ಒಟ್ಟು 110 ಕಡೆಗಳಲ್ಲಿ , 39 ದಾಸರು , 105 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು
ಒರೆವೆ ಹಿತವನೆ ಕೇಳು ಎಲೆ ಮರುಳ ಮೂಢಾಒರೆವೆ ಹಿತವನೆ ಕೇಳೊಇರುವೆನು ಎಲ್ಲಿ ಎಂದೆನ್ನುವೆ ಏಕೆತೆರಳುವೆನೆಲ್ಲಿಗೆ ಎನ್ನು ಶಿವನಹೆ ಪ ಸತಿಸುತರ ನಂಬಬೇಡ ಯಮಧರ್ಮನಮನೆಯ ಸೇವಕರು ನೋಡಾ ಮಕ್ಕಳ ಒಡಗೂಡಾಮಿತಿಯಿಲ್ಲದೆ ಮೋಹವು ಹೆಚ್ಚಿಗತಿಗೆಡಿಸೆ ಒಪ್ಪಿಸುವರು ನಿನ್ನ 1 ಇಂದು ನಿನಗೆ ವಸತಿ ಸ್ಥಳವುಎಲ್ಲಿ ದೇವರು ಬಂದು ತುಳಿದಾಡುವರಿಂದುಬಲ್ಲವನಾದರೆ ಸತ್ಯವಿದೆನ್ನುತಎಲ್ಲರ ಆಸೆಯ ಮನದಲಿ ತ್ಯಜಿಸು2 ಸುಂಟರಗಾಳಿಯು ರವದಿ ತಿರುಗಿದವೊಲುಉಂಟು ಅನಂತಕಾಲದಿ ಜನನ ಮರಣಗಳುಅಂಟಿಯೆ ಕಾಲವ ಮರುಳದು ಬೇಡಅಂಟಿಯೆ ಹೊಂದು ಚಿದಾನಂದ ಬ್ರಹ್ಮವ 3
--------------
ಚಿದಾನಂದ ಅವಧೂತರು
ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು ನೆಲೆಯಾದುದಿಲ್ಲ ಜವ್ವನವೆಂಬುದೂ ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು ಒಡಲು ನಿನಗೆ ಮರುಳೆ 1 ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ ನೆಟ್ಟನೈದುವರು ನಿನಗೇನಹರು ಮರುಳೆ 2 ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ ಏನಹರು ನಿನಗವರು ಮೃತವಾದ ಬಳಿಕಾ ದೀನನಹೆ ಬಯಲಮಮತೆಗಳೆಂದು ತಿಳಿದುಕೊ ನೀನೆತ್ತಲವರೆತ್ತಲಿಹರವರು ಮರುಳೆ 3 ಮಗನಾವ ತಂದೆಯಾವನು ಜೀವ ಜೀವರಿಗೆ ಮಗನು ತಂದೆಯು ಕರ್ಮವಾಸನೆಗಳಾ ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ ಜಗದೊಳಾಡುವರು ನಿನಗೇನಹರು ಮರುಳೆ 4 ಅತಿಭಕ್ತನೆಂದು ವೈಕುಂಠ ವೇಲಾಪುರದ ಪತಿ ಅರ್ಜುನಗೆ ನಿರೂಪಿಸಿದರ್ಥವ ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5
--------------
ಬೇಲೂರು ವೈಕುಂಠದಾಸರು
ಕಾಯೊ ಕರುಣದಿಂದೆನ್ನನು ತೋಯಜಾಕ್ಷನೆ ನೀನು ಪ ಕಾಯೊ ಕರುಣದಿ ತೋಯಜಾಕ್ಷನೆ ನೀನು ಹೇಯ ಜನಮವೆತ್ತಿ ಮಾಯಕೆ ಸಿಲುಕಿದೆ ಅ.ಪ. ಹಿಂದೆ ತಪ್ಪಿದೆನ್ಯಯ್ಯ ಮುಂದೆ ಬುದ್ಧಿಯು ಬಂತು ಸಿಂಧುಶಯನ ನೀನು ಬಂದು ಮೈದೋರಿ 1 ಸತಿಸುತರೆನಗೆ ಅತಿ ಹಿತರೆಂತೆಂದು ಮತಿಭ್ರಾಂತನಾಗಿದ್ದೆ ಪತಿತ ಪಾವನನೆ 2 ಕೊಟ್ಟು ಆದರಿಸಲು ಇಷ್ಟ ಮಿತ್ರರು ಇದ್ದು ಕೆಟ್ಟುಪೋದಮೇಲೆ ಕೈಬಿಟ್ಟರು ನೀ ಬಿಡಬೇಡ 3 ತಂದೆತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೆರಮಣನೆ ಬಂಧವ ಬಿಡಿಸೀಗ 4 ಕರುಣಾಸಾಗರ ನಿನ್ನ ಮರೆಹೊಕ್ಕೆ ನಾನೀಗ ಶರಣರ ಪೊರೆಯುವ ರಂಗೇಶವಿಠಲನೆ 5
--------------
ರಂಗೇಶವಿಠಲದಾಸರು
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾವವನೆ ಕರ್ಮಜಯ ಬಳಿಕಂ ಸಾವವನೆ ಉಣ್ಣುವರು ಜನರು ಭಾವವನೆ ಅರಿದಿರಿಸು ಜೀವರ ನಿನ್ನಂಘ್ರಿಯಲಿ ಪ ದಾಸವೃಂದವು ತೋಷದಿಂದಲೆ ಪೂಶರಯ್ಯನ ವಿಡಿದು ಘನ ಸಂ- ಸುಕೃತ ಫಲವಿಹುದೋ ಶ್ರೀಶನಲಿ ನಿಜದಾಸ ಭಕುತಿಯ ಮೀಸಲಿರಿಸೀ ಮನವ ಮೋಹದೆ ಆಶೆ ಗಳಿಸದೆ ಶ್ರೀಹರಿಯ ನಿಜವಾಸ ಕೈಯ್ಯುವರು 1 ಮೃಗಜಲಕೆ ನೀರೆಂದು ಭಾವಿಸಿ ಪೊಗಲೆಳಿಸುವೆರಳೆಗಳ ಪರಿಯಲಿ ಮೃಗನಯನೇರತಿ ಚೆಲ್ವಿಕೆಗೆ ಜಗವೆಳಸಿ ಬಳಲುವದು ಮಿಗಿಲಾಗಿದ ವಿಷಯಲನಲದಿ ಧಗಧಗಿಸಿ ಜನಗಳು ಪೋಪರಲ್ಲದೆ ಖಗಪತೀ ವಾಹನನ ನೆನೆಯರು ಜಗವ ಪಾವನನು 2 ನೀರಜಾಸನ ಪಿತನೆ ಅಕ್ಷಯ ಶ್ರೀ ರಮಾವಲ್ಲಭನೆ ತವ ಪರಿ ವಾರವಲ್ಲದೆ ಸತಿಸುತರು ಮೇಣ್ ದೇಹ ಬಾಂಧವರು ಸಾರಸುಮತಿಯನಿತ್ತೆಮಗೆ ಹರೆ ಸೇರಿಸೆಮ್ಮನು ನಿನ್ನ ಅಡಿಯಲಿ ಧೀರ ಶ್ರೀ ನರಸಿಂಹವಿಠ್ಠಲ ಪಾರಗಾಣಿಪುದು 3
--------------
ನರಸಿಂಹವಿಠಲರು
ಕೆಡದಿರು ಕಡುಮೋಹದಡವಿಬಿದ್ದು ಮನ ಕೆಡುವ ಶರೀರ ಜಡದೃಶ್ಯವಿದು ಪ ಜಲದ ಮೇಲಿನ ಗುರುಳೆಯಂತೆ ಈ ದೇಹ್ಯ ಗಳಿಗೆ ಚಲಿಸಿ ಒಡೆದು ನೆಲಕೆ ಬೀಳುವುದು ಬಳಿದ ಕಸದತೆರಗಳಿಗೆ ನಿಲ್ಲದೆ ಇದನು ಎಳೆದುಹಾಕುವರಂತ್ಯ ಕಾಲದಲಿ 1 ಕ್ಷಿತಿಯೊಳಿರುವ ತನಕ ಸತಿಸುತರೆಲ್ಲರು ಸತತ ಹಿತದಿ ಬಲುಪೂಜೆ ಮಾಳ್ಪರು ಸತ್ತ ಬಳಿಕ ತಮಗ್ಹತ್ತಿತ್ತು ಮುಟ್ಟೆಂದು ಹಿತದವರೆಲ್ಲ ಮುಟ್ಟುತೊಳಕೊಂಬರು2 ಗಳಿಸಿದ ಧನಮಾನ್ಯ ಬಲುಸಂಪದವೆಲ್ಲ ಉಳಿವುದು ಎಲ್ಲ ಇಲ್ಲೇ ಜತೆಯಲಿ ಬರದೇನು ತಿಳಿದು ಶ್ರೀರಾಮನ ಚರಣಕಮಲಧ್ಯಾನ ಗಳಿಸಿ ಘನಮುಕ್ತಿ ಪಡಕೊಳ್ಳೆಲೊ 3
--------------
ರಾಮದಾಸರು
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಕೊಡುವವನು ನೀನು ಕೊಂಬುವನು ನಾನು ಪ ಬಡಮನದ ಮನುಜನ ಬೇಡಿ ಫಲವೇನುಅ.ಪ ಹದಿನಾರು ಹಲ್ಲುಗಳ ಬಾಯ್ದೆರದು ಬೇಡಿದರೆ ಇದು ಸಮಯವಲ್ಲೆಂದು ಪೇಳಿ ತಾನು ಮದನ ಕೇಳಿಗೆ ನೂರನೊಂದಾಗಿ ನೋಡುವನು ಮದಡ ಮಾನವನೇನು ಕೊಡಬಲ್ಲ ಹರಿಯೆ 1 ಗತಿಯಲ್ಲವೆಂತೆಂದು ನಾನಾ ಪ್ರಕಾರದಲಿ ಮತಿಗೆಟ್ಟು ಪೊಗಳಿದರೆ ಅವನು ತನ್ನ ಸತಿಸುತರ ಕೇಳಬೇಕೆಂದು ಮೊಗ ತಿರುಹುವ ದುರುಳ ಮತ್ತೇನು ಕೊಡಬಲ್ಲ ಹರಿಯೆ 2 ಹೀನ ವೃತ್ತಿಯ ಜನರಿಗಾಸೆಯನು ಬಡುವದು ಗಾಣದೆತ್ತು ತಿರುಗಿ ಬಳಲಿದಂತೆ ಭಾನು ಕೋಟಿ ತೇಜ ವಿಜಯವಿಠ್ಠಲರೇಯ ನೀನಲ್ಲದನ್ಯತ್ರ ಕೊಡುಕೊಂಬುರಂಟೆ 3
--------------
ವಿಜಯದಾಸ
ಕೊಡುವುದನೆ ಕೊಡುಮತ್ತೆ ಎಷ್ಟಾದರಭವ ಪ ಅಸುವನೀಗಲು ನಾನ್ಹಸಗೆಟ್ಟು ಬೇಡದ ಅಸಮಶುಚಿಮನ ನೀಡೊ ಕುಸುಮಾಕ್ಷ ಹರಿಯೆ 1 ಅತಿಶಯದ ಬಡತನವು ಸತತ ಪೀಡಿಸಲೆನಗೆ ಗತಿಯಿಲ್ಲದವವೆನುತ ಸತಿಸುತರು ಜರಿಲಿ ಧೃತಿಗುಂದಿ ಮತಿಗೆಟ್ಟು ವ್ಯಥೆಬಡುವ ಸ್ಥಿತಿಯನ್ನು ಹಿತದಿಂದ ತೊಲಗಿಸೈ ರತಿಪತಿಪಿತನೆ 2 ಬಿರುಕಿನೊಳು ಬಂದು ಈ ಮುರುಕು ಕಾಯದ ಇರುವು ಹರಕೊಂಡು ಹೋಗಲಿ ಹರಿ ಕರುಣದೋರೊ ನರಕಿಯೆನಿಸುವ ಮಹ ತಿರಕಿ ಸಂಸಾರದ ಮರುಕವನು ಪರಿಹರಿಸೊ ಪರಕೆ ಪರತರನೆ 3 ಊರು ನಾ ಸೇರಿರಲಿ ಅರಣ್ಯದೊಳಗಿರಲಿ ಮೀರಿದ ರೋಗದಿಂ ಘೋರ ಬಡುತಿರಲಿ ಆರೈಸದಾರನ್ನು ಸಾರಸಾಕ್ಷನೆ ನಿನ್ನ ಪಾರನಾಮದ ಸವಿ ಸುಸಾರ ಎನಗಿರಲಿ 4 ಕೊಡೋಧರ್ಮ ನಿನ್ನದಿದೆ ಬೇಡುವುದು ನನ್ನ ಧರ್ಮ ಕೊಡುವುದಾದರೆ ನೀನೆ ಕೊಡು ಎನಗೆ ಇದನು ಪೊಡವಿಯವರಿಗೆ ಬಾಗಿ ಬೇಡದ ಪದವಿಯನು ಪಿಡಿವೆ ತವಪಾದ ಎನ್ನೊಡೆಯ ಶ್ರೀರಾಮ 5
--------------
ರಾಮದಾಸರು
ಕ್ಷಮಿಸೊ ಯೆನ್ನಪರಾಧಗಳನು ಪ ಮಾಯಾ ಭ್ರಮಿತನ ಕರುಣದೊಳೀಕ್ಷಿಸೊ ಅ.ಪ ಗಿಷ್ಟಾದರು ದಯೆಯಿಟ್ಟು ಪೊರೆಯೊ ಹರಿ 1 ಮಂದರಧರ ಸರ್ವೇಶ್ವರನೆ || ನಂದದ ಸ್ಮರಣೆಯ ಕುಂದದೆ ಪಾಲಿಸೊ 2 ಸತಿಸುತರಿಹಪರವೆನಗೆ ನೀನೆ ಸ-| ಸತತ ಮೈದೋರೊ ಸದಾನಂದ ಗುರುವರ 3
--------------
ಸದಾನಂದರು
ತಪ್ಪು ತಪ್ಪು ತಪ್ಪು ತಪ್ಪಪರಾಧ ಕೋಟಿಯಸರ್ವಂ ತಪ್ಪನ್ನೆಲ್ಲಾ ಕ್ಷ'ುಸಿ ಒಪ್ಪಿಕೊಳ್ಳಯ್ಯ ಗುರುವೆ ಪದೇಹ ತನ್ನದೆಂಬ ಅಹಂಕಾರದ ತಪ್ಪು ತನ್ನಗೇಹ ಸತಿಸುತರ ಮಮತೆ ಪಾಶದ ತಪ್ಪುಮೋಹ ಮದ ಮಾತ್ಸರ್ಯವ ಭ್ರಮೆಗೊಂಬೊ ತಪ್ಪುಓಹೋ! ವ್ಯರ್ಥಕಾಲವ ಕಳೆದೆನಹುದಯ್ಯ 1ಬಕವೃತ್ತಿಯ ಸೇಮೆಂದ ಮುಕುತನೆಂಬೆನೋ ಹರಿ'ಕಳಮತಿಗಳ ಕೂಡಿ ಯೋಗ್ಯನೆಂಬೆನೋಸಕಲ 'ಷಯಸುಖವನುಂಡು ವೈರಾಗಿಯೆಂಬೆನೋ ಹರಿಭಕ್ತರ ಸಂಗವ ಬಿಟ್ಟು ಜ್ಞಾನಿಯೆಂಬೆನೋ 2ಬರಿಯ ಬ್ರಹ್ಮಜ್ಞಾನದಿಂದ ಮರುಳು ಮಾಡಿದೆಪರಿಪರಿಯ ಭಾವಭೇದಗಳನು ತೋರಿದೆಅರಿಯದ್ಹೋದೆನಯ್ಯ ಶ್ರೀಮದ್ಗುರುವೆ ವಾಸುದೇವಾರ್ಯ ನರಸಾರ್ಯ ಅಮರಗಿರಿನಿಲಯ ಸಕಲ ತಪ್ಪು ಮರೆಯಯ್ಯಾ * 3
--------------
ವೆಂಕಟದಾಸರು
ತಿಳಿಯದಾಯಿತು ವಯಸು ಕಳೆದು ಹೋಯಿತು ಪ ಕಳವಳಿಸುತ ಕಡೆಗಾಣದೆ ಬಳಲಿ ತೊಳಲಿ ಪಾಪ ಹೆಚ್ಚಿ ಅ.ಪ ಸತಿಸುತರೆಂಬ ಬಲೆಗೆ ಸಿಲುಕಿ ಅತಿಶಯ ಮೋಹದಲಿ ಮುಳುಗಿ ಪಥಿಕರಾಡುವಂತೆ ನಡೆದು ಪತಿತನಾಗಿ ನಿಜದ ಮರ್ಮಾ 1 ಕೆಲದಿನ ಆಟದಿ ಲಲನೆಯರ ಕೂಟದಿ ಹಲವು ವಿದ್ಯೆಯ ಕಲಿತು ಪರರ ಒಲಿಸಿ ಸ್ತ್ರೋತ್ರಮಾಡಿ ಬೇಡಿ ಫಲವ ಕಾಣಲಿಲ್ಲ ಕೊನೆಗೆ ಹಲುಬಿ ಹಲುಬಿ ಬಾಯಿನೊಂದು 2 ನೀತಿ ಹೇಳುತಾ ಪರರ ನಿಂದೆಗೆಯ್ಯುತಾ ಗುರುಮುಖದಲಿ ಪರಮತತ್ವ 3 ಮತ್ತನಾಗುತ ದುರಾಸಕ್ತನೆನಿಸುತ ನಿತ್ಯಕರ್ಮವನ್ನು ತೊರೆದು ಸತ್ಯಶಮದಮಗಳ ಮರೆದು ಚಿತ್ತದಲಿ ನಿರ್ಮಲನಾಗದೆ ಚಿಂತಿಸುತಲಿ ನಿಜದ ನೆಲೆಯ 4 ಗುರುರಾಮವಿಠಲನ ಶ್ರೀಚರಣಕಮಲ ಸ್ಮರಣೆಗೈದು ಹೊರಗು ಒಳಗು ಒಂದೆ ವಿಧದಿ ಚರಿಸಿ ಸೌಖ್ಯಪಡೆವ ಬಗೆಯ 5
--------------
ಗುರುರಾಮವಿಠಲ
ತ್ಯಜಿಸದಲೆ ಸಂಸಾರ ಭಜಿಸಬಹುದು ಪ ಅಜಭವಾದಿಗಳೆಲ್ಲ ತ್ಯಜಿಸಿ ಭಜಿಸುವರೇ ಅ.ಪ ಅರ್ಣವವ ಪೋಲುವ ಭವವನ್ನು ನೀಗಲು ವರ್ಣಾಶ್ರಮಗಳ ಧರ್ಮಗಳನರಿತು ಪೂರ್ಣ ಸುಖಜ್ಞಾನ ಪೊಂದಿದ ಹರಿಯ ಗುಣಗಳನು ನಿರ್ಣಯದ ಭಕುತಿಯಲಿ ವರ್ಣಿಸುವ ನರನು 1 ಜನ್ಮವನು ಕಳೆವುದಕೆ ತೀರ್ಮಾನ ಮಾಡಿ ದು ಷ್ಕರ್ಮಗಳ ತ್ಯಜಿಸಿ ಸತ್ಕರ್ಮಗಳನು ಮರ್ಮವರಿಯುತ ರಚಿಸಿ ಹೆಮ್ಮೆಯಿಂದಲಿ ತನ್ನ ಧರ್ಮದಲಿ ಸತಿಸುತರ ಭೋಗ ಉಣುವವರು2 ಅನ್ಯಾಯಗಳ ಬಿಟ್ಟು ಮಾನ್ಯರೆಂದೆನಿಸುತಲಿ ಘನ್ನ ಮಹಿಮನ ಸೇವೆಯೆಂದರಿಯುತ ಕನ್ಯಾದಿ ದಾನಗಳ ಮಾಡುತಲಿ ಮುದದಿಂದ ಚೆನ್ನಾಗಿ ಹರಿಯ ಪ್ರಸನ್ನತೆಯ ಪಡೆಯುವರು 3
--------------
ವಿದ್ಯಾಪ್ರಸನ್ನತೀರ್ಥರು