ಒಟ್ಟು 312 ಕಡೆಗಳಲ್ಲಿ , 55 ದಾಸರು , 261 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವನೆವೆ ದಾನವನು ನೋಡಿರೋ | ಅವನವೇ ದಾನವನು ಪ ದಾವನು ಸಾಕುವ ದೇವರ ಮರೆದು | ಅವಿವೇಕತನದಲಿ ಜೀವಿಸುತಿಹಾ ಅ.ಪ ವಿಷಯದ ಸಂಭ್ರಮದಾ ಸ್ಥಿರಪಟ್ಟಾ | ವಸುಧಿಲಿ ಬಗದಾವಾ | ಆಶನ ವ್ಯಸನದೊಳು ಪಶುವಿನ ಪರಿಯಲಿ | ನಿಶಿದಿನ ಗಳೆವುತ ದೆಶೆಗೆಟ್ಟು ಹೋದಾ 1 ಸಾಧು ಸಂಗಕ ದೂರಾ ಶ್ರವಣದ | ಹಾದಿಗೆಂದಿಗೆ ಬಾರಾ | ಸಾಧಿಸಿ ಕುವಿದ್ಯಾವಾದಾ ಆಟಗಳನು | ಸಾದರ ನೋಡುತಾ ತಾ ದಿನಗಳೆವಾ 2 ಗುರು ಮಹಿಪತಿ ಬೋಧಾ ನಂದನು | ಸಾರಿದನಾ ಹಿತವಾದಾ | ಹರಿನಾಮಾವೆಂದಿಗೆ ಸ್ಮರಿಸು ಮುಖದೊಳು | ನರದೇಹವೆಂಬುದು ಬಾರದು ನೋಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವನೆವೆ ಧನ್ಯ ನೋಡಿ ಅವನ ದರುಶನ ಮಾಡಿ ಪ. ಹರಿಧ್ಯಾನ ಹೃದಯದಲ್ಲಿ | ಹರಿನಾಮ ಜಿವ್ಹದಲಿ | ಹರಿಕಥೆ ಶ್ರವಣದಲ್ಲಿ| ಹರಿಯಾ ಸೇವೆ ಅಂಗದಲ್ಲಿ1 ಹರಿಭಕ್ತಿಯೊಳು ಕೂಡಿ | ಹರಿ ಕೀರ್ತನೆಯ ಮಾಡಿ | ಹರಿ ಪ್ರೇಮ ತುಳಕಾಡಿ | ಹೊರಳುವ ನಲಿದಾಡಿ 2 ತಂದೆ ಮಹಿಪತಿ ದಯಾ ದಿಂದ ಪಡೆದು ವಿಜಯಾ ಹೊಂದುವ ತಿಳಿದು ನೆಲಿಯಾ ಛಂದವಾದಾ ಪುಣ್ಯಕಾಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವನೆವೆ ಯೋಗ್ಯ ನೋಡಿರೈ ಭಕುತಿಗೆ | ಸಾಯಾಸವಿಲ್ಲದ ಯೈದನವನಿಯೊಳಗ ಮುಕುತಿಗೆ ಪ ನಿತ್ಯ ಶ್ರವಣ ಮಾಡಲೆಂದು ಬ್ಯಾಸರಾ | ಹ್ಯಾವ ಹೆಮ್ಮೆಯಲ್ಲಿ ಕಳಿಯ ವ್ಯರ್ಥವಾಸರಾ | ನೋವ ಮಾಡುತಿರಲು ತಾಪತ್ರಯದ ತೂರಾ | ಬಳಲ ಆವಗಿರುವ ಕೂಡಿಕೊಂಡು ಹರಿಯ ದಾಸರಾ 1 ನ್ಯೂನ ನೋಡದೆ ಪರರ ಸದ್ಗುಣವನೆ ಕೊಂಬನು | ದಂಭ | ಮಾನ ತೊರೆದು ಸ್ತುತಿಯ ನಿಂದ್ಯ ಸರಿಯ ಕಾಂಬನು | ಜ್ಞಾನದಿಂದ ಪಡೆದು ಗುರುಹಿರಿಯರಿಂಬನು | ತ್ವರಿತ | ಸ್ವಾನುಭವದ ಸೌಖ್ಯಸಾರ ಸವಿಯನುಂಬನು 2 ಬಲಿದು ಭಾವನಿಂದ ತಿಳಿದು ಸ್ವಹಿತುಪಾಯನು ದೃಢದಿ | ಹುಲು ಮನಿಜರಿದಿರ ಹೋಗಿ ದೆರಿಯ ಬಾಯನು | ತಳೆದು ವೇಷದಿಂದ ದಣಿಸವಾವ ಕಾಯನು | ಹೃದಯ | ದೊಳನವನ ನಲುವ ಗುರುಮಹಿಪತಿ ಪ್ರೀಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಡುವ ಬನ್ನಿರಿ ಬಾಲಕರೆ ಪ ರೂಢಿಗಚ್ಚರಿಯಾಗಿ ಬಲುಲೀಲೆಗಳಿಂ ಅ.ಪ ಜನನ ಮರಣವÉಂಬ ಚೆಂಡು ಬುಗುರಿಯಿಂ ಮನದ ವೃತ್ತಿಗಳೆಂಬ ಗೋಲಿಗಜ್ಜುಗದಿಂ ಜನಸಂಘವೆಂಬುವ ಚಿಳ್ಳೆಕೋಲುಗಳಿಂ ಅನುದಿನ ಭ್ರಾಂತಿಯೆಂಬ ಕವಣೆ ಕಲ್ಲುಗಳಿಂ 1 ಏಳುತಲೀ ಮುಖ ತೊಳೆದು ನೀವೆಲ್ಲ ಕರ್ಮ ಭಕ್ಷಗಳೆಲ್ಲ ಲೀಲೆಯಿಂ ಮೆಲ್ಲುತಲಿದರೊಳು ಬಲ್ಲ ಶೀಲ ಸದ್ಗುಣವುಳ್ಳ ಬಾಲಕರೆಲ್ಲ 2 ಶ್ರವಣ ಮನನವೆಂಬ ಸಾಧನೆಯಿಂದ ಭವಹರ ಗುರುರಾಮ ವಿಠಲ ಮುಕುಂದ 3
--------------
ಗುರುರಾಮವಿಠಲ
ಇಂತುಯನ್ನಾ ಬಯಕೆ ಕೈಗೂಡಿಸೋ ದೇವಾ ಅಂತರ, ಗಲಿದೇ ಹಂಬಲಿಸುತಿದೇ ಜೀವಾ ಪ ನಿನ್ನ ಸಿರಿಪದಾ ಸಖಚಂದಿರದಲಿ ಎನ್ನ ಕಂಗಳು ಚಕೋರಾಗಿ ನೋಡಲಿ ನಿನ್ನ ಕಥೆಯಾ ಘನ ಗರ್ಜನೆಯಲಿ ಘನ್ನ ಶ್ರವಣ ಮಯವಾಗಿ ನಲಿಯಲಿ 1 ನಿನ್ನ ನಾಮಾ ಮೃತ ಫಲ ಸೇವಿಸಲಿ ಎನ್ನ ನಾಲಿಗೆ ಶುಕವಾಗಿರಲಿ ನಿನ್ನ ಚರಣಾರ್ಪಿತ ತುಲಸಿ ಕುಸುಮದಲಿ ಎನ್ನ ಪ್ರಾಣವು ಮಧುಪಾಗಿ ಕೂಡಲಿ 2 ನಿನ್ನ ಮನೆಯಾಶೆಯಾ ಊಳಿಗದಲಿ ಎನ್ನಂಗ ನಿರುತ ಮಾರಿಸಿ ಕೊಳ್ಳಲಿ ಘನ್ನ ಗರು ಮಹಿಪತಿ ಪ್ರಭು ಯಚ್ಚರದಲಿ ನಿನ್ನಂಕಿತದಾ ಜನ್ಮಗಳೇ ಬರಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರೇಶನ ಭಜಿಸೋ ಹೇ ಮನಸೆ ನೀ ಕುಂದುವ ಜಗಮಾಯದಂದಕ್ಕೆ ಮೋಹಿಸದೆ ಪ ಅರಿವಿನೀಸಮಯವ ಅರಲವ ಕಳೆಯದೆ ಹರಿಶರಣರವಚನ ಶ್ರವಣ ಮಾಡುತ ನೀ 1 ಮನುಷ್ಯ ಜನುಮದ ಫಲವ ನೆನೆಸೀನಿಜಜ್ಞಾನದಿ ವನಜನಾಭನ ಕತೆ ಮನನಮಾಡನುದಿನ 2 ಹೇಸಿಕೆಸಂಸಾರ ನಾಶನೆಂದರಿದು ನೀ ಶ್ರೀಶ ಶ್ರೀರಾಮನ ನಿಜಧ್ಯಾಸದಿಟ್ಟೆಡೆಬಿಡದೆ 3
--------------
ರಾಮದಾಸರು
ಇದುಸ್ನಾನ ಇದುಸ್ನಾನ ಇದುಸ್ನಾನವಯ್ಯ ಸದಮಲಜ್ಞಾನಿಗಳು ಮನವೊಪ್ಪಿ ಮಾಡ್ವ ಪ ಇಟ್ಟು ಹಂಗಿಸದ್ದೆ ಸ್ನಾನ ಕೊಟ್ಟು ಕುದಿಯದ್ದೆ ಸ್ನಾನ ಕೊಟ್ಟದ್ದು ಕೊಡುವುದೇ ಶಿಷ್ಟ ತುಂಗಾಸ್ನಾನ ನಿಷ್ಠರಾಡದ್ದೆ ಸ್ನಾನ ದುಷ್ಟಸಂಗಳಿವುದೇ ಸ್ನಾನ ಶಿಷ್ಟಜನಸಂಗವೇ ನಿಜ ಕೃಷ್ಣಾಸ್ನಾನ 1 ಭವ ಅದು ಸ್ನಾನ ಕ್ಷೀರಸಾಗರ ಸ್ನಾನ ರಾಗನೀಗ್ವುದೆ ಸ್ನಾನ ಜಾಗರಣ ಸದಾಸ್ನಾನ ಭಾಗವತರೊಲುಮೆ ನಿಜ ಭಾಗೀರಥೀಸ್ನಾನ 2 ಮರೆವ ತರಿವುದೆ ಸ್ನಾನ ಅರಿವು ತಿಳಿವುದೆ ಸ್ನಾನ ಪರಮಜ್ಞಾನ ನಿಜ ಸುರಗಂಗಾಸ್ನಾನ ಕರುಣ ಪಡೆವುದೆ ಸ್ನಾನ ಮರಣಗೆಲಿವುದೆ ಸ್ನಾನ ಹರಿದಾಸರೊಡನಾಟ ಸರಸ್ವತೀ ಸ್ನಾನ 3 ವಾದನೀಗ್ವುದೆ ಸ್ನಾನ ಭೇದ ಅಳಿವುದೆ ಸ್ನಾನ ಮಾಧವನ ಕಥಾಶ್ರವಣ ಸದಾ ಯಮುನಾ ಸ್ನಾನ ವೇದವನರಿವುದೆ ಸ್ನಾನ ಬೋಧಪಡೆವುದೆ ಸ್ನಾನ ಸಾಧುಸಜ್ಜನಸೇವೆ ಗೋದಾವರೀಸ್ನಾನ 4 ನೇಮನಿತ್ಯವೆ ಸ್ನಾನ ತಾಮಸ್ಹರಣವೆ ಸ್ನಾನ ಕಾಮತೊಳೆವುದೆ ನಿಜ ಭೀಮಾನದೀಸ್ನಾನ ಕ್ಷೇಮಸಾಗರ ತ್ರಿಭೂಮಿಯೊಳಧಿಕ ಶ್ರೀ ರಾಮನಡಿಭಕುತಿಮುಕ್ತಿ ಹೇಮಾನದೀಸ್ನಾನ 5
--------------
ರಾಮದಾಸರು
ಇದೇ ಸೀತಾ ಮಹಾಮಂತ್ರ ಭವಾಬ್ದಿ ದಾಂಟುವಾ ಮಂತ್ರಾ ನಿತ್ಯ ಅನುದಿನಾ ಪಠಿಸುತಿರುವಾತಾ ಮುಕುತಿಪಂಥ ಪಡೆವ ನಿರುತಾ ಇದೇ ದೇಹದಲಿ ತಾನಿರುತಾ 1 ವಿರಾಗಿಯಾಗಿ ಮನದಲ್ಲಿ ಪರಾನಂದಾತ್ಮರೂಪವನು ತಿಳಿಯುವಾ ಚೈತನ್ಯರೂಪವನು ಇದೇ ಗೀತಾಪರಣಫಲ ತಾ ಪ್ರಶಾಂತಾಕಾಮನಾಗಿರುತಾ 2 ನಿಧಾನಾ ನೊಂದಮನನಿಗಿದೆ ಪ್ರಧಾನಾ ಶಾಸ್ತ್ರ ಸಂಚಯ ದೇ ಪ್ರಧಾನಾ ಷಟ್‍ಶಾಸ್ತ್ರ ಸಂಚಯದೇ ಸದಾ ಧ್ಯಾನಾ ಇದೇ ಮನನಾ ಮನುಜನೇ ಇದುವೆ ಸುಖತಾಣಾ 3 ತಿಳಿ ನೀ ಗೀತೆಯಾ ಬೋಧಾ ಅಳಿ ನೀ ಜೀವಪರ ಬೇಧಾ ತಿಳಿ ನೀ ಪರಮಾತ್ಮಪದ ಬೋಧಾ ಪಡೆವ ಮೋದಾ ಶ್ರವಣದಿಂದಾ ಇದೇ ಶ್ರೀ ಶಂಕರನ ಬೋಧಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇವರೆವೆ ಧನ್ಯರಲ್ಲವೆ ಈ ಶರಣರು | ಈ ಶರಣರು | ಇವರೆವೆ ಧನ್ಯರಲ್ಲವೆ ಅವನಿಲಿ ಶರಣರು ಪ ಕರುಣಾನಂದವ ಪಡೆದು | ತರಣೋಪಾಯವನರಿದು | ಜರಿವನ್ಯ ಹಂಬಲವ ಬೆರೆದು | ಭಕ್ತಿರಸದೊಳು | ನಿರಪೇಕ್ಷ ವೃತ್ತಿಯಿಂದಾ | ಚರರಿಸುತಿಹ ಶರಣರು 1 ಭವ ಕಾನನವನೆ ತೊರೆವಾ | ನಿತ್ಯ ತಾನಾರೆಂಬುದು ನರಿವಾ | ಸ್ವಾನಂದಬೋಧವನು ಮಾನ | ನೀಗಿ ಶ್ರವಣದಿ | ಸಾನುರಾಗದಲಿಂದ ತಾನುಂಬ ಶರಣರು 2 ಹರಿಯಲ್ಲರೊಳಗರಿದು | ಶರೀರ ಭಾವನೆ ಮರೆದು | ಹರುಷದ ಗುಡಿಗಟ್ಟಿಬರುವ | ನಯನೋದಕದಿ | ಗುರುಮಹಿಪತಿಸ್ವಾಮಿ ಚರಣದ ಶರಣರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಹಸುಖ ಮೊದಲೇಯಿಲ್ಲ | ಕೃಷ್ಣ ಅಹಹ ಪರಸುಖವಾಗುವುದ್ಹ್ಯಾಗೊ ಪ ಸಾಹಸಿನಾನೆನುತ ಜನರ ಮೆಚ್ಚಿಸುವೊಡೆ ಕುಹಕ ಮಾತುಗಳ ಕೂಗಿ ಬಾಯಾರಿದೆ ಅ.ಪ ಶ್ರವಣ ಮನನ ನಿಧಿ ಧ್ಯಾಸನ ವೊಂ- ದೆವೆ ಮಾತ್ರವು ನಿಜವಾಗಿ ಕಾಣೆನುನಾ ಬವನಾಶಿ ಧರಿಸಿ ದಾಸನೆಂದು ನಾ ಬರಿದೆ ದೇಶಗಳ ತಿರುಗಿ ಬೆಂಡಾದೆನು 1 ಯಮನಿಯಮಾಸನ ಯೋಗ | ಗಳ ಭ್ರಮೆಯ ಪಡುತ ಬಳಲುವೆಯಾವಾಗ ಮಮಯೆಂಬುದರಿಂ ಬಂದಿತು ರೋಗ 2 ಶಂಕರ ಮುಖ ಸುರವಂದ್ಯ | ಅರಿ ಶಂಖ ಗದಾಧರ ಶ್ರೀಶ ಮುಕುಂದ ಸಂಕಟ ಬಂದಾಗ ವೆಂಕಟರಮಣೆಂದು ಮಂಕುಜನರು ಪೇಳ್ವಗಾದೆಯಂತಾಯಿತು 3 ಕಾಸಿಗೆ ತಿರುಗಿದೆನಲ್ಲದೆ | ದಿವ್ಯ ಕಾಶಿಗಯಾಯಾತ್ರೆಯ ಮಾಡಿದೆನೇ ಘಾಶಿಪಟ್ಟಿ ಸಾಕು ಸಾಕಿದರ ಗೊಡವೇ 4 ಕೊಟ್ಟದ್ದರೆ ಹರಿಕೊಡುವ | ಯಂ ಕೊಟ್ಟರುವದಕು ಕೊಡದಿರುವದಕೂ ಕೃಷ್ಣ ನೀನರಿಯದೆ ನಾನು ಸ್ವತಂತ್ರನೇ 5 ಕಣ್ಣಿಲ್ಲದ ಚಿಂತೆವಂದು | ಸದಾ ಬನ್ನ ಬಡುವದು ಯೋಚನೆಯೆರಡು ನಿನ್ನವನೆನಿಸೀ ಕಷ್ಟ ಬಿಡಿಸಿ ಒಳ- ಕಣ್ಣು ಕೊಟ್ಟು ನಿನ್ನ ಸೇವೆಯ ಪಾಲಿಸೋ 6 ಛಳಿ ಜ್ವರದ ಯಾತನೆ ಪಡುವೆ | ನಿನ್ನ ಕರೆಕರೆ ಪಡಿಸುವುದು ನಿನಗೆ ತರವೇ 7 ಆರು ಜನರ ಸೇವೆ ಕೊಡಿಸೋ | ಯೀ ಆರು ಜನರ ಸಂಘವ ಪರಿಹರಿಸೋ ಮೂರು ಜನದ ಕೂಟ ಮೊದಲೇ ಬಿಡಿಸೋ ತಾಳಲಾರೆಯಿವರು ಬಲು ಕ್ರೂರಾತ್ಮರು 8 ಆಸೆಯ ಪರಿಹರಿಸಯ್ಯಾ | ನಿಜ ದಾಸನೆನಿಸಿ ನೀ ಪಿಡಿಯೆನ್ನ ಕೈಯ್ಯಾ ಈಸಲಾರೆ ಗುರುರಾಮ ವಿಠ್ಠಲ ಜೀಯಾ 9
--------------
ಗುರುರಾಮವಿಠಲ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಉದ್ಧರಿಸಿರೋ ನೀವು ನಿಮ್ಮ ತಿಳಿಯಬೇಕು ಪರಬೊಮ್ಮ ಪ ಮನುಜ ಜನ್ಮಕೆ ಬಂದು ಮರೆತರೆ ಕಷ್ಟವು ಮುಂದುಇನಿತು ವಿಚಾರವಿಲ್ಲ ಇದುವೆ ವಿವೇಕವದಲ್ಲ 1 ಕೊನಬುಗಳೆಲ್ಲವ ಬಿಡಿರೋ ಕೋಪವನೆಲ್ಲವ ಸುಡಿರೋತನು ಸುಖವಾಗಿಹುದಲ್ಲ ತಪ್ಪಿದರೆ ಬಳಿಕೆಲ್ಲ 2 ಭ್ರಮೆಯೆಲ್ಲವ ಬಿಡಬೇಕು ಬಂಧನ ಹರಿಯಲು ಬೇಕುನಮಗಿದು ನೀತಿಯಿದಲ್ಲ ನಾಚಿಕೆ ಕಿಂಚಿತ್ತು ಇಲ್ಲ 3 ತನ್ನ ತಿಳಿದರೆ ತಾ ಬಂಧು ತನ್ನ ಮರೆತರೆ ಶತ್ರುವಹಸನ್ನುತವಚನವಿದೀಗ ಸಾಧಿಸುವುದು ಬಹುಬೇಗ4 ಚೆನ್ನಾಗಿ ಶ್ರವಣದ ಕೇಳಿ ಚಿತ್ತ ಶುದ್ಧಿಯ ತಾಳಿಚಿನ್ಮಯನನು ನೀವು ಧರಿಸಿ ಚಿದಾನಂದ ತಾವೆಂದು ಸ್ಮರಿಸಿ5
--------------
ಚಿದಾನಂದ ಅವಧೂತರು
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಎಂತು ಗತಿ ಎನಗಾಗುವದೊ ಶ್ರೀ | ಕಾಂತ ನಿನ್ನ ಭಕುತಿಯ ಕಾಣೆ ಪ ಸಂಸಾರ ಎಂಬುದು ಸುಖವೆಂದು ನಾನು | ಹಂಸನಂತೆ ನಲಿಯುತ್ತಲಿದ್ದೆ | ಕಂಸಾರಿ ನಿನ್ನ ನಾಮಸ್ಮರಣೆ ಒಳ್ಳೆ | ವಂಶರ ಕೂಡ ನಲಿಯಲಿಲ್ಲಾ 1 ಪಾತ್ರರ ಕಂಡರ ಪರಿಹಾಸ್ಯ ಕು | ಪಾತ್ರರ ನೋಡಲವರ ಶಿಷ್ಯಾ | ಕ್ಲೇಶ ಎನ್ನ | ಗಾತ್ರಗೋಸುಗ ಪೋಗೆ ಬಲು ತೋಷಾ 2 ವಿರಕ್ತಿ ಕೇಳಲು ತಲೆಶೂಲೆ ವಿ | ಹಾರ ಮಾಡುವಲ್ಲಿ ಅನುಕೂಲೆ | ವಾರಿಜಾಕ್ಷ ನಿನ್ನ ಕಥೆ ಬಿಡುವೆ ಬಹು | ಚಾರುವಾಕರ ಕೂಡ ಸುಖಬಡುವೆ 3 ಕಾಸು ಪ್ರಾಪುತವಾಗಿ ಬಚ್ಚಿಡುವೆ ಅದೆ | ಕಾಸು ಬೇಡಿದರೆ ಪ್ರಾಣವ ಕೊಡುವೆ | ಮೋಸ ಬುರುವದು ಕಾಣೆನಲ್ಲಾ ದು | ರಾಶೆಯಿಂದಲಿ ಬಾಳಿದೆನಲ್ಲಾ 4 ವೈಕುಂಠದಾಸರು ಬರೆ ಕುಗ್ಗುವೆನೊ | ಕುಂಟತನಕೆ ಬಹು ನಲಿದಾಟಾ ಗತಿ | ಉಂಟಾದದಕೆ ಉಚ್ಚಾಟ5 ತಂದೆ ತಾಯಿಗಳಲ್ಲಿ ವಂಚನೆ ಹೀನ | ಮಂದಿಕೂಡಾಪ್ತಾಲೋಚನೆ | ಕುಂದು ನುಡಿದೆ ಸಜ್ಜನರಿಗೆ ಆ | ನಂದ ಬಡಿಸುವೆ ದುರ್ಜನರಿಗೆ 6 ಹೆಂಡತಿ ಮುನಿದರೆ ಬೇಡಿಕೊಂಬೆ ಹರಿ | ಕೊಂಡರು ಮುನಿದರೆ ಪೋಗಲೆಂಬೆ | ಕೊಂಡು ಬಾಹ್ಯನೆ ಪರರವಡಿವೆ | ಪರರ ಕಂಡರೆ ಬೇಡವೆಂದು ನುಡಿವೆ 7 ಮಕ್ಕಳು ಹಸ್ತರೆ ಬಳಲುವೆನೊ ಭೂದೇ | ವಕ್ಕಳು ಹಸ್ತರೆ ನಗುವೆನೊ | ಮುಕ್ತಿಗಾಗುವ ನಾನಾ ಶ್ರವಣ ನೀಚ | ಉಕ್ತಿಗೆ ಮಾಡಿದೆ ಅನುದಿನಾ 8 ಜೀವನಕ್ಕೆ ಬೇಕಾದದೆ ಮಾಣಿದು | ಅಭಾವಾ ಮಾಡೆನು ನೀಚರ ಸೊಲ್ಲು9 ಹರಿ ನಿನ್ನ ಶುಚಿಮಾಡೆ ಹೀನ ನರರ ದೊಂಬಲು ತೆಗಿಯದೆ ಬಿಡೆ | ಅಗ್ರೋದಕ ತಾರೆ ನೀರು | ಹೊರುವೆನೊ ಹಣವೆಂದರೆ ಮಾರೆ 10 ಗಂಡಿಕಿಸಿಲಿ ತೊಳೆಯಲಿ ಮಿಡಿಕಿ ನಾನು | ಅಂಡವಲಿವೆ ಅಶನ ಹುಡುಕಿ | ಅಂಡಜವಾಹನ ನಿನ್ನ ಸೇವೆ ಕೈ | ಕೊಂಡು ಮಾಡದೆ ಪೋದೆ ಹೀಗೆವೆ11 ಗಂಧವ ತೆಗೆ ಎಂದರೆ ಅಳುವೆ | ಬಿದ್ದ | ಮಂದಿರಕೆ ಕದಡುತಳುವೆ | ಒಂದು ತುಲಸಿದಳ ತರಲಾರೆನೆಂದು | ಸಂದಿಗೊಂದಿ ಸುತ್ತಿದೆನೊ ದೊರೆ 12 ಧೂಪಾರತಿ ಏಕಾರುತಿ | ಮೂರ್ತಿ | ಪಾಪಾತಿಶಯದಿಂದಾ ನೋಡಲಿಲ್ಲ ಬಹು | ತಾಪತ್ರಯದಿಂದ ನೊಂದೆನಲ್ಲಾ 13 ಸಿರಿ | ದೇವನಿಗೆ ಯಿತ್ತು ಸುಖಬಟ್ಟು | ಆವಾವ ರುಚಿಗಳ ಭುಂಜಿಸದೆ ನಾನು | ಪಾವನಮತಿಯಾಗದೆ ಪೋದೆ 14 ಎಳೆದುಲಸಿ ನಿರ್ಮಾಲ್ಯವಾಸವಾ || ಬಳಿಯಲ್ಲಿಯಿಟ್ಟು ಕೈವಲ್ಯವಾ | ಘಳಿಸಿಕೊಳ್ಳದೆ ಬಲು ದುರ್ಗಂಧ ಬಂದು | ಭವ ಬಂಧಾ 15 ಹರಿಕಥೆಗೆ ಮೊಗ ತಿರುಹುವೆನೊ | ................................................... ಸ್ಮರಣೆ ಮಾಡುವಲ್ಲಿ ಅತಿ ಹೇಯಾ ದುರಾ | ಚರಿತೆಯ ಮಾಡುವಲ್ಲಿ ಬಲು ನ್ಯಾಯಾ 16 ಹರಿದಾಸರನಪ್ಪಿಕೊಳ್ಳದೆ ಪಾ | ಮರ ಸತಿಯೊಳನಪ್ಪ ತಾ ಪೊಳದೆ | ಧರೆಯೊಳು ನಾನು ನಡಿವಂಥ ಇಂಥಾ | ದುರುಳಾಟಕೇನೆಂಬೆ ಗುಣವಂತಾ 17 ನಿನ್ನಂಘ್ರಿಗೆ ಅಡ್ಡಬೀಳದೆ ತುತ್ತು | ಅನ್ನಕೆ ಎರಗುವೆ ಸೋಲದೆ | ಅನ್ಯಾಯ ಮಾಡುವಲ್ಲಿ ಆನಂದಾ ಸತಿಸ | ತ್ಪುಣ್ಯ ಮಾಡುವಲಿ ನಿಭಂಧಾ 18 ಸಾಧುಗಳೊಡನೆ ತಾಳುವೆ ದ್ವೇಷಾನಿತ್ಯ | ಕ್ರೋಧರ ಕಂಡರೆ ಬಲು ಹರುಷಾ | ಓದನಕೆ ವೇದವನೋದಿ ತಂದು | ವಾದಿಸುವೆನು ಸಭೆಯಲಿ ಕಾದಿ 19 ಸತಿಯಳ ಸಂಬಂಧಿಗಳ ಸಾಕುವೆನೊ ಮಾತಾ | ಪಿತರ ಕಡೆಯವರ ನೂಕುವೆನೊ | ಕರ್ಮ ಮಾಡೋರ ನೋಡಿ ಹೀನ | ವಕ್ರದವರು ಕಂಡು ಬಲು ಪಾಡಿ 20 ಪರಿ ಪರಿ ಹೊಸ | ಕೌತುಕ ಪೇಳೂವೆ ನೋಡಿರಿ | ಶ್ರಾತಾದಿಗಳು ಎಲ್ಲಿ ಧಿಕ್ಕರಿಸಿ ಯಿಂಥ | ಭೌತಿಕ ನೆಚ್ಚಿದೆ ಅನುಕರಿಸಿ 21 ಒಡಿವಿ ಮಾಡಿಸಿ ಮಡದಿಗೆ ಇಡದೆ ಅನ್ಯ | ಮಡದಿಯರಿಗೆ ಧನ ಸೂರೆವಿಡಿದೆ | ಬಡವರ ಕಂಡರೆ ಅಣಕಿಸುವ ಭಾಗ್ಯ | ಪಡದವರಿಗೆ ಬಾಗಿ ನಮಿಸುವೆ 22 ಧರ್ಮಕ್ಕೆ ಅಸೂಯಾ ಬಡುವೆ ಅ | ಧರ್ಮಕೆ ಹಿಗ್ಗಿ ಸುಖವ ಬಡುವೆ | ಷ್ಕರ್ಮಿಗಳ ಕೂಡಾಮಾನತನಾ 23 ವಿಧಿ ನಿಷೇದವನೆಣಿಸದಲೆ ನಾನು | ಉದರ ತುಂಬಿದೆ ಭೀತಿ ಗಣಸದಲೆ | ವದಗಿ ಬೀಳುವ ನರಕದ ಬಾಧೆ ಕೇಳಿ | ಹದುಳಕ್ಕೆ ಮನಮಾಡದೆ ಪೋದೆ 24 ಯಜಮಾನ ನಾನೆಂದು ಪೇಳಿಕೊಂಡು ದೋಷ | ವ್ರಜದಲಿ ಚರಿಸದೆ ದು:ಖವುಂಡು | ಇಂದು | ಸಿಂಧು 25
--------------
ವಿಜಯದಾಸ
ಎಂದೆಂದೆನ್ನ ಮನದಿಂದ ಅಗಲದಿರೋನಂದ ನಂದನನೆ ಆನಂದ ಮೂರುತಿಯೆ ಪ ಬಹುಕಾಲ ನಿನ್ನ ಶ್ರವಣವೆಂಬ ಹೊನ್ನೋಲೆಯಬಹುಮಾನದಿಂದೆನ್ನ ಕಿವಿಯೊಳಿಟ್ಟುಮಹಿತ ಮಂಗಳಸೂತ್ರವೆಂಬೊ ದಾಸ್ಯವನ್ನು ಮಹದಾನಂದದಿ ಎನ್ನ ಕೊರಳೊಳ್ ಕಟ್ಟಿದೆಯಾಗಿ1 ಸುಲಲಿತ ಸೈರಣೆಯೆಂಬ ಭೂಷಣವಿತ್ತುಸಲಹಿದೆ ಬಹು ಪ್ರೀತಿ ಸಖಿಯೆಂದೆನ್ನಬೆಲೆಯಿಲ್ಲದ ಸುಜ್ಞಾನ ನಿಧಿಯನಿತ್ತುಜಲಜಾಕ್ಷ ಎನ್ನನು ಒಲಿದು ಆಳಿದೆಯಾಗಿ 2 ಎಲ್ಲಿ ನೀ ನಿಲಿಸಿದರೆನಗೇನು ಭಯವಿಲ್ಲಬಲ್ಲೆನೊ ವಿಶ್ವವ್ಯಾಪಕನೆಂಬುದಸಲ್ಲದೊ ಈ ಮುನಿಸೆನ್ನೊಳು ಸಿರಿಕೃಷ್ಣಒಲ್ಲದಿದ್ದರೆ ನಿನ್ನ ಸೆರಗಪಿಡಿದೆಳೆವೆ 3
--------------
ವ್ಯಾಸರಾಯರು