ಒಟ್ಟು 26 ಕಡೆಗಳಲ್ಲಿ , 16 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರ ಮಂತ್ರಾಲಯದೊಳು ಘನವಾಗಿ ನೆಲಸಿರ್ಪ ಪರಮ ಸದ್ಗುರುವರ್ಯ ಶ್ರೀ ರಾಘವೇಂದ್ರ ಪ ತವಕದಿಂ ದಿನದಿನವು ತೇಜವನು ಬೆಳಗುವೆ 1 ನರನಂತೆ ಮೆರೆಯುವ ಜಯಮುನಿಕೃತಶಾಸ್ತ್ರ ಪರಿಮಳವನು ನೀನು ಪಸರಿಸಿದೆಯಲ್ಲವೆ 2 ಮಧ್ವಮತವೆಂಬ ದುಗ್ಧಸಾಗರದೊಳು | ಉದ್ಭವಿಸಿದ ಪೂರ್ಣ ಹಿಮಕರ ತೇಜ 3 ಅಸುರನಂದನನಾಗಿ ನರಹರಿಯನೆ ಕಂಡ ಸಿರಿ ಗುರುರಾಘವೇಂದ್ರ 4 ರಾಜೇಶ ಹಯಮುಖ ಭಜಕರೊಳಗೆ ನೀನು ರಾಜಿಪ ಸುರತರುವಂತಿರ್ಪೆ ಗುರುವೆ 5
--------------
ವಿಶ್ವೇಂದ್ರತೀರ್ಥ
ಶರಣು ಶರಣು ಶರಣು ಶ್ರೀ ಗಣನಾಥ ಪಶರಣು ಶ್ರೀಶಾರದೆಯೆ ಶರಣು ವೆಂಕಟರಮಣ ಶರಣು ಸದ್ಗುರುವೆಅ.ಪಶರಣು ಮಾತೆಯ ಪಿತನೆ ಶರಣು 'ತಬೋಧಕನೆಶರಣು ಬುದ್ಧಿಪ್ರದನೆ ಶರಣು ಸುಖಕರನೆಶರಣು ವೇದಾಂತೋಪವೇಶನೆ ಪೋಷಕನೆಶರಣು ಚನ್ನಾಂಬೆ ಶ್ರೀ ನಾರಾಯಣಾರ್ಯ 1Àರಣು ನಾರಾಯಣಾರ್ಯ ಸದ್ಗುರುವರ್ಯಶರಣು ಶ್ರೀವಾಸುದೇವಾರ್ಯ ಸದ್ಗುರುವೆಶರಣು ಶ್ರೀ ಕೃಷ್ಣಯೋಗೀಂದ್ರ ಸದ್ಗುಣಸಾಂದ್ರಶರಣು ಶ್ರೀ ವೆಂಕಟದಾಸಾರ್ಯ ಗುರುವರ್ಯ 2ಶರಣು 'ಪ್ರೋತ್ತಮನೆ ಶರಣು ಪ'ತ್ರೆಯರೆಶರಣು ಹರಿಹರ ಭಕುತರೆ ಮಹಾತ್ತಮರೆಶರಣು ಶ್ರೀ ಚಿಕ್ಕನಾಗಪುರವಾಸ ವೆಂಕಟೇಶಶರಣು ಮರೆಹೊಕ್ಕೆ ನಿಮ್ಮ ನಾನು ತಿಮ್ಮದಾಸ 3ಸಂಕೀರ್ಣ ಕೃತಿಗಳು
--------------
ತಿಮ್ಮಪ್ಪದಾಸರು
ಸತ್ಯಧರ್ಮ ಸದ್ಗುರುವರ ರಕ್ಷಿಸು ಪ ಭೃತ್ಯ ನೀನಾಗೆಂದು ಕೃತ್ಯ ವಿಪರ್ಯಯ ವೆತ್ತಣಿಸದೆ ಕೃತಕೃತ್ಯನ ಮಾಡಿಂದು ಅ.ಪ ಸತ್ಯವರರ ವರ ಕುವರನೆ ನೀನತ್ಯುತ್ತಮ ಸುಖ ಚಿನ್ನ ಯತ್ಯಾಶ್ರಮ ಸದ್ಧರ್ಮಾಚರಣದಿ ನಿತ್ಯಾರ್ಜಿತ ರಾಮ ಭೃತ್ಯಜನಕೆ ಸದ್ಬುದ್ಧಿ ಬೋಧಿಸಿ ಕೃತಕೃತ್ಯರ ಮಾಡುತಲಿ ಸುನಾಮ ಯಥಾರ್ಥಪಡಿಸಿ ಕ್ಷಿತಿಗುತ್ತಮನೆಸಿದ 1 ಭದ್ರಾತೀರನೆ ಇತ್ತು ಸುಭದ್ರಗಳ್ ನಿದ್ರಾರಹಿತರಿಗೆ ಆದ್ರಾಂತಃಕರುಣನೆ ಸೌಹಾರ್ದದಿ ಭದ್ರಾರಮಣನಲಿ ಛಿದ್ರರಹಿತ ಶಿಲೆ ಮಧ್ಯದಿ ಪಡೆದು ಸುಭದ್ರಾಪತಿ ಸಖ ಮುದ್ರಾಧರನೆ 2 ಶ್ರೀ ನರಹರಿ ಪದ ನೀನನುದಿನದಲಿ ಧ್ಯಾನಮಾಡುತ ಬಾಹ್ಯ ಜ್ಞಾನವಿಲ್ಲದೆ ಅನುಮಾನ ವಿಪರ್ಯಯ ಹೀನಗೈಸಿ ಸಾಕ್ಷಿ ಮಾನದಿಂದ ಕೊಟ್ಯಾರ್ಭುದ ರವಿಪ್ರಭೆ ಕಾಣುತ ಪ್ರತಿಮುಖವೋಲ್ ಏನು ಇದಕೆ ಅನುಮಾನವಿಲ್ಲ ಹಂ ಮನಿಯವನೆನ್ನುವೆ ನೀ ಸರಿಲಿಂಗರೂಪಧರ3
--------------
ಪ್ರದ್ಯುಮ್ನತೀರ್ಥರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಶ್ರೀ ಬ್ರಹ್ಮಣ್ಯ ತೀರ್ಥ ಗುರುಗಳ ಸ್ತೋತ್ರ102ವರಗುರುವರ್ಯ ಶ್ರೀ ಬ್ರಹ್ಮಣ್ಯತೀರ್ಥರ |ಚರಣಕಮಲಕೆ ನಾಅನುದಿನನಮಿಪೆಪಪರಿಪರಿ ದುರಿತವ ತ್ವರಿತದಿ ತರಿದು ಶ್ರೀ |ಹರಿಮಧ್ವ ಚರಣಂಗಳಲಿ ಭಕ್ತಿ ಕೊಡುವಂತೆ ಅ ಪವರಮಧ್ವಮುನಿ ಹೃಸ್ಥ ನರಹರಿ ಶ್ರೀಕೃಷ್ಣ |ಕರಗಳ ಕಟಿಯಲಿಟ್ಟಿರುವ ವಿಠಲರಾಯ ||ವರವೇದವ್ಯಾಸ ವರಾಹನರ್ಚಕರಾದ |ವರಪುರುಷೋತ್ತಮ ಮುನಿಕರ ಕಮಲಜ1ವಿಪ್ರವೃದ್ಧರಿಗೆ ಇವರು ದಯವನ್ನು ಬೀರಿ |ಪುತ್ರ ಭಾಗ್ಯವನಿತ್ತು ಆ ವ್ಯಾಸ ಮುನಿಯನು ||ಸುಪ್ರಖ್ಯಾತರ ಮಾಡಿದಂಥ ಪ್ರಸಿದ್ಧರೀ - |ಸುಪ್ರಬುದ್ಧರ ಮಹಿಮೆಯು ಜ್ವಲಿಪುದು ಎಲ್ಲೂ 2ಪರಮದಯದಿ ಎನ್ನ ಕಷ್ಟದುರಿತ ಕೀಳ್ತು |ಪರಮಸದ್ಗುರುವರ್ಯರೆ ಪೊರೆಯಿರಿ ಎನ್ನ ||ಸರಸಿಜೋದ್ಭವತಾತ' ಪ್ರಸನ್ನ ಶ್ರೀನಿವಾಸ &ಡಿsquo;ವರಕಾಂತಿಯಿಂ ಪ್ರಜ್ವಲಿಸುತಿಹ ನಿಮ್ಮೊಳು3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವರದೇಂದ್ರರು93ರಥವಾನೇರಿದಾ ಯತಿಕುಲನಾಥಾ ಸದ್ಗುಣ ವಿಖ್ಯಾತಾ ಪವಿತತಸುಮಹಿಮಾ-ನತ- ಜನ-ತತಿ- ಕೃತxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸ್ತುತಿಗೆ ಒಲಿವ - ಯತಿ ವರದೇಂದ್ರಾ ಅ.ಪಪತಿತಾ ಪಾವನ ತಾನೆನಿಸುತ ಮೆರವಾ -ಅತಿಹಿತದಲಿ ಭಕುತರ ಕರಪಿಡಿವಾ -ನುತಿಸುವ ಜನ-ತತಿ- ಗತಿಹಿತದಲಿ ಸೂ-ಪಥವ ತೋರಿಸಿ ಸ -ದ್ಗತಿಯ ನೀಡುವೆನೆಂದು 1ದಶಮತಿಸಮಯಾಖ್ಯಾಭ್ಧಿಶಶಾಂಕಾ- ತಾನಿಹನಕಳಂಕವಸುಧೀಂದ್ರರಕರ- ಬಿಸಜೋದ್ಭವ ತಾವಸುಧಿಯನಾಳುವ - ಕುಸುಮದಳಾಂಬಕ 2ಧಾತಾಂಶರಿಂದಲಿ ತಾನುದ್ಭವಿಸೀ - ಸದ್ಗುರುವರನೆನಿಸಿಧೂತ - ಪಾಪಾತ್ಮಕನು ತಾನಾಗೀ - ಶ್ರೀಹರಿಗೆ ಬೇಕಾಗಿಪ್ರೀತಿಲಿ ಭಜಿಸುತ - ದೂತರ ಪೊರೆವಾ 3
--------------
ಗುರುಜಗನ್ನಾಥದಾಸರು