ಒಟ್ಟು 867 ಕಡೆಗಳಲ್ಲಿ , 74 ದಾಸರು , 688 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಭಕ್ತಿ ಎಂಬ ಸ್ತ್ರೀಯ ವರ್ಣನೆ) ಸೇರಿರೊ ನವ ನಾರಿಕುಂಜರನನ್ನು ಧೀರಲಕ್ಷ್ಮೀವರನು ಮಂಟಪವೇರಿ ಮುಂದಕೆ ಬರುವನು ಪ. ಶ್ರವಣ ಕೀರ್ತನ ಸ್ಮರಣ ಸೇವನ ಪೂಜ ಪ್ರ- ಣವ ದಾಸ್ಯ ಸಖತ್ವ ಸರ್ವವ ವಹಿಪ ನವವಿಧ ಭಕುತಿಯ1 ದೂರ ನಿಂತರೆ ತೋರದು ಸರಿಯಾಗಿ ಸಾರಗೈಯಲು ಸಾಧನೆಗಳಿಂದಾರು ಮೂರಾಗಿರುವುದು 2 ಜೋಲುವಾ ಸೊಂಡಿಲೆಂಬುದೆ ಸುಜ್ಞಾನ ಕಾಲುಗಳೆ ಪುರುಷಾರ್ಥವೆನಿಪವು ಬಾಲ ಸದ್ಗುಣಭಾವವು 3 ಭಕ್ತಿ ಭುಕ್ತಿಗಳೆರಡು ನೇತ್ರಗಳು ವಿ- ರಕ್ತಿಯುದರವು ವಿಷ್ಣು ಗಾಥಾಸಕ್ತಿ ಸಕಲೇಂದ್ರಿಯಗಳು 4 ನಿತ್ಯ ನಿರ್ಮಲ ಚರಿತ ಲಕ್ಷ್ಮೀಶನ ಭೃತ್ಯಪಾದ ರಜಸ್ಸಮೂಹವನೆತ್ತಿ ನಾಲ್ದೆಸೆ ಸುರಿವದು 5 ಹತ್ತಿರೆಂದಿಗು ಸೇರಲೀಯದು ದು- ದುರಿತ ಕೂಪದಿ ಒತ್ತಿ ಕೆಡುಹುವ ವಹಿಲವು 6 ಛಲಕೆ ಮೆಚ್ಚುತ ನಲಿವುದು ಮನದಲಿ ಚೆಲುವ ಶೇಷಗಿರೀಂದ್ರನಾಥನ ವಲಿಸಿ ಕೊಂಡಿಲ್ಲಿಳಿವುದು 7
--------------
ತುಪಾಕಿ ವೆಂಕಟರಮಣಾಚಾರ್ಯ
(ಭಾರತೀ ಪ್ರಾರ್ಥನೆ) ಭಕ್ತ ಚಿಂತಾಮಣಿ ಭರತನರಮಣಿ ಮುಕ್ತಿಸಾಧನ ವೀಣಾಪಾಣಿ ಕಲ್ಯಾಣಿ ಪ. ವಿದ್ಯಾಮಾನಿನಿ ವಿಭವನಿದಾನಿ ಸದ್ಯೋಜಾತಸುಪರ್ಣರ ಜನನಿ ಹೃದ್ಯವರುದ್ಧನಾದ್ಯ ವಿದ್ಯಾವಿದಾರಣಿ ನೀ- ನಿದ್ದುಮನದಿ ಶುದ್ಧ ಬುದ್ಧಿಯ ಕರುಣಿಸು 1 ನಾಲಿಗೆಯೊಳು ನಿನ್ನ ಲೀಲೆಯ ತೋರೆ ಪಾಲಕರನು ಕಾಣೆ ಪವನನೊಲಿವ ಜಾಣೆ ನೀಲ ಮೇಘ ನಿಭಾನನೆ ನವ ಪ್ರವೀಣೆ 2 ಅಸು ಗಣವೆಲ್ಲ ನಿನ್ನೊಶದೊಳಗಿಹವು ಅಸಮಸಾಹಸ ವಾಯು ವಶದಿ ನೀನಿರವು ಅಸುರಾರಿ ಶೇಷಾದ್ರಿವಶೀಯ ಮೋಹದ ಚಿಕ್ಕ ಸೊಸೆಯೆ ಸಕಲಜನ ವಶಕರಿ ವರದೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಸರಸ್ವತಿ) ಸುಂದರೆ ಸುಗುಣಮಂದಿರೆ ನಿನ್ನ ಚರಣ ಚಂದಿರೆ ನಂಬಿದ ಶರಣಗಮನ ಸಿಂಧುರೆ ಅರವಿಂದನಯನ ಗಂಭೀರೆಅದ್ಭುತ ಮಹಿಮ ಶಂಕರೆ ಸುರಸೋಮ ಸಂತವಹರೆ ಪಂಕಜಪಾಣಿಧಾರೆ ಜಪಮಣಿ ಪುಸ್ತಕವಿರೆ ವೀಣಾಯುತ ಸಾರೆ ಸಾರುತ ವದನದಿ ಬಾರೆ ಬಂದು ಕರುಣಾವ ಬೀರೆ ಬೀರುತ ಮೊಗ ತೋರೆತೋರುತ ತಂದೆವರದಗೋಪಾಲವಿಠಲನಯನಿಸೆರೆಂತರೆ 1 ಸದನ ಸರಳೆ ನಿನ್ನ ಕಾಣುವ ಶರಣಳೆ ಯಂದ್ಯನಿಸು ಮನಬಾಗಿ ಬೇಡುವೆ ಸಾಧನವಾಗುವಂತೆ ವೈರಿಗಳುಪಟಳವ ಬಿಡಿಸೆ ತಾಯಿ ನಿನ್ನ ಪಾವನ ಪದುಮ ಪಾದನುಗ್ರಹದಿಂದಜಲಧಿಯೊಳಗಿಪ್ಪ ಜೀವಿಗಳಂತೆ ತಂಪಿನೊಳಿಪ್ಪೆ ಮಂತ್ರವಾಹನನ ರಾಣಿರಂಗಾ ತಂದೆವರದಗೋಪಾಲವಿಠಲನ ಮಂತ್ರವ ಬೋಧಿಸೆ 2 ಸಾರಥಿ ಸತಿ ಶಚಿ ಶಾಮಲ ಮಿಕ್ಕಿದವರ ಪೊರೆದಂತೆ ಪೊರೆಯಬೇಕು ಪರಶುಧಾರಿ ತಂದೆವರದಗೋಪಾಲವಿಠಲನ ತೋರೇ 3 ನಖ ಶಿಖ ಪರ್ಯಂತಾನಿಲವೋ ಹೃತ್ಸರಸಿಜದೊಳಗೆ ಪೊಳದು ನರಹರಿ ರೂಪಧಾರಿ ತಂದೆವರದಗೋಪಾಲವಿಠಲನ ಪ್ರೀಯೆ 4 ಮಂಗಳಾಂಗಿ ಮಹಾ ತುಂಗ ಮಹಿಮ ತುರಂಗ ವದನ ಚತುರಂಗ ಧರನ ಸರ್ವಂತರಂಗದೊಳು ತಂತುಬಿಡದೆ ಮಹಂತನೊಡಗೂಡಿ ಶಿರಿಕಂಠನುತ ತಂದೆವರದಗೋಪಾಲವಿಠಲನ ಪಠಿಸುವಳೆ 5 ಪಾದ ಕಂಡಮ್ಯಾಲೆ ಪಾತಕವೆಲ್ಲಿಹದೆ ತಂದೆವರದಗೋಪಾಲವಿಠಲನ ದಯದಿಂದ 6
--------------
ತಂದೆವರದಗೋಪಾಲವಿಠಲರು
[ನಿನ್ನ ಭಕ್ತರಿಗೆ ಭವದ ದೋಷವಿಲ್ಲ ಸರ್ವ ಕರ್ತೃ ಸ್ವತಂತ್ರ ಹರಿಯೇ, ನೀನೆ ಪ್ರೇರಿಸಿ ಭಕ್ತರಿಂದ ಅಪರಾಧ ಮಾಡಿಸಿ ಹೊಣೆಗಾರರನ್ನು ಮಾಡಿ ದಣಿಸದಲೆ ಕ್ಷಮಿಸಿ ಚಿತ್ತದಲಿ ಪೊಳೆ ಎಂದು ಪ್ರಾರ್ಥನಾ.] ಧ್ರುವತಾಳ ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲವಿಪರೀತವೇನಯ್ಯ ಎನ್ನಂದಿಲಿಅಪರಿಮಿತ ಸ್ವಾತಂತ್ರವುಳ್ಳ ಕರ್ತುತ್ವದಿಂದಕೃಪಣರ ಬಾಧೆಗೆ ಯತನವೇನೋವಿಪುಳ ಐಶ್ವರ್ಯದಿಂದ ಸ್ವಾಮಿ ನೀನಾದರೂಸುಪಥ ನಡಿಯದಿಪ್ಪ ಕುಜನರನ್ನತಪುತ ದುಃಖದಲ್ಲಿ ನಿಯಾಮಿಸುವಿಯೆಂದುಅಪೌರುಷೇಯವಾದ ಶ್ರುತಿಯು ಪೇಳೆಖಪತಿ1ಯು ಬಾಧಿಪದಕೆ ಕಾರಣವೇನುಂಟುಉಪಗೂಢ2 ಕರುಣಿಯೇ ತಿಳುಹಬೇಕುಕ್ಲಿಪುತ ರಹಿತವಾದ ವಪುಗಳು ಬರಲೇಕೆಶಪಥ ಉಂಟು ನಿನ್ನ ಬಿಡೆನೆಂದೂಉಪರಿಯಿನ್ನು ಉಂಟು ಅಪರಾಧವೇನು ತಿಳಿಯೆನೃಪತಿ ಹೀನವಾದ ಸತಿಯನೊಲಸೆಉಪಮ ರಹಿತವಾದ ಸಥೆ ಮಾಳ್ಪ ತೆರದಂತೆಚಪಲನಾದರು ಇದನು ಪೋಗದೆಂದು ರಿಪು ಕುಲ ದಲ್ಲಣನಾದ ಪಿತನ ಭಯಕೃಪೆಗೆ ವಿಷಯನಾದ ಸುತರಿಗೆ ನೀನುಅಪಾರ ಗುಣನಿಧೆ ಇನಿತು ಮಾತೆ ಹೊರತುಕುಪಿತನಾಗುವದಕ್ಕೆ ಕೃತ್ಯವಿಲ್ಲಶಪಥ ರೂಪನೆ ನಿನ್ನ ಆಜ್ಞ ಪಾಲನೆ ಮುಖ್ಯಸಫಲವಲ್ಲದೆ ಮತ್ತೊಂದಧಿಕವಿಲ್ಲ ಅ-ನುಪಮ ಸಾಧನ ಇದೆ ಇದೆ ಸಿದ್ಧವೆಂದುವಿಪ ಅಹಿಪಾದ್ಯರು ಮಾಳ್ಪುದಾಗಿ ಸುಪವಿತ್ರವೆನಿಪ ಸತ್ವಬೋಧಿತನಾಗಿ ಹರಿಕ್ಷಿಪಣರ1 ವ್ಯಾಪಾರನಿಂದಾದಕ್ಕೆಸ್ವ ಪಕ್ಷದವರನ್ನು ವೊಹಿಸದಲೆ ಕಡಿಗೆ ಪ-ರ ಪಕ್ಷದವರೆಲ್ಲ ನುಡಿದ ನುಡಿಗೆ ಅಪಹಾಸ ಮಾಡಿದಿ ಅಭಿಮಾನವಿಲ್ಲದಲೆಆಪ್ತನೆಂಬೊ ಮಾತು ಉಳಿಸದಲೆತಪನವಾದ ಭವದಿ ತಂದು ಕ್ಲೇಶವ ಬಡಿಸಿಅಪಹೃತವಾದ ಜ್ಞಾನ ಮಾಡಿದೆನಗೆಉಪಕಾರವೇನು ನಿನ್ನ ಮಾತು ಕೇಳಿದದಕೆಈ ಪರಿ ಮಾಡದಿರು ನಂಬಿದವರತಪುತ ಸುವರ್ಣ ವರ್ಣ ಗುರು ವಿಜಯ ವಿಠ್ಠಲರೇಯಯಃ ಪ್ರಾಣದಾತಿ ಮದ್ಭಕ್ತನೆಂಬೋದು2 ಸತ್ಯ ಮಾಡು 1 ಮಟ್ಟ ತಾಳ ಪ್ರೌಢ ಕರ್ಮದಿ ನಿನ್ನ ಪ್ರೀತಿಯ ಎನಸಲ್ಲಕೀಡ ಕರ್ಮ3 ನರಕವೆಂದೆಂಬೋಸು ಅಲ್ಲಮಾಡು ಎಂದವರನ್ನು ಬಿಡುವರೆ ಮಹಾಪಾಪಬೇಡ ಎಂದದರನ್ನ ಮಾಡುವದೆ ದೋಷಈಡಿಲ್ಲವೋ ನಿನ್ನ ಮಹಿಮೆಗೆ ಏನೆಂಬೆ ರೂಢಿಗಾಗಿದೆ ನೋಡು ದ್ರೋಣನ ವಧೆಗಾಗಿ ನೀ-ನಾಡಿದ ಉಕುತಿಯನು ಗ್ರಹಿಸದ ಕಾರಣದಿ ನೋಡಿಸಿದಿ ನರಕ ದುಃಖವ ಧರ್ಮಜಗೆಗೂಢ ಬಲ್ಲವರಾರು ನಿನ್ನ ಪ್ರೀತಿಯು ಧರ್ಮಗಾಢ ಭಕುತರೆಲ್ಲ ಇದೆ ಮಾಡುವರಾಗಿಕ್ರೋಧ ಮೂರುತಿ ಗುರು ವಿಜಯ ವಿಠ್ಠಲರೇಯಆಡಿದ ವಚನಗಳು ಸಕಲ ಸಾಧನವೆನಗೆ 2 ತ್ರಿವಿಡಿತಾಳ ಅರಸು ತನ್ನ ನಿಜ ಪರಿಚಾರ ಜನರಿಗೆಸರಿ ಬಂದ ಕಾರ್ಯದಲಿ ನಿಲ್ಲಿಸಲುನರರಿಗುಂಟೇನಯ್ಯ ವಿಹಿತಾವಿಹಿತದ ಭಯಧರಣಿಪತಿಯ ಪ್ರೀತಿ ಒಂದೇ ಹೊರ್ತುಸರಸಿಜ ಹರಿಭವ ಸುರಪಾದಿ ನಿರ್ಜರರುಹರಿಯೆ ನಿನ್ನಾಜ್ಞವ ಪಾಲಿಪರೋಸರಸಿಜಾಂಡವನ್ನು ನಿಯಾಮಿಸಿ ಒಂದೊಂದುಪರಿಯ ವ್ಯಾಪಾರದಲ್ಲಿ ನಿಲ್ಲಿಸಲೂಪರಮಾಣುಗಳ ಸ್ಥೂಲ ಸೃಷ್ಟಿ ಸ್ಥಿತಿಯ ಮಾಡಿತರುವಾಯ ಲಯದಲ್ಲಿ ಅಭಿಮುಖರುಪರಮ ಭಯಂಕರವಾದ ಕಾರ್ಯಗಳಿಂದಕರುಣವಿಲ್ಲದಲೆ ಖಂಡ್ರಿಪರು ಈತೆರದಿ ಮಾಡುವರಿಗೆ ಪಾಪ ಪುಣ್ಯವೇನುಧೊರಿಯೆ ನಿನ್ನಯ ಪ್ರೀತಿ ಒಂದಲ್ಲದೆಮರಳೆ ಸಂದೇಹವಿಲ್ಲ ``ಭೀಷಾಸ್ಮಾದ್ವಾತಃ ಪವತಿ’’ವರಲುತಿವೆ ವೇದ ಅಂತವಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಾಶರಣರ್ಗೆ ಕರ್ಮಗಳ ಲೇಪ ಉಂಟೆ 3 ಅಟ್ಟತಾಳ ಸತಿ ಕರ್ಮ ಕೊರತೆ ಮಾಡೆಪಾತಿವ್ರತಕೆ ದೋಷಕೆ ಎಂದಿಗಾದರೂ ನೋಡಾಸ್ತೋತ್ರ ಮಾಡುವಾಗ ಶಬ್ದ ಡೊಂಕಾಗಲು ಪಾ-ರತ್ರಿಕವಾಗುವ ಪುಣ್ಯಕ್ಕೆ ದೋಷವೆಸೂತ್ರನಾಮಕ ನಿನ್ನ ಆಜ್ಞವ ನಡಿಸುವಭಕ್ತರಿಗೆ ಉಂಟೇನೊ ಭವದೋಷವನ್ನುಕ್ಷೇತ್ರ ಮೂರುತಿ ಗುರು ವಿಜಯ ವಿಠ್ಠಲರೇಯಾ ಧಾ-ರಿತ್ರಿಯೊಳಗೆ ನಿನ್ನವಗೆ ದೋಷವೇನೊ 4 ಆದಿತಾಳ ಒಂದಪರಾಧ ಉಂಟು ವಂದಿಪೆ ತಲೆಬಾಗಿಇಂದಿರೆ ಮೊದಲಾಗಿ ಶ್ವಾಸ ಬಿಡಿಸೊ ಶಕ್ತಿಎಂದಿಗೆ ಬಾರದು ನಿನ್ನ ಹೊರತಾಗಿ ಸಿಂಧುಜ1 ಮೊದಲಾದ ಸುರರಲ್ಲಿ ನೀನಿಂದುಚಂದ ಚಂದದ ಕಾರ್ಯ ಮಾಡಿಸಿ ಭಕ್ತರ್ಗೆಪೊಂದಿದ ಘನತೆಯು ನಿನ್ನದಲ್ಲದೆ ಅನ್ಯ-ರಿಂದಲಿ ಮಾಳ್ಪ ಕೃತ್ಯ ಎಳ್ಳಿನಿತಿಲ್ಲವೆಂದುಮಂದಮತಿಗನಾಗಿ ತಿಳಿಯದೆ ಅಹಂಕಾರಬಂದೊದಗಲು ಅದರನ್ನೆ ಅತ್ಯಭಿವೃದ್ಧಿ ಮಾಡಿತಂದು ಈ ಲೋಕದಿ ಬಂಧನ ಮಾಡಿಸಿದಿತಂದೆ ನಿನಗೆ ಇದು ಪರಮ ಸಮ್ಮತವಾಗೆ ಎ-ನ್ನಿಂದಾಗುವದೆ ಮೋಚನ ಮಾರ್ಗವಒಂದು ತೀರಿಸ ಬಂದು ಹನ್ನೊಂದು ಗಳಿಸಿಕೊಟ್ಟಿಬಂಧು ಅನಿಮಿತ್ಯನಾದದ್ದು ನಿಜವಿತ್ತೆಕುಂದುಗಳೆಣಿಸದೆ ಪಾಲಿಪದೆನ್ನನುಮಂದರಧರ ಗುರು ವಿಜಯ ವಿಠ್ಠಲರೇಯಾಇಂದು ಎಂದೆಂದಿಗೆ ನೀನೆವೆ ಗತಿಯೊ 5 ಜತೆ ಭಕತರ ಅಪರಾಧವೆಣಿಸದಲೆ ತ್ವರಿತದಿ ಚಿತ್ತಮುಕುರದಲಿ ಪೊಳೆಯೊ ಗುರು ವಿಜಯ ವಿಠ್ಠಲರೇಯಾ || [ವಿಷನಾಮ ಸಂ|| ಮಾರ್ಗಶೀರ್ಷ ಶುದ್ದ 8]
--------------
ಗುರುವಿಜಯವಿಠ್ಠಲರು
* ಶ್ರೀ ಪರಾತ್ಪರವಿಠಲ ಪಾಲಿಸಿವರ ಪ ಚರಾಚರಾತ್ಮಕದೇವ ಪರಮ ಪ್ರೀತಿಯಿಂದ ಅ.ಪ. ಮೂರ್ತಿ ಭಾಗವತ ಪ್ರಧಾನ ಸಾಗರೋಪಮ ಭಕ್ತಿ ಪ್ರದದೇವ ಬಾಗಿ ಬೇಡುವೆ ವಿಜ್ಞಾನರೂಪದಿ ನಿನ್ನ 1 ಭಾಗವತೋತ್ತಮರ ಪದ್ಧತಿಯಲಿ ಗುಪ್ತಸಾಧನ ಪಾಲಿಸು ಶುಕಾನುಬಂಧದಿ ಶುಕಪ್ರೇಮ ಪಾತ್ರನಾಗಿ ಸುಖಮಯನ ಭಜಿಸುತಿರಲಿ 2 ಆಪ್ತತಮ ಗುಣಸಮುದ್ರ ಶ್ರೀಜಯೇಶ- ವಿಠಲ ಪೂರ್ಣ ಪ್ರೀತಿಯಲಿ ನಿತ್ಯ ಭಾಗವತರ ಸಂಗದಲಿಟ್ಟು ನಿರುಪಮ ಸುಖನೀಡು 3 ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲಶೀಲಗಳನ್ನು ಎಂದೊ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆನೆಲವಿತ್ತ ದಯವಂತ ಶ್ರೀಕಾಂತ 3
--------------
ಜಯೇಶವಿಠಲ
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
ಅಂಕಿತನಾಮ ಪದಗಳು ಅಚ್ಯುತಾನಂತವಿಠಲ | ಸಲಹ ಬೇಕಿವನಾ ಪ ಸ್ವಚ್ಛಶಪಥದಿ ಹರಿಯ | ನಾಮ ನಂಬಿಹನಾ ಅ.ಪ. ಜೀವಕಾರಣವೆನೆ | ಆವನ ವಿದ್ಯಾಪಟಲಓವಿಕಡಿಯಲು ಸಾಧ್ಯ | ನಾಮ ಸಾಧನದೀಈ ವಿಧದ ಸಂಪ್ರಜ್ಞೆ | ಭಾವ ಉಳ್ಳವನೀತತೀವರದಿ ಕೈಪಿಡಿದು | ಕಾಯೋ ಕೃಪ ಸಾಂದ್ರ 1 ಗುರು ಭಕ್ತಿಯುಳ್ಳವನು | ಸುಜ್ಞಾನಕಾಂಕ್ಷಿತನುಇರುವನೀತನು ಎಂದು | ವರ ಸು ಉಪದೇಶಹರಿಯ ನಾನಿತ್ತಿಹೆನು | ಸ್ವಪ್ನ ಸೂಚೀಯಂತೆಕರುಣದಿಂ ನಿಜತೋರೊ | ಮರುತಂತಾರಾತ್ಮ 2 ಹರಿ ನಾಮ ವೆಂಬಂಥ | ವಜ್ರಾಂಗಿ ತೊಡಿಸಿವಗೆದುರಿತರಾಶಿಗಳಳಿದು | ಪೊರೆಯ ಬೇಕಿವನಾಸುರು ಭೂರಹವು ಆಗಿ | ಪರಿಪರಿಯ ವರಗಳನುಗೆರೆಯುತ್ತ ಹರ್ಷವನೆ | ಸುರಿಸೊ ಶ್ರೀಹರಿಯೇ 3 ಸತ್ಸಂಗವನೆ ಕೊಟ್ಟು | ದುಸ್ಸಂಗವನೆ ಕಳೆಯೊಮತ್ಸಕೇತನ ಜನಕ | ಸಚ್ಚಿದಾನಂದಾತ್ಮಾವತ್ಸಾರಿ ಕೃಷ್ಣ ಗೋ | ವತ್ಸ ದನಿಗಾವು ಬಹುಉತ್ಸವದಿ ಬರುವಂತೆ | ನೀನೆ ಪೊರೆ ಇವನಾ4 ಭಾವಜ್ಞ ನೀನಿರುವೆ | ಪೇಳ್ವದೇನಿಹುದೆನಗೆದೇವ ದೇವೇಶನೆ | ಹರಿ ಸಾರ್ವಭೌಮಗೋವರ್ಧನೊದ್ಧಾರನೆ | ಗೋವಿಂದ ಪತಿಯೆ ಗುರುಗೋವಿಂದ ವಿಠಲ ಮದ್ | ಭಿನ್ನಪವ ಸಲಿಸೊ 5
--------------
ಗುರುಗೋವಿಂದವಿಠಲರು
ಅಕ್ರೂರ ವರದ ವಿಠಲ | ಕಾಪಾಡೊ ಇವಳಾ ಪ ಶ್ರೀಕೃಷ್ಣ ನಿನದಾಸ್ಯ ಚೊಕ್ಕ ಪಾಲಿಸುತಾ ಅ.ಪ. ವಿನಯಾದಿ ಗುಣ ಭರಿತೆ ಜನನಿ ಜನಕರಪ್ರೀತೆಮನೊ ಮೈಲಿ ಕಳೆಯುತಲಿ ಮನೊಮಾನಿ ಒಡೆಯಾ ಗುಣ ಉಳ್ಳವಳ ಮಾಡಿ | ಜಾಣ್ಮೆಯಲಿ ಸಂಸಾರಅನುಸರಿಸುವಂತೆಸಗೊ | ಅನಿಲಾಂತರಾತ್ಮಾ 1 ಭಕುತರಾ ಸುರಧೇನು | ಭಕುತಿ ಜ್ಞಾನವನಿತ್ತುಮುಕುತಿ ಪಂಥದಿ ಹಾದಿ | ಯುಕುತಳೆನಿಸೋಕಕುಲಾತಿಯನೆ ಕಳೆದೂ | ಶಕುತಿ ಇದ್ದುದ ತಿಳಿಸಿಸುಕರ ಸತ್ಸಾಧನವ | ಪ್ರಕಟವನೆ ಮಾಡೋ 2 ಪತಿಸುತರು ಹಿರಿಯರಾ | ಸತ್ಸೇವೆ ಕೈಕೊಂಡುಅತುಳ ಹರಿ ಆವರಲ್ಲಿ | ಸ್ಥಿತನೆಂದು ತಿಳಿದೂಹಿತದಿಂದ ಸೇವಿಸಲು | ಗತಿಯ ಆಹುದೆಂದೆಂಬಮತಿಯನೇ | ಕರುಣಿಸುತ | ಕೃತ ಕೃತ್ಯಳೆನಿಸೋ 3 ಕಷ್ಠ ನಿಷ್ಠುರಗಳಲಿ | ಇಷ್ಟಸಂತುಷ್ಠಿಯಲಿದೃಷ್ಟಿ ಸಮತೆಯ ಕೊಟ್ಟು | ಕಾಪಾಡೊ ಹರಿಯೇಸೃಷ್ಠಿ ಕರ್ತನು ಹರಿಯು | ಶ್ರೇಷ್ಠ ದೇವತೆಯೆಂಬ ಸ್ಪಷ್ಟಮತಿ ಕರುಣಿಸುತ | ಪ್ರೇಕ್ಷ ನೀನಾಗೋ 4 ಗಾಮಲ್ಗಣಿ ವರದ | ನೀವೊಲಿಯದಿನ್ನಿಲ್ಲಭಾವದಲಿ ಮೈದೋರಿ | ಭವದ ಸುತ್ತರಿಸೋಈ ವಿಧದ ಭಿನ್ನಪವ | ನೀ ವೊಲಿದು ಸಲಿಸೋದುದೇವ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅಚ್ಯುತನ ಧ್ಯಾನದೊಳಿರಿ ಅನುದಿನದಿ ಪ ಗುಚ್ಚರಿಸುವೆ ಕಲಿಯ ತುಚ್ಛ ದುರ್ಗುಣಗಳ ಅ.ಪ ನಿತ್ಯ ಕರ್ಮಕೆ ಕ್ಷುಧೆಯು ತಾ ಬಾಧಿಸುತಿಹುದು 1 ವೊಲಿದಂತೆ ನಡೆದು ನಿಜ ಸುಖದಾಸೆಯಿಲ್ಲ 2 ಸಾರ ವರಿತ ಮಹಾತ್ಮರ ಸಂಸರ್ಗವಿಲ್ಲ 3 ನೀತಿ ಪೇಳ್ವರಿಗೆ ಘಾತಕವೆಣಿಸುವುದು 4 ಪರ ಗತಿಯ ಸಾಧನೆಗಳೀ ಕಾಲದೊಳಿಲ್ಲ 5 ಸಾರ ನರಿಯದವನೆ ಪಿತೃಗಳಿಗೆ ವಿರೋಧ 6 ದ್ಗುರುವನ್ನು ಸೇರಿದಡವನೆ ನಿರ್ದೋಷ 7 ಕೃತ್ಯದಿ ನಡೆಯಲವಗಹುದು ಇಷ್ಟಾರ್ಥ 8 ಶ್ರೀ ಗುರುದೇವ ಸದಾನಂದಮಯನು 9
--------------
ಸದಾನಂದರು
ಅಂಜದಾಕ್ಷಣ ಕಂಜನೇತ್ರನೆ ಸಂಜೀವಿನಿಯಾ ತಂದು ನೀಡಿದಾ ಪ ಪಸುಳನೈಯಾ ವಪುವೆಸೆವ ರಾಯ ಅಸುರವರ್ಗದಸುವ ಮಿಸುಕದಾಕ್ಷಣ ಹಿಸುಕಿ ಬಿಡುತಿಹ 1 ಭೀಮಸೇನಾ ಭಕ್ತಕಾಮಪೂರ್ಣಾ ಕಾಮಕೀಚಕಾ ಬಾರ ಪಾಮರರಿದಾ ನಾಕ ನಾನು ಮೆರೆದಾ 2 ಶಕ್ತಿಸಾರಾ ಭಕ್ತ ವಿರಕ್ತಿ ಪೂರಾ ಭಕ್ತವೃಂದಕೆ ಮುಕ್ತಿಪಥ ಮಹಾಪೂರಾ ಯುಕ್ತಿಯಿಂದಾ ವ್ಯಕ್ತಪಡಿಸಿದಾ ಅವ್ಯಕ್ತರೂಪಾ 3 ಕ್ಲೇಶದೂರಾ ಪ್ರಾಣೇಶ ವಾರಾ ಗಂಭೀರಾ ದಾಸಜನ ನುಡಿಯಾ ಗುಣದೋಷ ಹರಣಾ ಅಣಿಮಾ ವಾಸನ ರಹಿತಾ ಗುಣಗಣಗಡಣಾ ಗರಿಮಾ 4 ದಿಟ್ಟ ರಾಮಾದಕಾ ಹೃದಯ ಪ್ರೇಮ ಮಧುರಾ ವಿಠಲನರಸಿಂಹಾ ಎದೆಯಾರವಿಂದ ನಯನಾ ದಿಟ್ಟನಿಟ್ಟಿಗೇ ಸಾಧನೆಯ ಸಾರುವಂಥಾ ಧೀರಾ 5
--------------
ನರಸಿಂಹವಿಠಲರು
ಅಧ್ಯಾತ್ಮದ ವಿದ್ಯ ಅಧ್ಯಕ್ಷಾಗಬೇಕು ಸಾಧ್ಯ ಧ್ರುವ ಕನ್ನಡಿಯೊಳಗಿನ ತಾ ಗಂಟು ಸನ್ನಿಧವಾಗುವದೆ ಕೈಗೊಟ್ಟು ಬಣ್ಣಿಸಬ್ಯಾಡಿ ನಿಜಬಿಟ್ಟು ಕಣ್ಣಾರೆ ಕೆಟ್ಟು 1 ಕನಸಿಲೆ ತಾ ಕಂಡಭಾಗ್ಯ ಅನುಭವಕೆ ಬಹುದೆ ಶ್ಲಾಘ್ಯ ನೆನಸಿಕೊಂಡವ ಅಯೋಗ್ಯಜನದೊಳು ಅಶ್ಲಾಘ್ಯ 2 ಹೊತ್ತಿಗೆಲ್ಹೇಳುವ ಪುರಾಣ ಯಾತಕೆ ಬಾಹುದು ನಿರ್ವಾಣ ಚಿತ್ತಗಾಗುದು ಸಮಾಧಾನ ಹತ್ತಿಲಿ ನಿಜಗಾಣಾ 3 ಬಾಹುದೆ ನಿರ್ವಾಹ ಹೊಗುವರೆ ಹೊಕ್ಕರೆ ಸಹಾ ಹೋಗದು ತೃಷದಾಹ 4 ಸಾಧನ ಮಾಡಿಕೊ ಸಾಧ್ಯಸದ್ಗುರು ಕೃಪೆಯಲಿ ನಿಜ ಅಭೇದ್ಯ ಸಾಧಿಸೊ ಮಹಿಪತಿ ಸಧ್ಯ ಆಧ್ಯಾತ್ಮಸುವಿದ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅನಂತಗಿರಿವಿಠಲ | ಪಾಲಿಸೋ ಇವಳಾ ಪ ಗುಣಪೂರ್ಣ ಶ್ರೀಹರಿಯೆ | ಬೇಡುವೆನು ಧೊರೆಯೇ ಅ.ಪ. ಸಿದ್ಧಿಸುತ ಶಿಷ್ಯತ್ವ | ಶುದ್ಧ ಸ್ವಪ್ನದೊಳೀಕೆಉದ್ಧಾರಕೆಂದೆನುತ | ಪ್ರಾರ್ಥಿಸುತ್ತಿಹಳೋ |ಮಧ್ವರಮಣನೆ ದೇವ | ಸಿದ್ದಾಂತ ಸಾರವನುಬುದ್ದಿಗೇ ನಿಲುಕಿಸೋ | ಭದ್ರಮೂರುತಿಯೆ 1 ಪ್ರಾಚೀನ ದುಷ್ಕರ್ಮ | ಮೋಚನೆಗೆ ಮನಮಾಡೋವಾಚಾಮ ಗೋಚರನೆ | ಖಚರಾರಿ ವಂದ್ಯನೀಚೊಚ್ಚ ತರತಮವ | ವಾಚಿಸುತ ಕರ್ಮಗಳಪಾಚಿಯನೆ ಕಳೆಸವ್ಯ | ಸಾಚಿ ಸಖದೇವಾ 2 ಹರಿಪಾದ ರತಿ ಕೊಟ್ಟು | ಹರಿ ಗುರು ಸೇವೆಗಳನಿರುತಗೈಯುವ ಮನವೆ | ಪರಿಪಾಲಿಸ್ಹರಿಯೇಅರವಿಂದನಾಭಹರಿ ಸರ್ವ ಸತ್ಸಾಧನವನೆರವೇರಿಸೆಂದೆನುತ | ಪ್ರಾರ್ಥಿಸುವೆ ಹರಿಯೇ 3 ಜ್ಞಾನಾನು ಸಂಧಾನ | ಮಾಣದಲೆ ಇತ್ತಿವಳಧ್ಯಾನ ಮಾರ್ಗಕೆ ತಂದು | ಮೌನಿ ಜನ ವಂದ್ಯಾಸಾನುರಾಗದಿ ನಿನ್ನ | ಹೃದಯ ಗಹ್ವರದಲ್ಲಿಕಾಣುವ ಸುಸಾಧನವ | ನೀನೇ ಮಾಡಿಸೊ ಹರಿಯೇ 4 ಸರ್ವಾಂತರಾತ್ಮಕನೆ | ದುರ್ವಿ ಭಾವ್ಯನೆ ದೇವಸರ್ವಕರ್ಮದಿ ನಿನ್ನ | ಸಂಸ್ಕøತಿಯ ನಿತ್ತುದರ್ವಿಜೀವಿಯ ಕಾಯೋ ಸರ್ವೇಶ ಶ್ರೀಹರಿಯೆಶರ್ವನೊಡೆಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅನುದಿನ ಮರೆಯದೆ ಮರೆಯದೆ ಪ ಗಾತ್ರವೆ ಮಂದಿರ ಹೃದಯವೆ ಮಂಟಪನೇತ್ರವೆ ಮಹದೀಪ ಹಸ್ತ ಚಾಮರವುಯಾತ್ರೆ ಪ್ರದಕ್ಷಿಣೆ ಶಯನ ನಮಸ್ಕಾರಶಾಸ್ತ್ರ ಮಾತುಗಳೆಲ್ಲ ಮಂತ್ರಂಗಳು 1 ನುಡಿವ ಶಬ್ದಗಳೆಲ್ಲ ಹೂವುಗಳಾಯಿತುನಡೆವುದೆಲ್ಲವು ಬಹು ನಾಟ್ಯಂಗಳುಉಡುವ ಹೊದಿಕೆಯೆಲ್ಲ ಉಚಿತವಾದ ವಸ್ತ್ರಕೊಡುವ ಭೂಷಣವೆಲ್ಲ ದಿವ್ಯಾಭರಣ2 ಧರಿಸಿದ ಗಂಧವೆ ಚರಣಕ್ಕೆ ಗಂಧವುಶಿರದಲ್ಲಿ ಮುಡಿಯುವ ಪುಷ್ಪವೆ ಮಾಲೆಸ್ಥಿರವಾಗಿ ಕೂಡಿದ ಬುದ್ಧಿಯೆ ಆರುತಿಅರಿತೊಡಲಿಗೆ ಉಂಬನ್ನವೆ ನೈವೇದ್ಯ3 ಎನ್ನ ಸ್ವರೂಪವೆಂಬುದೆ ರನ್ನಗನ್ನಡಿಎನ್ನ ಮನೋವೃತ್ತಿ ಎಂಬುದೆ ಛತ್ರಇನ್ನು ನುಡಿವ ಹರಿ ನಾಮಾಮೃತವೇ ತೀರ್ಥಎನ್ನ ಮನವೆಂಬುದೆ ದಿವ್ಯ ಸಿಂಹಾಸನ 4 ಅನ್ಯ ದೇವತೆ ಯಾಕೆ ಅನ್ಯ ಪ್ರತಿಮೆಯು ಯಾಕೆಅನ್ಯವಾದ ಮಂತ್ರ ತಂತ್ರವ್ಯಾಕೆಎನ್ನಲ್ಲಿ ಭರಿತ ಸಾಧನ್ನಂಗಳಿರುತಿರೆಚೆನ್ನಾಗಿ ಶ್ರೀಕೃಷ್ಣ ಸ್ವಾಮಿಯ ಪೂಜಿಪೆ 5
--------------
ವ್ಯಾಸರಾಯರು
ಅನುದಿನ ಘನ ತನ್ನೊಳಗೆ ತುಂಬಿಹದು ನಿನ್ನೊಳಗೆ ದ್ರುವ ಓದಿ ಕೇಳಿ ಮರುಳಾದ್ಯೊ ಮನವೆ ಸಾಧಿಸಲಿಲ್ಲ ಸ್ವರೂಪ ವೇದವೋದಿ ವಿವದಕೆ ನೀನು ಸಾಧಿಸಿದೊ ಬಲುಕೋಪ ಭೇದವಿಡಿದು ಬಾಧೆಗೆ ಗುರಿಯಾಗಿ ಆದಿ ನಿನಗೆ ನೀ ಪಾಪ ಘನಗುರು ಕುಲದೀಪ 1 ದೇಹದ ಒಳಗಿನ ದೇವರ ತಿಳಿಯದೆ ಬಾಹ್ಯ ರಂಜನಗೆದೆರದ್ಯೊ ಸೋಹ್ಯವರಿಯದೆ ಶ್ರೀಹರಿ ಭಕ್ತಿಯ ಅಹಂಭಾವದಿ ಮೆರೆದ್ಯೊ ದೇಹಾಭಿಮಾನದಲಿ ಸೋಹಂಭಾವದ ವಾರ್ತೆಯ ಜರಿದ್ಯೊ ಸವಿ ಸುಖವನು ಮರೆದ್ಯೊ 2 ಕನಸುದೋರುವ ಜನ ಪ್ರಪಂಚವ ನೆನೆಸಿ ಬಯಸುವದ್ಯಾಕೆ ಖೂನ ತಿಳಿಯದೆ ಸತ್ತು ಹುಟ್ಟಿ ಜನಿಸಿ ಬಾಹುದು ಯಾಕೆÉ ಹೀನಯೋನಿಯ ಮುಖದಲಿ ಬೀಳುವ ದಣುವಿಕಿ ನಿನಗಿದು ಬೇಕೆ ಅನುದಿನ ನಿನಗಿದು ತಾ ಸಾಕೆ 3 ಹಾದಿತಪ್ಪಿ ನಡೆವದು ವೇದಾಂತದ ಇದು ನಿನಗುಚಿತೆ ಸಾಧು ಸಜ್ಜನರನುಸರಿಸದೆ ತಾ ಇಹುದೊಂದು ಸ್ವಹಿತೆ ಗಾದಿಯ ಮಾತೆ ಬಂದುದು ಪುರುಷಾರ್ಥೆ 4 ಶರಣ್ಹೊಕ್ಕರ ಕರುಣಿಸಿ ನೋಡುವ ಎರಡಿಲ್ಲದೆ ಗುರುನಾಥ ಕರವಿಡಿದು ಪಾರನೆ ದಾಟಿಸುವಾ ಸುರಮುನಿಜನ ಸೇವಿತ ತರಣೋಪಾಯದ ಸಾಧನದೋರುವ ತರಳ ಮಹಿಪತಿ ದಾತ ಮನವೆ ನಿನಗಿದು ಸುಪಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅನುದಿನವು ಶ್ರವಣಮನನಾದಿ ಸಾಧನ ಮಾಡು ಇನ್ನು ಸಂಶಯವ್ಯಾತಕೊ ಪ. ಏನು ಶಪಥವ ಮಾಡಲಿ ಮತವು ಹಿರಿದೆಂದು ಜ್ಞಾನಿಗಳ ಸಮ್ಮತವೊ ಅ.ಪ. ಗುರುಮಧ್ವಶಾಸ್ತ್ರವೆ ಸಕಲ ಶಾಸ್ತ್ರಧಿಕೆಂದು ಶಿರವರಿದು ಮುಂದಿರಿಸಲೆ ಪರಮತಜಾಲವೆಲ್ಲ ವೇದವಿರುದ್ಧವೆಂದು ಶರಧಿಯನು ನಾ ದಾಟಲೆ1 ಭಾಗವತಶಾಸ್ತ್ರವೆ ಬಹು ಭಾಗ್ಯವೆಂತೆಂದು ನೆಗಹಿ ಪರ್ವತವ [ನಿಲಿಸಲೆ] ಭಾಗವತ ನಿಂದಕಗೆ ಬಹು ನರಕವೆಂತೆಂದು ಪರ್ವ- ತಾಗ್ರದಿಂ ಧುಮುಕಲೆ 2 ವಿದಿತ ದೈವರೊಳಗೆ ವಿಷ್ಣು ಉತ್ತಮನೆಂದು ವೇದಂಗಳ ಒಡನುಡಿಸಲೆ ಅಧಿಕಾರಿಗಳೊಳಗೆ ಅಂಬುಜಸಂಭವನೆಂದು [ಕಾದೆಣ್ಣೆ]ಯೊಳು ಮುಣುಗ [ಲೆ] 3 ಪರಲೋಕಸಾಧನಕೆ ತಾರತಮ್ಯಮತವೆಂದು ಗರಳವನು ಕುಡಿಯಲೆ ಹರಿದಿನಕೆ ಮರುದಿನಕೆ ಸರಿಯಿಲ್ಲವೆಂತೆಂದು ಹರಿವ ಹಾವನು ಹಿಡಿಯಲೆ 4 ಗುರುಮಧ್ವರಾಯರೆ ಆತ್ಮರಕ್ಷಕರೆಂದು ಅನಲವ ಕೈ ಪಿಡಿಯಲೆ ಅಮಿತ ಗುಣಪೂರ್ಣನೆಂದು ಅ- ಶರೀರವನು ನುಡಿಸಲೆ 5
--------------
ವಾದಿರಾಜ