ಒಟ್ಟು 38 ಕಡೆಗಳಲ್ಲಿ , 17 ದಾಸರು , 36 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುನಿಯ ನೋಡಿರೊ ವಂದನಿಯ ಮಾಡಿರೊ ಕನಸಿನೊಳಗೆ ನೆನೆದ ವರವ ಕ್ಷಣದಲೀವ ಘನ ಸಮರ್ಥ ಪ ತೊಲಗದಿಪ್ಪ ಭೂತಪ್ರೇತ ನೆಲೆಯಾಗಿರಲು ಇವರ ಚರಣ ತೊಳೆದ ಜಲವು ಬೀಳಲಾಕ್ಷಣ ಹಲುಬಿಕೊಳುತಲಳಿದು ಪೋಗೋವು 1 ಹಿಂದೆ ವ್ಯಾಸ ಮುನಿಗಳಿಂದ ನೊಂದು ನಮಿತರಾಗಿ ಅವರಿಂದ ಭೇದವರಿತು ಗೋ ವಿಂದ ಒಡೆಯನೀತ 2 ಮೊದಲು ಹೇಮಕಶ್ಯಪಜನ ಬದಿಯಲಿದ್ದು ತತ್ವ ಜ್ಞಾನ ಮುದದಿ ತಿಳಿದು ಮಾಯಿ ಶಾಸ್ತ್ರ ವೊದೆದು ಕಳೆದ ನಿಜ ಸದಮಲ ಸಮರ್ಥ 3 ಮಧ್ವಮತಾಂಬುಧಿಯೊಳು ಪುಟ್ಟಿ ಅದ್ವೈತ ಮತವನೆಲ್ಲ ಸದದು ಸದ್ವೈಷ್ಣವರನ್ನ ಪಾಲಿಸಿ ಊಧ್ರ್ವ ಲೋಕದಲ್ಲಿ ಮೆರೆದ4 ವರಸತ್ಯಾಭಿನವತೀರ್ಥರ ಕರಕಂಜದಿಂದ ಜನಿಸಿ ವೇಲೂರ ಪುರಪಯೋನಿಧಿವಾಸ ಜಗದ ದೊರೆ ವಿಜಯವಿಠ್ಠಲನ್ನದಾಸ5
--------------
ವಿಜಯದಾಸ
ರಥವೇರಿ ಬರುತಿಹ ಗುರುರಾಯ ನಾ ನೋಡಮ್ಮಯ್ಯ ಪ ಅತಿಸದ್ಭಕುತಿಲಿ ಸ್ತುತಿಸುವರಿಗೆ ಸತ್ಪಥವನೆ ತೋರುವ ಕ್ಷಿತಿಪತಿದಾಸರೆ ಅ.ಪ ತಿದ್ದಿಹಚ್ಚಿದ ನಾಮ ಮುದ್ರೆಗಳಿಂದಲೋಪ್ಪುತಿಹರೇ ನೋಡಮ್ಮಯ್ಯ | ಕ್ಷುದ್ರರ ಮುಖಕೆ ಬೀಗ ಮುದ್ರೆಯ ನೊತ್ತುತ ಸದ್ವೈಷ್ಣವರ ನುದ್ಧರಿಸಿದ ಕರುಣೀ 1 ವರಶ್ರುತಿ ಸಮ್ಮತರಥ ನಿರ್ಮಿತವಾಗಿಹುದೇ ನೋಡಮ್ಮಯ್ಯ || ಸ್ಮರಪುರಹರ ಸಾರಧಿಯಾಗಿಹರೆಂದರಿತವರಿಗೆ ಶುಭಗರೆವ ದಯಾನಿಧೇ 2 ಶಾಮಸುಂದರನ ನಾಮಸುಧಾರಸವ ನೋಡಮ್ಮಯ್ಯ ಶ್ರೀಮಾನ್ ಮಾನವಿ ಕ್ಷೇತ್ರವೆ ತವನಿಜ ಧಾಮವೆಂದೆನಿಸಿ ಸುಸ್ತಂಭದೊಳಿಹರೇ 3
--------------
ಶಾಮಸುಂದರ ವಿಠಲ
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ವಾತನ್ನ ಜಯಾಜಾತನ್ನ ಲೋಕ- ಪ್ರೀತನ್ನ ಸ್ತುತಿಸಿ ಖ್ಯಾತನ್ನ ಪ ವಿಷವ ನುಂಗಿದ ಮಹಾಶೌರ್ಯನ್ನ ನಿತ್ಯ ಅಸಮ ಸುಂದರ ಮತಿಧಾರ್ಯನ್ನ ನಿಶಾಚರ ಕುಲದೋಷ ಸೂರ್ಯನ್ನ ಆರಾ ಧಿಸುವ ಭಕ್ತರ ಸುಕಾರ್ಯನ್ನ 1 ವಾನರ ಕುಲದೊಳು ಧೈರ್ಯನ್ನ ಮುದ್ದು ಆನನ ಗೀರ್ವಾಣವರ್ಯನ್ನ ಆನಂದ ವಿಜ್ಞಾನ ಚರ್ಯನ್ನ ದುಷ್ಟ - ದಾನವರಳಿದತಿ ವೀರ್ಯನ್ನ 2 ದ್ವಿಜರಾಜ ಕುಲಾಗ್ರಣಿ ಭೀಮನ್ನ ಮಹ ದ್ವಿಜಕೇತ ನಂಘ್ರಿಗೆ ಪ್ರೇಮನ್ನ ದ್ವಿಜರ ಪಾಲಿಸಿದ ನಿಸ್ಸೀಮನ್ನ ಕುರು ವ್ರಜವ ಸದೆದ ಸಾರ್ವಭೌಮನ್ನ 3 ಅದ್ವೈತ ಮತ ಕೋಲಾಹ ಲನ್ನ ವೇದ ಸಿದ್ಧಾಂತ ಶುಭಗುಣ ಶೀಲನ್ನ ಸದ್ವೈಷ್ಣವರನ್ನು ಪಾಲನ್ನ ಗುರು ಮಧ್ವಮುನಿ ಗುಣಲೋಲನ್ನ 4 ಚಾರುಚರಿತ ನಿರ್ದೋಷನ್ನ ಲೋಕ ಮೂರರೊಳಗೆ ಪ್ರಕಾಶನ್ನ ಧೀರ ವಿಜಯವಿಠ್ಠಲೇಶನ್ನ ಬಿಡದೆ ಆರಾಧಿಪ ಭಾರತೀಶನ್ನ 5
--------------
ವಿಜಯದಾಸ
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ಶೂರ್ಪಾಲಯ ಕ್ಷೇತ್ರದ ನರಹರಿ ಸ್ತೋತ್ರ (ಕೃಷ್ಣಾತೀರ) ನರಹರೀ ಪಾಹಿ | ಮರನೂರ ನರಹರೀ ಪ ಪರಿ ಭವಣೆಯ | ಪರಿಹರಿಸುತ ಮುನ್ನವರ ವೈರಾಗ್ಯವನಿತ್ತು | ಕರುಣೀಸೊ ಸಂಪನ್ನ ಅ.ಪ. ಸತಿ | ಕೃಷ್ಣೆಗಕ್ಷಯ ವಸನಸೃಷ್ಟಿಗಿತ್ತವ ಹರಿ | ಕೃಷ್ಣನೆ ಸಲಹೆನ್ನ 1 ಬುದ್ಧ | ಆಘಹರ ಕಲ್ಕಿಯೆ 2 ಜನಿತ ಸುಖ ಜಲ ಕಣ್ಣ | ಬಿಂದುಯುಗಳವು ಬೀಳೆ ಪಾವನ್ನ | ವೃಕ್ಷಯುಗಳೋದಯವಾಯ್ತು ಮುನ್ನ | ಆಹಅಗಣಿತ ಮಹಿಮ | ಅಶ್ವತ್ಥ ಸನ್ನಿಹಿತನೆನಿಗಮ ವೇದ್ಯನೆ ಸರ್ವ | ಜಗದೀಶ ಸಲಹೆನ್ನ 3 ಶೂಲಿಯಿಂದೊಡಗೂಡಿ ರಾಮ | ಚಂದ್ರಪಾಲಿಸುತಿಹ ಸಾರ್ವಭೌಮ | ಸುಜನಾಳಿ ಪಾಪಾರಣ್ಯ ಧೂಮ | ಕೇತುಓಲೈಪ ಜನರಘ ಭಸ್ಮ | ಆಹಲೀಲೆಯಿಂದಲಿ ಗೈವ | ಆಲಯವಿದು ಶೂರಪಾಲೀಯ ಕ್ಷೇತ್ರದಿ | ಶ್ರೀಲೋಲ ನರಹರಿ 4 ನಡು ನದಿಯೋಳು ಕೋಟೇಶ | ಮತ್ತೆಪಡುವಲಯದೋಳು ಕಂಕೇಶ | ಇನ್ನುಬಡಗ ನರಹರಿ ಬಳಿ ಬೈಲೇಶ | ಆಹರೊಡಗೂಡಿ ನೆಲಸೀಹ | ಕಡು ಮುದ್ದು ರೂಪದಿದೃಢ ಭಕ್ತನೆನಿಸೀಹ | ಮೃಡನಿಂದ ಪೂಜಿತ 5 ಅಜಪಿತ ಪದಜಳು ಎನಿಪ | ಮತ್ತೆಅಜಾಂಡ ಕಟಹದಿಂ ಬರ್ಪ | ಇನ್ನುಅಜಸುತ ಶಿರದಲಿ ಧರಿಪ | ಸಗರಜರ ಪಾಪವನ್ನು ಹರಿಪ | ಆಹಮಝಬಾಪು ಗಂಗೆಯ | ನಿಜ ಪಾಪ ಕಳೆಯಲುಅಜಸುತ ನಾಜ್ಞೆಯಿಂ | ಬಿಜಯಿಸಿದಳು ಇಲ್ಲಿ 6 ಪರರಘಗಳ ಹೊತ್ತು ಗಂಗೆ | ಬಂದುಹರ ಪೇಳಿದಂಥ ದ್ವಿಜಂಗೆ | ಶೂರ್ಪವರ ವಾಯು ನ್ವಿತ್ತಳವಂಗೆ | ಪಾಪಹೊರದೂಡಿದಳು ಮಂಗಳಾಂಗೆ | ಆಹಗುರುಕನ್ಯಾಗತನಾಗೆ | ಸರಿದ್ವರ ಕೃಷ್ಣೇಲಿಬೆರೆಯುತ ಸುರ ನದಿ | ಹರಿಪಳು ಜನರಘ 7 ಮಧ್ವಾರ್ಯ ಸಂತತಿ ಜಾತ | ಗುರುವಿದ್ಯಾಧೀಶರು ಇಲ್ಲಿ ಖ್ಯಾತ | ದ್ವಾದಶಬ್ದ ಪರಿಯಂತನುಷ್ಠಾತ | ಪ್ರಾಣಮುದ್ದು ಪ್ರತಿಮೆ ಪ್ರತಿಷ್ಠೀತ | ಆಹಶುದ್ಧ ದ್ವಾದಶಿ ದಿನ | ಸದ್ವೈಷ್ಣ್ವ ಲಕ್ಷರ್ಗೆವಿಧ್ಯುಕ್ತ ಭೋಜನ | ಶ್ರದ್ಧೆಯಿಂದಲಿ ಗೈದರ್ 8 ಪರ ತತ್ವವೆನಿಸಿ | ಸ್ತುತಿಸ್ಕಂದೋಕ್ತ ಮಹಿಮೆಯ ಸ್ಮರಿಸಿ | ಆಹಇಂದುಪ ಗುರು ಗೋ | ವಿಂದ ವಿಠಲನಹೊಂದಿ ಭಜಿಪರ್ಗ | ಬಂಧನವೆಲ್ಲಿಹದೋ 9
--------------
ಗುರುಗೋವಿಂದವಿಠಲರು
ಶ್ರೀ ಜಯತೀರ್ಥ ಸ್ತೋತ್ರ ಯತಿಕುಲಮುಕುಟ ಶ್ರೀ ಜಯತೀರ್ಥ ಸದ್ಗುಣಗಣ ಭರಿತ ಅತಿಸದ್ಭಕುತಿಲಿ ನುತಿಪಜನರ ಸಂ - ತತ ಪಾಲಿಸುತಲಿ ಪೃಥಿವಿಲಿ ಮೆರೆವ ಪ ಶ್ರೀ ಮಧ್ವಮತ ವಾರಿಧಿನಿಜಸೋಮ ಅಗಣಿತಸನ್ಮಹಿಮ ಆಮಹಾಭಕ್ತಾರ್ತಿಹ ನಿಷ್ಕಾಮ ಈ ಮಹಿಸುರರನು ಪ್ರೇಮದಿ ಪಾಲಿಪ ಕಾಮಿತ ಫಲದ 1 ಮಧ್ವಮುನಿಗಳಗ್ರಂಥಕೆ ವ್ಯಾಖ್ಯಾನ ರಚಿಸಿದ ಸುಙÁ್ಞನ ವಿದ್ಯಾರಣ್ಯನ ಸದ್ವಾದÀದಿ ನಿಧನ ಗೈಸಿದಗುಣಪೂರ್ಣ ಅದ್ವೈತಾಟವಿ ದಗ್ಧಕೃತಾನಲ ಸದ್ವೈಷ್ಣವ ಹೃತ್ಪದ್ಮಸುನಿಲಯ 2 ಲಲಿತಾ ಮಂಗಳವೇಡಿಪÀ ರಘುನಾಥ ವನಿತಾಸಂಜಾತ ಮಳಖೇಡ ಕಾಗಿನಿ ತೀರನಿವಾಸ ಮಾಡಿಹ ಮೌನೀಶನಲವರದೇಶ ವಿಠಲನ ವಲಿಮೆಯಲಿ ಇಳಿಯೊಳು ಬೋಧಿಪ ಅಲವ ಬೋಧಾಪ್ತ 3
--------------
ವರದೇಶವಿಠಲ
ಸತ್ಯ ಭಕ್ತೇಶ | ನತೋಸ್ಮ್ಯಹಂ | ಸತತಂ ಪ ಪ್ರತ್ಯುಹರರ್ಥಿತ ಸಜ್ಜನ ನಿವಹಂಸ್ತುತ್ಯ ಸದ್ವೈಷ್ಣವ ಸನ್ಮತ ಪ್ರಚುರಂ |ದೈತ್ಯಹರಂ | ಪೃಥೆ ಕುವರಂ || ಆರ್ತಿದ ಮಾಯ್ಮತ ಧ್ವಂಸಕರಂಪ್ರಾರ್ಥಿತ ಫಲ್ಗುಣ ರಥ ಸ್ಥಿತಂ | ಭೋ ಸುಮತಿ ಜ್ಞಂ ಅ.ಪ. ಭವ ಭಯ ನಿರ್ಗಮೋಪಾಯಂ |ಕರ್ಗಳು ಶೀರ್ಷ ಸಮಗ್ರೋಪಾಂಗ ನಿ |ರರ್ಗಳ ವ್ಯಾಪ್ತ ಶ್ರೀ ಹರಿ ರೂಪಂ ||ವಿತತ ಸಂದರ್ಶನ ಸಚ್ಚಿತ್ಸುಖಮಯ ದೇಹಂ | ನಮಾಮಿ ಧರ್ಮಂ 1 ಹಸ್ತಿ ಭವಾರ್ಣವ ಊರ್ಜಿತ ಸ್ವಜನಗರ್ಜನೆ ಮಿಶ್ರರ ಲಿಂಗಪಸರಣಂ |ಕಲಿವಪು ಹರಣಂ | ಭೋಪ್ರಥಮಾಂಗಂ 2 ರಜತ ಪೀಠ ಪುರವರ ದಾಸಂ |ಹೃತ್ಸರೋಜದೃತ ವೇದವ್ಯಾಸಂ |ತತ್ವ ? ವಿಚಾರೆ ಅಸದೃಶ ಮಹಿಮಂ |ಭಕ್ತಾಭಯ ಪ್ರದ ವಿತತ ತ್ರೈಭುವಂ |ಕರ್ಮೆಂದೀಂದ್ರಂ | ಮುಕ್ತ ಸುಸೇವ್ಯಂ ದೋಷ ರಹಿತ ಹರಿ ತೋಷಿತ ಹೃದಯಂ | ಸದ್ಗುಣಾರ್ಣವಂ |ವಿತತಾತಥ್ಯ ಸಚಾದ್ಧ ಜೈನ | ದುರ್ಮತನಿವಹ ವಿಧ್ವಂಸನ ಶೀಲಂ |ಆಸ್ತಿಕ ಹರಿಮತ ಸುಸ್ಥಿರ ಸ್ಥಾಪಿಸುವ್ಯಕ್ತ ಭಕ್ತ ಹೃತ್ಸರಸಿಜ ಪೀಠ ವಿನ್ಯಸ್ತ | ಸುರೂಪ |ಗುರು ಗೋವಿಂದ ವಿಠಲಜ | ಮಹಿಮಾ ಗಾಧಂ | ಸ್ತೋತ್ರಾ ಸೌಧ್ಯಂ 3
--------------
ಗುರುಗೋವಿಂದವಿಠಲರು
ಸಂಪ್ರದಾಯದ ಹಾಡುಗಳು ಕೋಲು ಹಾಡು ಆಕಾಶಕಭಿಮಾನಿ ಶ್ರೀಕಂಠ ವರಪುತ್ರಏಕದಂತನೆ ವಿಘ್ನೇಶ ಕೋಲೆಏಕದಂತನೆ ವಿಘ್ನೇಶ ನಿನ್ನ ಪದಏಕ ಚಿತ್ತದಲಿ ಬಲಗೊಂಬೆ ಕೋಲೆ 1 ನೆನೆಯಕ್ಕಿ ನೆನೆಗಡಲೆ ಗೊನೆಯ ಬಾಳೆಯ ಹಣ್ಣುಘನವಾದ ಚಿಗುಳಿ ತಂಬಿಟ್ಟು ಕೋಲೆಘನವಾದ ಚಿಗುಳಿ ತಂಬಿಟ್ಟು ತಂದೀವೆಗಣಪತಿ ಮತಿಯ ಕರುಣಿಸು ಕೋಲೆ 2 ಜಾಹ್ನವಿ ಜಾಹ್ನವಿ ಜನಕ ನಾರಾಯಣನಗಧರನ ಮುನ್ನ ಬಲಗೊಂಬೆ ಕೋಲೆ 3 ಮಚ್ಛ ಕೂರುಮ ವರಹ ನರಸಿಂಹ ವಾಮನಸ್ವಚ್ಛ ಭೃಗುರಾಮ ರಘುರಾಮ ಕೋಲೆಸ್ವಚ್ಛ ಭೃಗುರಾಮ ರಘುರಾಮ ಕೃಷ್ಣ ಬೌದ್ಧಅಚ್ಛ ಕಲ್ಕಿಯ ಬಲಗೊಂಬೆ ಕೋಲೆ 4 ಈಶ ಬ್ರಹ್ಮರಿಗೆ ನಿಯಾಮಕನಾಗಿದ್ದುಪೋಷಿಸುತಿಪ್ಪ ಪರಮಾತ್ಮ ಕೋಲೆಪೋಷಿಸುತಿಪ್ಪ ಪರಮಾತ್ಮನಾದ ಶ್ರೀಕೇಶವನ ಮೊದಲೆ ಬಲಗೊಂಬೆ ಕೋಲೆ 5 ನೀರಿಗಾಶ್ರಯನಾಗಿ ನೀರೊಳು ಮಲಗಿಪ್ಪನೀರಜ ನೇತ್ರ ನಿಗಮಾತ್ಮ ಕೋಲೆನೀರಜ ನೇತ್ರ ನಿಗಮಾತ್ಮನಾದ ಶ್ರೀನಾರಾಯಣನ್ನ ಬಲಗೊಂಬೆ ಕೋಲೆ 6 ಯಾದವ ಕುಲಜನೆ ಸಾಧುಗಳರಸನೆಮಾದೇವಿಗಾಶ್ರಯನಾಗಿಪ್ಪ ಕೋಲೆಮಾದೇವಿಗಾಶ್ರಯನಾಗಿ ಪಾಲಿಸುವಮಾಧವನ್ನ ಮೊದಲೆ ಬಲಗೊಂಬೆ ಕೋಲೆ 7 ಚಂದದಿಂದ ವೇದ ವೃಂದ ಪ್ರತಿಪಾದ್ಯನೆಇಂದಿರಾದೇವಿ ರಮಣನೆ ಕೋಲೆಇಂದಿರಾದೇವಿ ರಮಣನಾದ ಗೋ-ವಿಂದನ್ನ ಮೊದಲೆ ಬಲಗೊಂಬೆ ಕೋಲೆ 8 ಸೃಷ್ಟಿಯೊಳಗೆಲ್ಲ ವ್ಯಾಪ್ತನಾಗಿರುತಿಪ್ಪವೈಷ್ಣವಕುಲಕೆ ತಿಲಕನೆ ಕೋಲೆವೈಷ್ಣವ ಕುಲಕೆ ತಿಲಕನಾದ ಶ್ರೀವಿಷ್ಣುವಿನ ಮೊದಲೆ ಬಲಗೊಂಬೆ ಕೋಲೆ 9 ಅಧಮನಾಗಿದ್ದಂಥ ಅಸುರನ ಸಂಹರಿಸಿಮುದವ ಬೀರಿದನೆ ಸುರರಿಗೆ ಕೋಲೆಮುದವ ಬೀರುತ ಸುರರ ಪಾಲಿಸುವಂಥಮಧುಸೂದನನ್ನ ಬಲಗೊಂಬೆ ಕೋಲೆ 10 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕವ ಕೋಲೆಆಕ್ರಮಿಸಿ ತ್ರಿಲೋಕವನಳೆದ ತ್ರಿ-ವಿಕ್ರಮನ್ನ ಮೊದಲೆ ಬಲಗೊಂಬೆ ಕೋಲೆ 11 ಭೂಮಿಯೊಳಗೆ ಅತಿ ಸಂಭ್ರಮನಾಗಿದ್ದಕಾಮಿತಾರ್ಥಂಗಳ ಕರೆವನೆ ಕೋಲೆಕಾಮಿತಾರ್ಥಂಗಳ ಕರೆದು ಭಕ್ತರ ಪೊರೆವವಾಮನನ್ನ ಮೊದಲೆ ಬಲಗೊಂಬೆ ಕೋಲೆ 12 ವೇದಾಭಿಮಾನಿಗೆ ಸಾದರವಾಗಿಪ್ಪಬೌದ್ಧ ಮೂರುತಿಯೇ ಭವದೂರ ಕೋಲೆಬೌದ್ಧ ಮೂರುತಿಯೇ ಭವದೂರನಾದ ಶ್ರೀಶ್ರೀಧರನ್ನ ಮೊದಲೆ ಬಲಗೊಂಬೆ ಕೋಲೆ 13 ಸಾಕಾರ ಮೂರುತಿ ಸರ್ವೇಂದ್ರಿ ನಿಯಾಮಕನಾಕೇಶ ವಂದ್ಯ ನಳಿನಾಕ್ಷ ಕೋಲೆನಾಕೇಶ ವಂದ್ಯ ನಳಿನಾಕ್ಷನಾದ ಹೃಷಿ-ಕೇಶ ಹರಿಯ ಬಲಗೊಂಬೆ ಕೋಲೆ 14 ಪದುಮ ಸಂಭವ ಪಿತ ಪದುಮಿನಿ ವಲ್ಲಭಪದುಮ ಪೊಕ್ಕುಳಲಿ ಪಡೆದನೆ ಕೋಲೆಪದುಮ ಪೊಕ್ಕುಳಲ್ಲಿ ಪಡೆದು ಪಾಲಿಸುವಂಥಪದುಮನಾಭನ ಮುನ್ನ ಬಲಗೊಂಬೆ ಕೋಲೆ 15 ಕಾಮಿನಿ ಯಶೋದೆ ಒರಳಿಗೆ ಕಟ್ಟಲುಶ್ರೀ ಮನೋಹರ ಶೆಳೆದೊಯ್ದ ಕೋಲೆಶ್ರೀ ಮನೋಹರ ಶೆಳೆದು ಪಾಪವ ಕಳೆದದಾಮೋದರನ್ನ ಬಲಗೊಂಬೆ ಕೋಲೆ 16 ಕಿಂಕರರ ಚಿತ್ತ ದುರ್ವಿಷಯಕ್ಕೆರಗಲುಪಂಕಜನಾಭ ಶಳೆದನೆ ಕೋಲೆಪಂಕಜನಾಭ ಶಳೆದು ತನ್ನಲ್ಲಿಡುವಸಂಕರುಷಣನ್ನ ಬಲಗೊಂಬೆ ಕೋಲೆ 17 ಏಸು ಬ್ರಹ್ಮಾಂಡದೊಳು ವಾಸವಾಗಿರುತಿಪ್ಪದಾಸವರ್ಗವನೆ ಪೊರೆವನೆ ಕೋಲೆದಾಸ ವರ್ಗವನೆ ಪೊರೆವನೆ ನಮ್ಮ ಶ್ರೀವಾಸುದೇವನ್ನ ಬಲಗೊಂಬೆ ಕೋಲೆ 18 ಅದ್ವೈತ ಮಹಿಮನೆಸದ್ವೈಷ್ಣವರ ಪೊರೆವನೆ ಕೋಲೆಸದ್ವೈಷ್ಣವರ ಪೊರೆವನೆ ಅಜನಯ್ಯಪ್ರದ್ಯುಮ್ನ ಹರಿಯ ಬಲಗೊಂಬೆ ಕೋಲೆ 19 ಅನಿಮಿಷ ದೈತ್ಯರ ಮನಕೆ ಸಿಲುಕದಿಪ್ಪಸನಕಾದಿ ವಂದ್ಯ ಸಕಲೇಶ ಕೋಲೆಸನಕಾದಿ ವಂದ್ಯ ಸಕಲೇಶನಾಗಿಪ್ಪಅನಿರುದ್ಧ ಹರಿಯ ಬಲಗೊಂಬೆ ಕೋಲೆ 20 ಕ್ಷರಾಕ್ಷರದೊಳು ಪರಮೋತ್ತಮನಾದಕರಿರಾಜ ವರದ ಕವಿಗೇಯ ಕೋಲೆಕರಿರಾಜ ವರದ ಕವಿಗೇಯನಾದ ಶ್ರೀಪುರುಷೋತ್ತಮನ್ನ ಬಲಗೊಂಬೆ ಕೋಲೆ 21 ಅಕ್ಷಯ ಮೂರುತಿ ಮೋಕ್ಷದಾಯಕ ಸ್ವಾಮಿಕುಕ್ಷಿಯೋಳ್ ಜಗವ ರಕ್ಷಿಪ ಕೋಲೆಕುಕ್ಷಿಯೋಳ್ ಜಗವ ಪಾಲಿಪ ನಮ್ಮ ಅ-ದೋಕ್ಷಜ ಹರಿಯ ಬಲಗೊಂಬೆ ಕೋಲೆ 22 ಕ್ರೂರ ಖಳನುದರ ಸೀಳಿ ಪ್ರಹ್ಲಾದನಕಾರುಣ್ಯದಿಂದ ಕಾಯ್ದನ ಕೋಲೆಕಾರುಣ್ಯದಿಂದ ಕಾಯ್ದನ ನಮ್ಮ ಶ್ರೀನಾರಸಿಂಹನ್ನ ಬಲಗೊಂಬೆ ಕೋಲೆ 23 ಸಚ್ಚಿದಾನಂದನೆ ಸಕಲಗುಣ ಪರಿಪೂರ್ಣಮುಚುಕುಂದ ವರದ ಮುನಿನುತ ಕೋಲೆಮುಚುಕುಂದ ವರದ ಮುನಿನುತನಾದ ಶ್ರೀಅಚ್ಯುತನ ಮೊದಲೆ ಬಲಗೊಂಬೆ ಕೋಲೆ 24 ದುರ್ಧರ್ಷರಾಗಿದ್ದ ಖಳರ ಸಮುದಾಯವಮರ್ದನ ಮಾಡಿದ ಮಹಮಹಿಮ ಕೋಲೆಮರ್ದನ ಮಾಡಿದ ಮಹಮಹಿಮನಾದ ಜ-ನಾರ್ದನ್ನ ಮೊದಲೆ ಬಲಗೊಂಬೆ ಕೋಲೆ 25 ಇಂದ್ರಾನುಜನಾಗಿ ಸ್ವರ್ಗದೊಳಿರುತಿದ್ದುಸಾಂದ್ರ ಸುಖವೀವೆ ಸುರರಿಗೆ ಕೋಲೆಸಾಂದ್ರ ಸುಖವಿತ್ತು ಸುರರ ಪಾಲಿಸುವ ಉ-ಪೇಂದ್ರನ ಮೊದಲೆ ಬಲಗೊಂಬೆ ಕೋಲೆ 26 ಪರಮ ಭಕ್ತರ ಪಾಪ ಪರಿಹಾರವನೆ ಮಾಡಿಪರಮ ಪದವಿಯ ಪಾಲಿಪ ಕೋಲೆಪರಮ ಪದವಿಯ ಪಾಲಿಪ ನಮ್ಮ ಶ್ರೀ-ಹರಿಯ ಮೊದಲೆ ಬಲಗೊಂಬೆ ಕೋಲೆ 27 ಶಿಷ್ಟ ಪಾಲಕ ಉತ್ಕøಷ್ಟ ಜ್ಞಾನಾನಂದಕೃಷ್ಣೆಯ ಕಷ್ಟ ಬಿಡಿಸಿದ ಕೋಲೆಕೃಷ್ಣೆಯ ಕಷ್ಟ ಬಿಡಿಸಿದ ನಮ್ಮ ಶ್ರೀ-ಕೃಷ್ಣನ್ನ ಮೊದಲೆ ಬಲಗೊಂಬೆ ಕೋಲೆ 28 ಅನಿರುದ್ಧಾದಿ ರೂಪ ವಿಶ್ವಾದಿ ಅಜಿತಾದಿಸನತ್ಕುಮಾರಾದಿ ಅಜಾದಿ ಕೋಲೆಸನತ್ಕುಮಾರಾದಿ ಅಜಾದಿ ರೂಪನಾದಘನ ಮಹಿಮನ್ನ ಬಲಗೊಂಬೆ ಕೋಲೆ 29 ಹಯಗ್ರೀವ ದತ್ತ ಋಷಭ ಸಂಕರ್ಷಣಭಯರಹಿತ ಬಾದರಾಯಣ ಕೋಲೆಭಯರಹಿತ ಬಾದರಾಯಣ ಮಹಿದಾಸವಯಿಕುಂಠ ಹರಿಯ ಬಲಗೊಂಬೆ ಕೋಲೆ 30 ಆತ್ಮಾದಿ ವಾಸುದೇವಾದಿ ಮೂರುತಿಶ್ರೀ ತರುಣೇಶ ವಿಶ್ವೇಶ ಕೋಲೆಶ್ರೀ ತರುಣೇಶ ವಿಶ್ವೇಶ ರೂಪನಾದಜ್ಯೋತಿರ್ಮಯನ ಬಲಗೊಂಬೆ ಕೋಲೆ 31 ಮುನಿ ವೇದವ್ಯಾಸ ಸನತ್ಕುಮಾರ ಮೂರ್ತಿಮಿನಗುವ ದತ್ತಾತ್ರೇಯನೆ ಕೋಲೆಮಿನಗುವ ದತ್ತಾತ್ರೇಯ ಹಯಗ್ರೀವದನುಜಾಂತಕನ್ನ ಬಲಗೊಂಬೆ ಕೋಲೆ 32 ಕಂಗಳಾಪಾಂಗದಿಂ ಕಮಲಾಸನಾದಿಗಳಸಂಗಾತ ಸೃಷ್ಟಿಪ ಮಹಲಕ್ಷ್ಮೀ ಕೋಲೆಸಂಗಾತ ಸೃಷ್ಟಿಪ ಮಹಲಕ್ಷ್ಮೀ ನಿನ್ನ ಪಾ-ದಂಗಳಿಗೆರಗಿ ಬಲಗೊಂಬೆ ಕೋಲೆ 33 ಮಾಯಾ ಜಯಾಕೃತಿ ಶಾಂತಿ ಇಂದಿರಾದೇವಿಕಾಮನ ಜನನಿ ಜಯಂತಿ ಕೋಲೆಕಾಮನ ಜನನಿ ಜಯಂತಿ ಜಾನಕಿ ಸತ್ಯ-ಭಾಮಾ ರುಕ್ಮಿಣಿಯ ಬಲಗೊಂಬೆ ಕೋಲೆ 34 ಪರಮೇಷ್ಠಿ ಪರಮೇಷ್ಠಿ ನಿನ್ನ ಪದಪದುಮವ ಮುನ್ನ ಬಲಗೊಂಬೆ ಕೋಲೆ 35 ಹನುಮ ಭೀಮ ಮಧ್ವ ಮುನಿರಾಯ ಮಾರುತಿದನುಜಾರಿ ಭಕ್ತ ವಿರಕ್ತ ಕೋಲೆದನುಜಾರಿ ಭಕ್ತ ವಿರಕ್ತ ನಿನ್ನ ಪಾದವನಜವ ಮುನ್ನ ಬಲಗೊಂಬೆ ಕೋಲೆ 36 ವಾಣಿ ಅಜನ ಮುದ್ದು ರಾಣಿ ಪಲ್ಲವ ಪಾಣಿಜಾಣೆ ಕೊಡೆಮಗೆ ಮತಿಗಳ ಕೋಲೆಜಾಣೆ ಕೊಡೆಮಗೆ ಮತಿಗಳ ನಿನ್ನ ಪಾದರೇಣುವಿನ ಮುನ್ನ ಬಲಗೊಂಬೆ ಕೋಲೆ 37 ಭಾರತಿದೇವಿ ನಿನ್ನ ವಾರಿಜ ಚರಣವಬಾರಿ ಬಾರಿಗೆ ಭಜಿಸುವೆ ಕೋಲೆಬಾರಿ ಬಾರಿಗೆ ಭಜಿಸುವೆ ಎಮಗೆ ಶ್ರೀನಾರಾಯಣನಲ್ಲಿ ರತಿ ಕೊಡು ಕೋಲೆ 38 ಇಂದ್ರನ ಗೆದ್ದು ಸುಧೆ ತಂದು ಮಾತೆಯಬಂಧನ ಕಡಿದ ಬಲುಧೀರ ಕೋಲೆಬಂಧನ ಕಡಿದ ಬಲುಧೀರನಾದ ಖ-ಗೇಂದ್ರನ್ನ ಮುನ್ನ ಬಲಗೊಂಬೆ ಕೋಲೆ 39 ಸಾಸಿರ ಮುಖದಿಂದ ಶ್ರೀಶನ್ನ ತುತಿಸಿ ಶ್ರೀವಾಸುದೇವಂಗೆ ಹಾಸಿಕೆ ಕೋಲೆವಾಸುದೇವಂಗೆ ಹಾಸಿಕೆಯಾದ ಮಹ-ಶೇಷನ್ನ ಮುನ್ನ ಬಲಗೊಂಬೆ ಕೋಲೆ 40 ಅಪರಿಮಿತ ಕಾರ್ಯ ತ್ರಿಪುರ ದಹನನೆಚಪಲ ಮೂರುತಿ ಚಂದ್ರಚೂಡ ಕೋಲೆಚಪಲ ಮೂರುತಿ ಚಂದ್ರಚೂಡ ಭಜಕರಅಪಮೃತ್ಯು ಹರನ ಬಲಗೊಂಬೆ ಕೋಲೆ 41 ಖಗ ಶೇಷಶಂಭು ರಾಣಿಯರ ಬಲಗೊಂಬೆ ಕೋಲೆ 42 ಶಕ್ರ ಕಾಮಾದಿ ದೇವರ್ಕಳ ಚರಣಕ್ಕೆಅಕ್ಕರದಿಂದ ಅಭಿನಮಿಪೆ ಕೋಲೆಅಕ್ಕರದಿಂದ ಅಭಿನಮಿಸಿ ಪೇಳ್ವೆ ದೇ-ವಕ್ಕಿ ನಂದನನ ಚರಿತೆಯ ಕೋಲೆ 43 ಪದ್ಮನಾಭ ನರಹರಿತೀರ್ಥಶ್ರೀ ಮಾಧವಾರ್ಯ ಅಕ್ಷೋಭ್ಯ ಕೋಲೆಶ್ರೀ ಮಾಧವಾರ್ಯ ಅಕ್ಷೋಭ್ಯ ಜಯತೀರ್ಥಸ್ವಾಮಿಗಳ ಮೊದಲೆ ಬಲಗೊಂಬೆ ಕೋಲೆ 44 ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆನ್ಯಾಯ ಗ್ರಂಥಗಳ ರಚಿಸಿದ ಕೋಲೆನ್ಯಾಯ ಗ್ರಂಥಗಳ ರಚಿಸಿದ ನಮ್ಮ ವ್ಯಾಸ-ರಾಯರ ಮುನ್ನ ಬಲಗೊಂಬೆ ಕೋಲೆ 45 ಜನನಿ ಗರ್ಭದಿಂದವನಿ ಸ್ಪರ್ಶಿಸದೆಜನಿಸಿ ಬ್ರಹ್ಮಣ್ಯ ಮುನಿಗಳ ಕೋಲೆಜನಿಸಿ ಬ್ರಹ್ಮಣ್ಯ ಮುನಿಗಳ ಮೃದು ಹಸ್ತವನಜ ಸಂಭವನ ಬಲಗೊಂಬೆ ಕೋಲೆ 46 ಶ್ರೀಪಾದರಾಯರಲಿ ಸಕಲ ವಿದ್ಯವನೋದಿಶ್ರೀಪತಿ ಪ್ರೀತಿ ಪಡಿಸಿದ ಕೋಲೆಶ್ರೀಪತಿ ಪ್ರೀತಿ ಪಡಿಸಿದ ವ್ಯಾಸಮುನಿಭೂಪನ ಮೊದಲೆ ಬಲಗೊಂಬೆ ಕೋಲೆ 47 ದೇಶಾಧಿಪತಿಗೆ ಬಂದ ಕುಯೋಗವನೆ ನೂಕಿತಾ ಸಿಂಹಾಸನವೇರಿ ಮೆರೆದನೆ ಕೋಲೆತಾ ಸಿಂಹಾಸನವೇರಿ ಮೆರೆದನೆ ವ್ಯಾಸ ಮು-ನೀಶನ್ನ ಮೊದಲೆ ಬಲಗೊಂಬೆ ಕೋಲೆ 48 ದಂಡ ಕಮಂಡಲು ಧರ ಪಂಡಿತಾರಾಧಾರಕುಂಡಲಿಶಯನನ ಭಜಕರ ಕೋಲೆಕುಂಡಲಿ ಶಯನನ ಭಜಕ ರಾಘವೇಂದ್ರರಕೊಂಡಾಡಿ ಪದನ ಗುಣಿಸುವೆ ಕೋಲೆ 49 ತಂತ್ರ ಸಾರಗಳಿಗೆ ಅರ್ಥವನ್ನು ಸ್ವ-ತಂತ್ರದಿಂದಲಿ ರಚಿಸಿದ ಕೋಲೆ ಸ್ವ-ತಂತ್ರದಿಂದಲಿ ರಚಿಸಿದ ರಾಘವೇಂದ್ರರಪಂಥವಿದ್ದಲ್ಲಿ ಬಲಗೊಂಬೆ ಕೋಲೆ 50 ವೇದಶಾಸ್ತ್ರಾಮೃತ ಸಾರಬಲ್ಲ ರಾಮವೇದವ್ಯಾಸರ ಭಜಕರ ಕೋಲೆವೇದವ್ಯಾಸ ಭಜಕ ರಾಘವೇಂದ್ರರಪಾದವಿದ್ದಲ್ಲಿ ಬಲಗೊಂಬೆ ಕೋಲೆ 51 ತುಂಗಭದ್ರಾ ತೀರ ಮಂತ್ರಾಲಯದಲ್ಲಿಮಂಗಳ ಮಹಿಮರೆನಿಪರೆ ಕೋಲೆಮಂಗಳ ಮಹಿಮರೆನಿಪ ರಾಘವೇಂದ್ರ-ರಂಘ್ರಿ ಕಮಲವ ಬಲಗೊಂಬೆ ಕೋಲೆ 52 ಗುರು ರಾಘವೇಂದ್ರರ ಚರಣ ಪಂಕಜವನ್ನುಸ್ಥಿರ ಬುದ್ಧಿಯಿಂದ ಸ್ಮರಿಸುವೆ ಕೋಲೆಸ್ಥಿರ ಬುದ್ಧಿಯಿಂದ ಸ್ಮರಿಸಿ ನಾ ಪೇಳ್ವೆನುಸರಸಿಜಾಕ್ಷನ್ನ ಚರಿತೆಯ ಕೋಲೆ 53 ರಾಜರಾಜೇಶ್ವರ ಸತ್ಯಾಭಿನವ ತೀರ್ಥರಾಜಕರಾಬ್ಜ ಸಂಭೂತ ಕೋಲೆರಾಜಕರಾಬ್ಜ ಸಂಭೂತ ಸತ್ಯಾಧಿ-ರಾಜರ ಮೊದಲೆ ಬಲಗೊಂಬೆ ಕೋಲೆ 54 ಕ್ಷೀರನದಿಯ ತೀರ ವೇಲೂರ ಪುರವಾಸಸಾರ ಸಜ್ಜನರ ಪೊರೆವನೆ ಕೋಲೆಸಾರ ಸಜ್ಜನರ ಪೊರೆವ ಸತ್ಯಾಧಿರಾಜಧೀರ ಯತಿಗಳ ಬಲಗೊಂಬೆ ಕೋಲೆ 55 ಸತ್ಯಬೋಧರೆಂಬ ಸದ್ಗುರು ಚರಣವಚಿತ್ತದೊಳಿಟ್ಟು ಚರಿಸುವೆ ಕೋಲೆಚಿತ್ತದೊಳಿಟ್ಟು ಸ್ಮರಿಸಿ ನಾ ಪೇಳ್ವೆನುಚಿತ್ತದೊಲ್ಲಭನ ಚರಿತೆಯ ಕೋಲೆ 56 ಪುರಂದರ ರಾಯರಪರಮ ಕೃಪಾಪಾತ್ರ ವಿಜಯರಾಯ ಕೋಲೆಪರಮ ಕೃಪಾಪಾತ್ರ ವಿಜಯರಾಯರ ಪಾದಪರಮ ಭಕ್ತಿಯಲಿ ಸ್ಮರಿಸುವೆ ಕೋಲೆ 57 ದೇವ ನಾರಾಯಣ ಭೂದೇವಿ ಮೊರೆ ಕೇಳಿದೇವಕಿಯಲ್ಲಿ ಜನಿಸಿದ ಕೋಲೆದೇವಕಿಯಲ್ಲಿ ಜನಿಸಿ ಧಾರುಣಿದೇವಿ ಭಾರವನೆಲ್ಲನಿಳುಹಿದ ಕೋಲೆ 58 ಶಕಟ ಪೂತನಿ ವತ್ಸ ಬಕಧೇನುಕ ಕಂಸಮುಖಾದ್ಯರನ್ನು ಮಡುಹಿದ ಕೋಲೆಮುಖಾದ್ಯರನ್ನು ಮಡುಹಿ ವಸುದೇವ ದೇ-ವಕಿಯರ ಬಂಧನ ಬಿಡಿಸಿದ ಕೋಲೆ 59 ಹೆತ್ತ ತಾಯಿಯ ಮೊಲೆಯರ್ತಿಲಿ ನಲಿದುಂಡುಮತ್ತೆ ಬಾಲಲೀಲೆ ತೋರಿದ ಕೋಲೆಮತ್ತೆ ಬಾಲಲೀಲೆ ತೋರಿ ತೋಷವ ಪಡಿಸಿಮುತ್ಯಾಗೆ ಪಟ್ಟವ ಕಟ್ಟಿದ ಕೋಲೆ 60 ಜರೆಯ ಸುತನು ತಾನು ಜಗಳಕ್ಕೆ ಬಹನೆಂದುಕರೆಸಿದ ವಿಶ್ವಕರ್ಮನ್ನ ಕೋಲೆಕರೆಸಿದ ವಿಶ್ವಕರ್ಮನ್ನ ದ್ವಾರಕಪುರವ ನಿರ್ಮಿಸೆಂದಾಕ್ಷಣ ಕೋಲೆ 61 ದ್ವಾರಕಪುರದ ಶೃಂಗಾರ ವರ್ಣಿಸಲುಮೂರು ಕಣ್ಣವಗೆ ವಶವಲ್ಲ ಕೋಲೆಮೂರು ಕಣ್ಣವಗೆ ವಶವಲ್ಲ ನಾಲ್ಕಾರುಮೋರೆಯವರಿಗೆ ವಶವಲ್ಲ ಕೋಲೆ 62 ತಳಿರು ತೋರಣಗಳುಮೇರುವಿಗೆ ಪೊನ್ನ ಕಲಶವು ಕೋಲೆಮೇರುವಿಗೆ ಕಲಶ ಕನ್ನಡಿ ಮನೋ-ಹಾರವಾಗಿರುವುದು ಸಟೆಯಲ್ಲಿ ಕೋಲೆ 63 ಹದಿನಾರು ಸಾವಿರ ಚದುರೇರ ಮಂದಿರವುಮದನನಯ್ಯನ ಮನೆ ಮಧ್ಯ ಕೋಲೆಮದನನಯ್ಯನ ಮನೆ ಮಧ್ಯ ಪ್ರದೇಶಅದುಭುತವಾಗಿ ಬೆಳಗೋದು ಕೋಲೆ 64 ನಾರಿ ರುಕ್ಮಿಣಿ ಸತ್ಯಭಾಮೆದೇವಿ ಮತ್ತೆವಾರಿಜಮುಖಿಯರ್ ನಾಲ್ಕೆರಡು ಕೋಲೆವಾರಿಜಮುಖಿಯರ್ ನಾಲ್ಕೆರಡು ಸಹಿತಾಗಿವಾರಿಜನಾಭ ಕುಳಿತಿದ್ದ ಕೋಲೆ 65 ಶ್ರೀ ಭೂರಮಣನಾದ ಶ್ರೀಕೃಷ್ಣನರಮನೆಗೆಸುಭದ್ರೆ ಮುಯ್ಯ ತರುತಾಳೆ ಕೋಲೆಸುಭದ್ರೆ ಮುಯ್ಯ ತರುತಾಳೆ ಗಜಪುರಭೂ ಭುಜರೆಲ್ಲ ಬರುತಾರೆ ಕೋಲೆ 66 ಧರ್ಮ ಭೀಮಾರ್ಜುನ ನಕುಲ ಸಹದೇವರುಪೆರ್ಮೆಯಿಂದಲಿ ಪೊರವಂಟು ಕೋಲೆಪೆರ್ಮೆಯಿಂದಲಿ ಪೊರವಂಟು ದಿಕ್ಪಾಲರುಕೂರ್ಮೆಯಿಂದಲಿ ಬರತಾರೆ ಕೋಲೆ 67 ವಜ್ರ ಧರಿಸಿ ಉ-ಪೇಂದ್ರನರಮನೆಗೆ ಬರುತಾರೆ ಕೋಲೆ 68 ಸತಿ ಸ್ವಾಹಾದೇವಿಯ ಕೂಡಿಅತಿಶಯದಿಂ ಮೇಷವೇರುತ್ತ ಕೋಲೆಅತಿಶಯದಿಂ ಮೇಷವೇರಿ ಶಕ್ತಿಯ ಪಿಡಿದುಕ್ರ್ರತುಪತಿ ಮನೆಗೆ ಬರುತಾನೆ ಕೋಲೆ 69 ಯಮನು ಮಹಿಷವೇರಿ ಗಮನದಿಂದಲಿ ಸತಿಶಾಮಲಾದೇವಿ ಸಹಿತಲಿ ಕೋಲೆಶಾಮಲೆ ಸಹಿತ ದಂಡಾಯುಧ ಧರಿಸಿರಾಮನ ಮನೆಗೆ ಬರುತಾನೆ ಕೋಲೆ 70 ನಿರರುತಿ ತಾನೊಂದು ನರನ ಪೆಗಲನೇರಿಪರಮಾಪ್ತ ಸ್ತ್ರೀಯನೊಡಗೂಡಿ ಕೋಲೆಪರಮಾಪ್ತ ಸ್ತ್ರೀಯನೊಡನೆ ಕುಂತವ ಧರಿಸಿಧರಾಧರನ ಮನೆಗೆ ಬರುತಾನೆ ಕೋಲೆ 71 ವರುಣ ತಾನೊಂದು ಮಕರಿಯನೇರಿಕೊಂಡುಸಿರಿ ಭಾಗೀರಥಿಯನೊಡಗೊಂಡು ಕೋಲೆಸಿರಿ ಭಾಗೀರಥಿಯನೊಡನೆ ಪಾಶಧರಿಸಿಸಿರಿವತ್ಸನರಮನೆಗೆ ಬರುತಾನೆ ಕೋಲೆ 72 ಮರುತದೇವನೊಂದು ಎರಳೆಯನೇರಿತರುಣಿ ಪ್ರಾವಹಿಯೊಡಗೂಡಿ ಕೋಲೆ ತರುಣಿ ಪ್ರಾವಹಿಗೂಡಿ ಧ್ವಜ ಧರಿಸಿ ಶ್ರೀ-ಧರನ ಮನೆಗೇ ಬರುತಾನೆ ಕೋಲೆ 73 ವಿತ್ತಪತಿಯೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೂಡಿ ಕೋಲೆಚಿತ್ತದೊಲ್ಲಭೆಯ ಒಡನೆ ಖಡ್ಗ ಧರಿಸಿಕರ್ತನ್ನ ಮನೆಗೆ ಬರುತಾನೆ ಕೋಲೆ 74 ಈಶಾನ ತಾನೊಂದು ವೃಷಭವೇರಿಕೊಂಡುಶ್ರೀ ಸತಿದೇವಿಯೊಡಗೂಡಿ ಕೋಲೆಶ್ರೀ ಸತಿದೇವಿಯೊಡಗೂಡಿ ಶೂಲ ಧರಿಸಿ ನಾ-ರಸಿಂಹನ ಮನೆಗೆ ಬರುತಾನೆ ಕೋಲೆ 75 ಹರಿಯೇ ಸರ್ವೋತ್ತಮ ಹರಿಯೇ ಪರದೇವತೆಹರಿದಾಸರೆಂಬೋ ಬಿರುದಿನ ಕೋಲೆಹರಿದಾಸರೆಂಬೋ ಬಿರುದಿನ ಹೆಗ್ಗಾಳೆಹಿರಿ ಬಾಗಿಲೊಳು ಹಿಡಿಸಿಹರು ಕೋಲೆ 76 ಒಬ್ಬನೆ ವಿಷ್ಣುವಿನ್ನೊಬ್ಬ ದೈವಗಳಿಲ್ಲೆಂ-ದಬ್ಬರದಿಂದ ನಾಗಸ್ವರ ಕೋಲೆಅಬ್ಬರದಿಂದ ನಾಗಸ್ವರಂಗಳಹೆಬ್ಬಾಗಿಲೊಳಗೆ ನುಡಿಸೋರು ಕೋಲೆ 77 ಖಳನ ಬೆನ್ನ ಚರ್ಮ ಸುಲಿದು ಭೇರಿಗೆ ಹಾಕಿಅಲವ ಬೋಧರೆ ಜಗದ್ಗುರು ಕೋಲೆಅಲವ ಬೋಧರೆ ಜಗದ್ಗುರುಗಳೆಂತೆಂದುಛಲದಿಂದ ಭೇರಿಯ ಹೊಡಿಸೋರು ಕೋಲೆ 78 ವಿಷ್ಣು ಸರ್ವೋತ್ತಮ ವಿಷ್ಣು ಪರದೇವತೆವಿಷ್ಣುದಾಸರೆಂಬ ಬಿರುದಿನ ಕೋಲೆವಿಷ್ಣುದಾಸರೆಂಬ ಬಿರುದಿನ ಠೆಕ್ಕೆಯಘಟ್ಯಾಗಿ ಎತ್ತಿ ನಿಲಿಸೋರು ಕೋಲೆ 79 ಮತದೊಳು ಮಧ್ವಮತ ವ್ರತದೊಳು ಹರಿದಿನಕಥೆಯೊಳು ಭಾಗವತವೆನ್ನಿ ಕೋಲೆಕಥೆಯೊಳ್ ಭಾಗವತವೆನ್ನಿ ಇದರಂತೆಪ್ರತಿಮೆಯೊಳ್ ವಿಷ್ಣು ಪ್ರತಿಮೆನ್ನಿ ಕೋಲೆ 80 ಈಚಲ ಬನದೊಳು ಗೋ ಕ್ಷೀರ ಕುಡಿದಂತೆನೀಚರ ಸಂಗ ಸುಜನರು ಕೋಲೆನೀಚರ ಸಂಗ ಸುಜನರು ಮಾಡಲುಈಚೆ ನೋಡುವರಿಗೆ ಅನುಮಾನ ಕೋಲೆ 81 ಸೂರಿ ಜನರ ಸಂಗ ಸುಧೆಯ ಪ್ರಾಶನೆಯಂತೆಹೋರಣೆ ಗುಣವುಳ್ಳ ಅಧಮರ ಕೋಲೆಹೋರಣೆ ಗುಣವುಳ್ಳ ಅಧಮರ ಸಹವಾಸನೀರುಳ್ಳಿ ತಿಂದ ತೆರನಂತೆ ಕೋಲೆ 82 ಒಳ್ಳೆ ಮನುಜರ ಸಂಗ ಮಲ್ಲಿಗೆ ಮುಡಿದಂತೆಖುಲ್ಲ ಕುಮತಿಯ ಸಹವಾಸ ಕೋಲೆಖುಲ್ಲ ಕುಮತಿಯ ಸಹವಾಸ ಮಾಡಲುಮುಲ್ಲಂಗಿ ತಿಂದು ತೇಗಿದಂತೆ ಕೋಲೆ 83 ಭಾವಜ್ಞರ ಸಂಗ ಶ್ಯಾವಿಗಿ ಉಂಡಂತೆಭಾವವನರಿಯದ ಬಲುಹೀನ ಕೋಲೆಭಾವವನರಿಯದ ಬಲುಹೀನರ ಸಂಗಬೇವಿನಹಾಲ ಕುಡಿದಂತೆ ಕೋಲೆ 84 ಬಾಳುವರ ಸಂಗ ಹಾಲೋಗರುಂಡಂತೆಬಾಳುವೆಗೆಟ್ಟ ಅಧಮರ ಕೋಲೆಬಾಳುವೆಗೆಟ್ಟ ಅಧಮರ ಸಹವಾಸಹೇಳಬಾರದ್ದು ತಿಂದಂತೆ ಕೋಲೆ 85 ಹರಿಗುರು ದ್ರೋಹಿ ಮರಳಿ ಮಾತೃ ದ್ರೋಹಿವರ ವೈಷ್ಣವ ದ್ರೋಹಿ ಪಿತೃ ದ್ರೋಹಿ ಕೋಲೆವರ ವೈಷ್ಣವ ದ್ರೋಹಿ ಸ್ವಾಮಿ ದ್ರೋಹಿನೆರಳು ಬಿದ್ದವರ ನೆರೆಹೊಲ್ಲ ಕೋಲೆ 86 ಕತ್ತೆ ಕುದುರೆ ಒಂದೆ ಅತ್ತೆ ಸೊಸೆಯು ಒಂದೆಹೆತ್ತಮ್ಮ ಒಂದೆ ಹೆಂಡ್ತೊಂದೆ ಕೋಲೆಹೆತ್ತಮ್ಮ ಒಂದೆ ಹೆಂಡ್ತೊಂದಾದ ಮೇಲೆವ್ಯರ್ಥದ ಮದುವೆ ನಿನಗ್ಯಾಕೆ ಕೋಲೆ 87 ಅಕ್ಕ ತಂಗಿಯು ಒಂದೆ ಮಕ್ಕಳು ಸೊಸೆ ಒಂದೆಚಿಕ್ಕಮ್ಮ ಒಂದೆ ಹೆಂಡ್ತೊಂದೆ ಕೋಲೆಚಿಕ್ಕಮ್ಮ ಒಂದೆ ಹೆಂಡ್ತೊಂದಾದ ಮೇಲೆರೊಕ್ಕ ವೆಚ್ಚ ಮಾಡಿ ಮದುವ್ಯಾಕೆ ಕೋಲೆ 88 ಹಿಟ್ಟು ಬೂದಿ ಒಂದೆ ರೊಟ್ಟಿ ಮುಚ್ಚಳ ಒಂದೆಕಟ್ಟಿಗೆ ಒಂದೆ ಕಬ್ಬೊಂದೆ ಕೋಲೆಕಟ್ಟಿಗೆಯೊಂದೆ ಕಬ್ಬೊಂದಾದ ಮೇಲೆಕಟ್ಟಿಗೆ ಯಾಕೆ ಮೆಲುವೊಲ್ಲೆ ಕೋಲೆ 89 ಹಾಲು ಮಜ್ಜಿಗೆಯೊಂದೆ ಕೋಳಿ ಕೋಗಿಲೆಯೊಂದೆಮಾಳಿಗೆ ಒಂದೆ ಬಯಲೊಂದೆ ಕೋಲೆಮಾಳಿಗೆಯೊಂದೆ ಬಯಲು ಒಂದಾದರೆಹೇಳಬಾರದ್ದು ತಿನವಲ್ಯ ಕೋಲೆ 90 ಗಂಗೆಯ ತಡಿಯಲ್ಲಿ ಲಿಂಗವನರ್ಚಿಸಿಅಂಗೈಯಲಿಟ್ಟು ಪೂಜಿಸುವೆ ಕೋಲೆಅಂಗೈಯಲಿಟ್ಟು ಪೂಜಿಸುವೆ ಎಲೆ ಪಾಪಿಲಿಂಗನು ನೀನು ವಂದ್ಹ್ಯಾಗೆ ಕೋಲೆ 91 ಶಿವನು ನೀನಾದರೆ ಶಿವೆಯು ನಿನಗೇನುಅವಿವೇಕಿ ಮನುಜ ಈ ಮಾತು ಕೋಲೆಅವಿವೇಕಿ ಮನುಜ ಈ ಮಾತು ಕೇಳಿದರೆಕವಿಗಳು ನಗರೆ ಕೈ ಹೊಯ್ದು ಕೋಲೆ 92 ವೇದ ಪ್ರಾಮಾಣ್ಯಂದು ಸುಜನರಿಗೆಲ್ಲಬೋಧಿಸುತಿಪ್ಪ ಬೌದ್ಧನ ಕೋಲೆಬೋಧಿಸುತಿಪ್ಪ ಬೌದ್ಧನ ಎಳೆದೊಯ್ದುಕಾದೆಣ್ಣೆಯೊಳು ಕೆಡುಹೋರು ಕೋಲೆ 93 ಇಲ್ಲಿ ಮಾತ್ರ ಭೇದ ಅಲ್ಲಿಯೊಂದೆ ಎಂಬಕ್ಷುಲ್ಲಕರ ಹಿಡಿದು ಹಲ್ಮುರಿದು ಕೋಲೆಕ್ಷುಲ್ಲಕರ ಹಿಡಿದು ಹಲ್ಮುರಿದು ಯಮರಾಯಕಲ್ಲುಗಾಣಕ್ಕೆ ಹಾಕಿಸುವ ಕೋಲೆ 94 ಅಪ್ಪ ನಾರಾಯಣನಿಪ್ಪಂಥ ಅರಮನೆಅಪ್ರಾಕೃತದ ವೈಕುಂಠ ಕೋಲೆಅಪ್ರಾಕೃತದ ವೈಕುಂಠವೆಂಬೋದುಸ್ವ ಪ್ರಕಾಶದ ಪರಮಾತ್ಮ ಕೋಲೆ 95 ಸುತ್ತ ವಿರಜಾನದಿ ಮತ್ತೆ ಆನಂದ್ವನಚಿತ್ತಜನೈಯ್ಯನರಮನೆಗೆ ಕೋಲೆಚಿತ್ತಜನೈಯ್ಯನರಮನೆ ಎಂಬುದುಉತ್ತಮೋತ್ತಮ ವೈಕುಂಠ ಕೋಲೆ 96 ನೀಲ ವೈಢೂರ್ಯ ನಿಚ್ಚಳ ವಜ್ರಅಚ್ಚ ಮಾಣಿಕ್ಯದ ಅಳವಟ್ಟು ಕೋಲೆಅಚ್ಚ ಮಾಣಿಕ್ಯದ ಅಳವಟ್ಟು ಹರಿಪುರಅಚ್ಯುತನಿಪ್ಪ ಅರವನೆ ಕೋಲೆ 97 ಸಿರಿಯು ತಾ ಮುರಹರನ ಪಟ್ಟಣದಲ್ಲಿವಿರಜೆಯೆಂತೆಂದು ಕರೆಸೋಳು ಕೋಲೆವಿರಜೆಯೆಂತೆಂದು ಕರೆಸಿ ವೈಕುಂಠಕ್ಕೆಪರಿಖಾ ರೂಪದಲ್ಲಿ ಮೆರೆವಳು ಕೋಲೆ 98 ಉತ್ತರದಿ ನಾಲ್ಕು ತತ್ಥಳಿಸುವ ದ್ವಾರಮುತ್ತು ಮಾಣಿಕ್ಯ ನವರತ್ನ ಕೋಲೆಮುತ್ತು ಮಾಣಿಕ್ಯ ನವರತ್ನ ಝಲ್ಲಿಯಎತ್ತಿ ಮೇಲ್ಕಟ್ಟು ಬಿಗಿದಿದೆ ಕೋಲೆ 99 ಜಯ ವಿಜಯಾದ್ಯೆಂಟು ದ್ವಾರಪಾಲಕರುಜಯದೇವಿ ರಮಣನರಮನೆಗೆ ಕೋಲೆಜಯದೇವಿ ರಮಣನರಮನೆ ಬಾಗಿಲೊಳ್‍ಜಯ ಜಯವೆನುತ ನಿಂದಾರೆ ಕೋಲೆ 100 ಕಸವೆಲ್ಲ ಪರಿಮಳ ಕೆಸರೆಲ್ಲ ಶ್ರೀಗಂಧಬಿಸರುಹ ನೇತ್ರನ ಅರಮನೆ ಕೋಲೆಬಿಸರುಹ ನೇತ್ರನ ಅರಮನೆಯೊಳಗೆಲ್ಲಕುಸುಮದ ಮಳೆಯು ಗರೆವುದು ಕೋಲೆ 101 ಕಾಜಿನ ನೆಲೆಗಟ್ಟು ರಾಜ ಮಾಣಿಕ ಗೋಡೆಈ ಜಡ ದ್ರವ್ಯವಲ್ಲಿಲ್ಲ ಕೋಲೆಈ ಜಡ ದ್ರವ್ಯವಲ್ಲಿಲ್ಲ ಪುಸಿಯಲ್ಲಶ್ರೀ ಜನಾರ್ದನನರಮನೆಯೊಳ್ ಕೋಲೆ 102
--------------
ಮೋಹನದಾಸರು
ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಸೂರ್ಯ | ಕಾಯೊಯತಿ ಸತ್ಯ ಧ್ಯಾನಾಖ್ಯವರ್ಯಾ ಪ ಧೃತ - ಕ್ಷಿತಿಯೊಳಗೆ ದುರ್ಮತವ ಖಂಡಿಸಿ | ಅತಿಹಿತದಿ ದ್ವೈತವನೆ ಬೋಧಿಸಿವಿತತ ಹರಿ ಪರನೆಂದು ಸಾಧಿಸಿ | ಮತಿಯ ಮನುಜರ್ಗೊರೆದ ತಾಪಸಿ ಅ.ಪ. ಪಾದ ವನಜಾ |ಸಾಪರೋಕ್ಷೀಕೃತ ಯತಿಜ | ತೋರೊಸುಪಥ ಮುಕ್ತಿಗೆ ಹತ ದಿತಿಜ |ಶ್ರೀ ಪತಿಯ ಚರಣಾಬ್ಜ ಮಧುಪನೆ | ಕೋಪ ಸಲ್ಲದು ಕೃಪೆ ಪಯೋನಿಧಿಪಾಪ ರಹಿತನ ಮಾಡಿಯನ್ನನು | ಪ್ರಾಪಿಸೆನಗೆ ಜ್ಞಾನಖ್ಯ ಸೂರ್ಯನ 1 ಕಾಶಿ ರಾಮೇಶ್ವರ ಕುಂಭ | ಕೋಣದೇಶ ಯಾತ್ರೆಗಳ್ಮಾಡಿ ಡಿಂಬಾ |ಮೀಸಲೆನಿಸಿ ಜಯಸ್ತಂಭಾ | ಹೂಡಿಶ್ರೀಶ ಸರ್ವೋತ್ತಮನೆಂಬಾ ||ಭಾಷೆಯನು ಕೈಗೊಂಡು ಚರಿಸುತ | ಕೃಷಿಯ ಮಾಡಿದೆ ಹರಿಯ ಮತವನುತೋಷಿಸಿದೆ ಸದ್ವೈಷ್ಣ್ವವೃಂದವ | ವಿಶದ ವಿದ್ವತ್ಸಭೆಯ ನೆರೆಸೀ 2 ಚಿತ್ತ ವಿಡುತ ಲಯದಿ ಚಿಂತನಾ | ಸಾರಿಸತ್ಯ ಪಾಂಡುರಂಗ ವಿಠಲನಾ |ಹತ್ತಿರ ಕಿತ್ತೊಗೆದೆ ತನುವಿನ ವರಚೈತ್ರ ಶುಕ್ಲದಿ ಆರೆಡನೆ ದಿಣ |ಕ್ಷಾತ್ರ ತೇಜದಿ ಮೆರೆದೆ ಗುರುವರ | ಕ್ಷಿತಿಯೊಳಗೆ ಸುರಾರು ನಿಮಗೆವಿತತ ಗುರುಗೋವಿಂದ ವಿಠಲನ | ಚಿತ್ತದಲಿ ಸ್ಮರಿಸುತ್ತ ಪೊರಟ 3
--------------
ಗುರುಗೋವಿಂದವಿಠಲರು
ಸ್ಮರಿಸಿ ಬೇಡುವೆ ಗುರುವರರ ಪಾದ- ಸರಸಿಜ ಸ್ಮರಿಪರಘುಪರಿಹರಿಸುವರಪ ಇಂದಿರೇಶನ ಮಹಿಮೆ ಬಲ್ಲ ಭಕ್ತ ಸಂದಣಿಯೊಳು ಇವರಿಗೆ ಸಮರಿಲ್ಲ ತಂದೆ ವೆಂಕಟೇಶ ವಿಠ್ಠಲನೆಂದು ಸಂಭ್ರಮ ಪಡುವ ಶಿಷ್ಯರಿಗೆಣೆಯಿಲ್ಲ 1 ಸಿರಿವೆಂಕಟೇಶನ್ನ ಸ್ಮರಿಸಿ ಬಹು ಪರಿಯಿಂದ ಪಾಡಿ ಕೊಂಡಾಡಿ ಸ್ತುತಿಸಿ ಗಿರಿಯ ವೆಂಕಟನನ್ನು ಭಜಿಸಿ ನಮ್ಮ ಉರಗಾದ್ರಿವಾಸ ವಿಠ್ಠಲದಾಸರೆನಿಸಿ2 ಸದ್ವೈಷ್ಣವರ ಸುರಧೇನು ಸರ್ವ ರುದ್ಧಾರವಾಗಲು ಜನಿಸಿದರಿನ್ನು ಬುದ್ಧಿ ಶಿಷ್ಯರಿಗೊರೆದರಿನ್ನು ತಂದೆ ಮುದ್ದು ಮೋಹನ್ನ ವಿಠ್ಠಲದಾಸರನ್ನು 3 ಸುಂದರ ಮೂರ್ತಿಯ ತಂದು ದುರ್ಗ ಮಂದಿರದಲಿ ಸ್ಥಾಪಿಸಿದರೊ ಅಂದು ಛಂದದಿ ಸೇವಿಸಿರೆಂದು ಶಿಷ್ಯ ಮಂಡಲಿಗಳಿಗೆ ಬೋಧಿಸಿದರೆಂತೆಂದು 4 ಕಳವಳ ಪಡುತಿಹೆನಲ್ಲ ಕಾಲ ಕಳೆದು ಹೋಗುತಲಿದೆ ಅರಿವು ಬರಲಿಲ್ಲ ಪರಮ ಭಕ್ತರ ಪರಿಯನೆಲ್ಲ ತಿಳಿವಕಮಲನಾಭ ವಿಠ್ಠಲನಲ್ಲದಿಲ್ಲ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸು ಗುರು ಸಂತತಿಯನು ಮನವೇ ಪ ಪೊರೆವ ಹರಿ ಚತುರವಿಧ ಪುರುಷಾರ್ಥಗಳನಿತ್ತು ಅ.ಪ. ಪರಮಹಂಸಾಖ್ಯ ಹರಿ ಗುರುತಮನೆನಿಸುತಿಪ್ಪ ಪರಮೇಷ್ಠಿ ತತ್ಸುತರು ಸನಕಾದ್ಯರಾ ಕರಕಮಲ ಸಂಜಾತ ಕೂರ್ಮಾಸ ಜ್ಞಾನನಿಧಿ ಕೈವಲ್ಯ ಯತಿವರರ 1 ಜ್ಞಾನೇಶ ಪರತೀರ್ಥ ಸತ್ಯ ಪ್ರಜ್ಞ ಪ್ರಾಜ್ಞ ಸೂನು ಸುತಪೋರಾಜ ವರಕುಮಾರಾ ಅಚ್ಯುತ ಪ್ರೇಕ್ಷರಂಘ್ರಿಗಳ ಆ ನಮಿಪೆನನವರತ ಭಕ್ತಿ ಪೂರ್ವಕದೀ 2 ಅಚ್ಛಿನ್ನ ಭಕ್ತ ಮರುತವತಾರ ಮಧ್ವಮುನಿ ಪ್ರೋಚ್ಚಾಬ್ಜನಾಭ ನರಹರಿ ಮಾಧವಾ ಸಚ್ಚರಿತ ಅಕ್ಷೋಭ್ಯ ಮುನಿಪ ಪ್ರತಿವಾದಿ ಭೂ ತೋಚ್ಛಾಟನವಗೈದ ಜಯತೀರ್ಥ ಗುರುವರರ 3 ವಿದ್ಯಾಧಿರಾಜ ರಾಜೇಂದ್ರ ಸುತಪೋನಿಧಿ ಜ ಯಧ್ವಜರ ಪುರುಷೋತ್ತಮ ಬ್ರಹ್ಮಣ್ಯರಾ ಮಧ್ವ ಸಿದ್ಧಾಂತ ಸ್ಥಾಪಕ ವ್ಯಾಸರಾಯ ಪ್ರ ಸಿದ್ಧ ಶ್ರೀನಿವಾಸಯತಿಗಳ ಪವಿತ್ರ ಪದ 4 ಲಕ್ಷ್ಮೀ ಕಾಂತರನ ಶ್ರೀಪತಿ ರಾಮಚಂದ್ರರನ ಲಕ್ಷ್ಮೀ ವಲ್ಲಭ ಲಕ್ಷ್ಮೀ ನಾಥಪತಿಯಾ ಲಕ್ಷ್ಮೀ ನಾರಾಯಣರ ಶ್ರೀ ರಘುನಾಥ ಸು ಭಿಕ್ಷುಗಳ ಜಗನ್ನಾಥ ಗುರುಗಳನಾ 5 ಮೂರ್ತಿ ವಿ ಶ್ರೀನಾಥ ಗುರುವರರ ಕರಕಮಲಜಾತ ವಿ ದ್ಯಾನಾಥ ಯತಿಗಳನು ಅನುದಿನದಿ ಮರೆಯದಲೆ 6 ವಿಧ್ಯಾಧಿರಾಜರ ಕವೀಂದ್ರ ವಾಗೀಶರ ಸ್ವ ಸಿದ್ಧಾಂತ ಸ್ಥಾಪಿಸಿದ ರಾಮ ಚಂದ್ರಾ ಅದ್ವೈತ ಕುಮುದ ದಿನಪ ವಿಬುಧೇಂದ್ರಾರ್ಯ ಸದ್ವೈಷ್ಣವಾಗ್ರಣಿ ಜಿತಾಮಿತ್ರ ಮುನಿವರರ 7 ರಘುನಂದನ ಸುರೇಂದ್ರ ವಿಜಯೀಂದ್ರ ಸುಧೀಂದ್ರ ವಾರಿಧಿ ರಾಘವೇಂದ್ರಾರ್ಯರಾ ನಿಗಮಾರ್ಥ ಕೋವಿದ ಸುಯೋಗೀಂದ್ರ ಸೂರೀಂದ್ರ ಜಗತೀತಳದಿ ಪ್ರಸಿದ್ಧ ಸುಮತೀಂದ್ರರ 8 ಸಾಧುಜನಸನ್ನುತ ಉಪೇಂದ್ರರಾಯರ ವೇದ ವೇದಾಂಗ ಚತುರ ವಾದೀಂದ್ರ ಯತಿಯಾ ದ್ಯಾದಾನಾಸಕ್ತ ವರದೇಂದ್ರ ಯತಿವರರ 9 ರಾಮವೇದವ್ಯಾಸರಂಘ್ರಿ ಕಮಲಗಳ ಹೃ ತ್ತಾಮರಸದೊಳು ಪೂಜಿಸಿದ ಬಗೆಯನ್ನು ಧೀಮಂತರಿಗೆ ತಿಳಿಸಲೋಸುಗದಿ ನವರತ್ನ ಹೇಮ ಮಂಟಪ ವಿರಚಿಸಿದ ಭುವನೇಂದ್ರರಾ 10 ಪವಮಾನ ಮತ ಪ್ರವರ್ತಕರೊಳುತ್ತಮರೆನಿಪ ಭವ ಗೆದ್ದಾ ಸುಬೋಧ ಸುಜನೇಂದ್ರರಾ ಅವನಿತ ದೊಳಗೆ ಅಭ್ಯಧಿಕರನ ಮಾಡಿ ಸ ತ್ಕವಿಗಳನೆ ಸಂತೈಸಲೆಂದು ಸ್ಥಾಪಿಸಿದವರಾ 11 ಹರಿಯ ಸಂಸ್ಮರಣೆ ಅಹರ್ನಿಶಿಗಳಲಿ ಮಹ ವಿಪ ತ್ಪರಿಹಾರಗೈಸುವುದು ಗುರುಗಳ ಸ್ಮರಣೇ ಪರಮ ಸೌಖ್ಯವನೀವದಾದಾವ ಕಾಲದಲಿ ಪೊರೆವ ಜಗನ್ನಾಥ ವಿಠ್ಠಲವೊಲಿದು ನಿರುತಾ12 ನವ ವೃಂದಾವನ
--------------
ಜಗನ್ನಾಥದಾಸರು
ಹನುಮ - ಭೀಮ - ಮಧ್ವರು ಆದರ್ಶಕನೋ ಹರಿ ತನ್ನಾಧರಿಸಿದವರಿ ಗಾದರ್ಶಕನೋ ಹರಿ ಪ. ಈ ಧರೆಯೊಳು ತನ್ನಾಧರಿಸಿದ ಪಾದ ಸೇವಕ ಪಾಂಡವರಿಗೆ ಹರಿ ಅ.ಪ. ತನುಮನಧನ ನಿನದೆನೆ ಹರುಷಿಪ ಹನುಮನೇನಿತ್ತನೋ ಘನರಾಮ ರಾಘವಚಂದ್ರಗೆ ವನರುಹಲೋಚನ ಇನಕುಲಚಂದ್ರನ ತನ ಹೃದಯದಿ ದಿನ ನೆನೆದನಲ್ಲದೆ 1 ಕುರುಕುಲ ಧ್ವಂಸನು ಕುರುಹು ಕೃಷ್ಣನೇ ಎನೆ ಭೀಮ ನೆರೆದಾ ನೃಪ ನಿಸ್ಸೀಮನನ ಕರಿಬಲ ಸಮ ಕರುಣಿಸಿ ಭೀಮಗೆ ಕರೆದಾದರಿಶಿದ ರಣ ಅಧ್ವರದಲಿ ಹರಿ 2 ಮಧ್ವಾಂತರ್ಗತ ಮುದ್ದು ಶ್ರೀ ಶ್ರೀನಿವಾಸ ಇದ್ದ ಸ್ಥಳವು ಶುದ್ಧ ಎನುತ ಪೇಳಿ ಸದ್ವೈಷ್ಣವರ ಉದ್ಧರಿಸಲವರ ಹೃದ್ಗಮಲದಿ ಕೃಷ್ಣಾ ಇದ್ದಾನೆಂದು 3
--------------
ಸರಸ್ವತಿ ಬಾಯಿ
ಹನುಮ ಭೀಮ ಮಧ್ವಮುನಿಯೆ ರಕ್ಷಿಸೆನ್ನ ಅನುದಿನವು ಶ್ರೀ ಹರಿಯ ಸ್ಮರಣೆ ಮರೆಯದಂತೆ ಪ ತಂದೆ ತಾಯಿ ನೀನೆಂದು ನಂಬಿದೆನೊ ಬಂಧ ಬಿಡಿಸಿ ಕಾಯೋ ತಂದೆ ಹನುಮವೀರ 1 ದುರುಳ ದೈತ್ಯನಾದ ಜರೆಯ ಸುತನ ಸೀಳಿ ಕರುಣಿ ಕೃಷ್ಣನಂಘ್ರಿ ನಿರುತ ಭಜಿಪ ವೀರ 2 ಸದ್ವೈಷ್ಣವರನೆಲ್ಲ ಉದ್ಧರಿಸಿ ಜಗದಿಮುದ್ದು ಕಮಲನಾಭ ವಿಠ್ಠಲನಂಘ್ರಿ ಭಜಿಪ3
--------------
ನಿಡಗುರುಕಿ ಜೀವೂಬಾಯಿ