲೆ] 3 ಪರಲೋಕಸಾಧನಕೆ ತಾರತಮ್ಯಮತವೆಂದು ಗರಳವನು ಕುಡಿಯಲೆ ಹರಿದಿನಕೆ ಮರುದಿನಕೆ ಸರಿಯಿಲ್ಲವೆಂತೆಂದು ಹರಿವ ಹಾವನು ಹಿಡಿಯಲೆ 4 ಗುರುಮಧ್ವರಾಯರೆ ಆತ್ಮರಕ್ಷಕರೆಂದು ಅನಲವ ಕೈ ಪಿಡಿಯಲೆ ಅಮಿತ ಗುಣಪೂರ್ಣನೆಂದು ಅ- ಶರೀರವನು ನುಡಿಸಲೆ 5
--------------
ವಾದಿರಾಜ
ಅಭಯವನಿತ್ತು ಕಾಯೊ ರಂಗಯ್ಯ ನಿನ್ನಡಿಗೆರಗುವೆನು ನಾನು ಪ ಭಾಷ್ಯಕಾರರಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಪತಿಯ ಪಾದಾರವಿಂದಕೆ ನಮಸ್ಕರಿಸಿ ಲಕ್ಷ್ಮೀಪತಿ ನಿಮ್ಮ ಕರಗಳ ಸ್ತುತಿಸಿ ಬೇಡುವೆ ನಾನು 1 ಮತ್ಸ್ಯಾವತಾರನಾಗಿ ವಾರಿಧಿಯೊಳಗಿರ್ಪ ದೈತ್ಯನ ಕೊಂದು ಹೆಚ್ಚಿನ ವೇದವ ಅಜನಿಗೆ ತಂದಿತ್ತೆ ಭಕ್ತವತ್ಸಲ ನಿಮ್ಮ ಕರಕಮಲಗಳಿಂದ 2 ದೇವದೈತ್ಯರ ಮಧ್ಯದೀ ವಾರಿಧಿಯನ್ನು ವೇಗದಿಂದಲೆ ಮಥಿಸೇ ಆವಸುರರು ಅಪಹರಿಸಿದ ಅಮೃತವ ಸಾಧುಜನಗಿತ್ತ ಆ ವಿನೋದದ ಕರಗಳಿಂದ 3 ಕ್ರೋಢರೂಪವ ಧರಿಸಿ ಹಿರಣ್ಯಾಕ್ಷನ ಕೋರೆಯಿಂದಲೆ ಕೊಂದು ಧಾರುಣಿಯನು ತಂದು ಆದಿಮಾನವಗಿತ್ತ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 4 ಕರುಳ ಬಗೆದ ವನಮಾಲೆಯ ಧರಿಸಿದೆ ಶ್ರೀಪರಮಪಾವನ ನಿಮ್ಮ ಕರುಣಹಸ್ತಗಳಿಂದ 5 ತಟ್ಟನೆ ಯಜ್ಞಶಾಲೆಗೆ ಬಂದು ದಾನವ ಪುಟ್ಟ ಕರಗಳಿಂದ ಅರ್ತಿಯಲಿ ಬೇಡಿದ 6 ಅಂದು ಕ್ಷತ್ರಿಯರ ಕುಲವ ಕೊಡಲಿ ಪಿಡಿದುದ್ದಂಡ ದಿಂದಲಿ ಕಡಿದು ತಂದೆಯ ನುಡಿ ಕೇಳಿ ತಾಯಿ ಶಿರವನರಿದೆ ಇಂದಿರಾಪತಿ ನಿಮ್ಮ ಆನಂದ ಕರದಿಂದ 7 ಶಶಿಮುಖಿ ಸೀತೆಗೋಸ್ಕರ ಧನುವನು ಮುರಿದ ಅಸಮಸಾಹಸ ನಿಮ್ಮ ಕುಶಲಹಸ್ತಗಳಿಂದ 8 ಘೋರ ಪ್ರಳಯಸುರನ ಸಂಹರಿಸಿದೆ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 9 ಮಧುರೆಯೊಳಗೆ ಜನಿಸಿ ಗೋಕುಲಕೈತಂದು ಲೀಲೆಯ ತೋರಿ ಮುದದಿಂದ ಪಾಲಬೆಣ್ಣೆ ಕದ್ದು ಗೋಪಿಯರಲ್ಲಿ ಪಿ ಡಿದೆಳೆದೆ ಉಡುರಾಜನನು ಶ್ರೀಕರದೊಳು 10 ಪತಿವ್ರತೆಯ ವ್ರತವ ಭಂಗವ ಮಾಡಿ ಚಪಳಚಾರನಾಗಿ ಅತಿಶಯವಾದ ರಾಕ್ಷಸರ ಸಂಹರಿಸಿದೆ ಪೃಥವಿ ಪಾಲಿಪ ನಿಮ್ಮ ಚತುರಹಸ್ತಗಳಿಂದ 11 ಕಲ್ಯ್ಕಾವತಾರನಾಗಿ ಕುದುರೆ ಏರಿ ಸಂಹರಿಸುತಲೆ ಬಹು ಮಲಕರಗಳಿಂದ ದೇವ ಪರಮಪುರುಷ 12 ಕಂದ ಧ್ರುವ ತಾನಡವಿಯಲಿ ನಿಂದು ತಪ ಮಾಡಲು ಚಂದದಿ ಮಾಡಲು ಬಂದು ಸೇವೆಯನಿತ್ತು ಮತಿಗಾಗಿ [ಅಂದು] ಶಂಖವನೊತ್ತಿದ ಕರದೊಳು 13 ಕಾಲ ಪಿಡಿಯೆ ಗಜೇಂದ್ರ ನಿಮ್ಮ ಸ್ತುತಿಸೆ ಚಕ್ರ ಬಂದ ಕರುಣಹಸ್ತಗಳಿಂದ 14 ಅಂದು ಸುಧಾಮ ತಾನು ಶ್ರೀಹರಿಯ ಮಂದಿರಕೆ ಬರಲು ಚಂದದಿಂದಲೆ ಆತಿಥ್ಯ ಮಾಡಿ ಅವ ಕೊಂಡ ಕರಗಳಿಂದ 15 ದುರುಳ ದುಶ್ಯಾಸನ ಸಭೆಯೊಳು ದ್ರೌಪದಿಯ ಸೀರೆಯೆಳೆಯು ತಿರುವಾಗ ಹಾ ಕೃಷ್ಣ ದ್ವಾರಕಾವಾಸ ಯೆಂದು ಮೊರೆಯಿಡೆ ಕೇಳಿ ಅಕ್ಷಯವೆನುತ ನೆಚ್ಚವನೆಚ್ಚ ಕರದೊಳು 16 ಗ್ರಾಸವ ಬೇಡಲು ಪರಮಪುರುಷ ನೀನೇ ಗತಿಯೆಂದು ದ್ರೌಪದಿ ಮೊರೆಯಿಡೆ ಅಕ್ಷಯವ ಮಾಡಿದ ಕರದೊಳು * 17 ಮಂದಮತಿಯು ಜ್ಞಾನವೂ ನಿಮ್ಮ ಮಹಿಮೆ ಒಂದು ತಿಳಿಯದು ಇಂದಿರೆ ರಮಣ ಶ್ರೀರಂಗನ ದಯದಿಂದ ವಂದಿಸಿ ಬೇಡಿದೆ ಆನಂದಕರಗಹಳನ್ನು 18 ವೇದಶಾಸ್ತ್ರಗಳನ್ನು ಅರಿಯದ ಪಾಮರಸ್ತ್ರೀಜನ್ಮವು ಕಾಮ ಕ್ರೋಧವು ಲೋಭ ಮೋಹದಿಂದಲೆ ಬಿಡಿಸಿ ನಿಮ್ಮ ಪಾದದೊಳಿರಿಸೆನ್ನ ಶ್ರೀನಿವಾಸನೆ ಅಭಯವನಿತ್ತು ಕಾಯೊ 19
--------------
ಯದುಗಿರಿಯಮ್ಮ
ಅವತಾರ ಸಿರಿವರ ಘನ ಕರುಣಾಕರ ಪೊರೆಯೈ ಪ. ನಿಗಮಚೋರನನ್ನು ಕೊಂದು ನಗವಪೊತ್ತನೆ ವಿಗಡದೈತ್ಯನನ್ನ ಸೀಳಿ ಜಗವನಾಂತನೇ 1 ಘುಡುಘುಡಿಸಿ ಕಂಬವನು ಒಡೆದುಬಂದನೆ ಪಿಡಿದು ಖಳನ ಕರುಳಬಗೆದು ಕೊರಳೊಳಾಂತನೆ2 ಇಂದ್ರಗನುಜನಾಗಿ ದಾನವೇಂದ್ರ ಗೊಲಿದು ನೀಂ ನಿಂದು ಬಾಗಿಲಕಾವ ಗೊಲ್ಲನಂದಮೇನಿದೈ 3 ಹಡೆದತಾಯ ಶಿರವಪಿಡಿದು ಕಡೆದ ಭಾರ್ಗವ ಮಡದಿಚೋರನನ್ನು ಕೊಂದ ಒಡೆಯ ರಾಘವ 4 ಮಾವ ಕಂಸನ ಕೊಂದ ವಸುದೇವನಂದನ ಮಾಧವ 5 ಮತ್ತೆ ತ್ರಿಪುರ ಸತಿಯರ ಚಿತ್ತಕಲಕಿದ ಉತ್ತಮಾಶ್ವವನ್ನೆ ಹತ್ತಿ ಕಲ್ಕಿಯೆನಿಸಿದ 6 ಉರಗಶಯನ ಗರುಡಗಮನ ಪರಮಪಾವನ ವರದ ಶೇಷಶಿಖರಧಾಮ ಶ್ರೀನಿಕೇತನ 7
--------------
ನಂಜನಗೂಡು ತಿರುಮಲಾಂಬಾ
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಆರು ಬಂದರು ಸಖಿ ತೇರಿನ ಬೀದಿಲೆಮಾರಜನಕನ ಸಾರುತ ಹೊಗಳುವರಾರೆ ಕರಿಪುರದಲಿ ಬಂದವರಾರೆ ಪ. ದುಷ್ಟ ದೈತ್ಯರ ಶಿರವ ಕುಟ್ಟಿ ತಮಸ್ಸಿಗೆ ಹಾಕಿಅಟ್ಟಹಾಸದಿಂದ ಭೇರಿ ಘಟ್ಯಾಗಿ ಹೊಯಿಸುವರಾರೆ1 ಕ್ರೂರ ದೈತ್ಯರ ಶಿರವ ಸೇರಿಸಿ ತಮಸ್ಸಿಗೆ ಭೋರೆಂಬೊ ತುತ್ತೂರಿ ಕಾಳಿ ಹಿಡಿಸುವರಾರೆ 2 ವೆಂಕಟನ ದ್ವೇಷಿಗೆ ಸಂಕಟ ಬಿಡದೆಂದುಡಂಕರದಿಂದಲೆ ಡಂಕಿಯ ಹೊಯಿಸುವರಾರೆ 3 ಖೂಳ ದೈತ್ಯರ ಶಿರವ ಸೀಳಿ ತಮಸಿಗೆ ಹಾಕಿಭಾಳಾ ರೌಸದಿಂದ ಕಾಳಿಯ ಹಿಡಿಸುವರಾರೆ4 ಭಾಗವತರ ಸುಖ ಹೀಗೆ ಉನ್ನತ ಎಂದು ಈಗ ತೋರುತ ಭರದಿ ನಾಗಸ್ವರ ಹಿಡಿಸುವರಾರೆ5 ಅಂಬುಜನಾಭನ ನಂಬಲು ಸುಖವಿತ್ತು ಬಂಬಂಬೆನುತ ಶಂಖವ ಸಂಭ್ರಮದಿ ಹಿಡಿಸುವರಾರೆ 6 ನಿರ್ಜರ ಹಂಸನೀ ಹೌದೆಂದು ಸಂಶಯ ಬಿಡಿಸುತ ಕಂಸಾಳೆ ಹೊಯ್ಸುವರಾರೆ7 ಎಷ್ಟೆಷ್ಟು ಕಾಲಕ್ಕೂ ಕೃಷ್ಣಗೆ ದೊರೆ ಎಂದುಶ್ರೇಷ್ಠಾದ ಜಾಂಗುಟಿ ಫಟ್ಯಾಗಿ ಹೊಯಿಸುವರಾರೆ8 ಕಬ್ಬು ಬಿಲ್ಲಿನಯ ಒಬ್ಬ ಜಗದೀಶನೆಂದುಅಬ್ಬರದಿ ಕರಣೆ ನಿರ್ಭಯದಿ ಹಿಡಿಸುವರಾರೆ9 ಮಿತಿಯಿಲ್ಲದೆ ಶೃತಿ ಸಾರುವ ಮಧ್ವಮvವೆÉ ಅಧಿಕವೆಂದು ಶೃತಿಯನೆÉ ಹಿಡಿಸುವರಾರೆ 10 ತಂದೆ ರಾಮೇಶನ ಹೊಂದಲು ಸುಖವೆಂದು ಸುಂದರ ಕೊಳಲನೆ ಮುಂದೆ ಊದಿಸುವರಾರೆ 11
--------------
ಗಲಗಲಿಅವ್ವನವರು
ಆವ ಬಲವಿದ್ದರೇನು - ವಾಸುದೇವನಾ ಬಲವು ನಿಜವಾಗಿ ಇರದನಕ ಪ ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ 1 ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ2 ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ 3 ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ 4 ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ 5
--------------
ಕನಕದಾಸ
ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು
ಉಡುಪಿ ದೃಷ್ಟಿ ಇದ್ಯಾತಕೆ ಉಡುಪಿ ಕೃಷ್ಣನ್ನ ನೋಡದ ಪ ಗೋಪಿಯರ ಪೂಜೆ ಗ್ರಹಿಸಿ ಗೋಪಿಚಂದನ ಸಹಿತವಾಗಿ ವ್ಯಾಪಾರದ ಹಡಗೀಲಿ ಬಂದ ಶ್ರೀಪತಿಯ ನೋಡದ 1 ಮಧ್ವರಾಯರಿಗೊಲಿದು ಬಂದು ಸಮುದ್ರತೀರದಲ್ಲಿ ನಿಂದು ಪದ್ಮನಾಭನಪುರದಿ ನೆಲಸಿದ ಮುದ್ದು ಶ್ರೀಕೃಷ್ಣನ್ನ ನೋಡದ 2 ದುಷ್ಟವಾದ ದೇಶವನೆಲ್ಲಾ ಶ್ರೇಷ್ಠ ಮಾಡಿದ ಕೃಷ್ಣನ್ನ ನೊಡದ 3 ಶುದ್ದವಾದ ಗೋವುಘೃತವು ಕ್ಷೀರ ಸಕ್ಕರೆ ಮಧುವು ದಧೀ ನಾರಿಕೇಳ ಫಲಗಳಿಂದ ಮಿಂದ ಶ್ರೀಕೃಷ್ಣನ್ನ ನೋಡದ 4 ಉದ್ದಂಡವಾದ ಉರನಲ್ಲಿ ಭೂಮಂಡಲನಾಳ್ವ ಶಿರವನಿಟ್ಟು ಕೊಂಡೆ ಮಕರಿತು ಚೆಂಡು ಧರಿಸಿದ ಪುಂಡರೀಕಾಕ್ಷನ್ನ ನೋಡದ 5 ಪಾನಪಟ್ಟಿ ಮುತ್ತಿನಬಟ್ಟು ಮೂಗುತಿಯನಳವಟ್ಟು ವಜ್ರದ ಕರ್ಣಕುಂಡಲವನಿಟ್ಟು ಅರ್ಜುನಸಾರಥಿಯ ನೋಡದ 6 ವೈಜಯಂತಿ [ನವ] ಹಾರಪದಕ ಸರಗಳಿಟ್ಟ ವಾರಿಜನಾಭನ ನೋಡದ 7 ಕಡೆಗೋಲ ಬಲದ ಕೈಲಿ ಎಡದ ಕೈಯ ತೊಡೆಯೊಳಿಟ್ಟು ಉಡುದಾರ ಗೆಜ್ಜೆಯನಿಟ್ಟ ಪೊಡವಿಗೀಶ್ವರನ್ನ ನೋಡದ 8 ಅಂದುಗೆ ಗೆಜ್ಜೆನಿಟ್ಟು ಕುಂದಣದಾವುಗೆಯ ಮೆಟ್ಟಿ ಆ ನಂದದಿಂದ ಗಂಗೆ ಪಡೆದ ಇಂದಿರೇಶನ ಪಾದವ ನೋಡದ 9 ಸಂಸಾರದಗ್ನಿಯಲ್ಲಿ ಬೆಂದು ನೊಂದುಬಂದ ಭಕ್ತರ ಚರಣವೆಂ ಬೊ ಶರಧಿಯಲ್ಲಿ ಭರದಲಿರುವ ಹರಿಯ ನೋಡದ 10 ದುರುಳ ಶಕಟನನ್ನು ತುಳಿದ ವರದ ವೆಂಕಟಕೃಷ್ಣನ್ನ ನೋಡದ 11
--------------
ಯದುಗಿರಿಯಮ್ಮ
ಎಂದಿಗೆ ಕಾಂಬುವೆ ಇಂದಿರೇಶನೆ ನಿನ್ನ ಪಾದ ಕೃಪೆಯ ಪ ಒಂದರಲವ ನಿಂದು ಒಂದೇ ಮನದಿ ನಿನ್ನ ಮಂದ ಭಾಗ್ಯನು ನಾನು ಅ.ಪ ಎನ್ನ ಮನಸಿನ ಚೇಷ್ಟೆ ವರ್ಣಿಸಲಳವಲ್ಲ ಕ್ಷಣಕೊಂದು ಪರಿಯಪ್ಪುದು ಘನದೃಢ ಹರಿಪಾದ ನೆನೆಯುವುದು ನಿಮಿಷದಿ ಎಣಿಯಿಲ್ಲದೈಶ್ವರ್ಯವನು ಭೋಗಿಸುವುದು 1 ಗಳಿಗೆಯೊಳ್ದಶಲಕ್ಷ ಸುಲಭದಿಂ ಗಳಿಸರ್ಥ ಬಲವಾಗಿ ನಿಲಯದಿಟ್ಟು ಲಲನೆಯೊಳೊಡಗೂಡಿ ಬಲುಸೌಖ್ಯ ಬಡುಕೊಂಡು ಗಳಿಗೆಯೊಳ್ ದೇಶಾಂತರಕೆಳಸುವುದಭವ 2 ಅರಿಗಳಂ ಬಂಧಿಸಿ ಸೆರೆಯೊಳಿಟ್ಟರಲವದಿ ಶಿರವರಿಪೆನೆನುತಿಹ್ಯದು ಪರಮ ವೈರಾಗ್ಯದಿಂ ಚರಿಸುವುದರಲವದಿ ಪರಲೋಕ ಸಾಧನದಿರುತಿಹ್ಯದಕಟ3 ದೃಢದಿ ನಡೆವುದು ನಿಮಿಷ ಪೊಡವಿಜನಕೆ ಸತ್ಯ ನುಡಿಯು ಬೋಧಿಸುತಿಹ್ಯದು ದೃಢತರಬಲದಿ ತಾ ಕಡುಗಲಿಯೆನಿಸೊಂದೇ ಕೊಡೆಯಿಂದಲಾಳುವುದು ಪೊಡವಿಯಂ ಸಕಲ 4 ಕಾಮಿಸುತೀಪರಿ ಕಾಮಕೊಳಪಡಿಸೆನ್ನ ಪಾಮರನೆನಿಸುವುದು ಸ್ವಾಮಿ ಶ್ರೀರಾಮ ಎನ್ನ ಪಾಮರಮನಸಿನ ಕಾಮಿತವಳುಕಿಸಿ ಪ್ರೇಮದಿಂ ಸಲಹಯ್ಯ 5
--------------
ರಾಮದಾಸರು
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ